Tag: ಬಿಗ್‌ ಬಾಸ್‌ ಕನ್ನಡ 4

  • ಬಾಸ್ ಅನ್ನಬೇಡಿ ತಲೆಗೆ ಹತ್ತುತ್ತೆ- ದರ್ಶನ್ ಫ್ಯಾನ್ಸ್‌ಗೆ ಪ್ರಥಮ್ ವಾರ್ನಿಂಗ್

    ಬಾಸ್ ಅನ್ನಬೇಡಿ ತಲೆಗೆ ಹತ್ತುತ್ತೆ- ದರ್ಶನ್ ಫ್ಯಾನ್ಸ್‌ಗೆ ಪ್ರಥಮ್ ವಾರ್ನಿಂಗ್

    ‘ಬಿಗ್ ಬಾಸ್’ ಪ್ರಥಮ್‌ಗೆ (Pratham) ದರ್ಶನ್ ಅಭಿಮಾನಿಗಳಿಂದ (Darshan Fans) ಬೆದರಿಕೆ ಕರೆ ಬರುತ್ತಿದೆ. ಈ ವಿಚಾರವಾಗಿ ಪ್ರಥಮ್, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಘಟನೆ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಪ್ರಥಮ್‌ಗೆ ಬೆದರಿಕೆ ಕರೆ- ದೂರು ದಾಖಲಿಸಿದ ನಟ

    ದರ್ಶನ್ ಪ್ರಕರಣದ ವಿಚಾರವಾಗಿ ಇತ್ತೀಚೆಗೆ ಪ್ರಥಮ್ ಧ್ವನಿಯೆತ್ತಿದ್ದರು. ಇದು ದರ್ಶನ್ ಫ್ಯಾನ್ಸ್‌ಗೆ ಕೆರಳಿಸಿತ್ತು. ಬಳಿಕ ಪ್ರಥಮ್‌ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಪ್ರಥಮ್ ಮಾತನಾಡಿ, ಕಳೆದ ಎರಡ್ಮೂರು ದಿನಗಳಿಂದ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಸಿನಿಮಾ ಶೂಟಿಂಗ್ ಮಾಡೋಕೆ ಆಗುತ್ತಿಲ್ಲ ಎಂದು ಮಾತನಾಡಿದ್ದಾರೆ.

    ಇಲ್ಲಿ ಯಾರಿಗೂ ಯಾರು ಬಾಸ್ ಅಲ್ಲ. ಬಾಸ್ ಎನ್ನಬೇಡಿ ತಲೆಗೆ ಹತ್ತುತ್ತದೆ. ನಿಮಗೆ ನಿಮ್ಮ ತಂದೆ ತಾಯಿಗಳು ಬಾಸ್ ದುಡಿದು ಅವರನ್ನು ಚೆನ್ನಾಗಿ ನೋಡಿಕೊಳ್ಳಿ. ಯಾಕೆ ಅಲ್ಲಿ ನಿಂತು ಟೈಮ್ ವೇಸ್ಟ್ ಮಾಡಿಕೊಳ್ತಿರಾ ಅದೇ ಟೈಮ್ ಬೇರೆ ಕಡೆ ಹಾಕಿ ಉಪಯೋಗಿಸಿಕೊಳ್ಳಿ ಎಂದಿದ್ದಾರೆ. ಯಾರು ಯಾರಿಗೋಸ್ಕರನೋ ಜೈಲಿಗೆ ಹೋಗಬೇಡಿ. ಸ್ಟೇಷನ್ ಹತ್ತಿರ ಅಲ್ಲ ಕೂಗೋದು. ಥಿಯೇಟರ್ ಹತ್ತಿರ ಹೋಗಿ ಕೂಗಿ ಸಿನಿಮಾಗಾದರೂ ಒಳ್ಳೆಯದಾಗುತ್ತದೆ. ಕಾವೇರಿಗಾಗಿ ಕೂಗಿ ಇಲ್ಲ, ಕನ್ನಡಕ್ಕಾಗಿ ಹೋರಾಡಿ ಎಂದು ಪ್ರಥಮ್ ಈ ವೇಳೆ ಮಾತನಾಡಿದ್ದಾರೆ.

    ಯಾರನ್ನೋ ತೇಜೋವಧೆ ಮಾಡಿ ನಾನು ಅನ್ನ ತಿನ್ನಬೇಕಿಲ್ಲ. ಈಗಾಗಲೇ 8-10 ಕುಟುಂಬ ಜೈಲಿಗೆ ಹೋಗಿರೋದ್ರಿಂದ ಅವರ ಗೋಳಾಟ ನೋಡೋಕೆ ಆಗ್ತಿಲ್ಲ. ಈಗ ಆದ್ರೂ ತಪ್ಪು ತಿದ್ದಿಕೊಳ್ಳಿ ಎಂದು ಡಿಬಾಸ್‌ ಫ್ಯಾನ್ಸ್‌ಗೆ ಪ್ರಥಮ್‌ ಕಿವಿಹಿಂಡಿದ್ದಾರೆ.

  • ‘ಬಿಗ್ ಬಾಸ್’ ಪ್ರಥಮ್‌ಗೆ ಬೆದರಿಕೆ ಕರೆ- ದೂರು ದಾಖಲಿಸಿದ ನಟ

    ‘ಬಿಗ್ ಬಾಸ್’ ಪ್ರಥಮ್‌ಗೆ ಬೆದರಿಕೆ ಕರೆ- ದೂರು ದಾಖಲಿಸಿದ ನಟ

    ʻಅಂಧಾಭಿಮಾನಿಗಳೇ ಯಾರಿಗೋಸ್ಕರವೋ ಜೀವನ ಹಾಳುಮಾಡಿಕೊಳ್ಳಬೇಡಿʼ

    ‘ಬಿಗ್ ಬಾಸ್’ ಕನ್ನಡ 4’ರ (Bigg Boss Kannada 4) ವಿನ್ನರ್ ಪ್ರಥಮ್‌ಗೆ ( Actor Pratham) ಕೆಲ ಕಿಡಿಗೇಡಿಗಳಿಂದ ನಿರಂತರ ಕರೆ ಬಂದ ಬೆನ್ನಲ್ಲೇ ಠಾಣೆ ಮೆಟ್ಟಿಲೇರಿದ್ದಾರೆ. ಬೆದರಿಕೆ ಕರೆ ಮಾಡಿದವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿದ್ದಾರೆ.

    ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಪ್ರಥಮ್ ದೂರು ನೀಡಿದ್ದಾರೆ. ಬಳಿಕ ದೂರಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಥಮ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕನ್ನಡಿಗನ ಕಥೆಯಲ್ಲಿ ಅಕ್ಷಯ್ ಕುಮಾರ್- ‘ಸರ್ಫಿರಾ’ ಟ್ರೈಲರ್ ಔಟ್

    ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ, ನೀವು ಅತಿಯಾಗಿ ನಮ್ಮ ಕರ್ನಾಟಕ ಅಳಿಯ ತಂಡದ ಆಫೀಸ್ ನಂಬರ್‌ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೇ ಬಂದಿದ್ದೀರಾ. ಇನ್ಮೇಲೆ ನನಗೆ ಬರುವ ಕಾಲ್ ಮತ್ತು ಮೆಸೇಜ್ ಸೋಷಿಯಲ್ ಮೀಡಿಯಾ ವಾರ್ನಿಂಗ್ಸ್ ಎಲ್ಲವೂ ಪೊಲೀಸರೇ ನೋಡಿಕೊಳ್ತಾರೆ ಎಂದು ಪ್ರಥಮ್ ಬರೆದುಕೊಂಡಿದ್ದಾರೆ.

    ಬದುಕು ಸುಂದರವಾದದ್ದು, ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗೆ ಮೀಸಲಿಡಿ. ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ. ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ. ಆದರೆ ಯಾರಿಗೋಸ್ಕರವೋ ಲೈಫು ಹಾಳುಮಾಡಿಕೊಳ್ಳಬೇಡಿ ಎಂದು ಪ್ರಥಮ್ ಹೇಳಿದ್ದಾರೆ.

  • ವಿಲನ್ ಆಗಿ ಮತ್ತೆ ಕಿರುತೆರೆಗೆ ಕಾವ್ಯಾ ಶಾಸ್ತ್ರಿ ಎಂಟ್ರಿ

    ವಿಲನ್ ಆಗಿ ಮತ್ತೆ ಕಿರುತೆರೆಗೆ ಕಾವ್ಯಾ ಶಾಸ್ತ್ರಿ ಎಂಟ್ರಿ

    ‘ಬಿಗ್ ಬಾಸ್’ ಖ್ಯಾತಿಯ ಕಾವ್ಯಾ ಶಾಸ್ತ್ರಿ (Kavya Shastry) ಮತ್ತೆ ಕಿರುತೆರೆಗೆ ರೀ ಎಂಟ್ರಿ ಕೊಟ್ಟಿದ್ದಾರೆ. ರಾಧಿಕಾ ಸೀರಿಯಲ್‌ಗೆ ಗುಡ್ ಬೈ ಹೇಳಿದ ಬಳಿಕ ಈಗ ಮತ್ತೆ ‘ಜಾನಕಿ ಸಂಸಾರ’ (Janaki Samsara) ಎಂಬ ಸೀರಿಯಲ್ ಮೂಲಕ ಬರಲಿದ್ದಾರೆ. ಹೀರೋಯಿನ್ ಆಗಿ ಮಿಂಚಿದ್ದ ನಟಿ ಈಗ ವಿಲನ್ ಆಗಿ ಅಬ್ಬರಿಸಲಿದ್ದಾರೆ.

    ‘ಕೃಷ್ಣ ರುಕ್ಮಿಣಿ’ ಖ್ಯಾತಿಯ ನಟಿ ಅಂಜನಾ ಶ್ರೀನಿವಾಸ್ ನಟನೆಯ ‘ಜಾನಕಿ ಸಂಸಾರ’ಕ್ಕೆ ಕಾವ್ಯಾ ಕಾಲಿಟ್ಟಿದ್ದಾರೆ. ಸಾಕಷ್ಟು ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸಿದ್ದ ಕಾವ್ಯಾ ಈಗ ವಿಲನ್ ಆಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಇದನ್ನೂ ಓದಿ:ಬಂಪರ್ ಆಫರ್ ಬಾಚಿಕೊಂಡ ‘ಬಿಗ್ ಬಾಸ್’ ಖ್ಯಾತಿಯ ವಿನಯ್ ಗೌಡ

    ಕಾವ್ಯಾ ಶಾಸ್ತ್ರಿ ಅದ್ಭುತ ನಟಿ ಎಂಬುದರಲ್ಲಿ ಮಾತಿಲ್ಲ. ಹಲವು ವರ್ಷಗಳಿಂದ ಚಿತ್ರರಂಗಲ್ಲಿ ನಿರೂಪಕಿ, ನಟಿಯಾಗಿ ಪಳಗಿದ್ದಾರೆ. ವಿಲನ್ ಆಗಿ ಬರುತ್ತಿರುವ ಕಾವ್ಯಾರನ್ನು ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಅಂದಹಾಗೆ, ಮೇ 6ರಂದು 8 ಗಂಟೆಗೆ ಜಾನಕಿ ಸಂಸಾರ ಪ್ರಸಾರವಾಗಲಿದೆ.

    ಈ ಹಿಂದೆ ಶುಭವಿವಾಹ, ಬಿಗ್ ಬಾಸ್ ಸೀಸನ್- 4 (Bigg Boss Kannada 4) ಸೇರಿದಂತೆ ಹಲವು ಸೀರಿಯಲ್, ಸಿನಿಮಾಗಳ ಮೂಲಕ ಗಮನ ಸೆಳೆದ ನಟಿ ಕಾವ್ಯಾ ಶಾಸ್ತ್ರಿ ಕಳೆದ ವರ್ಷ ರಾಧಿಕಾ ಸೀರಿಯಲ್‌ಗೆ ಕಾರಣಾಂತರಗಳಿಂದ ಅರ್ಧಕ್ಕೆ ಕೈಬಿಟ್ಟಿದ್ದಾರೆ.

  • Bigg Boss: ಮುಂದಿನ ವಾರ ಒಳ್ಳೆ ಹುಡುಗ ಪ್ರಥಮ್ ಮದುವೆ

    Bigg Boss: ಮುಂದಿನ ವಾರ ಒಳ್ಳೆ ಹುಡುಗ ಪ್ರಥಮ್ ಮದುವೆ

    ಬಿಗ್ ಬಾಸ್ ಕನ್ನಡ ಸೀಸನ್ 4ರ (Bigg Boss Kannada 4) ವಿನ್ನರ್ ಪ್ರಥಮ್ (Pratham) ಅವರು ತಮ್ಮ ಮದುವೆಯ ಬಗ್ಗೆ ಅಪ್‌ಡೇಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಮದುವೆ (Wedding) ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 70 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೇಸೆಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಾಚಾರಕ್ಕೆ ಕರೆಯೋದಿಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ. ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಕುಟುಂಬದವರು ಇಷ್ಟಪಟ್ಟ ಹುಡುಗಿ ಮಂಡ್ಯದ ಭಾನುಶ್ರೀ ಜೊತೆ ಪ್ರಥಮ್ ಇತ್ತೀಚೆಗೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈಗ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ.

    ಇನ್ನೂ ಕಳೆದ ವರ್ಷ ‘ನಟ ಭಯಂಕರ’, ‘ಎಂಎಲ್‌ಎ’, ‘ದೇವರಂಥ ಮನುಷ್ಯ’ ಎಂಬ ಸಿನಿಮಾಗಳಲ್ಲಿ ಪ್ರಥಮ್ ನಟಿಸಿದ್ದರು.