Tag: ಬಿಗ್‌ ಬಾಸ್‌ ಕನ್ನಡ 9

  • ಪೊಲೀಸ್ ಅಧಿಕಾರಿಯಾಗಿ ಅಚ್ಚರಿ ಮೂಡಿಸಲಿದ್ದಾರೆ ಬಿಗ್ ಬಾಸ್ ರೂಪೇಶ್ ಶೆಟ್ಟಿ!

    ಪೊಲೀಸ್ ಅಧಿಕಾರಿಯಾಗಿ ಅಚ್ಚರಿ ಮೂಡಿಸಲಿದ್ದಾರೆ ಬಿಗ್ ಬಾಸ್ ರೂಪೇಶ್ ಶೆಟ್ಟಿ!

    ತುಳು ಚಿತ್ರರಂಗದಲ್ಲಿ ನಿರ್ದೇಶಕರಾಗಿ, ನಟನಾಗಿ, ನಿರ್ಮಾಪಕರಾಗಿ ತಮ್ಮದೇ ಆದ ಛಾಪು ಮೂಡಿಸಿರುವವರು ರೂಪೇಶ್ ಶೆಟ್ಟಿ. ಕನ್ನಡ ಚಿತ್ರರಂಗದಲ್ಲಿಯೂ ಹೆಸರು ಮಾಡಿರುವ ಅವರೀಗ ಅಧಿಪತ್ರದ ನಾಯಕನಾಗಿ, ಖಡಕ್ ಪೊಲೀಸ್ ಅಧಿಕಾರಿಯಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ರೆಡಿಯಾಗಿದ್ದಾರೆ. ‘ಬಿಗ್‌ ಬಾಸ್‌ ಕನ್ನಡ 9’ರ (BBK 9) ವಿನ್ನರ್ ಆಗಿದ್ದವರು ರೂಪೇಶ್ ಶೆಟ್ಟಿ. ಆ ಶೋನ ನಂತರದಲ್ಲಿ ಅವರು ನಾಯಕನಾಗಿ ನಟಿಸಿರುವ ಮೊದಲ ಚಿತ್ರವಾಗಿಯೂ ಅಧಿಪತ್ರ ಗಮನ ಸೆಳೆದಿದೆ. ಈಗಾಗಲೇ ಬಿಡುಗಡೆಗೊಂಡಿರುವ ಟ್ರೈಲರ್ ಮೂಲಕ ಅವರ ಪಾತ್ರದ ಸ್ಪಷ್ಟವಾದ ಸುಳಿವುಗಳು ಪ್ರೇಕ್ಷಕರನ್ನು ತಲುಪಿಕೊಂಡಿವೆ. ಈ ಮೂಲಕ ಮೂಡಿಕೊಂಡಿರೋ ಅಗಾಧ ನಿರೀಕ್ಷೆಗಳ ಒಡ್ಡೋಲಗದಲ್ಲಿ ಈ ವಾರ ಅಂದರೆ, ಫೆಬ್ರವರಿ 7ರಂದು ‘ಅಧಿಪತ್ರ’ (Adhipatra) ಅದ್ದೂರಿಯಾಗಿ ತೆರೆಗಾಣಲಿದೆ.

    ರೂಪೇಶ್ ಶೆಟ್ಟಿ (Roopesh Shetty)  ಬಿಗ್ ಬಾಸ್ ಶೋ ಮುಗಿಸಿಕೊಂಡು ಬಂದ ನಂತರ ಅವರ ಮುಂಬರುವ ಸಿನಿಮಾ ಯಾವುದು ಅಂತೊಂದು ಕೌತುಕ ಕನ್ನಡ ಸಿನಿಮಾಸಕ್ತರಲ್ಲಿತ್ತು. ಆದರೆ, ಆ ಶೋ ಮುಗಿದು ಆರೇಳು ತಿಂಗಳು ಕಳೆದರೂ ಸಹ ಆ ಬಗ್ಗೆ ಯಾವುದೇ ಸೂಚನೆಗಳು ಸಿಕ್ಕಿರಲಿಲ್ಲ. ಯಾಕೆಂದರೆ, ಬಿಗ್ ಬಾಸ್ ಶೋ ಮುಗಿಸಿಕೊಂಡು ಹೊರಬಂದ ನಂತರದಲ್ಲಿ ರೂಪೇಶ್ ‘ಸರ್ಕಸ್’ ಎಂಬ ತುಳು ಸಿನಿಮಾದ ನಿರ್ದೇಶನ, ನಿರ್ಮಾಣದಲ್ಲಿ ಬ್ಯುಸಿಯಾಗಿದ್ದರು. ಆ ಚಿತ್ರ ಬಿಡುಗಡೆಗೊಂಡು ಸೂಪರ್ ಹಿಟ್ ಆಗಿದೆ. ಹಾಗೆ ಹಿಡಿದ ಕೆಲಸವನ್ನು ಯಶಸ್ವಿಯಾಗಿ ಮುಗಿಸಿಕೊಂಡು, ದೊಡ್ಡ ಮಟ್ಟದಲ್ಲಿ ಗೆಲುವು ದಕ್ಕಿಸಿಕೊಂಡ ಬೆನ್ನಲ್ಲಿಯೇ ರೂಪೇಶ್ ಶೆಟ್ಟಿ ಒಪ್ಪಿಕೊಂಡಿದ್ದ ಚಿತ್ರ ಅಧಿಪತ್ರ.

    ಅಷ್ಟಕ್ಕೂ ರೂಪೇಶ್ ಶೆಟ್ಟಿ ಅವರು ಬಿಗ್ ಬಾಸ್ ವಿನ್ನರ್ ಆಗಿ ಹೊರ ಹೊಮ್ಮುತ್ತಲೇ ಕನ್ನಡ ಚಿತ್ರರಂಗದ ಚಿತ್ತ ಅವರತ್ತ ಹೊರಳಿಕೊಂಡಿತ್ತು. ಅನೇಕರು ಅವರಿಗೆಂದೇ ಕಥೆ ಸಿದ್ಧಪಡಿಸಿಕೊಂಡು ಸಂಪರ್ಕಿಸಲಾರಂಭಿಸಿದ್ದರು. ಸಿನಿಮಾವೊಂದನ್ನು ಎಲ್ಲ ಆಯಾಮಗಳಲ್ಲಿಯೂ ಪರಾಮರ್ಶಿಸುವ ಕಲೆ ಸಿದ್ಧಿಸಿಕೊಂಡಿರೋ ರೂಪೇಶ್ ಅವರಿಗೆ, ತಮ್ಮ ಮುಂಬರುವ ಪ್ರಾಜೆಕ್ಟಿನ ಬಗ್ಗೆ ಸ್ಪಷ್ಟವಾದ ಕಲ್ಪನೆಯಿತ್ತು. ಅದರ ಸುತ್ತ ಹರಳುಗಟ್ಟಿಕೊಂಡಿದ್ದ ನಿರ್ಧಾರವೂ ಬಲವಾಗಿತ್ತು. ಒಂದಷ್ಟು ಆಫರ್‌ಗಳು ಆ ಮಟ್ಟಕ್ಕೆ ತೃಪ್ತಿ ಕೊಡದ ಕಾರಣದಿಂದ ಒಂದೊಳ್ಳೆ ಕಥೆಗಾಗಿ ಅರಸುತ್ತಿದ್ದ ರೂಪೇಶ್‌ ಮುಂದೆ ಬಂದವರು ನವ ನಿರ್ದೇಶಕರ ಚಯನ್ ಶೆಟ್ಟಿ.

    ಹೊಸಬರು ಇದ್ದಾರೆ ಎಂದರೆ ಅಲ್ಲಿ ಹೊಸತನ ಇದ್ದೇ ಇರುತ್ತದೆಂಬ ನಂಬಿಕೆ ಕನ್ನಡ ಚಿತ್ರರಂಗ, ಪ್ರೇಕ್ಷಕ ವಲಯದಲ್ಲಿದೆ. ಚಯನ್ ರೂಪೇಶ್ ಅವರಿಗೆ ಹೇಳಿದ ಕಥೆ ಕೂಡಾ ಆ ಮಾತನ್ನು ಮತ್ತೆ ಸಾಬೀತುಗೊಳಿಸುವಂತಿತ್ತು. ಆ ಕ್ಷಣವೇ ಒಪ್ಪಿಗೆ ಸೂಚಿಸಿದ್ದ ರೂಪೇಶ್ ಶೆಟ್ಟಿ ಅದಕ್ಕಾಗಿ ತಯಾರಿ ಆರಂಭಿಸಿದ್ದರು. ಅದು ಹೇಳಿಕೇಳಿ ಪೊಲೀಸ್ ಪಾತ್ರ. ಅದರ ಸಂಪೂರ್ಣ ಗುಣಲಕ್ಷಣಗಳನ್ನು ಮನನ ಮಾಡಿಕೊಂಡು ತಯಾರಾಗೋದರ ಜೊತೆಗೆ, ಫಿಟ್ನೆಸ್ ಅನ್ನು ಸಂಭಾಳಿಸಿಕೊಳ್ಳುವ ಸವಾಲೂ ಅವರ ಮುಂದಿತ್ತು. ಅದೆಲ್ಲವನ್ನೂ ಮುಗಿಸಿಕೊಂಡು ಚಿತ್ರೀಕರಣ ಪೂರೈಸಿಕೊಂಡಿರುವ ರೂಪೇಶ್ ಶೆಟ್ಟಿ ಒಟ್ಟಾರೆ ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಕಂಡು ಖುಷಿಗೊಂಡಿದ್ದಾರೆ. ‘ಅಧಿಪತ್ರ’ ಪ್ರೇಕ್ಷಕರಿಗೆಲ್ಲ ಖಂಡಿತವಾಗಿಯೂ ಹಿಡಿಸುತ್ತದೆಂಬ ಗಾಢ ನಂಬಿಕೆಯೂ ಅವರಲ್ಲಿದೆ.

     

    View this post on Instagram

     

    A post shared by PUBLiC TV (@publictv)


    ‘ಬಿಗ್ ಬಾಸ್’ ನಂತರದಲ್ಲಿ ಅಧಿಪತ್ರದ (Adhipatra Film) ಮೂಲಕ ಕನ್ನಡ ಚಿತ್ರರಂಗದಲ್ಲಿ ರೂಪೇಶ್ ಶೆಟ್ಟಿಯವರ ಮತ್ತೊಂದು ಅಧ್ಯಾಯ ಪುಟ ತೆರೆದುಕೊಳ್ಳಲಿದೆ. ಈಗಾಗಲೇ ಎಲ್ಲೆಡೆಯಲ್ಲಿಯೂ ಈ ಸಿನಿಮಾ ಬಗ್ಗೆ ಪಾಸಿಟಿವ್ ಟಾಕ್ ಹಬ್ಬಿಕೊಂಡಿದೆ. ಒಂದೊಳ್ಳೆ ಕಥೆ, ಪ್ರತಿಭಾನ್ವಿತರ ಸಾಥ್, ಅನುಭವೀ ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕ ಚಯನ್ ಶೆಟ್ಟಿಯ ಪ್ರತಿಭೆಯ ಕಾರಣದಿಂದ ಅಧಿಪತ್ರ ಕಳೆಗಟ್ಟಿಕೊಂಡಿದೆ. ಕೆಆರ್ ಸಿನಿ ಕಂಬೈನ್ಸ್ ಬ್ಯಾನರಿನಡಿಯಲ್ಲಿ ಅಧಿಪತ್ರ ನಿರ್ಮಾಣಗೊಂಡಿದೆ. ರೂಪೇಶ್ ಶೆಟ್ಟಿ, ಜಾನ್ವಿ, ಎಂ.ಕೆ ಮಠ, ಪ್ರಕಾಶ್ ತುಮಿನಾಡು, ದೀಪಕ್ ರೈ, ಪ್ರಶಾಂತ್ ನಟನಾ, ರಘು ಪಾಂಡೇಶ್ವರ ಮುಂತಾದವರ ತಾರಾಗಣವಿದೆ. ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿರುವ ಶ್ರೀಕಾಂತ್ ಅವರೇ ಸಂಕಲನದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. ‘ಅಧಿಪತ್ರ’ ಫೆಬ್ರವರಿ 7ರಂದು ಬಿಡುಗಡೆಗೊಳ್ಳಲಿದೆ.

  • ಮಹಾ ಕುಂಭಮೇಳದಲ್ಲಿ ಭಾಗಿಯಾದ ಬಿಗ್ ಬಾಸ್ ಸಾನ್ಯ ಅಯ್ಯರ್

    ಮಹಾ ಕುಂಭಮೇಳದಲ್ಲಿ ಭಾಗಿಯಾದ ಬಿಗ್ ಬಾಸ್ ಸಾನ್ಯ ಅಯ್ಯರ್

    ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ (Maha Kumbh Mela 2025) ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಕುಂಭ ಮೇಳದಲ್ಲಿ ಜನ ಭಾಗಿಯಾಗುತ್ತಿದ್ದಾರೆ. ಹೀಗಿರುವಾಗ ‘ಬಿಗ್ ಬಾಸ್’ ಖ್ಯಾತಿಯ ಸಾನ್ಯ ಅಯ್ಯರ್ (Saanya Iyer) ಕೂಡ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಸಾನ್ಯ ಪೋಸ್ಟ್‌ನಲ್ಲಿ, ಸಂಗಮದಲ್ಲಿ ಮೌನಿ ಅಮಾವಾಸ್ಯೆಯ ಶಾಹಿ ಸ್ನಾನವು ನನ್ನ ಅಂತರಂಗದಲ್ಲಿ ಹಲವು ವಿಷಯಗಳನ್ನು ಕಲಿಸಿದೆ. ನನಗೆ ಪುನರ್ಜನ್ಮವಲ್ಲದೆ ಬೇರೇನೂ ಅಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಮುಂದಿನ ಹೊಸ ಪ್ರಯಾಣಕ್ಕಾಗಿ ನನ್ನ ಎಲ್ಲಾ ಪಿತೃಗಳು, ಪೂರ್ವಜರಿಂದ ಆಶೀರ್ವಾದವನ್ನು ಪಡೆದಿದ್ದೇನೆ.

    ನಾವೆಲ್ಲರೂ ಮಾನವ ಜೀವನವನ್ನು ಅನುಭವಿಸುತ್ತಿರುವ ಆಧ್ಯಾತ್ಮಿಕ ಜೀವಿಗಳು, ನೀವೆಲ್ಲರೂ ಉನ್ನತ ಕ್ಷೇತ್ರಗಳಿಗೆ ಏರಬಹುದು.ನೀವು ನಿಜವಾಗಿಯೂ ಯಾರೆಂದು ನೋಡಬಹುದು ಎಂದು ನಾನು ಭಾವಿಸುತ್ತೇನೆ. ಭೂಮಿಯ ಮೇಲಿನ ನಿಮ್ಮ ಉದ್ದೇಶವು ಈಡೇರಲಿ. ಲೋಕ ಸಮಸ್ತಃ ಸುಖಿನೋ ಭವತು ಎಂದು ಬರೆದುಕೊಂಡಿದ್ದಾರೆ.

    ಅಂದಹಾಗೆ, ‘ಬಿಗ್ ಬಾಸ್ ಕನ್ನಡ 9’ರ ಸ್ಪರ್ಧಿಯಾಗಿ ಸಾನ್ಯ ಗುರುತಿಸಿಕೊಂಡಿದ್ದಾರೆ. ‘ಗೌರಿ’ (Gowri) ಎಂಬ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್‌ಗೆ ಅವರು ನಾಯಕಿಯಾಗಿ ನಟಿಸಿದ್ದರು.

  • ಹಾಟ್ ಅವತಾರ ತಾಳಿದ ಸಾನ್ಯ ಅಯ್ಯರ್

    ಹಾಟ್ ಅವತಾರ ತಾಳಿದ ಸಾನ್ಯ ಅಯ್ಯರ್

    ‘ಬಿಗ್ ಬಾಸ್’ ಬೆಡಗಿ (Bigg Boss Kannada 9) ಸಾನ್ಯ ಅಯ್ಯರ್ (Saanya Iyer) ಸದಾ ಒಂದಲ್ಲಾ ಒಂದು ಗ್ಲ್ಯಾಮರಸ್‌ ಫೋಟೋಶೂಟ್‌ನಿಂದ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇದನ್ನೂ ಓದಿ:ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

    ಗುರುತೇ ಸಿಗದಷ್ಟು ಹೊಸ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ಮಿನಿ ಸ್ಕರ್ಟ್- ಶಾರ್ಟ್ಸ್ ಧರಿಸಿ, ಅದರ ಮೇಲೋಂದು ನ್ಯೂಡ್ ಕಲರ್ ಕ್ರಾಪ್ ಟಾಪ್ ಧರಿಸಿದ್ದಾರೆ. ಅದಕ್ಕೆ ಮ್ಯಾಚ್ ಆಗುವಂತೆ ಫ್ರಂಟ್ ಕಟ್ ಮಾಡಿರೋ ಹೇರ್ ಸ್ಟೈಲ್ ಮಾಡಿಸಿಕೊಂಡು, ಹೈ ಪಾನಿಟೇಲ್ ಕಟ್ಟಿ, ಕಣ್ಣಿಗೊಂದು ದೊಡ್ಡದಾದ ಕನ್ನಡಕ ಹಾಕಿದ್ದಾರೆ.

    ಈ ಫೋಟೋಶೂಟ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಸಾನ್ಯ ಲುಕ್‌ಗೆ ‘ಬಿಗ್ ಬಾಸ್ ಕನ್ನಡ 9’ರ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ ಹಾರ್ಟ್ ಇಮೋಜಿ ಹಾಕಿದ್ದಾರೆ. ಇನ್ನೂ ಕೆಲ ನೆಟ್ಟಿಗರು ನಟಿಯನ್ನು ಮಾಜಿ ನೀಲಿ ತಾರೆ ಮಿಯಾ ಖಲೀಫಾರನ್ನು ಹೊಲಿಸಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:10 ದಿನಗಳಲ್ಲಿ 300 ಕೋಟಿ ರೂ. ಕ್ಲಬ್ ಸೇರಿದ ‘ಸಿಂಗಂ ಅಗೇನ್’ ಸಿನಿಮಾ

    ಅಂದಹಾಗೆ, ‘ಪುಟ್ಟಗೌರಿ ಮದುವೆ’ ಸೀರಿಯಲ್ ಸೇರಿದಂತೆ ಅನೇಕ ಪ್ರಾಜೆಕ್ಟ್‌ಗಳಲ್ಲಿ ಬಾಲನಟಿಯಾಗಿ ಸಾನ್ಯ ಕೆಲಸ ಮಾಡಿದರು. ಆ ನಂತರ ‘ಬಿಗ್ ಬಾಸ್ ಕನ್ನಡ 9’ರಲ್ಲಿ ಸ್ಪರ್ಧಿಯಾಗಿ ಗಮನ ಸೆಳೆದಿದ್ದರು.

    ಈ ವರ್ಷ ಸಮರ್ಜಿತ್ ಲಂಕೇಶ್‌ಗೆ ನಾಯಕಿಯಾಗಿ ಗೌರಿ ಸಿನಿಮಾದಲ್ಲಿ ಸಾನ್ಯ ಅಯ್ಯರ್ ನಟಿಸಿದರು. ಈ ಚಿತ್ರವನ್ನು ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿದರು. ಈ ಚಿತ್ರಕ್ಕೆ ಅಭಿಮಾನಿಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

  • ಬ್ರೈಡಲ್ ಲುಕ್‌ನಲ್ಲಿ ಮಿಂಚಿದ ಸಾನ್ಯ ಅಯ್ಯರ್

    ಬ್ರೈಡಲ್ ಲುಕ್‌ನಲ್ಲಿ ಮಿಂಚಿದ ಸಾನ್ಯ ಅಯ್ಯರ್

    ಸ್ಯಾಂಡಲ್‌ವುಡ್ (Sandalwood) ನಟಿ ಸಾನ್ಯ ಅಯ್ಯರ್ (Saanya Iyer) ವಧುವಿನಂತೆ ಬ್ರೇಡಲ್ ಲುಕ್‌ನಲ್ಲಿ ಮಿಂಚಿದ್ದಾರೆ. ರಾಯಲ್ ಲುಕ್‌ನಲ್ಲಿ ಕಂಗೊಳಿಸುತ್ತಿರುವ ಸಾನ್ಯರನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ನಟಿಯ ಸುಂದರ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ಕೆಂಪು ಬಣ್ಣದ ಧಿರಿಸಿನಲ್ಲಿ ಸಾನ್ಯ ವಧುವಿನಂತೆಯೇ ಕಂಗೊಳಿಸಿದ್ದಾರೆ. ಕ್ಯಾಮೆರಾಗೆ ಮಸ್ತ್ ಆಗಿ ಪೋಸ್ ಕೊಟ್ಟಿದ್ದು, ‘ರಾಣಿ ರಾಣಿ ನಿನ್ನ ಕಂಡಾಗ ನನ್ನ ಮರೆತೇ ನಾನೀಗ’ ಎಂದು ಸಾನ್ಯ ಸೌಂದರ್ಯವನ್ನು ನೆಟ್ಟಿಗನೊಬ್ಬ ಬಣ್ಣಿಸಿದ್ದಾರೆ. ಸಾನ್ಯ ಲುಕ್‌ಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಇದನ್ನೂ ಓದಿ:ಸೆಲೆಬ್ರಿಟಿಯ ಬದುಕನ್ನು ಜೈಲುವಾಸಕ್ಕೆ ಹೋಲಿಸಿದ ನಟ ಜಗ್ಗೇಶ್

    ‘ಬಿಗ್ ಬಾಸ್’ (Bigg Boss Kannada 9) ಶೋ ನಂತರ ‘ಗೌರಿ’ ಚಿತ್ರದ ಮೂಲಕ ಸಾನ್ಯ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಸಮರ್ಜಿತ್ ಲಂಕೇಶ್‌ಗೆ ನಾಯಕಿಯಾಗಿ ನಟಿಸಿದ್ದಾರೆ. ಇಂದ್ರಜಿತ್ ಲಂಕೇಶ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

    ಇತ್ತೀಚೆಗೆ ‘ಗೌರಿ’ (Gowri Film) ಸಿನಿಮಾದ ಮೊದಲ ಟೀಸರ್ ಆಗಿ ಧೂಳೆಬ್ಬಿಸಿತ್ತು. ಹೊಸ ಪ್ರತಿಭೆ ಸಮರ್ಜಿತ್ ಮಾಸ್ ಎಂಟ್ರಿಗೆ ಫಿದಾ ಆಗಿದ್ದರು. ಇದನ್ನೂ ಓದಿ:ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ ಡೈರೆಕ್ಟರ್

    ಈ ಸಿನಿಮಾ ಜೊತೆಗೆ ಹೊಸ ಬಗೆಯ ಕಥೆಗಳನ್ನು ಕೇಳ್ತಿದ್ದಾರೆ. ಸದ್ಯದಲ್ಲೇ ಹೊಸ ಚಿತ್ರದ ಬಗ್ಗೆ ಮಾಹಿತಿ ಹೊರಬೀಳಲಿದೆ.

  • ತಮಿಳಿನತ್ತ ರೂಪೇಶ್ ಶೆಟ್ಟಿ- ಯೋಗಿ ಬಾಬು ಜೊತೆ ‘ಬಿಗ್ ಬಾಸ್’ ವಿನ್ನರ್

    ತಮಿಳಿನತ್ತ ರೂಪೇಶ್ ಶೆಟ್ಟಿ- ಯೋಗಿ ಬಾಬು ಜೊತೆ ‘ಬಿಗ್ ಬಾಸ್’ ವಿನ್ನರ್

    ರಾವಳಿ ಹುಡುಗ ರೂಪೇಶ್ ಶೆಟ್ಟಿ (Roopesh Shetty) ಇದೀಗ ತಮಿಳು ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಕಾಲಿವುಡ್‌ನ (Kollywood) ಖ್ಯಾತ ಹಾಸ್ಯ ಕಲಾವಿದ ಯೋಗಿ ಬಾಬು (Yogi Babu) ಜೊತೆ ತೆರೆಹಂಚಿಕೊಳ್ಳುವ ಅವಕಾಶ ಬಿಗ್ ಬಾಸ್ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ ಗಿಟ್ಟಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಟ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:Kantara Chapter 1: ರಿಷಬ್‌ ಶೆಟ್ಟಿಗೆ ನಾಯಕಿ ಯಾರು? ಹೊರಬಿತ್ತು ಅಚ್ಚರಿಯ ಹೆಸರು

    ಇಂದು ತುಂಬಾ ಖುಷಿಯ ದಿವಸ ನಿಮ್ಮೆಲ್ಲರ ಆಶೀರ್ವಾದ ಹಾಗೂ ಪ್ರೋತ್ಸಾಹದಿಂದ ಇಂದು ಒಂದು ಅದ್ಭುತ ತಂಡದ ಜತೆಗೆ ‘ಸನ್ನಿಧಾನಮ್ ಪಿ.ಓ’ (Sannidhanam P.O) ಎನ್ನುವ ನನ್ನ ಮೊದಲ ತಮಿಳು ಚಿತ್ರ ಮಾಡುವ ಅವಕಾಶ ದೊರಕಿದೆ ಎಂದು ರೂಪೇಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮಿಳಿನ ಸೂಪರ್ ಸ್ಟಾರ್ ಹಾಸ್ಯ ನಟರಾದ ಯೋಗಿ ಬಾಬು ಅವರ ಜೊತೆ ನಟಿಸುವ ಅವಕಾಶ ನನ್ನ ಪಾಲಿಗೆ ದೊಡ್ಡ ಹೆಮ್ಮೆ ಎಂದಿದ್ದಾರೆ. ನಿಮ್ಮ ಆಶೀರ್ವಾದ ಸದಾ ನನ್ನ ಮೇಲೆ ಇರಲಿ ಎಂದು ನಟ ಮನವಿ ಮಾಡಿದ್ದಾರೆ.

    ಯೋಗಿ ಬಾಬು (Yogi Babu) ಮತ್ತು ‘ಕಾಂತಾರ’ (Kantara) ಸಿನಿಮಾ ನಟ ಪ್ರಮೋದ್ ಶೆಟ್ಟಿ (Pramod Shetty) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘ಸನ್ನಿಧಾನಮ್ ಪಿ.ಓ’ ಚಿತ್ರದಲ್ಲಿ ರೂಪೇಶ್ ಶೆಟ್ಟಿ ಅವರಿಗೂ ಚಾನ್ಸ್ ಸಿಕ್ಕಿದೆ. ಆ ಪಾತ್ರಕ್ಕೆ ಬಹಳಷ್ಟು ಪ್ರಾಮುಖ್ಯತೆ ಇದೆ.

    ಈಗಾಗಲೇ ಕನ್ನಡ, ತುಳು, ತೆಲುಗಿನಲ್ಲಿ ನಟಿಸಿರುವ ರೂಪೇಶ್ ಶೆಟ್ಟಿಗೆ (Roopesh Shetty) ತಮಿಳಿನಲ್ಲಿಯೂ ಗುರುತಿಸಿಕೊಳ್ಳುವ ಒಂದೊಳ್ಳೆಯ ಅವಕಾಶ ಸಿಕ್ಕಿದೆ. ಇದು ರೂಪೇಶ್ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

  • Bigg Boss: ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಾನ್ಯ, ರೂಪೇಶ್ ಶೆಟ್ಟಿ

    Bigg Boss: ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಾನ್ಯ, ರೂಪೇಶ್ ಶೆಟ್ಟಿ

    ಬಿಗ್ ಬಾಸ್ ಸೀಸನ್ 9ರ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಮತ್ತು ಸಾನ್ಯ ಅಯ್ಯರ್ (Saanya Iyer) ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಬಹುದಿನಗಳ ನಂತರ ದೊಡ್ಮನೆಯ ಪ್ರೇಮ ಪಕ್ಷಿಗಳು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ. ಕಾರ್ಯಕ್ರಮವೊಂದರಲ್ಲಿ ಇಬ್ಬರು ಕ್ಯಾಮೆರಾ ಕಣ್ಣಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಸಾನ್ಯ ಪಿಂಕ್ ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ಕೆಂಪು ಬಣ್ಣದ ಉಡುಗೆಯಲ್ಲಿ ರೂಪೇಶ್ ಹೈಲೆಟ್ ಆಗಿದ್ದಾರೆ.

    ಬಿಗ್ ಬಾಸ್ ಸೀಸನ್ 9ರಲ್ಲಿ ರೂಪೇಶ್ ಮತ್ತು ಸಾನ್ಯ ಲವ್ವಿ ಡವ್ವಿ ಜೋರಾಗಿತ್ತು. ಇಬ್ಬರು ಪ್ರೇಮಿಗಳಂದೇ ಹೈಲೆಟ್ ಆಗಿದ್ದರು. ದೊಡ್ಮನೆಯಲ್ಲಿ ರೂಪೇಶ್ ಮತ್ತು ಸಾನ್ಯ ಒಡನಾಟ ಚೆನ್ನಾಗಿತ್ತು. ಇದನ್ನೂ ಓದಿ:ಆಪ್ತ ಸಹಾಯಕನ ಮನೆಗೆ ಯಶ್ ಸರ್ಪ್ರೈಸ್ ಎಂಟ್ರಿ

    ದೊಡ್ಮನೆ ಆಟ ಮುಗಿದ ಮೇಲೆ ಸಾನ್ಯ ಮತ್ತು ರೂಪೇಶ್ ಇಬ್ಬರು ಕೂಡ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ  ಬ್ಯುಸಿಯಾಗಿದ್ದಾರೆ. ಸಾನ್ಯ ‘ಗೌರಿ’ (Gowri) ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

  • ಸ್ಟೈಲೀಶ್‌ ಆಗಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಸಾನ್ಯ ಅಯ್ಯರ್

    ಸ್ಟೈಲೀಶ್‌ ಆಗಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಸಾನ್ಯ ಅಯ್ಯರ್

    ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿ ಸಾನ್ಯ ಅಯ್ಯರ್ (Saanya Iyer) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ಸ್ಟೈಲೀಶ್‌ ಆಗಿ ಸಾನ್ಯ ಕಂಗೊಳಿಸಿದ್ದಾರೆ. ಹೊಸ ಲುಕ್‌ನಲ್ಲಿ ನಟಿ ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

    ಹಸಿರು ಬಣ್ಣದ ಗೌನ್‌ನಲ್ಲಿ ಸಾನ್ಯ ಅಯ್ಯರ್ ಮಿಂಚಿದ್ದಾರೆ. ಫಿಶ್ ಕಟ್‌ನಂತಿರೋ ಡ್ರೆಸ್‌ ಧರಿಸಿ ಸಾನ್ಯ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಾನ್ಯ ಡ್ರೆಸ್ ಅದಕ್ಕೆ ತಕ್ಕಂತಹ ಮೇಕಪ್ ಇವೆಲ್ಲವೂ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಾನ್ಯರ ನ್ಯೂ ಲುಕ್‌ ನೋಡಿ ಕನ್ನಡ ಚಿತ್ರರಂಗದಲ್ಲಿ ಮುಂದೆ ಮೆರೆಯುವ ನಟಿ ಎಂದು ಫ್ಯಾನ್ಸ್ ಹಾಡಿ ಹೊಗಳಿದ್ದಾರೆ.

    ಕಳೆದ ವರ್ಷ ಸಾನ್ಯ, ಬಿಗ್ ಬಾಸ್ ಒಟಿಟಿ ಸೀಸನ್ 1 ಮತ್ತು ಟಿವಿ ಬಿಗ್ ಬಾಸ್‌ನಲ್ಲಿ (Bigg Boss Kannada 9) ಕಾಣಿಸಿಕೊಳ್ಳುವ ಮೂಲಕ ಜನಪ್ರಿಯತೆ ಗಳಿಸಿದ್ದರು. ಸಿನಿಮಾ ನಾಯಕಿಯಾಗಬೇಕು ಎಂದು ಕನಸು ಕಂಡಿದ್ದ ನಟಿ ಇದೀಗ ಅದೇ ಹಾದಿಯಲ್ಲಿ ಹೆಜ್ಜೆ ಇಡ್ತಿದ್ದಾರೆ. ಇದನ್ನೂ ಓದಿ:ಏಳಿಗೆ ಸಹಿಸಲಾರದವರಿಗೆ ದರ್ಶನ್ ಹೇಳಿದ್ದೇನು?

    ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ (Gowri) ಸಿನಿಮಾದಲ್ಲಿ ಸಾನ್ಯ ಅಯ್ಯರ್‌ ನಾಯಕಿಯಾಗಿ ನಟಿಸುತ್ತಿದ್ದಾರೆ.

  • ಶ್ರೀಗೌರಿ ಆಗಿ ಬಂದ ‘ಬಿಗ್ ಬಾಸ್’ ಅಮೂಲ್ಯ ಗೌಡ

    ಶ್ರೀಗೌರಿ ಆಗಿ ಬಂದ ‘ಬಿಗ್ ಬಾಸ್’ ಅಮೂಲ್ಯ ಗೌಡ

    ಮಲಿ, ಬಿಗ್ ಬಾಸ್ ಶೋ (Bigg Boss Kannada 9) ಮೂಲಕ ಮನೆ ಮಾತಾದ ನಟಿ ಅಮೂಲ್ಯ ಗೌಡ (Amulya Gowda) ಅವರು ಇದೀಗ ಶ್ರೀಗೌರಿಯಾಗಿ (Shreegowri) ಮಿಂಚಲು ರೆಡಿಯಾಗಿದ್ದಾರೆ. ಗೌರಿ ಆಗಿ ಕಿರುತೆರೆ ಲೋಕದಲ್ಲಿ ಬೆಳಗಲು ಅಮೂಲ್ಯ ಸಜ್ಜಾಗಿದ್ದಾರೆ.

    ಕಳೆದ ಬಿಗ್ ಬಾಸ್ ಸೀಸನ್ 9ರಲ್ಲಿ ನಟಿ ಅಮೂಲ್ಯ ಕಾಣಿಸಿಕೊಂಡ ಮೇಲೆ ತೆಲುಗು ಸೀರಿಯಲ್‌ನಲ್ಲಿ ಬ್ಯುಸಿಯಾಗಿದ್ದರು. ಈಗ ‘ಶ್ರೀಗೌರಿ’ ಎಂಬ ಹೊಸ ಧಾರಾವಾಹಿಯನ್ನ ನಟಿ ಒಪ್ಪಿಕೊಂಡಿದ್ದಾರೆ. ಪ್ರೋಮೋದಲ್ಲಿ ನಟಿಯ ಲುಕ್ ರಿವೀಲ್ ಆಗಿದೆ. ಅಮೂಲ್ಯ ಎಂಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ವಿನಯ್ ಫೇಕ್, ಆದರೆ ವರ್ತೂರ್ ಸಂತೋಷ್ ಗೆಲ್ಲಬೇಕು- ಅವಿನಾಶ್ ಶೆಟ್ಟಿ

    ಪ್ರೊಮೋದಲ್ಲಿ ಪ್ರತಿ ಇರುವೆಗೂ ಕೂಡ ನೋವು ಆಗದೆ ಇರುವ ಹಾಗೆ ನೋಡಿಕೊಳ್ಳುತ್ತಾ ಇರುವ ಹುಡುಗಿ, ಯಾವ ರೀತಿ ಲೆಕ್ಕ ಹಾಕಿದರೂ ಇವಳೇ ಸರಿ, ಯಾವಾಗಲೂ ಹೀಗೆ ಪ್ರೀತಿಯಲ್ಲಿ ನನ್ನ ಕಟ್ಟಿ ಹಾಕಿ ಬಿಡುತ್ತಾಳೆ, ನನ್ನ ಮಗಳು, ನನ್ನ ಉಸಿರು, ನನ್ನ ಗೌರಿ, ಆದರೆ ರಾತ್ರಿ ಹೊತ್ತಿಗೆ ನನ್ನ ಉಸಿರೇ ನಿಂತು ಹೋಗುತ್ತೆ, ಮುದ್ದಿನ ಮಗಳಿಗೆ ಪ್ರತಿ ರಾತ್ರಿ ಗ್ರಹಣ ಎಂದು ಪ್ರೋಮೋದಲ್ಲಿದೆ.

     

    View this post on Instagram

     

    A post shared by Amulya M O (@amulya_gowdaa_official)

    ತಂದೆ ಮತ್ತು ಮಗಳ ಬಾಂಧವ್ಯ ಸಾರುವ ಕಥೆಯಾಗಿದ್ದು, ತಂದೆ ಪಾತ್ರದಲ್ಲಿ ಸುನೀಲ್ ಪುರಾಣಿಕ್ ಅಭಿನಯಿಸಿದ್ದಾರೆ. ಮಗಳು ಗೌರಿಯಾಗಿ ಅಮೂಲ್ಯ ಗೌಡ ಬಣ್ಣ ಹಚ್ಚಿದ್ದಾರೆ. ನಾಯಕಿ ಅಮೂಲ್ಯ ಎಂಬುದು ರಿವೀಲ್ ಆಗಿದೆ. ಆದರೆ ನಾಯಕ ನಟ ಯಾರು ಎಂಬುದು ವಾಹಿನಿ ಬಿಟ್ಟು ಕೊಟ್ಟಿಲ್ಲ.

    ಒಟ್ನಲ್ಲಿ ಅಮೂಲ್ಯ ಎಂಟ್ರಿ ಮತ್ತು ಮುಗ್ಧತೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಶ್ರೀಗೌರಿ ಸೀರಿಯಲ್ ಪ್ರೋಮೋ ಸದ್ದು ಮಾಡುತ್ತಿದೆ. ಆದರೆ ಸೀರಿಯಲ್ ಪ್ರಸಾರದ ದಿನಾಂಕ ಇನ್ನೂ ಅಂತಿಮವಾಗಿಲ್ಲ.

  • ರಿವೀಲ್‌ ಆಯ್ತು ‘ಅಧಿಪತ್ರ’ ಸಿನಿಮಾದಲ್ಲಿನ ರೂಪೇಶ್‌ ಶೆಟ್ಟಿ ಲುಕ್‌

    ರಿವೀಲ್‌ ಆಯ್ತು ‘ಅಧಿಪತ್ರ’ ಸಿನಿಮಾದಲ್ಲಿನ ರೂಪೇಶ್‌ ಶೆಟ್ಟಿ ಲುಕ್‌

    ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್ ಆಗಿ ಗೆದ್ದು ಬೀಗಿದ್ದರು. ಇದೀಗ ತುಳು, ಕನ್ನಡ ಸಿನಿಮಾಗಳಲ್ಲಿ ರೂಪೇಶ್ ಬ್ಯುಸಿಯಾಗಿದ್ದಾರೆ. ‘ಅಧಿಪತ್ರ’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿನ ರೂಪೇಶ್ ಲುಕ್ ಹೇಗಿದೆ. ಇದೀಗ ರಿವೀಲ್ ಆಗಿದೆ.

    ಬಿಗ್ ಬಾಸ್ ಗೆದ್ದ ಮೇಲೆ ಹಲವು ಸಿನಿಮಾಗಳನ್ನ ರೂಪೇಶ್ ಶೆಟ್ಟಿ ಒಪ್ಪಿಕೊಂಡಿದ್ದಾರೆ. ‘ಅಧಿಪತ್ರ’ ಚಿತ್ರದಲ್ಲಿ ರೂಪೇಶ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೂಲಿಂಗ್ ಗ್ಲಾಸ್ ಧರಿಸಿ ಬೈಕ್ ಮೇಲೆ ಕುಳಿತು ಖಡಕ್ ಆಗಿ ಕ್ಯಾಮೆರಾ ಕಣ್ಣಿಗೆ ರೂಪೇಶ್ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ಬಾತ್‌ರೂಂ ಬಿಟ್ಟು ಕೊಡದೇ ಡ್ರೋನ್‌ಗೆ ಕಾಡಿಸಿದ ಸ್ನೇಹಿತ್‌ಗೆ ಸುದೀಪ್‌ ಕ್ಲಾಸ್‌

    ಚಹನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಅಧಿಪತ್ರ ಚಿತ್ರದಲ್ಲಿ ಹೀರೋ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ಜಾಹ್ನವಿ ನಟಿಸುತ್ತಿದ್ದಾರೆ. ಬೃಹತಿ ಎಂಬ ಪಾತ್ರಕ್ಕೆ ಗಿಚ್ಚಿ ಗಿಲಿ ಗಿಲಿ ನಟಿ ಬಣ್ಣ ಹಚ್ಚಿದ್ದಾರೆ.‌ ಸದ್ಯ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದೆ.

    ಇನ್ನೂ ನಿರ್ದೇಶಕ ಚಹನ್ ಶೆಟ್ಟಿ ಮೊದಲು ಈ ಸಿನಿಮಾದ ಕಥೆ ಹೇಳಿದಾಗ ಬಹಳ ಆಸಕ್ತಿ ಮೂಡಿಸಿತು. ಬಹಳ ಸಿದ್ಧತೆಯೊಂದಿಗೆ ಅವರು ಈ ಸಿನಿಮಾದ ಸ್ಕ್ರಿಪ್ಟ್ ಮಾಡಿಕೊಂಡು ಬಂದಿದ್ದಾರೆ. ಅವರ ಸಿದ್ಧತೆ ನೋಡಿ ನನಗೆ ಧೈರ್ಯ ಬಂತು. ಅವರಲ್ಲಿ ಒಳ್ಳೆಯ ವಿಷನ್ ಇದೆ. ಆ ಕಾರಣಕ್ಕಾಗಿಯೇ ನಾನು ಈ ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದೇನೆ. ಇದರಲ್ಲಿ ನನ್ನ ಲುಕ್ ಕೂಡ ಬೇರೆ ಥರ ಇರಲಿದೆ ಎಂದು ರೂಪೇಶ್ ಶೆಟ್ಟಿ ತಿಳಿಸಿದ್ದರು. ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು.

  • ಸ್ಟೈಲೀಶ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟ ಸಾನ್ಯ ಅಯ್ಯರ್

    ಸ್ಟೈಲೀಶ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟ ಸಾನ್ಯ ಅಯ್ಯರ್

    ‘ಬಿಗ್ ಬಾಸ್’ ಖ್ಯಾತಿಯ ಸಾನ್ಯ ಅಯ್ಯರ್ (Saanya Iyer) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಈಗ ಸ್ಟೈಲೀಶ್ ಆಗಿ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ.

    ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟಿ, ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಕಪ್ಪು ಬಣ್ಣದ ಉಡುಗೆಯಲ್ಲಿ ಸಾನ್ಯ ಕಂಗೊಳಿಸಿದ್ದಾರೆ.

    ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶನದ ‘ಗೌರಿ’ (Gowri) ಸಿನಿಮಾದಲ್ಲಿ ಸಾನ್ಯ ನಾಯಕಿಯಾಗಿದ್ದಾರೆ. ಸಮರ್ಜಿತ್‌ಗೆ ಜೋಡಿಯಾಗಿ ಸಾನ್ಯ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಸಿನಿಮಾದ ಮುಹೂರ್ತ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಇದನ್ನೂ ಓದಿ:ಮಗು ಮಾಡಿಕೊಳ್ಳುವ‌ ಬಗ್ಗೆ ಪ್ಲ್ಯಾನ್ ಇಲ್ವಾ- ವಿಕ್ಕಿ ಕೌಶಲ್ ಹೇಳೋದೇನು?

    ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್ ಆಗಿ ಭಾಗವಹಿಸಿದ್ದರು.

    ‘ಪುಟ್ಟ ಗೌರಿ ಮದುವೆ’ (Putta Gowri Maduve) ಸೀರಿಯಲ್ ಸೇರಿದಂತೆ ಹಲವು ಸಿನಿಮಾದಲ್ಲಿ ಸಾನ್ಯ ಬಾಲನಟಿಯಾಗಿ ನಟಿಸಿದ್ದರು. ಈಗ ನಾಯಕಿಯಾಗಿ ಮಿಂಚಲು ಪುಟ್ಟ ಗೌರಿ ರೆಡಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]