Tag: ಬಿಗ್ ಬಾಸ್ ಭುವನ್

  • ಮಗುವಿಗೆ ಭುವನ್ ಹೆಸರಿಟ್ಟ ಅಭಿಮಾನಿ!

    ಮಗುವಿಗೆ ಭುವನ್ ಹೆಸರಿಟ್ಟ ಅಭಿಮಾನಿ!

    ಬೆಂಗಳೂರು: ಬಿಗ್ ಬಾಸ್ ಶೋ ಸ್ಪರ್ಧಿಯಾಗಿದ್ದಾಗಲೇ ತಮ್ಮ ಸ್ನೇಹಮಯ ವ್ಯಕ್ತಿತ್ವ, ಪರರ ಬಗೆಗಿನ ಕಾಳಜಿ ಮತ್ತು ಹೆಣ್ಣು ಮಕ್ಕಳನ್ನು ಗೌರವಿಸೋ ಮನಸ್ಥಿತಿಗಳ ಮೂಲಕ ಜನರ ಮನ ಗೆದ್ದಿದ್ದರು ಭುವನ್. ಇದೀಗ ಅವರು ರಾಂಧವ ಎಂಬ ಚಿತ್ರದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ. ಈ ಹಂತದಲ್ಲಿಯೇ ಜನ ಅವರನ್ನು ಆರಾಧಿಸುತ್ತಿರೋ ಪರಿ ನಿಜಕ್ಕೂ ಅಚ್ಚರಿದಾಯಕವಾಗಿದೆ. ಅದೆಷ್ಟೋ ಮಂದಿ ಭುವನ್ ಹೆಸರನ್ನೇ ತಮ್ಮ ಮಗುವಿಗೂ ಇಡುತ್ತಿದ್ದಾರೆ!

    ತುಮಕೂರಿನಲ್ಲಿಯೂ ಇತ್ತೀಚೆಗೆ ಒಂದು ಮಗುವಿನ ನಾಮಕರಣ ಸಮಾರಂಭ ನೆರವೇರಿದೆ. ಆ ಮಗುವಿಗೂ ಭುವನ್ ಎಂದೇ ಹೆಸರಿಡಲಾಗಿದೆ. ವಿಶೇಷವೆಂದರೆ, ಈ ಮಗುವಿನ ನಾಮಕರಣ ಸಮಾರಂಭಕ್ಕೆ ಖುದ್ದು ಭುವನ್ ಅವರೇ ತೆರಳಿದ್ದಾರೆ. ತಮ್ಮದೇ ಹೆಸರಿನ ಮಗುವನ್ನೆತ್ತಿಕೊಂಡು ಮುದ್ದಾಡಿ ಹರಸಿ ಬಂದಿದ್ದಾರೆ.

    ಇದು ನಿಜಕ್ಕೂ ಅಚ್ಚರಿ ಹುಟ್ಟಿಸುವಂಥಾ ವಿದ್ಯಮಾನ. ಹೀಗೆ ಜನ ತಮ್ಮ ಮಕ್ಕಳಿಗೇ ಭುವನ್ ಹೆಸರಿಡಲು ಪ್ರೇರೇಪಿಸಿರೋದು ಅವರ ವ್ಯಕ್ತಿತ್ವವೇ. ಸಾಮಾನ್ಯವಾಗಿ ಹೀರೋ ಆಗಿ ನೆಲೆ ಕಂಡುಕೊಂಡ ನಂತರವಷ್ಟೇ ಓರ್ವ ಕಲಾವಿದನ ಮೇಲೆ ಇಂಥಾ ಕ್ರೇಜ್ ಹುಟ್ಟಿಕೊಳ್ಳುತ್ತೆ. ಆದರೆ ಭುವನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಆದರೆ ಅದಾಗಲೇ ಭುವನ್ ರಿಯಲ್ ಹೀರೋ ಆಗಿ ಬಿಟ್ಟಿದ್ದಾರೆ.

    ಸುನೀಲ್ ಆಚಾರ್ಯ ನಿರ್ದೇಶನದ ರಾಂಧವ ಚಿತ್ರ ಭುವನ್ ಅವರನ್ನು ಮುಖ್ಯ ನಾಯಕನನ್ನಾಗಿ ನೆಲೆಗಾಣಿಸೋ ಎಲ್ಲ ಲಕ್ಷಣಗಳೂ ಕಾಣಿಸುತ್ತಿವೆ. ಈ ಚಿತ್ರದ ವಿಶೇಷವಾದ ಹಾಡೊಂದು ಇಂದು ಕೇಳಲು ಸಿಗಲಿದೆ. `ಈ ಧರೆಯ ಸೊಬಗು ನಮ್ಮ ನಾಡು’ ಎಂಬ ಹಾಡು ಇಂದು ಸಂಜೆ ಆರು ಘಂಟೆಗೆ ಬಿಡುಗಡೆಯಾಗಲಿದೆ.

  • ಅವಹೇಳನ ಮಾಡಿದ ತಮಿಳನಿಗೆ ಸೆಡ್ಡು ಹೊಡೆದ ರಾಜ ರಾಂಧವ!

    ಅವಹೇಳನ ಮಾಡಿದ ತಮಿಳನಿಗೆ ಸೆಡ್ಡು ಹೊಡೆದ ರಾಜ ರಾಂಧವ!

    ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ನಟಿಸಿರೋ ರಾಂಧವ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಎರಡು ತಲೆಮಾರುಗಳ ರೋಚಕ ಕಥೆ ಹೊಂದಿರೋ ಈ ಚಿತ್ರದಲ್ಲಿ ಭುವನ್ ಮಹಾ ಪರಾಕ್ರಮಿ ರಾಜನಾಗಿಯೂ ಅಬ್ಬರಿಸಿದ್ದಾರೆ. ಈಗಾಗಲೇ ಟ್ರೈಲರ್ ಮತ್ತು ಭಿನ್ನಾತಿಭಿನ್ನವಾದ ಪೋಸ್ಟರ್ ಗಳ ಮೂಲಕವೇ ಪ್ರೇಕ್ಷಕರನ್ನೆಲ್ಲ ಆವರಿಸಿಕೊಂಡಿರೋ ಪ್ರೇಕ್ಷಕರಿಗೊಂದು ಸರ್‍ಪ್ರೈಸ್ ನೀಡಲು ರಾಂಧವ ಚಿತ್ರ ತಂಡ ತಯಾರಾಗಿದೆ.

    ನಿರ್ದೇಶಕ ಸುನೀಲ್ ಆಚಾರ್ಯ ನಾಳೆ ಸಂಜೆ ಆರು ಘಂಟೆಗೆ ರಾಂಧವನ ಅಚ್ಚರಿದಾಯಕ ವೀಡಿಯೋ ಒಂದನ್ನು ಪ್ರೇಕ್ಷಕರ ಮುಂದೆ ಅನಾವರಣಗೊಳಿಸಲು ತೀರ್ಮಾನಿಸಿದ್ದಾರೆ. ಕರ್ನಾಟಕವನ್ನು ಮತ್ತು ಕನ್ನಡಿಗರನ್ನು ಬರಡು ಭೂಮಿಗೆ ಹೋಲಿಸಿದ್ದ ತಮಿಳನೊಬ್ಬನಿಗೆ ರಾಜ ರಾಂಧವ ಮಾಡಿದ್ದೇನೆಂಬುದರ ವಿವರ ಆ ವೀಡಿಯೋದಲ್ಲಿ ಜಾಹೀರಾಗಲಿದೆಯಂತೆ. ಕನ್ನಡತನವನ್ನು ಅವಹೇಳನ ಮಾಡಿದ ತಮಿಳನಿಗೆ ರಾಜ ರಾಂಧವ ಮಾಡಿದ್ದೇನೆಂಬ ಕುತೂಹಲ ನಾಳೆ ಸಂಜೆ ಆರು ಘಂಟೆಗೆ ತಣಿಯಲಿದೆ.

    ಈ ವೀಡಿಯೋ ಅಷ್ಟಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಈ ಮೂಲಕವೇ ರಾಂಧವನಾಗಿ ಭುವನ್ ಅಬ್ಬರಿಸಿರೋ ರೀತಿ ಮತ್ತು ಇಡೀ ಕಥೆಯ ಸ್ಪೆಷಾಲಿಟಿಯೂ ಪ್ರೇಕ್ಷಕರ ಮುಂದೆ ಅನಾವರಣಗೊಳ್ಳಲಿದೆಯಂತೆ. ಅಷ್ಟಕ್ಕೂ ಈ ಚಿತ್ರದ ಹಿಂದೆ ಅಖಂಡ ಎರಡು ವರ್ಷಗಳ ಕಾಲದ ಅಗಾಧ ಪರಿಶ್ರಮವಿದೆ. ಇದಕ್ಕಾಗಿ ನಿರ್ದೇಶಕ ಸುನೀಲ್ ಆಚಾರ್ಯ ಸೇರಿದಂತೆ ಇಡೀ ಚಿತ್ರ ತಂಡ ನಿರಂತರವಾಗಿ ಶ್ರಮ ವಹಿಸಿದೆ.

    ಇನ್ನು ಭುವನ್ ಅವರಂತೂ ಈ ಚಿತ್ರಕ್ಕಾಗಿ ಎರಡು ವರ್ಷಗಳನ್ನೂ ಪಣವಾಗಿಟ್ಟಿದ್ದಾರೆ. ಇದರಲ್ಲಿನ ಪಾತ್ರ ಪಳಗಿದ ನಟರಿಗೂ ಕಷ್ಟವಾಗುವಂಥಾದ್ದು. ಇಲ್ಲಿ ಅವರಿಗೆ ಒಂದಷ್ಟು ಶೇಡಿನ ಪಾತ್ರಗಳಿವೆ. ಅದನ್ನು ಭುವನ್ ಯಾವ ರೀತಿಯಲ್ಲಿ ನಿರ್ವಹಿಸಿದ್ದಾರೆಂಬುದಕ್ಕೆ ನಾಳೆ ಹೊರ ಬರೋ ವೀಡಿಯೋದಲ್ಲಿ ಸಾಕ್ಷಿಗಳು ಸಿಗಲಿವೆ.

    https://www.youtube.com/watch?v=eRpnWE0j_mQ