ಸ್ಯಾಂಡಲ್ವುಡ್ ನಟಿ, ಬಿಗ್ ಬಾಸ್ ಕನ್ನಡ 7ರ ಸ್ಪರ್ಧಿ(Bigg Boss Kannada 7) ದೀಪಿಕಾ ದಾಸ್ (Deepika Das) ಇತ್ತೀಚೆಗೆ ಮದುವೆಯಾಗುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದರು. ಇದೀಗ ಪತಿ ಜೊತೆ ದೀಪಿಕಾ ದಾಸ್ ವೆಕೇಷನ್ ಮೂಡ್ನಲ್ಲಿದ್ದಾರೆ. ಟರ್ಕಿಯಲ್ಲಿ ಚಿಟ್ಟೆಯಾಗಿ ದೀಪಿಕಾ ಮಿಂಚಿದ್ದಾರೆ. ನಟಿಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪತಿ ಜೊತೆ ದೀಪಿಕಾ ಟರ್ಕಿಯಲ್ಲಿ ಬೀಡು ಬಿಟ್ಟಿದ್ದಾರೆ. ರೆಕ್ಕೆಯನ್ನು ಬೆನ್ನಿಗೆ ಸಿಕ್ಕಿಸಿ, ಕಲರ್ಫುಲ್ ಡ್ರೆಸ್ನಲ್ಲಿ ನಟಿ ಕಂಗೊಳಿಸಿದ್ದಾರೆ. ಯಾವಾಗಲೂ ಸೂರ್ಯನ ಕಿರಣಕ್ಕೆ ಮುಖ ಒಡ್ಡಿಕೊಳ್ಳಿ, ಆಗ ನೆರಳು ನಿಮ್ಮ ಹಿಂದೆಯೇ ಉಳಿಯುತ್ತದೆ ಎಂದು ಕ್ಯಾಪ್ಷನ್ ನೀಡಿದ್ದಾರೆ. ನಟಿಯ ಆಕರ್ಷಕ ಫೋಟೋಗಳು ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿವೆ.
View this post on Instagram
ದೀಪಿಕಾ ದಾಸ್ಗೆ ಗೋವಾದಲ್ಲೇ (Goa) ಮದುವೆಯಾಗುವ ಕನಸು ಇತ್ತಂತೆ. ಹೀಗಾಗಿ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ನಟಿ ದೀಪಿಕಾ ದಾಸ್ ಉದ್ಯಮಿ ದೀಪಕ್ ಎಂಬುವವರ ಜೊತೆ ಮಾರ್ಚ್ 1ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದನ್ನೂ ಓದಿ:ಪ್ರಭಾಸ್ ಜೊತೆ ಕೀರ್ತಿ ಸುರೇಶ್ ಡ್ಯುಯೇಟ್

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ದೀಪಕ್ (Deepak) ಅವರ ಮೇಲೆ ನಿಮಗೆ ಲವ್ ಆಗಿದ್ದು ಹೇಗೆ ಎಂಬ ಪ್ರಶ್ನೆಗೆ ನಟಿ ದೀಪಿಕಾ ದಾಸ್ ಮನಬಿಚ್ಚಿ ಮಾತನಾಡಿದ್ದರು. ದೀಪಕ್ ಮತ್ತು ನಾನು ನಾಲ್ಕು ವರ್ಷದ ಸ್ನೇಹಿತರು. 4 ವರ್ಷಗಳ ಕಾರ್ಯಕ್ರಮವೊಂದರಲ್ಲಿ ಭೇಟಿಯಾದೆವು. ಕಳೆದ ಒಂದು ವರ್ಷದಿಂದ ರಿಲೇಷನ್ಶಿಪ್ನಲ್ಲಿ ಇದ್ವಿ. ಕುಟುಂಬಸ್ಥರು ಕೂಡ ನಮ್ಮ ಪ್ರೀತಿಗೆ ಓಕೆ ಎಂದರು.
ದೀಪಕ್ ಅವರಿಗೆ ಚಿತ್ರರಂಗಕ್ಕೂ ನಂಟಿಲ್ಲ. ಅವರು ಉದ್ಯಮಿ. ಮುಂದಿನ ದಿನಗಳಲ್ಲಿ ಪ್ರೊಡಕ್ಷನ್ ಹೌಸ್ ಮಾಡುವ ಮೂಲಕ ಚಿತ್ರರಂಗಕ್ಕೆ ಕರೆತರುವ ಯೋಜನೆ ಇದೆ. ಅವರು ಜಾಸ್ತಿ ಮಾತಾಡೋದಿಲ್ಲ. ನಾನೇ ಕಮ್ಮಿ ಮಾತಾಡುತ್ತೇನೆ ಅಂದುಕೊಂಡಿದ್ದೆ, ಆದರೆ ನನಗಿಂತ ಕಮ್ಮಿ ಮಾತಾಡುವ ಹುಡುಗ ನನಗೆ ಸಿಕ್ಕಿದ್ದಾರೆ. ನಾನು ಮದುವೆಯಾಗುವ ಹುಡುಗ ಹೀಗೆ ಇರಬೇಕು, ಹಾಗೇ ಇರಬೇಕು ಅಂತಾ ಅಂದುಕೊಂಡಿರಲಿಲ್ಲ. ಆದರೆ ನಾನು ಪ್ರೀತಿ ಅಂತಾ ಹುಡುಕಿಕೊಂಡು ಹೋಗಿಲ್ಲ. ನನ್ನ ಮದುವೆಯಾಗುವ ಹುಡುಗ ಮನಸ್ಸು ಚೆನ್ನಾಗಿರಬೇಕು. ನನ್ನ ಚೆನ್ನಾಗಿ ನೋಡಿಕೊಳ್ಳುವವನಾಗಿರಬೇಕು. ನನಗೆ ಟೈಮ್ ಕೊಡುವವನಾಗಿರಬೇಕು ಜೊತೆಗೆ ದೇಶ ಸುತ್ತುವವನಾಗಿರಬೇಕು ಅಂತಾ ಈ ಹಿಂದೆ ಹೇಳಿದ್ದೆ. ಅದೇ ರೀತಿ ನಾನು ಅಂದುಕೊಂಡ ಹಾಗೇ ನನಗೆ ನನ್ನ ಸಂಗಾತಿ ಸಿಕ್ಕಿದ್ದಾರೆ ಅಂತ ಮಾತನಾಡಿದ್ದರು.
ಬಳಿಕ ದೀಪಿಕಾ ದಾಸ್ ಪತಿ ದೀಪಕ್ ಮಾತನಾಡಿ, ನಾನು ದುಬೈ ಮೂಲದವನು ಅಲ್ಲ. ಇದೆ ಬೆಂಗಳೂರಿನ ಆರ್ಆರ್ ನಗರದವನು. ರಿಯಲ್ ಎಸ್ಟೇಟ್ ಜೊತೆ ದುಬೈನಲ್ಲಿ ಒಂದು ಐಟಿ ಕಂಪನಿ ಇದೆ. ದೀಪಿಕಾ ನನಗೆ ನಾಲ್ಕು ವರ್ಷಗಳಿಂದ ಗೊತ್ತು. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಇಷ್ಟು ದಿನ ಹೇಗೆಲ್ಲಾ ದೀಪಿಕಾಗೆ ಬೆಂಬಲಿಸಿದ್ರೋ ಮುಂದಿನ ದಿನಗಳಲ್ಲಿ ಕೂಡ ಅವಳಿಗೆ ಸಪೋರ್ಟ್ ಮಾಡಿ ಎಂದು ದೀಪಕ್ ಮನವಿ ಮಾಡಿದ್ದರು.








ಇನ್ನೂ ಈ ವರ್ಷದ ಬಿಗ್ ಬಾಸ್ ಸೀಸನ್ 10ಕ್ಕೆ (Bigg Boss Kannada 10) ವರ್ಷ-ವರುಣ್ ಜೋಡಿಯಾಗಿ ಬರುತ್ತಾರೆ ಎನ್ನಲಾಗಿತ್ತು. ಆದರೆ ಈಗ ಬ್ರೇಕಪ್ ಮೂಲಕ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ. ಸಿಂಗಲ್ ಆಗಿ ಆದ್ರೂ ಇಬ್ಬರಲ್ಲಿ ಒಬ್ಬರು ಬಿಗ್ ಬಾಸ್ಗೆ ಬರುತ್ತಾರಾ? ಕಾಯಬೇಕಿದೆ.
ಅನುಬಂಧ ಅವಾರ್ಡ್ ಕಾರ್ಯಕ್ರಮ ಮುಗಿದ ಮೇಲೆ ಬಿಗ್ ಬಾಸ್ ಸೀಸನ್ 10ರ ಶೋ ಚಾಲನೆ ಎನ್ನಲಾಗಿತ್ತು. ಅದರಂತೆ ಅನುಬಂಧ ಕಾರ್ಯಕ್ರಮ ಮುಗಿದಿದೆ. ಟಿವಿಯಲ್ಲಿ ಪ್ರಸಾರವಾಗಬೇಕಿದೆ. ದೊಡ್ಮನೆ ಆಟ ಅಕ್ಟೋಬರ್ ಮೊದಲ ವಾರದಲ್ಲಿ ಶುರುವಾಗುತ್ತಿದೆ. ಈ ಹಿನ್ನಲೆ ಜಗನ್, ವಿಜಯಲಕ್ಷ್ಮಿ ನಟನೆಯ ಲಕ್ಷಣ(Lakshna), ದಿವ್ಯಾ ಸುರೇಶ್ (Divya Suresh) ನಟನೆಯ ತ್ರಿಪುರ ಸುಂದರಿ, ಪುಣ್ಯವತಿ ಸೀರಿಯಲ್ ಅಂತ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:
ವಾಹಿನಿಯ ಜನಪ್ರಿಯ ಸೀರಿಯಲ್ಗಳಾದ ಲಕ್ಷಣ, ತ್ರಿಪುರ ಸುಂದರಿ, ಪುಣ್ಯವತಿ ಧಾರಾವಾಹಿ ಅಂತ್ಯವಾಗುತ್ತಿರುವ ಬಗ್ಗೆ ವಾಹಿನಿ ಕಡೆಯಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.

ಸುನೀಲ್ ರಾವ್ (Sunil Rao) ಎಂದಾಕ್ಷಣ ಮೊದಲು ನೆನಪಾಗೋದು ರಮ್ಯಾ(Ramya), ಅಜಯ್ ರಾವ್ ಜೊತೆಗಿನ ಎಕ್ಸ್ಕ್ಯೂಸ್ ಮಿ (Excuse Me) ಸಿನಿಮಾ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ರು ಚಿತ್ರರಂಗದಲ್ಲಿ ನಾಯಕನಾಗಿ ನಿಲ್ಲಲು ಸುನೀಲ್ ರಾವ್ಗೆ ಅದೃಷ್ಟ ಒಲಿಯಲಿಲ್ಲ. ಈಗ ವರ್ಷಕ್ಕೆ ಒಂದು ಸಿನಿಮಾದಲ್ಲಿ ನಟಿಸುತ್ತಾ, ಉದ್ಯಮಿಯಾಗಿ ಸುನೀಲ್ ಗುರುತಿಸಿಕೊಳ್ತಿದ್ದಾರೆ.
ದಿವಂಗತ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ (Rakshak Bullet Prakash) ಅವರು ‘ಗುರು ಶಿಷ್ಯರು’ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದರು. ಈಗ ದೊಡ್ಮನೆಗೆ ಕಾಲಿಡುತ್ತಾರೆ ಎಂದು ರಕ್ಷಕ್ ಸುದ್ದಿಯಲ್ಲಿದ್ದಾರೆ.
ಪ್ರತಿ ಸೀಸನ್ನಲ್ಲೂ ಸಿಂಗರ್ಗಳಿಗೆ ಬಿಗ್ ಬಾಸ್ ಟೀಂ ಗಾಳ ಹಾಕುತ್ತಾರೆ. ಅದರಂತೆ ಈ ಬಾರಿ ರ್ಯಾಪರ್-ಸಿಂಗರ್ ಇಶಾನಿ (Eshani) ಕೂಡ ಬರುತ್ತಾರೆ ಎಂದು ಹೇಳಲಾಗುತ್ತಿದೆ.


