Tag: ಬಿಗ್ ಬಾಸ್ ಸ್ಪರ್ಧಿ

  • ತುಕಾಲಿ ಸಂತೋಷ್‌ ಕಾರು ಅಪಘಾತ ಪ್ರಕರಣ- ಆಟೋ ಚಾಲಕ ದುರ್ಮರಣ

    ತುಕಾಲಿ ಸಂತೋಷ್‌ ಕಾರು ಅಪಘಾತ ಪ್ರಕರಣ- ಆಟೋ ಚಾಲಕ ದುರ್ಮರಣ

    ತುಮಕೂರು: ಕನ್ನಡ ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ (Tukali Santosh Car Accident) ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ.

    ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ ಜಗದೀಶ್ (44) ಮೃತ ದುರ್ದೈವಿ. ಅಪಘಾತದಲ್ಲಿ ಗಾಯಗೊಂಡಿದ್ದ ಜಗದೀಶ್‌ ಅವರನ್ನು ಕೂಡಲೇ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದಿದ್ದಾರೆ.

    ನಡೆದಿದ್ದೇನು..?:ಬುಧವಾರ ರಾತ್ರಿ ಶೂಟಿಂಗ್‌ ಮುಗಿಸಿಕೊಂಡು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಅವರು ಪತ್ನಿ ಮಾನಸಾ ಜೊತೆ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಕುಣಿಗಲ್‌ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ಈ ಸಂದರ್ಭದಲ್ಲಿ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ‘ಬಿಗ್ ಬಾಸ್’ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ

    ಘಟನೆ ಸಂಬಂಧ ದೂರು ಪ್ರತಿದೂರು ದಾಖಲಿಸಲು ಎರಡೂ ಕಡೆಯವರು ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಟೋ ಡ್ರೈವರ್ ಕಾರ್‌ಗೆ ಡಿಕ್ಕಿ ಹೊಡೆದಿದ್ದಾರೆ ಅಂತಾ ತುಕಾಲಿ ಸಂತು ಆರೋಪಿಸುತ್ತಿದ್ದರು. ಈ ಬಗ್ಗೆ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಗೊಬ್ಬರ ಹೊತ್ತು ಬೆವರು ಸುರಿಸಿ ಗದ್ದೆಯಲ್ಲಿ ನಾಟಿ ಮಾಡಿದ ಭೂಮಿ ಶೆಟ್ಟಿ

    ಗೊಬ್ಬರ ಹೊತ್ತು ಬೆವರು ಸುರಿಸಿ ಗದ್ದೆಯಲ್ಲಿ ನಾಟಿ ಮಾಡಿದ ಭೂಮಿ ಶೆಟ್ಟಿ

    ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

    ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು ಭೂಮಿ ಶೆಟ್ಟಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಕೊರೊನಾ ಲಾಕ್‍ಡೌನ್ ಆದ ಪರಿಣಾಮ ಕೆಲ ಕಾಲ ಬೆಂಗಳೂರಿನಲ್ಲೇ ಇದ್ದ ಅವರು, ನಂತರ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯಲ್ಲಿರುವ ತಮ್ಮ ಮನೆಗೆ ಬಂದಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್ ಎಫೆಕ್ಟ್- ರಾಜಕೀಯದಿಂದ ಗದ್ದೆ ಬೇಸಾಯಕ್ಕಿಳಿದ ಶಕುಂತಲಾ ಶೆಟ್ಟಿ

    ಹೀಗೆ ಮನೆಗೆ ಬಂದಿರುವ ಭೂಮಿ ಶೆಟ್ಟಿ, ಸುಮ್ನೆ ಮನೆಯಲ್ಲೇ ಕುಳಿತು ಯಾಕೆ ಕಾಲ ಕಳೆಯುವುದು ಎಂದು ತಿಳಿದು ಅವರು ಕೂಡ ತಮ್ಮನ್ನ ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ತಾವು ಗೊಬ್ಬರ ಹೊರುವ ಹಾಗೂ ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಭೂಮಿ ಶೆಟ್ಟಿ, ಈ ಬಾರಿ ಬೇಸಾಯ ಬೇಡ ಎಂದು ಮನೆಯವರು ಹೇಳಿದ್ದರು. ನಾವೆಲ್ಲರೂ ಮನೆಯಲ್ಲಿಯೇ ಇದ್ದು, ಯಾಕೆ ವ್ಯವಸಾಯ ಮಾಡಬಾರದು ಎಂದು ಅಂದುಕೊಂಡು ನಾನು ಸಹಾಯ ಮಾಡುವುದಾಗಿ ತಿಳಿಸಿದೆ. ಹೀಗಾಗಿ ಈ ಬಾರಿ ಕೃಷಿ ಚಟುವಟಿಕೆಯಲ್ಲಿ ನಾನೂ ಭಾಗಿಯಾಗಿದ್ದು, ಈ ಕೆಲಸ ತುಂಬಾನೆ ಖುಷಿ ಕೊಟ್ಟಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಮೈ-ಕೈ ಕೆಸರಿನ ಫೋಟೋದ ಬಳಿಕ ಟ್ರ್ಯಾಕ್ಟರ್ ಏರಿದ ಸಲ್ಲು ಭಾಯ್- ವಿಡಿಯೋ ವೈರಲ್

    ಭೂಮಿ ಬೆಳಗ್ಗಿನಿಂದ ಸಂಜೆಯವರೆಗೂ ಗೊಬ್ಬರ ಹೊತ್ತು ಗದ್ದೆಯಲ್ಲಿ ನಾಟಿ ಮಾಡಿದ್ದು, ಈ ಮೂಲಕ ತಾನೊಬ್ಬಳು ಅಪ್ಪಟ ಕೃಷಿಕಳು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.