Tag: ಬಿಗ್‌ ಬಾಸ್‌ 10

  • ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ

    ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ

    ‘ಬಿಗ್ ಬಾಸ್ ಕನ್ನಡ 10’ರ (Bigg Boss Kannada 10) ಸ್ಪರ್ಧಿ ನಮ್ರತಾ ಗೌಡ (Namratha Gowda) ಕಿಡಿಗೇಡಿ ಕಿರುಕುಳದ ವಿರುದ್ಧ ತಿರುಗಿಬಿದ್ದಿದ್ದಾರೆ. ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ಹಿಂದೆ ಬಿದ್ದವನ ಬಂಡವಾಳವನ್ನು ನಟಿ ಬಯಲು ಮಾಡಿದ್ದಾರೆ. ಸಾಕ್ಷಿ ಸಮೇತ ಸ್ಕ್ರೀನ್ ಶಾಟ್ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು

    ರೋಷನ್ ಎಂಬಾತ, ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಕೆಟ್ಟ ಸಂದೇಶಗಳನ್ನು ಕಳಿಸಿದ್ದಾನೆ. ಈ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಗಿ ತಿರುಗೇಟು ನೀಡಿದ್ದಾರೆ. ಕಿಡಿಗೇಡಿ ರೋಷನ್, ತಮಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ರೋಷನ್ ನಮ್ರತಾರನ್ನು ಕೇಳಿದ್ದಾನೆ. ನಾನು ವಿಐಪಿಗಳ ಅಡಿಯಲ್ಲಿ ಕೆಲಸ ಮಾಡುತ್ತೇನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್ ಮಾಡ್ತೀನಿ, ಹೆಚ್ಚಿನ ಹಣ ಕೇಳಿದರು ಕೊಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾನೆ. 200% ಎಲ್ಲವೂ ಖಾಸಗಿ ಆಗಿರುತ್ತದೆ. ಯಾರಿಗೂ ಗೊತ್ತಾಗುವುದಿಲ್ಲ. ಸೇಫ್ ಆಗಿರುತ್ತದೆ ಎಂದು 4 ಬಾರಿ ಸಂದೇಶವನ್ನು ನಟಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ:ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್

    ಇದು ನಮ್ರತಾಗೆ ಬೇಸರ ಮೂಡಿಸಿದೆ. ತಕ್ಕ ಪಾಠ ಕಲಿಸಬೇಕೆಂದೇ ಕಿಡಿಗೇಡಿ ರೋಷನ್ ಮಾಡಿದ ಸಂದೇಶವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಹೀಗೆಲ್ಲಾ ಮೆಸೇಜ್ ಮಾಡೋದು ನಿಲ್ಲಬೇಕು ಎಂದು ನಮ್ರತಾ ಧ್ವನಿಯೆತ್ತಿದ್ದಾರೆ. ನಟಿಯ ಈ ನಡೆಗೆ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ.

    ನಮ್ರತಾ ಗೌಡ ಸದ್ಯ ‘ಕರ್ಣ’ ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಯಕ ಕಿರಣ್ ರಾಜ್, ಭವ್ಯಾ ಗೌಡ ಜೊತೆ ಕಾಣಿಸಿಕೊಂಡಿದ್ದಾರೆ. ಶ್ರುತಿ ನಾಯ್ಡು ಸೀರಿಯಲ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

  • Breaking:   ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್

    Breaking: ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್

    ಬುಲೆಟ್ ಪುತ್ರ ರಕ್ಷಕ್ ಬುಲೆಟ್ (Rakshak Bullet) ಅವರು ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ (Bigg Boss Kannada 10) ಮನೆಯಿಂದ ಔಟ್ (Eliminate) ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ.

    ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ವಿದಾಯ ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ (Bigg Boss House) 2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದರು. ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು. ಇದನ್ನೂ ಓದಿ:ಸುನಿ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್: ಶೂಟಿಂಗ್ ಮುಗಿಸಿದ ಟೀಮ್

    ಇತ್ತೀಚೆಗೆ ಡ್ರೋನ್ ಪ್ರತಾಪ್ (Drone Prathap) ಗೂಬೆ ಎಂದಿದ್ದಕ್ಕೆ ಕಿಚ್ಚ (Sudeep) ರಕ್ಷಕ್‌ಗೆ ಖಡಕ್ ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಟಾಸ್ಕ್, ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು. ರಕ್ಷಕ್ ಮನರಂಜನೆ ಕೂಡ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು.

    ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಬೇಸರಯುಂಟು ಮಾಡಿದೆ. ಆದರೆ ಮುಂಬರುವ ಸಿನಿಮಾಗಳಲ್ಲಿ ನಟನೆಯ ಮೂಲಕ ರಕ್ಷಕ್ ಮೋಡಿ ಮಾಡಲಿ ಎಂಬುದೇ ಅಭಿಮಾನಿಗಳ ಆಶಯ.

  • Bigg Boss: ಹೆಣ್ಣು ಮಕ್ಕಳ ಚಾರಿತ್ರ್ಯವಧೆಗೆ ಕಾವ್ಯ ಶಾಸ್ತ್ರಿ ಬೇಸರ

    Bigg Boss: ಹೆಣ್ಣು ಮಕ್ಕಳ ಚಾರಿತ್ರ್ಯವಧೆಗೆ ಕಾವ್ಯ ಶಾಸ್ತ್ರಿ ಬೇಸರ

    ಟಿ, ನಿರೂಪಕಿ ಕಾವ್ಯ ಶಾಸ್ತ್ರಿ (Kavya Shastry) ಇದೀಗ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಬಗ್ಗೆ ಬೇಸರ ಹೊರಹಾಕಿದ್ದಾರೆ. ಈ ಶೋ ಮಕ್ಕಳಿಗೆ ತೋರಿಸದಂತೆ ನಟಿ ಮನವಿ ಮಾಡಿದ್ದಾರೆ. ಈ ಕುರಿತ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸುದೀಪ್ ಮಿಮಿಕ್ರಿ ಮಾಡಿದ ತುಕಾಲಿ ಸಂತು

    ಈ ಬಾರಿ ಕನ್ನಡದ ಬಿಗ್ ಬಾಸ್ ಸೀಸನ್ (Bigg Boss Kannada 10) ನಿಜಕ್ಕೂ ಬೇಸರ ತಂದಿದೆ. ಶೋನಲ್ಲಿ ಉಳಿಯೋ ಭರದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದನೆ, ಚಾರಿತ್ರ‍್ಯವಧೆ, ಹೆಣ್ಣುಮಕ್ಕಳ ಮೇಲೆ ಏಕವಚನದ ಬಳಕೆ, ಮಾನಸಿಕವಾಗಿ ಇತರರನ್ನು ಕುಗ್ಗಿಸುವ ಪ್ರಯತ್ನ, ಜೋರು ಧ್ವನಿಯಲ್ಲಿ ಗದರುವುದು, ಹೆದರಿಸುವುದು, ಇವೆಲ್ಲವೂ ಹೆಚ್ಚಾಗಿದೆ. ಚಿಕ್ಕ ಮಕ್ಕಳಿರುವ ತಂದೆ-ತಾಯಂದಿರು ದಯವಿಟ್ಟು ಇಂತಹ ಕಾರ್ಯಕ್ರಮಗಳನ್ನು ಚಿಕ್ಕ ಮಕ್ಕಳ ಎದುರು ನೋಡದಿರಿ. ಇದು ನಿಮ್ಮ ಮಗುವಿನ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಅವರು ಇದನ್ನೂ ಅನುಕರಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಕಾವ್ಯಾ ಶಾಸ್ತ್ರಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Kavya Shastry (@kaavya.shastry)

    ನಾನು ಯಾವುದೇ ಕಾರ್ಯಕ್ರಮದ ವಿರುದ್ಧವಾಗಿಲ್ಲ. ಚಿಕ್ಕ ಮಕ್ಕಳನ್ನು ಹೊಂದಿರುವ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದೇನೆ. ಯಾವ ವಯೋಮಾನದ ಪ್ರೇಕ್ಷಕರಿಗೆ ಇದು ಸೂಕ್ತ ಎಂಬ ಸೂಚನೆಯನ್ನು ಸೀರಿಯಲ್‌ಗಳು ಕೂಡ ನೀಡುತ್ತವೆ. ಆದರೂ ಆ ಸೂಚನೆಯಲ್ಲಿ ನಿರ್ಲಕ್ಷಿಸಿ ನಾವು ಮನೆಯಲ್ಲಿ ಅದನ್ನು ವೀಕ್ಷಿಸುತ್ತೇವೆ. ನಿಮ್ಮ ಮಗು ಉದ್ದೇಶಪೂರ್ವಕವಾಗಿ ಇಂಥ ನೆಗೆಟಿವ್ ಕಂಟೆಂಟ್ ನೋಡದೇ ಇರಬಹುದು. ಕೇವಲ ಆಡಿಯೋ ಕೂಡ ಮಗುವಿನ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಎನರ್ಜಿಯನ್ನು ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದು ನಟಿ ಪೋಸ್ಟ್ ಮಾಡಿದ್ದಾರೆ.

    ಶುಭವಿವಾಹ (Shubhavivah), ರಾಧಿಕಾ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಮತ್ತು ಸಿನಿಮಾಗಳಲ್ಲಿ ಕಾವ್ಯ ನಟಿಸಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಾವ್ಯ ಶಾಸ್ತ್ರಿ ಸ್ಪರ್ಧಿಯಾಗಿ ಗಮನ ಸೆಳೆದರು. ಭುವನ್, ರೇಖಾ, ಕಾರುಣ್ಯ, ನಿರಂಜನ್ ದೇಶಪಾಂಡೆ, ಶಾಲಿನಿ ಕೂಡ ಈ ಸೀಸನ್‌ನಲ್ಲಿ ಇದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]