Tag: ಬಿಜಪಿ

  • ರಾಹುಲ್ ಗಾಂಧಿ ಯಂಗ್‌ಸ್ಟರ್ – ಹೆಚ್.ಡಿ.ದೇವೇಗೌಡ

    ರಾಹುಲ್ ಗಾಂಧಿ ಯಂಗ್‌ಸ್ಟರ್ – ಹೆಚ್.ಡಿ.ದೇವೇಗೌಡ

    ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಯಂಗ್‌ಸ್ಟರ್. ಅವರು ಬೇಕಾದರೆ ಏನಾದರೂ ಮಾತನಾಡಲಿ ಎಂದು ಜೆಡಿಎಸ್ (JDS) ವರಿಷ್ಠ ಹೆಚ್.ಡಿ.ದೇವೇಗೌಡ (H.D.Deve gowda) ಹೇಳಿದರು.

    ಜೆಡಿಎಸ್ ಕಾಂಗ್ರೆಸ್‌ನ (Conrgess) ‘ಬಿ’ ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕಳೆದ ಬಾರಿ ರಾಹುಲ್ ಗಾಂಧಿ ಜೆಡಿಎಸ್‌ ಬಿಜೆಪಿಯ ‘ಬಿ’ ಟೀಂ ಎಂದು ಹೇಳಿದ್ದರು. ಈ ಬಾರಿ ಮೋದಿ ಅವರು ಹೇಳಿದ್ದಾರೆ. ಮೋದಿ ಅವರು ಎತ್ತರಕ್ಕೆ ಬೆಳೆದ ನಾಯಕ. ಅವರು ಹಾಗೆ ಮಾತಾಡೋದು ಸರಿನಾ? ಅವರಿಗೆ ಬಿಡ್ತೀನಿ. ರಾಹುಲ್ ಗಾಂಧಿ ಯಂಗ್‌ಸ್ಟರ್, ಅವರು ಬೇಕಾದ್ರೆ ಏನಾದ್ರು ಮಾತಾಡಲಿ. ಮೋದಿ ಅವರು ಹಾಗೆ ಹೇಳಿದ್ದನ್ನು ಅವರಿಗೆ ಬಿಡ್ತೀನಿ. ನಾನೇನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋಮಣ್ಣಗೆ ಲೋ ಬಿಪಿ

    ಮಾಡಿದ್ದಾರೆ ಇಡೀ ರಾಷ್ಟ್ರಕ್ಕೆ ಗೊತ್ತು. ನಾನು ಏನೇನು ಮಾಡಿದ್ದೇನೆ ಅಂತ ಪುಸ್ತಕ ಬಂದಿದೆ. ಹಲವಾರು ವಿಷಯ ಅದರಲ್ಲಿ ಇದೆ. ಮುಸ್ಲಿಂ ಮೀಸಲಾತಿ, ಮಹಿಳೆಯರ ಮೀಸಲಾತಿ, ವಾಲ್ಮೀಕಿ ಮೀಸಲಾತಿ, ಈದ್ಗಾ ವಿಚಾರ ಏನೇನು ಮಾಡಿದ್ದೇನೆ ನೋಡಲಿ. ದೊಡ್ಡವರ ಹೇಳಿದ್ದಾರೆ ಹೇಳಲಿ. ಅವರ ಬಗ್ಗೆ ನಾನು ಟೀಕೆ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು.

    ಜೆಡಿಎಸ್‌ಗೆ ಹಾಕೋ ಒಂದೊಂದು ವೋಟು ಕಾಂಗ್ರೆಸ್‌ಗೆ ಹಾಕಿದಂತೆ ಅನ್ನೋ ಮೋದಿ ಹೇಳಿಕೆ ಕುರಿತು ಮಾತನಾಡಿ, ಮೋದಿ ಅವರು ಹಾಗೆ ಹೇಳಲು ಅಧಿಕಾರ ಇದೆ. ಸ್ವಾತಂತ್ರ‍್ಯ ಇದೆ ಹೇಳಲಿ. ಮಾತಾಡೋಕೆ ಸ್ವಾತಂತ್ರ‍್ಯ ಇದೆ, ಮಾತಾಡಲಿ ಸಂತೋಷ. ರಾಜ್ಯಕ್ಕೆ ಪದೇ ಪದೇ ಮೋದಿ ಬರುವುದರಿಂದ ನಮಗೇನು ತೊಂದರೆ ಇಲ್ಲ. ಆನಂದವಾಗಿ ಅವರು ರಾಜ್ಯಕ್ಕೆ ಬರಲಿ. ಚುನಾವಣೆ ಮುಗಿಯೋವರೆಗೂ ಬರಲಿ. ಚುನಾವಣೆ ಮುಗಿದ ಮೇಲೂ ಲೋಕಸಭೆ ಚುನಾವಣೆಗೂ ಬರಲಿ. ನಮಗೇನು ತೊಂದರೆ ಇಲ್ಲ. ಮೋದಿ ನನಗಿಂತ ಯಂಗ್ ಇದ್ದಾರೆ. ನನಗೂ ಅವರಿಗೂ 15 ವರ್ಷ ವ್ಯತ್ಯಾಸ ಇದೆ. ಕರ್ನಾಟಕದ ಮಹಾ ಜನತೆಯ ಸಮಸ್ಯೆ ಬಗೆಹರಿಸೋಕೆ ಅವರು ಬಂದರೆ ನನಗೆ ಸಂತೋಷ ಎಂದು ಕುಟುಕಿದರು. ಇದನ್ನೂ ಓದಿ: ಸಾ.ರಾ. ಬಾಸ್‌ಗೆ ದೇಶ ಕಾಯುವ ಸೈನಿಕನಿಂದ ಮೊದಲ ಮತ – ವೋಟ್‌ ಹಾಕಿ ಬ್ಯಾಲೆಟ್‌ ಪೇಪರ್‌ ಪ್ರದರ್ಶಿಸಿದ ಯೋಧನ ಫೋಟೋ ವೈರಲ್‌

    ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರೋದಿಲ್ಲ. ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ದೇವೇಗೌಡರು ನಿರಾಕರಿಸಿದರು.

  • ಸಿಟ್ಟು ಬಿಟ್ಟು ಕೆಲಸ ಮಾಡಿ – ಬಿಎಸ್‍ವೈಯಿಂದ ಜಗ್ಗೇಶ್ ಮನವೊಲಿಕೆ

    ಸಿಟ್ಟು ಬಿಟ್ಟು ಕೆಲಸ ಮಾಡಿ – ಬಿಎಸ್‍ವೈಯಿಂದ ಜಗ್ಗೇಶ್ ಮನವೊಲಿಕೆ

    ಬೆಂಗಳೂರು: ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷದಲ್ಲಿರುವ ಬಂಡಾಯ ಶಮನಕ್ಕೆ ಸಿಎಂ ಯಡಿಯೂರಪ್ಪ ಪ್ರಯತ್ನಿಸುತ್ತಿದ್ದು, ಇಂದು ಯಶವಂತಪುರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಟ ಜಗ್ಗೇಶ್ ಅವರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.

    ರಾಜ್ಯದಲ್ಲಿ ಉಪಚುನಾವಣಾ ಕಾವು ದಿನೆ ದಿನೆ ಹೆಚ್ಚಾಗುತ್ತಿದೆ. ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸೇರಿರುವ ಅನರ್ಹ ಶಾಸಕರಿಗೆ ಉಪಚುನಾವಣೆ ಟಿಕೆಟ್ ನೀಡಿರುವುದಕ್ಕೆ ಬಿಜೆಪಿಗೆ ಬಂಡಾಯದ ಬಿಸಿ ಮುಟ್ಟಿದೆ. ಯಶವಂತಪುರ ಕ್ಷೇತ್ರದಲ್ಲಿ ಎಸ್.ಟಿ ಸೋಮಶೇಖರ್ ಸ್ಪರ್ಧೆಯಿಂದ ನಟ ಜಗ್ಗೇಶ್ ಅಸಮಾಧಾನಗೊಂಡಿದ್ದರು.

    ಈ ವಿಚಾರವಾಗಿ ಜಗ್ಗೇಶ್ ಅವರನ್ನು ತಮ್ಮ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಕರೆಸಿಕೊಂಡ ಸಿಎಂ ಬಿಎಸ್‍ವೈ, ನಮ್ಮ ಅಭ್ಯರ್ಥಿ ಎಸ್.ಟಿ ಸೋಮಶೇಖರ್ ಜೊತೆ ನಿಂತು ಅವರನ್ನು ಗೆಲ್ಲಿಸುವಂತೆ ಮತ್ತು ಸೋಮಶೇಖರ್ ಮೇಲೆ ಸಿಟ್ಟು ಬಿಟ್ಟು ಕೆಲಸ ಮಾಡುವಂತೆ ಜಗ್ಗೇಶ್ ಅವರಿಗೆ ಸಿಎಂ ಸೂಚಿಸಿದ್ದಾರೆ. ಅಲ್ಲದೇ ಯಶವಂತಪುರದಲ್ಲಿ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳುವಂತೆ ಹೇಳಿದ್ದಾರೆ.

    ಸಿಎಂ ಭೇಟಿಯ ನಂತರ ಮಾತನಾಡಿದ ಜಗ್ಗೇಶ್, ಉಪಚುನಾವಣೆಯಲ್ಲಿ ಕೆಲಸ ಮಾಡೋಕೆ ಸಿಎಂ ಆದೇಶ ಮಾಡಿದ್ದಾರೆ. ಹಿಂದೆ ಕಡೆಗಳಿಗೆಯಲ್ಲಿ ನಾನು ಯಶವಂತಪುರದ ಅಭ್ಯರ್ಥಿ ಆಗಿದ್ದೆ. 60 ಸಾವಿರ ಮತಕೊಟ್ಟ ಎಲ್ಲರಿಗೂ ಧನ್ಯವಾದಗಳು. ಯಡಿಯೂರಪ್ಪ ಮೂರೂವರೆ ವರ್ಷ ಸಿಎಂ ಆಗಿ ಮುಂದುವರಿಯಬೇಕು. ಅದು ನಮ್ಮ ಧ್ಯೇಯ. ನಮ್ಮ ಮನೆ ಬಿಜೆಪಿ ಭದ್ರವಾಗಿರುತ್ತದೆ. ಅದಕ್ಕಾಗಿ ಸೋಮಶೇಖರ್ ಜತೆ ವೇದಿಕೆ ಹಂಚಿಕೆ ಮಾಡ್ತೇನೆ. ಅವರು ಹಿಂದೆ ನಮ್ಮ ವಿರೋಧಿ ಅಭ್ಯರ್ಥಿಯಾಗಿದ್ರು. ಅವರು ಎದುರಾಳಿಯಾಗಿದ್ದಾಗ ಹೋರಾಟ ಮಾಡಿದ್ದೆ. ಪಕ್ಷದಲ್ಲಿ ಬಂದಾಗ ಅವರ ಹೆಗಲ ಮೇಲೆ ಕೈ ಹಾಕಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

    2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ವಿರುದ್ಧ 10,711 ಮತಗಳ ಅಂತರದಿಂದ ಜಯಗಳಿಸಿದ್ದರು. ಸೋಮಶೇಖರ್ 1,15,273 ಮತಗಳನ್ನು ಪಡೆದಿದ್ದರೆ ಜೆಡಿಎಸ್ಸಿನ ಜವರಾಯಿ ಗೌಡ 1,04,562 ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ನಟ ಜಗ್ಗೇಶ್ ಅವರು 59,308 ಮತಗಳನ್ನು ಗಳಿಸಿದ್ದರು.