Tag: ಬಿಜಾಪುರ

  • ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದವರಿಗೆ ಜನ ಉತ್ತರ ನೀಡಿದ್ದಾರೆ: ಹೆಚ್‍ಡಿಕೆ

    ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದವರಿಗೆ ಜನ ಉತ್ತರ ನೀಡಿದ್ದಾರೆ: ಹೆಚ್‍ಡಿಕೆ

    ರಾಮನಗರ: ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಆದರೆ ಅವರಿಗೆ ಜನರು ಉತ್ತರ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು.

    ರಾಜ್ಯದ ಬಿಜಾಪುರ, ರಾಯಚೂರು, ಶಿರಾದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಈ ಹಿನ್ನೆಲೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜಾಪುರ, ರಾಯಚೂರು, ಶಿರಾದಲ್ಲಿಯೂ ನಮ್ಮವರು ಗೆದ್ದಿದ್ದಾರೆ. ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಜನ ಇವತ್ತು ಅಲ್ಲಿಯೂ ಉತ್ತರ ನೀಡಿದ್ದಾರೆ. ಉಪಚುನಾವಣೆಗಳು ಬೇರೆ, ಸಾರ್ವತ್ರಿಕ ಚುನಾವಣೆಗಳು ಬೇರೆ. 2023ರಲ್ಲಿ ಜೆಡಿಎಸ್ ಏನು ಎಂದು ಜನರೇ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಅವರು ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK

    ಚಿಕ್ಕಮಗಳೂರಿನಲ್ಲಿ ನಮ್ಮನ್ನು ಬಿಟ್ಟು ಬೇರೆಯವರು ಅಧಿಕಾರ ಮಾಡಲು ಆಗಲ್ಲ. ಅಲ್ಲಿನ ನಗರಸಭೆ ನಮ್ಮ ಬೆಂಬಲ ಇದ್ದವರಿಗೆ ಅಧಿಕಾರ. ರಾಜ್ಯದ ಹಲವಾರು ಕ್ಷೇತ್ರದಲ್ಲಿ ನಮ್ಮ ಬೆಂಬಲ ಬೇಕೆಬೇಕು. ನಾವು ಆರ್ಥಿಕವಾಗಿ ಶಕ್ತಿ ತುಂಬಿಲ್ಲ. ಕಾರ್ಯಕರ್ತರೇ ಹೋರಾಟ ಮಾಡಿದ್ದಾರೆ. ಕರಾವಳಿಯಲ್ಲಿಯೂ ನಮಗೆ ಒಂದು ಸ್ಥಾನ ಸಿಕ್ಕಿದೆ. ಅಲ್ಲಿ ನಮ್ಮ ಬೇಸ್ ಇರಲಿಲ್ಲ ಎಂದು ವಿವರಿಸಿದರು.

    2023 ನಮ್ಮ ಪಕ್ಷದ ಸಂಘಟನಾ ವರ್ಷವಾಗಿದೆ. ರಾಜಕೀಯ ವಿಶ್ಲೇಷಕರ ನಿರೀಕ್ಷೆ ಬದಲಾಗಲಿದೆ. ಸಂಕ್ರಾಂತಿಯಿಂದ ನಾವು ಒಂದು ದಿನವೂ ಬಿಡುವು ತೆಗೆದುಕೊಳ್ಳಲ್ಲ. 123 ಗುರಿ ತಲುಪಲು ಸಂಘಟನೆ ಮಾಡ್ತೇವೆ. ಯಾರು ಎಷ್ಟೇ ಲಘುವಾಗಿ ಮಾತನಾಡಲಿ, ನಮ್ಮದೇ ಆದ ರೀತಿಯಲ್ಲಿ ಸಂಘಟನೆ ಪ್ರಾರಂಭಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಡದಿ ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ. ಆದರೆ ಈ ಫಲಿತಾಂಶ ನನಗೆ ದೊಡ್ಡಮಟ್ಟದ ಅಚ್ಚರಿ ಫಲಿತಾಂಶ ಅಲ್ಲ. ನನಗೆ 18-20 ಸ್ಥಾನಗಳಲ್ಲಿ ಗೆಲುವು ಆಗಲಿದೆ ಅಂದುಕೊಂಡಿದ್ದೆ. ಕೆಲವು ಓವರ್ ಕಾನ್ಫಿಡೆನ್ಸ್ ನಲ್ಲೂ ಹೋಗಿದೆ. ಬಿಡದಿಯ ಮತದಾರರು ದುಡಿಮೆಗೆ ಆರ್ಶೀವಾದ ಮಾಡಿದ್ದಾರೆ. ಬಿಡದಿ ನನಗೆ ರಾಜಕೀಯ ಜನ್ಮ ಕೊಟ್ಟ ಸ್ಥಳ ಎಂದು ಬಿಡದಿಯ ಮತದಾರರಿಗೆ ಅಭಿನಂದನೆ ತಿಳಿಸಿದರು. ಇದನ್ನೂ ಓದಿ:  ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

    ನಾನು ಎರಡೂ ದಿನ ಶಾಸಕರ ಜೊತೆ ಪ್ರಚಾರ ಮಾಡಿದ್ದೆ. ಮುಂದಿನ 2023ರ ಚುನಾವಣೆಗೆ ಈ ಫಲಿತಾಂಶ ನನಗೆ ಮಾನಸಿಕವಾಗಿ ಶಕ್ತಿ ತುಂಬಿದೆ. ಕಾಂಗ್ರೆಸ್ ಅವರು ದೊಡ್ಡಮಟ್ಟದಲ್ಲಿ ಬಿಡದಿ ಹಿಡಿಯಲು ಹೊರಟ್ಟಿದ್ದರು. ಆದರೆ ಬಿಡದಿಯ ಮತದಾರರು ಆರ್ಶೀವಾದ ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

  • ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಕ್ಕೆ

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಕ್ಕೆ

    ವಿಜಯಪುರ: ಬಡವರ ಪಾಲಾಗಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಿಜಯಪುರ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಜಪ್ತಿ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರ ನಿಡಗುಂದಿ ರಸ್ತೆ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮನಗೂಳಿ ಪೊಲೀಸರು ಹಾಗೂ ಜಿಲ್ಲಾ ಆಹಾರ ಅಧಿಕಾರಿಗಳು ದಾಳಿ ನಡೆಸಿದ್ದರು. ಲಾರಿ ಸಮೇತ ಅಕ್ರಮ ಪಡಿತರ ಅಕ್ಕಿಯನ್ನ ವಶಕ್ಕೆ ಪಡೆದಿದ್ದಾರೆ.

    ವಾಹನ ಸಂಖ್ಯೆ ಏಂ-29 ಃ-8299 ಮೂಖಾಂತರ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಬೇರೆಕಡೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿ ಲಾರಿಯನ್ನು ಜಪ್ತಿ ಮಾಡಲಾಗಿದೆ. ಒಟ್ಟು ಅಕ್ಕಿ ಅಂದಾಜು 296 ಕ್ವಿಂಟಲ್ ಇದ್ದು, ಅಂದಾಜು 7,99,000 ರೂ ಮೌಲ್ಯದ್ದಾಗಿದೆ. ಲಾರಿ ಚಾಲಕ ಸದ್ದಾಂ ಜಂಗಿಯನ್ನ ಪೊಲೀಸರು ವಶಕ್ಕೆ ಪಡೆಸಿದ್ದು, ಸದ್ದಾಂ ಮೂಲತಃ ಬಾಗಲಕೋಟ ಜಿಲ್ಲೆಯ ಗದ್ದನಕೇರಿ ನಿವಾಸಿ ತಿಳಿದು ಬಂದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

  • ನಾನೇನು ರಸ್ತೆಯಲ್ಲಿ ನಾಯಿಯಂತೆ ಬೊಗಳುವುದಿಲ್ಲ – ಯತ್ನಾಳ್‍ಗೆ ಜಿಗಜಿಣಗಿ ಟಾಂಗ್

    ನಾನೇನು ರಸ್ತೆಯಲ್ಲಿ ನಾಯಿಯಂತೆ ಬೊಗಳುವುದಿಲ್ಲ – ಯತ್ನಾಳ್‍ಗೆ ಜಿಗಜಿಣಗಿ ಟಾಂಗ್

    ವಿಜಯಪುರ: ನಾನು ಹಿಂದೆ ಕೇಂದ್ರ ಸಚಿವನಾಗಿದ್ದೆ. ಆದರೆ ಈ ಬಾರಿ ಬೇರೆಯವರಿಗೆ ಅವಕಾಶ ನೀಡಿದರು. ಹಾಗಂತ ನಾನೇನು ರಸ್ತೆಯಲ್ಲಿ ನಾಯಿಯಂತೆ ಬೊಗಳುತ್ತಾ ತಿರುಗಲಿಲ್ಲ ಎನ್ನುವ ಮೂಲಕ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರನ್ನ ಸಂಸದ ರಮೇಶ್ ಜಿಗಜಿಣಗಿ ಅವರು ಪರೋಕ್ಷವಾಗಿ ನಾಯಿಗೆ ಹೋಲಿಸಿದ್ದಾರೆ.

    ಇಂದು ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರಿಗೆ ಈ ಹಿಂದೆಯೇ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಜೊತೆ ಅವರು ದಕ್ಕುವುದಿಲ್ಲ. ಅವರು ನಮ್ಮ ಸ್ಥಾನದಲ್ಲಿ ನಮಗೆ ಏನೂ ಮಾಡಲು ಆಗುವುದಿಲ್ಲ. ನಿಮಗೆ ಮೂಲ ಆಗುತ್ತಾರೆ ಎಂದು ಬಿಎಸ್‍ವೈಗೆ ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ  ಹೇಳಿದ್ದೆ ಎಂದರು.

    ಸಿಎಂ ಯಡ್ಡಿಯೂರಪ್ಪವರು ಈಗ ಅದನ್ನು ಅನುಭವಿಸುತ್ತಿದ್ದಾರೆ. ಬಾಯಿಗೆ ಹಲ್ಲಿಲ್ಲದಂತೆ ತನಾಡಬಾರದು. ಇವರು ಯಾಕೆ ಈ ರೀತಿ ಮಾತನಾಡುತ್ತಾರೆ ನನಗೆ ಅರ್ಥವಾಗುತ್ತಿಲ್ಲ. ಮಂತ್ರಿಯಾಗಲಿಲ್ಲ ಎಂಬುದು ಇವರ ಮನಸ್ಸಿನಲ್ಲಿರಬಹುದು. ಅದನ್ನು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗೆ ಪರೋಕ್ಷವಾಗಿ ಸಲಹೆ ನೀಡಿದರು.

    ಸಿಡಿ ವಿಚಾರ ನನಗೆ ಗೊತ್ತಿಲ್ಲ. ಏನೇ ನೋವಿದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ರೋಡಿನಲ್ಲಿ ಮಾತನಾಡಿದರೆ ತಲೆ ಕೆಟ್ಟಿದೆ ಎಂದು ಮತದಾರರು ಹೇಳುತ್ತಾರೆ. ಇವರಿಗೆ ಮತ ಹಾಕಿದವರು ಈಗ ಬೈಯ್ಯುತ್ತಿದ್ದಾರೆ. ನಾನೂ ಹಿಂದೆ ಕೇಂದ್ರ ಸಚಿವನಾಗಿದ್ದೆ. ಆದರೆ ಈ ಬಾರಿ ಬೇರೆಯವರಿಗೆ ಅವಕಾಶ ನೀಡಿದರು. ನಾನೇನೂ ರಸ್ತೆಯಲ್ಲಿ ನಾಯಿಯಂತೆ ಬೊಗಳುತ್ತಾ ತಿರುಗಲಿಲ್ಲ ಎನ್ನುವ ಮೂಲಕ ಯತ್ನಾಳ್ ರನ್ನ ನಾಯಿ ಎಂದು ಪರೋಕ್ಷವಾಗಿ ಹೇಳಿದರು. ಯಡಿಯೂರಪ್ಪ ಹಿರಿಯ ಮನುಷ್ಯ. ಹಿರಿಯ ಮನುಷ್ಯನ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಇದೇ ವೇಳೆ ರಾಜ್ಯದಲ್ಲಿ ದಲಿತರು ರಾಜ್ಯದಲ್ಲಿ ಒಂದಿಲ್ಲ ಒಂದು ದಿನ ದಲಿತ ಸಮುದಾಯದವರು ಸಿಎಂ ಆಗಬೇಕು. ಆಗಿಯೇ ಆಗುತ್ತಾರೆ. ಈ ಕುರಿತು ಯಾರಿಗೂ ಸಂಶಯ ಬೇಡ. ಐವತ್ತು- ಎಪ್ಪತ್ತು ವರ್ಷಗಳಿಂದ ಬೇರೆ ಸಮುದಾಯದವರಿಗೆ ಅವಕಾಶ ಸಿಗುತ್ತಿದೆ. ರಾಜ್ಯದಲ್ಲಿರುವ ಶೇ.1 -ಶೇ.2 ಸಮುದಾಯದ ಮಂದಿಯನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಶೇ.23 ಇರುವಂತಹ ದಲಿತರಿಗೆ ಅವರಲ್ಲಿಯೇ ಬೇಧ-ಭಾವ ಮಾಡಿ ಎಲ್ಲರಿಗೂ ತಂದಿಟ್ಟು ನೀವೆಲ್ಲ ಮಜಾ ಮಾಡುತ್ತಿದ್ದಿರಾ. ಇದಕ್ಕೆ ಕಾರಣ ನಮ್ಮ ಜನಾಂಗದಲ್ಲಿರುವವರಿಗೆ ಸಹನೆ ಕಡಿಮೆ. ಆದರೂ ನಮ್ಮೆಲ್ಲರಲ್ಲಿ ಬೇಧ-ಭಾವವಿಲ್ಲ ಎಂದರು.

     

    ಇಂದು ನೀವೆಲ್ಲರೂ ಹೇಗೆ ಒಗ್ಗಟ್ಟಿನಿಂದ ಇರುತ್ತೀರೋ ಹಾಗೇ ಒಂದಲ್ಲ ಒಂದು ದಿನ ನಮ್ಮ ಸಮುದಾಯದವರೆಲ್ಲಾ ಒಗ್ಗಟ್ಟಾಗಿ ಯಾರಾದರೂ ದಲಿತ ಸಮುದಾಯದವರು ಸಿಎಂ ಆಗೇ ಆಗುತ್ತಾರೆ. ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದರು.

    ಇತರ ಎಲ್ಲಾ ಸಮುದಾಯದವರಿಗೂ ಸಿಎಂ ಆಗುವ ಅವಕಾಶ ಸಿಕ್ಕಿದೆ. ಆದರೆ ರಾಜ್ಯದಲ್ಲಿ 23 ಪ್ರತಿಶತದಷ್ಟು ಸಮುದಾಯ ಇರುವ ದಲಿತರು ಯಾಕೆ ಆಗಬಾರದು ಎಂದು ಪ್ರಶ್ನಿಸಿದರು. ಎಲ್ಲ ಸಮುದಾಯದವರಂತೆ ದಲಿತರಿಗೂ ಸ್ಥಾನಮಾನ ಸಿಗಬೇಕೆಂದು 800 ವರ್ಷಗಳ ಹಿಂದೆಯೇ ಬಸವಣ್ಣನವರು ಕನಸು ಕಂಡಿದ್ದರು. ಅವರ ಕನಸು ನನಸಾಗುತ್ತದೆ. ರಾಜ್ಯದಲ್ಲಿ ಒಂದಿಲ್ಲ ಒಂದು ದಿನ ದಲಿತ ಸಮುದಾಯದವರು ಸಿಎಂ ಆಗಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

     

  • ಕಾರ್ಕಳದಲ್ಲಿ 10 ತಿಂಗಳ ವಿಜಯಪುರದ ಮಗು ಸಂಶಯಾಸ್ಪದ ಸಾವು

    ಕಾರ್ಕಳದಲ್ಲಿ 10 ತಿಂಗಳ ವಿಜಯಪುರದ ಮಗು ಸಂಶಯಾಸ್ಪದ ಸಾವು

    – ಲ್ಯಾಬ್ ವರದಿಗಾಗಿ ಕಾಯುತ್ತಿರುವ ವೈದ್ಯರು

    ಉಡುಪಿ: ಜ್ವರ ಮತ್ತು ತೊಂದರೆಯಿಂದ ಹತ್ತು ತಿಂಗಳ ಮಗು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

    ಸಾವನ್ನಪ್ಪಿದ ಮಗುವನ್ನು ಕಾರ್ಕಳದ ಮಿಯಾರು ಗ್ರಾಮದಲ್ಲಿ ನೆಲೆಸಿರುವ ಮೂಲತಃ ವಿಜಯಪುರ ಜಿಲ್ಲೆಯ ದಂಪತಿಯ ಮಗು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ವಿಜಯಪುರಕ್ಕೆ ಹೋದ ದಂಪತಿ ಹತ್ತು ದಿನಗಳ ಹಿಂದೆ ವಾಪಸ್ ಆಗಿದ್ದರು.

    ಜೂನ್ 28 ರಂದು ಮಗುವಿಗೆ ಜ್ವರ ಕಾಣಿಸಿಕೊಂಡಿತ್ತು. ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಾಲೂಕು ಆಸ್ಪತ್ರೆಗೆ ಮಗುವನ್ನು ಕರೆ ತರುವಾಗ ಸಾವು ಸಂಭವಿಸಿದೆ. ಕೊರೊನಾ ಸಂದರ್ಭದಲ್ಲಿ ಮೃತಪಟ್ಟಿರುವ ಕಾರಣ ಮಗುವಿನ ಗಂಟಲ ದ್ರವ ಪರೀಕ್ಷೆಗಾಗಿ ರವಾನಿಸಲಾಗಿದೆ. ಕೆಎಂಸಿ ಲ್ಯಾಬ್‍ನ ವರದಿಗಾಗಿ ಆರೋಗ್ಯಾಧಿಕಾರಿಗಳು ಕಾಯುತ್ತಿದ್ದಾರೆ.

  • ಠಾಣೆಗೆ ದೂರು ನೀಡಲು ಹೋಗುತ್ತಿದ್ದ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪತಿ

    ಠಾಣೆಗೆ ದೂರು ನೀಡಲು ಹೋಗುತ್ತಿದ್ದ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪತಿ

    ವಿಜಯಪುರ: ಹಾಡಹಗಲೇ ನಡು ರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರದ ಜಿಲ್ಲೆಯ ಇಂಡಿ ಪಟ್ಟಣದ ಕಂದಾಯ ನಿರೀಕ್ಷಕರ ಕಚೇರಿ ಎದುರು ನಡೆದಿದೆ.

    ಖಾಜಿಸಾಬ್ ಬಾಗವಾನ್ (30) ಕೃತ್ಯ ಎಸಗಿದ ಪತಿ. ಮೃತ ಪತ್ನಿಯನ್ನು 26 ವರ್ಷದ ಶಾಹಿದಾ ಭಗವಾನ್ ಎಂದು ಗುರುತಿಸಲಾಗಿದೆ.

    ದಂಪತಿ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ ವಾಸವಿದ್ದರು. ರಂಜಾನ್ ಹಬ್ಬಕ್ಕೆ ತವರು ಮನೆಯಾದ ಹಿರೇಬೇವನೂರು ಗ್ರಾಮಕ್ಕೆ ಶಾಹಿದಾ ತೆರಳಿದ್ದಳು. ಇದಕ್ಕೆ ಕೋಪಗೊಂಡ ಪತಿ ಆಕೆಯ ತವರು ಮನೆಗೆ ಹೋಗಿ ಜಗಳವಾಡಿ ಎರಡು ವರ್ಷದ ಮಗನನ್ನು ಕರೆದುಕೊಂಡು ತನ್ನ ಮನೆಗೆ ಬಂದಿದ್ದಾನೆ

    ಮಗನನ್ನು ಬಲವಂತವಾಗಿ ಎತ್ತಿಕೊಂಡು ಹೋಗಿದ್ದಕ್ಕೆ ಇಂದು ಪತಿ ವಿರುದ್ಧ ದೂರು ನೀಡಲು ಇಂಡಿ ಗ್ರಾಮೀಣ ಪೊಲೀಸ್ ಠಾಣೆಗೆ ಶಾಹಿದಾ ಹೋಗುವಾಗ ಹಿಂದಿನಿಂದ ಬೈಕಿನಲ್ಲಿ ಬಂದ ಖಾಜಾಸಾಬ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

    ಈ ಸಂಬಂಧ ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಖಾಜಾಸಾಬ್‍ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

  • ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

    ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

    ಬೆಂಗಳೂರು: ಬಿಜೆಪಿ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಲ್ಲಿಕಾರ್ಜುನ ಖೂಬಾ ಇಂದು ಬಿಎಸ್‍ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

    ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕಮಲ ಬಾವುಟ ನೀಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಬಸವಕಲ್ಯಾಣ ಜೆಡಿಎಸ್ ಶಾಸಕರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ್ ಅನ್ವರಿ, ಮಾಜಿ ಸಚಿವ ನಾಗಪ್ಪ ಸಾಲೋಣಿ ಕೂಡ ಪಕ್ಷಕ್ಕೆ ಸೇರ್ಪಡೆಯಾದರು.

    ಈ ವೇಳೆ ಮಾತನಾಡಿದ ಬಿಎಸ್‍ವೈ, ನಾಲ್ವರನ್ನು ಬಿಜೆಪಿಗೆ ಸ್ವಾಗತ ಮಾಡುತ್ತೇನೆ. ಇಂದು ಪಕ್ಷಕ್ಕೆ ಒಳ್ಳೆಯ ದಿನ, ಮತ್ತಷ್ಟು ಬಲ ಪಕ್ಷಕ್ಕೆ ಸೇರ್ಪಡೆಯಾಗಿದೆ. ಇದೇ ಏಪ್ರಿಲ್ 8ಕ್ಕೆ ವಿಜಯಪುರ, ಬಸವಕಲ್ಯಾಣದಲ್ಲಿ ಬೃಹತ್ ಸಮಾವೇಶಗಳನ್ನು ನಡೆಸುತ್ತೇವೆ. ಈ ವೇಳೆ ಅನೇಕ ಮಾಲೀಕಯ್ಯ ಗುತ್ತೇದಾರ್ ಕೂಡ ಬಿಜೆಪಿ ಸೇರ್ಪಡೆಯಾಗುತ್ತಾರೆ. ಮಾಲೀಕಯ್ಯ ಗುತ್ತೇದಾರ್ ಅವರು ತಮ್ಮೊಂದಿಗೆ ಇನ್ನು ನಾಲ್ಕು ಜನ ಕಾಂಗ್ರೆಸ್ ಶಾಸಕರನ್ನ ಕರೆದುಕೊಂಡು ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್ ನ ಮತ್ತಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ವಿವರಿಸಿದರು.

    ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖೂಬಾ, ನನ್ನ ಪಕ್ಷ ಸೇರ್ಪಡೆಗೆ ವಿರೋಧ ಮಾಡುವವರು ಕಾಂಗ್ರೆಸ್ ಏಜೆಂಟ್ ಗಳು. ನಾನು ಎಲ್ಲರ ಸಮ್ಮತಿ ಪಡೆದೆ ಪಕ್ಷ ಸೇರ್ಪಡೆಯಾಗಿದ್ದೇನೆ. ಇಬ್ಬರು ಮೂವರು ಸುಮ್ಮನೆ ವಿರೋಧ ಮಾಡುತ್ತಿದ್ದಾರೆ ಅಷ್ಟೇ. ಯಡಿಯೂರಪ್ಪ ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ.

    ಕಾರ್ಯಕರ್ತರ ಪ್ರತಿಭಟನೆ: ಮತ್ತೊಂದೆಡೆ ಖೂಬಾ ಸೇರ್ಪಡೆ ವಿರೋಧಿಸಿ ಬೀದರ್‍ನ ಬಸವಕಲ್ಯಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ವಿಜಯಪುರದಲ್ಲಿ ಯತ್ನಾಳ್ ಬಿಜೆಪಿ ಸೇರ್ಪಡೆ ವಿರುದ್ಧ ಕಾರ್ಯಕರ್ತ ಬಾಬು ಜಗದಾಳೆ ಎನ್ನುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.

  • ನೀರು ಕಾಯಿಸಲು ಹಚ್ಚಿದ್ದ ಒಲೆಯಿಂದ ಗುಡಿಸಲಿಗೆ ಬೆಂಕಿ- 3 ಜನರಿಗೆ ಗಾಯ, 6 ಮೇಕೆ ಸಾವು

    ನೀರು ಕಾಯಿಸಲು ಹಚ್ಚಿದ್ದ ಒಲೆಯಿಂದ ಗುಡಿಸಲಿಗೆ ಬೆಂಕಿ- 3 ಜನರಿಗೆ ಗಾಯ, 6 ಮೇಕೆ ಸಾವು

    ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೂವರಿಗೆ ಗಾಯಗಳಾಗಿದ್ದು, 6 ಮೇಕೆಗಳು ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ನಿವಾಸಿ ಶ್ರೀಶೈಲ ಗೌಡ ಅವರಿಗೆ ಸೇರಿದ ತೋಟದ ಮನೆಯ ಗುಡಿಸಲು ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ 2 ವರ್ಷದ ಮಗು ಲಾಯವ್ವ ಸೇರಿದಂತೆ 3 ಜನರಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿವೆ. ಮಂಗಳವಾರ ರಾತ್ರಿ ನೀರು ಕಾಯಿಸುವಾಗ ಹಚ್ಚಿದ್ದ ಒಲೆ ಆರದೇ ಇದ್ದಿದ್ದರಿಂದ ಬೆಂಕಿ ಗುಡಿಸಲಿಗೆ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿದೆ.

    ಅಲ್ಲದೇ, ಬೆಂಕಿಯ ಕೆನ್ನಾಲಿಗೆಗೆ ಪತ್ರಾಸ್ ಶೆಡ್ಡು ಒಡೆದು ಮನೆಯವರು ಹೊರಗೆ ಬಂದು ಬಚಾವ್ ಆಗಿದ್ದಾರೆ. ಈ ಕುರಿತು ತಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ತಿಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.