Tag: ಬಿಜಿಪಿ

  • ಬಿಜೆಪಿಗೆ ಕಾಂಗ್ರೆಸ್, ಜೆಡಿಎಸ್‍ನ ಶಾಸಕರು ಬರಲು ರೆಡಿ ಇದ್ದಾರೆ- ನಾರಾಯಣಗೌಡ

    ಬಿಜೆಪಿಗೆ ಕಾಂಗ್ರೆಸ್, ಜೆಡಿಎಸ್‍ನ ಶಾಸಕರು ಬರಲು ರೆಡಿ ಇದ್ದಾರೆ- ನಾರಾಯಣಗೌಡ

    ಮಂಡ್ಯ: ಬಿಜೆಪಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಶಾಸಕರಲ್ಲಿ ಕೆಲವರು ಬರಲು ರೆಡಿ ಇದ್ದಾರೆ. ಯಾರು ಯಾರು ಬರುತ್ತಾರೆ ಎಂದು ಈಗಲೇ ಹೇಳಿ ಬಿಟ್ಟರೆ ಮಾಧ್ಯಮದವರು ಬ್ಲಾಸ್ಟ್ ಮಾಡಿಬಿಡುತ್ತಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ  ಕೆಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಂಪರ್ಕದಲ್ಲಿ ಇರುವುದು ಸತ್ಯ. ಯಾರು ಯಾರು ಇದ್ದಾರೆ ಎಂದು ಬಹಿರಂಗ ಪಡಿಸಲು ಈಗ ಸಾಧ್ಯವಿಲ್ಲ. ಆ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ ಎಂದು ಹೇಳಿದ್ದಾರೆ.

    ಶಾಸಕರು ಬಿಜೆಪಿಗೆ ಬರಲು ಸಿದ್ದವಾಗಿದ್ದಾರೆ. ಆದರೆ ನಮಗೆ ಅವಶ್ಯಕತೆ ಇಲ್ಲ. ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಹೀಗಾಗಿ ಅವರು ಯಾರು ಎಂದು ಸಮಯ ಬಂದಾಗ ಹೇಳುತ್ತೇನೆ. ಇನ್ನೂ 25 ವರ್ಷ ಬಿಜೆಪಿ ಸರ್ಕಾರವನ್ನು ಯಾರು ಕೂಡ ಟಚ್ ಮಾಡಲು ಆಗುವುದಿಲ್ಲ ಎಂದಿದ್ದಾರೆ.

    ರಾಮ ಮಂದಿರ ನಿಧಿ ಸಂಗ್ರಹಣೆ ವಿಚಾರದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹಣ ಕೊಡುವುದಕ್ಕೆ ಇಷ್ಟ ಇಲ್ಲ ಎಂದರೆ ಕೊಡುವುದು ಬೇಡ. ಅದನ್ನು ಬಿಟ್ಟು ಈ ರೀತಿ ಮಾತನಾಡುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ದೇವಸ್ಥಾನ ಕಟ್ಟಲು ಅನುಮತಿ ನೀಡಿದೆ. ಹಣ ನೀಡದ ಮನೆಗಳಿಗೆ ಯಾವುದೇ ರೀತಿಯ ಮಾರ್ಕ್ ಮಾಡುತ್ತಿಲ್ಲ, ಯಾವ ಕಾರಣಕ್ಕೆ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

  • ಅತ್ತೆ ಮಕ್ಕಳಿಗೆ 17 ಲಕ್ಷ ರೂಪಾಯಿ ಟೋಪಿ ಹಾಕಿದ್ರಾ ಬಿಜೆಪಿ ಮುಖಂಡ!

    ಅತ್ತೆ ಮಕ್ಕಳಿಗೆ 17 ಲಕ್ಷ ರೂಪಾಯಿ ಟೋಪಿ ಹಾಕಿದ್ರಾ ಬಿಜೆಪಿ ಮುಖಂಡ!

    ಹುಬ್ಬಳ್ಳಿ: ಸೋದರ ಮಾವನ ಹೆಸರಿನಲ್ಲಿ ನಕಲಿ ಬಾಂಡ್ ಸೃಷ್ಟಿ ಮಾಡಿ ಮಾವನ ಮಕ್ಕಳಿಗೆ ತೊಂದರೆ ಕೊಡುತ್ತಿದ್ದಾರೆಂಬ ಆರೋಪವೊಂದು ಭಾರತೀಯ ಜನತಾ ಪಕ್ಷದ ಮುಖಂಡನ ವಿರುದ್ಧ ಕೇಳಿಬಂದಿದೆ.

    ಸಂಗಮೇಶ ಗೌರಕ್ಕನವರ್ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡ. ಇವರು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಮುಖಂಡರೊಂದಿಗೆ ಸಂಪರ್ಕ ಹೊಂದಿದ್ದು, ಇದೀಗ ತೊಂದರೆ ಕೊಡುತ್ತಿದ್ದಾರೆಂದು ಆರೋಪಿಸಿ ಅಳಿಯಂದಿರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಗಂಗಾಧರ ವಾಲಿ ಎಂಬವರ ಕುಟುಂಬಕ್ಕೆ ಸಂಗಮೇಶ್ ಅನ್ಯಾಯ ಮಾಡಿ 17 ಲಕ್ಷ 68 ಸಾವಿರ ಕೊಡುವಂತೆ ಪೀಡಿಸುತ್ತಿದ್ದಾರೆಂದು ವಾಲಿ ಪುತ್ರ ದೂರಿನಲ್ಲಿ ತಿಳಿಸಿದ್ದಾರೆ.

     

    ಗಂಗಾಧರ ವಾಲಿಯವರು ತೀರಿಕೊಳ್ಳುವ ಮುನ್ನವೇ ಬಾಂಡ್ ಒಂದನ್ನ ಮಾಡಿಕೊಂಡಿದ್ದು, ಅದರಲ್ಲಿ 10 ಲಕ್ಷ ರೂಪಾಯಿ ಕೈಗಡ ಎಂದು ಬರೆಯಲಾಗಿದೆ. ಆದರೆ ಒಂದು ವರ್ಷದಲ್ಲಿ ಅದರ ಬಡ್ಡಿ ಸಮೇತ 17 ಲಕ್ಷಕ್ಕೂ ಹೆಚ್ಚು ಹಣವನ್ನ ಕೊಡುವಂತೆ ಪೀಡಿಸುತ್ತಿರುವುದರಿಂದ ಪ್ರಕರಣ ಬೆಳಕಿಗೆ ಬಂದಿದೆ.

    ಸಂಗಮೇಶ ಗೌರಕ್ಕನವರ್ ಬಿಜೆಪಿ ಮುಖಂಡರ ಜೊತೆಗೂಡಿ ಇಂತಹ ದಂಧೆಗಳನ್ನ ಮಾಡುತ್ತಿದ್ದಾರೆಂದು ವಾಲಿ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ನಕಲಿ ಬಾಂಡ್‍ಗೆ ಮೃತ ರಾಘವೇಂದ್ರ ರಾಮದುರ್ಗ ಅವರ ಸಹಿ ಕೂಡಾ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೋದರ ಮಾವನ ಮಕ್ಕಳು ಬಿಜೆಪಿ ಮುಖಂಡನ ಅಕ್ರಮದ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ತನಿಖೆಯಿಂದ ಸತ್ಯ ತಿಳಿಯಲಿದೆ.

  • ಸಿದ್ದರಾಮಯ್ಯ ನಮ್ಮ ನಾಯಕ – ರಮೇಶ್ ಜಾರಕಿಹೊಳಿ

    ಸಿದ್ದರಾಮಯ್ಯ ನಮ್ಮ ನಾಯಕ – ರಮೇಶ್ ಜಾರಕಿಹೊಳಿ

    – ದಿನಕ್ಕೆ 2 ಬಾರಿ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ
    – ಮನಸ್ಸು ಮಾಡಿದ್ರೆ 5 ಕೈ ಶಾಸಕರು ರಾಜೀನಾಮೆ ನೀಡ್ತಾರೆ

    ಬೆಳಗಾವಿ: ದಿನಕ್ಕೆ ಎರಡು ಬಾರಿ ಸಿದ್ದರಾಮಯ್ಯ ಜತೆಗೆ ಮಾತಾಡುತ್ತೇನೆ. ಇಂದಿಗೂ ಮಾತನಾಡುತ್ತೇನೆ ಸಿದ್ದರಾಮಯ್ಯ ನಮ್ಮ ನಾಯಕ ಎಂದು ಹೇಳುವ ಮೂಲಕವಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

    ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾ.ಪಂ ಸದಸ್ಯರಿಗೆ ಸತ್ಕಾರ ಕಾರ್ಯಕ್ರಮದಲ್ಲಿ ಭಾಗವಿಸಿದ ಮಾತನಾಡಿದ ಅವರು ನಾನು ಮನಸ್ಸು ಮಾಡಿದ್ರೇ 24 ಗಂಟೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರನ್ನ ರಾಜೀನಾಮೆ ಕೊಡಿಸುತ್ತೇನೆ. ನೀವು ನಂಬಲು ಆಗಲ್ಲಾ. ಅಂತ ದೊಡ್ಡ ನಾಯಕರು ಬಿಜೆಪಿ ಬರಲು ತಯಾರಿದ್ದಾರೆ. ಟಾಪ್ 1 ರಿಂದ ಐದರ ವರೆಗಿನ ಕಾಂಗ್ರೆಸ್ ನಾಯಕರನ್ನ ಕರೆತರುತ್ತೇನೆ. ಅವರ ಹೆಸರನ್ನ ಕೇಳಿದ್ರೇ ನೀವು ಕೂಡ ಗಾಬರಿಯಾಗುತ್ತೀರಿ. ಕಾಂಗ್ರೆಸ್‍ನ ಮಹಾನ್ ನಾಯಕರನ್ನ ಬಿಜೆಪಿಗೆ ತರುತ್ತೇನೆ ಎಂದು ಹೇಳಿದ್ದಾರೆ

    ನಾವು ಬಿಜೆಪಿಯಲ್ಲಿ ಆನಂದದಿಂದ ಕೆಲಸ ಮಾಡುತ್ತಿದ್ದೇವೆ. ಹದಿನೇಳು ಜನರು ಶಾಸಕರು ಬಿಜೆಪಿಯಲ್ಲಿ ಗಟ್ಟಿಯಾಗಿರುತ್ತೇವೆ. ಕಾಂಗ್ರೆಸ್ ನಲ್ಲಿ ನಮ್ಮನ್ನ ಮೂಲೆಯಲ್ಲಿ ಕುಡಿಸಿದ್ದರು. ನಾವು ಮತ್ತೆ ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದಿದ್ದಾರೆ.

    ಒಬ್ಬ ಹೆಣ್ಣು ಮಗಳಿದ್ದಾಳೆ ಅವರಿಗೆ ದೇವರು ಒಳ್ಳೆಯದು ಮಾಡಲಿ. ತಲೆ ಕೆಡಿಸಿಕೊಂಡು ಮಾತಾಡಿದ್ರೇ ಬಹಳ ಕಷ್ಟ ಆಗುತ್ತೆ. ಅವರ ಬಗ್ಗೆ ನಾವು ಕೆಟ್ಟದು ಮಾತಾಡುವುದಿಲ್ಲ. ನೀವು ಮಾತಾಡಬೇಡಿ ಎಂದು ಹೇಳು ಮೂಲಕವಾಗಿ ಅಧಿಕಾರದ ದುರುಪಯೋಗ ಮಾಡಿಕೊಂಡು ಕೆಲಸ ಮಾಡ್ತಿದ್ದಾರೆ ಎಂಬ ಹೆಬ್ಬಾಳ್ಕರ್ ಹೇಳಿಕೆ ವಿಚಾರವಾಗಿ ಮಾತನಾಡಿದ್ದಾರೆ.

    ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೆಲ್ಲಿ ಬಿಜೆಪಿ ಅಧಿಕಾರಕ್ಕೆ ಇಲ್ಲ ಅದನ್ನ ತರುವ ಕೆಲಸ ಮಾಡುತ್ತೇವೆ. ಮುಂದಿನ ಭಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುವ ನಿರ್ಧಾರ ಮಾಡಿ ಸಂಕಲ್ಪ ಮಾಡಿದ್ದೇವೆ. ಇಂದಿನ ಕಾರ್ಯಕ್ರಮದಲ್ಲಿ 23 ಗ್ರಾಮ ಪಂಚಾಯತಿ ಸದಸ್ಯರು ಹಾಜರಿದ್ದಾರೆ. ಚುನಾವಣೆ ಫಲಿತಾಂಶ ಪೂರ್ತಿ ಬರುವ ಮುನ್ನ ರಮೇಶ್ ಜಾರಕಿಹೊಳಿಗೆ ಮುಖಭಂಗ ಅಂತಾ ಬಂತೂ. ಅತೀ ಶೀಘ್ರದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯರು ಎಷ್ಟಿದ್ದಾರೆ ಅಂತಾ ತೋರಿಸುತ್ತೇನೆ ಅಂತಾ ಮಾತುಕೊಟ್ಟಿದ್ದೆನೆ ಎಂದರು.

    ಮುಂದಿನ ಚುನಾವಣೆಯಲ್ಲಿ ಅರವತ್ತು ಸಾವಿರ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು. ಐವತ್ತು ಸಾವಿರಕ್ಕಿಂತ ಕಡಿಮೆ ಅಂತರದಲ್ಲಿ ಬಿಜೆಪಿ ಗೆದ್ದರೆ ಅದು ಸೋಲು ಅಂದುಕೊಳ್ಳುತ್ತೇನೆ. ನನ್ನನ್ನು ನಂಬಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಜನರು ಹೋಗಿದ್ದಾರೆ. ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಜನರು ನನ್ನ ಜನರು. ಗ್ರಾಮೀಣ ಕ್ಷೇತ್ರದಲ್ಲಿನ ಕಾಂಗ್ರೆಸ್ ಕಾರ್ಯಕರ್ತರನ್ನ ಮುಂದಿನ ದಿನಗಳಲ್ಲಿ ಬಿಜೆಪಿಗೆ ಕರೆದುಕೊಂಡು ಬರುವ ಜವಾಬ್ದಾರಿ ನನ್ನದು. ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ಆಪರೇಷನ್ ಕಮಲ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಇದೇ ವೇಳೆ ಮಾತನಾಡಿದ ಸರ್ಕಾರದ ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಉದ್ಯೋಗ ಖಾತ್ರಿ ನಾನೇ ತಂದಿದ್ದೇನೆ ಅಂತಾ ಕೆಲವರು ಹೇಳುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಕೇಂದ್ರ ಸರ್ಕಾರ ತಂದಿರುವುದು ಎಂದು ಹೇಳಿ ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಟಾಂಗ್ ಕೊಟ್ಟಿದ್ದಾರೆ.

    ಗೋಕಾಕ್ ಗೆ ಕೊಟ್ಟಷ್ಟು ಅನುದಾನ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ನೀಡಬೇಕು. ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದುಳಿದ ಕ್ಷೇತ್ರವಾಗಿದೆ. ಗ್ರಾಪಂ ಸದಸ್ಯರು ಒಟ್ಟಾಗಿ ಕೆಲಸ ಮಾಡಿ ಕ್ಷೇತ್ರ ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದ್ದಾರೆ.

    ರಮೇಶ್ ಜಾರಕಿಹೊಳಿ ಮಾತಾಡಿದರೆ ಆ ಕೆಲಸ ಮಾಡುತ್ತಾರೆ. ನೀವೆಲ್ಲಾ ಹುಲಿ ಜತೆಗೆ ಇರೀ ಕುರಿ ಜತೆಗೆ ಇರಬೇಡಿ ಎಂದು ಹೇಳುವ ಮೂಲಕವಾಗಿ ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕಿ ಹೆಬ್ಬಾಳ್ಕರ್‍ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

  • ಎಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ನೀಡೋಣ – ಶೆಟ್ಟರ್

    ಎಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ನೀಡೋಣ – ಶೆಟ್ಟರ್

    – ಎಪಿಎಂಸಿಯಿಂದ ಮಧ್ಯವರ್ತಿಗಳಿಗೆ ಮಾತ್ರ ಲಾಭ
    – ಕಾಂಗ್ರೆಸ್ ಕುಮ್ಮಕ್ಕಿನಿಂದ ಪ್ರತಿಭಟನೆ

    ಹುಬ್ಬಳ್ಳಿ: ಎಪಿಎಂಸಿಯಿಂದ ರೈತರಿಗೆ ಲಾಭವಾಗಿಲ್ಲ. ಎಪಿಎಂಸಿ ಇಲ್ಲ ಅಂದ್ರೆ ಇಲ್ಲ, ಎಂಪಿಎಂಸಿ ಮುಚ್ಚಿದ್ರೆ ಏನಾಯ್ತು? ಹೊರಗಡೆಯವರಿಗೆ ಅವಕಾಶ ಕೊಟ್ಟು ನೋಡೋಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

     

    ಹುಬ್ಬಳ್ಳಿಯಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ ನೇರವಾಗಿ ರೈತರಿಗೆ ಸಿಗಲಿದೆ. ಆದರೆ ಕಾಂಗ್ರೆಸ್‍ನವರ ಕುಮ್ಮಕ್ಕಿನಿಂದ ಈಗ ಪ್ರತಿಭಟನೆ ನಡೆಯುತ್ತಿದೆ ಎಂದು ನಾಳೆ ನಡೆಯಲಿರುವ ರೈತರ ಪ್ರತಿಭಟನೆ ವಿರುದ್ಧ ಶೆಟ್ಟರ್ ಕಿಡಿಕಾರಿದ್ದಾರೆ.

    ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಕುಮ್ಮಕ್ಕಿನಿಂದ ಪ್ರತಿಭಟನೆ ನಡೆಯುತ್ತಿದೆ. ನಿಜವಾದ ರೈತರು ಅದರಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದ ಕಾರಣ, ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ರಾಜಕೀಯ ಪ್ರೇರಿತ ಪ್ರತಿಭಟನೆಗೆ ರೈತರು ಬೆಂಬಲ ನೀಡಬಾರದೆಂದು ಜಗದೀಶ್ ಶೆಟ್ಟರ್ ಮನವಿ ಮಾಡಿದರು.

    ಪ್ರಧಾನಿ ನರೇಂದ್ರ ಮೋದಿಯವರದ್ದು ರೈತ ಪರವಾದ ಸರ್ಕಾರವಾಗಿದೆ. ಮೋದಿಯವರ ವರ್ಚಸ್ಸಿಗೆ ಕುಂದು ತರುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ನಿಜವಾದ ರೈತರು ನಾಳೆಯ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

  • ಎರಡೂವರೆ ದಶಕಗಳ ಬಳಿಕ ರಾಷ್ಟ್ರ ರಾಜಧಾನಿ ಚುಕ್ಕಾಣಿ ಹಿಡಿಯಲಿದಿಯಾ ಬಿಜೆಪಿ?

    ಎರಡೂವರೆ ದಶಕಗಳ ಬಳಿಕ ರಾಷ್ಟ್ರ ರಾಜಧಾನಿ ಚುಕ್ಕಾಣಿ ಹಿಡಿಯಲಿದಿಯಾ ಬಿಜೆಪಿ?

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚುನಾವಣಾ ಕಾವು ಜೋರಾಗಿದೆ. ದಿಲ್ಲಿ ಗದ್ದುಗೆ ಏರಲು ಆಮ್ ಆದ್ಮಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೊಟಿ ಶುರುವಾಗಿದೆ. ಮೇಲ್ನೊಟಕ್ಕೆ ಮೂರು ಪಕ್ಷಗಳು ಚುನಾವಣಾ ಕಣದಲ್ಲಿದ್ದರೂ ಆಪ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದೆ.

    ಮತ್ತೊಮ್ಮೆ ಗದ್ದುಗೆ ಏರಲು ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ಆಪ್ ಸಿದ್ದವಾಗಿದ್ದರೇ, ಇತ್ತ ಬಿಜೆಪಿ 27 ವರ್ಷಗಳ ಬಳಿಕ ಚುನಾವಣೆ ಗೆಲ್ಲಲು ತಂತ್ರ ರೂಪಿಸಿದೆ. ಈ ಬಾರಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಘೋಷಿಸದೇ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಸಜ್ಜಾಗಿದೆ.

     1993ರಿಂದ ಇದುವರೆಗೆ ದೆಹಲಿ ವಿಧಾನಸಭೆಗೆ 6 ಚುನಾವಣೆಗಳು ನಡೆದಿದ್ದು, ಈ ಪೈಕಿ ಬಿಜೆಪಿ ಒಮ್ಮೆ ಮಾತ್ರ ಅಧಿಕಾರದ ಚುಕ್ಕಾಣಿ ಹಿಡಿದಿದೆ. 1993ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಸ್ಪರ್ಧಿಸಿ 49 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1993ರ ಬಳಿಕ ದೆಹಲಿಯಲ್ಲಿ ಒಟ್ಟು 5 ಬಾರಿ ವಿಧಾನಸಭಾ ಚುನಾವಣೆ ನಡೆದಿದ್ದು, ಯಾವ ಚುನಾವಣೆಯಲ್ಲೂ ಬಿಜೆಪಿ ಇಷ್ಟೊಂದು ಸ್ಥಾನಗಳನ್ನು ಪಡೆದಿಲ್ಲ. 1993ರ ಚುನಾವಣೆಯಲ್ಲಿ ಬಿಜೆಪಿ ಸರ್ವಶ್ರೇಷ್ಠ ಸಾಧನೆ ಮಾಡಿತ್ತು.

    ಇದಾದ ಬಳಿಕ ಮೂರು ಅವಧಿ ಕಾಂಗ್ರೆಸ್ ದೆಹಲಿಯಲ್ಲಿ ಗಟ್ಟಿಯಾಗಿ ನೆಲೆಯೂರಿತ್ತು. ಶೀಲಾ ದೀಕ್ಷಿತ್ ಮುಖ್ಯಮಂತ್ರಿ ಆಗಿ 15 ವರ್ಷಗಳ ಆಡಳಿತ ನಡೆಸಿದ್ದರು. ಶೀಲಾ ಆಡಳಿತದ ಮುಂದೆ ಮಂಕಾಗಿದ್ದು ಬಿಜೆಪಿ 15 ವರ್ಷಗಳ ಕಾಲ ಅಧಿಕಾರ ಹಿಡಿಯಲು ಸಾಧ್ಯವಾಗಿರಲಿಲ್ಲ. 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 31 ಸ್ಥಾನಗಳನ್ನ ಪಡೆದಿತ್ತು. ಆದರೆ ಬಹುಮತ ಸಾಬೀತುಪಡಿಸಲು ಇನ್ನೂ 4 ಶಾಸಕರ ಬೆಂಬಲ ಸಿಗದೆ ಅಧಿಕಾರದಿಂದ ದೂರ ಉಳಿದಿತ್ತು. ಕಾಂಗ್ರೆಸ್ ಆಪ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. 1998ರಲ್ಲಿ 15 ಸ್ಥಾನ, 2003ರಲ್ಲಿ 20 ಸ್ಥಾನ, 2008ರಲ್ಲಿ 23 ಸ್ಥಾನ ಹಾಗೂ 2015ರಲ್ಲಿ ಕೇವಲ 3 ಸ್ಥಾನ ಪಡೆಯುವಲ್ಲಿ ಮಾತ್ರ ಬಿಜೆಪಿ ಯಶಸ್ವಿಯಾಗಿತ್ತು.

    ಬಿಜೆಪಿ ಉತ್ಸಾಹಕ್ಕೆ ಕಾರಣವೇನು?
    ಈ ಬಾರಿಯ ಚುನಾವಣೆ ಬಿಜೆಪಿಗೆ ಬಹುಮುಖ್ಯವಾಗಿದ್ದು ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದೆ. ಬಿಜೆಪಿ ಈ ಉತ್ಸಾಹಕ್ಕೆ ಮತ್ತೊಂದು ಕಾರಣ ಮತ ಪ್ರಮಾಣ. ಕಳೆದ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಮತ್ತು ಹೆಚ್ಚು ವೋಟ್ ಶೇರ್ ನ್ನು ಪಡೆದಿತ್ತು. 2008ರಲ್ಲಿ ಶೇ. 36.3 ರಷ್ಟು, 2003ರಲ್ಲಿ ಶೇ. 35.2ರಷ್ಟು, 1998ರಲ್ಲಿ ಶೇ. 34.0, 2013ರಲ್ಲಿ ಶೇ. 33.3ರಷ್ಟು ಹಾಗೂ 2015ರಲ್ಲಿ ಶೇ. 32.3ರಷ್ಟು ಮತಗಳಿಕೆ ಮಾಡಿತ್ತು. ಅಲ್ಲದೆ 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಬಿಜೆಪಿ ಪತಾಕೆ ಹಾರಿಸಿತ್ತು.

    ಹೀಗಾಗಿ ಬಿಜೆಪಿ ಈ ಬಾರಿ ಹೆಚ್ಚು ಆಸಕ್ತಿ ಈ ಚುನಾವಣೆ ತೋರಿದ್ದು ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೊಂದಣಿ ಈ ಎರಡು ಕಾಯ್ದೆಗಳ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಬಳಸಿಕೊಂಡು ಚುನಾವಣಾ ಕಣಕ್ಕೆ ಇಳಿದಿದ್ದು ಆಪ್ ಕೂಡ ಕೊಂಚ ಹೆಚ್ಚೇ ಪ್ರತಿಸ್ಪರ್ಧೆ ನೀಡಿದೆ. ಈ ಹೋರಾಟ ನಡುವೆ ಗೆಲುವು ಸಾಧಿಸುವ ಮೂಲಕ ದೆಹಲಿಯಲ್ಲಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲಿಲ್ಲದ ಪ್ರಯತ್ನ ನಡೆಸಿದೆ.

  • 2019ರಲ್ಲಿ ಬಿಜೆಪಿ ಸೋಲಿಸೋದೆ ನಮ್ಮ ಗುರಿ: ಹೆಚ್‍ಡಿ ದೇವೇಗೌಡ

    2019ರಲ್ಲಿ ಬಿಜೆಪಿ ಸೋಲಿಸೋದೆ ನಮ್ಮ ಗುರಿ: ಹೆಚ್‍ಡಿ ದೇವೇಗೌಡ

    ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

    ಇಂದು ನಡೆದ ಜೆಡಿಎಸ್‍ನ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಎಷ್ಟು ಸೀಟು ಗೆಲ್ತೀವಿ ಎಂಬುದು ಮುಖ್ಯವಲ್ಲ, ಕಾಂಗ್ರೆಸ್ ಜೊತೆ ಸೇರಿ ಬಿಜೆಪಿ ಹಿನ್ನಡೆಗೆ ನಾವು ಮುಂದಾಗಬೇಕು. ನಮ್ಮ ಗುರಿ ಕೇವಲ ಬಿಜೆಪಿಯನ್ನು ಸೋಲಿಸುವುದು ಮಾತ್ರ. ಇದನ್ನು ಎಲ್ಲರೂ ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಬಿಜೆಪಿ ವಿರುದ್ಧ ಕಹಳೆ ಊದಿದ್ದಾರೆ.

    ಈ ವೇಳೆ ಮಾತನಾಡಿದ ಅವರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ನಮ್ಮಲ್ಲಿರುವವರೇ ಕಾರಣ, ಆದಷ್ಟು ಬೇಗ ಅನ್ಯಾಯ ಮಾಡಿದವರನ್ನು ಪಕ್ಷದಿಂದ ಹೊರ ಹಾಕುವುದಾಗಿ ಹೇಳಿದ್ದಾರೆ.

    ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಭಾಗಗಳಲ್ಲಿ ಹಾನಿಯಾಗಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲಾಡಳಿತದಲ್ಲಿರುವ 5 ಕೋಟಿ ಹಣವನ್ನು ಬಳಕೆ ಮಾಡಲು ಸೂಚಿಸಲಾಗಿದೆ. ಮಳೆಹಾನಿಯ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಈ ವೇಳೆ ತಿಳಿಸಿದ್ದಾರೆ.

    ಮತ್ತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರ ಬ್ಯಾಟಿಂಗ್ ಮಾಡಿದ ಅವರು, ಚುನಾವಣೆ ಉತ್ಸಾಹದಲ್ಲಿ ಒಂದೇ ದಿನದಲ್ಲಿ ರೈತರ ಸಾಲಮನ್ನಾ ಮಾಡ್ತೀವಿ ಅಂತ ಹೇಳಿದ್ರು, ಆದ್ರೆ 37 ಸೀಟು ಪಡ್ಕೊಂಡು ಹೇಗೆ ಸಾಲಮನ್ನಾ ಮಾಡೋಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಾವು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಪಡೆದಿದ್ದೇವೆ. ಯಾವುದೇ ಸ್ವಂತ ನಿರ್ಧಾರ ಕೈಗೊಳ್ಳುವ ಸ್ಥಿತಿಯಲ್ಲಿಲ್ಲ ಹೀಗಾಗಿ ಅವರೊಂದಿಗೆ ಚರ್ಚಿಸಿ ಪರಿಹಾರ ಸೂಚಿಸ್ತೀವಿ ಎಂದು ಹೇಳಿದ್ದಾರೆ.

    ಮುಖ್ಯಮಂತ್ರಿಗಳು ಈಗಾಗಲೇ ರೈತರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಿದ್ದಾರೆ. ಸಾಲಮನ್ನಾ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಎಚ್‍ಡಿಡಿ ಹೇಳಿದರು.

  • ಇಂದು ಗಾಂಧಿನಗರದಲ್ಲಿ ಬೃಹತ್ ರ‍್ಯಾಲಿ ನಡೆಸಲಿರುವ ಮೋದಿ

    ಇಂದು ಗಾಂಧಿನಗರದಲ್ಲಿ ಬೃಹತ್ ರ‍್ಯಾಲಿ ನಡೆಸಲಿರುವ ಮೋದಿ

    ಗಾಂಧಿನಗರ: 1995 ರಿಂದ ಗುಜರಾತ್ ಆಳುತ್ತಿರೋ ಬಿಜೆಪಿ ಈ ವರ್ಷದ ಅಂತ್ಯದೊಳಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಿಸುತ್ತಿದೆ.

    ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರೋ ಗುಜರಾತ್ ವಿಧಾನಸಭಾ ಚುನಾವಣೆ ಯಾವುದೇ ಕ್ಷಣದಲ್ಲಾದ್ದರೂ ಘೋಷಣೆ ಆಗೋ ಸಾಧ್ಯತೆ ಇದ್ದು, ಇದನ್ನ ಗೆಲ್ಲಲ್ಲು ಪ್ರಧಾನಿ ನರೇಂದ್ರ ಮೋದಿ ಶತಾಯ ಗತಾಯ ಪಣತೊಟ್ಟಿದ್ದಾರೆ.

    ಹೀಗಾಗಿ ಗುಜರಾತ್ ಪ್ರವಾಸದಲ್ಲಿರುವ ಮೋದಿ ಇಂದು ಗಾಂಧಿನಗರದಲ್ಲಿ ಬೃಹತ್ ರ‍್ಯಾಲಿ ನಡೆಸುತ್ತಿದ್ದಾರೆ. ಸುಮಾರು 7 ಲಕ್ಷ ಬಿಜೆಪಿ ಕಾರ್ಯಕರ್ತರು ರ‍್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಮೋದಿ ಭರವಸೆಗಳ ಮಹಾಪೂರವನ್ನೇ ಹರಿಸುವ ಸಾಧ್ಯತೆ ಇದೆ.

    ರಾಜ್ಯದಲ್ಲಿ `ಗುಜರಾತ್ ಗೌರವ ಯಾತ್ರಾ’ ಎಂಬ ಅಭಿಯಾನವನ್ನು 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿತ್ತು. ಇಂದು ನಡೆಯುವ `ಗುಜರಾತ್ ಗೌರವ ಮಹಾಸಮ್ಮೇಳನ್’ ಸಮಾರೋಪ ಸಮಾರಂಭವಾಗಿದೆ.