Tag: ಬಿಜೆಪಿ ಪಕ್ಷ

  • ಜಮೀರ್ ಮನೆ ಮೇಲೆ ಇಡಿ ದಾಳಿ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ: ಧ್ರುವನಾರಾಯಣ

    ಜಮೀರ್ ಮನೆ ಮೇಲೆ ಇಡಿ ದಾಳಿ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ: ಧ್ರುವನಾರಾಯಣ

    ಚಾಮರಾಜನಗರ: ಜಮೀರ್ ಮನೆ ಮೇಲೆ ನಡೆದಿರುವ ಇಡಿ ದಾಳಿಯನ್ನು ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ ದಾಳಿಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಟೀಕಿಸಿದ್ದಾರೆ.

    ಚಾಮರಾಜನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಮೀರ್ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿರೋಧ ಪಕ್ಷದ ನಾಯಕರು, ಮುಖಂಡರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಇಡಿ, ಐಟಿ ದಾಳಿ ಮಾಡಬೇಡಿ ಅಂತಾ ಹೇಳಲ್ಲ. ಆದರೆ ವಿರೋಧ ಪಕ್ಷದ ಮುಖಂಡರನ್ನು ಗುರಿಯಾಗಿಸಿ ದಾಳಿ ನಡೀತಿದೆ. ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಟಾಲಿನ್ ಸೇರಿದಂತೆ ಹಲವು ಮುಖಂಡರ ಮೇಲೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೇಲೂ ದಾಳಿ ನಡೆದಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೇಲೂ ಕೂಡ ಇಡಿ, ಸಿಬಿಐ, ಐಟಿ ಸೇರಿದಂತೆ ದಾಳಿ ನಡೆದಿದೆ. ಆದರೆ ಬಿಜೆಪಿ ನಾಯಕರ ಮನೆ ಮೇಲೆ ಯಾವುದೇ ದಾಳಿ ನಡೆದಿಲ್ಲ. ಇದು ನೂರಕ್ಕೆ ನೂರರಷ್ಟು ಇದು ರಾಜಕೀಯ ಪ್ರೇರಿತ ದಾಳಿ. ಯತ್ನಾಳ್, ವಿಶ್ವನಾಥ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರನ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಓರಿಸಿಯಸ್ ಬ್ಯಾಂಕ್ ನಲ್ಲಿ ಹಣವಿಟ್ಟಿದ್ದಾರೆ ಅಂತಾ ಆರೋಪ ಮಾಡಿದ್ದರು. ಆ ವೇಳೆ ಯಾಕೆ ಅವರ ಮೇಲೆ ಐಟಿ, ಇಡಿ ದಾಳಿ ಮಾಡಿಲ್ಲ ಅಂತಾ ಕಿಡಿಕಾರಿದ್ದಾರೆ. ಇದನ್ನೂ ಓದಿ:ಬಂಧನದ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್, ರೋಷನ್ ಬೇಗ್!

  • ಸಿದ್ದರಾಮಯ್ಯನವರ ಹೊಗಳಿಕೆ ನಮ್ಮ ಪಕ್ಷಕ್ಕೆ ಅಗತ್ಯ ಇಲ್ಲ: ಬಿ.ಸಿ.ಪಾಟೀಲ್

    ಸಿದ್ದರಾಮಯ್ಯನವರ ಹೊಗಳಿಕೆ ನಮ್ಮ ಪಕ್ಷಕ್ಕೆ ಅಗತ್ಯ ಇಲ್ಲ: ಬಿ.ಸಿ.ಪಾಟೀಲ್

    ಹಾವೇರಿ: ಬಿಜೆಪಿ ಮತ್ತು ಕಾಂಗ್ರೆಸ್ ಸಂಸ್ಕೃತಿ ಬೇರೆ. ಬಿಜೆಪಿ ಸಂಸ್ಕೃತಿಯನ್ನು ಸಿದ್ದರಾಮಯ್ಯ ಹೊಗಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಸಂಸ್ಕೃತಿ ಹೊಗಳುತ್ತಾರೆ. ಅವರ ಹೊಗಳಿಕೆ ನಮ್ಮ ಪಕ್ಷಕ್ಕೆ ಅಗತ್ಯವಿಲ್ಲ ಎಂದು ಮಾಜಿ ಸಚಿವ, ಹಿರೇಕೆರೂರು ಶಾಸಕ .ಪಾಟೀಲ್ ಹೇಳಿದ್ದಾರೆ.

    ಹಾವೇರಿ ಜಿಲ್ಲೆ ಹಿರೇಕೆರೂರು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸ್ಕೃತಿಯನ್ನು ಸಿದ್ದರಾಮಯ್ಯ ಹೊಗಳಲು ಸಾಧ್ಯವಿಲ್ಲ. ಅವರ ಹೊಗಳಿಕೆ ನಮ್ಮ ಪಕ್ಷಕ್ಕೆ ಅಗತ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ನಮ್ಮ ಪಾತ್ರ ಬಹಳವಿದೆ. ಕಾಂಗ್ರೆಸ್, ಜೆಡಿಎಸ್ ನಿಂದ ಗೆದ್ದ ಶಾಸಕರು ನಮ್ಮ ನಮ್ಮ ಕ್ಷೇತ್ರಕ್ಕೆ ಅನ್ಯಾಯ ಆಗಬಾರದು ಅಂತ ಸಿಡಿದೆದ್ದು ಬಂದು ಬಿಜೆಪಿ ಆಡಳಿತಕ್ಕೆ ತಂದಿದ್ದೇವೆ. ಆ ನಿಟ್ಟಿನಲ್ಲಿ ಬಿಜೆಪಿ ಮಾತು ಕೊಟ್ಟಂತೆ ನಡೆದುಕೊಂಡಿದೆ. ಈಗಲೂ ಕೂಡ ಅದರಂತೆ ಅವರು ಸ್ಟಿಕ್ ಆನ್ ಆಗುತ್ತಾರೆ ಎನ್ನುವ ಭಾವನೆ ಇದೆ. ಮಂತ್ರಿಮಂಡಲ ವಿಸ್ತರಣೆ ಮುಳ್ಳಿನ ಕಗ್ಗಂಟು. ಎಲ್ಲ ಜನಾಂಗ, ಪ್ರದೇಶ ಎಲ್ಲರನ್ನ ತೃಪ್ತಿಪಡಿಸಬೇಕು. ಇದರ ಜೊತೆಗೆ ಪಕ್ಷ ಸಂಘಟನೆಯಲ್ಲಿ ಯಾರು ಭಾಗಿಯಾಗ್ತಾರೆ, ಆಡಳಿತದಲ್ಲಿ ಯಾರು ತೊಡಗಿಸಿಕೊಳ್ಳುತ್ತಾರೆ ಎಲ್ಲವನ್ನು ನೋಡಿಕೊಂಡು ವಿಸ್ತರಣೆ ಮಾಡುತ್ತಾರೆ ಎಂದು ಹೇಳಿದ್ದಾರೆ.

    ಇದೇ ವೇಳೆ ಮುಂದಿನ 2023ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವ ಸಂಕಲ್ಪವನ್ನು ರಾಜ್ಯ ಸರ್ಕಾರ, ರಾಜ್ಯ ಬಿಜೆಪಿ ಪಕ್ಷ, ಕೇಂದ್ರ ವರಿಷ್ಠರು, ಕೇಂದ್ರ ಬಿಜೆಪಿ ಪಕ್ಷ ಈಗಾಗಲೇ ತೀರ್ಮಾನ ಮಾಡಿದೆ. ಆ ನಿಟ್ಟಿನಲ್ಲಿ ಹೊಸ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿಯವರ ಜೊತೆಗೆ ಸೋಮವಾರ ಪಕ್ಷದ ವರಿಷ್ಠರು ಸಭೆ ಮಾಡಿದ್ದಾರೆ. ಇವತ್ತು ಸಂಜೆಯೊಳಗೆ ಪಟ್ಟಿ ಸಿದ್ದವಾಗುತ್ತದೆ ಅಂತ ಸಿಎಂ ಹೇಳಿದ್ದಾರೆ. ಜಾತಿವಾರು, ಪ್ರಾಂತ್ಯವಾರು ಎಲ್ಲರಿಗೂ ಸರಿಯಾದ, ಸಮಾನವಾದ ಅವಕಾಶ ಬಿಜೆಪಿ ಪಕ್ಷ ಮಾಡಿಕೊಡುತ್ತದೆ ಎಂದು ನುಡಿದಿದ್ದಾರೆ.

    ಮುಂದಿನ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಸಚಿವ ಸಂಪುಟ ರಚನೆ ಮಾಡುತ್ತಾರೆ. ಒಂದು ಚುನಾವಣೆ ಗೆದ್ದ ಮೇಲೆ ಮುಂದಿನ ಚುನಾವಣೆಗೆ ನಾವು ಲೆಕ್ಕ ಹಾಕುತ್ತಿರುತ್ತೇವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಎಂದಿದ್ದಾರೆ. ಇದನ್ನೂ ಓದಿ:ನೂತನ ಸಂಪುಟದಲ್ಲೂ ಸಚಿವ ಸ್ಥಾನಕ್ಕೆ ನಾರಾಯಣಗೌಡ ಕಸರತ್ತು

  • ಈಶ್ವರಪ್ಪ, ಯಡಿಯೂರಪ್ಪ ಲವ ಕುಶ ಇದ್ದಂತೆ: ರೇಣುಕಾಚಾರ್ಯ

    ಈಶ್ವರಪ್ಪ, ಯಡಿಯೂರಪ್ಪ ಲವ ಕುಶ ಇದ್ದಂತೆ: ರೇಣುಕಾಚಾರ್ಯ

    ದಾವಣಗೆರೆ: ಈಶ್ವರಪ್ಪ, ಯಡಿಯೂರಪ್ಪ ಲವ ಕುಶ ಇದ್ದಂತೆ. ಈಶ್ವರಪ್ಪ ನವರು ಯಡಿಯೂರಪ್ಪ ನವರ ವಿರುದ್ಧ ಟೀಕೆ ಮಾಡಿಲ್ಲ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

    ಪಕ್ಷದಲ್ಲಿ ಏನೇ ಇದ್ದರು ಅದನ್ನು ಬಹಿರಂಗವಾಗಿ ಹೇಳಿಕೆ ನೀಡಬೇಡಿ. ಯಾವುದೇ ಸಮಸ್ಯೆ ಇದ್ದರೂ ಪಕ್ಷದಲ್ಲಿ ಕುಳಿತು ಚರ್ಚೆ ಮಾಡೋಣಾ. ಬಹಿರಂಗ ಹೇಳಿಕೆ ಕೊಟ್ಟರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತೆ ಎಂದು ಹೇಳುವ ಮೂಲಕ ಪಕ್ಷದಲ್ಲಿ ಭಿನ್ನಮತ ಇದೆ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.

    ಇಂದು ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಬಿಜೆಪಿ ಬಿಟ್ಟು ಹೋಗಿ, ವಾಪಸ್ಸು ಬಂದಿದ್ದು ಆಯ್ತು. ಪಕ್ಷ ಸಂಘಟನೆಯಲ್ಲಿದೆ, ಯಡಿಯೂರಪ್ಪನವರೇ ನಮ್ಮ ನಾಯಕರು. ನಾವೆಲ್ಲ ಯಡಿಯೂರಪ್ಪ ನವರ ಜೊತೆ ಇರುತ್ತೇವೆ. ಈ ಅರ್ಥದಲ್ಲಿ ಮಾತ್ರ ರಾಮದಾಸ್ ಹೇಳಿರೋದು, ಬೇರೆನು ಅಲ್ಲ ಎಂದು ಸ್ಪಷ್ಟಪಡಿಸಿದರು.

    ಸಿಎಂ ಯಡಿಯೂರಪ್ಪ ಒಬ್ಬ ಮಾಸ್ ಲೀಡರ್, ಯಡಿಯೂರಪ್ಪನವರು ಹೋರಾಟದ ಮುಖಾಂತರ ಪಕ್ಷ ಕಟ್ಟಿದ್ದಾರೆ. ಪ್ರಶ್ನಾತೀತ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅವರ ಮೇಲೆ ಕಾಂಗ್ರೆಸ್‍ನವರು ಸುಖಾ ಸುಮ್ಮನೆ ಅಪಪ್ರಚಾರ ಮಾಡುತ್ತಾ ಇದ್ದಾರೆ ಎಂದು ಕಾಂಗ್ರೆಸ್ ನಾಯಕರ ಮೇಲೆ ಕಿಡಿಕಾರಿದರು.

    ಬಿಎಸ್‍ವೈ ತಂತಿ ಮೇಲೆ ನಡಿಗೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಎಲ್ಲಾ ಸಮಾಜಕ್ಕೆ ಸಮಾನ ರೀತಿ ಅನುದಾನ ಬಿಡುಗಡೆ ಮಾಡಲು ಈ ರೀತಿ ಹೇಳಿದ್ದಾರೆ. ವೀರಶೈವ ಮಠಗಳಿಗೆ ಅನುದಾನ ನೀಡಿ ಎಂದು ಹೇಳಿದಾಗ ಈ ರೀತಿ ಹೇಳಿಕೆ ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ಇರಿಸು ಮುರಿಸಿಲ್ಲ. ರಾಜ್ಯದಲ್ಲಿ ನೆರೆಹಾವಳಿಯಾಗಿದ್ದು ಜನ ತತ್ತರಿಸಿ ಹೋಗಿದ್ದಾರೆ. ಕೇಂದ್ರದ ನಾಯಕರ ಮೇಲೆ ವಿಶ್ವಾಸವಿದೆ. ಅನುದಾನ ಬೇಗ ಬಿಡುಗಡೆ ಮಾಡುತ್ತಾರೆ. 2 ಸಾವಿರ ದಿಂದ 3 ಸಾವಿರ ಕೋಟಿ ಹಣ ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನು ಓದಿ: ಸಂಘಟನೆ ಬಿಟ್ಟು ಹೋದವ್ರು ಯಾರೂ ಯಶಸ್ವಿಯಾಗಿಲ್ಲ- ಕೆ.ಎಸ್ ಈಶ್ವರಪ್ಪ

    ಹೊಸಪೇಟೆಯಲ್ಲಿ ಹೊಸ ಜಿಲ್ಲೆಗೆ ಪಕ್ಷದ ಶಾಸಕರಿಂದಲೇ ವಿರೋಧ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಯಡಿಯೂರಪ್ಪನವರು ಸಚಿವ ಶ್ರೀರಾಮುಲು ಜೊತೆ ಮಾತನಾಡಿದ್ದಾರೆ. ಎಲ್ಲಾ ಶಾಸಕರು ಮತ್ತು ಸಂಸದರನ್ನು ಕರೆದು ಸಭೆ ನಡೆಸಲಾಗುತ್ತದೆ. ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಜಿಲ್ಲೆಗಳಾದರೆ ಒಳ್ಳೆಯದು. ಆಡಳಿತ ದೃಷ್ಟಿಯಿಂದ ಅಲ್ಲಿ ಹೆಚ್ಚು ಅನುದಾನ ನೀಡಿ ಅಭಿವೃದ್ಧಿ ಮಾಡಬಹುದು. ಅದಕ್ಕಾಗಿ ಹೊಸಪೇಟೆ ಹೊಸ ಜಿಲ್ಲೆಯಾಗಿ ಘೋಷಣೆ ಮಾಡಲು ಹೊರಟಿದ್ದಾರೆ. ಇಲ್ಲಿ ಮುಖ್ಯಮಂತ್ರಿಗಳ ಸ್ವಾರ್ಥ ಇಲ್ಲ. ಶಾಸಕ ಕರುಣಾಕರ ರೆಡ್ಡಿಯವರಿಗೆ ಸಹ ನಮ್ಮವರು. ಅವರಿಗೆ ಮನವರಿಕೆ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

  • ಯಾವ ಕಾರಣಕ್ಕೆ ನನ್ನ ಡಿಸಿಎಂ ಮಾಡಿದ್ದಾರೆಂದು ಗೊತ್ತಿಲ್ಲ: ಲಕ್ಷ್ಮಣ ಸವದಿ

    ಯಾವ ಕಾರಣಕ್ಕೆ ನನ್ನ ಡಿಸಿಎಂ ಮಾಡಿದ್ದಾರೆಂದು ಗೊತ್ತಿಲ್ಲ: ಲಕ್ಷ್ಮಣ ಸವದಿ

    – ದಂಡಕ್ಕೂ ರಸ್ತೆಯ ದುಸ್ಥಿತಿಗೂ ಸಂಬಂಧವಿಲ್ಲ

    ಮೈಸೂರು: ಪಕ್ಷದ ವರಿಷ್ಠರು ಹಲವು ದೂರದೃಷ್ಟಿಯಿಂದ ಅಧಿಕಾರ ನೀಡಿದ್ದಾರೆ. ಅದು ಯಾವ ಕಾರಣಕ್ಕೆ ಅನ್ನೋದು ನನಗೂ ಗೊತ್ತಿಲ್ಲ. ಇದು ಬಯಸದೇ ಬಂದ ಭಾಗ್ಯ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯಲ್ಲಿ ನನಗೆ ಪಶ್ಚಿಮ ಮಹಾರಾಷ್ಟ್ರದ ಜವಾಬ್ದಾರಿ ನೀಡಲಾಗಿದೆ. ಅಲ್ಲಿನ 6 ರಿಂದ 7 ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಪ್ರತಿಪಕ್ಷಗಳು ಸವದಿಯ ಬಗ್ಗೆ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಅದಕ್ಕಾಗಿ ಅವರು ಮಾತನಾಡುತ್ತಿದ್ದಾರೆ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.

    ದಂಡಕ್ಕೂ ರಸ್ತೆಯ ದುಸ್ಥಿತಿಗೂ ಸಂಬಂಧವಿಲ್ಲ. ದಂಡ ಹಾಕುವುದು ರಸ್ತೆ ಸರಿಯಿಲ್ಲ ಎಂದು ಅಲ್ಲ. ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಹಾಕುವುದು. ದಂಡಕ್ಕೂ ರಸ್ತೆಯ ದುಸ್ಥಿತಿಗೂ ಸಂಬಂಧ ಕಲ್ಪಿಸಬೇಡಿ. ಯಾರು ತಪ್ಪು ಮಾಡುತ್ತಾರೆ ಅವರಿಗೆ ದಂಡ ಹಾಕುತ್ತಾರೆ. ಅದರಲ್ಲಿ ಹೆಚ್ಚು ಕಮ್ಮಿ ಏನು ಇಲ್ಲ. ಸಂಚಾರ ನಿಯಮ ಪಾಲಿಸಿದರೆ ದಂಡ ಕಟ್ಟುವ ಪ್ರಶ್ನೆಯೇ ಇರುವುದಿಲ್ಲ ಎಂದು ಸವದಿ ಹೇಳಿದರು.

    ರಾಜ್ಯದಲ್ಲಿ ಎಲೆಕ್ಟ್ರಿಕಲ್ ಬಸ್ ಸಂಚಾರ ಜಾರಿಗೆ ಚಿಂತನೆ ಮಾಡಲಾಗಿದೆ. ಹೊರದೇಶಗಳಿಂದ ಪ್ರಪೋಸಲ್ ಬಂದಿದೆ. ಶೂನ್ಯ ಬಂಡವಾಳ ಹೂಡಿಕೆ ಮಾಡಿ 40% ಮತ್ತು 60% ರಂತೆ ಆದಾಯದಲ್ಲಿ ನಮಗೆ ಕೊಡುತ್ತಾರೆ. ಬಸ್‍ಗಳನ್ನು ಅವರೇ ಸಂಪೂರ್ಣವಾಗಿ ನಿರ್ವಹಣೆ ಮಾಡುತ್ತಾರೆ. ಈ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ತೈಲ ಬೆಲೆ ಹೆಚ್ಚಳವಾದ ಹಿನ್ನೆಲೆ ಬಸ್ ದರ ಏರಿಸುವ ಪ್ರಸ್ತಾವಣೆ ನನ್ನ ಮುಂದಿದೆ. ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳದ ಉದ್ದೇಶ ಇಲ್ಲ ಎಂದು ತಿಳಿಸಿದರು.