Tag: ಬಿಜೆಪಿ ಮಹಿಳಾ ಮೋರ್ಚಾ

  • ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ

    ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ

    ನವದೆಹಲಿ: ಕೇಂದ್ರ ಸರ್ಕಾರದ ಮಹಿಳಾ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಬಿಜೆಪಿ ರಾಷ್ಟ್ರೀಯ ಮಹಿಳಾ ಘಟಕದಿಂದ (BJP Mahila Morcha) ‘ಕಮಲ್ ಮಿತ್ರ’ (Kamal Mitra) ಹೆಸರಿನಲ್ಲಿ ಹೊಸ ಅಭಿಯಾನ ಆರಂಭಿಸಿದ್ದು, ಎಪ್ರಿಲ್‌ನಿಂದ ಇದು ಕಾರ್ಯಾರಂಭವಾಗಲಿದೆ. ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಶನಿವಾರ ಕಾರ್ಯಾಗಾರವನ್ನು ಉದ್ಘಾಟಿಸಿದರು.

    ಮಹಿಳಾ ಕೇಂದ್ರಿತ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೆಲಸ‌ ಮಾಡಲಿದ್ದು, ವಕೀಲರು, ವಿದ್ವಾಂಸರು, ಪ್ರಾಧ್ಯಾಪಕರು ಸೇರಿದಂತೆ ವಿವಿಧ ವಲಯಗಳ ವೃತ್ತಿಪರರು ಇಂದು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಮೋದಿ ಭದ್ರತೆಗೆ 2,000 ಪೊಲೀಸರ ನಿಯೋಜನೆ – ಐವರು ಎಸ್‌ಪಿಗಳು ಸ್ಥಳದಲ್ಲೇ ಮೊಕ್ಕಾಂ

    ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ಮಹಿಳೆಯರಿಗೆ ಮೋದಿ ಸರ್ಕಾರ ಮಹಿಳೆಯರಿಗಾಗಿ ಜಾರಿ ಮಾಡಿರುವ ಯೋಜನೆಗಳು, ಅದರ ಲಾಭಗಳನ್ನು ವಿವರಿಸಿ, ತಳಮಟ್ಟದ ಮಹಿಳೆಯರಿಗೆ ಜಾಗೃತಿ ಮೂಡಿಸುವ ಬಗ್ಗೆ ತಿಳಿಸಲಾಯಿತು.

    ಯೋಜನೆಯ ಲಾಭ ಪಡೆಯದ ಮಹಿಳೆಯರಿಗೆ ಅರ್ಜಿ ಸಲ್ಲಿಸಿ ಯೋಜನೆ ಲಾಭ ಪಡೆಯುವ ಬಗ್ಗೆ ತರಬೇತಿ ನೀಡಲು ಸಮಾಲೋಚನೆ ನಡೆಸಲಾಯಿತು. ಎಪ್ರಿಲ್‌‌ನಿಂದ ಬಿಜೆಪಿ ರಾಷ್ಟ್ರೀಯ ಮಹಿಳಾ ಘಟಕ, ರಾಜ್ಯ ಘಟಕಗಳ ಮೂಲಕ ಎಲ್ಲ ರಾಜ್ಯಗಳಲ್ಲೂ ಜಾಗೃತಿ ಆರಂಭಿಸಲಿದೆ. 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಈ ಅಭಿಯಾನ ಆರಂಭಿಸಲಾಗಿದೆ. ಇದನ್ನೂ ಓದಿ: ಧಾರವಾಡ ಜಿಲ್ಲಾಡಳಿತದಿಂದ ಪ್ರಧಾನಿ ಮೋದಿಗೆ ತೊಟ್ಟಿಲು ಗಿಫ್ಟ್

  • ಮೋದಿ ಬಗ್ಗೆ ಮಾತನಾಡುವ ಮೊದಲು, ನೀನು ಗಂಡಸು ಅನ್ನೋದನ್ನು ಪರೀಕ್ಷಿಸಿಕೋ: ನಾರಾಯಣರಾವ್‍ಗೆ ಜಿಲ್ಲಾಧ್ಯಕ್ಷೆ ಸವಾಲ್

    ಮೋದಿ ಬಗ್ಗೆ ಮಾತನಾಡುವ ಮೊದಲು, ನೀನು ಗಂಡಸು ಅನ್ನೋದನ್ನು ಪರೀಕ್ಷಿಸಿಕೋ: ನಾರಾಯಣರಾವ್‍ಗೆ ಜಿಲ್ಲಾಧ್ಯಕ್ಷೆ ಸವಾಲ್

    ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವ ಮೊದಲು ನೀನು ಗಂಡಸೇ ಎನ್ನುವುದನ್ನ ಪರೀಕ್ಷಿಸಿಕೋ ಎಂದು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ದಿವ್ಯಾ ಹಾಗಾರಗಿ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‍ಗೆ ಸವಾಲ್ ಹಾಕಿದ್ದಾರೆ.

    ಮೋದಿ ವಿರುದ್ಧ ಬಿ ನಾರಾಯಣರಾವ್ ವಿವಾದತ್ಮಕ ಹೇಳಿಕೆ ಖಂಡಿಸಿ, ಕಲಬುರಗಿ ನಗರದ ಸರ್ಧಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ದಿವ್ಯಾ ಹಾಗಾರಗಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ನಾರಾಯಣರಾವ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ದಿವ್ಯಾ ಅವರು, ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಎಂಥಹ ಸಂಸ್ಕೃತಿಯಿಂದ ಮಾತಾನಾಡಬೇಕು ಅಂತ ಕನಿಷ್ಟ ಜ್ಞಾನವಿಲ್ಲದ, ನಿನ್ನಂಥವನಿಗೆ ಆಯ್ಕೆ ಮಾಡಿದ್ದು ಶರಣರ ನಾಡಿನ ಜನರ ದುರ್ದೈವ. ಮೋದಿಯವರ ಬಗ್ಗೆ ಕೀಳಾಗಿ ಮಾತಾನಾಡುವ ಬದಲು, ನೀನು ಗಂಡಸೇ ಎನ್ನುವುದನ್ನ ಮೊದಲು ಪರೀಕ್ಷಿಸಿಕೋ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಬಸವಕಲ್ಯಾಣದ ಜನರಿಗೆ ಸ್ವಾಭಿಮಾನವಿದ್ದಲ್ಲಿ ಮೊದಲು ನಾರಾಯಣರಾವ್‍ನನ್ನ ಕ್ಷೇತ್ರದಿಂದ ಹೊರಹಾಕಿ ಅಂತ ಕರೆ ನೀಡಿದ್ದಾರೆ.

    ನಾರಾಯಣರಾವ್ ಹೇಳಿದ್ದು ಏನು?
    ಜಿಲ್ಲೆಯಲ್ಲಿ ನಡೆದ ಕೈ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ನಾರಾಯಣ ರಾವ್, ಮಲ್ಲಿಕಾರ್ಜುನ ಖರ್ಗೆ ಅವರ ಹಿಂದೆ ಇಡೀ ದೇಶವಿದೆ. ಆದರೆ ಅದು ಮೋದಿಗೆ ಅರ್ಥವಾಗುತ್ತಿಲ್ಲ. ನಾಮರ್ಧ್ ಕೇ ಸಾಥ್ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತಿ ಹೈ (ಷಂಡರ ಜೊತೆ ಮದ್ವೆಯಾಗುತ್ತದೆ. ಆದರೆ ಮಕ್ಕಳಾಗಲ್ಲ). ಮೋದಿ ಸೇ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತೆ ಹೈ(ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಮೋದಿಗೆ ಮಕ್ಕಳಾಗಲ್ಲ) ಎಂದು ಹೇಳಿ ಪ್ರಧಾನಿ ಅವರನ್ನು ಷಂಡರಿಗೆ ಹೋಲಿಸಿ ವ್ಯಂಗ್ಯವಾಡಿದ್ದರು.

    ಮಲ್ಲಿಕಾರ್ಜುನ ಖರ್ಗೆಯನ್ನು ಎದುರಿಸೋ ಶಕ್ತಿ ಮೋದಿಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದೊಂದು ದಿನ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುತ್ತ ಹಿಂದಿಯ ಶಾಯರಿಯೊಂದನ್ನು ಬಳಸಿ ಮೋದಿ ಅವರಿಗೆ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನಾರಾಯಣ್‍ರಾವ್ ನೀಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

  • ಪಕ್ಷದಲ್ಲಿನ ಆಂತರಿಕ ವಿಚಾರ ಬಹಿರಂಗಪಡಿಸಿದ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆ

    ಪಕ್ಷದಲ್ಲಿನ ಆಂತರಿಕ ವಿಚಾರ ಬಹಿರಂಗಪಡಿಸಿದ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆ

    ಶ್ರೀನಗರ: ಬಿಜೆಪಿಯಲ್ಲಿ ಹಿರಿಯ ನಾಯಕರಿಂದ ಮಹಿಳಾ ಕಾರ್ಯಕರ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಜಮ್ಮು ಮಹಿಳಾ ಮೋರ್ಚಾ ಸದಸ್ಯೆ ಪ್ರಿಯಾ ಜರಲ ಗಂಭೀರ ಆರೋಪ ಮಾಡಿದ್ದಾರೆ. ಹಿರಿಯರ ಸಮ್ಮುಖದಲ್ಲಿಯೇ ಪ್ರಿಯಾ ಜರಲ್ ಆರೋಪಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಟೀಕಿಸುತ್ತೇವೆ. ಮಷೀನ್ ನಲ್ಲಿ ಈ ಕಡೆಯಿಂದ ಆಲೂಗಡ್ಡೆ ಹಾಕಿದ್ರೆ ಮತ್ತೊಂದು ಕಡೆ ಬಂಗಾರ ತೆಗೆಯಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ಬಿಜೆಪಿ ನಾಯಕರು ವ್ಯಂಗ್ಯ ಮಾಡುತ್ತಾರೆ. ಆದ್ರೆ ನಮ್ಮ ಪಕ್ಷದಲ್ಲಿ ಹೋಟೆಲ್ ಒಳಗಡೆ ಹೋದ ಸಾಮಾನ್ಯ ಕಾರ್ಯಕರ್ತೆಯೊಬ್ಬಳು, ಹೊರಗಡೆ ಬರುವಾಗ ಬಿಜೆಪಿಯ ದೊಡ್ಡ ನಾಯಕಿಯಾಗಿ ಹೊರಹೊಮ್ಮುತ್ತಾಳೆ ಎಂದು ಹೇಳುವ ಮೂಲಕ ಪಕ್ಷದಲ್ಲಿಯ ಆಂತರಿಕ ವಿಚಾರವನ್ನು ಪ್ರಿಯಾ ಜರಲ್ ಬಹಿರಂಗಗೊಳಿಸಿದ್ದಾರೆ.

    ಬಿಜೆಪಿ ಸಭೆಯಲ್ಲಿ ಪ್ರಿಯಾ ಜರಲ್ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕೆಲ ಸದಸ್ಯೆಯರು ಪ್ರಿಯಾರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತ ಹಿರಿಯ ನಾಯಕರು ಈ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಿಯಾರನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ.

    ಸಭೆಯಿಂದ ಹೊರ ಬಂದ ಮೇಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾ ಜರಲ್, ನಾವು ರಾಹುಲ್ ಗಾಂಧಿಯವರ ಎಲ್ಲ ಹೇಳಿಕೆಗಳನ್ನು ಟೀಕಿಸುತ್ತೇವೆ. ಆದ್ರೆ ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಹೋಟೆಲ್ ಒಳ ಹೋಗಿದ್ದ ಸಾಮನ್ಯ ಕಾರ್ಯಕರ್ತೆ, ಹೊರ ಬಂದ ಮೇಲೆ ಆಕೆ ದೊಡ್ಡ ನಾಯಕಿಯಾಗಿ ಬರುತ್ತಾಳೆ. ಯಾರು ಈ ಕೆಲಸಕ್ಕೆ ಒಪ್ಪಿಕೊಳ್ಳುವುದಿಲ್ಲ. ಅವರನ್ನು ಎಲ್ಲ ಸ್ಥಾನದಿಂದ ಕೆಳಗೆ ಇಳಿಸಲಾಗುತ್ತದೆ. ಕೆಲ ಮಹಿಳೆಯರು ನನ್ನ ಹೇಳಿಕೆ ಸುಳ್ಳು ಎಂದು ವಾದಿಸಬಹುದು. ಅವರು ಎಂಥವರು ಎಂಬುವುದೇ ನಿಮಗೆ ಗೊತ್ತಾಗಲಿದೆ. ಪಕ್ಷದಲ್ಲಿ ಹಿರಿಯ ನಾಯಕರಿಂದ ತುಳಿತಕ್ಕೊಳಗಾದ ನಿಜವಾದ ಕಾರ್ಯಕರ್ತರು ನನ್ನನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ.

    ಪಕ್ಷದ ಹಿರಿಯ ನಾಯಕರ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದ ಪ್ರಿಯಾ ಜರಲ್ ಅವರನ್ನು ಮಹಿಳಾ ಮೋರ್ಚಾದ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾರ್ಯಾಗಾರಕ್ಕೆ ಬಂದವ್ರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಸೀರೆ ವಿತರಣೆ

    ಕಾರ್ಯಾಗಾರಕ್ಕೆ ಬಂದವ್ರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಸೀರೆ ವಿತರಣೆ

    ಹಾಸನ: ಜಿಲ್ಲೆಯಲ್ಲಿ ಚುನಾವಣೆಗೂ ಮುನ್ನವೇ ವಿವಿಧ ರಾಜಕೀಯ ಪಕ್ಷಗಳಿಂದ ಮತದಾರರ ಓಲೈಕೆ ರಾಜಕೀಯ ಜೋರಾಗಿಯೇ ನಡೆಯುತ್ತಿದೆ.

    ಸಕಲೇಶಪುರದ ಪಟ್ಟಣದ ಓಂ ಮಂದಿರದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ಮಹಿಳೆಯರಿಗೆ ಬಹಿರಂಗವಾಗಿಯೇ ಸೀರೆ ಹಂಚಿದ ಘಟನೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಮಹಿಳಾ ಕಾರ್ಯಕ್ರಮವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಭಾಗವಹಿಸಿದ್ದರು. ಆದರೆ ಕಾರ್ಯಕ್ರಮ ಮುಗಿದ ಬಳಿಕ ಭಾಗಿಯಾಗಿದ್ದ ಮಹಿಳೆಯರಿಗೆ ಅರಶಿನ ಕುಂಕುಮ ಜೊತೆಗೆ ಬಾಗಿನ ನೆಪದಲ್ಲಿ ಸಾರ್ವಜನಿಕವಾಗಿಯೇ ಸೀರೆ ವಿತರಣೆ ಮಾಡಲಾಯಿತು. ಮುಂದಿನ ಚುನಾವಣೆಯಲ್ಲಿ ಮತ ಉದ್ದೇಶದಿಂದಲೇ ಸೀರೆ ಹಂಚಲಾಗಿದೆ ಎಂಬ ಮಾತುಗಳು ಇದೀಗ ಕೇಳಿ ಬರುತ್ತಿವೆ.

    ಸಭೆಗೆ ಬಂದರೆ ಸೀರೆ ಕೊಡುವುದಾಗಿ ಮೊದಲೇ ಹೇಳಿದ್ದರು. ಅದಕ್ಕಾಗಿ ಬಂದೆವು ಅಂತ ಸೀರೆ ಪಡೆದ ಮಹಿಳೆಯೊಬ್ಬರು ಹೇಳಿದ್ದಾರೆ. ರಾಷ್ಟ್ರೀಯ ಪಕ್ಷವೊಂದರ ಮಹಿಳಾ ಮಣಿಗಳು ಸೀರೆ ಹಂಚಿದ ಕ್ರಮಕ್ಕೆ ಇದೀಗ ವ್ಯಾಪಕ ಟೀಕೆ ಕೇಳಿ ಬಂದಿದೆ.