ಹುಬ್ಬಳ್ಳಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಆಗಬೇಕು ಎಂದು ನಟ ನೆನಪಿರಲಿ ಪ್ರೇಮ್ ಹೇಳಿದ್ದಾರೆ.
ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಂಡಾಟಿಕೆಯಿಂದ ದೇಶದಲ್ಲಿ ಎಂಇಎಸ್ಗೆ ಒಳ್ಳೆಯ ಹೆಸರು ಬರಲ್ಲ. ರಾಜ್ಯದಲ್ಲಿ ಕನ್ನಡಿಗರು ಹಾಗೂ ಮರಾಠಿಗರು ಭಾಂದವ್ಯದಿಂದ ಇದ್ದಾರೆ. ಆ ಭಾಂದವ್ಯವನ್ನ ಹಾಳು ಮಾಡುವಂತಹ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ಯಾವುದೇ ಸಂಘಟನೆಗಳಿರಲಿ ಶಾಂತಿ ಕಾಪಾಡಬೇಕು ವ್ಯಕ್ತಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ
ರಾಜ್ಯದಲ್ಲಿ ಮರಾಠಿ ಚಿತ್ರಗಳಿಗೂ ಹಾಗೂ ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಎಂಇಎಸ್ನವರು ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಎಂಇಎಸ್ ಬ್ಯಾನ್ ವಿಚಾರದಲ್ಲಿ ಸರ್ಕಾರದ ನಿಲುವು ಏನಿದೆಯೋ ಗೊತ್ತಿಲ್ಲ. ಆದರೆ ಕನ್ನಡಿಗರ ಮೇಲಿನ ದಬ್ಬಾಳಿಕೆ ಸಹಿಸಲ್ಲ. ಕನ್ನಡ ಚಿತ್ರರಂಗ ಹೋರಾಟಕ್ಕಿಳಿದರೆ ನಮ್ಮವರಿಗೆ ತೊಂದರೆಯಾಗಲಿದೆ ಎನ್ನುವ ಹಿನ್ನೆಲೆ ಶಾಂತ ರೀತಿಯಲ್ಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್ಡಿಕೆ
ಲಕ್ನೋ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರಲು ಸಾಧ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಈ ಮಧ್ಯೆ ಅಸಾದುದ್ದೀನ್ ಓವೈಸಿ ಅವರು ಸಹ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಮುಸ್ಲಿಮರಿಗೆ ತಮ್ಮದೇ ಆದ ರಾಜಕೀಯ ಶಕ್ತಿಬೇಕಾಗಿದೆ. ನಾಯಕತ್ವವನ್ನು ಗೌರವಿಸಬೇಕು ಮತ್ತು ತಾರತಮ್ಯ ಮಾಡಬಾರದು ಎಂದು ಸ್ಪಷ್ಟವಾದ ಸಂದೇಶವನ್ನು ರವಾನಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರಲು ಸಾಧ್ಯವಿಲ್ಲ. ಬಿಜೆಪಿಯ ಕಾರಣದಿಂದಾಗಿ ಮುಸ್ಲಿಮರನ್ನು ಅನುಮಾನದಿಂದ ನೋಡಲಾಗುತ್ತದೆ. ಬಿಜೆಪಿಯು ಮುಸ್ಲಿಂ ಸಮುದಾಯದ ವ್ಯವಹಾರಗಳನ್ನು ನಾಶಪಡಿಸುತ್ತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಲ್ಲಿದೆ. ಜ್ಞಾನವಾಪಿ ಮಸೀದಿ ಮತ್ತು ಅಜ್ಮೀರ್ ದರ್ಗಾವನ್ನು ಸರ್ಕಾರ ಏಕೆ ಅಭಿವೃದ್ಧಿಪಡಿಸುತ್ತಿಲ್ಲ? ಎಂದು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ
ಈ ಮುನ್ನ ಉತ್ತರ ಪ್ರದೇಶದ ಮೀರತ್ನ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಮರು ಯಾವಾಗ ಎಚ್ಚುತ್ತುಕೊಳ್ಳುತ್ತೀರಾ ಎಂದು ನಾನು ನಿಮ್ಮೆಲ್ಲರನ್ನು ಕೇಳಲು ಬಯಸುತ್ತೇನೆ. ಉತ್ತರ ಪ್ರದೇಶದಲ್ಲಿರುವ ಶೇಕಡ 19ರಷ್ಟು ಮುಸ್ಲಿಮರಿಗೆ ಗೌರವ, ನಮ್ಮ ಯುವಕರಿಗೆ ಶಿಕ್ಷಣ, ಸಮಾನ ಭಾಗವಹಿಸುವಿಕೆ ಮತ್ತು ಅವಕಾಶಗಳನ್ನು ಪಡೆಯಲು ತಮ್ಮದೇ ಆದ ರಾಜಕೀಯ ಶಕ್ತಿ, ನಾಯಕತ್ವಬೇಕು ಎಂದು ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದರು.
ಬೆಂಗಳೂರು: ಬೆಳಗಾವಿ ಪುಂಡಾಟಿಕೆ ಅಕ್ಷಮ್ಯ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಸರ್ಕಾರದ ನಿಲುವು ಸರಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ತಡರಾತ್ರಿ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಪುಂಡಾಟಿಕೆ ಅಕ್ಷಮ್ಯ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಸರ್ಕಾರದ ನಿಲುವು ಸರಿಯಿಲ್ಲ. ಇದು ನೈತಿಕ ಪೊಲೀಸ್ ಗಿರಿಯನ್ನು ಪ್ರೋತ್ಸಾಹಿಸಿದ ಪರಿಣಾಮವಾಗಿದೆ. ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಆದಾಗ ಲಘುವಾಗಿ ತೆಗೆದುಕೊಂಡರು. ಕೇಸರಿ ಅದು ಇದು ಅಂತ ಹೇಳಿ ಸೌಹಾರ್ದತೆ ಕೆಡಿಸುವಾಗ ಸರ್ಕಾರ ಬೆಂಬಲಿಸಿತು. ಪುಣ್ಯ ಪುರುಷರ ಪ್ರತಿಮೆ ವಿರೂಪಗೊಳಿಸಿದವರನ್ನು ಬಿಡಬಾರದು ಎಂಇಎಸ್ ಪುಂಡಾಟಿಕೆಯನ್ನು ಉಗ್ರವಾಗಿ ಖಂಡಿಸ್ತೇನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ
ಸರ್ಕಾರ ಪೊಲೀಸ್ ದುರ್ಬಳಕೆ ಮಾಡಿತು. ಬಿಗಿ ನಿಲುವು ಇಲ್ಲ. ರಾಜ್ಯದಲ್ಲಿ ಹಾಗಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್ ಕೆಲಸದಲ್ಲಿ ಹಸ್ತಕ್ಷೇಪ ಮಾಡಿ ಗೌರವ ಮಣ್ಣುಪಾಲಾಗಿದೆ. ಸೌಹಾರ್ದ ವಾತಾವರಣ ನಿರ್ಮಾಣ ಆಗಬೇಕು. ಶಾಂತಿ ಕಾಪಾಡಬೇಕು ಕರ್ನಾಟಕದಲ್ಲಿ ಇರುವವರೆಲ್ಲಾ ಕನ್ನಡಿಗರೇ. ಎಲ್ಲರೂ ಅಣ್ಣ, ತಮ್ಮಂದಿರಂತೆ ಜೀವಿಸುತ್ತಾ ಇದ್ದೇವೆ ಎಂದು ಹೇಳಿದ್ದಾರೆ. . ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್ಡಿಕೆ
ಬೆಳಗಾವಿಯಲ್ಲಿನ ಪುಂಡಾಟವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತಪ್ಪು. ಮುಖ್ಯಮಂತ್ರಿಗಳಿಗೆ ಪದೇ ಪದೇ ನೈತಿಕ ಪೊಲೀಸ್ ಗಿರಿಗೆ ಬೆಂಬಲ ಕೊಡಬೇಡಿ ಅಂದಿದ್ದೇವು. ಆದರೆ ಸಿಎಂ ಅದನ್ನೇ ಪ್ರೋತ್ಸಾಹಿಸಿದ್ದರು. ಈಗ ಮುಖ್ಯಮಂತ್ರಿಗಳು ಮತ್ತು ನಾವೆಲ್ಲ ಈಗ ಪಶ್ಚಾತಾಪ ಪಡುವಂತಾಗಿದೆ. ದೇಶಕ್ಕೋಸ್ಕರ ಹೋರಾಟ ಮಾಡಿದವರ ಪ್ರತಿಮೆ, ಅದು ಯಾವುದೇ ಜಾತಿಯಾಗಲಿ, ಧರ್ಮದವರದ್ದಾಗಲಿ ಹೀಗೇ ಮಾಡುವುದು ತಪ್ಪು. ಬೆಳಗಾವಿಯಲ್ಲಿ ಅಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ಒತ್ತಡದ ಮೇಲೆ ಕೆಲಸ ಮಾಡುತ್ತಿದ್ದಾರೆ. ಆದರೆ ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬಾರದು. ಶಾಂತಿಯುತವಾಗಿ ಎಲ್ಲರೂ ವರ್ತಿಸಬೇಕು ಎಂದಿದ್ದಾರೆ.
ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ
ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು. 2/3
ಎಂಇಎಸ್ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಂಇಎಸ್ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ. 1/3
ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯಕ್ಕೆ ವಿರುದ್ಧ ರಾಜ್ಯ ಸರ್ಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್ ಉತ್ಪಾದನೆಗೆ 76,000 ಕೋಟಿ – ಕೇಂದ್ರ ಸಂಪುಟ ಅನುಮೋದನೆ
ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು. 2/3
ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಒಂದು ವೇಳೆ ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದು ನನ್ನ ಆಗ್ರಹ. 3/3
ಹುಬ್ಬಳ್ಳಿ: ಹರ್ಯಾಣ ರಾಜ್ಯದ ಗುರುಗ್ರಾಮ್ ನಗರದಲ್ಲಿ ಮುಸ್ಲಿಂ ಸಮುದಾಯದವರಿಗೆ ಧಾರ್ಮಿಕ ಆಚರಣೆ ಮಾಡಲು, ನಮಾಜ್ ಮಾಡಲು ಹಾಗೂ ಮಸೀದಿಗಳನ್ನು ಕಟ್ಟಲು ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಎಐಎಮ್ಐಎಮ್ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಹರ್ಯಾಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹರ್ಯಾಣ ರಾಜ್ಯ ಸರ್ಕಾರ 2018ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ನಮಾಜ್ ಮಾಡಲು ಅವಕಾಶ ನೀಡಿತ್ತು. ಸಾರ್ವಜನಿಕ ಸ್ಥಳಗಳು ಸಾರ್ವಜನಿಕ ಬಳಕೆಗೆ ಮುಕ್ತವಾಗಿರುತ್ತದೆ. ಆದರೆ ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವರ ಧಾರ್ಮಿಕ ಆಚರಣೆಗೆ ನಮಾಜ್ ಮಾಡಲು ಹರಿಯಾಣ ರಾಜ್ಯ ಬಿಜೆಪಿ ಸರ್ಕಾರ ಕಡಿವಾಣ ಹಾಕುತ್ತಿದೆ ಎಂದು ಕಿಡಿಕಾರಿದರು.
ಹರ್ಯಾಣ ರಾಜ್ಯದ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮುಸ್ಲಿಂ ಸಮುದಾಯದವರ ಧಾರ್ಮಿಕ ಆಚರಣೆಗೆ ಕಡಿವಾಣ ಹಾಕುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ
ಈ ಬಗ್ಗೆ ರಾಷ್ಟ್ರಪತಿಗಳು ಗಂಭೀರವಾಗಿ ಪರಿಗಣಿಸಿ ಮುಸ್ಲಿಂ ಸಮುದಾಯಕ್ಕೆ ಸಂವಿಧಾನ ಬದ್ಧ ಹಕ್ಕುಗಳನ್ನು ಕಲ್ಪಿಸಿಕೊಡಬೇಕೆಂದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಕೆಲವೊಮ್ಮೆ ಬಾಯಿ ತಪ್ಪಿ ಸತ್ಯ ಹೇಳುವ ಸಚಿವ ಈಶ್ವರಪ್ಪ ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ವಿಧಾನ ಪರಿಷತ್ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಷತ್ ನ 20 ಸ್ಥಾನಗಳಲ್ಲಿ ಕನಿಷ್ಠ 15 ಸ್ಥಾನದಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಗೆ ಜೆಡಿಎಸ್ ಬೆಂಬಲಿಸುತ್ತಾರೆ. ಕೆಲವು ಕ್ಷೇತ್ರದಲ್ಲಿ ಜೆಡಿಎಸ್ ಸ್ಥಳೀಯ ಮುಖಂಡರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಾರೆ ಎಂದರು. ಸಚಿವ ಈಶ್ವರಪ್ಪ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ. ಅವರು ಕೆಲವೊಮ್ಮೆ ಬಾಯಿ ತಪ್ಪಿ ಸತ್ಯ ಹೇಳುತ್ತಾರೆ. ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: 76ರ ಹರೆಯದಲ್ಲಿ ಪೈಲಟ್ ಆಗುವ ಕನಸು ನನಸು
ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಟೀಕೆ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ನಿರ್ವಹಣೆ ಮಾಡಲು ಆಗದೇ ಇದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ ಎನ್ನುವುದು ಮನವರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಟೀಕಿಸಿದರು.
ಅಧಿವೇಶನ ಆರಂಭವಾಗುತ್ತಿದೆ. ಅತಿವೃಷ್ಟಿ ಸಮಸ್ಯೆಯಾಗಿದೆ. ಮೂರು ನಾಲ್ಕು ಪಟ್ಟು ಮಳೆ ಹೆಚ್ಚಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಆಗಿದೆ. ಒಂದು ತಿಂಗಳಾಯ್ತು, ಇನ್ನು ಕೂಡಾ ಬೆಳೆ ಹಾನಿ ಬಗ್ಗೆ ಸರ್ವೇ ಆಗಿಲ್ಲ. 6 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ರೈತರ ವಿರೋಧಿ ಸರ್ಕಾರ ಇದಾಗಿದೆ. ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅದಕ್ಕೆ ಜನರು ಶಾಪ ಹಾಕುತ್ತಿದ್ದಾರೆ. ರಾಜಕೀಯದಲ್ಲಿ ಧುೃವೀಕರಣ ಶುರುವಾಗಿದೆ. ಜೆಡಿಎಸ್ ಮತ್ತು ಬಿಜೆಪಿಯಿಂದ ಅನೇಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಹೊರ ದೇಶದಿಂದ ಬಂದವರು ಮಿಸ್ಸಿಂಗ್ ಆಗಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಏರ್ ಪೋರ್ಟ್ ನಲ್ಲಿ ಭ್ರಷ್ಟಾಚಾರ ಇರಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಮಿಸ್ಸಿಂಗ್ ಆಗಿದ್ದಾರೆ. ಇದು ಲಂಚ ಹೊಡೆಯುವ ಸರ್ಕಾರ. ಇದರ ಮೇಲೆ ಯಾವುದೇ ನಿರೀಕ್ಷೆ ಇಲ್ಲ. ಶೇ.40 ಸರ್ಕಾರ ಆಗಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ
ಈಗಾಗಲೇ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿರುವೆ. ನ್ಯಾಯಾಂಗ ತನಿಖೆ ಆಗಬೇಕು. ರಾಜ್ಯಪಾಲ ಆಡಳಿತ ರಾಜ್ಯದಲ್ಲಿ ಜಾರಿಯಾಗಬೇಕು. ಕಾಂಗ್ರೆಸ್ ಸರ್ಕಾರ ಸೇರಿ ಎಲ್ಲ ತನಿಖೆ ಮಾಡಲಿ. ಇವರಿಗೆ ಧಮ್ ಇಲ್ಲ. ತನಿಖೆ ಆದರೆ ಅವರು ಬೆತ್ತಲೆ ಆಗುತ್ತಾರೆ. ನನ್ನನ್ನು ಟೀಕೆ ಮಾಡಿದ್ರೆ ಈಶ್ವರಪ್ಪ ಲೀಡರ್ ಆಗುತ್ತೇನೆ ಅಂದು ಕೊಂಡಿದ್ದಾನೆ. ಜನರ ಆಶೀರ್ವಾದ ಇದ್ದರೇ ಮಾತ್ರ ನಾಯಕ ಆಗಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಹಿನ್ನಲೆ ಈ ಬಾರಿಯ ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆ ನವೆಂಬರ್ 26 ರಂದು ಅದ್ದೂರಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಸಂವಿಧಾನ ದಿನ ಆಚರಣೆ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡಬೇಡಿ – ಮೋದಿಗೆ ಪತ್ರ ಬರೆದ ಭೈರಪ್ಪ
ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭೆ ಸ್ಪೀಕರ್ ಸಂವಿಧಾನದ ಮಹತ್ವದ ಬಗ್ಗೆ ಮಾತನಾಡಲಿದ್ದು ಇದೇ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನದ ಪೀಠಿಕೆ ಓದಲಿದ್ದಾರೆ. ಇನ್ನು ಸಂವಿಧಾನದ ಓದು ಕಾರ್ಯಕ್ರಮದಲ್ಲಿ ಜನರನ್ನು ಭಾಗಿ ಮಾಡಲು ನಿರ್ಧರಿಸಿದ್ದು ಇದಕ್ಕಾಗಿ ಎರಡು ಆ್ಯಪ್ಗಳನ್ನು ನಿರ್ಮಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನೇತೃತ್ವದಲ್ಲಿ ಇದರ ಪ್ರಚಾರ ನಡೆಯಲಿದ್ದು ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದಲಿದ್ದಾರೆ ಮತ್ತು ಇನ್ನು ಆ್ಯಪ್ಗಳಲ್ಲಿ 22 ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಇರಲಿದ್ದು, ಅದನ್ನು ಓದಿ ವೆಬ್ಸೈಟ್ಗೆ ಅಪ್ಲೋಡ್ ಮಾಡಿ ಸರ್ಟಿಫಿಕೇಟ್ ಪಡೆಯಬಹುದಾಗಿದೆ. ಇದನ್ನೂ ಓದಿ: ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್
We’re celebrating Constitution Day. This time, the main function in Central Hall will be organised by LS Speaker & Secretariat. Pres, VP & PM will participate. Ministry of Parliamentary Affairs has been designated as the lead Ministry in the celebrations: Union Min Pralhad Joshi pic.twitter.com/03of4kj6Hq
ಇನ್ನೂ ವೆಬ್ನಲ್ಲಿ ಸಂವಿಧಾನದ ಬಗ್ಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದ್ದು ಸಾವಿರಕ್ಕೂ ಅಧಿಕ ಪ್ರಶ್ನೆಗಳು ಇರಲಿದೆ. ಇದರಲ್ಲೂ ಜನರೂ ಭಾಗಿಯಾಗಿ ಉತ್ತರಿಸಬಹುದು. ಸಂವಿಧಾನದ ರಚನೆ ಮತ್ತು ಮೂಲಭೂತ ಹಕ್ಕುಗಳ ಬಗ್ಗೆ ಹೆಚ್ಚು ಪ್ರಶ್ನೆಗಳಿರಲಿದ್ದು ಸರಿಯಾದ ಉತ್ತರ ನೀಡದವರಿಗೆ ಸರ್ಟಿಫಿಕೇಟ್ ಕೂಡ ಸಿಗಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಡಿಕೇರಿ: ರಾಜ್ಯದಲ್ಲಿ ಪ್ರವಾಹ ಬಂದರು ಸಚಿವರು, ಶಾಸಕರು ಕ್ಷೇತ್ರಗಳಿಗೆ ಹೋಗುತ್ತಿಲ್ಲ ಎಂದು ಪ್ರತಿಪಕ್ಷ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಬಿಜೆಪಿ ಏನು ಮಳೆ ನಿಲ್ಲಿಸೋಕೆ ಆಗುತ್ತಾ..? ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಈಶ್ವರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ರಾಜ್ಯದಲ್ಲಿ ಮಳೆ ನಿಲ್ಲುಸುವುದಕ್ಕೆ ಬಿಜೆಪಿ ಬರುತ್ತಾ, ಇದಕ್ಕೆ ರಾಜಕೀಯ ತರುವುದಕ್ಕೆ ಬರುತ್ತಾ? ಇದರಲ್ಲಿ ರಾಜಕೀಯದ ಪ್ರಶ್ನೆಯೇ ಬರಲ್ಲ ಈಗಾಗಲೇ ನಮ್ಮ ಸಚಿವರು ಶಾಸಕರು ಮಳೆ ಹಾನಿ ಕ್ಷೇತ್ರಗಳಿಗೆ ಹೋಗುತ್ತಿದ್ದಾರೆ. ಅಲ್ಲದೇ ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಹಣ ಇದೆ. ಕಾಂಗ್ರೆಸ್ನವರು ಸುಮ್ಮನೆ ಟೀಕಿಸುತ್ತಾರೆ. ಇದನ್ನೂ ಓದಿ:ಐಎಎಫ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ಗೆ ವೀರ ಚಕ್ರ ಪ್ರಶಸ್ತಿ
ಕೊಡಗಿನಲ್ಲಿ 45 ವರ್ಷಗಳಿಂದ ಬಂದಿರದ ಮಳೆ ಈ ಭಾರೀ ಬಂದಿದೆ. ಸಿಎಂ ಅವರು ಇಂದು ಮಡಿಕೇರಿಗೆ ಬರಬೇಕಿತ್ತು. ಆದರೆ ಮಳೆ ಹಾನಿ ಸಮೀಕ್ಷೆ ನಡೆಸಲು ಹೋಗಿದ್ದಾರೆ. ಮಳೆಯಿಂದ ಈಗಾಗಲೇ ರಸ್ತೆಗಳು ಹಾಳಾಗಿವೆ ಎನ್ನುವುದು ಗೊತ್ತಿದೆ. ಸರ್ಕಾರ ಎಲ್ಲಾ ಕೆಲಸವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ
ತುಮಕೂರು: ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಬಿಜೆಪಿ ಸರ್ಕಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ. ಇವತ್ತು ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ರೈತರು ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. 700 ಜನ ರೈತರು ಪ್ರಾಣ ತ್ಯಾಗ ಮಾಡಿದ್ದಾರೆ. ಈಗ ಪ್ರಧಾನಿ ಮೋದಿ ಅವರಿಗೆ ಜ್ಞಾನೋದಯ ಆಗಿದೆ. ಅದಕ್ಕೆ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಹೇಳಿದ್ದಾರೆ. ಮುಂಚಿತವಾಗಿ ತಗೊಂಡ್ರೆ ರೈತರ ಪ್ರಾಣ ಉಳಿಯುತಿತ್ತು ಎಂದು ಆರೋಪಿಸಿದರು.
ಪ್ರಾಣ ಹೋಗಲು ನೇರವಾಗಿ ಮೋದಿ ಮತ್ತು ಅವರ ಸರ್ಕಾರವೇ ಕಾರಣ. ರೈತ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಆಕ್ರೋಶಕ್ಕೆ ಸರ್ಕಾರ ಮಣಿಯಬೇಕಾಗುತ್ತದೆ. ಜನ ಶಕ್ತಿ ಮುಂದೆ ರಾಜ ಶಕ್ತಿ ಏನೂ ಮಾಡಲು ಆಗಲ್ಲ. ಜನ ಶಕ್ತಿ ಅಂಕುಶದಲ್ಲಿ ರಾಜ ಶಕ್ತಿ ಇರಬೇಕು. ರೈತರಿಗೆ ದೊಡ್ಡ ನಮಸ್ಕಾರ, ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೋದಿ ಜೀ ನೀವು ರೈತರ ವಿರುದ್ಧ ಇರಲು ಸಾಧ್ಯವಿಲ್ಲ. ಇದನ್ನು ಅನ್ನದಾತರು ಸಹಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್
ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ, ಯಡಿಯೂರಪ್ಪ ಜೀ, ನಿಮಗೆ ನಾಚಿಕೆ ಆಗಲ್ವಾ. ಸಿಲಿಂಡರ್ ಬೆಲೆ ಜಾಸ್ತಿ ಆದಾಗ ಶೊಭಾ ಕರಂದ್ಲಾಜೆ ಅವರು ತಲೆ ಮೇಲೆ ಹೊತ್ತು ಹೋರಾಟ ಮಾಡಿದ್ರು. ಈಗ ಶೋಭಾ ಜೀ ಆಪ್ ಕಂಹಾ ಹೈ(ಎಲ್ಲಿದ್ದೀರಾ ನೀವು?) ಎಂದು ಹಾಸ್ಯ ಮಾಡಿದರು.
ಮೋದಿ ಅವರು ಒಳ್ಳೆ ದಿನ ಬರುತ್ತೆ ಅಂದರು. ಎಲ್ಲಿ ಮೋದಿ ಜೀ ಒಳ್ಳೆ ದಿನ. ಬಿಜೆಪಿ ಜನ ಸ್ವರಾಜ್ ಎಂದು ಶಂಖ, ಕೊಂಬು ಊದಿಕೊಂಡು ಹೊರಟಿದ್ದಾರೆ. ಶಂಖಕ್ಕೆ ಕೊಂಬುಗೆ ಮರ್ಯಾದೆ ಇದೆ. ಅದರ ಮರ್ಯಾದೆ ತೆಗೆಯಲು ಇವರು ಹೊರಟಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಏನೂ ಇಲ್ಲ, ಲಜ್ಜೆಗೆಟ್ಟವರು. ಗ್ರಾಮ ಸ್ವರಾಜ್ ಯಾತ್ರೆ ಮಾಡಲು ಹೊರಟಿದ್ದಾರೆ. ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ ಬಿಜೆಪಿ ಅಂಥವರು ಗ್ರಾಮ ಸ್ವರಾಜ್ ಮಾಡಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.
ಸಚಿವ ಈಶ್ವರಪ್ಪ ಒಬ್ಬ ಪೆದ್ದ. ಜನರಿಗೆ ನೀವು ಮತ ಕೊಟ್ಟರೆ ನಾವು ಗ್ಯಾರಂಟಿ ಕೊಡ್ತೀವಿ ಅಂದಿದ್ದಾರೆ. ಜನರ ದುಡ್ಡು ಜನರಿಗೆ ಕೊಡಲು ಈ ರೀತಿ ಹೇಳುತ್ತಾರೆ. ಕಳೆದ ಬಾರಿ ಪರಿಷತ್ ನಲ್ಲಿ ತುಮಕೂರಿನಲ್ಲಿ ಸೋತಿದ್ದಿವಿ. ಆದರೆ ಈ ಬಾರಿ ಗೆಲ್ತೀವಿ, ಆರ್. ರಾಜೇಂದ್ರ ಅವರು ಇಲ್ಲಿ ಅಭ್ಯರ್ಥಿಯಾಗಿದ್ದಾರೆ. ನೂರಕ್ಕೆ ನೂರು ಈ ಬಾರಿ ರಾಜೇಂದ್ರ ಗೆಲ್ಲುತ್ತಾರೆ. ಮಳೆಯಿಂದಾಗಿ 1 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಆ ಸಿಎಂ ಬೊಮ್ಮಾಯಿ ಚಲನಚಿತ್ರ ಬಿಡುಗಡೆ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಬೊಮ್ಮಾಯಿ ಅವರಿಗೆ ರೈತರ ಬಗ್ಗೆ ಕನಿಕರ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ನಡುಗಡ್ಡೆಯಲ್ಲಿ ಸಿಲುಕಿದ 500 ದನಕರುಗಳು – ಹಸುಗಳನ್ನು ಕಾಪಾಡುವಂತೆ ಡಿಸಿಗೆ ಮನವಿ
5 ಟ್ರಿಲಿಯನ್ ಆದಾಯ ಮಾಡ್ತೀನಿ ಅಂದರು. ಇನ್ನೂ ಮೋದಿ ಅವರ ಹೆಸರಲ್ಲಿ ಬದುಕುತ್ತಿದ್ದಾರೆ. ಬಿಜೆಪಿಗೆ ಅವರಿಗೆ ಧಮ್ ಇಲ್ಲ. ಹಾಗಾಗಿ ಮೋದಿ ಅವರ ಹೆಸರಲ್ಲೇ ಬದುಕುತಿದ್ದಾರೆ. ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂದು ಮೋದಿ ಹೇಳಿದ್ರು. ಈಗ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಮೋದಿ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ಶೇಕಡಾವಾರು ತಿಳಿಸಿದ್ದಾರೆ. ಬೊಮ್ಮಾಯಿ ನಿಮಗೆ ಮಾನ ಮರ್ಯಾದೆ ಇದ್ರೆ, ಶೇ.30-40 ಲಂಚ ಪಡೀತಿದ್ದಾರೆ. ಇಂಥಹ ಸರ್ಕಾರ ಕಿತ್ತೊಗೆಯಬೇಕು. ಭ್ರಷ್ಟಾಚಾರ, ಕಪಟತನ ಬಯಲಿಗೆ ತಂದು ಅವರನ್ನು ಬೆತ್ತಲೆ ಮಾಡುವ ಕೆಲಸ ಮಾಡುತ್ತೇವೆ. ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದರು.
ಚಿತ್ರದುರ್ಗ: `ಅನುಗ್ರಹ’ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಚಿಕ್ಕೋಡಿ ತಾಲೂಕಿನ ಕುರಿಗಾಯಿ ನಾಯಿಂಗ್ಲಾಜ್ ವಾಸಪ್ಪ ಮಾನಿಯವರಿಗೆ ಸೇರಿದ ಸುಮಾರು 40 ಕುರಿಗಳು ಸಾವನ್ನಪ್ಪಿವೆ.
ಇಂತಹವರಿಗೆ ನೆರವಾಗಲೆಂದೇ ನಾನು ಜಾರಿಗೆ ತಂದಿದ್ದ 'ಅನುಗ್ರಹ' ಯೋಜನೆಯನ್ನು ಸ್ಥಗಿತಗೊಳಿಸಿದ್ದ @BJP4Karnataka ಸರ್ಕಾರವನ್ನು ಕಟುಕರ ಸರ್ಕಾರ ಎನ್ನದೆ ಬೇರೆ ಹೇಗೆ ಕರೆಯೋಣ? 1/2 pic.twitter.com/6CAzzgEAQW
ಇಂದು ಬೆಳಗ್ಗೆ ಪಶುಪಾಲನೆ ಇಲಾಖೆಯ ವರದಿ ಪಡೆಯುವ ಸಂದರ್ಭದಲ್ಲಿ ಅನುಗ್ರಹ ಯೋಜನೆಯನ್ನು ಮುಂದುವರಿಸಲು ಸರ್ಕಾರ ಆದೇಶ ಮಾಡಿದೆ. ಆಕಸ್ಮಿಕವಾಗಿ ಮೃತಪಟ್ಟ ಕುರಿಗಳಿಗೆ 5 ಸಾವಿರ, ದನಗಳಿಗೆ 10 ಸಾವಿರ ರೂ. ಹಾಗೂ ಕುರಿ ಮರಿಗಳಿಗೆ 2,500 ರೂ. ನೀಡಲು ಆದೇಶದಲ್ಲಿ ತಿಳಿಸಲಾಗಿದೆ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಕುರಿಗಾಹಿಯೊಬ್ಬರ 35 ಕುರಿಗಳು ಮೃತಪಟ್ಟಿರುವ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ಸಿದ್ದರಾಮಯ್ಯ ಅವರು, ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿ ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಅನುಗ್ರಹ ಯೋಜನೆಗೆ ಹಣ ಒದಗಿಸಿ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದರು.