Tag: ಬಿಜೆಪಿ ಸರ್ಕಾರ

  • ಭಾರತದ ಆರ್ಥಿಕತೆ ಕುಸಿಯುತ್ತಿದೆ, ಹಣಕಾಸು ಹೊಂದಿಸಲು ಸರ್ಕಾರದ ಆಸ್ತಿ ಮಾರಲಾಗ್ತಿದೆ: ಸೋನಿಯಾ ಗಾಂಧಿ

    ಭಾರತದ ಆರ್ಥಿಕತೆ ಕುಸಿಯುತ್ತಿದೆ, ಹಣಕಾಸು ಹೊಂದಿಸಲು ಸರ್ಕಾರದ ಆಸ್ತಿ ಮಾರಲಾಗ್ತಿದೆ: ಸೋನಿಯಾ ಗಾಂಧಿ

    ನವದೆಹಲಿ: ಭಾರತದ ಆರ್ಥಿಕತೆ ನಿರಂತರವಾಗಿ ಕುಸಿಯುತ್ತಿದೆ. ಇದನ್ನು ಸರಿಪಡಿಸಬೇಕಿದ್ದ ಸರ್ಕಾರ ಆರ್ಥಿಕ ಹಿಂಜರಿತ ಮುಚ್ಚಿಡಲು ಸರ್ಕಾರದ ಆಸ್ತಿ ಮಾರಾಟ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ಕೊರೊನಾ ಬಳಿಕ ಇದೇ ಮೊದಲ ಬಾರಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದೇಶದ ಎಲ್ಲಾ ಯೂನಿವರ್ಸಿಟಿಯಲ್ಲಿ RSS ಕಾರ್ಯಕರ್ತರನ್ನ ಸಿಂಡಿಕೇಟ್ ಮಾಡ್ಕೊಂಡಿದ್ದಾರೆ: ಹೆಚ್‍ಡಿಕೆ

    ದೇಶದಲ್ಲಿ ಒಕ್ಕೂಟ ವ್ಯವಸ್ಥೆ ಎನ್ನುವುದು ಘೋಷಣೆಗೆ ಸೀಮಿತವಾಗಿದೆ ಕೇಂದ್ರ ಸರ್ಕಾರ ರಾಜ್ಯಗಳ ಅಧಿಕಾರಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ವಿದೇಶಾಂಗ ನೀತಿಯನ್ನು ಚುನಾವಣೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಗಡಿಯಲ್ಲಿ ಗಂಭೀರ ಸಮಸ್ಯೆಯನ್ನು ದೇಶ ಎದುರಿಸುತ್ತಿದೆ. ಆದರೆ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ. ಚೀನಾ ವಿಚಾರದಲ್ಲಿ ನರೇಂದ್ರ ಮೋದಿ ಮೌನ ತಾಳಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

    ಇನ್ನು ಲಖೀಂಪುರ್ ಖೇರಿ ಪ್ರಕರಣದಲ್ಲಿ ಬಿಜೆಪಿ ಮನಸ್ಥಿತಿ ಗೊತ್ತಾಗುತ್ತಿದ್ದು, ರೈತರ ಪ್ರತಿಭಟನೆ ಬಗ್ಗೆಯೂ ಸೋನಿಯಾಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು. ಈ ನಡುವೆ ಎಸ್ಸಿ ,ಎಸ್‍ಟಿ ಹಿಂದುಳಿದ ವರ್ಗದವರ ಉದ್ಯೋಗಕ್ಕೆ ಹೊಡೆತ ಬೀಳುತ್ತಿದೆ. ಪೆಟ್ರೋಲ್ ದರ ನೂರರ ಗಡಿ ದಾಟಿದೆ, ಗ್ಯಾಸ್ ಬೆಲೆ ರೂ 900ಕ್ಕೂ ಹೆಚ್ಚಿದೆ. ಇದರಿಂದ ಸಾರ್ವಜನಿಕರ ಜೀವನ ದುಸ್ತರವಾಗಿದೆ ಎಂದು ಹೇಳಿದರು.

  • ರಾಷ್ಟ್ರೀಯ ಶಿಕ್ಷಣ ನೀತಿ: ಕಾಂಗ್ರೆಸ್ ವಿರುದ್ಧ ಅಶ್ವತ್ಥನಾರಾಯಣ ಕಿಡಿ

    ರಾಷ್ಟ್ರೀಯ ಶಿಕ್ಷಣ ನೀತಿ: ಕಾಂಗ್ರೆಸ್ ವಿರುದ್ಧ ಅಶ್ವತ್ಥನಾರಾಯಣ ಕಿಡಿ

    ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ಬಿಡಲ್ಲ: ಡಿಕೆಶಿ ಎಚ್ಚರಿಕೆ

    ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರಾತುರವಾಗಿ ಜಾರಿ ಮಾಡಿಲ್ಲ. ಸಾಕಷ್ಟು ಪ್ರಕ್ರಿಯೆ ನಡೆದಿದೆ. ಅಪಾರ ಸಿದ್ಧತೆ ಮಾಡಿಕೊಂಡು ಜಾರಿಗೆ ತರಲಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹೊಸ ಶಿಕ್ಷಣ ನೀತಿಯ ಬಗ್ಗೆ ಎಲ್ಲ ಪ್ರಕ್ರಿಯೆಗಳು ಶುರುವಾದವು. 2015ರಿಂದ ಶುರುವಾದ ಈ ಪ್ರಕ್ರಿಯೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರವಿತ್ತು? ಯಾರು ಮುಖ್ಯಮಂತ್ರಿ ಆಗಿದ್ದರು ಎಂದು ಜನರಿಗೆ ಗೊತ್ತಿದೆ ಎಂದು ಸಿದ್ದರಾಮಯ್ಯರನ್ನು ಕುಟುಕಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ಸದನದಲ್ಲಿ ಸಿಎಂ ಉತ್ತರ

    ಅಂದು ದೇಶದ 2.50 ಲಕ್ಷ ಗ್ರಾಮ ಪಂಚಾಯಿತಿಗಳ ಜತೆ ಸಂವಹನ ನಡೆಸಲಾಯಿತು. ರಾಜ್ಯದಲ್ಲೂ ಈ ಪ್ರಕ್ರಿಯೆ ನಡೆಯಿತು. ಈ ಎಲ್ಲಾ ಮಹತ್ವದ ಪ್ರಕ್ರಿಯೆಗಳಲ್ಲೂ ಅಂದಿನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸಕ್ರಿಯವಾಗಿ ಭಾಗಿಯಾಗಿದ್ದರು. ಹಾಗಾದರೆ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಏನು ಮಾಡುತ್ತಿದ್ದರು? ಇವರಿಗೆ ಈ ವಿಚಾರ ಗೊತ್ತಿರಲಿಲ್ಲವೇ? ಅವರದೇ ಸರ್ಕಾರ ಏನೆಲ್ಲ ಸಲಹೆಗಳನ್ನು ಕೊಟ್ಟಿತ್ತು ಎಂಬುದನ್ನು ಒಮ್ಮೆ ಕಣ್ತೆರೆದು ನೋಡಲಿ ಎಂದು ಅಶ್ವತ್ಥನಾರಾಯಣ ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಬಿಜೆಪಿ ಅಭಿವೃದ್ಧಿಪರ ವಿಚಾರದಲ್ಲಿ ರಾಜಕಾರಣ ಮಾಡಲ್ಲ ಎಂದ ಅವರು, ಪ್ರತಿಪಕ್ಷವಾಗಿ ಕಾಂಗ್ರೆಸ್ ಟೀಕೆ-ಟಿಪ್ಪಣಿ ಮಾಡುತ್ತಿದೆ. ಸರ್ಕಾರಕ್ಕೆ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

    ವಿಚಾರ ಸಂಕಿರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ನಾಗೇಶ್, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯ .ಎಂ.ಕೆ.ಶ್ರೀಧರ್, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಸಂಸದ ಪಿ.ಸಿ.ಮೋಹನ್, ಬಿಜೆಪಿ ಸೆಂಟ್ರಲ್ ಘಟಕದ ಅಧ್ಯಕ್ಷ ಮಂಜುನಾಥ ಹಾಜರಿದ್ದರು.

  • ನಿಷ್ಕ್ರಿಯ ಮಹಿಳಾ ಆಯೋಗದ ವಜಾಗೆ ಎಎಪಿ ಆಗ್ರಹ

    ನಿಷ್ಕ್ರಿಯ ಮಹಿಳಾ ಆಯೋಗದ ವಜಾಗೆ ಎಎಪಿ ಆಗ್ರಹ

    ಬೆಂಗಳೂರು: ನಾಡಿನ ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಮಹಿಳಾ ಆಯೋಗವು ಸಂಪೂರ್ಣ ವಿಫಲವಾಗಿದ್ದು, ಆಯೋಗದ ಈಗಿನ ಅಧ್ಯಕ್ಷರು ಹಾಗೂ ಸದಸ್ಯರನ್ನು ವಜಾ ಮಾಡಿ ನೂತನ ಆಯೋಗ ರಚಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

    ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಎಪಿಯ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲ ಸ್ವಾಮಿ, ‘ಮಹಿಳಾ ಆಯೋಗದ ಅಧ್ಯಕ್ಷರಾದ ಆರ್.ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ರಾಜ್ಯಾದ್ಯಂತ ಮಹಿಳೆಯರ ಮೇಲೆ ಕಿರುಕುಳ, ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಕನಿಷ್ಠ ಸೌಜನ್ಯ ಕೂಡ ಆಯೋಗದ ಅಧ್ಯಕ್ಷರಿಗೆ ಇಲ್ಲ. ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುವುದರಲ್ಲಿ ಆಯೋಗ ವಿಫಲವಾಗಿದೆ. ರಾಜ್ಯದ ಜನತೆಗೆ ಆಯೋಗದ ಮೇಲೆ ವಿಶ್ವಾಸವೇ ಇಲ್ಲವಾಗಿದೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರನ್ನು ಇಟ್ಟಿರ್ತಾರೆ: ಎಸ್.ಆರ್ ಶ್ರೀನಿವಾಸ್

    ಪ್ರಮೀಳಾ ನಾಯ್ಡುರವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ರಾಜ್ಯದಲ್ಲಿ ಪ್ರತಿದಿನ ಸರಾಸರಿ ಒಂದಕ್ಕಿಂತ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಆಯೋಗ ನಿದ್ರಾವಸ್ಥೆಯಲ್ಲಿ ಇರುವುದು ಖಂಡನೀಯ. ಬಾಲ್ಯ ವಿವಾಹಗಳು ಎಗ್ಗಿಲ್ಲದೇ ನಡೆಯುತ್ತಿವೆ. ಕಾಟಾಚಾರಕ್ಕೆ ಎಫ್‍ಐಆರ್ ದಾಖಲಿಸಿಕೊಳ್ಳಲಾಗುತ್ತಿದೆಯೇ ಹೊರತು, ಆರೋಪಿಗಳಿಗೆ ಶಿಕ್ಷೆ ಆಗುತ್ತಿಲ್ಲ. ಕೋಟ್ಯಾಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಮಾಡಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ನೂತನ ಆಯೋಗ ರಚಿಸಲಿ ಎಂದು ಕುಶಲ ಸ್ವಾಮಿಯವರು ಒತ್ತಾಯಿಸಿದ್ದಾರೆ.

    ಆಮ್ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರಾದ ಉಷಾ ಮೋಹನ್‍ರವರು ಮಾತನಾಡಿ, ‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ರವರ ಸರ್ಕಾರವು ಸ್ವಾತಿ ಮಾಲಿವಾಲ್ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಸ್ವಾತಿ ಮಾಲಿವಾಲ್‍ರವರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ನಮ್ಮ ಕರ್ನಾಟಕದ ಮಹಿಳಾ ಆಯೋಗಕ್ಕೂ ಅಂತಹ ಅಧ್ಯಕ್ಷರ ಅಗತ್ಯವಿದೆ. ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಜಾಣ ಕುರುಡು ತೋರುವ ಈಗಿನ ಅಧ್ಯಕ್ಷರಿಂದ ಮಹಿಳೆಯರಿಗೆ ಏನೂ ಉಪಯೋಗವಿಲ್ಲ. ಬಸವರಾಜ್ ಬೊಮ್ಮಾಯಿಯವರು ಈ ಬಗ್ಗೆ ಗಮನವಹಿಸಬೇಕು’ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾಲ್ವರು ತೊಗರಿ ಕಳ್ಳರ ಬಂಧನ – 7.80 ಸಾವಿರ ಮೌಲ್ಯದ ತೊಗರಿ ಜಪ್ತಿ

  • ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆ: ಸತೀಶ್ ಜಾರಕಿಹೊಳಿ ವಿಶ್ವಾಸ

    ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲಿದೆ: ಸತೀಶ್ ಜಾರಕಿಹೊಳಿ ವಿಶ್ವಾಸ

    -ಜನಸಾಮಾನ್ಯರು ಬೆಲೆ ಏರಿಕೆ ಬಗ್ಗೆ ಎಚ್ಚೆತ್ತುಕೊಳ್ಳಬೇಕು

    ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಜನರು ಈ ಬಾರಿ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.  ಇದನ್ನೂ ಓದಿ: ಮಾನಸಿಕವಾಗಿ ಚಿಕ್ಕಮಗಳೂರಿನ ಬಾಲಕಿಗೆ ಎಷ್ಟು ಘಾಸಿಯಾಗಿರಬಹುದು: ರಮ್ಯಾ ಕಿಡಿ

    ಬೆಲೆ ಏರಿಕೆ ಜನರಿಗೆ ಈಗಾಗಲೇ ಹೊರೆಯಾಗಿದೆ. ಮತ್ತೆ ಎಲ್‍ಪಿಜಿ ಸಿಲಿಂಡರ್ ದರ 25 ರೂ. ಹೆಚ್ಚಿಸಲಾಗಿದೆ. ಇದು ನಿಲ್ಲುವ ಲಕ್ಷಣಗಳಿಲ್ಲ. ಅವರಿಗೆ ಸಮಾಧಾನ ಆಗುವವರೆಗೂ ಬೆಲೆ ಏರಿಕೆ ಮಾಡುತ್ತಲೇ ಹೋಗುತ್ತಾರೆ. ಕೇಂದ್ರ ಸರ್ಕಾರದವರು ಹಿಡನ್ ಅಜೆಂಡಾ ಇಟ್ಟುಕೊಂಡು ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನಸಾಮಾನ್ಯರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ. ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮಾಡುತ್ತಲೇ ಇದ್ದೇವೆ. ಆದರೆ, ಜನಸಾಮಾನ್ಯರು ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ. ಕೇವಲ ವಿರೋಧ ಪಕ್ಷದವರು ಪ್ರತಿಭಟನೆ ಮಾಡಿದರೇ, ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನುತ್ತಾರೆ. ಹೀಗಾಗಿ, ಜನರೇ ಈ ಬಗ್ಗೆ ಹೋರಾಟ ಮಾಡಬೇಕು. ಜನರು ಪ್ರತಿಭಟನೆ ಮಾಡಿದರೇ ಮಾತ್ರ ಸರ್ಕಾರ ಹೆದರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದೇ ವೇಳೆ ಗೋಕಾಕ್ ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ನಗರದಲ್ಲಿ 10 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆದರೆ, ಅದರಲ್ಲಿ ಒಂದು ಕ್ಯಾಮೆರಾ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿದರೇ ಕಳ್ಳರನ್ನು ಬೇಗ ಪತ್ತೆ ಹಚ್ಚಬಹುದಾಗಿದೆ. ಜೊತೆಗೆ ಕಳ್ಳತನ ಮಾಡುವವರಿಗೂ ಭಯವಿರುತ್ತದೆ. ಹೀಗಾಗಿ, ಈ ಬಗ್ಗೆ ಡಿವೈಎಸ್‍ಪಿಗೆ ಇಂದು ಪತ್ರ ಬರೆಯುತ್ತಿದ್ದೇನೆ. ನಗರದಲ್ಲಿ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಲು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ರಸಗೊಬ್ಬರ ಮಾರಾಟ- 97 ಯೂರಿಯಾ ಚೀಲ ವಶಕ್ಕೆ

    ಇತ್ತೀಚಿನ ದಿನಗಳಲ್ಲಿ ಎಲ್ಲೆಡೆಯೂ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. 5 ಲಕ್ಷ ಜನಸಂಖ್ಯೆಗೆ 30-40 ಜನ ಪೊಲೀಸ್ ಸಿಬ್ಬಂದಿ ಮಾತ್ರ ಇದ್ದಾರೆ. ವೈಜ್ಞಾನಿಕವಾಗಿ ಈ ಕ್ರಮ ಸರಿಯಲ್ಲ. ಹೆಚ್ಚಿನ ಸಿಬ್ಬಂದಿ ನಿಯೋಜನೆ ಹಾಗೂ ಪೊಲೀಸ್ ಇಲಾಖೆಯಲ್ಲಿ ತಾಂತ್ರಿಕ ಸುಧಾರಣೆಯೇ ಇದಕ್ಕೆ ಪರಿಹಾರವಾಗಿದೆ. ಸರ್ಕಾರ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

  • ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

    ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

    ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾಣೆಯ 55 ಸ್ಥಾನಗಳ ಪೈಕಿ ಕನಿಷ್ಠ 35 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    SALEEM AHMED

    ಕಲಬುರಗಿ ಮಹಾನಗರ ಚುನಾವಣೆ ಹಿನ್ನೆಲೆ ಡಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಹಿತ ಕಾಪಾಡಲು ವಿಫಲವಾಗಿವೆ. ಸುಮಾರು 2,000 ಕೋಟಿಯಷ್ಟು ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರ ವಿಫಲವಾಗಿದ್ದು, ಸಾವಿನ ಸಂಖ್ಯೆ ಕಡಿಮೆ ತೋರಿಸುವ ಮೂಲಕ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿನ ಸಂಖ್ಯೆ ಕುರಿತು ಆಂತರಿಕ ತನಿಖೆ ನಡೆಸುತ್ತಿದೆ. ರಾಜ್ಯ ಸರ್ಕಾರ ಕೋವಿಡ್‍ನಿಂದ ನಿಧನರಾದ ವ್ಯಕ್ತಿಗಳ ಕುಟುಂಬದವರಿಗೆ ತಲಾ ರೂ. 5 ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

    SALEEM AHMED

    ಮೊಟ್ಟೆ ಹಗರಣದಲ್ಲಿಭಾಗಿಯಾಗಿರುವ ಶಶಿಕಲಾ ಜೊಲ್ಲೆ ಪ್ರಮಾಣ ಸ್ವೀಕಾರಕ್ಕೆ ಬರಲು ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಬರಲು ಜೀರೋ ಟ್ರಾಫಿಕ್ ಮಾಡಿದ್ದು ನೋಡಿದರೆ ಸರ್ಕಾರದ ನೈತಿಕತೆ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇತ್ತೀಚಿಗೆ ನಾಲ್ವರು ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಸಿದರು. ಯಾವ ಪುರುಷಾರ್ಥಕ್ಕೆ ಈ ಕಾರ್ಯಕ್ರಮ ನಡೆಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ ಅಪಾರ ಜನರು ಸಾವು ನೋವು ಅನುಭವಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನರಿಗೆ ಅಚ್ಚೇದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ಸುಮಾರು 13,000 ಕೋಟಿ ಜಿಎಸ್‍ಟಿ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯವಾಗದ್ದಕ್ಕೆ ಬಿಜೆಪಿ ಮಂತ್ರಿಗಳು ಕ್ಷಮೆ ಕೇಳುವ ಯಾತ್ರೆ ನಡೆಸಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ:ಚಾಮುಂಡಿ ದೇವಿಯ ತಪ್ಪಲಿನಲ್ಲಿ ಅತ್ಯಾಚಾರ ಆಗಿರುವುದು ಅಪಮಾನ: ಜಯ ಮೃತ್ಯುಂಜಯ ಸ್ವಾಮೀಜಿ

    ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಲೀಂ ಅಹಮದ್ ಅವರು ಉತ್ತರ ಪ್ರದೇಶ ಹಾಗೂ ಬಿಹಾರದ ಸಂಸ್ಕೃತಿಯನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ ಇದು ನಾಚಿಕೆಗೇಡು. ಮಾಜಿ ಸಚಿವರೊಬ್ಬರ ಅಣತಿಯಂತೆ ಆ ಘಟನೆ ನಡೆದಿದ್ದು, ಹೋಂ ಮಿನಿಸ್ಟರ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

    ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡುವಾಗ ಗೃಹ ಸಚಿವರು ಉಢಾಫೆಯಾಗಿ ಉತ್ತರಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನವಿರೋಧಿ ನೀತಿಯಿಂದಾಗಿ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಆರಿಸಿ ಕಳಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಒಂದು ಹೊಸತನಕ್ಕೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್​ಗಳು

    ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಾಗಿದೆ. ಅತೃಪ್ತರೆಲ್ಲ ಬೇರೆ, ಬೇರೆ ಪಕ್ಷ ಸೇರಿದ್ದಾರೆ. ಇದು ಪಕ್ಷಕ್ಕೆ ಹಿನ್ನೆಡೆಯಾಗಲಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಜೊತೆಗೆ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 55 ಸೀಟುಗಳಲ್ಲಿ 36 ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಸಹಜವಾಗಿ ಎಲ್ಲ ಪಕ್ಷದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಲಾಗಿದೆ. ಇಷ್ಟಾಗಿಯೂ ಕೆಲವರು ಎಂಐಎಂ ಹಾಗೂ ಜೆಡಿಎಸ್‍ಗೆ ಹೋಗಿದ್ದಾರೆ. ಆದರೂ ಕೂಡಾ ನಮ್ಮ ಪಕ್ಷಕ್ಕೆ ನಷ್ಟವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಅಜಯ್ ಸಿಂಗ್ ಅವರು ನಮ್ಮ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಾದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಬಿಜೆಪಿಯಲ್ಲಿ ಅಭ್ಯರ್ಥಿಗಳು ಸಿಗದೆ ಕೆಲಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಲು ವಿಫಲವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು

    ರಾಷ್ಟ್ರೀಯ ಪಕ್ಷ ಎಂದು ಹೇಳುವ ಬಿಜೆಪಿ ತನ್ನ ಬಿ ಟೀಮ್ ಆದ ಎಂಐಎಂಗೆ ಸ್ಥಾನ ಬಿಟ್ಟುಕೊಟ್ಟಿದೆ ಎಂದು ಕುಟುಕಿದ ಸಲೀಂ ಅಹಮದ್, ಇದು ಆ ಪಕ್ಷದ ಚುನಾವಣಾ ನೀತಿಯನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂಎಲ್‍ಸಿ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.

  • ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

    ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

    ಬೆಂಗಳೂರು: ಈ ಸರ್ಕಾರದಲ್ಲಿ ಹೆಣ್ಮಕ್ಕಳಾಗಲೀ, ಗಂಡು ಮಕ್ಕಳಾಗಲೀ ಸೇಫ್ ಅಲ್ಲ. ಇದಕ್ಕೆ ಮೈಸೂರು ಪ್ರಕರಣವೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರು ಗ್ಯಾಂಗ್ ರೇಪ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ ನೋಡಿ ಪಾಪ ಗೃಹ ಸಚಿವರು ಹೊಸದಾಗಿ ಮಂತ್ರಿಯಾಗಿದ್ದಾರೆ. ಅವರ ಮೇಲೇನೆ ಮಾತನಾಡುವಂಥದ್ದಲ್ಲ. ಒಂದು ಸರ್ಕಾರ ಕಾರಣವಾಗುತ್ತದೆ. ಓರ್ವ ಗೃಹ ಸಚಿವ ಮಾತ್ರ ಅಲ್ಲ ಎಂದಿದ್ದಾರೆ. ಇದನ್ನೂ ಓದಿ:ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ನಾನು ಅವರ ಬಗ್ಗೆ ಕಾಮೆಂಟ್ ಮಾಡಲ್ಲ. ಆದ್ರೆ ಇದಕ್ಕೆ ಉತ್ತರ ಕೊಡಬೇಕಾಗಿರೋದು ಮುಖ್ಯಮಂತ್ರಿಗಳು. ಅವರ ಒಬ್ಬರದ್ದು ಏನಿದೆ, ಇಡೀ ಆಡಳಿತದ ಜವಾಬ್ದಾರಿ ಎಂದು ಗೃಹ ಸಚಿವರ ಮೇಲೆ ಸಾಫ್ಟ್ ಕಾರ್ನರ್ ತೋರಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:ಸಿಟಿ ಮಾತ್ರವಲ್ಲ ಗ್ರಾಮೀಣ ಭಾಗದ ಹೆಣ್ಮಕ್ಕಳಿಗೂ ಆದ್ಯತೆ ಕೊಡಿ: ಗೌರಿ ಶಂಕರ್

  • ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸರ್ಕಾರ ಟೇಕಾಫ್ ಆಗಿತ್ತಾ : ಭೈರತಿ ಬಸವರಾಜ್

    ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸರ್ಕಾರ ಟೇಕಾಫ್ ಆಗಿತ್ತಾ : ಭೈರತಿ ಬಸವರಾಜ್

    ದಾವಣಗೆರೆ: ಸರ್ಕಾರ ಟೇಕಾಫ್ ಆಗಿಲ್ಲ, ಜಾಸ್ತಿ ದಿನ ಉಳಿಯಲ್ಲ ಎಂಬ ಮಾಜಿ ಸಿಎಂಸಿದ್ದರಾಮಯ್ಯ ಹೇಳಿಕೆಗೆ ಇವರು ಸಿಎಂ ಆಗಿದ್ದಾಗ ಟೇಕಾಫ್ ಆಗಿದ್ರಾ, ಹಂಗೇ ಆಕಾಶದಲ್ಲಿ ಹಾರಿಕೊಂಡು ಹೋಗಿದ್ರಾ ಎಂದು ಭೈರತಿ ಬಸವರಾಜ್ ರವರು ಗರಂ ಆಗಿದ್ದಾರೆ.

    ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ಎಂಟತ್ತು ದಿನ ಆಗಿಲ್ಲ. ನಾಲ್ಕು ಜಿಲ್ಲೆ ಪ್ರವಾಸ ಮಾಡಿ ಅಭಿವೃದ್ದಿ ಚಿಂತನೆ ಮಾಡುತ್ತಿದ್ದಾರೆ, ಬೆಂಗಳೂರು ನಗರ ಬಗ್ಗೆ ಮೀಟಿಂಗ್ ಮಾಡಿ ಆರು ಸಾವಿರ ಕೋಟಿ ಅನುದಾನ ಕೊಡುತ್ತೇವೆ ಅಂತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಶತ ಪ್ರಯತ್ನ ಮಾಡುತ್ತಿದ್ದಾರೆ. ಅಧಿಕಾರಿಗಳ ಜೊತೆ ಸತತ ಸಭೆ ನಡೆಸುತ್ತಿದ್ದಾರೆ. ಇದೆಲ್ಲ ಅಭಿವೃದ್ಧಿಯಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಪ್ರಶ್ನಿಸಿದ್ದಾರೆ.

    ಒಂದು ಬಾರಿಯಾದರು ವಿಪಕ್ಷ ನಾಯಕ ಸಿದ್ದರಾಮಯ್ಯ ಗಡಿ ಜಿಲ್ಲೆಗಳಿಗೆ ಹೋಗದೆ ಎಲ್ಲೋ ಕೂತು, ಏನೋ ಒಂದು ಹೇಳೋದು ಬಿಡಲಿ. ಮಾಜಿ ಸಿಎಂ ವಸ್ತುಸ್ಥಿತಿ ಬಗ್ಗೆ ಸಲಹೆ ನೀಡಲಿ, ಅದನ್ನು ಬಿಟ್ಟು ಸರ್ಕಾರ ಉಳಿಯಲ್ಲ, ಟೇಕಾಫ್ ಆಗಿಲ್ಲ ಎನ್ನುವುದು ಸರಿಯಲ್ಲ. ಸರ್ಕಾರ ಬೀಳುತ್ತೆ ಅಂತ ಇವರೇನು ಭವಿಷ್ಯ ಹೇಳ್ತಾರೆ, ಕಾಂಗ್ರೆಸ್ ನಲ್ಲಿ ಎಲ್ಲರೂ ಕಿತ್ತಾಡುತ್ತಿದ್ದಾರೆ, ಮೊದಲು ಇವರ ಭವಿಷ್ಯ ಇವರು ನೋಡಿಕೊಳ್ಳಲಿ, ಸಿಎಂ ಆಗ್ತಾರಾ ಇಲ್ಲ ಅಂತ ಭವಿಷ್ಯ ಹೇಳಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತ ಗುರುವಾರ ಕ್ಯಾಬಿನೆಟ್ ಮೀಟಿಂಗ್ ಇದ್ದು, ಅಲ್ಲಿ ಸಾಧಕ ಬಾಧಕ ಚರ್ಚೆ ಮಾಡುತ್ತೇವೆ. ಕೊನೆಯಲ್ಲಿ ಈ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ ಎಂದು ಸಮಜಾಯಿಷಿ ನೀಡಿದ್ದಾರೆ.  ಇದನ್ನೂ ಓದಿ:ಭವಿಷ್ಯದಲ್ಲಿ ನಂಬಿಕೆ ಇಲ್ಲ ಅಂತಾರೆ,ಭವಿಷ್ಯ ಹೇಳಲು ಶುರು ಮಾಡಿದ್ದಾರೆ- ಸಿದ್ದರಾಮಯ್ಯ ವಿರುದ್ಧ ಬಿ.ಸಿ.ಪಾಟೀಲ್ ಕಿಡಿ

  • ಈಗ ಸಿಸೇರಿಯನ್ ಆಗಿದೆ, ಈಗಲೇ ಕುಲಾವಿ ಹಾಕಿಕೊಳ್ಳಬೇಡಿ: ಶಿವರಾಮೇಗೌಡ

    ಈಗ ಸಿಸೇರಿಯನ್ ಆಗಿದೆ, ಈಗಲೇ ಕುಲಾವಿ ಹಾಕಿಕೊಳ್ಳಬೇಡಿ: ಶಿವರಾಮೇಗೌಡ

    – ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವ ಶಾಸಕರಿಗೆ ಲೇವಡಿ

    ಮಂಡ್ಯ: ಸಿಸೇರಿಯನ್ ಆಗಿ ಇನ್ನೂ ಹೊಲಿಗೆನೇ ಹಾಕಿಲ್ಲ. ಆಗಲೇ ಕುಲಾವಿ ಹಾಕಿಕೊಂಡು ತಿರುಗಿದರೆ ಹೆಂಗೆ ಎನ್ನುವ ಮೂಲಕ ಮಂತ್ರಿ ಸ್ಥಾನಕ್ಕೆ ಓಡಾಡುತ್ತಿರುವ ಬಿಜೆಪಿ ಶಾಸಕರಿಗೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಲೇವಡಿ ಮಾಡಿದ್ದಾರೆ.

    ನಾಗಮಂಗಲದಲ್ಲಿ ಮಾತನಾಡಿದ ಅವರು, ಈಗ ತಾನೇ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈಗಲೇ ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಿ, ಅಸಮಾಧಾನವನ್ನು ಹೊರಹಾಕುವುದು ಸರಿಯಲ್ಲ. ಇದು ಒಂಥರ ಸಿಸೇರಿಯನ್ ಆಗಿ ಇನ್ನೂ ಹೊಲಿಗೇನೆ ಹಾಕಿಲ್ಲ ಆಗಲೇ ಕುಲಾವಿ ಹಾಕಿಕೊಂಡು ಓಡಾಡಿದ ಹಾಗೇ ಆಗುತ್ತದೆ ಎಂದು ಸಚಿವ ಸ್ಥಾನಕ್ಕೆ ಪೈಪೋಟಿ ಮಾಡುತ್ತಿರುವ ಶಾಸಕರುಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರ ಭೇಟಿಯ ಕುರಿತು ಮಾತನಾಡಿದ ಅವರು, ದೇವೇಗೌಡರು ನಿಮ್ಮ ಸರ್ಕಾರದ ಜೊತೆ ನಾವಿದ್ದೀವಿ ಎಂದು ಹೇಳಿರುವುದು ರಾಜ್ಯದ ಜನರ ಒಳಿತಿಗಾಗಿ. ಕೊರೊನಾ, ಪ್ರವಾಹದಂತಹ ಸಂಕಷ್ಟದಲ್ಲಿ ರಾಜ್ಯದಲ್ಲಿ ಒಂದು ಸರ್ಕಾರ ಸ್ಥಿರವಾಗಿ ಇರಬೇಕು ಎನ್ನುವ ಕಾರಣಕ್ಕೆ ಗೌಡರು ನಾವಿದ್ದೇವೆ ಎನ್ನುವ ಭರವಸೆ ನೀಡಿದ್ದಾರೆ. ರಾಜ್ಯದ ಜನತೆ ಹಿತದೃಷ್ಟಿಯಿಂದ ದೇವೇಗೌಡರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಯಾರು ಕೂಡ ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸೂಕ್ತ ಅಲ್ಲ ಎಂದಿದ್ದಾರೆ.

    ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಬೇಕು ಎಂದರೆ ಮಂಡ್ಯದವರೇ ಉಸ್ತುವಾರಿ ಸಚಿವರಾಗಬೇಕು. ಸದ್ಯ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಏಕೈಕ ಶಾಸಕ ಎಂದರೆ ಅದು ನಾರಾಯಣಗೌಡ ಮಾತ್ರ. ನಾರಾಯಣಗೌಡರಿಗೆ ಮಂತ್ರಿ ಸ್ಥಾನ ನೀಡಿ ಮಂಡ್ಯ ಜಿಲ್ಲೆಯ ಉಸ್ತುವಾರಿಯನ್ನು ನೀಡಬೇಕು. ಆಗ ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಲು ಸಾಧ್ಯ ಎನ್ನುವ ಮೂಲಕ ಪರೋಕ್ಷವಾಗಿ ನಾರಾಯಣಗೌಡ ಅವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಶಿವರಾಮೇಗೌಡ ನಾರಾಯಣಗೌಡ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ಕೋವಿಡ್ ಬರೋಕೆ ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ: ಸಿದ್ದರಾಮಯ್ಯ

  • ಮೋದಿಗೆ ಸ್ನೇಹಿತರ ದಿನಾಚರಣೆಯ ಶುಭಕೋರಿ ಕಾಲೆಳೆದ ರಾಹುಲ್

    ಮೋದಿಗೆ ಸ್ನೇಹಿತರ ದಿನಾಚರಣೆಯ ಶುಭಕೋರಿ ಕಾಲೆಳೆದ ರಾಹುಲ್

    ನವದೆಹಲಿ: ಸ್ನೇಹಿತರ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ಕೈಗಾರಿಕೋದ್ಯಮದ ಜೊತೆ ಕೈ ಜೋಡಿಸಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ಮೋದಿಗೆ ಸ್ನೇಹಿತರ ದಿನಾಚರಣೆಯ ದಿನದಂದು ಕಾಲೆಳೆದಿದ್ದಾರೆ.

    ಈ ವೀಡಿಯೋದಲ್ಲಿ ಮೋದಿ ಹಲವಾರು ಕೈಗಾರಿಕೋದ್ಯಮದ ಗಣ್ಯ ವ್ಯಕ್ತಿಗಳಿಗೆ ಶೇಕ್ ಹ್ಯಾಂಡ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಸದ್ಯ ಈ ವೀಡಿಯೋವನ್ನು ರಾಹುಲ್ ಗಾಂಧಿಯವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಹಮ್ ದೋ ಹಾಮಾರೆ ದೋ ಕಿ ಸರ್ಕಾರ್‌ಗೆ ಸ್ನೇಹಿತರ ದಿನಾಚರಣೆ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆಯುವ ಮೂಲಕ ಶುಭಾಶಯ ಕೋರಿದ್ದಾರೆ.

    ಮೋದಿಯವರ ಹಳೆಯ ಫೋಟೋಗಳನ್ನು ಬಳಸಿ, ಹಮ್ ದೋ ಹಾಮಾರೆ ದೋ ಕಿ (ನಾವಿಬ್ಬರು, ನಮಗಿಬ್ಬರು) ಎನ್ನುತ್ತಾ, ಕೇವಲ ನಾಲ್ಕು ಜನರಿಂದ ದೇಶವನ್ನು ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

     

    View this post on Instagram

     

    A post shared by Rahul Gandhi (@rahulgandhi)

    ಈ ಹಿಂದೆ ಫೆಬ್ರವರಿಯಲ್ಲಿ ನಡೆದ ಸಂಸತ್ತಿನ ಬಜೆಟ್ ಅಧಿವೇಶದ ವೇಳೆ ಕೂಡ ಹಮ್ ದೋ, ಹಮಾರೆ ದೋ ಎಂಬ ಪದ ಬಳಸಿದ್ದರು ಮತ್ತು ನೂತನ ಕೃಷಿ ಕಾಯ್ದೆ ವಿರುದ್ಧ ಹರಿಹಾಯ್ದಿದ್ದರು. ಈಗ ಮತ್ತೆ ನಾಲ್ಕು ಜನರು ಮಾತ್ರ ದೇಶವನ್ನು ನಡೆಸುತ್ತಿದ್ದಾರೆ ಹಾಗೂ ಅವರು ಯಾರೆಂದು ಎಲ್ಲರಿಗೂ ತಿಳಿದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ:ಬಿಜೆಪಿಯಲ್ಲಿ ಅಸಮಾಧಾನ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

  • ಗೊಂದಲದಲ್ಲಿರುವ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ: ಎನ್.ಎಸ್.ಬೋಸರಾಜು

    ಗೊಂದಲದಲ್ಲಿರುವ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ: ಎನ್.ಎಸ್.ಬೋಸರಾಜು

    ರಾಯಚೂರು: ಬಿಜೆಪಿ ಪಕ್ಷದಲ್ಲಿ ಕಳೆದ ಒಂದು ವರ್ಷದಿಂದ ಬಹಳ ಗೊಂದಲಗಳಿವೆ. ಪಕ್ಷದ ಗೊಂದಲಗಳಿಂದ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿಲ್ಲ. ಗೊಂದಲದಲ್ಲಿರುವ ಪಕ್ಷದ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಅಂತ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಅವರು, ಆಡಳಿತ ಚುಕ್ಕಾಣಿ ಹಿಡಿದ ಪಕ್ಷ ಸ್ಥಿರ ಸರ್ಕಾರ ಕೊಡಬೇಕು. ಬಿಜೆಪಿ ರಾಜ್ಯಾಧ್ಯಕ್ಷರ ಮಾತುಗಳನ್ನ ನೋಡಿದರೆ ಪಕ್ಷದಲ್ಲಿ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಪಕ್ಷದ ಗೊಂದಲಗಳನ್ನು ಬಗೆಹರಿಸಿಕೊಂಡು ಉತ್ತಮ ಸರ್ಕಾರ ನಡೆಸಬೇಕು ಎಂದಿದ್ದಾರೆ.

    ಕೋವಿಡ್ ವಿಚಾರದಲ್ಲಿ ಬರೀ ಸುಳ್ಳು ಅಂಕಿ-ಅಂಶಗಳನ್ನು ಸರ್ಕಾರ ಹೇಳಿಕೊಂಡು ಬಂದಿದೆ. ಅವರು ಕೊಟ್ಟ ಸಂಖ್ಯೆಗಿಂತ ನಾಲ್ಕುಪಟ್ಟು ಜನ ಸತ್ತಿದ್ದಾರೆ. ಲಕ್ಷಾಂತರ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುವಂತೆ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಸ್ಥಿರ ಸರ್ಕಾರ ನಡೆಸಬೇಕು ಅಂತ ಮಾಜಿ ಎಂಎಲ್‍ಸಿ ಎನ್.ಎಸ್.ಬೋಸರಾಜು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ: ರಂಭಾಪುರಿ ಶ್ರೀ