Tag: ಬಿಜೆಪಿ ಸರ್ಕಾರ

  • ರಾಜ್ಯದಲ್ಲಿ ಅಧಿಕಾರ ಹಿಡಿಯಲು ಪಂಚ ಕೌರವರು ಪ್ರಯತ್ನಿಸುತ್ತಿದ್ದಾರೆ: ಈಶ್ವರಪ್ಪ

    ರಾಜ್ಯದಲ್ಲಿ ಅಧಿಕಾರ ಹಿಡಿಯಲು ಪಂಚ ಕೌರವರು ಪ್ರಯತ್ನಿಸುತ್ತಿದ್ದಾರೆ: ಈಶ್ವರಪ್ಪ

    ಶಿವಮೊಗ್ಗ: ಮಹಾಭಾರತ ಎಂದಾಕ್ಷಣ ಪಂಚ ಪಾಂಡವರು ನೆನಪಿಗೆ ಬರುತ್ತಾರೆ. ಆದರೆ ರಾಜ್ಯದಲ್ಲಿ ಪಂಚ ಕೌರವರು ಕಾಣ ಸಿಗುತ್ತಿದ್ದಾರೆ ಎಂದು ಹೇಳುವ ಮೂಲಕ ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರನ್ನು ಪಂಚ ಕೌರವರಿಗೆ ಹೋಲಿಕೆ ಮಾಡಿದ್ದಾರೆ.

    ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಲಾಬಿ ಆರಂಭವಾಗಿದೆ. ಐದು ಜಾತಿಯವರು ಒಬ್ಬೊಬ್ಬರು ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ಹಲವರು ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ ಎಂದರು.

    ಸಮಾಜವಾದವನ್ನು ಅಳವಡಿಸಿಕೊಂಡಿದ್ದೇನೆ, ಸಾಮಾಜಿಕ ನ್ಯಾಯ ನೀಡುತ್ತೇನೆ ಎಂದು ಕೇವಲ ಬಾಯಿ ಮಾತಲ್ಲಿ ಹೇಳುವ ಸಿದ್ದರಾಮಯ್ಯ ಸಿಎಂ ರೇಸ್ ನಲ್ಲಿದ್ದಾರೆ. ಪಕ್ಷದಲ್ಲಿ ವ್ಯಕ್ತಿ ಪೂಜೆ ಮಾಡಬಾರದು ಎನ್ನುವ ಡಿಕೆಶಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದಂತಹ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರ ಮೂಲಕ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಹೇಳುವ ಪರಮೇಶ್ವರ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇನ್ನು ತನ್ವೀರ್ ಸೇಠ್ ಅಲ್ಪ ಸಂಖ್ಯಾತರಿಂದ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

    ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಜನರಿಂದ ತಿರಸ್ಕಾರಗೊಂಡ ಬಳಿಕ ಸುಮ್ಮನಿರಬೇಕಿತ್ತು. ಧರ್ಮವನ್ನು ಹಾಳು ಮಾಡುವ ಕಾಂಗ್ರೆಸ್ ನವರನ್ನು ಜನರೇ ತಿರಸ್ಕರಿಸಿ ಹೊರಗಿಟ್ಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇನ್ನು ಅಧಿಕಾರದಲ್ಲಿದೆ. ಬಿಜೆಪಿ ಅಧಿಕಾರದಲ್ಲಿ ಇರುವಾಗಲೇ ತಾವು ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನವರು ಬಡಿದಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ವ್ಯಂಗ ಮಾಡಿದರು. ಇದನ್ನೂ ಓದಿ:ಮೂರು ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ- ಡಿ.ಕೆ.ಶಿವಕುಮಾರ್ ಒತ್ತಾಯ

  • ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ವಿಜಯನಗರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮನಾಯ್ಕ್ ಹೇಳಿದ್ದಾರೆ.

    ದೇಶದಲ್ಲಿ ಜಾತಿಗಳ ಮಧ್ಯೆ ಕಲಹ ತಂದಿಟ್ಟು ಸಮಾಜದಲ್ಲಿನ ಸಹಬಾಳ್ವೆಗೆ ಬೆಂಕಿಯಿಟ್ಟು ಪೆಟ್ರೋಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಮಾಡಿ ಶ್ರಮಿಕ ವರ್ಗವನ್ನು ತೆರಿಗೆ ಎಂಬ ಕೂಪಕ್ಕೆ ಸಿಲುಕಿಸಿದೆ ಎಂದು ಭೀಮನಾಯ್ಕ್‍ರವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ತೈಲ ಬೆಲೆ ಏರಿಕೆ ಖಂಡಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಳ್ಳಾರಿ ಜಿಲ್ಲೆಯ ಕೊಟ್ಟರು ಪಟ್ಟಣದ ಉಜ್ಜಿನಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಂಬಿ ಮತ ಹಾಕಿದ ಎಲ್ಲಾ ಮತದಾರರಿಗೂ ತಮ್ಮ ತಮ್ಮ ಖಾತೆಗೆ 15 ಲಕ್ಷ ರೂ ಹಣ, ಎರಡು ಲಕ್ಷ ಕೋಟಿ ಉದ್ಯೋಗ ನೀಡದೇ ಸುಳ್ಳು ಭರವಸೆ ನೀಡಿ ದೇಶದ ಜನರಿಂದ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಖಾರವಾಗಿ ನುಡಿದಿದ್ದಾರೆ.

    ಈಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಏಕೆಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವಾಗ ನಮ್ಮ ಸಮ್ಮಿಶ್ರ ಸರ್ಕಾರದ 19 ಶಾಸಕರನ್ನು ಲಂಚ ಕೊಟ್ಟು ಖರೀದಿ ಮಾಡಿಕೊಂಡು ಕಳ್ಳದಾರಿಯಲ್ಲಿ ಬಂದು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ:  ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

  • ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ: ಜಮೀರ್ ಅಹ್ಮದ್

    ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ: ಜಮೀರ್ ಅಹ್ಮದ್

    ಕೋಲಾರ: ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯಮಾಡಿದರು.

    ಕೋಲಾರದ ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‍ಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ. ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ. ಪಿಎಂ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಲ್ಲೂ ಆಗಿಲ್ಲ. ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗಿತಾ ಇದ್ದಾರೆ, ಒಂದು ಕಡೆ ಕೊರೊನಾದಿಂದ ಜನ ಸಾಯುತ್ತಿದ್ದರೆ, ಮತ್ತೊಂದಡೆ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನು ಓದಿ:ಕೊರೊನಾ ನಿಯಮ ಮರೆತು ಲಸಿಕೆಗೆ ಮುಗಿಬಿದ್ದ ಜನರು

    ಪಿಎಂ ಅವರಿಗೆ ತೈಲ ಬೆಲೆ ಏರಿಕೆಯ ತೆರಿಗೆ ಕಡಿಮೆ ಮಾಡಲು ಆಗುತ್ತಿಲ್ಲ. ಕೊರೊನಾ ಸಮಯದಲ್ಲಿ ಯಾರಾದರೂ ಮೋಸ ಮಾಡಿ ಹಣ ತಿಂದರೆ ಹುಳು ಬೀಳುತ್ತೆ. ರಾಜ್ಯ ಸರ್ಕಾರ ಆಟೋ ಚಾಲಕರಿಗೆ ನೀಡಿರುವ ಪರಿಹಾರ ನಾಮಕಾವಸ್ಥೆ, ಅದು ಅಪ್ ಲೋಡ್ ಮಾಡಲು ಅಪ್ಲಿಕೇಶನ್ನೇ ಓಪನ್ ಆಗುತ್ತಿಲ್ಲ, ಅದಕ್ಕೆ ಬದಲಾಗಿ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ 10 ಸಾವಿರ ರೂಪಾಯಿ ಹಾಕಿ. ತಮಿಳುನಾಡಿನಲ್ಲಿ ಅಲ್ಲಿನ ಮುಖ್ಯಮಂತ್ರಿ ಸ್ಟಾಲಿನ್ ಹಣ ಹಾಕಿದ್ದಾರೆ. ಅವರದು ಜನ ಪರ ಕಾಳಜಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

    ನಿನ್ನೆ ಪ್ರಧಾನಿ ಮೋದಿ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಆದರೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ. ಟೆಸ್ಟಿಂಗ್ ಕಡಿಮೆ ಮಾಡಿದ್ದಾರೆ. ಮೊದಲು ಎರಡುವರೆ ಲಕ್ಷ ಟೆಸ್ಟಿಂಗ್ ಮಾಡುತ್ತಿದ್ದರು. ಈಗ 94 ಸಾವಿರ ಜನರಿಗೆ ಟೆಸ್ಟಿಂಗ್ ಮಾಡುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಎಂದು ಈಗ ನೋಡಿದರೆ ವ್ಯಾಕ್ಸಿನ್ ಸಿಗುತ್ತಿಲ್ಲ. ಜನರಿಗೆ ವ್ಯಾಕ್ಸಿನ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲೇ ಅಪಪ್ರಚಾರ ಮಾಡುತ್ತಿದ್ದಾರೆ. ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು. ಇದನ್ನು ಓದಿ:ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ

  • ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

    ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

    ಬೆಂಗಳೂರು: ಈ ಸರ್ಕಾರ ರಚನೆಯಾಗುವುದಕ್ಕೆ ನನ್ನದೂ ಅಳಿಲು ಸೇವೆ ಇದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ರವರು ಹೇಳಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಸ್ನೇಹ ಕಿತ್ತು ಹಾಕಿ ಬಿಜೆಪಿ ಸರ್ಕಾರ ತಂದಿದ್ದೇವೆ. ಸರ್ಕಾರ ರಚನೆಯಾಗಲು ನನ್ನದೂ ಅಳಿಲು ಸೇವೆ ಇದೆ. ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಂದುವರಿಯಬೇಕು ಎಂಬುದು ನನ್ನ ಇಚ್ಛೆ. ನನ್ನ ನೋವನ್ನು ಎಲ್ಲಿ ಹೇಳಿಕೊಳ್ಳಬೇಕೋ ಅಲ್ಲಿ ಹೇಳಿಕೊಂಡಿದ್ದೇನೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಿಕೊಳ್ಳುತ್ತೇವೆ ಎಂದರು. ಇದನ್ನು ಓದಿ: ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ: ಕೇಂದ್ರ ಸಚಿವ ಜೋಶಿ

    ಆರ್.ಅಶೋಕ್ ಬಗ್ಗೆ ಮಾತನಾಡುತ್ತಿದ್ದಂತೆ. ಎಲ್ಲ ನನ್ನ ಸ್ನೇಹಿತರು ಅವರು ಏನು ಬೇಕಾದರೂ ಹೇಳಬಹುದು. ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನುಣಿಚಿಕೊಂಡರು.

    ಯೋಗೇಶ್ವರ್‍ರವರು ಮಠಗಳಿಗೆ ಲಾಪ್ ಟ್ಯಾಪ್ ಹಿಡಿದು ಹೋಗಿದ್ದರು ಎಂಬ ಡಿ.ಕೆ ಶಿವಕುಮಾರ್ ಆರೋಪ ವಿಚಾರವಾಗಿ, ಡಿಕೆ ಶಿವಕುಮಾರ್‍ಗೆ ನನ್ನ ವಿರುದ್ಧ ಮಾತಾನಾಡುವುದು ಅನಿವಾರ್ಯ ಆಗಿದೆ. ಬಿಜೆಪಿಗೆ ಅವರು ಸಾಮಾನ್ಯ ಸದಸ್ಯನಾಗಿ ಸದಸ್ಯತ್ವ ತೆಗೆದುಕೊಳ್ಳೋದು ಒಳ್ಳೆಯದು. ಸಿಡಿ ಸಂಸ್ಕೃತಿ ಡಿಕೆ ಶಿವಕುಮಾರ್ ಅವರಿಗೆ ಚೆನ್ನಾಗಿ ಗೊತ್ತು. ನಮ್ಮ ಜಿಲ್ಲೆಯ ಎಲ್ ಎನ್ ಮೂರ್ತಿ ಅನ್ನೋರು ಅವರು ಯಾರು ಯಾರಿಗೆ ಸಿಡಿ ತೋರಿಸುತ್ತಿದ್ದರು ಎಂದು ಬರೆದಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಹಗರಣದ ಹಿಂದೆ ಯಾರು ಇದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು. ಇದನ್ನು ಓದಿ: ಮಠಾಧೀಶರಿಗೆ ಬಿಜೆಪಿ ಸಚಿವರು ಲ್ಯಾಪ್‍ಟಾಪ್ ತೋರಿಸಿದ್ದಾರೆ: ಡಿಕೆಶಿ

    ನನ್ನ ಬಗ್ಗೆ ಕುಚೋದ್ಯ ಮಾಡಬೇಕು, ಸಮಾಜದಲ್ಲಿ ಕಳಂಕ ತರಿಸಬೇಕು ಅಂತ ಡಿಕೆ ಶಿವಕುಮಾರ್ ಹೀಗೆಲ್ಲ ಮಾತಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ನನ್ನ ರಾಜಕೀಯ ವಿರೋಧಿ. ನನ್ನನ್ನ ಏನೋ ಮಾಡಿ ತಗಲು ಹಾಕಬೇಕು ಅಂತ ಹೀಗೆಲ್ಲ ಮಾತಾನಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರನ್ನು ನೋಡಿದರೆ ನನ್ನನ್ನ ನೋಡಿದರೆ ವಿಚಲಿತರಾಗುತ್ತಾರೆ. ತಿಹಾರ್ ಜೈಲಿಗೆ ಹೋಗಿ ಬಂದವರ ಬಗ್ಗೆ ನಾನೇನು ಮಾತಾನಾಡುವುದಿಲ್ಲ. ತಿಹಾರ್ ಜೈಲಿಗೆ ಹೋಗಿ ಬಂದ ಮೇಲೆ ಅವರು ಏನೇನೋ ಮಾತಾನಾಡುತ್ತಿದ್ದಾರೆ. ಅಲ್ಲದೇ ನಾನು ಆದಿಚುಂಚನಗಿರಿ ಮಠಕ್ಕೆ ಹೋಗುವುದು ಇದೇ ಮೊದಲಲ್ಲ. ಅನೇಕ ಬಾರಿ ಹೋಗಿದ್ದೇನೆ. ನಾನು ಮಠಕ್ಕೆ ಹೋಗಿ ಬಂದ ತಕ್ಷಣ ಡಿಕೆ ಶಿವಕುಮಾರ್‍ರವರು ಹೋಗುತ್ತಾರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆ ನಾನು ಉತ್ತರ ಕೊಡೊಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಯೋಗೇಶ್ವರ್‍ರವರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಓದಿ:ಯಾರೂ ರಾಜಕೀಯ ಹೇಳಿಕೆಗಳನ್ನು ನೀಡಕೂಡದು: ಆಪ್ತರಿಗೆ ಸಿಎಂ ಸಂದೇಶ

  • ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ, ಲಸಿಕೆ ಕೊಡಿ : ಡಿಕೆ ಶಿವಕುಮಾರ್

    ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ, ಲಸಿಕೆ ಕೊಡಿ : ಡಿಕೆ ಶಿವಕುಮಾರ್

    ಹಾಸನ: ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ, ಲಸಿಕೆ ಕೊಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ವ್ಯಾಕ್ಸಿನೇಷನ್ ಮಾಡಿ ಎಂದು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ವ್ಯಂಗ್ಯ ಮಾಡಿ ಕಿಡಿಕಾರಿದ್ದಾರೆ.

    ಹಾಸನದ ಶ್ರೀನಗರ ಬಡಾವಣೆಯಲ್ಲಿ ಪುಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಲು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಆದರೆ ಗ್ರಾಮೀಣ ಭಾಗದ ಜನರಿಗೆ ಅದು ಗೊತ್ತಾಗುವುದಿಲ್ಲ. ಹಾಗಾಗಿ ನಮ್ಮ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದೆ. ಅದರಂತೆ ಗೊತ್ತಿಲ್ಲದವರು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಸರ್ಕಾರ ಆನ್ ಲೈನ್ ರಿಜಿಸ್ಟ್ರೇಷನ್ ನಿಲ್ಲಿಸಿದೆ ಎಂದು ದೂರಿದರು.

    ಸರ್ಕಾರದ ಬಳಿ 18 ರಿಂದ 44 ವರ್ಷದವರೆಗೆ ಯುವಕರಿಗೆ ನೀಡಲು ಯಾವ ಲಸಿಕೆಯೂ ಇಲ್ಲ. ನಮ್ಮ ಉದ್ದೇಶ ವ್ಯಾಕ್ಸಿನೇಷನ್ ನೀಡಬೇಕು. ಜನರ ಜೀವ ಉಳಿಯಬೇಕು. ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ. ಲಸಿಕೆ ಕೊಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ವ್ಯಾಕ್ಸಿನೇಷನ್ ನೀಡಿ ಎಲ್ಲರ ಜೀವ ಉಳಿಸಿ ಎಂದಿದ್ದಾರೆ. ಇದನ್ನು ಓದಿ: ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ

    ಕೆಲವು ಜನರಿಗೆ ಖರೀದಿ ಮಾಡಲು ಲಸಿಕೆ ಸಿಗುತ್ತದೆ. ಆದರೆ ಸರ್ಕಾರಕ್ಕೆ ಏಕೆ ಸಿಗುತ್ತಿಲ್ಲ. ಅದ್ಯಾರೋ ಸಂಸದರು 900 ರೂ. ಗೆ ಲಸಿಕೆ ಸಿಗುತ್ತೆ ಅಂತಾರೆ ಅದು ಹೇಗೆ ಎಂದು ಪರೋಕ್ಷವಾಗಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಶ್ನಿಸುತ್ತಾ, ಜನರಿಗೆ ಲಸಿಕೆ ಕೊಟ್ಟು ಒಳ್ಳೆಯ ಹೆಸರು ತೆಗೆದುಕೊಳ್ಳಿ ಎಂದು ಸರ್ಕಾರಕ್ಕೆ ತಿಳಿ ಹೇಳಿದರು.

    ರಮೇಶ್ ಜಾರಕಿಹೋಳಿ ಎಸ್‍ಐಟಿ ತನಿಖೆಗೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಸಿಎಂ, ಗೃಹ ಸಚಿವರು ಎರಡು ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಆ ಎರಡು ಹೇಳಿಕೆಯಲ್ಲಿ ಗೊತ್ತಾಗುತ್ತಿದೆ. ಯಾವ ರೀತಿ ರಕ್ಷಣೆ ಮಾಡುತ್ತಿದ್ದಾರೆ ಎನ್ನುವುದು ತಿಳಿಯುತ್ತದೆ. ನಾವು ರಾಜ್ಯಾದ್ಯಂತ ನಮ್ಮದೇ ಆದ ಹೋರಾಟ ಮಾಡುತ್ತೇವೆ. ಇದನ್ನು ಬಿಡುವುದಿಲ್ಲ. ಅಧಿಕಾರಿಗಳು ಸರ್ಕಾರದ ಮಾತು ಕೇಳಿ ಏನು ಮಾಡುತ್ತಿದ್ದಾರೆ. ನಮಗೆ ಗೊತ್ತಿದೆ ಇದರ ವಿರುದ್ದ ಹೋರಾಟದ ರೂಪುರೇಷೆ ಮಾಡುತ್ತೇನೆ ಎಂದು ಹೇಳಿದರು. ಇದನ್ನು ಓದಿ: ಲಾಕ್‍ಡೌನ್ ಬಗ್ಗೆ ಜೂನ್ 5ರಂದು ಸಿಎಂ ತೀರ್ಮಾನ ಮಾಡ್ತಾರೆ: ಬೊಮ್ಮಾಯಿ

    ನಾನು ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ರೈತರ ಕಷ್ಟ ಆಲಿಸುತ್ತಿದ್ದೇನೆ. ಇಂದು ಮಾರುಕಟ್ಟೆಗಳಲ್ಲಿ ಹೂವು ಹಣ್ಣು, ತರಕಾರಿ ಮಾರಾಟ ಮಾಡುವ ರೈತರ ಜೊತೆ ಮಾತನಾಡಲು ಬಂದಿದ್ದೆ. ಆದರೆ ಲಾಕ್ ಡೌನ್ ಇರುವುದರಿಂದ ಸಾಧ್ಯವಾಗಲಿಲ್ಲ ಮತ್ತೊಮ್ಮೆ ಬರುತ್ತೇನೆ ಎಂದರು.

  • ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

    ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

    ಬಾಗಲಕೋಟೆ: ಕೊರೊನಾ ಎರಡನೇ ಅಲೆ ತಡೆಯುವಲ್ಲಿ ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ದೂರಿದ್ದಾರ.

    ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣಕ್ಕೆ ಆಗಮಿಸಿ, ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣ ಕುರಿತಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2ನೇ ಅಲೆಯ ಬಗ್ಗೆ ಮಾಹಿತಿ ಇದ್ದರೂ ಸರ್ಕಾರ ಜಾಗೃತಿ ವಹಿಸಲಿಲ್ಲ. ಆಕ್ಸಿಜನ್, ರೆಮ್ ಡಿಸಿವರ್, ವೆಂಟಿಲೇಟರ್ ಬೆಡ್‍ಗಳ ಸಿದ್ದತೆ ನಡೆಸಲಿಲ್ಲ. ರೋಗಿಗಳಿಗೆ ಆಕ್ಸಿಜನ್, ರೆಮ್‍ಡಿಸಿವರ್ ಇಂಜೆಕ್ಷನ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

    ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅದು ನಮ್ಮ ರೋಗವಲ್ಲ. ಬಿಜೆಪಿಯವರಿಗೆ ಬಂದ ರೋಗ. ಬಿಜೆಪಿ ಅವರು ಬೀದಿ ಜಗಳ ಮಾಡುತ್ತಿದ್ದಾರೆ. ಮಾಡಲಿ ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಮೊದಲೇ ಆಡಳಿತ ಇಲ್ಲ, ಈ ಬೀದಿ ಜಗಳದಿಂದ ಇನ್ನಷ್ಟು ಆಡಳಿತ ಕುಸಿದು ಹೋಗುತ್ತದೆ ಎಂದು ಹೇಳಿದರು.

    ಸಿಎಂ ಬದಲಾವಣೆ ಆಗುತ್ತದೆ ಎಂಬ ಮಾಹಿತಿ ನನಗಿದೆ. ಆದರೆ ಕೊರೊನಾ ಹಿನ್ನೆಲೆ ಮುಂದಕ್ಕೆ ಹಾಕುತ್ತಾ ಇರಬೇಕು, ನನಗೆ ಗೊತ್ತಿಲ್ಲ ಎಂದರು. ಇದೇ ಸಮಯದಲ್ಲಿ ಹಕ್ಕು ಚ್ಯುತಿ ಮಂಡನೆ ವಿಚಾರವಾಗಿ ಮಾತನಾಡಿ, ಜಿಲ್ಲಾಧಿಕಾರಿಗಳ ಜೊತೆ ಝೂಮ್ ಮೀಟ್‍ಗೆ ಅವಕಾಶ ಕೇಳಿದ್ದೆ. ಕೊಡುವುದಕ್ಕೆ ಆಗಲ್ಲ ನೀವು ಸರ್ಕಾರದ ಭಾಗವಲ್ಲ ಅಂದರು. ನಾನೊಬ್ಬ ವಿರೋಧ ಪಕ್ಷದ ನಾಯಕ, ನಾನು ಎಕ್ಸ್ ಚೀಫ್ ಮಿನಿಸ್ಟರ್. ವಿರೋಧ ಪಕ್ಷದ ನಾಯಕ ಅಂದರೆ ಶ್ಯಾಡೋ ಆಫ್ ಚೀಫ್ ಮಿನಿಸ್ಟರ್ ಇದ್ದಾಂಗೆ ನಾನು ಮಾಹಿತಿ ತಿಳಿದುಕೊಳ್ಳುವಂತಿಲ್ಲ ಎಂದರೆ ಇದು ಪ್ರಜಾಪ್ರಭುತ್ವದ ವ್ಯವಸ್ಥೆ ನಾ ಎಂದು ಆಕ್ಷೇಪಿಸಿ ಪ್ರಶ್ನೆ ಮಾಡಿದರು. ಇದನ್ನು ಓದಿ: ರಾಜಕಾರಣದಲ್ಲಿ ಬೆಂಕಿ ಇಲ್ಲದೆಯೂ ಹೊಗೆಯಾಡುತ್ತೆ, ಆಧಾರವಿಲ್ಲದ ಸುದ್ದಿಯೂ ಬರುತ್ತೆ: ಸಿ.ಟಿ.ರವಿ

  • ಸಭೆಗೆ ಕಳಪೆ ವಸ್ತು ತಂದು ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

    ಸಭೆಗೆ ಕಳಪೆ ವಸ್ತು ತಂದು ಮೆಸ್ಕಾಂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

    ಶಿವಮೊಗ್ಗ: ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿ ಕುರಿತಂತೆ ಮೆಸ್ಕಾಂ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಜಿಲ್ಲಾಧಿಕಾರಿಗಳ ಕಛೇರಿ ಸಂಭಾಗಣಕ್ಕೆ ಕಾಮಗಾರಿಯಲ್ಲಿ ಅಳವಡಿಸಿರುವ ಕಳಪೆ ವಸ್ತುಗಳ ಜೊತೆಗೆ ಸಭೆಗೆ ಆಗಮಿಸಿದ ಸಚಿವ ಈಶ್ವರಪ್ಪನವರು, ಯೋಜನೆಯಡಿ ಅಳವಡಿಸಿರುವ ಕಳಪೆ ವಸ್ತುಗಳನ್ನು ಅಧಿಕಾರಿಗಳ ಎದುರು ಪ್ರದರ್ಶಿಸಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ.

    ನಿರಂತರ ಯೋಜನೆಯಡಿ ಕಳಪೆ ಕಾಮಗಾರಿ ನಡೆದಿದೆ ಎಂಬುದನ್ನು ನಾನು ಸಾಕ್ಷಿ ಸಮೇತ ನಿಮ್ಮ ಮುಂದೆ ಇಟ್ಟಿದ್ದೇನೆ. ಗುತ್ತಿಗೆದಾರ ಕಳಪೆ ವಸ್ತುಗಳನ್ನು ಬಳಸುವಾಗ ನೀವೆಲ್ಲಾ ಏನು ಮಾಡುತ್ತಿದ್ದೀರಿ? ಕಣ್ಣು ಮುಚ್ಚಿಕೊಂಡು ಕುಳಿತಿದ್ರಾ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಸಾವಿರಾರು ಕೋಟಿ ವೆಚ್ಚ ಮಾಡಿ ಕಾಮಗಾರಿ ನಡೆಸುತ್ತಿದೆ. ಕಾಮಗಾರಿ ನಡೆಯುತ್ತಿದೆ ಎಂದ ಮೇಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಾದವರು ಯಾರು? ಇದನ್ನೆಲ್ಲಾ ಗಮನಿಸುವುದು ನಿಮ್ಮ ಕರ್ತವ್ಯ ತಾನೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

    ಗುತ್ತಿಗೆದಾರ ಟೆಂಡರ್‍ನಲ್ಲಿ ಉಲ್ಲೇಖಿಸಿರುವ ಸಾಮಾಗ್ರಿಗಳನ್ನು ಕಾಮಗಾರಿಯಲ್ಲಿ ಬಳಸಿಲ್ಲ. ಅದರಲ್ಲೂ ಸಾಮಾಗ್ರಿಗಳನ್ನು ಹಾಕದೇ ಬಿಲ್ ಕೂಡಾ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ಆತನನ್ನು ಯಾರು ಪ್ರಶ್ನೆ ಮಾಡಬೇಕು. ನೀವು ಸರಿಯಿದ್ದರೆ ಇದೆಲ್ಲಾ ನಡೆಯಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿ ಅವರು ಈ ಕಾಮಗಾರಿಯನ್ನು ಕೂಡಲೇ ಪರಿಶೀಲಿಸಿ, ತನಿಖೆ ನಡೆಸಿ 15 ದಿನಗಳೊಳಗೆ ವರದಿ ನೀಡಬೇಕು. ಈ ಕಾಮಗಾರಿ ನಡೆಸಿರುವ ಗುತ್ತಿಗೆದಾರ ಎಲ್ಲೆಲ್ಲಿ ಕಾಮಗಾರಿ ನಡೆಸಿದ್ದಾನೆ ಎಂಬುದನ್ನು ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

  • ಬಿಜೆಪಿ ಸರ್ಕಾರದಿಂದ ಡ್ರಗ್ಸ್ ಮುಕ್ತ ಕರ್ನಾಟಕ ಮಾಡೇ ಮಾಡ್ತೀವಿ: ಈಶ್ವರಪ್ಪ

    ಬಿಜೆಪಿ ಸರ್ಕಾರದಿಂದ ಡ್ರಗ್ಸ್ ಮುಕ್ತ ಕರ್ನಾಟಕ ಮಾಡೇ ಮಾಡ್ತೀವಿ: ಈಶ್ವರಪ್ಪ

    – ಡ್ರಗ್ಸ್ ವ್ಯವಸ್ಥೆಯಲ್ಲಿ ಅನೇಕ ಪ್ರಭಾವಿ ವ್ಯಕ್ತಿಗಳು ಭಾಗಿ

    ಶಿವಮೊಗ್ಗ: ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಚಿತ್ರ ನಟಿಯರು ಹಾಗೂ ಅವರಿಗೆ ಡ್ರಗ್ಸ್ ಪೂರೈಸಿದವರು ಈಗಾಗಲೇ ಜೈಲಿನಲ್ಲಿದ್ದು, ಈ ಪ್ರಕರಣದಲ್ಲಿ ಇನ್ನೂ ಅನೇಕ ಪ್ರಭಾವಿ ವ್ಯಕ್ತಿಗಳು ಇದ್ದಾರೆ. ಯಾರೇ ಪ್ರಭಾವಿಗಳು ಇದ್ದರೂ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

    ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಅಭಿಯಾನ ಕಾರ್ಯಕ್ರಮವೇ ನಮ್ಮ ಸಂಸ್ಕೃತಿಗೆ ನಾಚಿಕೆಗೇಡು ಎಂದರು.

    ಅನೇಕ ವರ್ಷಗಳಿಂದ ಡ್ರಗ್ಸ್, ಮಾದಕ ವಸ್ತು ಸೇವನೆ ಹಾಗೂ ಲೈಂಗಿಕ ಚಟುವಟಿಕೆ ನಡೆಯುತ್ತಿದೆ. ನಮ್ಮ ರಾಜ್ಯಕ್ಕೆ ಬೇರೆ ಬೇರೆ ರಾಜ್ಯ ಹಾಗೂ ವಿದೇಶದಿಂದ ಡ್ರಗ್ಸ್ ಸರಬರಾಜು ಆಗುತ್ತಿದೆ. ಡ್ರಗ್ಸ್ ವಿರುದ್ಧ ಬಿಜೆಪಿ ಸರ್ಕಾರ ಒಂದು ದಿಟ್ಟ ನಿಲುವು ಕೈಗೊಂಡಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಡ್ರಗ್ಸ್ ಇರಬಾರದು ಎಂಬ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

    ಡ್ರಗ್ಸ್ ವ್ಯವಸ್ಥೆ ಬಗ್ಗೆ ವಿಧಾನ ಮಂಡಲದ ಒಳಗೆ ಹಾಗೂ ಹೊರಗೆ ಸಾಕಷ್ಟು ಚರ್ಚೆ ಆಯಿತು. ಆದರೆ ಈ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಆಗಲಿ, ಜೆಡಿಎಸ್ ಆಗಲಿ ಡ್ರಗ್ಸ್ ವಿಚಾರದಲ್ಲಿ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಬೆಂಬಲ ಕೊಡಲಿಲ್ಲ ಎಂಬುದು ತುಂಬ ನೋವಿನ ಸಂಗತಿ. ಡ್ರಗ್ಸ್ ವಿಚಾರದಲ್ಲಿ ಪೊಲೀಸರು ಒಳ್ಳೆಯ ಕ್ರಮ ಕೈಗೊಳ್ಳುತ್ತಿದ್ದಾರೆ. ನಾವು ಸಹ ಪೊಲೀಸರ ಬೆಂಬಲಕ್ಕೆ ಇದ್ದೇವೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿಯೇ ತೀರುತ್ತೇವೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

  • 6 ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ

    6 ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ

    ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ.

    ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಕಿತ್ತು ಒಗೆಯುವವರೆಗೂ ಸುಮ್ಮನೆ ಕೂರಬಾರದು ಎಂದು ವಾಗ್ದಾಳಿ ನಡೆಸಿದರು.

    ಅಂಬಾನಿ ಪ್ರಪಂಚದ ಐದನೇ ಶ್ರೀಮಂತ ಆಗಿದ್ದಾರೆ. ದೇಶ ಕೆಳಗೆ ಹೋಗಿದೆ, ಇವರು ಮೇಲೆ ಹೋಗುತ್ತಿದ್ದಾರೆ. ದೇಶದಲ್ಲಿ ಏರ್ ಪೊರ್ಟ್ ಗಳನ್ನು ಅದಾನಿಗೆ ನೀಡುತ್ತಿದ್ದಾರೆ. ಇವರ ಕೆಂಗಣ್ಣಿಗೆ ರೈತರಿ ಕಂಡಿರಲಿಲ್ಲ, ಈಗ ಇವರ ಕೆಂಗಣ್ಣಗೆ ಗುರಿ ಮಾಡುತ್ತಿದ್ದಾರೆ. ಅಂಬಾನಿ , ಅದಾನಿಗೆ ಇವರುಗಳು ಎಲ್ಲವನ್ನೂ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ರು. ಇದನ್ನೂ ಓದಿ: ತೇಜಸ್ವಿ ಸೂರ್ಯರಿಂದ ಕನ್ನಡಿಗರಿಗೆ ಅಪಮಾನ: ಡಿಕೆಶಿ

    ಕಾಂಗ್ರೆಸ್ ಧರ್ಮ ಜನರ ಸಮಸ್ಯೆಗಳಲ್ಲಿ ಭಾಗಿಯಾಗುವುದು. ಸಮಸ್ಯೆಗಳನ್ನು ನಾವು ಹೊರಗೆ, ವಿಧಾನಸಭೆಯಲ್ಲಿ ಮಾತಾಡಿದ್ದೇವೆ. ಇವರನ್ನು ತೆಗೆಯದಿದ್ದರೆ ರೈತರು ಉಳಿಯಲ್ಲ, ಕಾರ್ಮಿಕರೂ ಉಳಿಯಲ್ಲ. ಬರಿ ಅದಾನಿ, ಅಂಬಾನಿ ಉಳಿಯುತ್ತಾರೆ. ನಾವು ಚುನಾವಣೆ ಬಂದಾಗ ತಯಾರಿ ಮಾಡುವುದಲ್ಲ ಈಗಿನಿಂದಲೇ ಹೋರಾಟ ಮಾಡಬೇಕು. ಬರೀ ಸಮಸ್ಯೆಗೆ ಪರಿಹಾರ ಬಿಜೆಪಿಯನ್ನು ಕಿತ್ತೊಗೆಯುವುದು. ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೆ ಇಟ್ಟು ಕೆಲಸ ಮಾಡಬೇಕು ಎಂದರು.

  • ಡ್ರಗ್ ಮಾಫಿಯಾ, ಆ ವುಡ್ ಈ ವುಡ್ ಯಾವುದನ್ನೂ ಬಿಡಲ್ಲ: ಕೋಟ

    ಡ್ರಗ್ ಮಾಫಿಯಾ, ಆ ವುಡ್ ಈ ವುಡ್ ಯಾವುದನ್ನೂ ಬಿಡಲ್ಲ: ಕೋಟ

    ಉಡುಪಿ: ಇಲ್ಲಿ ಆ ವುಡ್ ಈ ವುಡ್ ಎಂಬ ಪ್ರಶ್ನೆ ಬರುವುದಿಲ್ಲ. ಡ್ರಗ್ ಮಾಫಿಯಾ ವಿಚಾರದಲ್ಲಿ ಗೃಹ ಸಚಿವರು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದು, ಇಡೀ ಮಂತ್ರಿಮಂಡಲ ಬೆಂಬಲಿಸುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಕೋಟ, ಡ್ರಗ್ಸ್ ವಿಚಾರದಲ್ಲಿ ವ್ಯಕ್ತಿಗಳು ಗೌಣ. ವಿಚಾರ ಅಷ್ಟೇ ಮುಖ್ಯ. ಸಣ್ಣವರು ದೊಡ್ಡವರು ಎಂಬ ಪ್ರಶ್ನೆ ಬರುವುದಿಲ್ಲ. ರಾಜ್ಯ ಬಿಜೆಪಿ ಸರ್ಕಾರ ವಿಷಯಗಳ ಮೇಲೆ ಹೋಗುತ್ತದೆ ವ್ಯಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದರು.

    ಮಾದಕ ದ್ರವ್ಯದ ಸೇವನೆ ಮತ್ತು ಮಾರಾಟ ವಿಚಾರ ರಾಜ್ಯದ ಪ್ರಮುಖ ಚರ್ಚೆಯ ವಿಷಯವಾಗಿದೆ. ಗೃಹ ಸಚಿವ ಬೊಮ್ಮಾಯಿ ಕಟುವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಯಾವುದೇ ಕಠಿಣ ಪರಿಸ್ಥಿತಿ ಎದುರಾದರೂ ಪರವಾಗಿಲ್ಲ. ಮಾದಕ ದ್ರವ್ಯದ ಜಾಡನ್ನು ಮಟ್ಟ ಹಾಕುತ್ತೇವೆ. ಮಾದಕ ದ್ರವ್ಯದ ಜಾಲವನ್ನು ಮಟ್ಟ ಹಾಕುತ್ತೇವೆ ಎಂದು ಹೇಳಿದರು.