Tag: ಬಿಜೆಪಿ

  • ಬಿಜೆಪಿ ವಿರುದ್ಧವೂ ಡೈರಿ ಅಸ್ತ್ರ ಸಿಡಿಸಿದ ರಾಜ್ಯ ‘ಕೈ’ ನಾಯಕರು

    ಬೆಂಗಳೂರು: ಕೈ ನಾಯಕರ ವಿರುದ್ಧದ ಸೀಕ್ರೆಟ್ ಡೈರಿಯ ಮಾಹಿತಿ ಸೋರಿಕೆ ಬೆನ್ನಲ್ಲೇ ಕಾಂಗ್ರೆಸ್ ಕೂಡಾ ಬಿಜೆಪಿ ವಿರುದ್ಧ ಡೈರಿ ಅಸ್ತ್ರವನ್ನು ಬಳಸಿದೆ. ರಾಜ್ಯ ಬಿಜೆಪಿ ನಾಯಕರು ಕೂಡಾ ಬಿಜೆಪಿ ಹೈಕಮಾಂಡ್‍ಗೆ ಕಪ್ಪ ಕೊಟ್ಟಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಡೈರಿಯ ವಿವರಗಳನ್ನೇ ನೀಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಡೈರಿಯ ಪುಟಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈಗ ಇದೇ ಡೈರಿಯ ಪುಟಗಳನ್ನು ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಂ.ಎಲ್.ಸಿಗಳಾದ ಐವಾನ್ ಡಿಸೋಜಾ, ವಿ.ಎಸ್.ಉಗ್ರಪ್ಪ,ಹೆಚ್.ಎಂ.ರೇವಣ್ಣ ಅವರು ಬಿಜೆಪಿಯೂ ಹೈಕಮಾಂಡ್‍ಗೆ ಕಪ್ಪ ಕೊಟ್ಟಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು. ಇದೇ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ರಾಷ್ಟ್ರೀಯ ಸುದ್ದಿ ವಾಹಿನಿಯ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಕಾರ್ಯಕ್ರಮದಲ್ಲಿ ಸುದ್ದಿ ನಿರೂಪಕರು ಗೋವಿಂದರಾಜು ಅವರ ಮನೆಯಲ್ಲಿ ಸಿಕ್ಕ ಡೈರಿಯನ್ನು ಐಟಿ ಇಲಾಖೆಯಲ್ಲಿ ನೋಡಿದ್ರು ಅಂತಾ ಹೇಳಿದ್ದಾರೆ. ಇದನ್ನ ಐಟಿ ಅವರು ಕನ್ಫರ್ಮ್ ಮಾಡ್ಬೇಕು, ಆಂಕರ್ ಅಲ್ಲ ಎಂದರು.

    ಬಿಜೆಪಿ ಹೈಕಮಾಂಡ್ ನಾಯಕರಿಗೆ ಕಪ್ಪ ಸಂದಾಯವಾಗಿದೆ. ಸಾಮಾಜಿಕ ತಾಣಗಳಲ್ಲಿ ಈಗ ಡೈರಿ ಹೊರಬಂದಿದೆ. 391 ಕೋಟಿ ರಿಸೀವ್ ಮಾಡಿರುವ ಮಾಹಿತಿಯಿದೆ. ಬಂದ ಹಣ ಮತ್ತೆ ಬೇರೆಯವರಿಗೆ ಸಂದಾಯವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಇದೇ ವೇಳೆ ಬಿಜೆಪಿ ಮುಖಂಡರು, ನಕಲಿ ಡೈರಿಯಲ್ಲಿ ಬಿಜೆಪಿ ಹೈಕಮಾಂಡ್‍ಗೆ ಕಪ್ಪಕೊಟ್ಟಿರುವ ಬಗ್ಗೆ ನಕಲಿ ದಾಖಲೆ ಸೃಷ್ಟಿಸಲಾಗಿದೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕರಿಗೂ ಪತ್ರ ಬರೆದಿದ್ದಾರೆ.

     

  • ಉತ್ತರಪ್ರದೇಶ ಚುನಾವಣೆಯಲ್ಲೂ ರಾಜ್ಯದ ಡೈರಿ ಸದ್ದು – ಆರ್.ಜಿ. ವಿರುದ್ಧ ಹರಿಹಾಯ್ದ ಇರಾನಿ

    ಉತ್ತರಪ್ರದೇಶ ಚುನಾವಣೆಯಲ್ಲೂ ರಾಜ್ಯದ ಡೈರಿ ಸದ್ದು – ಆರ್.ಜಿ. ವಿರುದ್ಧ ಹರಿಹಾಯ್ದ ಇರಾನಿ

    ಅಮೇಥಿ: ಹೈಕಮಾಂಡ್‍ಗೆ ಕರ್ನಾಟಕ ಕಾಂಗ್ರೆಸ್ ನೀಡಿರುವ ಕಪ್ಪ ಕಾಣಿಕೆ ವಿಚಾರ ಕೇಂದ್ರದಲ್ಲೂ ಸದ್ದು ಮಾಡ್ತಿದೆ. ಕೇಂದ್ರ ಜವಳಿ ಸಚಿವೆ ಸ್ಮೃತಿ  ಇರಾನಿ ಡೈರಿ ಬಗ್ಗೆ ಪ್ರಸ್ತಾಪಿಸಿ ರಾಹುಲ್ ಗಾಂಧಿ ಮತ ಕ್ಷೇತ್ರ ಅಮೇಥಿಯಲ್ಲಿ ಹರಿಹಾಯ್ದಿದ್ದಾರೆ.

    ಉತ್ತರಪ್ರದೇಶದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಅಮೇಥಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಸ್ಮೃತಿ  ಇರಾನಿ, ಕಾಂಗ್ರೆಸ್ ಹೈಕಮಾಂಡ್‍ಗೆ ಸಾವಿರಾರು ಕೋಟಿಗಳಲ್ಲಿ ಹಣ ಸಂದಾಯವಾಗಿದೆ. ಐಟಿ ದಾಳಿ ವೇಳೆ ಸಿಕ್ಕ ಡೈರಿಯಲ್ಲಿ ಆರ್‍ಜಿ ಎಂಬ ಹೆಸರಿದೆ. ಆರ್‍ಜಿ ಅಂದ್ರೆ ಯಾರು? ಎಂದು ಪ್ರಶ್ನಿಸಿದ್ರು. ಈ ವೇಳೆ ಅಲ್ಲಿದ್ದ ಜನ ಆರ್‍ಜಿ ಅಂದ್ರೆ ರಾಹುಲ್ ಗಾಂಧಿ ಎಂದು ಕೂಗತೊಡಗಿದ್ರು.

    ರಾಹುಲ್ ಗಾಂಧಿ ಜನರ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ಜನರ ಮುಂದೆ ಅಭಿವೃದ್ಧಿಯ ಬಗ್ಗೆ ಮಾತಾಡ್ತಾರೆ ಎಂದು ಇರಾನಿ ಗುಡುಗಿದ್ರು.

    ಕಪ್ಪ ಕಾಣಿಕೆ ನೀಡಿರುವ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸಿಬಿಐ ನಿರ್ದೇಶಕರಿಗೆ ಬಿಜೆಪಿ ಸಂಸದರು ಪತ್ರ ಬರೆದಿದ್ದಾರೆ.

  • ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು

    ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು

    ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಬಂಡವಾಳ ಬಯಲಾಗುತ್ತೆ ಅಂತಾ ದಾವಣಗೆರೆಯಲ್ಲಿ ವಿಎಸ್ ಉಗ್ರಪ್ಪ ಬಾಂಬ್ ಹಾಕಿದ್ದಾರೆ. ಇನ್ನು ಹೆಚ್‍ಎಂ ರೇವಣ್ಣ ಕೂಡಾ ಬಿಜೆಪಿ ವಿರುದ್ಧ ಡೈರಿ ಬಾಂಬ್ ಸಿಡಿಸೋದಾಗಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ಬಿಜೆಪಿ ಮೇಲೆ ಡೈರಿ ಬಾಂಬ್ ಹಾಕಲು ತಯಾರಿ ನಡೆಸಿದ್ದಾರೆ.

    ಮುಂದಿನ ಎರಡು-ಮೂರು ದಿನಗಳಲ್ಲಿ ಬಿಜೆಪಿಯ ಕರ್ಮಕಾಂಡ ಬಯಲು ಮಾಡುತ್ತೇವೆ. ನಮ್ಮ ಬಳಿಯೂ ಡೈರಿಗಳಿವೆ, ಅವುಗಳನ್ನು ಶೀಘ್ರವೇ ಬಿಡುಗಡೆ ಮಾಡುತ್ತೆವೆ ಎಂದು ಸಿಎಂ ಆಪ್ತ, ಎಂಎಲ್‍ಸಿ ಹೆಚ್.ಎಂ. ರೇವಣ್ಣ ಹೇಳಿದ್ದಾರೆ.

    ನೆಲಮಂಗಲದ ಬೀರೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ರೇವಣ್ಣ, ಐಟಿ ಇಲಾಖೆ ಹಾಗೂ ಒಬ್ಬ ವ್ಯಕ್ತಿಯ ನಡುವಿನ ವಿಷಯ ಹೊರಹಾಕಲು ಬಿಜೆಪಿ ಕುತಂತ್ರ ಮಾಡಿದೆ. ಬಿಜೆಪಿಯವರು ಇಲಾಖೆಯನ್ನ ದುರುಪಯೋಗಪಡಿಸಿಕೊಂಡಿರುವುದು ಈ ಡೈರಿ ಬಿಡುಗಡೆ ವಿಚಾರದಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮಸಿ ಬಳಿಯುವ ನಿಟ್ಟಿನಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿ ಹುಟ್ಟುಹಾಕಿರುವ ಕಟ್ಟುಕಥೆಯ ಕುತಂತ್ರ ಎಂದು ರೇವಣ್ಣ ಯಡಿಯೂರಪ್ಪ ವಿರುದ್ಧ ಹರಿಹಾಯ್ದರು.

    ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಕೂಡ ಇದೇ ರೀತಿ ಬಾಂಬ್ ಸಿಡಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಬಿಜೆಪಿಯವರ ಹಾಗೂ ಯಡಿಯೂರಪ್ಪ ನವರ ಬಂಡವಾಳ ಬಯಲಾಗಲಿದೆ. ಬಿಜೆಪಿಯವರು ಹೈಕಮಾಂಡ್ ಗೆ ಎಷ್ಟು ಹಣವನ್ನು ನೀಡಿದ್ದಾರೆ ಎನ್ನುವ ಮಾಹಿತಿ ಸಹ ಇದೆ. ಬಿಜೆಪಿಯವರ ಡೈರಿಯು ಸಹ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಸುಳಿವು ನೀಡಿದ್ರು.

    ಕೇಂದ್ರ ಸಚಿವ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ನಡುವಿನ ಸಂಭಾಷಣೆ ಸ್ಪಷ್ಟವಾಗಿದೆ. ಜನರು ಬುದ್ಧಿವಂತರು, ಮುಂದಿನ ಚುನಾವಣೆಯಲ್ಲಿ ಯಾರು ಯೋಗ್ಯರು ಎನ್ನುವುದನ್ನು ಅವರೇ ನಿರ್ಧಾರ ಮಾಡುತ್ತಾರೆ ಅಂದ್ರು.

    ಗೋವಿಂದರಾಜು ರವರ ಮನೆ ಮೇಲೆ ಐಟಿ ರೇಡ್ ಅಗಿ ಒಂದು ವರ್ಷ ಕಳೆದಿದೆ. ಈಗ ಡೈರಿ ಹೇಗೆ ಸಿಕ್ಕಿತು? ಎನ್ನುವ ಪ್ರಶ್ನೆ ಕಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಡೀ ದೇಶದಲ್ಲಿ ಚೆಕ್ ಮುಖಾಂತರ ಹಣವನ್ನು ಪಡೆದು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಮುಖ್ಯಮಂತ್ರಿ ಏನಾದ್ರು ಇದ್ದರೆ ಅದು ಯಡಿಯೂರಪ್ಪ ಮಾತ್ರ ಎಂದು ವಿಎಸ್ ಉಗ್ರಪ್ಪ ಲೇವಡಿ ಮಾಡಿದ್ರು.

     

  • ಡೈರಿ ಸ್ಫೋಟ- ಮೈಸೂರಿನ ಸಿಎಂ ನಿವಾಸದ ಎದುರು ಬಿಜೆಪಿ ಪ್ರತಿಭಟನೆ

    ಡೈರಿ ಸ್ಫೋಟ- ಮೈಸೂರಿನ ಸಿಎಂ ನಿವಾಸದ ಎದುರು ಬಿಜೆಪಿ ಪ್ರತಿಭಟನೆ

    ಮೈಸೂರು: ರಾಜ್ಯ ನಾಯಕರಿಂದ ಕಾಂಗ್ರೆಸ್ ಹೈಕಮಾಂಡ್‍ಗೆ ಕಪ್ಪ ವಿಚಾರ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

    ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

    ಮೈಸೂರಿನಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಮುಖಂಡರಾದ ರಾಮದಾಸ್, ಎಂ.ಶಿವಣ್ಣ ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

     

  • ಈ ಕಾರಣಕ್ಕೆ ಈಗ ಬಿಎಸ್‍ವೈ ಸಿದ್ದು ಟೀಂ ಹಗರಣದ ದಾಖಲೆ ರಿಲೀಸ್ ಮಾಡಲ್ಲ

    ಈ ಕಾರಣಕ್ಕೆ ಈಗ ಬಿಎಸ್‍ವೈ ಸಿದ್ದು ಟೀಂ ಹಗರಣದ ದಾಖಲೆ ರಿಲೀಸ್ ಮಾಡಲ್ಲ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಆಂಡ್ ಟೀಂ ದೊಡ್ಡ ಹಗರಣ ಇದೆ. 4 ದಿನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಅಂತಾ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಈಗ ಎಲ್ಲ ಒಟ್ಟಾಗೋದು ಬೇಡ ಅಂತಾ ಸುಮ್ಮನಿದ್ದೇನೆ. ಈ ಹಗರಣದಲ್ಲಿ ಸಿದ್ದರಾಮಯ್ಯ ಕೈವಾಡ ಇದೆ. ಬಿಡುಗಡೆ ಮಾಡ್ತೀನಿ, ಕಾದು ನೋಡಿ ಅಂತೇಳಿದ್ರು.

    ಆ ಡೈರಿ ಗೋವಿಂದರಾಜುದೇ, ಅವರ ಬೆಡ್ ರೂಂನಲ್ಲಿ ಬೆಡ್ ಕೆಳಗೆ ಡೈರಿ ಸಿಕ್ಕಿದೆ. ಸಿಎಂ ಮನೆಯಲ್ಲಿ ಮಲ್ಕೊಂಡು ಏನ್ ರಿಯಾಕ್ಷನ್ ಕೊಡಬೇಕು ಅನ್ನೋದನ್ನು ಯೋಚನೆ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ರು.

    ಸಹರಾ ಡೈರಿ ಬೇರೆ, ಈ ಡೈರಿ ಬೇರೆ, ಈ ಡೈರಿ ಸುಮಾರು 27-28 ಪೇಜ್ ಇದೆ. ಇದು ಚುನಾವಣೆ ಗಿಮಿಕ್ ಅಲ್ಲ, ಗಿಮಿಕ್ ಆಗಿದ್ರೆ ಚುನಾವಣೆಗೆ ಮೂರು ತಿಂಗಳ ಮುಂಚೆ ರಿಲೀಸ್ ಮಾಡ್ತಿದ್ವಿ. ಮಾನ ಮರ್ಯಾದೆ ಇದ್ರೆ ಸಿಎಂ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದ್ರು.

  • ಕಾಂಗ್ರೆಸ್‍ಗೆ ನಿಜವಾದ ಸತ್ಯಮೇವ ಜಯತೇ ಆಗಿದೆ: ಸುರೇಶ್ ಕುಮಾರ್

    ಕಾಂಗ್ರೆಸ್‍ಗೆ ನಿಜವಾದ ಸತ್ಯಮೇವ ಜಯತೇ ಆಗಿದೆ: ಸುರೇಶ್ ಕುಮಾರ್

    ಬೆಂಗಳೂರು: ಗೋವಿಂದರಾಜು ಅವರದ್ದು ಎನ್ನಲಾದ ಡೈರಿಯಲ್ಲಿದ್ದ ಸ್ಫೋಟಕ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ ನಾಯಕರು ಫುಲ್ ಅಲರ್ಟ್ ಆದರು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮುಖಂಡರಾದ ಸುರೇಶ್ ಕುಮಾರ್ ಹಾಗೂ ಅಶ್ವತ್ಥನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿದರು.

    ನಿಜವಾದ ಸತ್ಯಮೇವ ಜಯತೇ ಆಗಿದೆ. ಹುಚ್ಚಾಸ್ಪತ್ರೆಗೆ ಯಾರನ್ನು ಕಳಿಸಬೇಕು ಕಾಂಗ್ರೆಸ್‍ನವರೇ ಹೇಳಲಿ. ಸಿಎಂ ಇದರಿಂದ ತಪ್ಪಿಸಿಕೊಳ್ಳೋಕೆ ಆಗೋದಿಲ್ಲ. ರಾಜ್ಯದ ಜನ ಕಾಂಗ್ರೆಸ್‍ನವರನ್ನು ತಪ್ಪಿಸಿಕೊಳ್ಳಲು ಬಿಡಬಾರದು. ರಾಜ್ಯದ ಹಣವನ್ನ ಕಪ್ಪ ಕಾಣಿಕೆಯನ್ನಾಗಿ ಸಾವಿರ ಕೋಟಿ ಕಾಂಗ್ರೆಸ್ ಹೈಕಮಾಂಡ್‍ಗೆ ಒಪ್ಪಿಸಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

    ಇದೇ ವೇಳೆ ಗೋವಿಂದರಾಜು ಅವರಿಗೆ ಟಾಂಗ್ ನೀಡಿದ ಸುರೇಶ್ ಕುಮಾರ್, ಗೋವಿಂದರಾಜು ಅವರು ಆಡಿಟ್ ಆಫೀಸ್‍ನಲ್ಲಿ ಕೆಲಸ ಮಾಡಬಹುದಿತ್ತು. ಬಹಳ ಚೆನ್ನಾಗಿ ಟೈಮು ಡೇಟ್ ಬರೆದಿಟ್ಟಿದ್ದಾರೆ. ಮೋತಿಲಾಲ್ ವೋರಾಗೆ 40 ಕೋಟಿ, ಆರ್.ಜಿ. ಆಫೀಸ್ ಅಂದ್ರೆ ಯಾರಿಗಾದ್ರೂ ಅದು ರಾಹುಲ್ ಗಾಂಧಿ ಕಚೇರಿ ಅಂತಾ ಗೊತ್ತಾಗುತ್ತೆ. ಸಿಎಂ ಈ ಬಗ್ಗೆ ಸಬೂಬು ನೀಡದೇ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

  • ರಾಷ್ಟ್ರಪತಿ ರೇಸ್‍ನಲ್ಲಿ ಇನ್ಫಿ ನಾರಾಯಣಮೂರ್ತಿ!

    ರಾಷ್ಟ್ರಪತಿ ರೇಸ್‍ನಲ್ಲಿ ಇನ್ಫಿ ನಾರಾಯಣಮೂರ್ತಿ!

    ನವದೆಹಲಿ: ದೇಶದ ಅತೀ ದೊಡ್ಡ ಸಂವಿಧಾನಿಕ ಹುದ್ದೆಗೆ ಕನ್ನಡಿಗನ ಹೆಸರು ಕೇಳಿಬರುತ್ತಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹೆಸರು ಈಗ ರಾಷ್ಟ್ರಪತಿ ಸ್ಥಾನಕ್ಕೆ ತೇಲಿಬಂದಿದೆ.

    ನಾರಾಯಣ ಮೂರ್ತಿ ಬೆಂಬಲಕ್ಕಾಗಿ ಬಿಜೆಪಿಯಲ್ಲಿ ಸದ್ದಿಲ್ಲದೆ ಪ್ರಯತ್ನ ನಡೆಯುತ್ತಿದೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

    2012ರಲ್ಲಿ ರಾಷ್ಟ್ರಪತಿ ಹುದ್ದೆಯನ್ನು ಆಲಂಕರಿಸಿದ ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ಅಧಿಕಾರ ಅವಧಿ ಜುಲೈನಲ್ಲಿ ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನಾಯಕರು ಹುಡುಕುತ್ತಿದ್ದು ನಾರಾಯಣ ಮೂರ್ತಿ ನೇಮಕ ಸಂಬಂಧ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ರಾಷ್ಟ್ರಪತಿ ಹುದ್ದೆಯ ರೇಸ್‍ನಲ್ಲಿ ಈ ಹಿಂದೆ ಬಿಜೆಪಿಯ ಹಿರಿಯ ನಾಯಕರಾದ ಎಲ್‍ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಹಾಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ಹೆಸರು ಈ ಹಿಂದೆ ಕೇಳಿಬಂದಿತ್ತು.

  • ಕುಮಾರಸ್ವಾಮಿ ದುರ್ಯೋಧನ ಇದ್ದಂತೆ, ರಣರಂಗದಲ್ಲೇ ತೊಡೆ ತಟ್ಟುತ್ತೇವೆ: ತೇಜಸ್ವಿನಿ ರಮೇಶ್

    ಕುಮಾರಸ್ವಾಮಿ ದುರ್ಯೋಧನ ಇದ್ದಂತೆ, ರಣರಂಗದಲ್ಲೇ ತೊಡೆ ತಟ್ಟುತ್ತೇವೆ: ತೇಜಸ್ವಿನಿ ರಮೇಶ್

    ರಾಮನಗರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿಯವರನ್ನ ದುರ್ಯೋಧನ ಎಂದು ಸಂಭೋಧಿಸಿದ್ದಲ್ಲದೇ, ಅವರಿಗೆ ಮಾತಿನಲ್ಲಿ ಉತ್ತರವನ್ನ ನೀಡುವುದಿಲ್ಲ ರಣರಂಗದಲ್ಲೇ ದುರ್ಯೋಧನನಿಗೆ ತೊಡೆ ತಟ್ಟುತ್ತೇವೆ ಎಂದು ಮಾಜಿ ಸಂಸದೆ ತೇಜಸ್ವಿನಿ ರಮೇಶ್ ತಿರುಗೇಟು ನೀಡಿದ್ದಾರೆ.

    ಇಂದು ರಾಮನಗರದ ಪರಿವೀಕ್ಷಣ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು ತನ್ನನ್ನು ಕ್ರ್ಯಾಕ್ ಎಂದು ಕರೆದಿದ್ದಾರೆ. ಅದಕ್ಕೆ ನಾನು ಪರ್ವರ್ಟ್ ಎಂದು ಹೇಳಬೇಕಾಗುತ್ತೆ, ಅದನ್ನ ಹೇಳುವುದಕ್ಕೆ ಇಷ್ಟವಿಲ್ಲ. ಜನ ಅದನ್ನ ಅರ್ಥ ಕೂಡಾ ಮಾಡಿಕೊಳ್ಳಲ್ಲ. ಮಾಜಿ ಸಿಎಂ ಎಂಬ ಅಹಂಕಾರ ಬಿಟ್ಟು ಸರಳ ಸಜ್ಜನ ರಾಜಕಾರಣಿಯಂತೆ ಇರಲಿ. ಅವರ ಮಾತುಗಳೇ ಅವರ ಸಂಸ್ಕøತಿಯನ್ನ ತೋರಿಸುತ್ತೆ ಅಂದ್ರು.

    ನಾನು ಇಬ್ಬರನ್ನ ಕೌರವರು ಅಂತಾ ಹೇಳಿದ್ದೆ, ಅದರಲ್ಲಿ ತಪ್ಪೇನಿದೆ? ಹೊಂದಾಣಿಕೆ ರಾಜಕಾರಣ ಮಾಡ್ತಾ ಇರೋದಕ್ಕೆ ಕೌರವರು ಅಂತಾ ಹೇಳಿದ್ದು ಅಂದ್ರು.

    ಕಾಂಗ್ರೆಸ್ ಹಾಗೂ ಜೆಡಿಎಸ್ ಕೌರವ ಪಾಳಯವಿದ್ದಂತೆ. ಹೆಚ್‍ಡಿಕೆ ಹಾಗೂ ಡಿಕೆ ಶಿವಕುಮಾರ್ ದುರ್ಯೋಧನ- ದುಶ್ಯಾಸನರಿದ್ದಂತೆ ಎಂದು ಕಳೆದ ವಾರ ತೇಜಸ್ವಿನಿ ರಮೇಶ್ ಹೇಳಿಕೆ ನೀಡಿದ್ದರು.

  • ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗಕ್ಕೆ ರೆಡಿಯಾದ ಬಿಎಸ್‍ವೈ!

    ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗಕ್ಕೆ ರೆಡಿಯಾದ ಬಿಎಸ್‍ವೈ!

    -ಮಾಜಿ ಸಚಿವ ಕುಮಾರ್ ಬಂಗಾರಪ್ಪಗೆ ಬಿಜೆಪಿಯಿಂದ ಎಂಪಿ ಟಿಕೆಟ್..?

    ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ತಮ್ಮ ಸ್ವಕ್ಷೇತ್ರವಾದ ಶಿಕಾರಿಪುರವನ್ನು ಮಗ ಬಿ.ವೈ. ರಾಘವೇಂದ್ರ ಅವರಿಗೆ ಬಿಟ್ಟು ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

    ಬಿಎಸ್‍ವೈ ತಾವು ಮುಂದಿನ ಚುನಾವಣೆಗಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಅಥವಾ ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದತ್ತ ಕಣ್ಣು ಹಾಕಿದ್ದಾರೆ. ಈ ಕುರಿತು ಅವರು ಈಗಾಗಲೇ ಆಪ್ತರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

    ಶಿವಮೊಗ್ಗ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಹಿಡಿತ ಸಾಧಿಸಲು ಬಿಎಸ್ ವೈ ಮಾಸ್ಟರ್ ಪ್ಲಾನ್ ಮಾಡಿದ್ದು ಮಾಜಿ ಸಚಿವ ಕುಮಾರ್ ಬಂಗಾರಪ್ಪಗೆ ಬಿಜೆಪಿಯಿಂದ ಎಂಪಿ ಟಿಕೆಟ್ ನೀಡುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿಸುವ ಸಾಧ್ಯತೆಗಳಿವೆ. ಅದಕ್ಕಾಗಿ ಈಗಾಗಲೇ ಕುಮಾರ್ ಬಂಗಾರಪ್ಪ ಅವರ ಜೊತೆ ಎರಡು ಸುತ್ತಿನ ಮಾತುಕತೆ ನಡೆಸಿರುವ ಬಿಎಸ್‍ವೈ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

    ಕುಮಾರ್ ಬಂಗಾರಪ್ಪ ಬಿಜೆಪಿಗೆ ಬಂದರೆ ಸೊರಬ ಕ್ಷೇತ್ರದಿಂದ ಟಿಕೆಟ್ ನೀಡುವುದು ಅಥವಾ ಸಂಸದ ಎಲೆಕ್ಷನ್ ಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ನೀಡಬಹುದು ಎಂದು ಬಿಎಸ್‍ವೈ ಲೆಕ್ಕಾಚಾರ ಹಾಕಿದ್ದಾರೆ. ಆದ್ರೆ ಯಡಿಯೂರಪ್ಪ ಅವರ ಭರವಸೆಗೆ ಯೋಚನೆ ಮಾಡ್ತಿನಿ ಅಂತಾ ಇತ್ತ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.

     

  • 50 ವರ್ಷಗಳ ದೇಶವನ್ನ ಲೂಟಿ ಮಾಡಿದ್ದಕ್ಕೆ ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಶೆಟ್ಟರ್

    50 ವರ್ಷಗಳ ದೇಶವನ್ನ ಲೂಟಿ ಮಾಡಿದ್ದಕ್ಕೆ ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಶೆಟ್ಟರ್

    – 37 ನೇ ದಿನಕ್ಕೆ ಕಾಲಿಟ್ಟ ಸಸಲಾಟ್ಟಿ ಏತ ನೀರಾವರಿ ಪ್ರತಿಭಟನೆ

    ಬಾಗಲಕೋಟೆ: ಐವತ್ತು ವರ್ಷಗಳ ಕಾಲ ಕಾಂಗ್ರೆಸ್‍ನವರು ಆಡಳಿತ ನಡೆಸಿ ದೇಶ ಲೂಟಿ ಹೊಡೆದಿದ್ದಾರೆ ಹಾಗಾಗಿ ಅವ್ರ ಮನೆಗಳ ಮೇಲೆಯೇ ಐಟಿ ದಾಳಿಯಾಗುತ್ತಿವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಹೇಳಿದ್ದಾರೆ.

    ಸಸಲಾಟ್ಟಿ ಏತ ನೀರಾವರಿ ಜಾರಿಗೆ ಆಗ್ರಹಿಸಿ ನೆಡೆಯುತ್ತಿರುವ ರೈತ ಪ್ರತಿಭಟನೆ 37ನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಬಿಜೆಪಿ ಜಿಲ್ಲಾ ಘಟಕ ಇಂದು ಮುಧೋಳ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನ ಹಮ್ಮಿಕೊಂಡಿತ್ತು. ಸಮಾವೇಶದಲ್ಲಿ ಜಿಲ್ಲೆಯ ಬಿಜೆಪಿ ನಾಯಕರು ಸಮಾವೇಶದಲ್ಲಿ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

    ಜಗದೀಶ್ ಶೆಟ್ಟರ್ ಮಾತನಾಡಿ, ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿಯಾಗಿದೆ. ಆದರೂ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡ್ತಿಲ್ಲ, ಕೂಡಲೇ ಅವ್ರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ರು. ಇನ್ನು ಎಂಎಲ್‍ಸಿ ಗೋವಿಂದ್‍ರಾಜ್ ಅವ್ರ ಡೈರಿ ಬಗ್ಗೆ ಸೂಕ್ತ ತನಿಖೆಯಾದ್ರೆ ಸಿಎಂ ಸಿದ್ಧರಾಮಯ್ಯ ಮನೆಗೆ ಹೋಗ್ತಾರೆ. ಇನ್ನು ಡೈರಿ ಬಗ್ಗೆಯೂ ತನಿಖೆಯಾಗಲಿ, ಅನಂತ್‍ಕುಮಾರ್ ಹಾಗು ಯಡಿಯೂರಪ್ಪ ಡೈರಿ ಸಂಭಾಷಣೆ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿದರು.

    ಸಿಎಂ ಸಿದ್ದರಾಮಯ್ಯ ದಾಖಲೆ ಇಲ್ಲದೇ ಬಿಎಸ್‍ವೈ ಬಗ್ಗೆ ಮಾತನಾಡ್ತಾರೆ. ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಪಕ್ಕದ ಜಿಲ್ಲೆಯವ್ರೇ ಆದ್ರೂ ಈ ಭಾಗದ ನೀರಾವರಿ ಯೋಜನೆ ಬಗ್ಗೆ ಕಿಂಚಿತ್ತೂ ಚಿಂತಿಸಿಲ್ಲ. ರಾಜ್ಯ ಸರ್ಕಾರಕ್ಕೆ ರೈತ ಪರ ಕಾಳಜಿ ಇದ್ರೆ ಈ ಯೋಜನೆಯನ್ನ ಕೂಡಲೇ ಜಾರಿಗೊಳಿಸಬೇಕು. ಜಾರಿ ಆಗದೇ ಇದ್ದರೆ ಮುಂದೆ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಏತ ನೀರಾವರಿ ಯೋಜನೆ ಜಾರಿಗೊಳಿಸುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿದರು.

    ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಈ ಭಾಗದ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ರೆ ಈ ಬಾರಿಯ ಬಜೆಟ್‍ನಲ್ಲಿ 10 ಸಾವಿರ ಕೋಟಿ ರೂ. ತೆಗೆದಿಡಬೇಕು. ನೀರಾವರಿ ಯೋಜನೆಗಳ ಅಭಿವೃದ್ಧಿ ಬಗ್ಗೆ ಇರುವ ಅವಕಾಶಗಳನ್ನ ಸಚಿವ ಎಂ.ಬಿ ಪಾಟೀಲ್ ಸರಿಯಾಗಿ ಬಳಸಿಕೊಳ್ಳದಿದ್ರೆ ಮುಂದಿನ ಜನ್ಮದಲ್ಲಿ ಅವರು ನೀರಾವರಿ ಮಂತ್ರಿ ಆಗಲ್ಲ ಎಂದರು.

    ಬ್ರಿಗೇಡ್ ಸಮಾವೇಶದಲ್ಲಿ ಭಾಗವಹಿಸುವಿಕೆ ಬಗ್ಗೆ ಮಾತನಾಡಿ, ಪಕ್ಷದ ವತಿಯಿಂದ ಬ್ರಿಗೇಡ್ ಸಮಾವೇಶ ಮಾಡಲಾಗುತ್ತೆ. ಇನ್ನು ಯಡಿಯೂರಪ್ಪ ಹಾಗೂ ನಮ್ಮ ಮಧ್ಯೆ ಇದ್ದ ಸಮಸ್ಯೆ ಬಗೆಹರಿದಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿ ನಕ್ಕರು.