Tag: ಬಿಜೆಪಿ

  • ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ

    ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದ್ರ ಅಹಂನಲ್ಲಿ ಮಾತಾಡ್ತಿದ್ದಾರೆ – CT ರವಿ ವಾಗ್ದಾಳಿ

    -RSSನ 100 ವರ್ಷದ ಇತಿಹಾಸದಲ್ಲಿ ಭಯೋತ್ಪಾದನೆ ಮಾಡಿದ ಒಂದೇ ಒಂದು ಉದಾಹರಣೆ ಇಲ್ಲ

    ಬೆಂಗಳೂರು: ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದರ ಅಹಂನಲ್ಲಿ ಮಾತಾಡ್ತಿದ್ದಾರೆ ಎಂದು ಎಂಎಲ್‌ಸಿ ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ (ಅ.12) ಪ್ರಿಯಾಂಕ್ ಖರ್ಗೆ (Priyank Kharge) ಸಿಎಂಗೆ ಪತ್ರ ಬರೆದು, ಸಂಘದ ಚಟುವಟಿಕೆ ನಿರ್ಬಂಧಕ್ಕೆ ಮುಂದಾಗಿದ್ದಾರೆ. ನಾನು ಪ್ರಿಯಾಂಕ್ ಖರ್ಗೆ ಅವರನ್ನು ಸಾರ್ವಜನಿಕ ಚರ್ಚೆಗೆ ಆಹ್ವಾನ ಕೊಡ್ತೇನೆ. ಅವರಿಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ. ಅದರ ಅಹಂನಲ್ಲಿ ಮಾತಾಡ್ತಿದ್ದಾರೆ. ಸಂಘದ ನೂರು ವರ್ಷದ ಇತಿಹಾಸದಲ್ಲಿ ಭಯೋತ್ಪಾದನೆ ಮಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಆದರೆ ಪ್ರಕೋಪ, ವಿಕೋಪ ಸಮಸ್ಯೆಗಳ ಸಂದರ್ಭದಲ್ಲಿ ನೆರವಿಗೆ ಧಾವಿಸಿದ ನೂರಾರು ಉದಾಹರಣೆಗಳಿವೆ. ಆರ್‌ಎಸ್‌ಎಸ್ ಪ್ರೇರಣೆ ಪಡೆದು ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಸಮಾಜಕ್ಕೆ ತನ್ನದೇ ಆದ ಸಕಾರಾತ್ಮಕ ಕೊಡುಗೆ ಕೊಡ್ತಿದೆ. ಸಕಾರಾತ್ಮಕ ಕೊಡುಗೆ ಕೊಡ್ತಿರೋ ಸಂಘವನ್ನು ನಕಾರಾತ್ಮಕವಾಗಿ ಬಿಂಬಿಸೋದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

    ಕಾಂಗ್ರೆಸ್ (Congress) ಭ್ರಷ್ಟಾಚಾರದ ಪಕ್ಷ, ಭ್ರಷ್ಟಾಚಾರದ ಪಿತಾಮಹರೇ ಕಾಂಗ್ರೆಸ್‌ನಲ್ಲಿದ್ದಾರೆ. ಇವರೇ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಕೊಟ್ಟು ಬೆಳೆಸಿದ್ದಾರೆ. ಅಂತಹ ಕಾಂಗ್ರೆಸ್‌ನಲ್ಲಿರುವ ನೀವು ಸಂಘದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಪಾಕ್ ಪರ ಘೋಷಣೆ, ಗೋಹತ್ಯೆ, ಗೋಭಕ್ಷಣೆಗೆ ಕುಮ್ಮಕ್ಕು ಕೊಡೋರನ್ನು ಬೆಂಬಲಿಸುವ ನೀಚತನ ನಿಮ್ಮ ಪಕ್ಷಕ್ಕಿದೆ. ಗಾಂಧಿಯವರ ಹತ್ಯೆಗೂ ಸಂಘಕ್ಕೂ ಸಂಬಂಧ ಇಲ್ಲ ಅಂತ ನೆಹರೂ ಅವರು ನೇಮಿಸಿದ ಸಮಿತಿಗಳೇ ಹೇಳಿವೆ. ಆದರೂ ಮತ್ತೆ ಗಾಂಧಿ ಹತ್ಯೆ ಮಾಡಿದ್ದು ಆರ್‌ಎಸ್‌ಎಸ್ ಅಂತ ಸುಳ್ಳು ಹೇಳ್ತಿದ್ದೀರಿ. ಸರ್ವಾಧಿಕಾರಿ ಮನಸ್ಥಿತಿ ಅಂದಿದ್ದೀರಿ, ತುರ್ತು ಪರಿಸ್ಥಿತಿ ಹೇರಿದ ಇತಿಹಾಸ ನಿಮ್ಮ ಪಕ್ಷಕ್ಕಿದೆ. ಸರ್ವಾಧಿಕಾರಿ ಅನ್ನೋದೂ ನಿಮ್ಮ ಪಕ್ಷಕ್ಕೆ ಅನ್ವಯ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಇದೇ ವೇಳೆ RSS ಅಜೆಂಡಾ ಇಟ್ಕೊಂಡೇ ನೀವು ಚುನಾವಣೆಗೆ ಬನ್ನಿ. ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬರಲಿ. ನೀವು ಗೆಲ್ತೀರೋ ಇಲ್ಲವೋ ಎಂದು ನೋಡೇಬಿಡೋಣ ಎಂದು ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

    ಇನ್ನೂ ಸಿಎಂ ಅವರಿಂದ ಸಚಿವರಿಗೆ ಡಿನ್ನರ್ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಅವರು ಗುತ್ತಿಗೆದಾರರ ಕಮಿಷನ್ ಆರೋಪ ಮಾಡಿದ್ದಾರೆ, ಅದರ ಬಗ್ಗೆ ಕಳಕಳಿ ವ್ಯಕ್ತಪಡಿಸಬೇಕಿತ್ತು. ಇದು ಅಪಮಾನ ಅಂತ ಹೇಳಬೇಕಿತ್ತು. ಇನ್ನೂ ಸಿಎಂ ಹೆಲಿಕಾಪ್ಟರ್ ಸಮೀಕ್ಷೆ ಮಾಡಿದರು, ಆದರೆ ಕೆಳಗಿಳಿದು ರೈತರ ಕಷ್ಟ ಕೇಳಲಿಲ್ಲ. ಮೇಲಷ್ಟೇ ಹಾರಾಟ ಮಾಡಿ ರೈತರ ಕಷ್ಟ ಕೇಳಲಿಲ್ಲ. ಸಚಿವರ ಔತಣ ಕೂಟ ಜನರು ಸಂಕಷ್ಟದಲ್ಲಿದ್ದಾಗ ಇಟ್ಕೊಳ್ಳೋದಲ್ಲ. ಸಂವೇದನೆ ಇರೋರು ಈ ಔತಣ ಕೂಟ ಇಟ್ಕೊಳ್ಳಲ್ಲ. ಸಿಎಂಗೆ ಸಂವೇದನೆ ಇದೆಯಾ? ಎಂದಿದ್ದಾರೆ.

    ಬಿಕೆ ಹರಿಪ್ರಸಾದ್ ಅವರು ಆರ್‌ಎಸ್‌ಎಸ್ ನೋಂದಣಿ ಆಗಿಲ್ಲ ಎಂದು ಹೇಳಿದ್ದಾರೆ. ಹೀಗೆಲ್ಲ ಮಾತಾಡಿದರೆ ಸಂಪುಟದಲ್ಲಿ ಸ್ಥಾನ ಸಿಗುತ್ತದೆ, ಅಧಿಕಾರ ಪಡೆದುಕೊಳ್ಳಲು ಹರಿಪ್ರಸಾದ್ ಹೀಗೆ ಮಾತಾಡಿದ್ದಾರೆ. ಇನ್ನೂ ದೇಶಪಾಂಡೆ ಅವರು ಹಿರಿಯರು, ಅವರು ಹೇಳಿದ್ದು ಸರಿ ಇದೆ. ನಾವು ಹೇಳಿದರೆ ಟೀಕೆ, ರಾಜಕೀಯ ಅಂತಾರೆ. ಆದರೆ ಅವರ ಪಕ್ಷದ ದೇಶಪಾಂಡೆ ಅವರೇ ಗ್ಯಾರಂಟಿಗಳಿಂದ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ನಾನು  ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

  • RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ

    RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ

    ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಮನವಿ ಸಲ್ಲಿಸಿದ್ದಾರೆ. ಆದ್ರೆ ಪ್ರಿಯಾಂಕ್‌ ಖರ್ಗೆ ಅವರ ಪತ್ರಕ್ಕೆ ಈಗ ಕಾಂಗ್ರೆಸ್‌ ಶಾಸಕರೇ (Congress MLA) ಕೌಂಟರ್‌ ಕೊಡುವ ಕೆಲಸ ಮಾಡಿದ್ದಾರೆ.

    ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ (MY Patil) ಅನುದಾನಿತ ಶಾಲೆಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆದಿದೆ. ಅಫಜಲಪುರ್ ಪಟ್ಟಣದ ಬಸವೇಶ್ವರ ವೃತದ ಬಳಿಯಿರುವ ಶಾಸಕರ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ನಿನ್ನೆ (ಅ.12) ಸಂಜೆ ಆಕರ್ಷಕ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲಾಗಿದೆ.

    ಪಥಸಂಚಲನದಲ್ಲಿ ನೂರಾರು ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಳಿಕ ಶಾಲಾ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ. ಇದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.

    ನಿಗಾ ಇಡಲು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ
    ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಭಾನುವಾರ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

    ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.

  • RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

    RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

    ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.

    ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಅ. 4ರಂದು ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಪರಿಶೀಲಿಸಿ ಕೂಡಲೆ ಅಗತ್ಯ ಕ್ರಮ ವಹಿಸಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ಗೂ ತಾಲಿಬಾನ್‌ಗೂ (Taliban) ಏನೂ ವ್ಯತ್ಯಾಸ ಇಲ್ಲ. ಸರ್ಕಾರಿ ಶಾಲೆಯಲ್ಲಿ ಬೈಠಕ್ ಆಗಬಾರದು. ನಮ್ಮದು ಬಸವ ತತ್ವದ ಮೇಲೆ ನಡೆಯುವ ಸರ್ಕಾರ ಅಂದಿದ್ದಾರೆ.

    ನಿಗಾ ಇಡಲು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ
    ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

    ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.

  • ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    – ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ 29 ಸ್ಥಾನ ಹಂಚಿಕೆ

    ಪಾಟ್ನಾ: ಬಿಹಾರ ಚುನಾವಣೆ ಘೋಷಣೆಯಾದ ದಿನದಿಂದಲೂ ಕಾಡುತ್ತಿದ್ದ ಸಮಸ್ಯೆ ಈಗ ಬಗೆಹರಿದಿದೆ. ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರದ ಮಿತ್ರ ಪಕ್ಷಗಳಲ್ಲಿ ತಲೆದೋರಿದ್ದ ಸೀಟು ಹಂಚಿಕೆ (Bihar Seat Share) ಕಗ್ಗಂಟು ಕಡೆಗೂ ಇತ್ಯರ್ಥವಾಗಿದೆ. ಅದರಂತೆ ಬಿಜೆಪಿ, ಎನ್‌ಡಿಎ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ (Chirag Paswan) ಅವರ ಲೋಕಜನಶಕ್ತಿ ಪಾರ್ಟಿ (ರಾಮ್ ವಿಲಾಸ್ ಪಾಸ್ವಾನ್ ಬಣ) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

    ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಬಿಡುಗಡೆ ಮಾಡಿದ್ದಾರೆ. 243 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಿಹಾರದಲ್ಲಿ ಎನ್‌ಡಿಎ ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಯು ತಲಾ 101 ಸೀಟುಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ ಅವರ ಲೋಕಜನಶಕ್ತಿ ಪಾರ್ಟಿ (ರಾಮ್ ವಿಲಾಸ್ ಪಾಸ್ವಾನ್ ಬಣ) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ರಾಷ್ಟ್ರೀಯ ಲೋಕ ಮೋರ್ಚಾ ಹಾಗೂ ಜಿತನ್ ರಾಮ್ ಮಾಂಝಿಯವರ ಹಿಂದೂಸ್ತಾನ್ ಆವಮ್ ಮೋರ್ಚಾ ಪಕ್ಷಗಳು ತಲಾ 6 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

    ಬಗೆಹರಿದ ದುಗುಡ
    ಲೋಕಜನಶಕ್ತಿ ಪಾರ್ಟಿಯ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ 40-45 ಸ್ಥಾನಗಳಿಗೆ ಬೇಡಿಕೆಯಿಡುತ್ತಾ ಬಂದಿದ್ದರು. ಆದ್ರೆ ಬಿಜೆಪಿ 25 ಸ್ಥಾನಗಳನ್ನು ನೀಡಲು ಮಾತ್ರವೇ ಒಪ್ಪಿಕೊಂಡಿತ್ತು. ಈ ನಡುವೆ ಚುನಾವಣಾ ಚಾಣಕ್ಯ ಪ್ರಶಾಂತ್‌ ಕಿಶೋರ್‌ ಅವರ ಜನ್‌ ಸೂರಜ್‌ ಪಕ್ಷ ಪಾಸ್ವಾನ್‌ ಅವರನ್ನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿತ್ತು. ಸೀಟು ಹಂಚಿಕೆ ಕುರಿತು ಎಲ್‌ಜೆಪಿ ತನ್ನ ನಿರ್ಧಾರ ಬದಲಾಯಿಸುವಂತೆ ಮನವೊಲಿಸಲು ಧರ್ಮೇಂದ್ರ ಪ್ರಧಾನ್‌ ಹಲವಾರು ಸುತ್ತಿನ ಸಭೆ ನಡೆಸಿದರು. ಕೊನೆಗೆ ಜೆಡಿಯು, ಬಿಜೆಪಿ ಒಮ್ಮತದ ಮೇರೆಗೆ 29 ಸ್ಥಾನಗಳನ್ನ ಹಂಚಿಕೆ ಮಾಡಲಾಯಿತು.

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

    ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆದಿತ್ತು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. 2024ರಲ್ಲಿ ಮತ್ತೆ ನಿತೀಶ್‌ ಕುಮಾರ್‌ ಮಹಾಘಟಬಂಧನ್ ಜೊತೆಗಿನ ಸಂಬಂಧ ಕಡಿದುಕೊಂಡು ಎನ್‌ಡಿಎ ಜೊತೆಗೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

  • ʻಏಯ್ ಕರಿ ಟೋಪಿ ಎಂಎಲ್‌ಎ ಬಾರಪ್ಪʼ – ಡಿಕೆಶಿ Vs ವರ್ಸಸ್ ಮುನಿರತ್ನ ನಡ್ವೆ ʻಕರಿ ಟೋಪಿʼ ಕದನ!

    ʻಏಯ್ ಕರಿ ಟೋಪಿ ಎಂಎಲ್‌ಎ ಬಾರಪ್ಪʼ – ಡಿಕೆಶಿ Vs ವರ್ಸಸ್ ಮುನಿರತ್ನ ನಡ್ವೆ ʻಕರಿ ಟೋಪಿʼ ಕದನ!

    ಬೆಂಗಳೂರು: ಡಿಸಿಎಂ ಡಿಕೆಶಿ ವರ್ಸಸ್ ಮುನಿರತ್ನ (DK Shivakumar Vs Munirathna) ನಡುವೆ ಮತ್ತೆ ಮಾತಿನ ಡಿಶುಂ ಡಿಶುಂ ಜೋರಾಗಿದೆ. ರಾಜಕೀಯ ಹಾದಿ ರಂಪ ಬೀದಿ ರಂಪ ಮಾಡಿಕೊಂಡಿದ್ದಾರೆ. ಕರಿ ಟೋಪಿ ಕಲಹ..! ಜಗಳ..ಜಟಾಪಟಿ ಜಿದ್ದಿಗೆ ಜೆ.ಪಿ.ಪಾರ್ಕ್ ಸಾಕ್ಷಿ ಆಯ್ತು. ಎಲ್ಲರೆದುರೇ ಹಗೆತನ ಪ್ರದರ್ಶನ ಆಗಿದ್ದು, ಡಿಕೆಶಿಗೆ ಸ್ಥಳದಲ್ಲೇ ಕೌಂಟರ್ ಕೊಟ್ಟಿದ್ದಾರೆ. ಹಾಗಾದ್ರೆ ಕಾಲು ಕೆರೆದು ಜಗಳ ತೆಗೆದ್ರಾ ಡಿಕೆಶಿ? ಏಯ್ ಕರಿ ಟೋಪಿ ಎಂಎಲ್‌ಎ ಎಂದು ಕರೆದಿದ್ದು ಏಕೆ? ಹಳೇ ದುಷ್ಮನಿಗಳ ನಯಾ ವಾರ್ ಸೀನ್ ಟು ಸೀನ್ ರೋಚಕ ಸ್ಟೋರಿ ಇಲ್ಲಿದೆ ನೋಡಿ.

    ಗೇಲಿ.. ಅಪಹಾಸ್ಯ.. ಲೇವಡಿ.. ಕುಚೋದ್ಯ.. ಕಿಚಾಯಿಸಿದ ಡಿಕೆ.. ಕೋಪಗೊಂಡ ಮುನಿರತ್ನ.. ಬಹಿರಂಗ ವೇದಿಕೆಯಲ್ಲೇ ಡಿಕೆಶಿ ವರ್ಸಸ್ ಮುನಿ ಡೈಲಾಗ್ ವಾರ್. ಕುಂದು-ಕೊರತೆ ಆಲಿಸುವ ಸಭೆಯಲ್ಲಿ ಅತಿರಂಜನೆಯ ಪ್ರಹಸನ. ಇವತ್ತು ಬೆಂಗಳೂರಿನ ಜೆಪಿ ಪಾರ್ಕ್ ನಲ್ಲಿ (Bengaluru JP Park) ದೊಡ್ಡ ಹೈಡ್ರಾಮಾವೇ ನಡೆಯಿತು.

    ಹಳೆ ದುಷ್ಮನಿ. ಹೊಸ ದಂಗಲ್ ಜೋರಾಗಿತ್ತು. ಬೇಕಂತಲೇ ಕೆಣಕಿದ ಡಿಕೆ. ಸೆಟೆದು ನಿಂತ ಮುನಿರತ್ನ. ಗಣವೇಷದಲ್ಲೇ ಕಾರ್ಯಕ್ರಮಕ್ಕೆ ಬಂದಿದ್ದ ಮುನಿರತ್ನರನ್ನ `ಕರಿಟೋಪಿ ಎಂಎಲ್‌ಎ’ (Kari Topi MLA) ಬಾ ಎಂದು ಡಿಕೆಶಿ ಅಣಕಿಸಿದ್ರು. ಈ ವೇಳೆ ಕೋಪಗೊಂಡು ಮುನಿರತ್ನ ವೇದಿಕೆಗೆ ನುಗ್ಗಿದ್ರು. ಆಗ ಗಲಾಟೆ ಜೋರಾಯ್ತು.

    ಯೆಸ್, ಜೆ.ಪಿ ಪಾರ್ಕ್‌ನಲ್ಲಿ ಇವತ್ತು ಡಿಕೆಶಿ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ರು. ಆದ್ರೆ ಸ್ಥಳೀಯ ಶಾಸಕ, ಸಂಸದರಿಗೆ ಆಹ್ವಾನ ಇಲ್ಲ ಎಂದು ಮುನಿರತ್ನ ಆಕ್ರೋಶ ಹೊರಹಾಕಿದ್ರು. ನಡಿಗೆ ಮುಗಿಸಿ ವೇದಿಕೆ ಕಾರ್ಯಕ್ರಮಕ್ಕೆ ಡಿಕೆಶಿ ಅಗಮಿಸಿದಾಗ ಮುನಿರತ್ನ ಪ್ರೋಟೋಕಾಲ್ ಪ್ರಶ್ನಿಸಿದ್ದಾರೆ. ಆಗ ಮೈಕ್ ಕಿತ್ತುಕೊಂಡು ಮುನಿರತ್ನ ಆಕ್ರೋಶ ಹೊರಹಾಕ್ತಾರೆ. ಆದ್ರೆ ಡಿಕೆಶಿ ಅಮೇಲೆ ಮಾತಾಡೋಣ ಎಂದಷ್ಟೇ ಹೇಳ್ತಾರೆ. ಅಲ್ಲಿ ನಡೆದಿದ್ದೇನು..?

    ಮುನಿರತ್ನ: ಒಂದೇ ಒಂದು ನಿಮಿಷ ಮೈಕ್ ಕೊಡಿ
    ಡಿಕೆಶಿ: ಕೂತುಕೊಳ್ಳಿ, ಅಮೇಲೆ ಮಾತಾಡೋಣ
    ಮುನಿರತ್ನ: ನೀವ್ ಮೈಕ್ ಕೊಡಿ ನಾನ್ ಮಾತಾಡ್ತೀನಿ
    ಮುನಿರತ್ನ: ಎಲ್ಲ ಮತದಾರ ದೇವರುಗಳಿಗೆ ನಮಸ್ಕಾರ, ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇಲ್ಲ, ಆದರೂ ಬೆಂಗಳೂರಿನ ಓರ್ವ ಪ್ರಜೆಯಾಗಿ ಬಂದಿದ್ದೇನೆ, ನಿಮ್ಮ ಜೊತೆ ನಾನು ಕೂತುಕೊಳ್ತೇನೆ.
    ಮುನಿರತ್ನ: ಇದು ಕರ್ನಾಟಕ ರಾಜ್ಯ ಸರ್ಕಾರದ ಕಾರ್ಯಕ್ರಮ.. ಒಬ್ಬ ಶಾಸಕನಿಗೆ ಏನು ಗೌರವ ಕೊಡಬೇಕೋ ಕೊಟ್ಟಿದ್ದಾರೆ. ಅವರು ಆಹ್ವಾನ ಮಾಡಿದ್ದಾರೆ ಅದಕ್ಕೆ ಸಂತೋಷ.  ಒಬ್ಬ ಸಂಸದರು ಇಲ್ಲಿ ಇಲ್ಲ. ಶಾಸಕರು ಇಲ್ಲ. ಇದು ಸಾರ್ವಜನಿಕರ ಕುಂದುಕೊರತೆ ಸಭೆನಾ ಅಂತಾ ನನಗೆ ಗೊತ್ತಿಲ್ಲ. ನೀವು ನನಗೆ ಅವಮಾನ ಮಾಡ್ತಿರೋದು ಮೊದಲನೇ ತಪ್ಪು. ಇದು ಸರ್ಕಾರದ ಕಾರ್ಯಕ್ರಮ. ಮುಖ್ಯ ಆಯುಕ್ತರೇ ಈವರೆಗೂ ನನಗೆ ಆಹ್ವಾನ ಕೊಟ್ಟಿಲ್ಲ. ನಿಮಗೆ ಗೊತ್ತಿರಲಿ. ರಾಜಕೀಯನ ಆಮೇಲೆ ಮಾತಾಡ್ರಿ.
    ಡಿಕೆಶಿ: ನಾವು ಆಮೇಲೆ ಮಾತಾಡೋಣ..

    ಮುನಿರತ್ನ: ರೀ ಒಬ್ಬ ಎಂಪಿ ಫೋಟೋ ಇಲ್ಲ. ಒಬ್ಬ ಎಂಎಲ್‌ಎ ಫೋಟೋ ಇಲ್ಲದೆ ಇದು ಒಂದು ಪಬ್ಲಿಕ್ ಕಾರ್ಯಕ್ರಮನಾ… ಇದು ಸಾರ್ವಜನಿಕರ ಕುಂದುಕೊರತೆ ಕಾರ್ಯಕ್ರಮನಾ… ಅಥವಾ ಇದು ಕಾಂಗ್ರೆಸ್ ಕಾರ್ಯಕ್ರಮನಾ.. ಇದು ಹೆಂಗೇ ಸಾರ್ವಜನಿಕರ ಕಾರ್ಯಕ್ರಮ ಆಗುತ್ತೆ?

    ಹೀಗೆ ಮುನಿರತ್ನ ವೇದಿಕೆಯ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಡಿಕೆಶಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ರು. ಆಗ ಮುನಿರತ್ನ ಅಲ್ಲೇ ಕುಳಿತು ಪ್ರತಿಭಟನೆ ನಡೆಸಲು ಮುಂದಾದ್ರು. ಆಗ ಡಿಕೆಶಿ ಬೆಂಬಲಿಗರು ನುಗ್ಗಲು ಯತ್ನಿಸಿದ್ರು. ತಕ್ಷಣ ಪೊಲೀಸರು ಮುನಿರತ್ನರನ್ನ ಹಿಡಿದುಕೊಂಡು ಕಾರ್ಯಕ್ರಮ ಸ್ಥಳದಿಂದ ಹೊರಗೆ ಬರಲು ಯತ್ನಿಸಿದ್ರು. ಆಗ ಒಂದ್ಕಡೆ ಡಿಕೆ ಡಿಕೆ ಘೋಷಣೆ ಮೊಳಗಿದ್ರೆ, ಇನ್ನೊಂದು ಕಡೆ ಆರ್‌ಎಸ್‌ಎಸ್ ವಿರೋಧಿ ಡಿಕೆ ಅಂತಾ ಘೋಷಣೆ ಕೂಗಿದ್ರು. ಆಗ ಪರಿಸ್ಥಿತಿ ಬಿಗಾಡಾಯಿಸಿತು.

    ಒಟ್ನಲ್ಲಿ ಡಿಸಿಎಂ, ಎಂಎಲ್‌ಎ ನಡುವಿನ ವೈಯುಕ್ತಿಕ ವಾರ್ ಕರಿಟೋಪಿ ಕೂಗಿನತ್ತ ತಿರುಗಿದ್ದು, ಡಿಸಿಎಂ, ಮುನಿರತ್ನ ಗಲಾಟೆ ಟ್ವಿಸ್ಟ್ ಪಡೆದುಕೊಂಡಿದ್ದು ಸದ್ಯಕ್ಕೆ ಎಂಡ್ ಆಗುವ ಲಕ್ಷಣ ಇಲ್ಲ ಅನ್ಸುತ್ತೆ.

  • ಕರಿಟೋಪಿ ಮಾತಿನ ಕಲಹ – ಮುನಿರತ್ನ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕರು, ಡಿಕೆಶಿ ವಿರುದ್ಧ ಕಿಡಿ

    ಕರಿಟೋಪಿ ಮಾತಿನ ಕಲಹ – ಮುನಿರತ್ನ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕರು, ಡಿಕೆಶಿ ವಿರುದ್ಧ ಕಿಡಿ

    ಬೆಂಗಳೂರು: ಡಿಕೆಶಿ- ಮುನಿರತ್ನ ನಡುವೆ ಮುಗಿಯದ ರಾಜಕೀಯ ಕದನ. ಜೆ.ಪಿ.ಪಾರ್ಕ್‌ನಲ್ಲಿ (JP Park) ನಡೆದ ಕರಿಟೋಪಿ ಕಲಹಕ್ಕೆ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ಡಿಕೆಶಿ ವಿರುದ್ಧ ಮುನಿರತ್ನ (Munirathna) ಆಕ್ರೋಶ ಹೊರಹಾಕಿದ್ರೆ, ಗಲಾಟೆ ಮಾಡಲು ಬಂದಿದ್ದಾರೆ ಎಂದು ಡಿಕೆಶಿ (DK Shivakumar) ಟಾಂಗ್ ಕೊಟ್ಟಿದ್ದಾರೆ.

    ಜೆ.ಪಿ.ಪಾರ್ಕ್‌ನಲ್ಲಿ ನಡೆದ ಕರಿಟೋಪಿ ಕಲಹ ಘಟನೆಗೆ ಡಿಕೆಶಿ ಟಕ್ಕರ್ ಕೊಟ್ಟಿದ್ದಾರೆ. ವೇದಿಕೆಯಲ್ಲಿ ಡಿಕೆಶಿ ಕೈಯಿಂದಲೇ ಮೈಕ್ ಕಿತ್ತುಕೊಂಡು ಆಕ್ರೋಶ ಹೊರಹಾಕಿದ ಮುನಿರತ್ನ ವಿರುದ್ಧ ಡಿಕೆಶಿ ಮಾತನಾಡಿದ್ದಾರೆ. ಸ್ಥಳೀಯ ಎಂಎಲ್‌ಎಗೆ ತಾಳ್ಮೆ ಕಡಿಮೆ. ಈ ಕಾರ್ಯಕ್ರಮ ಹಾಳು ಮಾಡೋಕೆ ಬಂದಿದ್ದಾರೆ. ಇಂಥವರನ್ನ ಗೆಲ್ಲಿಸಿದ್ದೀರಲ್ಲ ನಿಮ್ಮ ತಪ್ಪು. ಮುಂದೆ ಹೀಗೆ ಮಾಡಬೇಡಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಇದೇ ವೇಳೆ ರಾಜರಾಜೇಶ್ವರಿನಗರದ ಪರಾಜಿತ ಅಭ್ಯರ್ಥಿ ಕುಸುಮಾ ಮಾತನಾಡಿ, ಕಾರ್ಯಕ್ರಮಕ್ಕೆ ಶಾಸಕರು ಗಲಾಟೆ ಮಾಡಲೆಂದೇ ಬಂದಿದ್ದಾರೆ. ಗಲಾಟೆ ಅನ್ನೋದು ಶಾಸಕರಿಗೆ ಅಭ್ಯಾಸ ಆಗಿದೆ. ಅವಮಾನ ಮಾಡೋ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು. ರಾಯಚೂರಿನಲ್ಲಿ ಮಾತನಾಡಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಡಿಕೆಶಿ ಪರ ಬ್ಯಾಟಿಂಗ್ ನಡೆಸಿದ್ದು, ಕರಿಟೋಪಿ ಎಂದು ಕರೆದಿರೋದು ಸಲಿಗೆ ಅಂತಾ ಟಾಂಗ್ ಕೊಟ್ಟರು. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

    ಇದೆಲ್ಲದರ ನಡುವೆ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿ, ನನ್ನ ಕರಿ ಟೋಪಿಯನ್ನ ಕಿತ್ತುಕೊಂಡಿದ್ದಾರೆ, ಹಲ್ಲೆ ಮಾಡಿದ್ದಾರೆ. ಚನ್ನಪಟ್ಟಣ, ಕನಕಪುರದಿಂದ ರೌಡಿಶೀಟರ್‌ಗಳನ್ನು ಕರೆಸಿದ್ದಾರೆ ಎಂದು ಮುನಿರತ್ನ ಗಂಭೀರವಾಗಿ ಆರೋಪಿಸಿದರು. ಇದು ಕಾಂಗ್ರೆಸ್ ಫಂಕ್ಷನ್. ಏಯ್ ಟೋಪಿ ಬಾರೋ ಇಲ್ಲಿ ಅಂತಾ ಅವಮಾನ ಮಾಡಿದ್ದಾರೆ. ನಾನು ಇವತ್ತು ಬದುಕಿದ್ದೀನಿ ಅಂದ್ರೆ ಪೊಲೀಸರೇ ಕಾರಣ ಎಂದರು. ಡಿಕೆಶಿ ಹೊರಡುವ ತನಕ ಜೆ.ಪಿ.ಪಾರ್ಕ್‌ನಲ್ಲೇ ಇದ್ದ ಮುನಿರತ್ನ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ

    ದೇ ವೇಳೆ ಮುನಿರತ್ನ ಬೆಂಬಲಕ್ಕೆ ಬಿಜೆಪಿ ನಾಯಕರು ನಿಂತಿದ್ದು, ಕರಿಟೋಪಿ ಕೂಗಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ. ಮುಸ್ಲಿಂ ಟೋಪಿಗೆ ಜಾಲರಿ ಟೋಪಿ ಅಂತಾ ಕರೀರಿ ಅಂತಾ ಜೋಷಿ ಟಕ್ಕರ್ ಕೊಟ್ರೆ, ಡಿಕೆಶಿಗೆ ಮದ ಅಂತಾ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

    ಒಟ್ನಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಪೊಲಿಟಿಕಲ್ ವಾರ್‌ಗೆ ಸಾರ್ವಜನಿಕ ಸಭೆ ವೇದಿಕೆಯಾಗಿದ್ದು, ವಿಪರ್ಯಾಸವೇ ಆಗಿದ್ದು, ಕರೆದು ಕೆಣಕಿದ್ರಾ ಡಿಕೆಶಿ? ಆರ್‌ಆರ್‌ನಗರ ವಾರ್ ಎಲೆಕ್ಷನ್‌ಗಷ್ಟೇ ಸೀಮಿತವಾಗದೇ ಆಗಾಗ್ಗೆ ಬೆಂಕಿ ಹೊತ್ತಿಕೊಳ್ಳುವ ರಾಜಕಾರಣ ಏಕೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ. ಇದನ್ನೂ ಓದಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

  • ಆರ್‌ಎಸ್‌ಎಸ್ ವಿಷಪೂರಿತ ಸಿದ್ಧಾಂತ ಹರಡುವ ಕೆಲಸ ಮಾಡಬಾರದು: ಯತೀಂದ್ರ ಸಿದ್ದರಾಮಯ್ಯ

    ಆರ್‌ಎಸ್‌ಎಸ್ ವಿಷಪೂರಿತ ಸಿದ್ಧಾಂತ ಹರಡುವ ಕೆಲಸ ಮಾಡಬಾರದು: ಯತೀಂದ್ರ ಸಿದ್ದರಾಮಯ್ಯ

    ರಾಯಚೂರು: ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು (RSS) ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು. ಅವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದರು. ಇದನ್ನೂ ಓದಿ: ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್‌ ರಾಯಭಾರಿಗೆ ಪಾಕಿಸ್ತಾನ ಸಮನ್ಸ್‌

    ಆರ್‌ಎಸ್‌ಎಸ್‌ನವರು ಭಾರತದ ತಾಲಿಬಾನಿಗಳು ಅನ್ನೋ ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರದ ಕುರಿತು ಮಾತನಾಡಿ, ಸಿದ್ದರಾಮಯ್ಯ ಆರ್‌ಎಸ್‌ಎಸ್‌ನವರು ತಮ್ಮದು ದೊಡ್ಡ ಸಂಸ್ಥೆ ಅಂತ ಹೇಳುತ್ತಾರೆ, ಆದ್ರೂ ಕೂಡ ರಿಜಿಸ್ಟ್ರೇಷನ್ ಮಾಡಿಕೊಳ್ಳಲ್ಲಾ ಅಂದ್ರೆ ಅದು ಬಹಳ ಸೂಜಿಗದ ವಿಷಯ. ಅದು ಪರಿಶೀಲನೆ ಮಾಡಬೇಕು, ರಿಜಿಸ್ಟ್ರೇಷನ್ ಆಗಬೇಕು ಅಂದರೆ ಆಗಬೇಕು. ತಾಲಿಬಾನಿಗಳ ಮೈಂಡ್ ಸೆಟ್, ಆರ್‌ಎಸ್‌ಎಸ್ ಮೈಂಡ್ ಸೆಟ್ ಅಷ್ಟೇ ಇದೆ. ಧರ್ಮವನ್ನ ಸಂಕುಚಿತ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

  • ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

    ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

    – ವೋಟ್‌ ಚೋರಿ ಮೂಲಕ ಚುನಾವಣೆ ಗೆಲ್ಲಿಸ್ತಿರೋದೇ ಆರ್‌ಎಸ್‌ಎಸ್‌
    – ಇಡೀ ದೇಶವನ್ನೇ ಹಾಳು ಮಾಡ್ತಿರೋದೇ ಆರ್‌ಎಸ್‌ಎಸ್‌ ಅಂತ ಲೇವಡಿ

    ಮಡಿಕೇರಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ (Congress) ಅಧಿಕಾರಕ್ಕೆ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ (M Lakshman) ಹೇಳಿದರು.

    ಮಡಿಕೇರಿ ನಗರದಲ್ಲಿ (Madikeri City) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಕರಿ ಟೋಪಿ ಎಂದು ಕರೆದಿದ್ದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಆರ್‌ಎಸ್‌ಎಸ್‌ ಏನು ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವ ಸಂಘನಾ? ಮಹಾತ್ಮಗಾಂಧಿಯನ್ನು ಕೊಂದ ಸಂಘ ಅದು. ಇಡೀ ದೇಶದಲ್ಲಿ ಕೋಮುಗಲಭೆ ಹರಿಸುತ್ತಿರುವ ಒಂದು ಸಂಸ್ಥೆ. ಆ ಸಂಸ್ಥೆಯನ್ನು ಬ್ಯಾನ್‌ ಮಾಡುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡಬೇಕಿತ್ತು. ಆದ್ರೆ ಆಗಲಿಲ್ಲ. ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ನೂರಕ್ಕೆ ನೂರರಷ್ಟು ಬ್ಯಾನ್‌ ಆಗುತ್ತೆ. ಬ್ಯಾನ್‌ ಮಾಡಿದ್ರೆ ನಮ್ಮ ದೇಶದಲ್ಲಿ ಶಾಂತಿಯುತ ಬಾಳ್ವೆ ಮಾಡುವ ಅವಕಾಶ ಸಿಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಈ ಪ್ರತಾಪ್ ಸಿಂಹ ಯಾರ್ರೀ, ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ: ಯತೀಂದ್ರ ಸಿದ್ದರಾಮಯ್ಯ

    ಚುನಾವಣೆಗಳನ್ನ ವೋಟ್‌ ಚೋರಿ ಮೂಲಕ ಗೆಲ್ಲುವಂತಹ ಕೆಲಸ ಮಾಡುತ್ತಿರುವುದೇ ಆರ್‌ಎಸ್‌ಎಸ್‌. ಅಂಥವರನ್ನ ಚಡ್ಡಿ, ಟೋಪಿ ಹಾಕಿರುವಂತಹ ವ್ಯಕ್ತಿಯನ್ನ ಕರಿಟೋಪಿ, ಕಳ್ಳ ಅಂತ ಕರೆದರೂ ಒಪ್ಪಿಕೊಳ್ತೇನೆ. ಇಡೀ ದೇಶವನ್ನ ಹಾಳು ಮಾಡ್ತಿರೋದೇ ಆರ್‌ಎಸ್‌ಎಸ್‌. ಇದು ತೊಲಗಬೇಕು ಅಂತ ರಾಹುಲ್‌ ಗಾಂಧಿ ಅವರು ದಿನನಿತ್ಯ ಹೋರಾಟ ಮಾಡ್ತಿದ್ದಾರೆ. ಅದೆಲ್ಲದಕ್ಕೂ ನಮ್ಮ ಬೆಂಬಲ ಇದೆ ಎಂದು ಹೇಳಿದರು. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

  • ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

    ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

    ಬೆಂಗಳೂರು: ಸ್ಥಳೀಯ ಶಾಸಕರಿಗೆ ತಾಳ್ಮೆ ಇಲ್ಲ. ಕಾರ್ಯಕ್ರಮ ಹಾಳು ಮಾಡಲೆಂದೇ ಆಗಮಿಸಿದ್ದರು. ಇಂತವರನ್ನು ಗೆಲ್ಲಿಸಿದ್ದು ನಿಮ್ಮ ತಪ್ಪು. ಮುಂದೆಯಾದರೂ ಸರಿಪಡಿಸಿಕೊಳ್ಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮುನಿರತ್ನ (Munirathna) ಅವರಿಗೆ ಟಾಂಗ್‌ ನೀಡಿದ್ದಾರೆ.

    ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ (JP Park) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೇನು ಸರ್ಕಾರದ ಶಿಲಾನ್ಯಾಸ ಮಾಡುವ ಕಾರ್ಯಕ್ರಮ ಅಲ್ಲ. ಇದು ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮ. ಎಲ್ಲರಿಗೆ ಏನು ಗೌರವ ಕೊಡಬೇಕು ಅದು ಕೊಟ್ಟಿದ್ದೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:  ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

    ಆರ್‌ಎಸ್‌ಎಸ್‌ (RSS) ಸಂಸ್ಥೆಗೆ ಅಗೌರವ ತರುವ ಕೆಲಸ ಮುನಿರತ್ನ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಒಂದು ಇತಿಹಾಸ ಇದೆ ಅವರೇನು ಮಾಡಬೇಕು ಮಾಡುತ್ತಿದ್ದಾರೆ. ಅವರ ಹೆಸರನ್ನು ಕೆಡಿಸುವ ಕೆಲಸ ಇಲ್ಲಿ ನಡೆಯುತ್ತಿದೆ. ಜಿಬಿಎ ಸಭೆಗೆ ಬಂದಿಲ್ಲ. ಅಲ್ಲಿ ಬಂದು ಸಮಸ್ಯೆ ಹೇಳಿಲ್ಲ. ಇಲ್ಲಿ ಬಂದು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಬೆಂಗಳೂರು ನಾಗರೀಕರ ಜೊತೆ ನಡೆಯಬೇಕು ಎಂದು ಎಲ್ಲರಿಗೂ ಆಹ್ವಾನ ಕೊಟ್ಟಿದ್ದೇನೆ. ಬೆಳಗ್ಗೆಯಿಂದ ಎರಡು ತಾಸು ನಡೆದು ಸಮಸ್ಯೆ ಕೇಳಿದ್ದೇನೆ. ಎಲ್ಲರ ಮಾಹಿತಿ, ಫೋನ್ ನಂಬರ್ ತಗೊಂಡಿದ್ದೇನೆ ಅವರ ಸಮಸ್ಯೆ ಬಗೆಹರಿಸುತ್ತೇನೆ. ಅವರನ್ನು ಸಂಪರ್ಕ ಮಾಡುವ ಕೆಲಸ ಮಾಡುತ್ತೇನೆ. ಉಳಿದ ಜನರು 1533ಗೆ ಕರೆ ಮಾಡಿ ನಿಮ್ಮ ಸಮಸ್ಯೆ ಹೇಳಬಹುದು ಎಂದರು. ಇದನ್ನೂ ಓದಿ:  ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ

    ಗುತ್ತಿಗೆದಾರರ ಬಿಲ್ ಬಾಕಿ ಕ್ಲೀಯರ್‌ ಮಾಡಲು ಕಮಿಷನ್ ಕೇಳುತ್ತಿದ್ದಾರೆ ಎಂಬುದನ್ನು ಕೇಳಲ್ಪಟ್ಟೆ. ಜೆಪಿ ಪಾರ್ಕ್‌ನಲ್ಲೂ ಕೂಡ ಸಾಕಷ್ಟು ಕೆಲಸ ನಿಂತು ಹೋಗಿದೆ. ಶೌಚಾಲಯ, ಸ್ವಿಮ್ಮಿಂಗ್ ಪೂಲ್, ಟ್ರ‍್ಯಾಕ್ ಎಲ್ಲಾ ಸಮಸ್ಯೆ ಬಗೆಹರಿಯುತ್ತೆ. ಮಳೆ ನೀರು, ರಸ್ತೆ ಎಲ್ಲಾ ಸಮಸ್ಯೆಯನ್ನು ಬಗೆ ಹರಿಸುತ್ತೇನೆ. ಸಾರ್ವಜನಿಕರ ಧ್ವನಿ ಸರ್ಕಾರಕ್ಕೆ ಮುಟ್ಟಬೇಕು. ಅದಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಹೇಳಿದರು.

  • ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

    ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

    ಬೆಂಗಳೂರು: ಮತ್ತಿಕರೆಯ ಜೆಪಿ ಪಾರ್ಕ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

    ಡಿಕೆಶಿವಕುಮಾರ್‌ ಅವರು ಇಂದು ವಾಕ್‌ ಮಾಡುತ್ತಾ ಜೆಪಿ ಪಾರ್ಕ್‌ಗೆ (JP Park) ಆಗಮಿಸಿದರು. ಆರ್‌ಎಸ್‌ಎಸ್‌ ಪಥಸಂಚಲನ ಮುಗಿಸಿದ್ದ ಶಾಸಕ ಮುನಿರತ್ನ ಸಮವಸ್ತ್ರದಲ್ಲೇ ಜನರ ಮಧ್ಯೆ ಕುಳಿತಿದ್ದರು. ಇದನ್ನೂ ಓದಿ:  ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಕುಟುಂಬದ ಎರಡನೇ ಪೀಳಿಗೆ ಎಂಟ್ರಿ

     

    ಮುನಿರತ್ನ ಅವರು ಕಾರ್ಯಕ್ರಮದಲ್ಲಿ ಕುಳಿತಿರುವುದನ್ನು ನೋಡಿದ ಡಿಕೆಶಿ ಅವರು ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ವೇದಿಕೆಗೆ ಆಹ್ವಾನಿಸಿದರು. ಆಹ್ವಾನಿಸಿದ ಹಿನ್ನೆಲೆಯಲ್ಲಿ ಮುನಿರತ್ನ ವೇದಿಕೆಗೆ ಹೋಗಿ ಡಿಕೆಶಿ ಬಳಿ ಮೈಕ್‌ ಕೇಳಿದರು. ಆದರೆ ಡಿಕೆಶಿ ಮೈಕ್‌ ನೀಡದೇ ಇಲ್ಲಿ ಕುಳಿತುಕೊಳ್ಳಿ ಎಂದರು. ಇದಕ್ಕೆ ಒಪ್ಪದ ಮುನಿರತ್ನ ಮೈಕ್‌ ನೀಡುವಂತೆ ಕೇಳಿದರು. ಕೊನೆಗೆ ಮುನಿರತ್ನ ಅವರು ಮೈಕ್‌ ಪಡೆದು, ಆರ್‌ಎಸ್‌ಎಸ್‌ ಪಥಸಂಚಲನ ಮುಗಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ನನಗೆ ಈ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನ ಇಲ್ಲ. ಆದರೆ ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರಣ ನಾನೊಬ್ಬ ಪ್ರಜೆಯಾಗಿ ಭಾಗವಹಿಸಿದ್ದೇನೆ ಎಂದು ಹೇಳಿ ವೇದಿಕೆಯಿಂದ ಇಳಿದು ಮತ್ತೆ ಜನರ ಮಧ್ಯೆ ಕುಳಿತರು.

    ಸಭಾ ಕಾರ್ಯಕ್ರಮದಲ್ಲಿ ನಿರೂಪಕರು ಮುನಿರತ್ನ ಅವರನ್ನು ಸ್ವಾಗಿಸಿ ವೇದಿಕೆಗೆ ಆಹ್ವಾನಿಸಿದರು. ಈ ವೇಳೆ ವೇದಿಕೆ ಏರಿದ ಮುನಿರತ್ನ, ನಾನೊಬ್ಬ ಜನಪ್ರತಿನಿಧಿಯಾಗಿದ್ದೇನೆ ನನಗೆ ಆಹ್ವಾನ ಇಲ್ಲ. ಈ ಕ್ಷೇತ್ರದ ಸಂಸದರಿಗೂ ಆಹ್ವಾನ ಇಲ್ಲ. ಇದು ಸರ್ಕಾರಿ ಕಾರ್ಯಕ್ರಮವೇ ಅಥವಾ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಅಸಮಾಧಾನ ಹೊರಹಾಕಿದರು. ಮುನಿರತ್ನ ಆಕ್ರೋಶ ಹೊರ ಹಾಕುತ್ತಿದ್ದಂತೆ ಅಧಿಕಾರಿಗಳು ಮತ್ತು ಪೊಲೀಸರು ಮುನಿರತ್ನ ಅವರನ್ನು ಸುತ್ತುವರೆದು ಮೈಕ್‌ ಪಡೆದುಕೊಂಡರು.

    ಮುನಿರತ್ನ ಮಾತನಾಡುತ್ತಿದ್ದಂತೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು.