Tag: ಬಿಜೆಪಿ

  • ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಕುಟುಂಬದ ಎರಡನೇ ಪೀಳಿಗೆ ಎಂಟ್ರಿ

    ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಕುಟುಂಬದ ಎರಡನೇ ಪೀಳಿಗೆ ಎಂಟ್ರಿ

    – ಜಾರಕಿಹೊಳಿ ಗುಂಪಿಗೆ ಆರಂಭಿಕ ಮೇಲುಗೈ
    – 6 ತಾಲೂಕಿನಲ್ಲಿ ಅವಿರೋಧ ಆಯ್ಕೆ

    ಬೆಳಗಾವಿ: ಜಿಲ್ಲೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ (DCC Bank) ಶನಿವಾರ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. 16 ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಇಳಿದಿದ್ದಾರೆ. ಆರಂಭದ ಹಂತದಲ್ಲೇ ಜಾರಕಿಹೊಳಿ ಬ್ರದರ್ಸ್ (Jarkiholi Brothers) ಗುಂಪು ಮೆಲುಗೈ ಸಾಧಿಸಿದೆ.

    ಅ.19 ರಂದು ನಡೆಯಲಿರುವ ಮತದಾನಕ್ಕೆ ಈ ವರೆಗೂ ಒಟ್ಟು 64 ನಾಮಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಆರು ತಾಲೂಕಿನಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದು ಆರಂಭದಲ್ಲೇ ಜಾರಕಿಹೊಳಿ ಗುಂಪು ಮೇಲುಗೈ ಸಾಧಿಸಿದೆ.

    ಹಾಲಿ, ಮಾಜಿ ಶಾಸಕರು ಸೇರಿದಂತೆ ಮಾಜಿ ಸಂಸದರು ಕೂಡ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ಈಗಾಗಲೇ ಜಾರಕಿಹೊಳಿ ಬ್ರದರ್ಸ್ 13 ಜನರ ತಂಡವನ್ನು ಸಿದ್ಧಪಡಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಥಣಿ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಬೇರೆ ಕಡೆಗಳಲ್ಲಿ ತಮ್ಮವರನ್ನು ಅಖಾಡಕ್ಕಿಳಿಸಿದ್ದಾರೆ.

    ರಮೇಶ್ ಕತ್ತಿ (Ramesh Katti) ಮತ್ತು ಲಕ್ಷ್ಮಣ ಸವದಿ (Laksham savdi) ನಡೆ ಇನ್ನೂ ನಿಗೂಢವಾಗಿದ್ದು ಜಾರಕಿಹೊಳಿ ಸಹೋದರರಿಗೆ ಶಾಕ್ ಕೊಡಲು ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಸದ್ಯ ಆರಂಭಿಕ ಹಂತದಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದು ಆರು ತಾಲೂಕಿನ ಪೈಕಿ ಐದು ಜಾರಕಿಹೊಳಿ ಬ್ರದರ್ಸ್ ಗುಂಪಿನವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:  DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

     

    ಅವಿರೋಧ ಆಯ್ಕೆ: ಗೋಕಾಕ್‌ನಿಂದ ಶಾಸಕ ರಮೇಶ್‌ ಜಾರಕಿಹೊಳಿ ಪುತ್ರ ಅಮರನಾಥ್ ಜಾರಕಿಹೊಳಿ, ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಬೆಳಗಾವಿ ತಾಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯರಗಟ್ಟಿಯಿಂದ ವಿಶ್ವಾಸ್ ವೈದ್ಯ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಮೂಡಲಗಿ ನೀಲಕಂಠ ಜಾರಕಿಹೊಳಿ ಗುಂಪಿನಲ್ಲಿದ್ದವರು ಅವಿರೋಧ ಆಯ್ಕೆಯಾದರೆ ಇತ್ತ ಯಾವುದೇ ಗುಂಪಿನಲ್ಲಿ ಗುರುತಿಸಿಕೊಳ್ಳದೇ ಚಿಕ್ಕೋಡಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಗಣೇಶ್ ಹುಕ್ಕೇರಿ ಕೂಡ ಆಯ್ಕೆಯಾಗಿದ್ದಾರೆ.

     

    ಶನಿವಾರ ಮಧ್ಯಾಹ್ನ ಮೂರು ಗಂಟೆಯವರೆಗೂ ಕಾದು ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಶಾಸಕ ವಿಶ್ವಾಸ್ ವೈದ್ಯ, ನೀಲಕಂಠ, ಗಣೇಶ್ ಹುಕ್ಕೇರಿ ಬೆಂಬಲಿಗರು ಗುಲಾಲ್ ಹಚ್ಚಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಜಾರಕಿಹೊಳಿ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು.

    ಒಂದು ಕಡೆ ಜಾರಕಿಹೊಳಿ ಬ್ರದರ್ಸ್ ಆರಂಭಿಕ ಹಂತದಲ್ಲಿ ಮೇಲುಗೈ ಸಾಧಿಸಿದರೂ ಠಕ್ಕರ್ ಕೊಡಲು ಲಕ್ಷ್ಮಣ ಸವದಿ ಹಾಗೂ ರಮೇಶ್ ಕತ್ತಿ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಹೇಗಾದರೂ ಮಾಡಿ ಅಧ್ಯಕ್ಷಗಾದಿ ಹಿಡಿಯಬೇಕು ತಮ್ಮ ಹಿಡಿತದಲ್ಲಿ ಡಿಸಿಸಿ ಬ್ಯಾಂಕ್ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಪ್ಲ್ಯಾನ್ ಮಾಡ್ತಿದ್ದು ಅ.19ರ ವರೆಗೂ ಕಾದು ನೋಡಿ ಅಂತಿದ್ದಾರೆ.

    ಇದೇ ಮೊದಲ ಬಾರಿಗೆ ಅಣ್ತಮ್ಮಂದಿರು ತಾವು ಸ್ಪರ್ಧೆ ಮಾಡುವುದನ್ನ ಬಿಟ್ಟು ತಮ್ಮ ಕುಡಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದು ಈ ಮೂಲಕ ಜಾರಕಿಹೊಳಿ ಮನೆತನದ ಎರಡನೇ ಪೀಳಿಗೆ ಅಧಿಕೃತವಾಗಿ ರಾಜಕೀಯ ರಂಗ ಪ್ರವೇಶ ಮಾಡಿದೆ. ಈ ಕುರಿತು ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಾವು ಎಳೆದುಕೊಂಡು ಹೋಗುತ್ತಿರುವ ತೇರನ್ನು ಮಕ್ಕಳು ಎಳೆಯಬೇಕು ಜನರ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ಚುನಾವಣೆಗೆ ನಿಲ್ಲಿಸಿದ್ದಾಗಿ ಹೇಳಿದ್ದಾರೆ.

    ತಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎನ್ನುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಎಂಟ್ರಿಯಾಗಿದ್ದಾರೆ. ಸಹಕಾರಿ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದು ಜಾರಕಿಹೊಳಿ ಸಹೋದರರ ಮತ್ತೊಂದು ದಾಳ ಅಂತಾ ಹೇಳಲಾಗುತ್ತಿದ್ದು ಬಾಲಚಂದ್ರ ಜಾರಕಿಹೊಳಿ ಕೂಡ ರಾಜಕಾರಣದಲ್ಲಿ ಎಲ್ಲವೂ ಮಾಡಬೇಕು ಅಂತಾ ಹೇಳಿದ್ದಾರೆ.

    ಒಟ್ಟಿನಲ್ಲಿ ಸಾಕಷ್ಟು ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ಅಕ್ಟೋಬರ್ 19ರಂದು ಮತದಾನ ನಡೆಯಲಿದ್ದು ಈಗಾಗಲೇ ಆರು ತಾಲೂಕಿನಲ್ಲಿ ಯಾವುದೇ ನಾಮ ಪತ್ರ ಸಲ್ಲಿಕೆಯಾಗದ ಹಿನ್ನೆಲೆ ಅವಿರೋಧ ಆಯ್ಕೆ ಖಚಿತವಾಗಿದ್ದು ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇತ್ತ ಜಾರಕಿಹೊಳಿ ಬ್ರದರ್ಸ್ ಕಡೆಯಿಂದ ಡಿಸಿಸಿ ಬ್ಯಾಂಕ್ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಲಿಂಗಾಯತ ಅಸ್ತ್ರ ಪ್ರಯೋಗ ಆಗಿದ್ದು ಇದರಿಂದ ತಮ್ಮ ಗುಂಪು ಗೆದ್ದರೆ ಲಿಂಗಾಯತರೇ ಅಧ್ಯಕ್ಷ ಅಂತಾ ಬಾಲಚಂದ್ರ ಹೇಳಿದ್ದು ಮತ್ತಷ್ಟು ರೋಚಕತೆ ಹೆಚ್ಚಿಸಿದೆ.

  • ದೊಡ್ಡಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ವಿಜಯೇಂದ್ರ

    ದೊಡ್ಡಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ವಿಜಯೇಂದ್ರ

    ಬೆಂಗಳೂರು: ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa), ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD DeveGowda) ಅವರ ಆರೋಗ್ಯ ವಿಚಾರಿಸಿದರು. ಜೊತೆಗೆ ದೇಶದ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸಿದರು.

    ಸದ್ಯಕ್ಕೆ ಆಸ್ಪತ್ರೆಯಲ್ಲೇ ಚಿಕಿತ್ಸೆ
    ಇತ್ತೀಚೆಗೆ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Bengaluru Manipal Hospital) ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಎಂದು ಜೆಡಿಎಸ್‌ ಪಕ್ಷ ಒಂದು ದಿನದ ಹಿಂದೆ ತಿಳಿಸಿದೆ.

    ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕರಾದ ದೇವೇಗೌಡರು ಚೇತರಿಸಿಕೊಂಡು ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪಕ್ಷ ಪ್ರಕಟಣೆಯಲ್ಲಿ ಮನವಿ ಮಾಡಿದೆ.

    ಹೆಚ್‌ಡಿಕೆ ಹೇಳಿದ್ದೇನು?
    ಇನ್ನೂ ದೊಡ್ಡಗೌಡರ ಆರೋಗ್ಯದ ಬಗ್ಗೆ ಅಪ್ಡೇಟ್‌ ಕೊಟ್ಟಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ 3-4 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು 2 ದಿನಗಳ ಹಿಂದೆ ಹೇಳಿದ್ದರು.

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು (BJP) ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಜಿಬಿಎ ಸಭೆಗೆ ಬಿಜೆಪಿಯವರು ಗೈರಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಇದರಿಂದ ತಿಳಿಯುತ್ತದೆ ಎಂದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

  • ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    – ನಾನು ದುರ್ಬಲನಾಗಿದ್ದೇನೆ ಎಂಬ ಸಂದೇಶವನ್ನ ಮೋದಿ ಮಹಿಳೆಯರಿಗೆ ರವಾನಿಸಿದ್ದೀರಿ ಎಂದು ಟೀಕಿಸಿದ್ದಾರೆ

    ನವದೆಹಲಿ: ಅಫ್ಘಾನ್‌ ವಿದೇಶಾಂಗ ಸಚಿವ (Taliban Minister) ಅಮೀರ್ ಖಾನ್ ಮುತ್ತಕಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ ವಿಧಿಸಿದ ಕ್ರಮದ ವಿರುದ್ಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿಪಕ್ಷಗಳಿಂದ ಟೀಕೆ ವ್ಯಕ್ತವಾದ ಬೆನ್ನಲ್ಲೇ, ಸುದ್ದಿಗೋಷ್ಠಿಯಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

    ಈ ಕುರಿತು ಸ್ಪಷ್ಟನೆ ಬಿಡುಗಡೆ ಮಾಡಿರುವ ವಿದೇಶಾಂಗ ಸಚಿವಾಲಯ ಶುಕ್ರವಾರ ಅಫ್ಘಾನ್‌ ವಿದೇಶಾಂಗ ಸಚಿವರು ದೆಹಲಿಯಲ್ಲಿ ನಡೆಸಿದ ಮಾಧ್ಯಮ ಸಂವಾದದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಯಾವುದೇ ಪಾತ್ರವಿಲ್ಲ ಎಂದು ಹೇಳಿದೆ.

    ಮುತ್ತಕಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಯಾವುದೇ ಮಹಿಳಾ ಪತ್ರಕರ್ತರು ಉಪಸ್ಥಿತರಿರದಿದ್ದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ತಾಲಿಬಾನ್ ಸಚಿವರು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಕೇವಲ ಪುರುಷ ಪತ್ರಕರ್ತರು ಉಪಸ್ಥಿತರಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಈ ಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದ ರಾಹುಲ್ ಗಾಂಧಿ, ಮೋದಿಯವರೆ, ಸಾರ್ವಜನಿಕ ವೇದಿಕೆಯಿಂದ ಮಹಿಳಾ ಪತ್ರಕರ್ತರನ್ನ ಹೊರಗಿಡಲು ಅವಕಾಶ ನೀಡುವ ಮೂಲಕ, ನಾನು ನಿಮ್ಮ ಬೆಂಬಲಕ್ಕೆ ನಿಲ್ಲಲಾರದಷ್ಟು ದುರ್ಬಲನಾಗಿದ್ದೇನೆ ಎಂಬ ಸಂದೇಶವನ್ನು ಭಾರತೀಯ ಮಹಿಳೆಯರಿಗೆ ರವಾನಿಸಿದ್ದೀರಿ ಎಂದು ಟೀಕಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯ ನಾರಿ ಶಕ್ತಿ ಘೋಷಣೆಯನ್ನೂ ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿ, ನಮ್ಮ ದೇಶದಲ್ಲಿ ಪ್ರತಿಯೊಬ್ಬ ಮಹಿಳೆಗೂ ಎಲ್ಲ ಸ್ಥಳಗಳಲ್ಲೂ ಭಾಗವಹಿಸುವ ಸಮಾನ ಹಕ್ಕಿದೆ. ಆದ್ರೆ, ಇಂತಹ ತಾರತಮ್ಯದ ಕುರಿತ ನಿಮ್ಮ ಮೌನವು, ನಿಮ್ಮ ನಾರಿ ಶಕ್ತಿ ಘೋಷಣೆಯ ಖಾಲಿತನವನ್ನ ಬಯಲುಮಾಡಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದರು.

  • ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಹುಬ್ಬಳ್ಳಿ: ಇಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ (Quran) ಪಠಣ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಶಾಸಕ ಬೆಲ್ಲದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.

    ಧಾರವಾಡ (Dharwad) ಡಿಸಿ ಕಚೇರಿ ಎದುರು ಹೋಮ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಸರ್ಕಾರಿ ಕಚೇರಿ ಶುದ್ಧೀಕರಣ ಮಾಡೋದಾಗಿ ರುದ್ರಪಠಣ ಮಾಡಿ ಅರ್ಚಕರ ಮೂಲಕ ಹೋಮ ಮಾಡಿಸಿದ್ರು. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ – ಚಿಕಿತ್ಸೆ ಫಲಿಸದೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

    ಮುಲ್ಲಾ ಮೋಕ್ಷ ಹೋಮ ಎಂದು ಪ್ಲೆಕಾರ್ಡ್ ಹಿಡಿದು ಕಿಡಿಕಾರಿದ್ರು. ಕಾಂಗ್ರೆಸ್ ಶಾಸಕರಿಗೆ (Congress MLAs), ಸಚಿವರಿಗೆ ದೇವರು ಒಳ್ಳೆ ಬುದ್ಧಿಕೊಡಲಿ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಮಂಗಳಾರತಿ ನೆರವೇರಿಸಿದ್ರು. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಬಳಿಕ ಮಾತನಾಡಿ, ಸರ್ವರನ್ನೂ ಸಮನಾಗಿ ನೋಡುವ ಸಿದ್ಧಾರೂಢ ಮಠದಲ್ಲಿ ಕುರಾನ್ ಪಠಾಣ್ ಮಾಡುವ ಕೆಲಸ ಸಂತೋಷ್ ಲಾಡ್ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ನಡೆದಿದೆ ಅಂತ ಕಿಡಿಕಾರಿದ್ರು. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌

  • ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    – ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ

    ಬೆಂಗಳೂರು: ಬಿಜೆಪಿ (BJP) ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ (Delhi) ಹೋಗಿ ಬೊಗಳಲಿ ಎಂದು ಸಚಿವ ಎನ್‌ಎಸ್ ಬೋಸರಾಜು (NS Boseraju) ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಾತಿಗಣತಿಗೆ ದಸರಾ ರಜೆ ವಿಸ್ತರಣೆ ಮಾಡಿರೋದಕ್ಕೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಪಿಟೇಷನ್ ಮೇಲೆ ಟೀಕೆ ಮಾಡುತ್ತಿದ್ದಾರೆ. ಜನರು ಸಂತೋಷದಿಂದ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿಯವರು ಮಾತ್ರ ಸಮೀಕ್ಷೆ ವಿರೋಧಿಸುತ್ತಿದ್ದಾರೆ. ರಾಜ್ಯದಲ್ಲಿ ನೆರೆ ಬಂದಿದೆ. ಕೇಂದ್ರ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ. ಸಿಎಂ ವೈಮಾನಿಕ ಸಮೀಕ್ಷೆ ಮಾಡಿದ್ರೂ ವಿರೋಧ ಮಾಡುತ್ತಾರೆ. ಪ್ರವಾಹ ಬಂದಾಗ ರಸ್ತೆ ಮೂಲಕ ಸಮೀಕ್ಷೆ ಮಾಡಲು ಆಗುತ್ತಾ? ಮೋದಿ ಏನು ರಸ್ತೆ ಮೂಲಕ ನೆರೆ ಸಮೀಕ್ಷೆ ಮಾಡ್ತಾನಾ? ಅಂತ ಮೋದಿ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು. ಇದನ್ನೂ ಓದಿ: ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

    ಬಿಜೆಪಿಯವರು ಇಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಬೇಕು. ಇವರಿಗೆ ಏನಾದ್ರೂ ನೀತಿ ನಿಯಮ ಇದೆಯಾ? ಬಿಜೆಪಿಯವರು ಬರೀ ಡ್ರಾಮ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲಾ ಸೃಷ್ಟಿ ಮಾಡುವವರು ಬಿಜೆಪಿಯವರು. ಸತೀಶ್ ಜಾರಕಿಹೊಳಿಯವರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಯತ್ನಾಳ್ ಅವರು ವಿಜಯೇಂದ್ರ ಕಳ್ಳ ಎಂದು ಹೇಳಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಏನು ಹೇಳುತ್ತೋ ಅದೇ ಆಗುತ್ತೆ. ಸಿಎಂ, ಡಿಸಿಎಂ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಅಂತಾ ನೂರು ಸಾರಿ ಬಿಜೆಪಿಯವರು ಬೊಗಳುತ್ತಾರೆ. ಡೇಟ್ ಮೇಲೆ ಡೇಟ್ ಕೊಟ್ಟು ಬಿಜೆಪಿಯವರೇ ಹೇಳುತ್ತಿದ್ದಾರೆ. ದಸರಾ ಉದ್ಘಾಟನೆ ಮಾಡಲ್ಲ ಅಂತಾ ಬಿಜೆಪಿಯವರೇ ಹೇಳಿದ್ರು. ಬಿಜೆಪಿಯವರಿಗೇನು ನೀತಿನಿಯಮ ಇದೆಯಾ ಎಂದು ಕಿಡಿಕಾರಿದರು. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ವಿಜಯೇಂದ್ರ ಲೂಟಿ ಮಾಡಿ ಸಾವಿರ ಕೋಟಿ ಇಟ್ಕೊಂಡು ಸರ್ಕಾರ ಬೀಳಿಸ್ತಾನೆ ಅಂತಾ ಯತ್ನಾಳ್ ಹೇಳಿದ್ದಾರೆ. ಮೊದಲು ಬಿಜೆಪಿಯವರು ಅವರ ಮನೆ ಸರಿಪಡಿಸಿಕೊಳ್ಳಲಿ. ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ನಡೆಯುತ್ತಿದೆ. ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕವಿದೆ ಎಂದು ಗುಡುಗಿದರು. ಇದನ್ನೂ ಓದಿ: Bengaluru| ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಮಿನಿ ಟ್ರಕ್

  • ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

    ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ (North Karnataka) ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ (State Govt) ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಪತ್ರ ಬರೆದಿದ್ದಾರೆ.

    ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಆಗಿರುವ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಸೂಕ್ತ ಕಾಳಜಿ ಹಾಗೂ ಪರಿಹಾರ ಘೋಷಿಸಿಲ್ಲ. ಈ ಕಾರಣದಿಂದಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ನೆರೆ ಪೀಡಿತ ಜಿಲ್ಲೆಗಳಿಗೆ ಪರಿಹಾರ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಿಖಿತ ಮನವಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ಇತ್ತೀಚಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದರು. ಬಳಿಕ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್‌ಗೆ 8,500 ರೂ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಗೆ 22,500 ರೂ. ಪರಿಹಾರ ಇದೆ. ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

    ಸದ್ಯ ಸೂಕ್ತ ಪರಿಹಾರ ಸಿಗದ ಹಿನ್ನೆಲೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೆರೆ ಪೀಡಿತ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ಅಡಿ ಪರಿಹಾರ ಘೋಷಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

  • ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ (Gangavathi) ನಗರದಲ್ಲಿ ನಡೆದಿದೆ.

    ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ.  ಇದನ್ನೂ ಓದಿ:  ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಸ್‌ಪಿ ಸಿದ್ದನಗೌಡ ಪಾಟೀಲ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್‌ ಮರಳುತ್ತಿದ್ದಾಗ 7-8 ಜನ ಮಾರಾಕಾಸ್ತ್ರಗನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

  • ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    – 2001ರಿಂದ 13 ವರ್ಷ ಗುಜರಾತ್ ಸಿಎಂ, 2014ರಿಂದ ಪಿಎಂ ಆಗಿರುವ ಮೋದಿ

    ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ.

    2001ರಲ್ಲಿ ಅ.7ರಂದು ಗುಜರಾತ್ (Gujarat) ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ.ಇದನ್ನೂ ಓದಿ: ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

    ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಮೋದಿ, ತಾವು ಮೊದಲ ಸಲ ಸಿಎಂ ಹಾಗೂ ಪ್ರಧಾನಿ ಆಗಿ ಪ್ರಮಾಣವಚನ ಸ್ವೀಕರಿಸಿದ ಫೋಟೋ ಹಂಚಿಕೊಂಡಿದ್ದಾರೆ. ಜನರ ಜೀವನ ಸುಧಾರಿಸುವುದು ಮತ್ತು ಈ ಮಹಾನ್ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನನ್ನ ನಿರಂತರ ಪ್ರಯತ್ನವಾಗಿದೆ. ಭಾರತವಾಸಿಗಳ ನಿರಂತರ ಆಶೀರ್ವಾದದಿಂದಾಗಿ ನಾನು ಸರ್ಕಾರದ ಮುಖ್ಯಸ್ಥನಾಗಿ 25ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ. ಭಾರತದ ಜನರಿಗೆ ನನ್ನ ಕೃತಜ್ಞತೆಗಳು. ಇಷ್ಟು ವರ್ಷಗಳಿಂದ, ಜನರ ಜೀವನವನ್ನು ಸುಧಾರಿಸಲು ಮತ್ತು ನಮ್ಮೆಲ್ಲರನ್ನೂ ಪೋಷಿಸಿದ ಈ ಮಹಾನ್ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ನಾನು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಗುಜರಾತ್‌ನಲ್ಲಿ ಸತತ 3 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು (BJP) ಗೆಲುವಿನತ್ತ ಮುನ್ನಡೆಸಿದ ನಂತರ, ಅವರು ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟವನ್ನು ಸತತ 3 ರಾಷ್ಟ್ರೀಯ ಚುನಾವಣೆಗಳಲ್ಲಿ ಗೆಲ್ಲಿಸಿದ್ದಾರೆ. ಮೋದಿ ಎಂದಿಗೂ ಚುನಾವಣಾ ಸೋಲನ್ನು ಎದುರಿಸಿಲ್ಲ. 13 ವರ್ಷ ಮುಖ್ಯಮಂತ್ರಿ ಹಾಗೂ 11 ವರ್ಷ ಪ್ರಧಾನಮಂತ್ರಿಯಾಗಿ ಅತೀ ದೀರ್ಘಾವಧಿಗೆ ನಿರಂತರವಾಗಿ ಅಧಿಕಾರದಲ್ಲಿರುವ ಅಂದರೆ ಸರ್ಕಾರದ ಮುಖ್ಯಸ್ಥ ಆಗಿರುವ ಏಕೈಕ ವ್ಯಕ್ತಿ ಎಂಬ ಕೀರ್ತಿ ಮೋದಿ ಅವರಿಗಿದೆ.

    ಪ್ರಧಾನಿ ಮೋದಿ ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಹಿನ್ನೆಲೆ ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.ಇದನ್ನೂ ಓದಿ: ಮಧ್ಯಪ್ರದೇಶ | ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳು ಸಾವು

  • ಸಿಎಂ ಅಂತರಂಗದಲ್ಲಿ ಏನಿದೆ? ಪ್ರತ್ಯೇಕ ಧರ್ಮದ ಪರ ಯಾರಿದ್ದಾರೆ ಅಂತ ಸಮಾಜಕ್ಕೆ ಗೊತ್ತಿದೆ: ವಿಜಯೇಂದ್ರ

    ಸಿಎಂ ಅಂತರಂಗದಲ್ಲಿ ಏನಿದೆ? ಪ್ರತ್ಯೇಕ ಧರ್ಮದ ಪರ ಯಾರಿದ್ದಾರೆ ಅಂತ ಸಮಾಜಕ್ಕೆ ಗೊತ್ತಿದೆ: ವಿಜಯೇಂದ್ರ

    ಬೆಂಗಳೂರು: ಎಲ್ಲಾ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ (Siddaramaiah) ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ , ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

    ಬಿಎಲ್‌ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆಯು ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹಿರಂಗವಾಗಿ ಹೇಳುವುದು ಬೇರೆ, ಮುಖ್ಯಮಂತ್ರಿಗಳ ಅಂತರಂಗದ ಅಪೇಕ್ಷೆ ಏನೆಂಬುದನ್ನು ಅವರು ಬಹಿರಂಗಪಡಿಸಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಇದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: `ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು

    ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮಾಜ, ಒಕ್ಕಲಿಗ, ವೀರಶೈವ ಲಿಂಗಾಯತ ಸಮಾಜ, ಸೇರಿ ಎಲ್ಲಾ ಸಮಾಜಗಳಲ್ಲಿ ಆರ್ಥಿಕ- ಸಾಮಾಜಿಕ- ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಎಲ್ಲಾ ಸಮಾಜಕ್ಕೆ ನ್ಯಾಯ ಕೊಡುವ ಕೆಲಸ ಆಗಬೇಕಾಗಿದೆ. ಸಿದ್ದರಾಮಯ್ಯನವರಿಗೆ ಆತುರವೇಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ

    ಜಾತಿ ಜನಗಣತಿಯಲ್ಲಿ ಕೆಲವೆಡೆ ವಿಕಲಚೇತನರನ್ನೂ ಬಳಸಿಕೊಳ್ಳುತ್ತಿದ್ದಾರೆ. ಸಮರ್ಪಕ ಸಿದ್ಧತೆಯೂ ಇಲ್ಲ. ಆತುರಾತುರವಾಗಿ ಮುಖ್ಯಮಂತ್ರಿಗಳೇ 15 ದಿನದಲ್ಲಿ ಮುಗಿಸಬೇಕೆನ್ನುತ್ತಾರೆ. ಈ ಆತುರ ಯಾಕೆ ಎಂಬುದು ಯಕ್ಷಪ್ರಶ್ನೆ. ಕೆಲವು ಶಕ್ತಿಗಳು ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿವೆ. ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಹಿಂದೆಯೂ ಇಂಥ ಷಡ್ಯಂತ್ರ, ಪ್ರಯತ್ನ ನಡೆದಿತ್ತು. ಅದರಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಮುಂದೆಯೂ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ