Tag: ಬಿಡಿಎ

  • ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ; JDS ಮುಖಂಡ ಕಬ್ಜ ಮಾಡಿದ್ದ 75 ಕೋಟಿ ಮೌಲ್ಯದ ಭೂಮಿ ಬಿಡಿಎ ವಶಕ್ಕೆ

    ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ; JDS ಮುಖಂಡ ಕಬ್ಜ ಮಾಡಿದ್ದ 75 ಕೋಟಿ ಮೌಲ್ಯದ ಭೂಮಿ ಬಿಡಿಎ ವಶಕ್ಕೆ

    ಬೆಂಗಳೂರು: ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜಿಸಿದೆ. ಜೆಡಿಎಸ್‌ ಮುಖಂಡ ಹನುಮಂತೇಗೌಡ ಕಬ್ಜ ಮಾಡಿದ್ದ 75 ಕೋಟಿ ಮೌಲ್ಯದ ಭೂಮಿಯನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

    ಕೆಂಗೇರಿ ಬಳಿಯ ವಳಗೆರೆಹಳ್ಳಿ ಸರ್ವೆ ನಂಬರ್‌ನಲ್ಲಿ ಭೂಮಿ ಕಬ್ಜ ಮಾಡಲಾಗಿತ್ತು. ಸುಮಾರು 75 ಕೋಟಿ ಬೆಲೆ ಬಾಳುವ 1.5 ಎಕರೆ ಭೂಮಿ ಇದಾಗಿದೆ.

    ಹನುಮಂತೇಗೌಡ ಈ ಹಿಂದೆ ಯಲಹಂಕ ಎಂಎಲ್‌ಎ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರ ಪತ್ನಿ ಲತಾ ಹೆಸರಲ್ಲಿ ಜಮೀನಿತ್ತು. ಬಿಡಿಎ ಸ್ವತ್ತನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು.

    ಬಿಡಿಎ ಎಸ್ಪಿ ಲಕ್ಷ್ಮೀಗಣೇಶ್ ನೇತೃತ್ವದಲ್ಲಿ ಒತ್ತುವರಿ ತೆರವು ಮಾಡಲಾಗಿದೆ.

  • ಬಿಡಿಎ ಫ್ಲಾಟ್ / ವಿಲ್ಲಾ ಖರೀದಿಸಿ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಸುವರ್ಣಾವಕಾಶ

    ಬಿಡಿಎ ಫ್ಲಾಟ್ / ವಿಲ್ಲಾ ಖರೀದಿಸಿ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಸುವರ್ಣಾವಕಾಶ

    ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಿರುವ 1 ಬಿಹೆಚ್‌ಕೆ, 2 ಬಿಹೆಚ್‌ಕೆ, 3 ಬಿ.ಹೆಚ್.ಕೆ. ಫ್ಲಾಟ್ ಮತ್ತು ವಿಲ್ಲಾ ಕ್ರಯಪತ್ರದ ಮೇಳವನ್ನು 2025 ಅಕ್ಟೋಬರ್ 03 ರಿಂದ 16ರವರೆಗೆ ಆಯೋಜಿಸಲಾಗಿದೆ.

    ಫ್ಲಾಟ್ / ವಿಲ್ಲಾಗಳಿಗೆ ಸಂಬಂಧಿಸಿದಂತೆ ಸುಮಾರು 400 ಫ್ಲಾಟ್ ಗಳಿಗೆ ಕ್ರಯಪತ್ರ ನೋಂದಾಯಿಸಲು ಬಾಕಿ ಇರುತ್ತದೆ. ಪ್ರಾಧಿಕಾರವು ಆಯೋಜಿಸಿದ್ದ ಮೇಳ, ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಫ್ಲಾಟ್ ಗಳನ್ನು ಖರೀದಿಸಿ, ಹಂಚಿಕೆ ಪತ್ರವನ್ನು ಪಡೆದಿರುವ ಎಲ್ಲಾ ಫ್ಲಾಟ್ / ವಿಲ್ಲಾ ಖರೀದಿದಾರರು ಸೆ.30 ರ ಒಳಗಡೆ ಒಳಗಾಗಿ ತಮ್ಮ ತಮ್ಮ ಫ್ಲಾಟ್/ ವಿಲ್ಲಾಗಳಿಗೆ ಸಂಬಂಧಿಸಿದಂತೆ ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಸ್ವಯಂ ದೃಢೀಕರಣ, ಬ್ಯಾಂಕ್‌ ಎನ್‌ಒಸಿ, ಫೋಟೋ, ಫೋಟೋಗಳೊಂದಿಗೆ ಫ್ಲಾಟ್ / ವಿಲ್ಲಾದ ಪೂರ್ತಿ ಹಣ ಪಾವತಿಸಿ, ಎಲ್ಲಾ ದಾಖಲೆಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸಿದ್ದಲ್ಲಿ, ಪೂರ್ಣ ದಾಖಲೆ ಮತ್ತು ಹಣ ಪಾವತಿಸಿದವರಿಗೆ “ಮೊದಲು ಬಂದವರಿಗೆ ಪ್ರಥಮ ಆದ್ಯತೆ”ಯ (“First Come First Service) ಆಧಾರದ ಮೇಲೆ ಅ.3 ರಿಂದ ಅ.16 ರ ಅವಧಿಯಲ್ಲಿ ಕ್ರಯ ಪತ್ರ ನೋಂದಣಿ” ಮೇಳವನ್ನು ಪ್ರಾಧಿಕಾರದ ಕೇಂದ್ರ ಕಛೇರಿ, ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-20 ರಲ್ಲಿ ನಡೆಸಿ ಕ್ರಯಪತ್ರ ನೋಂದಾಯಿಸಿ ಕೊಡಲಾಗುವುದು. . ಇದನ್ನೂ ಓದಿ: ಲೈಬ್ರರಿಯ ಕ್ಲರ್ಕ್‌ ಆದ ಪ್ರಜ್ವಲ್‌ ರೇವಣ್ಣ ದಿನಕ್ಕೆ 522 ರೂ. ಸಂಬಳ

    ಸಾರ್ವಜನಿಕರಿಗೆ ಯಾವುದೇ ರೀತಿಯು ತೊಂದರೆ, ಕಿರುಕುಳವಾಗದಂತೆ ಕ್ರಮವಹಿಸಿ, ಕ್ರಯಪತ್ರ ನೋಂದಾಯಿಸಲು ಪ್ರಾಧಿಕಾರವು ಎಲ್ಲಾ ಕ್ರಮಗಳನ್ನು ವಹಿಸುತ್ತಿರುವುದರಿಂದ ಇದರ ಸದುಪಯೋಗವನ್ನು ಪಡೆಯುವಂತೆ ಬಿಡಿಎ ಕೇಳಿಕೊಂಡಿದೆ. ಇದನ್ನೂ ಓದಿಗಂಡನನ್ನು ಹೊಡೆದು ಕೊಲ್ಲುವಾಗ ಎದುರಲ್ಲೇ ಇದ್ದ ಸೋನಮ್  ಹನಿಮೂನ್‌ ಕೊಲೆ ಕೇಸ್‌ ಚಾರ್ಜ್‌ಶೀಟ್‌ನಲ್ಲೇನಿದೆ?

     

  • ಬೆಂಗಳೂರಿನಲ್ಲಿ ಭೂಸ್ವಾಧೀನ| 15 ಗ್ರಾಮಗಳಿಗೆ ಬಿಡಿಎ ನೋಟಿಸ್‌, ಕಂಗಲಾದ ಜನ

    ಬೆಂಗಳೂರಿನಲ್ಲಿ ಭೂಸ್ವಾಧೀನ| 15 ಗ್ರಾಮಗಳಿಗೆ ಬಿಡಿಎ ನೋಟಿಸ್‌, ಕಂಗಲಾದ ಜನ

    ಬೆಂಗಳೂರು: ಹೇಗಾದರೂ ಮಾಡಿ ಒಂದು ಸೂರು ಮಾಡಿಕೊಂಡು ನೆಮ್ಮದಿಯಾಗಿ ಬದುಕಬೇಕು ಎನ್ನುವುದು ಬೆಂಗಳೂರಿಗೆ ಬರುವ ಹಲವರ ಕನಸು. ಹೀಗೆ ಕನಸನ್ನು ನನಸು ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದವರಿಗೆ ಕಳೆದ ಒಂದು ವಾರದಿಂದ ಆತಂಕವೊಂದು ಶುರುವಾಗಿದೆ. ಬಿಡಿಎನಿಂದ (BDA) ಬಂದಿರುವ ನೋಟಿಸ್‌ ನೋಡಿ ಆಕಾಶವೇ ತಲೆಮೇಲೆ ಬಿದ್ದಂತೆ ಆಗಿದ್ದಾರೆ.

    ಬೆಂಗಳೂರು ಉತ್ತರ (Bengaluru North) ತಾಲೂಕಿನ ದಾಸನಪುರ (Dasanapura) ಹೋಬಳಿಯ 15 ಕ್ಕೂ ಹೆಚ್ಚು ಗ್ರಾಮದ ಜಾಗದಲ್ಲಿ ಫೆರಿಫೆರಲ್ ರಸ್ತೆ, ಬಿಎಂಟಿಸಿ ಬಸ್ ಡಿಪೋ ಹಾಗೂ ಟ್ರಕ್ ಟರ್ಮಿನಲ್ ನಿರ್ಮಾಣ ಸಂಬಂಧ 2006ರ ನೋಟಿಫಿಕೇಶನ್‌ ಉಲ್ಲೇಖಿಸಿ ಭೂ ಸ್ವಾಧೀನಕ್ಕೆ ಭೂಮಿಯ ಮಾಲೀಕರಿಗೆ ಬಿಡಿಎ ನೋಟಿಸ್ ನೀಡಿದೆ.

    ದಾಸನಪುರ ಹೋಬಳಿಯ ಆಲೂರು, ಅಡಕಮಾರನಹಳ್ಳಿ, ದೊಂಬರಹಳ್ಳಿ, ಲಕ್ಷ್ಮಿಪುರ ಮಾದವಾರ, ದಾಸನಪುರ, ಚಿಕ್ಕಬಿದರಕಲ್ಲು, ಭೋವಿ ಪಾಳ್ಯ ಹೀಗೆ ದಾಸನಪುರ ಹೋಬಳಿಯ ಸಾವಿರಾರು ಸರ್ವೆ ನಂಬರ್ ಗಳಿಗೆ ನೋಟಿಸ್‌ ನೀಡಲಾಗಿದೆ.

     

    20 ವರ್ಷಗಳಿಂದ ಯಾವುದೇ ರೀತಿಯ ಉಲ್ಲೇಖ ಮಾಡದೇ ಈಗ ಜಮೀನುಗಳೆಲ್ಲ ಮನೆಗಳಾಗಿದ್ದು, ಜಮೀನು ಮಾಲೀಕರು ಸೈಟ್ ಮಾಡಿ ಮಾರಾಟ ಮಾಡಿ ಹೋಗಿದ್ದಾರೆ. ಸಾವಿರಾರು ಮನೆಗಳು ಈ ಜಾಗದಲ್ಲಿ ಈಗ ನಿರ್ಮಾಣವಾಗಿದ್ದು ಬಿಡಿಎ ನೋಟಿಸ್‌ ನೋಡಿದ ಜನ ನಾವು ಏನ್ ತಪ್ಪು ಮಾಡಿದ್ದೇವೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

    ಬಿಡಿಎ ಪ್ರಾಥಮಿಕ ನೋಟಿಸ್‌ ನೀಡಿದ್ದು ನಿಮಗೆ ಅಕ್ಷೇಪವಿದ್ದರೆ ಆಕ್ಷೇಪಣೆ ಸಲ್ಲಿಸಿ ಎಂದು ಹೇಳಿದೆ. ಇಷ್ಟು ವರ್ಷ ಸುಮ್ಮನಿದ್ದ ಬಿಡಿಎ ಈಗ ಯಾಕೇ ಹೀಗೆ ಮಾಡುತ್ತಿದೆ? ನಮಗೆ ಮನೆ ಕಟ್ಟಲು ಅನುಮತಿ ನೀಡಿದ್ದಾರೆ. ಮನೆಗಳಿಗೆ ನೀರು ವಿದ್ಯುತ್ ಎಲ್ಲವನ್ನು ಕಾನೂನಿನ ಅಡಿಯಲ್ಲೇ ನೀಡಲಾಗಿದೆ. ನಾವು ಕಂದಾಯ ಸಹ ಕಟ್ಟಿದ್ದೇವೆ. ಈಗ ಜಮೀನನ ಮಾಲೀಕರಿಗೆ ನೋಟಿಸ್‌ ನೀಡಿದ್ದಾರೆ. ಆದರೆ ಅವರೆಲ್ಲ ಜಮೀನು ಮಾರಾಟ ಮಾಡಿದ್ದಾರೆ. ಈಗ ನಾವು ಏನು ಮಾಡಬೇಕು ಎಂದು ಗ್ರಾಮಸ್ಥರು ದಿಕ್ಕು ತೋಚದೇ ಆತಂಕದಲ್ಲಿದ್ದಾರೆ.

    ಸರ್ಕಾರ 2006 ರಲ್ಲೇ ಇಲ್ಲಿ ರಸ್ತೆ, ಡಿಪೋ, ಮತ್ತು ಟ್ರಕ್ ಟರ್ಮಿನಲ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದರೆ ಈ ಸರ್ವೆ ನಂಬರ್‌ ಬ್ಲಾಕ್‌ ಮಾಡಬೇಕಿತ್ತು. ಈಗ ನೋಟಿಸ್‌ ನೀಡುವ ಮೂಲಕ ಗೊಂದಲ ಸೃಷ್ಟಿಸಿದೆ. ನಾವು ಕಷ್ಟ ಪಟ್ಟು ಇಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದೇವೆ. ಈಗ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎನ್ನುತ್ತಿದ್ದಾರೆ ಜನರು.

    ನಾವು ಈ ಜಾಗದಿಂದ ಕದಲುವುದಿಲ್ಲ. ಸರ್ಕಾರ ನಮ್ಮನ್ನು ಸಾಯಿಸಿ ಅಮೇಲೆ ನಮ್ಮ ಜಾಗವನ್ನು ಸ್ವಾಧೀನಕ್ಕೆ ಪಡೆಯಲಿ. ಇದು ನಮ್ಮ ಜಾಗ. ನಮ್ಮ ನೋವನ್ನು ಯಾರೂ ಕೇಳುತ್ತಿಲ್ಲ. ಮುಂದೆ ದಾಸನಪುರ ಹೋಬಳಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ, ಹೋರಾಟ ಮಾಡುವುದಾಗಿ ಹೇಳಿದ್ದಾರೆ.

     

  • 2 ಬಡಾವಣೆ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಅಕ್ರಮ ಕಟ್ಟಡ ಕಟ್ಟಲು ಆರಂಭಿಸಿದ ಭೂ ಮಾಲೀಕರು

    2 ಬಡಾವಣೆ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಅಕ್ರಮ ಕಟ್ಟಡ ಕಟ್ಟಲು ಆರಂಭಿಸಿದ ಭೂ ಮಾಲೀಕರು

    ಬೆಂಗಳೂರು: ಇರುವ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆರೋಪ ಇರುವಾಗಲೇ ಬಿಡಿಎ (BDA) ಈಗ ಎರಡು ಪ್ರಮುಖ ಬಡಾವಣೆ ವಿಸ್ತರಣೆಗೆ ಮುಂದಾಗಿದೆ.

    ಹೌದು. ಕೆಂಪೇಗೌಡ ಬಡಾವಣೆ (Kempegowda Layout) ಮತ್ತು ಶಿವರಾಮ ಕಾರಂತ ಬಡಾವಣೆ (Shivaram Karanth Layout) ವಿಸ್ತರಣೆಗೆ ಮುಂದಾಗಿರುವ ಬಿಡಿಎ ಈಗಾಗಲೇ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ.

    ಈಗಾಗಲೇ ಶಿವರಾಮಕಾರಂತ ಬಡಾವಣೆಯಲ್ಲಿ 34,000 ಸಾಮಾನ್ಯ ಸೈಟ್‌ಗಳು ಮತ್ತು 4,500 ಕಾರ್ನರ್ ಸೈಟ್‌ಗಳೊಂದಿಗೆ 3,546 ಎಕರೆ ಜಮೀನಿನಲ್ಲಿ ಲೇಔಟ್ ಅಭಿವೃದ್ಧಿಪಡಿಸಲಾಗಿದೆ. ಇದು ದೊಡ್ಡಬಳ್ಳಾಪುರ (Doddaballapura) ಮತ್ತು ಹೆಸರಘಟ್ಟ (Hesaraghatta) ನಡುವಿನ 17 ಹಳ್ಳಿಗಳನ್ನು ವ್ಯಾಪಿಸಿದೆ. ಈ ವರ್ಷದ ಆರಂಭದಲ್ಲಿ ಬಿಡಿಎ ಹೆಚ್ಚುವರಿಯಾಗಿ 2,095 ಎಕರೆಗಳಷ್ಟು ಬಡಾವಣೆಯನ್ನು ವಿಸ್ತರಿಸಲು ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚೀನಿ ವೈರಸ್ ಪತ್ತೆ| ಆರೋಗ್ಯ ಇಲಾಖೆ ಅಲರ್ಟ್ – ಏನು ಮಾಡಬೇಕು? ಏನು ಮಾಡಬಾರದು?

     

    ಇದೇ ಮಾದರಿಯಲ್ಲಿ ಕೆಂಪೇಗೌಡ ಬಡಾವಣೆಯನ್ನ ವಿಸ್ತರಣೆ ಮಾಡುತ್ತಿದೆ. ಬಿಡಿಎ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲಿದೆ ಎಂದು ತಿಳಿದು ಭೂ ಮಾಲೀಕರು ಅಕ್ರಮವಾಗಿ ಕಟ್ಟಡವನ್ನ ಕಟ್ಟಲು ಮುಂದಾಗುತ್ತಿದ್ದಾರೆ. ಇದನ್ನು  ತಡೆಯಲು ಬಿಡಿಎ ವಿದ್ಯುತ್ ಕಡಿತಕ್ಕೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದೆ.

    ಒಟ್ಟಾರೆ ಎರಡು ಬಡಾವಣೆಗಳಲ್ಲೂ ಸಾವಿರಾರು ಎಕರೆಯಲ್ಲಿ ಸೈಟ್ ನಿರ್ಮಾಣಕ್ಕೆ ಮುಂದಾಗಿದೆ. ವಿಸ್ತರಣಾ ಕಾರ್ಯ ಶುರುವಾಗಿದ್ದು ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಿದೆ.

     

  • ಬಿಡಿಎ ನಿವೇಶನದಾರರಿಗೆ ಶಾಕಿಂಗ್ ನ್ಯೂಸ್; ನಿವೇಶನದಲ್ಲಿ ಮನೆ ನಿರ್ಮಾಣಕ್ಕಿದ್ದ ಅವಧಿ ಕಡಿತ

    ಬಿಡಿಎ ನಿವೇಶನದಾರರಿಗೆ ಶಾಕಿಂಗ್ ನ್ಯೂಸ್; ನಿವೇಶನದಲ್ಲಿ ಮನೆ ನಿರ್ಮಾಣಕ್ಕಿದ್ದ ಅವಧಿ ಕಡಿತ

    ಬೆಂಗಳೂರು: ಬಿಡಿಎ (BDA) ನಿವೇಶನ ಹೊಂದಿರುವವರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ನಿವೇಶನದಲ್ಲಿ ಮನೆ ನಿರ್ಮಾಣಕ್ಕೆ ಇದ್ದ ಅವಧಿಯನ್ನು ಕಡಿತ ಮಾಡಲಾಗಿದೆ.

    ಹೌದು, ನಿವೇಶನದಲ್ಲಿ ಮನೆ ನಿರ್ಮಾಣಕ್ಕೆ ಇದ್ದ ಅವಧಿಯನ್ನ ಕಡಿತ ಮಾಡಲಾಗಿದೆ. ಐದು ವರ್ಷದ ಕಾಲಮಿತಿಯನ್ನು ಕಡಿತಗೊಳಿಸಿ 3 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಖಾಲಿ ನಿವೇಶನದಲ್ಲಿ ಮೂರು ವರ್ಷಗಳಲ್ಲಿ ಮನೆ ನಿರ್ಮಾಣ ಮಾಡದೇ ಇದ್ದರೆ ಪ್ರಸ್ತುತ ಮಾರುಕಟ್ಟೆ ದರದ ಅನ್ವಯ ಶೇ.10% ದಂಡ ವಿಧಿಸಲಾಗುತ್ತೆ. ಇದನ್ನೂ ಓದಿ: ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ವಿಶೇಷ ರೈಲು

    ಸಾಲ ಮಾಡಿ ನಿವೇಶನ ಖರೀದಿ ಮಾಡಿರುತ್ತೇವೆ. ಇದರಿಂದ ಪ್ರತಿ ನಿವೇಶನದಾರರಿಗೆ ಲಕ್ಷ ಲಕ್ಷ ರೂ. ಆರ್ಥಿಕ ಹೊರೆಯಾಗುತ್ತೆ ಎಂದು ನಿಯಮದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಕಳೆದ ಸೆಪ್ಟೆಂಬರ್ ತಿಂಗಳ ಬೋರ್ಡ್ ಮೀಟಿಂಗ್‌ನಲ್ಲಿ ಬಿಡಿಎ ಈ ನಿರ್ಣಯ ಮಾಡಲಾಗಿದೆ. ಇನ್ನು ಬಿಡಿಎಯ ಈ ನಿರ್ಧಾರಕ್ಕೆ ಖಾಲಿ ನಿವೇಶನ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಖರೀದಿಸಿದ ನಿವೇಶನಕ್ಕೆ ನಮಗೆ ದಂಡ ವಿಧಿಸಿದ್ರೆ ಹೇಗೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಬಿಡಿಎಯ ಈ ನಿರ್ಧಾರ ಅವೈಜ್ಞಾನಿಕ ಎಂದು ಆರೋಪಿಸುತ್ತಿದ್ದಾರೆ. ಸಾಲ ಮಾಡಿ ನಿವೇಶನ ಖರೀದಿ ಮಾಡಿದ ನಮಗೆ ನಿವೇಶನ ಉಳಿಸಿಕೊಂಡಿದ್ದೇ ತಪ್ಪು ಎನ್ನುವ ಸ್ಥಿತಿಗೆ ಬಿಡಿಎ ತಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸಾಗಿಸ್ತಿದ್ದ ಕ್ಯಾಂಟರ್‌ಗೆ ಲಾರಿ ಡಿಕ್ಕಿಯಾಗಿ ಸ್ಫೋಟ – ಇಬ್ಬರ ಸ್ಥಿತಿ ಗಂಭೀರ

  • ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು – BDA) ಅನಧಿಕೃತ ನಿರ್ಮಾಣಗಳನ್ನ ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ 1ನೇ ಹಂತದಲ್ಲಿ 60 ಕೋಟಿ ರೂ. ಆಸ್ತಿಯನ್ನು (BDA Property) ವಶಪಡಿಸಿಕೊಂಡಿದೆ.

    ಬೆಂಗಳೂರು ಉತ್ತರ (Bengakuru North) ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 78ರ 28 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 8 ಶೆಡ್‌ಗಳನ್ನ ತೆರವುಗೊಳಿಸಿ, ಸುಮಾರು 60 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ. ಇದನ್ನೂ ಓದಿ: ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಗಮನಾರ್ಹ ಸಾಧನೆ – 24.2 GW ಸಾಮರ್ಥ್ಯ ವೃದ್ಧಿ: ಜೋಶಿ

  • ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಕೇಸ್‌ – ಲೋಕಾಯುಕ್ತ ವಿಚಾರಣೆ ಎದುರಿಸಿದ ಬಿಎಸ್‌ವೈ

    ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಕೇಸ್‌ – ಲೋಕಾಯುಕ್ತ ವಿಚಾರಣೆ ಎದುರಿಸಿದ ಬಿಎಸ್‌ವೈ

    ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಶನ್‌ (Gangenahalli Denotification) ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪನವರು (BS Yediyurappa) ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ.

    ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಳಿಕ ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಿಳಾ ಪಿಎಸ್‍ಐ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ – ಕೊಲೆ ಆರೋಪಿಗೆ ಗುಂಡೇಟು

    ಈ ಸಂಬಂಧ ಗುರುವಾರ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ 2015ರಲ್ಲಿ ಲೋಕಾಯುಕ್ತದಲ್ಲಿ (Lokayukta) ಕೇಸ್‌ ದಾಖಲಾದರೂ ಈವರೆಗೂ ತನಿಖೆ ಪೂರ್ತಿಯಾಗಿಲ್ಲ. 2021ರಿಂದ ಲೋಕಾಯುಕ್ತದಲ್ಲಿ ಈ ಕೇಸ್ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ಕಿಡಿಕಾರಿದ್ದರು.

    ಕಾಂಗ್ರೆಸ್ ಆರೋಪ ಏನಿತ್ತು?
    1976 ರಲ್ಲಿ ಗಂಗೇನಹಳ್ಳಿಯಲ್ಲಿ ಬಿಡಿಎ (BDA) ನೋಟಿಫಿಕೇಶನ್ ಆಗಿದೆ. ಅದರಲ್ಲಿ 1.11 ಎಕ್ರೆ ಜಾಗ ಡಿನೋಟಿಫೈ ಮಾಡಲು 30 ವರ್ಷದ ನಂತರ ಅರ್ಜಿ ಸಲ್ಲಿಸಲಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡಿನೋಟಿಫೈಗೆ ರಾಜಶೇಖರಯ್ಯ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ಈ ಜಮೀನಿಗೂ ರಾಜಶೇಖರಯ್ಯಗೂ ಯಾವುದೇ ಸಂಬಂಧ ಇಲ್ಲ.

    ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್‌ಗೆ ಸೂಚನೆ ಕೊಡುತ್ತಾರೆ. ಸೆಪ್ಟೆಂಬರ್‌ 11, 2007 ರಲ್ಲಿ ಇದೇ ಜಮೀನನ್ನು ಅನಿತಾ ಕುಮಾರಸ್ವಾಮಿ ತಾಯಿ ವಿಮಲಾ ಅವರಿಗೆ ಜಿಪಿಎ ಮಾಡಲಾಗಿದೆ. ಜಿಪಿಎ ರಾಜಶೇಖರಯ್ಯ ಮಾಡಿಸಿಕೊಳ್ಳದೇ ಮೂಲ ಮಾಲೀಕರ 21 ಮಂದಿ ವಾರಸುದಾರರಿಂದ ಆಗುತ್ತದೆ. ನಂತರ ಆ ಭೂಮಿ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರ ಹೆಸರಿಗೆ ರಿಜಿಸ್ಟ್ರರ್‌ ಆಗುತ್ತದೆ. ಇದನ್ನೂ ಓದಿ: ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

    2008ರಲ್ಲಿ ಸಿಎಂ ಆಗಿದ್ದ ಬಿಎಸ್‌ ಯಡಿಯೂರಪ್ಪನವರು ಡಿನೋಟಿಫೈಯಿಂದ ಕೈಬಿಡಿ ಅಂತ ಷರಾ ಬರೆಯುತ್ತಾರೆ. ಈ ರಾಜಶೇಖರಯ್ಯ ಎಂಬ ಬೇನಾಮಿ ಅರ್ಜಿ ಮೇರೆಗೆ ಈ ಷರಾ ಬರಯಲಾಗಿದೆ. 2015ರಲ್ಲಿ ಈ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗುತ್ತದೆ. 2021 ರಲ್ಲಿ ಲೋಕಾಯುಕ್ತದಲ್ಲಿ ಕೊನೆಯ ಬಾರಿಗೆ ವಿಚಾರಣೆ ನಡೆಯುತ್ತದೆ.

    ಕುಮಾರಸ್ವಾಮಿ ಇದ್ದಾಗ ಡಿನೋಟಿಫೈ ಮಾಡಲು ಮುಂದಾಗಿ ಯಡಿಯೂರಪ್ಪ ಸಿಎಂ ಆದಾಗ ಮಾಡಲು ಶಿಫಾರಸ್ಸು ಮಾಡಲಾಗಿದೆ. ಅಂದಿನ ಮುಖ್ಯ ಕಾರ್ಯದರ್ಶಿ ಡಿ‌‌ನೋಟಿಫೈ ಮಾಡಲು ಬರುವುದಿಲ್ಲ ಎಂದರೂ ಡಿನೋಟಿಫೈ ಮಾಡಲಾಗಿದೆ.

  • ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

    ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

    ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ.

    ಪತ್ರದಲ್ಲಿ ಏನಿದೆ?
    ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು ಅರಣ್ಯ ಬಫರ್ ವಲಯದಲ್ಲಿ 2003 – 2004 ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರ ಫಲವಾಗಿ ಇಂದು 1500 ಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿರುವುದಿಲ್ಲ. 20 ವರ್ಷ ಕಳೆದು ಹೋಗಿದ್ದರೂ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಒಟ್ಟಿಗೆ ಕುಳಿತು ಚರ್ಚಿಸಿ ಪ್ರಸ್ತುತ ಭೂಮಿಯ ಮಾಲೀಕತ್ವದ ಬಗ್ಗೆ ಒಂದು ಒಪ್ಪಂದಕ್ಕೆ ಬರಲು ಸಾಧ್ಯವಾಗದೇ ಇರುವುದು ನಿಜಕ್ಕೂ ವಿಷಾದನೀಯ. ಬಿಡಿಎಯಿಂದ ನಿವೇಶನ ಪಡೆದು 20 ವರ್ಷಗಳು ಆದರೂ ತಮ್ಮ ನಿವೇಶನದಲ್ಲಿ ಒಂದು ಗೂಡು ಕಟ್ಟಿಕೊಳ್ಳುವ ಈ ಎಲ್ಲಾ ಸಂತ್ರಸ್ತ ಹಂಚಿಕೆದಾರರ ಆಸೆಗೆ ಕಣ್ಣೀರು ಎರಚುವಂತೆ ಮಾಡಿದೆ ಬಿಡಿಎ ಉದಾಸೀನ – ಬೇಜಾವ್ದಾರಿ ಮನಸ್ಥಿತಿ. ಇದನ್ನೂ ಓದಿ: Wayanad landslides – ಕಂಬನಿ… ಖಾಲಿಯಾಗಿದೆ…!

     

    ಹಾಗೆಯೇ ಸ್ವಾಧೀನತೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ದಾವೆಗಳು ಬಾಕಿ ಇರುವುದರಿಂದ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಹಾಗೂ ಅಂಜನಾಪುರ ದಂತಹ ಕೆಲವು ಬಿಡಿಎ ನಿರ್ಮಿತ ಬಡಾವಣೆಗಳಲ್ಲಿನ ಸುಮಾರು ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಅವರ ಪರಿಸ್ಥಿತಿ, ಸಂಕಟ ಹೇಳತೀರದು. ಅಲ್ಲದೆ ಇಲ್ಲಿನ ಕೆಲವು ಲೇಔಟ್ ಗಳಲ್ಲಿ ಭೂ ಸ್ವಾಧೀನಕ್ಕೆ ಒಳಪಟ್ಟ ಅನೇಕ ಜಮೀನುಗಳ ಮಾಲೀಕರು ತಮ್ಮ ಭೂಮಿಗೆ ಬದಲಾಗಿ ಪರಿಹಾರದ ರೂಪದಲ್ಲಿ ಬಿಡಿಎ ನೀಡುವ ನಿವೇಶನಗಳ ಪರಿಹಾರದ ಮಂಜೂರಾತಿಗಾಗಿ ಅನೇಕ ಸಮಯದಿಂದ ಎದುರು ನೋಡುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಮೊದಲಿಗೆ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಮತ್ತು ಅಂಜನಾಪುರ ದಂತಹ ಬಡಾವಣೆಗಳಲ್ಲಿ ನಿವೇಶನ ಹಂಚಿಕೆಯಾಗಿ ಬಿಡಿಎಗೆ ಹಣ ಪಾವತಿ ಮಾಡಿ ನಿವೇಶನ ನೋಂದಣಿ ಮಾಡಿಕೊಂಡರೂ ನಾನಾ ಕಾರಣಗಳಿಂದ ನಿವೇಶನ ಸ್ವಾಧೀನ ಸಿಗಲು ಸಾಧ್ಯವಾಗದೇ ಇರುವ ಅರ್ಜಿದಾರರ ಮತ್ತು ಭೂ ಮಾಲೀಕರ ಪರಿಪಾಟಲುಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇವರ ಕುಂದು ಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುವ ಮುನ್ನ ಮೊದಲಿಗೆ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕಾಗಿರುವುದು ಸಮಂಜಸ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್‌ ಹೋದರೆ ದಂಡದ ಜೊತೆ ಜೈಲು!

    ಇವರಿಗೆ ಮೊದಲಿಗೆ ನ್ಯಾಯಯುತವಾಗಿ ನಿವೇಶನ ಒದಗಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಬೇಡಿಕೆ ಕೂಡ ಆಗಿದೆ. ಬಿಡಿಎ ಪರ್ಯಾಯ ನಿವೇಶನಗಳನ್ನು ಒದಗಿಸುವ ಮೊದಲು ಈ ಎಲ್ಲಾ ಭೂಬಾಧಿತ ನಿವೇಶನ ಹಂಚಿಕೆದಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ಇದಕ್ಕಾಗಿ ವ್ಯಾಪಕ ಪ್ರಚಾರವನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

    ಇದರಿಂದ ಬಿಡಿಎಗೆ ಹಂಚಿಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ. ಜೊತೆಗೆ ಹಂಚಿಕೆದಾರರಿಂದ ಭವಿಷ್ಯದಲ್ಲಿ ನ್ಯಾಯಾಲಯದಲ್ಲಿ ದಾವೆಗಳನ್ನು ಹೂಡುವುದನ್ನು ಪೂರ್ಣವಾಗಿ ನಿಲ್ಲಿಸಬಹುದು ಮತ್ತು ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದು. ಹಂಚಿಕೆದಾರರ ಶಾಪದಿಂದಲೂ ಬಿಡಿಎ ವಿಮುಕ್ತಿಗೊಳ್ಳಬಹುದು.

  • ಟ್ರಾಫಿಕ್ ಸಮಸ್ಯೆ; 50 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗ್ಳೂರಿನ 12 ಕಡೆ ಸುರಂಗ ನಿರ್ಮಾಣಕ್ಕೆ ಪ್ಲ್ಯಾನ್‌

    ಟ್ರಾಫಿಕ್ ಸಮಸ್ಯೆ; 50 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗ್ಳೂರಿನ 12 ಕಡೆ ಸುರಂಗ ನಿರ್ಮಾಣಕ್ಕೆ ಪ್ಲ್ಯಾನ್‌

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಸಮಸ್ಯೆ (Bengaluru Traffic Problem) ನಿವಾರಣೆಗೆ ಸರ್ಕಾರ ಸುರಂಗ ಮಾರ್ಗದ ಮೊರೆ ಹೋಗಿದೆ. 50 ಕೋಟಿ ರೂ. ವೆಚ್ಚದಲ್ಲಿ 6 ಕಡೆ ಸುರಂಗ ಮಾರ್ಗ ಮಾಡಲು ಮುಂದಾಗಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಕನಿಷ್ಠ 5 ವರ್ಷ ಸಮಯ ಬೇಕಾಗಲಿದೆ. ಈ ನಡುವೆ ಸುರಂಗ ಮಾರ್ಗ ನಿರ್ಮಾಣದ ಹೊಣೆ BBMP ಗಾ? ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕಾ? (BDA) ಅನ್ನೋ ಪ್ರಶ್ನೆ ಎದ್ದಿದೆ.

    ಬ್ರ‍್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ಜನರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕರಿಂದ ಹಲವಾರು ಸಲಹೆಗಳು ಬರ್ತಿವೆ, ಅದರಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಒಂದು. ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೋರಾಗಿದ್ದು ಕಿರಿ-ಕಿರಿಗೆ ಪೊಲೀಸರು ಹೈರಾಣಾಗಿದ್ದಾರೆ. ಹಾಗಾಗಿ ಸರ್ಕಾರ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸುರಂಗ ಮಾರ್ಗದ (Subway Road) ಮೊರೆಹೋಗಿದೆ. 50 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡುತ್ತಿದೆ. ಇದನ್ನೂ ಓದಿ: ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಚಲುವರಾಯಸ್ವಾಮಿ ಕಾರಣ- ಗೆಳೆಯರು, ಕುಟುಂಬಸ್ಥರು ಆಕ್ರೋಶ

    ಸುರಂಗ ರಸ್ತೆ ಮಾರ್ಗಗಳ ನಿರ್ಮಾಣ ಬಗ್ಗೆ ಬೇರೆ ದೇಶಗಳ ತಾಂತ್ರಿಕ ತಜ್ಞರಿಂದಲೂ ಸಲಹೆ ಮತ್ತು ಸುರಂಗ ನಿರ್ಮಾಣ ಸಲಹಾ ಸಂಸ್ಥೆ ಅಧಿಕಾರಿಗಳಿಂದಲೂ ಸರ್ಕಾರ ಸಲಹೆ ಪಡೆದಿದೆ. 2 ಹಂತಗಳಲ್ಲಿ ಸುರಂಗ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದು, 22 ಸಾವಿರ ಕೋಟಿ ವೆಚ್ಚದಲ್ಲಿ 50 ಕಿಮೀ ರಸ್ತೆ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಸುರಂಗ ಮಾರ್ಗವನ್ನ 4 ಅಥವಾ 6 ಪಥದಲ್ಲಿ ನಿರ್ಮಾಣ ಮಾಡಲು ಚಿಂತನೆ ನಡೆದಿದೆ. ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಟನಲ್ ನಿರ್ಮಾಣ ಮಾಡೋಕೆ ಹೋಗಿ ಬೆಂಗಳೂರನ್ನ ಸಮಾಧಿ ಮಾಡಬೇಡಿ. ವೈಜ್ಞಾನಿಕವಾಗಿ ಕೆಲಸ ಮಾಡಿ ಅಂತಾ ಸಲಹೆ ನೀಡಿದ್ದಾರೆ.

    ಅಂದುಕೊಂಡಂತೆ ಈ ಕೆಳಕಂಡ ಮಾರ್ಗಗಳಲ್ಲಿ ರಸ್ತೆ ನಿರ್ಮಾಣ ಮಾಡಬೇಕಿದ್ರೆ ಸುಮಾರು 5 ವರ್ಷ ಸಮಯ ತೆಗೆದುಕೊಳ್ಳಲಿದೆ. ಬೆಂಗಳೂರು ಕೇಂದ್ರದ ಸುತ್ತಲೂ ಹೊರ ವಲಯಗಳಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗ್ತಿದೆ. ಇದನ್ನೂ ಓದಿ: JDS ಪರ ಪ್ರಚಾರ ಮಾಡಿದ್ದಕ್ಕೆ ಮಗನ ವರ್ಗಾವಣೆ- ಆತ್ಮಹತ್ಯೆಗೆ ಯತ್ನಿಸಿದ ಜಗದೀಶ್ ತಂದೆ ಬೇಸರ

    ಎಲ್ಲೆಲ್ಲಿ ಬರಲಿದೆ ಸುರಂಗ ರಸ್ತೆ?

    * ಉತ್ತರದಿಂದ ದಕ್ಷಿಣ ಕಾರಿಡಾರ್ – ಒಟ್ಟು 27 ಕಿ.ಮೀ
    ಬಳ್ಳಾರಿ ರಸ್ತೆಯಿಂದ ಹೊಸೂರು ರೋಡ್
    ಯಲಹಂಕ – ಮೇಖ್ರಿ ಸರ್ಕಲ್ ಮಾರ್ಗವಾಗಿ ಕೇಂದ್ರೀಯ ರೇಷ್ಮೆಮಂಡಳಿ

    * ಪೂರ್ವದಿಂದ ಪಶ್ಚಿಮ ಕಾರಿಡಾರ್ 1 – ಒಟ್ಟು 29 ಕಿ.ಮೀ
    ಕೆ.ಆರ್ ಪುರದಿಂದ ಗೊರಗುಂಟೆ ಪಾಳ್ಯ
    ಹಳೇ ಮದ್ರಾಸ್ ರಸ್ತೆ – ಐಟಿಪಿಎಲ್ – ವರ್ತುಲ ರಸ್ತೆ
    ರಾಮಮೂರ್ತಿ ನಗರ ಕಡೆಯಿಂದ ಹೊರಗುಂಟೆ ಪಾಳ್ಯ

    * ಪೂರ್ವದಿಂದ ಪಶ್ಚಿಮ ಕಾರಿಡಾರ್ 2 – ಒಟ್ಟು 28.90 ಕಿ.ಮೀ
    ಹಳೇ ಏರ್‌ಪೋರ್ಟ್ ರಸ್ತೆಯಿಂದ ಮೈಸೂರು ರಸ್ತೆ
    ವರ್ತೂರು ಕೋಡಿಯಿಂದ ಜ್ಞಾನಭಾರತಿವರೆಗೆ

    * ಸಂಪರ್ಕ ಕಾರಿಡಾರ್ 1 – ಒಟ್ಟು 4.5 ಕಿ.ಮೀ
    ಸೇಂಟ್ ಜಾನ್ ಆಸ್ಪತ್ರೆ ಜಂಕ್ಷನ್‌ನಿಂದ ಅಗರ ವರೆಗೆ
    * ಸಂಪರ್ಕ ಕಾರಿಡಾರ್ 2 – ಒಟ್ಟು 2.8 ಕಿ.ಮೀ
    * ಸಂಪರ್ಕ ಕಾರಿಡಾರ್ 3 – ಒಟ್ಟು 6.45 ಕಿ.ಮೀ
    ವೀಲರ್ಸ್ ರಸ್ತೆ ಜಂಕ್ಷನ್‌ನಿಂದ ಹೊರವರ್ತುಲದ ಕಲ್ಯಾಣನಗರಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

    ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು

    ಬೆಂಗಳೂರು: ಆರ್‌ಆರ್ ನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ರೂ. ಬಿಲ್ ಪಡೆದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಿಡಿಎಯಲ್ಲೂ ಎಸ್‌ಐಟಿ (Special Investigation Team) ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪಾಲಿಕೆಯಲ್ಲೂ ಆಗಲಿದೆ. ಈ ಬಗ್ಗೆ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

    ವಿವಿಧ ಕಾಮಗಾರಿಗಳು, ಟೆಂಡರ್‌ಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ (BJP) ನಾಯಕರ ಟೀಕೆ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

    ಸ್ಥಗಿತಗೊಂಡಿರುವ ಕಾಮಗಾರಿ ಪುನರಾರಂಭವಾಗುವುದು ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ಎಲ್ಲಾ ಯೋಜನೆ ಡಬಲ್ ಚೆಕ್ ಮಾಡಿಸುತ್ತೇನೆ. ಕಾಮಗಾರಿ ಅಂದಾಜು ಪರಿಶೀಲನೆ ಮಾಡಿಸುತ್ತೇನೆ. ಎಲ್ಲವೂ ಸರಿಯಾಗಿದ್ದರೆ ಮಾತ್ರ ಪುನರಾರಂಭವಾಗಲಿದೆ. ಈ ವಿಚಾರವಾಗಿ ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಎಚ್ಚರಿಕೆ ನೀಡಿದ್ದೆ. ಯಾರು ಎಷ್ಟಾದರೂ ಕೂಗಿಕೊಳ್ಳಲಿ ನಾವು ನಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ

    ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಡ ಮಾಡದೇ ಲೋಕಾಯುಕ್ತಕ್ಕೆ (Lokayukta) ದೂರು ನೀಡಲಿ ಎಂದು ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಇದನ್ನೂ ಓದಿ: ಸರ್ವರ್ ಹ್ಯಾಕ್ ಹೇಳಿಕೆ – ರಾಜಕೀಯದಲ್ಲಿ ಇಂತಹ ಸ್ಟೇಟ್‌ಮೆಂಟ್‌ಗಳು ಇದ್ದೇ ಇರುತ್ತೆ: ಸತೀಶ್ ಜಾರಕಿಹೊಳಿ ಯೂಟರ್ನ್