Tag: ಬಿಬಿಎಂಪಿ ಅಧಿಕಾರಿಗಳು

  • PUBLiC TV Impact | ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ

    PUBLiC TV Impact | ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ

    ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳನ್ನು (Indira Canteen) ಕತ್ತಲೆಗೆ ದೂಡಿದ್ದ ಬಿಬಿಎಂಪಿ ಇದೀಗ ಎಚ್ಚೆತ್ತುಕೊಂಡಿದ್ದು, ‘ಪಬ್ಲಿಕ್ ಟಿವಿ’ ವರದಿಯ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ ಸಿಕ್ಕಿದೆ.

    ನಗರದ ಕೆಲವು ಇಂದಿರಾ ಕ್ಯಾಂಟೀನ್‌ಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೇ, ಮೊಂಬತ್ತಿ ಬೆಳಕಿನಡಿ ಗ್ರಾಹಕರು ಊಟ ಮಾಡುತ್ತಿದ್ದರು. ಈ ಬಗ್ಗೆ ಇಂದಿರಾ ಕ್ಯಾಂಟೀನ್‌ಗಳಿಗೆ ಕತ್ತಲೆ ಭಾಗ್ಯ ಎಂದು ಪಬ್ಲಿಕ್ ಟಿವಿ ವರದಿಯೊಂದು ಬಿತ್ತರಿಸಿತ್ತು. ವರದಿ ಪ್ರಸಾರದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ, ಬೆಸ್ಕಾಂಗೆ ಇನ್ನೆರೆಡು ತಿಂಗಳಲ್ಲಿ ಬಿಲ್ ಪಾವತಿ ಮಾಡುವುದಾಗಿ ಭರವಸೆ ನೀಡಿದ್ದು, ಮತ್ತೆ ವಿದ್ಯುತ್ ಸಂಪರ್ಕವನ್ನು ಪಡೆದುಕೊಂಡಿದೆ.ಇದನ್ನೂ ಓದಿ: ರಾಜ್ಯದ ಎರಡನೇ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ 44ರ ಸಂಭ್ರಮ

    ಮೆಜೆಸ್ಟಿಕ್, ವೆಸ್ಟ್ ಹಾಫ್ ಕಾರ್ಡ್ ರಸ್ತೆ ಸೇರಿ ಹಲವು ಇಂದಿರಾ ಕ್ಯಾಂಟೀನ್‌ಗಳಲ್ಲಿ ನಾಲ್ಕೈದು ತಿಂಗಳುಗಳಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ಮೆಜೆಸ್ಟಿಕ್‌ನ ಇಂದಿರಾ ಕ್ಯಾಂಟೀನ್‌ನ ಬಿಲ್ 8 ಸಾವಿರದ 340 ರೂ. ಆಗಿತ್ತು.

    ಪ್ರತಿಯೊಂದು ಇಂದಿರಾ ಕ್ಯಾಂಟೀನ್‌ಗಳ ವಿದ್ಯುತ್ ಬಿಲ್‌ನ್ನು ಆಯಾ ವಲಯದ ಬಿಬಿಎಂಪಿ (BBMP) ಇಂಜಿನಿಯರ್‌ಗಳೆ ಪಾವತಿ ಮಾಡಬೇಕು. ಈ ಇಂಜಿನಿಯರ್‌ಗಳಿಗೆ ಪಾಲಿಕೆಯ ಕೇಂದ್ರ ಕಚೇರಿಯಿಂದ ಹಣ ಬಿಡುಗಡೆ ಮಾಡದ ಹಿನ್ನೆಲೆ, ಬೆಸ್ಕಾಂಗೆ ಬಿಲ್ ಕಟ್ಟಿರಲಿಲ್ಲ. ಹೀಗಾಗಿ ಬಿಬಿಎಂಪಿಯ ಹೆಲ್ತ್ ಇನ್ಸ್ಪೆಕ್ಟರ್ ಅವರೇ ಖುದ್ದು ಇಂದಿರಾ ಕ್ಯಾಂಟೀನ್‌ಗೆ ಧಾವಿಸಿ ಪರಿಶೀಲಿಸಿದ್ದಾರೆ.

    ಇದೀಗ ಈ ಕ್ಯಾಂಟೀನ್‌ಗೂ ಬೆಳಕಿನ ಭಾಗ್ಯ ನೀಡಲಾಗಿದ್ದು, ವೆಸ್ಟ್ ಹಾಫ್ ಕಾರ್ಡ್ ರಸ್ತೆಯ ರಾಜುಕುಮಾರ್ ವಾರ್ಡ್ನ ಇಂದಿರಾ ಕ್ಯಾಂಟೀನ್‌ನಲ್ಲಿಯೂ ವಿದ್ಯುತ್ ಸಂಪರ್ಕವನ್ನ ಕಲ್ಪಿಸಲಾಗಿದೆ. ಪಬ್ಲಿಕ್ ಟಿವಿಯ ವರದಿಯ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಟೀನ್‌ಗಳಿಗೆ ಬೆಳಕು ನೀಡಿದೆ.ಇದನ್ನೂ ಓದಿ: Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ – ನಾಳೆ ಏನೆಲ್ಲಾ ವಿಶೇಷತೆ ಇರುತ್ತೆ?

     

  • ಸತ್ಯ ಹೇಳಿದ್ದೆ ತಪ್ಪಾಯ್ತು – ಕೆಲ್ಸದಿಂದ ಕೊರೊನಾ ವಾರಿಯರ್ ಔಟ್

    ಸತ್ಯ ಹೇಳಿದ್ದೆ ತಪ್ಪಾಯ್ತು – ಕೆಲ್ಸದಿಂದ ಕೊರೊನಾ ವಾರಿಯರ್ ಔಟ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕಂಟ್ರೋಲ್ ರೂಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ್ದ ಮಹಿಳಾ ಕೊರೊನಾ ವಾರಿಯರ್ ಒಬ್ಬರನ್ನು ಬಿಬಿಎಂಪಿ ಕೆಲಸದಿಂದ ಅಮಾನತು ಮಾಡಿದೆ.

    ಕೊರೊನಾ ಕಂಟ್ರೋಲ್ ರೂಂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಏಜೆನ್ಸಿಯ ಮಹಿಳಾ ಅಧಿಕಾರಿಯೊಬ್ಬರು, ಕೊರೊನಾ ರೋಗಿಗಳು ಕೈಕಾಲು ಹಿಡಿಯುತ್ತೇವೆ ಬೆಡ್ ವ್ಯವಸ್ಥೆ ಮಾಡಿ. ಒಂದು ಬೆಡ್ ಬ್ಲಾಕ್ ಮಾಡಿ ಅಂತಾರೆ. ಆದರೆ ಕಂಟ್ರೋಲ್ ರೂಂ ನಲ್ಲಿರುವ ನನಗೆ ಬೆಡ್ ಬ್ಲಾಕ್ ಮಾಡೋದಕ್ಕೆ ಅವಕಾಶ ಕೊಡಲ್ಲ. ಸೆಂಟ್ರಲ್ ವಾರ್ ರೂಂ ಟೀಮ್‍ಗೆ ರಿಪೋರ್ಟ್ ಮಾಡಿದರೆ ಅಲ್ಲಿ ಅವರು ರೋಗಿಗಳಿಗೆ ಸ್ಪಂದಿಸುವುದೇ ಇಲ್ಲ. ನಮಗೆ ಮತ್ತೆ ವಾಪಸ್ ರೋಗಿಗಳು ಕರೆ ಮಾಡಿ ಅಳಲು ತೋಡಿಕೊಳುತ್ತಾರೆ ಎಂದು ಹೇಳಿಕೆ ನೀಡಿದ್ದರು.

    ಜೊತೆಗೆ ನಾಲ್ಕು ಅಂಬುಲೆನ್ಸ್ ನನ್ನ ವಾರ್ಡ್‍ಗೆ ಕೊಟ್ಟಿದ್ದಾರೆ. ಆದರೆ ರೋಗಿಗಳು ತುರ್ತಾಗಿ ಕರೆ ಮಾಡಿ ಅಂಬುಲೆನ್ಸ್ ಬೇಕು ಕಳುಹಿಸಿ ಎಂದು ಕೇಳುತ್ತಾರೆ. ಆಗ ನಾವು ಹಿರಿಯ ಅಧಿಕಾರಿಗಳಿಗೆ ಕೇಳಿದರೆ, ನೀವು ಇಲ್ಲಿರುವ ಅಂಬುಲೆನ್ಸ್ ಕಳಿಸಬೇಡಿ ಅಂತಾರೆ. ಒಂದು ತಿಂಗಳಿಂದ ಹಾಗೆ ಬಿದ್ದಿದೆ. ಹೋಂ ಐಸೊಲೇಷನ್‍ನಲ್ಲಿರುವವರ ಆರೋಗ್ಯ ಏರುಪೇರಾದರೂ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಸುವುದಕ್ಕೆ ಅವಕಾಶ ಕೊಡಲ್ಲ ಎಂದು ಮಹಿಳಾ ಅಧಿಕಾರಿ ದೂರಿದ್ದರು.

    ವೆಂಟಿಲೇಟರ್ ನಲ್ಲಿರುವ ರೋಗಿಯನ್ನು ಏಳು ದಿನ ಆಯ್ತು ಎಂದು ಡೈರೆಕ್ಟ್ ಡಿಸ್ಚಾರ್ಜ್ ಮಾಡಿದ್ದಾರೆ. ಆಸ್ಪತ್ರೆಯ ವಿರುದ್ಧ ಅಧಿಕಾರಿಗಳ ಗಮನಕ್ಕೆ ತಂದರೆ ಯಾವುದೇ ಪ್ರಯೋಜನವಾಗಿಲ್ಲ. ಜನರಿಗೆ ಸಹಾಯ ಮಾಡೋಕೆ ಆಗಲ್ಲ. ಕೈಕಟ್ಟಿ ಹಾಕುತ್ತಾರೆ ಅಂದರೆ ಯಾಕೆ ಬೇಕು ಈ ವ್ಯವಸ್ಥೆ ಎಂದು ಮಹಿಳಾ ಅಧಿಕಾರಿ ಬೇಸರ ವ್ಯಕ್ತಪಡಿಸಿದ್ದರು. ಈ ಅಧಿಕಾರಿಯನ್ನು ಈಗ ಬಿಬಿಎಂಪಿ ಅಧಿಕಾರಿಗಳು ಕೆಲಸದಿಂದ ತೆಗೆದು ಹಾಕಿದ್ದಾರೆ. ಜೊತೆಗೆ ಎಫ್‍ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ.

    ಇಂದರಿಂದ ಭಯಗೊಂಡ ಮಹಿಳಾ ಅಧಿಕಾರಿ ವಿಡಿಯೋ ಮಾಡಿ ಅಳಲನ್ನು ತೋಡಿಕೊಂಡಿದ್ದು, ಸತ್ಯ ಹೇಳಿದ್ದೇ ತಪ್ಪಾಗಿದೆ. ನನ್ನನ್ನು ಕೆಲಸದಿಂದ ತೆಗದು ಹಾಕಿದ್ದಾರೆ. ಜೊತೆಗೆ ಎಫ್‍ಐಆರ್ ದಾಖಲಿಸಿ ಮನೆಯ ಹತ್ತಿರ ಪೊಲೀಸ್ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳಾ ಅಧಿಕಾರಿ ಒತ್ತಾಯ ಮಾಡಿದ್ದಾರೆ.

  • ವಿದ್ಯಾರ್ಥಿನಿ ಮೇಲೆ ಮರ ಬಿದ್ದ ಕೇಸ್- ಘಟನೆ ನಂತರ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು

    ವಿದ್ಯಾರ್ಥಿನಿ ಮೇಲೆ ಮರ ಬಿದ್ದ ಕೇಸ್- ಘಟನೆ ನಂತರ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು

    ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿನಗರದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಮರಬಿದ್ದ ಪ್ರಕರಣ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಘಟನೆ ನಂತರ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೇ ಇಂದು ಘಟನೆ ನಡೆದ ಜಾಗದಲ್ಲಿ ಒಣಗಿನ ಮರಗಳನ್ನು ತೆರವು ಕಾರ್ಯ ನಡೆಯುತ್ತಿದೆ.

    ಗಾಯಗೊಂಡ ಬಾಲಕಿ ತ್ರಿಷಾ ಸ್ಥಿತಿ ಗಂಭೀರವಾಗಿದ್ದು, ಹೆಚ್‍ಎಎಲ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಗೆ ಮೇಯರ್ ಗೌತಮ್ ಕುಮಾರ್ ಜೈನ್, ಬಿಬಿಎಂಪಿ ಕಮೀಷನರ್ ಅನಿಲ್ ಕುಮಾರ್ ಭೇಟಿ ನೀಡಿ ಬಾಲಕಿಯ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು.

    ಭೇಟಿ ಮಾಡಿದ ನಂತರ ಮಾತಾಡಿದ ಕಮೀಷನರ್ ಅನಿಲ್ ಕುಮಾರ್, ಕಳೆದ ವಾರದಿಂದ ನಮ್ಮ ಅಧಿಕಾರಿಗಳು, ಒಣಗಿದ ಮರಗಳ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಈ ವೇಳೆ ಅರಳಿಕಟ್ಟೆ ಇರುವ ಜಾಗದಲ್ಲಿನ ಮರದಲ್ಲೂ ತೆರವು ಮಾಡುವ ವೇಳೆ ಅಲ್ಲಿನ ಸ್ಥಳೀಯರೇ ಇದನ್ನು ವಿರೋಧಿಸಿದ್ದಾರೆ. ಇದು ಅರಳಿಕಟ್ಟೆ ಮರ ಇದನ್ನು ಬಿಟ್ಟು ಬೇರೆ ಮರಗಳಲ್ಲಿನ ಒಣಮರಗಳನ್ನು ಕಟ್ ಮಾಡುವಂತೆ ಸೂಚಿಸಿದ್ದಾರೆ. ಹಾಗಾಗಿ ಆ ಮರದ ಒಣಮರವನ್ನು ಕಟ್ ಮಾಡಿಲ್ಲ. ಈಗ ಅದೇ ಮರದ ಕೊಂಬೆ ಬಿದ್ದು ಘಟನೆ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಬಾಲಕಿ ತ್ರಿಷಾಳ ಆಸ್ಪತ್ರೆ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ ಎಂದರು.

    ಇದೇ ವೇಳೆ ಸ್ಥಳೀಯ ಕಾರ್ಪೋರೇಟರ್ ಪದ್ಮಾವತಿ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ಕೊಟ್ಟರು. ಸದ್ಯ ಬಾಲಕಿ ಸ್ಥಿತಿ ಗಂಭೀರವಾಗಿದ್ದು, ಐಸಿಯೂನಲ್ಲಿ ಚಿಕಿತ್ಸೆ ನಡೆದಿದೆ. ಬುಧವಾರ ಬೆಳಗ್ಗೆ ಬಾಲಕಿ ತ್ರಿಷಾ ತನ್ನ ತಂದೆ ರಾಜು ಜೊತೆಗೆ ಸ್ಕೂಲ್‍ಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ತ್ರಿಷಾ ಗಂಭೀರವಾಗಿ ಗಾಯಗೊಂಡಿದ್ದಳು.

  • ಪ್ಲಾಸ್ಟಿಕ್ ಬಳಕೆ – ಎ2ಬಿ ಹೋಟೆಲ್‍ಗೆ 1 ಲಕ್ಷ ದಂಡ

    ಪ್ಲಾಸ್ಟಿಕ್ ಬಳಕೆ – ಎ2ಬಿ ಹೋಟೆಲ್‍ಗೆ 1 ಲಕ್ಷ ದಂಡ

    ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಒಂದಾದ ಎ2ಬಿ ಯಲ್ಲಿ ಅತಿಹೆಚ್ಚು ಪ್ಲಾಸ್ಟಿಕ್ ಬಳಕೆಯಾಗುತ್ತಿದೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿ 1 ಲಕ್ಷ ದಂಡ ವಿಧಿಸಿದ್ದಾರೆ.

    ತಮಿಳುನಾಡು ಮೂಲದ ಎ2ಬಿ ಹೋಟೆಲ್ ಗಳು ಬೆಂಗಳೂರಿನಾದ್ಯಂತ ಅತಿ ಹೆಚ್ಚಾಗಿದ್ದು, ಹೆಚ್.ಎಸ್.ಆರ್ ಲೇಔಟ್‍ನ ಬಿಡಿಎ ಕಾಂಪ್ಲೆಕ್ಸ್ ನಲ್ಲಿರುವ ಎ2ಬಿ ಹೋಟೆಲ್ ನಲ್ಲಿ ಒಂದು ವರ್ಷದ ಹಿಂದೆಯೇ ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಹೇರಿದ್ರು ಸಹ ಇದಕ್ಕೆ ಕ್ಯಾರೆ ಎನ್ನದೇ ಬಳಸುತ್ತಿದ್ದರು. ಈ ಎ2ಬಿ ಹೋಟೆಲ್ ಗಳಲ್ಲಿ ಅತಿಹೆಚ್ಚು ಪ್ಲಾಸ್ಟಿಕ್ ನ್ನು ಬಳಸುತ್ತಿದ್ದಾರೆ ಎಂಬಾ ಮಾಹಿತಿ ಮೇರೆಗೆ ಇಂದು ಬೊಮ್ಮನಹಳ್ಳಿ ಬಿಬಿಎಂಪಿ ಜಂಟಿ ಆಯುಕ್ತ ರಾಮಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ 8 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಶಕ್ಕೆ ಪಡೆದು 1 ಲಕ್ಷ ರೂಪಾಯಿಗಳ ದಂಡ ವಿಧಿಸಿದ್ದಾರೆ.

    ದಾಳಿ ವೇಳೆ ಮಾತನಾಡಿದ ಜಂಟಿ ಆಯುಕ್ತ ರಾಮಕೃಷ್ಣ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದ್ದರೂ ಹೋಟೆಲ್, ಅಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಬಳಕೆ ಮಾಡುತ್ತಿರುವುದರ ಬಗ್ಗೆ ಮಾಹಿತಿ ಬಂದಾಗ ಇಂದು ದಾಳಿ ನಡೆಸಲಾಗಿದೆ. 8 ಕೆ.ಜಿಗೂ ಅಧಿಕ ಪ್ಲಾಸ್ಟಿಕ್ ಎ2ಬಿ ಹೋಟೆಲ್‍ನಲ್ಲಿ ದಾಳಿ ವೇಳೆ ಸಿಕ್ಕಿದ್ದು, 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಮುಂದಿನ ದಿನಗಳಲ್ಲಿ ಮತ್ತೆ ಪ್ಲಾಸ್ಟಿಕ್ ಬಳಕೆಯನ್ನು ಮುಂದುವರೆಸಿದರೆ ಲೈಸೆನ್ಸ್ ರದ್ದು ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.