Tag: ಬಿಭವ್ ಕುಮಾರ್

  • ಸ್ವಾತಿ ಮಲಿವಾಲ್ ದೌರ್ಜನ್ಯ ಪ್ರಕರಣ – ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ

    ಸ್ವಾತಿ ಮಲಿವಾಲ್ ದೌರ್ಜನ್ಯ ಪ್ರಕರಣ – ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ

    ನವದೆಹಲಿ: ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ಗೆ‌ (Bibhav Kumar) ಜಾಮೀನು ನೀಡಲು ತೀಸ್ ಹಜಾರಿ ಕೋರ್ಟ್ ನಿರಾಕರಿಸಿದೆ. ಎರಡೂ ಕಡೆಯ ವಾದ ಆಲಿಸಿದ ಬಳಿಕ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಬಿಭವ್ ಜಾಮೀನು (Bail) ಅರ್ಜಿಯನ್ನು ತಿರಸ್ಕರಿಸಿದರು.

    ಬಿಭವ್ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್ ಹರಿಹರನ್, ಸಂಸದೆ ಸ್ವಾತಿ ಮಲಿವಾಲ್ ಸಮಯ ಪಡೆಯದೇ ಕೇಜ್ರಿವಾಲ್ ಅವರ ನಿವಾಸಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ವೇಳೆ ಬಿಭವ್ ಕುಮಾರ್ ಸಿಎಂ ಮನೆಯೊಳಗೆ ಇರಲಿಲ್ಲ. ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನು ಯಾರಾದಾರೂ ಹೀಗೆ ಪ್ರವೇಶಿಸಬಹುದೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅದಾನಿ ಗ್ರೂಪ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮೋದಿ, ರಾಹುಲ್‌ಗೆ ನಿರ್ದೇಶಿಸಿ: ಕೋರ್ಟ್‌ಗೆ ಅರ್ಜಿ ಸಲ್ಲಿಕೆ

     

    ಭೇಟಿ ಸಮಯ ನಿಗಧಿಯಾಗದ ಹಿನ್ನೆಲೆ ಅವರನ್ನು ಭದ್ರತಾ ಸಿಬ್ಬಂದಿ ತಡೆದರು. ಕಾಯುವ ಕೊಠಡಿಯಲ್ಲಿ ಕೂರಿಸಲು ಮುಂದಾದರು. ಬಳಿಕ ಬಿಭವ್ ಕುಮಾರ್ ಅವರೊಂದಿಗೆ ಮಾತನಾಡಲು ಸೆಕ್ಯೂರಿಟಿಯನ್ನು ಹೇಳಿದರು ಎಂದು ರಕ್ಷಣಾ ವಕೀಲರು ಹೇಳಿದರು. ಅವರ ಮೇಲೆ ಹಲ್ಲೆಯಾಗಿದೆ ಎನ್ನಲಾಗುತ್ತಿದೆ. ಆದರೆ ಅವರಿಗೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ – ಉತ್ತರ ಪ್ರದೇಶದಲ್ಲಿ ಲೊಕೇಶನ್‌ ಪತ್ತೆ!

    ಘಟನೆ ನಡೆದ ಸ್ಥಳವನ್ನು ಒಮ್ಮೆ ನೋಡಿ. ಇಂತಹ ಘಟನೆ ಅಲ್ಲಿ ಹೇಗೆ ನಡೆಯುತ್ತದೆ? ದೇಹದ ಪ್ರಮುಖ ಭಾಗದಲ್ಲಿ ಯಾವುದೇ ಘೋರವಾದ ಗಾಯವಿಲ್ಲ. ಗಾಯಗಳು ಸ್ವಯಂ ಪ್ರೇರಿತವಾಗಬಹುದು. ಮಲಿವಾಲ್ ಮಾಡಿದ ಎಲ್ಲಾ ಆರೋಪಗಳು ಪೂರ್ವ ಯೋಜಿತ ಮತ್ತು ಅವಳ ಕಥೆಗೆ ಸರಿಹೊಂದುವಂತೆ ಟೈಲರ್-ಮೇಡ್. ಈ ಸಂಪೂರ್ಣ ಎಫ್‌ಐಆರ್ ನಂತರದ ಚಿಂತನೆಯ ಫಲಿತಾಂಶವಾಗಿದೆ. ನಾನು ಜಾಮೀನು ಮಾತ್ರ ಬಯಸುತ್ತಿದ್ದೇನೆ, ಖುಲಾಸೆಗೊಳಿಸುವುದಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆಗೆ ಟಾಸ್ಕ್‌ ಫೋರ್ಸ್‌ ರಚನೆ

    ಸ್ವಾತಿ ಮಲಿವಾಲ್ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್, ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷಿಗಳ ಮೇಲೆ ಮತ್ತು ಪ್ರಕರಣದ ಮೇಲೆ ಪರಿಣಾಮ ಬೀರಬಹುದು. ತನಿಖೆ ನಡೆಯುತ್ತಿರುವ ಹೊತ್ತಲ್ಲಿ ಪ್ರಭಾವಿ ಸ್ಥಾನದಲ್ಲಿರುವ ಆರೋಪಿ ತನಿಖೆಯ ದಿಕ್ಕು ತಪ್ಪಿಸಬಹುದು ಎಂದು ಹೇಳಿದರು. ವಾದ ಆಲಿಸಿದ ಬಳಿಕ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿತು. ಈ ಹಿನ್ನೆಲೆ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ರಾಹುಲ್‌ ಪ್ರಚಾರದ ವೇಳೆ ಕುಸಿದ ವೇದಿಕೆ

  • ಯೂಟ್ಯೂಬರ್ ಧ್ರುವ್ ರಾಠಿ ವಿಡಿಯೋ ಬಳಿಕ ಅತ್ಯಾಚಾರ, ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

    ಯೂಟ್ಯೂಬರ್ ಧ್ರುವ್ ರಾಠಿ ವಿಡಿಯೋ ಬಳಿಕ ಅತ್ಯಾಚಾರ, ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

    ನವದೆಹಲಿ: ಆಪ್ (AAP) ನಾಯಕರು ಮತ್ತು ಸ್ವಯಂಸೇವಕರಿಂದ ನನ್ನ ಚಾರಿತ್ರ್ಯ ಹರಣದ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆಪ್ ಸಂಸದೆ ಸ್ವಾತಿ ಮಲಿವಾಲ್ (Swati Maliwal‌) ಹೇಳಿದ್ದಾರೆ. ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ತನ್ನ ವಿರುದ್ಧ ಏಕಪಕ್ಷೀಯವಾಗಿ ವಿಡಿಯೊವನ್ನು ಪೋಸ್ಟ್ ಮಾಡಿದ ನಂತರ ಈ ಬೆದರಿಕೆ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಧ್ರುವ್ ರಾಠಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ಅವರು ತನ್ನ ಕರೆಗಳು ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿದ್ದಾರೆ. ಸ್ವತಂತ್ರ ಪತ್ರಕರ್ತರು ಎಂದು ಹೇಳಿಕೊಳ್ಳುವ ಇವರು, ಇತರ ಎಎಪಿ ವಕ್ತಾರರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಈಗ ತೀವ್ರ ನಿಂದನೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇನೆ. ನನ್ನ ದೂರನ್ನು ಹಿಂಪಡೆಯುವಂತೆ ಹೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ಧ್ರುವ್ ರಾಠಿ ಅವರ 2.5 ನಿಮಿಷಗಳ ವೀಡಿಯೊದಲ್ಲಿ ನಿರ್ಲಕ್ಷಿಸಲಾಗಿದೆ ಎನ್ನಲಾದ ಹಲವಾರು ಅಂಶಗಳನ್ನು ಸ್ವಾತಿ ಮಲಿವಾಲ್ ಪಟ್ಟಿ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಒಪ್ಪಿಕೊಂಡ ನಂತರ ಎಎಪಿ ಏಕೆ ಯು-ಟರ್ನ್ ತೆಗೆದುಕೊಂಡಿತು? ವೈದ್ಯಕೀಯ ವರದಿಯಲ್ಲಿ ಹಲ್ಲೆಯಿಂದಾದ ಗಾಯಗಳನ್ನು ಬಹಿರಂಗಪಡಿಸುತ್ತದೆ. ನಾನು ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದೆ. ಇದಾದ ನಂತರ ಆರೋಪಿಯ ಫೋನ್‍ನ್ನು ಫಾಮ್ರ್ಯಾಟ್ ಮಾಡಲಾಗಿದೆ. ಆರೋಪಿಯನ್ನು ಕೃತ್ಯ ನಡೆದ ಸ್ಥಳದಿಂದ (ಸಿಎಂ ಮನೆ) ಬಂಧಿಸಲಾಗಿದೆ. ಭದ್ರತೆಯಿಲ್ಲದೆ ಒಂಟಿಯಾಗಿ ಮಣಿಪುರಕ್ಕೆ ಹೋದ ಮಹಿಳೆಯನ್ನು ಬಿಜೆಪಿಯಿಂದ (BJP) ಹೇಗೆ ಕೊಂಡುಕೊಳ್ಳಲು ಸಾಧ್ಯ? ಈ ವಿಚಾರವನ್ನು ಧ್ರುವ ರಾಠಿ ವಿಡಿಯೋದಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಸ್ವಾತಿ ಹೇಳಿಕೊಂಡಿದ್ದಾರೆ.

    ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಅವರು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಸಂದರ್ಭದಲ್ಲಿ, ನನಗೆ ಏನಾದರೂ ಸಂಭವಿಸಿದರೆ, ಅದನ್ನು ಪ್ರಚೋದಿಸಿದವರು ಯಾರು ಎಂದು ನಮಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

    ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್ ಕುಮಾರ್ ಅವರನ್ನು ಮೇ 18 ರಂದು ಬಂಧಿಸಲಾಯಿತು. ಬಿಭವ್ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಉತ್ತರ ಕೇಳಿದೆ. ಇದನ್ನೂ ಓದಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

  • ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ನವದೆಹಲಿ: ಸ್ವಾತಿ ಮಲಿವಾಲ್ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

    ಬಿಭವ್‌ (Bibhav Kumar) ಪರ ವಕೀಲರು ಸಿಸಿಟಿವಿ ದೃಶ್ಯಾವಳಿ ಮತ್ತು ಡಿವಿಆರ್‌ಗಳನ್ನು ಸಂಗ್ರಹಿಸಿ ಸಂರಕ್ಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಸಿಸಿಟಿವಿಗಳು ನನ್ನ ಪ್ರಕರಣದ ಸತ್ಯಾಸತ್ಯತೆ ಸಾಬೀತುಪಡಿಸುತ್ತವೆ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಇದನ್ನೂ ಓದಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ಸ್ವಾತಿ ಮಲಿವಾಲ್ ಅವರು ಸಿಎಂ ಸಿವಿಲ್ ಲೈನ್ಸ್ ನಿವಾಸಕ್ಕೆ ಅನಧಿಕೃತ ಪ್ರವೇಶ ಮಾಡಿದ್ದಲ್ಲದೇ ನಿಂದಿಸಿದ್ದಾರೆ ಎಂದು ಆರೋಪಿಸಿ ಬಿಭವ್‌ ಕುಮಾರ್‌ ಕೂಡ ಪ್ರತಿದೂರು ದಾಖಲಿಸಿದ್ದರು. ದೂರಿನ ಬೆನ್ನಲ್ಲೇ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

    ತಮ್ಮ ದೂರಿನಲ್ಲಿ ಕುಮಾರ್ ಅವರು ಮಲಿವಾಲ್ ವಿರುದ್ಧ ಅನಧಿಕೃತ ಪ್ರವೇಶ, ಮೌಖಿಕ ನಿಂದನೆ ಮತ್ತು ಬೆದರಿಕೆಗಳ ಆರೋಪ ಹೊರಿಸಿದ್ದಾರೆ. ಈ ವಿಷಯದಲ್ಲಿ ಬಿಜೆಪಿ ಕೈವಾಡವೂ ಇದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಸಿಎಂ ಕೇಜ್ರಿವಾಲ್‌ ಆಪ್ತನ ವಿರುದ್ಧ ಸ್ವಾತಿ ಮಲಿವಾಲ್‌ ಅವರು ಮೇ 13 ರಂದು ದೂರು ದಾಖಲಿಸಿದ್ದರು. ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದ್ದರು.

  • ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ನವದೆಹಲಿ: ನನ್ನ ರಾಜ್ಯಸಭಾ (Rajya Sabha) ಸ್ಥಾನ ಯಾರಿಗಾದರೂ ಬೇಕಾಗಿದ್ದರೆ, ಪ್ರೀತಿಯಿಂದ ಕೇಳಿದ್ದರೆ ನಾನು ಬಿಟ್ಟುಕೊಡುತ್ತಿದ್ದೆ. ಈಗ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೆ ಸ್ವಾತಿ ಮಲಿವಾಲ್ (Swati Maliwal) ಹೇಳಿದ್ದಾರೆ.

    ತಮ್ಮ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಪದವಿಗೆ ಆಸೆ ಪಟ್ಟಿಲ್ಲ. ಅವರಿಗೆ ಬೇಕಿದ್ದರೆ ನಾನು ಜೀವವನ್ನು ಕೊಡುತ್ತಿದ್ದೆ. ಈ ಘಟನೆ ಬಳಿಕ ಭೂಮಿಯ ಮೇಲಿರುವ ಯಾವುದೇ ಶಕ್ತಿ ಬಂದರೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಅಧಿಕಾರವು ಬಂದಾಗ ಕ್ರಮೇಣ ಅಹಂಕಾರವೂ ಬರುತ್ತದೆ. ಯಾವುದು ಸರಿ, ಯಾವುದು ತಪ್ಪು ಎಂದು ನೋಡುವುದಿಲ್ಲ. ಒಬ್ಬ ಮಹಿಳೆಯ ಮೇಲೆ‌ ಹಲ್ಲೆ ಮಾಡುವುದಲ್ಲದೇ ಚಾರಿತ್ರ್ಯಹರಣ ಮಾಡಬಹುದು ಎಂದು ಊಹಿಸಿರಲಿಲ್ಲ ಎಂದು ಮಾತನಾಡಿದ್ದಾರೆ.

    ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನಿವಾಸದಲ್ಲಿ ಎಲ್ಲವೂ ನಡೆಯಿತು. ಅಂದು ನನ್ನ ಮೇಲೆ ಹಲ್ಲೆ ನಡೆಯುವಾಗ ಕೂಗಿಕೊಂಡೆ. ಯಾರು ನನ್ನ ಸಹಾಯಕ್ಕೆ ಬರಲಿಲ್ಲ. ಈಗ ಆರೋಪಿಯ ಸಹಾಯಕ್ಕೆ ಸಿಎಂ ಅರವಿಂದ್ ಕೇಜ್ರಿವಾಲ್ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಪಾರು ಮಾಡಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

  • ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ತನ್ನ ಆಪ್ತ ಸಹಾಯಕ ಹಲ್ಲೆ ನಡೆಸಿದ ಆರೋಪ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಕೊನೆಗೂ ಮೌನ ಮುರಿದಿದ್ದಾರೆ.

    ಪ್ರಕರಣ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್‌, ನ್ಯಾಯಯುತ ತನಿಖೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಅರವಿಂದ್‌ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ (Bibhav Kumar) ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 13 ರಂದು ಸ್ವಾತಿ ಮಲಿವಾಲ್‌ ಪೊಲೀಸರಿಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸ್ವಾತಿ ಮಲಿವಾಲ್‌ ವಿರುದ್ಧ ಬಿಭವ್‌ ಕೂಡ ದೂರು ದಾಖಲಿಸಿದ್ದರು.

    ಹಲ್ಲೆ ಪ್ರಕರಣದಲ್ಲಿ ಆರೋಪಿ ಬಿಭವ್‌ ಬಂಧನಕ್ಕೊಳಗಾಗಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

  • ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ

    ನಿರ್ಭಯಾಗೆ ನ್ಯಾಯ ಕೊಡಿಸಲು ಬೀದಿಗಿಳಿದ ಕಾಲವಿತ್ತು – ಈಗ ಯಾರಿಗಾಗಿ ಬೀದಿಗಿಳಿದಿದ್ದೀರಿ?- ಮಲಿವಾಲ್‌ ಕಿಡಿ

    – ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ – ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆಗೆ ಆಪ್‌ ಸಜ್ಜು

    ನವದೆಹಲಿ: ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಬಂಧನ (Bibhav Kumar Arrest) ಖಂಡಿಸಿ ಆಪ್‌ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿದೆ.

    ದೆಹಲಿ ಸಿಎಂ & ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಸುತ್ತಲೂ ಬಿಗಿ ಭದ್ರೆತೆಯನ್ನು ನಿಯೋಜಿಸಲಾಗಿದೆ. ದೆಹಲಿಯ ಟಾಪ್‌ ಅಧಿಕಾರಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಹಾಗೂ ವಿವಿಧ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

    ಈ ನಡುವೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್‌, ಆಪ್‌ ಪ್ರತಿಭಟನೆಗೆ (AAP Protest) ವಿರೋಧ ವ್ಯಕ್ತಪಡಿಸಿದ್ದಾರೆ. ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿದ ಕಾಲವೊಂದಿತ್ತು. ಆದರಿಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗುವಂತೆ ಮಾಡಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಗಳನ್ನು ಉಳಿಸಲು ಬೀದಿಗಿಳಿದಿದ್ದೇವೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

    ಇದೇ ವೇಳೆ ಸಚಿವ ಮನಿಷ್‌ ಸಿಸೋಡಿಯಾ ಪರ ಮಾತನಾಡಿರುವ ಮಲಿವಾಲ್‌, ಮನೀಶ್ ಸಿಸೋಡಿಯಾಜಿ (Manish Sisodia) ಅವರಿಗಾಗಿ ಇಷ್ಟು ಬಲಪ್ರಯೋಗ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದೆ. ಅವರು ಇಲ್ಲಿ ಇದ್ದಿದ್ದರೆ ಬಹುಶಃ ನನ್ನ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಭಾವುಕರಾಗಿದ್ದಾರೆ.

    ನಿನ್ನೆಯಷ್ಟೇ ಬಂಧನ:
    ಸ್ವಾತಿ ಮಲಿವಲ್‌ ಮೇಲೆ ದೌರ್ಜನ್ಯ ಎಸಗಿದ ದೆಹಲಿ ಸಿಎಂ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅವರನ್ನು ಪೊಲೀಸರು ಶನಿವಾರವಷ್ಟೇ ಬಂಧಿಸಿದ್ದರು. ಇದೇ ಮೇ 13 ರಂದು ಸಿಎಂ ನಿವಾಸದಲ್ಲಿ ತನ್ನ ಮೇಲೆ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್‌ ದೂರು ನೀಡಿದ್ದರು. ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತ್ತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಬಂದಿತ್ತು.

    ಎಲ್ಲರನ್ನೂ ಜೈಲಿಗೆ ಹಾಕಿ:
    ಆಪ್ತನ ಬಂಧನದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಅರವಿಂದ್‌ ಕೇಜ್ರಿವಾಲ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ನಾಯಕರು ಆಪ್ ಪಕ್ಷದ ಹಿಂದೆ ಬಿದ್ದಿದ್ದಾರೆ. ಒಬ್ಬರಾದ ಬಳಿಕ ಒಬ್ಬರಂತೆ ನಮ್ಮ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಮನೀಶ್ ಸಿಸೋಡಿಯ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಮತ್ತು ನನ್ನನ್ನು ಜೈಲಿಗೆ ಹಾಕಲಾಯಿತು. ಈಗ ನನ್ನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ. ನಾವು ಸಹ ಬಿಜೆಪಿ ಕಚೇರಿಗೆ ಬರಲಿದ್ದೇವೆ. ಯಾರ‍್ಯಾರನ್ನು ಜೈಲಿಗೆ ಹಾಕಬೇಕು ಒಟ್ಟಿಗೆ ಹಾಕಿ. ಹೀಗೆ ಜೈಲಿಗೆ ಹಾಕಿ ಆಪ್ ಪಕ್ಷವನ್ನು ನಾಶ ಮಾಡಬೇಕು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಆಪ್ ಪಕ್ಷ ಒಂದೇ ಚಿಂತನೆಯಾಗಿದೆ. ಇದನ್ನು ನಾಶ ಮಾಡಲು ಪ್ರಯತ್ನಿಸಿದಷ್ಟು ಈ ಚಿಂತನೆ ದೇಶದಲ್ಲಿ ಹೆಚ್ಚಲಿದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದರು.

  • ಎಲ್ಲಾ ನಾಯಕರು ಬಿಜೆಪಿ ಕಚೇರಿಗೆ ಬರ್ತೀವಿ.. ಎಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಕೇಜ್ರಿವಾಲ್‌ ಕಿಡಿ

    ಎಲ್ಲಾ ನಾಯಕರು ಬಿಜೆಪಿ ಕಚೇರಿಗೆ ಬರ್ತೀವಿ.. ಎಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಕೇಜ್ರಿವಾಲ್‌ ಕಿಡಿ

    – ಆಪ್ತ ಸಹಾಯಕನ ಬಂಧನಕ್ಕೆ ದೆಹಲಿ ಸಿಎಂ ಅಸಮಾಧಾನ

    ನವದೆಹಲಿ: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲೆ ಹಲ್ಲೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಬಿಜೆಪಿ (BJP) ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಬಿಜೆಪಿ ನಾಯಕರು ಆಪ್ ಪಕ್ಷದ ಹಿಂದೆ ಬಿದ್ದಿದ್ದಾರೆ. ಒಬ್ಬರಾದ ಬಳಿಕ ಒಬ್ಬರಂತೆ ನಮ್ಮ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಮನೀಶ್ ಸಿಸೋಡಿಯ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಮತ್ತು ನನ್ನನ್ನು ಜೈಲಿಗೆ ಹಾಕಲಾಯಿತು. ಈಗ ನನ್ನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಅರೆಸ್ಟ್‌

    ಈಗಷ್ಟೇ ಲಂಡನ್‌ನಿಂದ ವಾಪಸ್ ಆಗಿರುವ ರಾಘವ್ ಚಡ್ಡಾ ಅವರನ್ನು ಬಂಧಿಸಲಿದ್ದಾರಂತೆ. ಸೌರಭ್ ಭಾರಧ್ವಾಜ್ ಮತ್ತು ಅತಿಯನ್ನು ಜೈಲಿಗೆ ಹಾಕಲಾಗುವುದು ಎನ್ನಲಾಗುತ್ತಿದೆ. ನಮ್ಮನ್ನು ಜೈಲಿಗೆ ಹಾಕಲಾಗುತ್ತಿದೆ. ಅಷ್ಟಕ್ಕೂ ನಮ್ಮ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

    ದೆಹಲಿ ಬಡ ಜನರಿಗೆ ಒಳ್ಳೆಯ ಶಿಕ್ಷಣ, ಉತ್ತಮ ಆರೋಗ್ಯ ನೀಡುತ್ತಿರುವುದು ನಮ್ಮ ತಪ್ಪಾ? ಇದನ್ನು ಅವರು ಮಾಡಲು ಸಾಧ್ಯವಿಲ್ಲ. ಹೀಗಾಗಿ ನಮ್ಮನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಜೈಲಿ ಕಾ ಕೇಲ್ (ಜೈಲಿನ ಆಟ) ಆಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌

    ನಾಳೆ ಮಧ್ಯಾಹ್ನ 12 ಗಂಟೆಗೆ ಎಲ್ಲ ಹಿರಿಯ ನಾಯಕರೊಂದಿಗೆ ನಾನು ಬಿಜೆಪಿ ಕಚೇರಿಗೆ ಬರಲಿದ್ದೇವೆ. ಯಾರ‍್ಯಾರನ್ನು ಜೈಲಿಗೆ ಹಾಕಬೇಕು ಒಟ್ಟಿಗೆ ಹಾಕಿ. ಹೀಗೆ ಜೈಲಿಗೆ ಹಾಕಿ ಆಪ್ ಪಕ್ಷವನ್ನು ನಾಶ ಮಾಡಬೇಕು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಆಪ್ ಪಕ್ಷ ಒಂದೇ ಚಿಂತನೆಯಾಗಿದೆ. ಇದನ್ನು ನಾಶ ಮಾಡಲು ಪ್ರಯತ್ನಿಸಿದಷ್ಟು ಈ ಚಿಂತನೆ ದೇಶದಲ್ಲಿ ಹೆಚ್ಚಲಿದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

  • ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಕೇಸ್‌ – ಪ್ರತಿ ದೂರು ದಾಖಲಿಸಿದ ಆರೋಪಿ ಬಿಭವ್‌

    ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಕೇಸ್‌ – ಪ್ರತಿ ದೂರು ದಾಖಲಿಸಿದ ಆರೋಪಿ ಬಿಭವ್‌

    ನವದೆಹಲಿ: ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ (Bibhav Kumar) ಪ್ರತಿದೂರು ದಾಖಲಿಸಿದ್ದಾರೆ.

    ಸ್ವಾತಿ ಮಲಿವಾಲ್‌ ವಿರುದ್ಧವೇ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಇಮೇಲ್ ಮೂಲಕ ನವದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತನಾಗಿರುವ ಬಿಭವ್‌ ಕುಮಾರ್‌ ಪ್ರತಿ ದೂರು ನೀಡಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ಸ್ವಾತಿ ಮಲಿವಾಲ್ ಬಲವಂತವಾಗಿ ದೂರು ದಾಖಲಿಸಿದ್ದಾರೆ.‌ ಸಿಎಂ ನಿವಾಸಕ್ಕೆ ಅಕ್ರಮವಾಗಿ ಅತಿಕ್ರಮಣ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

    ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಬಿಭವ್ ಕುಮಾರ್ ವಿರುದ್ಧ ಸ್ವಾತಿ ಮಲಿವಾಲ್‌ ದೂರು ನೀಡಿದ್ದು ಎಫ್‌ಐಆರ್‌ (FIR) ದಾಖಲಾಗಿದೆ. ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಆಪ್ತ ಬಿಭವ್‌ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್‌ ನೀಡಿತ್ತು. ಆಯೋಗದ ಎದುರು ವಿಚಾರಣೆಗೆ ಆರೋಪಿ ಹಾಜರಾಗಿಲ್ಲ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ಸಿಎಂ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿಯಾಗಿರುವ ಬಿಭವ್‌ ನನ್ನ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು ಎಂದು ಸಂಸದೆ ಸ್ವಾತಿ ಮಲಿವಾಲ್‌ ಆರೋಪಿಸಿದ್ದರು. ಸಿಎಂ ಕಚೇರಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಬಿಭವ್‌ ಕುಮಾರ್‌ ವಿರುದ್ಧ ಕೇಳಿಬಂದ ಆರೋಪವು ಈಗ ವಿವಾದಕ್ಕೆ ತಿರುಗಿದೆ. ಪ್ರತಿಪಕ್ಷಗಳ ತೀವ್ರ ಟೀಕೆಗೂ ಗುರಿಯಾಗಿದೆ.

  • ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.

    ಹಲ್ಲೆ ನಡೆಸಿದ ಸಂಬಂಧ ಸ್ವಾತಿ ಮಲಿವಾಲ್ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ. ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಎಳೆ ಎಳೆಯಾಗಿ ಸ್ವಾತಿ ದೂರಿನಲ್ಲಿ ವಿವರಿಸಿದ್ದಾರೆ.

    ಮೇ 13 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಯ ಡ್ರಾಯಿಂಗ್ ರೂಮ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಮಯದಲ್ಲಿ ಕೇಜ್ರಿವಾಲ್ ನಿವಾಸದಲ್ಲಿ ಇದ್ದರು ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಸ್ವಾತಿ ಆರೋಪಿಸಿದ್ದಾರೆ. ಎಫ್‍ಐಆರ್‍ನಲ್ಲಿ ಕೇಜ್ರಿವಾಲ್ ಹೆಸರನ್ನು ಉಲ್ಲೇಖಿಸಿಲ್ಲ.

    ಎಫ್‍ಐಆರ್ ನಲ್ಲಿ ಏನಿದೆ?: ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ (Bibhav Kumar) ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ಪದೇ ಪದೇ ನನ್ನ ಹೊಟ್ಟೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ. ಇದನ್ನೂ ಓದಿ: ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತನ ವಿರುದ್ಧ FIR

    ನಾನು ಡ್ರಾಯಿಂಗ್ ರೂಮಿನಲ್ಲಿ ಕುಳಿತಿದ್ದಾಗ ಬಿಭವ್ ಕುಮಾರ್ ಒಳಗೆ ಬಂದಿದ್ದಾನೆ. ಬಳಿಕ ಕಾರಣವಿಲ್ಲದೇ ನನ್ನ ವಿರುದ್ಧ ಕಿರುಚಾಡಲು ಹಾಗೂ ನಿಂದಿಸಲು ಪ್ರಾರಂಭಿಸಿದ್ದಾನೆ. ನೀವು ನಮ್ಮ ಮಾತನ್ನು ಯಾಕೆ ಕೇಳುವುದಿಲ್ಲ? ಕೆಟ್ಟ ಮಹಿಳೆ, ನಾವು ನಿಮಗೆ ಪಾಠ ಕಲಿಸುತ್ತೇವೆ ಎಂದೆಲ್ಲಾ ಬಾಯಿಗೆ ಬಂದಂತೆ ಬೈದಿದ್ದಾನೆ. ಇದಾದ ಬಳಿಕ ಭಯಾನಕ ದೌರ್ಜನ್ಯಗಳು ಪ್ರಾರಂಭವಾದವು.

    ಕುಮಾರ್ ಅವರು ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಆಗ ನಾನು ಸಂಪೂರ್ಣವಾಗಿ ಆಘಾತಕ್ಕೊಳಗಾದೆ. ಕೂಡಲೇ ಸಹಾಯಕ್ಕಾಗಿ ಅಂಗಲಾಚಿದ್ದೇನೆ. ಈ ವೇಳೆ ಅವರು ನನ್ನ ಬಟ್ಟೆಯನ್ನು ಹಿಡಿದು ಎಳೆದುಕೊಂಡು ಹೋಗಿ ನನ್ನ ತಲೆಯನ್ನು ಮೇಜಿಗೆ ಹೊಡೆದಿದ್ದಾನೆ. ಈ ವೇಳೆ ನಾನು ಕೆಳಗೆ ಬಿದ್ದೆ. ನಾನು ಸಹಾಯಕ್ಕಾಗಿ ನಿರಂತರವಾಗಿ ಕಿರುಚಾಡಿದರೂ ಯಾರೊಬ್ಬರು ನನ್ನ ರಕ್ಷಣೆಗೆ ಬರಲಿಲ್ಲ.

    ನಾನು ಪದೇ ಪದೇ ಕಿರುಚಾಡಿದ್ರೂ ಬಿಭವ್ ನನ್ನ ಮೇಲೆ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ನನ್ನ ಎದೆ, ಹೊಟ್ಟೆ ಹಾಗೂ ಸೊಂಟಕ್ಕೆ ಪದೇ ಪದೇ ಒದ್ದಿದ್ದಾನೆ. ನನ್ನ ಬಿಟ್ಟುಬಿಡುವಂತೆ ಅಂಗಲಾಚಿದ್ರೂ ಆತ ಕರುಣೆ ತೋರಲಿಲ್ಲ, ಪಶ್ಚಾತ್ತಾಪಡಲಿಲ್ಲ, ಬದಲಾಗಿ ನನ್ನ ಮೇಲೆ ದಾಳಿ ಮುದುವರಿಸಿದ್ದಾನೆ ಎಂದು ಮಲಿವಾಲ್ ದೂರಿನಲ್ಲಿ ಆರೋಪಿಸಿದ್ದಾರೆ.