Tag: ಬಿರುಗಾಳಿ

  • ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅವಾಂತರ – ಭಾರೀ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ

    ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅವಾಂತರ – ಭಾರೀ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದೆ. ಭಾರೀ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

    ಚಿಕ್ಕೋಡಿ ತಾಲೂಕಿನ ವಿವಿಧೆಡೆ ಆಲೆಕಲ್ಲು ಸಹಿತ ಭಾರೀ ಮಳೆ ಸುರಿದಿದ್ದು, ರಾಯಭಾಗ ತಾಲೂಕಿನಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ 4 ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಮನೆಯ ಮೇಲ್ಛಾವಣಿಯ ಶೆಡ್ ಬಿದ್ದು 12 ವರ್ಷದ ವಿಠ್ಠಲ ಧರ್ಮಟ್ಟಿ ಎಂಬ ಬಾಲಕನ ತಲೆಗೆ ಪೆಟ್ಟು ಬಿದ್ದಿದೆ. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

    ರಾಯಭಾಗ ತಾಲೂಕಿನ ಗುಂಡವಾಡ ಗ್ರಾಮದಲ್ಲಿ ಆಯೋಜಿಸಿದ್ದ ಪಂಚ ಕಲ್ಯಾಣ ಮಹೋತ್ಸವ ಮೇಲೂ ಅಕಾಲಿಕ ಮಳೆ ಅವಾಂತರವನ್ನುಂಟು ಮಾಡಿದ್ದು ಭಾರೀ ಬಿರುಗಾಳಿಯಿಂದ ಪಂಚ ಕಲ್ಯಾಣ ಮಹೋತ್ಸವದಲ್ಲಿ ಅಳವಡಿಸಿದ್ದ ಮೇಲ್ಚಾಚಣಿಗಳು ಗಾಳಿಗೆ ಹಾರಿ ಹೋಗಿವೆ.

    ಬಿರುಗಾಳಿಗೆ ಹೆದರಿ ಜನ ಆತಂಕದಲ್ಲಿ ಓಡಿ ಹೋಗಿದ್ದು, ಪಂಚ ಕಲ್ಯಾಣ ಮಹೋತ್ಸವಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಇನ್ನೂ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಳೆಯ ಕಾರಣ ವಿದ್ಯುತ್ ಟ್ರಾನ್ಸ್​ ಫಾರ್ಮರ್ ಮೂಲಕ ವಿದ್ಯುತ್ ಹರಿದ ಪರಿಣಾಮ ಎರಡು ಕುರಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಖಾದಿ ತೊರೆದು ಕಾವಿ ತೊಡಲಿರುವ ಬಿಎಸ್‍ವೈ ಆಪ್ತ ಪುಟ್ಟಸ್ವಾಮಿ

  • ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

    ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ

    ಇಂದು ಸಂಜೆ ಪಿ.ಜಿ.ಪಾಳ್ಯ ಸುತ್ತಮುತ್ತ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆ ಬಿದ್ದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ವರುಣನ ಆರ್ಭಟ ಜೋರಾಗಿದೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    ಪಿಜಿಪಾಳ್ಯ, ಬಸವನಗುಡಿ, ಚಿಕ್ಕರಂಗಶೆಟ್ಟಿದೊಡ್ಡಿ, ಒಡೆಯರಪಾಳ್ಯ ಮೊದಲಾದ ಗ್ರಾಮಗಳಲ್ಲಿ ಮಳೆಯಾಗಿದೆ. ಇದನ್ನೂ ಓದಿ: ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

  • ತೌಕ್ತೆಗೆ ಕರ್ನಾಟಕದಲ್ಲಿ 6 ಬಲಿ – ಗೋವಾದಲ್ಲಿ ಬಿರುಗಾಳಿ ಸಹಿತ ಮಳೆ: ಎಲ್ಲೆಲ್ಲಿ ಏನಾಗಿದೆ?

    ತೌಕ್ತೆಗೆ ಕರ್ನಾಟಕದಲ್ಲಿ 6 ಬಲಿ – ಗೋವಾದಲ್ಲಿ ಬಿರುಗಾಳಿ ಸಹಿತ ಮಳೆ: ಎಲ್ಲೆಲ್ಲಿ ಏನಾಗಿದೆ?

    ಬೆಂಗಳೂರು/ಪಣಜಿ: ತೌಕ್ತೆ ಚಂಡಮಾರುತ ಗುಜರಾತ್‍ನತ್ತ ತೆರಳುತ್ತಿದೆ. ಆದರೆ ತೌಕ್ತೆಯಿಂದ ಸೃಷ್ಟಿಯಾದ ಮಳೆಗೆ ಕರ್ನಾಟಕದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.

    ಬೆಳಗಾವಿಯ ಇಟಗಿಯಲ್ಲಿ ಗೋಡೆ ಕುಸಿದು ಇಬ್ಬರು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 73 ಹಳ್ಳಿಗಳು ಚಂಡಮಾರುತದಿಂದ ತೊಂದರೆ ಅನುಭವಿಸಿವೆ. 112 ಮನೆಗಳಿಗೆ ಹಾನಿ ಉಂಟಾಗಿದೆ. 318 ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

    ತೌಕ್ತೆ ಎಫೆಕ್ಟ್ ಉತ್ತರ ಕನ್ನಡದಲ್ಲಿ ಕೊಂಚ ಹೆಚ್ಚೆ ಎನ್ನುವಷ್ಟರ ಮಟ್ಟಿಗೆ ಇತ್ತು. ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಸ್ಥಿತಿ ಏರ್ಪಟ್ಟಿತ್ತು. ನೂರಾರು ಮನೆಗಳು ಜಲಾವೃತಗೊಂಡಿವೆ. ಕುಮಟಾದ ಶಶಿಹಿತ್ತಲು, ಗುಂದ ಗ್ರಾಮದ ನೂರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ.

    ಮುರ್ಡೇಶ್ವರದ ಬೀಚ್ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಹಲವೆಡೆ ಗಾಳಿ ಆರ್ಭಟಕ್ಕೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದೆ. ಮಜೋರ್ಡಾ ಬಳಿ ಚಲಿಸ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಮರ ಉರುಳಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

    ಉಡುಪಿ ಜಿಲ್ಲೆಯಲ್ಲಿ ಸಮುದ್ರ ಬದಿಯ ಮನೆಗಳು ಮರಳಿನಿಂದ ಭಾಗಶಃ ಮುಳುಗಿದೆ. ನೂರಾರು ತೆಂಗಿನ ಮರ ಸಮುದ್ರದ ಪಾಲಾಗಿವೆ. ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಮನೆ, ಶೆಡ್‍ಗಳಿಗೆ ಹಾನಿಯಾಗಿದೆ. ಮಂಗಳೂರು ಬಳಿಯ ಅರಬ್ಬಿ ಸಮುದ್ರದಲ್ಲಿ ಕೋರಮಂಡಲ್ ಸ್ಟಗ್ ಸಿಲುಕಿದ್ದು, ಅದರಲ್ಲಿರುವ 9 ಮಂದಿಯ ರಕ್ಷಣೆಗೆ ತೀವ್ರ ಪ್ರಯತ್ನ ನಡೆಸಲಾಗ್ತಿದೆ. ಹೆಲಿಕಾಪ್ಟರ್ ನೆರವನ್ನು ಪಡೆಯಲು ಜಿಲ್ಲಾಡಳಿತ ಮುಂದಾಗಿದೆ.

    ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಮಾಪಿಳ್ಳೆ ಬಳಿ ಸೇತುವೆ ಕೊಚ್ಚಿಹೋಗಿದೆ. ಸುಂಟಿಕೊಪ್ಪದಲ್ಲಿ ತಡೆ ಗೋಡೆಯೊಂದು ಕುಸಿದಿದೆ. ಕಾವೇರಿ ನದಿ ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನಮಟ್ಟ ಸ್ವಲ್ಪ ಏರಿಕೆಯಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಿದ್ದು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದೆ. ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ಮಳೆಯಾಗಿದೆ. ಬೆಂಗಳೂರಿನಲ್ಲೂ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು.

    ಗೋವಾ ವರದಿ: ನಿನ್ನೆ ಕೇರಳವನ್ನು ತತ್ತರಿಸುವಂತೆ ಮಾಡಿದ್ದ ತೌಕ್ತೆ ಚಂಡಮಾರು ಇಂದು ಪುಟ್ಟ ರಾಜ್ಯ ಗೋವಾಗೆ ಕಂಟಕವಾಗಿದೆ. ಇವತ್ತು ಇಡೀ ಬಿರುಗಾಳಿ ಸಹಿತ ಜೋರು ಮಳೆ ಆಗಿದ್ದು, ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಪರಿಣಾಮ, ಹೆಚ್ಚುಕಡಿಮೆ ಗೋವಾದ ಬಹುತೇಕ ಕಡೆ ವಿದ್ಯುತ್ ಸರಬರಾಜಿನಲ್ಲಿ ತೀವ್ರ ವ್ಯತ್ಯಯವಾಗಿದೆ.

    ಪಣಜಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಕೇರಳದಲ್ಲಿ ತೌಕ್ತೆ ಚಂಡಮಾರುತದ ತೀವ್ರತೆ ಇವತ್ತು ಹೆಚ್ಚು ಕಂಡುಬರಲಿಲ್ಲ. ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಜೋರು ಮಳೆ ಆಗುತ್ತಿದೆ.. ಮುಂಜಾಗ್ರತಾ ಕ್ರಮವಾಗಿ ನಾಳೆ ಮುಂಬೈನಲ್ಲಿ ವ್ಯಾಕ್ಸಿನೇಷನ್ ರದ್ದು ಮಾಡಲಾಗಿದೆ.

    ನಾಳೆ ಮತ್ತು ನಾಡಿದ್ದು ಗುಜರಾತ್‍ನಲ್ಲಿ ಭಾರೀ ಮಳೆ ಆಗಲಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೇ 21ರವರೆಗೂ ಗುಜರಾತ್‍ನಲ್ಲಿ 56 ರೈಲುಗಳನ್ನು ರದ್ದು ಮಾಡಲಾಗಿದೆ. ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ತೌಕ್ತೆ ಚಂಡಮಾರುತ ಗುಜರಾತ್, ಡಿಯು ಡಾಮನ್, ದಾದ್ರಾ ನಗರ್ ಹವೇಲಿಯನ್ನು ಹಾದು ಹೋಗಲಿದೆ.

  • ರಾಯಚೂರಿನಲ್ಲಿ ಸಿಡಿಲಿಗೆ 4 ಎತ್ತು ಬಲಿ – ಬಿರುಗಾಳಿಗೆ 9 ಕುಟುಂಬ ಬೀದಿಗೆ

    ರಾಯಚೂರಿನಲ್ಲಿ ಸಿಡಿಲಿಗೆ 4 ಎತ್ತು ಬಲಿ – ಬಿರುಗಾಳಿಗೆ 9 ಕುಟುಂಬ ಬೀದಿಗೆ

    ರಾಯಚೂರು: ತಾಲೂಕಿನ ಅರಷಿಗೆರೆಯಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಬಯಲು ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಸಾವನ್ನಪ್ಪಿವೆ.

    ಅರಷಿಗೆರೆಯ ರೈತ ಶೇಖರಯ್ಯವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಎತ್ತುಗಳನ್ನು ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ. ಮುಂಗಾರು ಬಿತ್ತನೆಯ ಸಂದರ್ಭದಲ್ಲಿ ಎತ್ತುಗಳ ಕಳೆದುಕೊಂಡಿರುವುದು ರೈತನಿಗೆ ತುಂಬಲಾರದ ನಷ್ಟವಾಗಿದೆ. ಯಾಪಲದಿನ್ನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ರಾಯಚೂರು ತಾಲೂಕಿನ ಯದ್ಲಾಪುರ ಗ್ರಾಮದಲ್ಲಿ ಬಿರುಗಾಳಿಗೆ 9 ಟಿನ್ ಶೆಡ್ ಮನೆಗಳು ಸಂಪೂರ್ಣ ಜಖಂಗೊಂಡಿವೆ. ಟಿನ್‍ಗಳು ಗಾಳಿಗೆ ಹಾರಿ ವಿದ್ಯುತ್ ತಂತಿಯ ಮೇಲೆ ಬಿದ್ದಿವೆ. ಮನೆಯಲ್ಲಿನ ದವಸ ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳು ಬಿರುಗಾಳಿ ಸಹಿತ ಮಳೆಗೆ ಹಾಳಾಗಿವೆ. ಬಿರುಗಾಳಿಯಿಂದ ಒಂಭತ್ತು ಬಡ ಕುಟುಂಬಗಳು ಸೂರನ್ನು ಕಳೆದುಕೊಂಡು ವಾಸಮಾಡಲು ಜಾಗವಿಲ್ಲದೆ ಪರದಾಡುತ್ತಿವೆ.

    ರಮೇಶ್, ಜಿಂದಾವಲಿ, ಅಬ್ದುಲ್ ಸಾಬ್, ಮಾರೆಪ್ಪ, ಹುಲಿಗೆಮ್ಮ, ಹನುಮಂತಿ ಸೇರಿ ಒಂಭತ್ತು ಜನರ ಮನೆಗಳು ಸಂಪೂರ್ಣ ಹಾಳಾಗಿವೆ. ತಾಲೂಕು ಆಡಳಿತ ಕೂಡಲೇ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ಮನೆ ಕಳೆದುಕೊಂಡ ನಿರಾಶ್ರಿತರು ಒತ್ತಾಯಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಅಲ್ಲಲ್ಲಿ ಭಾರಿ ಗಾಳಿ ಹಾಗೂ ಮಳೆಯಾಗಿದೆ.

  • ಅಂಫಾನ್ ಚಂಡಮಾರುತಕ್ಕೆ ಒಡಿಶಾ, ಪಶ್ಚಿಮ ಬಂಗಾಳ ತತ್ತರ – 12ಕ್ಕೂ ಹೆಚ್ಚು ಮಂದಿ ಬಲಿ

    ಅಂಫಾನ್ ಚಂಡಮಾರುತಕ್ಕೆ ಒಡಿಶಾ, ಪಶ್ಚಿಮ ಬಂಗಾಳ ತತ್ತರ – 12ಕ್ಕೂ ಹೆಚ್ಚು ಮಂದಿ ಬಲಿ

    – ಒಟ್ಟು 8 ಲಕ್ಷಕ್ಕೂ ಅಧಿಕ ಮಂದಿ ಸ್ಥಳಾಂತರ

    ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಅಂಫಾನ್ ಚಂಡಮಾರುತ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸುಮಾರು 185 ಕಿ.ಮೀ ವೇಗದಲ್ಲಿ ಪ್ರಬಲವಾದ ಬಿರುಗಾಳಿ ಬೀಸುತ್ತಿರುವ ಪರಿಣಾಮ ಈ ಎರಡು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಮರಗಳು, ಕಟ್ಟಡಗಳು ನೆಲಕಚ್ಚಿವೆ.

    ಪಶ್ಚಿಮ ಬಂಗಾಳದಲ್ಲಿ 10ರಿಂದ 12 ಮಂದಿ ಚಂಡಮಾರುತದಿಂದ ಆದ ಅನಾಹುತಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ಒಡಿಶಾದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಚಂಡಮಾರುತದ ಆರ್ಭಟಕ್ಕೆ ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ನಾಶಗೊಂಡಿದ್ದು, ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಇತ್ತ ಕೋಲ್ಕತಾದಲ್ಲಿ ಅನೇಕ ಕಟ್ಟಡಗಳು ನೆಲಕಚ್ಚಿವೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ 6.5 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಹಾಗೂ ಒಡಿಶಾದಲ್ಲಿ 1.58 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

    ಬುಧವಾರ ಮಧ್ಯಾಹ್ನ 2.30ಕ್ಕೆ ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳದ ದಿಘಾ ಹಾಗೂ ಬಾಂಗ್ಲಾದೇಶದ ಹಟಿಯಾ ದ್ವೀಪದ ನಡುವೆ ಬಂದು ಅಪ್ಪಳಿಸಿತು. ಮೊದಲು 170 ಕಿಮೀ ವೇಗದಲ್ಲಿದ್ದ ಚಂಡಮಾರುತ ಬಳಿಕ 185 ಕಿಮೀ ವೇಗ ಪಡೆದುಕೊಂಡು ಮುನ್ನುಗ್ಗಿದೆ. ಈ ಹಿನ್ನೆಲೆ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿ ಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಹೌರಾ ಜಿಲ್ಲೆ ಹಾಗೂ ಉತ್ತರ 24 ಪರಗಣ ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

    ರಕ್ಷಣಾ ಕಾರ್ಯಗಳಿಗೆಂದು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯು(ಎನ್‌ಡಿಆರ್‌ಎಫ್‌) 20 ತಂಡಗಳನ್ನು ಒಡಿಶಾಗೆ ಹಾಗೂ 19 ತಂಡಗಳನ್ನು ಪಶ್ಚಿಮ ಬಂಗಾಳಕ್ಕೆ ರಕ್ಷಣಾ ಕಾರ್ಯಾಚರನೆಗೆ ಕಳುಹಿಸಿದೆ. ಸದ್ಯ ಈ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇನ್ನೂ 1ರಿಂದ 2 ದಿನ ಆರ್ಭಟಿಸಿ ಚಂಡಮಾರುತ ದುರ್ಬಲಗೊಳ್ಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಬಿರುಗಾಳಿ ಸಹಿತ ಮಳೆಗೆ ಶೆಡ್‍ಗಳು ನೆಲಸಮವಾಗುತ್ತಿರುವ ದೃಶ್ಯ, ಮಳೆಗೆ ರಸ್ತೆಗಳಲ್ಲಿ ನೀರು ತುಂಬಿ ವಾಹನಗಳು ಮುಳುಗಿರುವ ದೃಶ್ಯಗಳು, ಹಲವೆಡೆ ವಿದ್ಯುತ್ ತಂತಿಗಳ ಮೇಲೆ ಮರಗಳು ಉರುಳಿ ಬೀಳುತ್ತಿರುವಾಗ ಬೆಂಕಿ ಕಾಣಿಸಿಕೊಂಡ ದೃಶ್ಯ, ಭಾರೀ ಬಿರುಗಾಳಿ ಬಸ್ಸೊಂದನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇವನ್ನು ನೋಡಿದಾಗ ಅಂಫಾನ್ ಚಂಡಮಾರುತ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಎಷ್ಟು ಅವಾಂತರ ಸೃಷ್ಟಿಸಿದೆ ಎಂಬುದು ತಿಳಿಯುತ್ತದೆ.

    https://twitter.com/Prakharforever/status/1263181032137920513

  • ಮಲೆನಾಡಲ್ಲಿ ಮಳೆ ಅಬ್ಬರ- ಹೆಚ್ಚುತ್ತಲಿದೆ ಜನಸಾಮಾನ್ಯರ ಆತಂಕ

    ಮಲೆನಾಡಲ್ಲಿ ಮಳೆ ಅಬ್ಬರ- ಹೆಚ್ಚುತ್ತಲಿದೆ ಜನಸಾಮಾನ್ಯರ ಆತಂಕ

    ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ದೈತ್ಯ ಮಳೆಗೆ ಮಲೆನಾಡಿಗರು ಕಂಗಾಲಾಗಿದ್ದಾರೆ.

    ಕಳೆದ ವರ್ಷದ ಮಳೆಯಿಂದಾದ ಅನಾಹುತ ಸಾವು-ನೋವಿನಿಂದ ಜನ ಹೊರಬರುವ ಮುನ್ನವೇ ಮತ್ತೆ ಮಳೆರಾಯ ತನ್ನ ಆರ್ಭಟವನ್ನ ಅನಾವರಣಗೊಳಿಸಿದ್ದಾನೆ. ಮಳೆಯ ಅಬ್ಬರ ಕಂಡು ಮಲೆನಾಡಿಗರು ಮತ್ತೊಮ್ಮೆ ಒಂದೇ ಜೀವಿತಾವಧಿಯಲ್ಲಿ ಮೂರನೇ ಬಾರಿ ಹೊಸ ಬದುಕು ಕಟ್ಟಿಕೊಳ್ಳಬೇಕಾ ಎಂಬ ಆತಂಕಕ್ಕೀಡಾಗಿದ್ದಾರೆ. ಭಾನುವಾರ ರಾತ್ರಿ ಹಾಗೂ ಇಂದು ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆ ಮಲೆನಾಡಿಗರ ನಿದ್ದೆಗೆಡಿಸಿದೆ.

    ಜಿಲ್ಲೆಯ ಮಲೆನಾಡು ಭಾಗಗಳಾದ ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕಳಸ, ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನ ಸುತ್ತಮುತ್ತ, ಬಣಕಲ್, ಬಾಳೂರು, ಕೊಟ್ಟಿಗೆಹಾರ, ಚಕ್ಕಮಕ್ಕಿ, ಮತ್ತಿಕಟ್ಟೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಬಣಕಲ್‍ನ ಅಬ್ಬಾಸ್ ಎಂಬುವರ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಸುಣ್ಣದ ಗೂಡಿನ ಜಯಮ್ಮ ಎಂಬವರ ಮನೆ ಮೇಲೂ ಮರ ಬಿದ್ದು ಮನೆಗೆ ಹಾನಿಯಾಗಿದೆ. ಬಣಕಲ್‍ನ ಪೊಲೀಸ್ ಕ್ವಾಟರ್ಸ್ ನ ಮೇಲ್ಛಾವಣೆಯ ಶೀಟುಗಳು ಭಾರೀ ಗಾಳಿಗೆ ಹಾರಿ ಹೋಗಿವೆ. ಬೀಸ್ತಿರೋ ಗಾಳಿ, ಸುರಿಯುತ್ತಿರೋ ಮಳೆಗೆ ಮಲೆನಾಡಿಗರು ಭಯಭೀತರಾಗಿದ್ದಾರೆ.

    ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ಗೋರಿಗಂಡಿ ಬಳಿ ಭಾರೀ ಮಳೆಗಾಳಿಗೆ ರಾಜ್ಯ ಹೆದ್ದಾರಿ ಬಿರುಕು ಬಿಟ್ಟಿದೆ. ನಿರ್ಮಾಣ ಹಂತದ ಸೇತುವೆಗೆ ಹಾಕಿದ್ದ ಪಿಲ್ಲರ್ ಗಳು ಕೂಡ ನೆಲಕ್ಕುರುಳಿವೆ. ಮಲೆನಾಡಿನಾದ್ಯಂತ ಅಲ್ಲಲ್ಲೇ ಗ್ರಾಮೀಣ ಭಾಗದಲ್ಲಿ ಮರಗಳು ಧರೆಗುರುಳಿ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ಮಲೆನಾಡಿನ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ.

    ಕಳೆದ ವರ್ಷದ ಮಹಾಮಳೆ ಮಲೆನಾಡಿಗರು ಬದುಕನ್ನೇ ಅತಂತ್ರಗೊಳಿಸಿತ್ತು. ಎರಡ್ಮೂರು ತಿಂಗಳುಗಳ ಕಾಲ ಗಂಜಿ ಕೇಂದ್ರದಲ್ಲಿದ್ದ ಜನ ಹೊಸ ಬದುಕಿಗೆ ಅಣಿಯಾಗುತ್ತಿದ್ದರು. ಆದರೆ ಈಗ ವರುಣನ ಆಗಮನ ಅದೇ ರೀತಿಯಾಗಿದ್ದು ಮುಂದಿನ ದಿನಗಳಲ್ಲಿ ಇನ್ಯಾವ ಸಂಕಷ್ಟಕ್ಕೆ ಅಣಿಯಾಗಬೇಕೋ ಎಂದು ಜನ ಭಯಭೀತರಾಗಿದ್ದಾರೆ.

  • ಕೊಡಗಿನಲ್ಲಿ ಬಿರುಗಾಳಿ ಸಹಿತ ಮಳೆ- ಹಾರಿದ ಮೇಲ್ಛಾವಣಿಗಳು

    ಕೊಡಗಿನಲ್ಲಿ ಬಿರುಗಾಳಿ ಸಹಿತ ಮಳೆ- ಹಾರಿದ ಮೇಲ್ಛಾವಣಿಗಳು

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ಮನೆಗಳ ಛಾವಣಿ ಹಾಗೂ ಹೆಂಚುಗಳು ಹಾರಿವೆ.

    ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಾದ್ಯಂತ ಭಾನುವಾರ ಸಂಜೆ ಭಾರೀ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

    ಸಂಜೆ ಗುಡುಗು ಸಹಿತ ಪ್ರಾರಂಭವಾದ ಬಿರುಗಾಳಿ ಮಳೆಗೆ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ, ದೊಡ್ಡ ಬಿಳಾಹ, ಗಸುಳುಗಳಲೆ ಕಾಲೋನಿ ಹಾಗೂ ಚಿನ್ನಳ್ಳಿ ಗ್ರಾಮಗಳ ಹಲವು ಮನೆಗಳ ಮೇಲ್ಛಾವಣಿ, ಹೆಂಚುಗಳು ಹಾಗೂ ವಿದ್ಯುತ್ ಕಂಬಗಳು ದರೆಗೆ ಉರುಳಿ ಅಪಾರ ನಷ್ಟ ಸಂಭವಿಸಿದೆ. ಮುಂಗಾರು ಪೂರ್ವದ ಮಳೆಯ ಅಬ್ಬರ ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

  • ಮುಟ್ಲುಪಾಡಿಯಲ್ಲಿ ರಣ ಭೀಕರ ಬಿರುಗಾಳಿ- 100 ಮನೆಗಳಿಗೆ ಹಾನಿ

    ಮುಟ್ಲುಪಾಡಿಯಲ್ಲಿ ರಣ ಭೀಕರ ಬಿರುಗಾಳಿ- 100 ಮನೆಗಳಿಗೆ ಹಾನಿ

    ಉಡುಪಿ: ಜಿಲ್ಲೆಯಲ್ಲಿ ಮಳೆ ನೆರೆ ಸೃಷ್ಟಿಸಿದ್ದರೆ, ಬಿರುಗಾಳಿ ಅಟ್ಟಹಾಸ ಮೆರೆದಿದೆ. ಹೆಬ್ರಿ ತಾಲೂಕಿನ ಮುಟ್ಲುಪಾಡಿಯಲ್ಲಿ ಬೀಸಿದ ಬಿರುಗಾಳಿಗೆ 15 ಮನೆಗಳ ಚಾವಣಿ ಹಾರಿದೆ. 100 ಮನೆಗಳಿಗೆ, ತೋಟಕ್ಕೆ ಹಾನಿ ಉಂಟು ಮಾಡಿದೆ.

    ಮುನಿಯಾಲು ಗ್ರಾಮದಲ್ಲಿ ಎದ್ದ ಬಿರುಗಾಳಿ ಮುಟ್ಲುಪಾಡಿ ಗ್ರಾಮದತ್ತ ಬೀಸಿದೆ. ಸುತ್ತಲಿನ ಅಡಿಕೆ, ತೆಂಗಿನ ತೋಟಗಳಿಗೆ ಹಾನಿಯಾಗಿದೆ. 100ಕ್ಕೂ ಹೆಚ್ಚು ಮನೆಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ. ಭತ್ತದ ಗದ್ದೆಗೂ ಬಿರುಗಾಳಿ ಹಾನಿಯುಂಟು ಮಾಡಿದೆ. ಮುಟ್ಲುಪಾಡಿಯ ಘಟನೆಯಲ್ಲೇ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

    ಸ್ಥಳೀಯ ಶಾಸಕ ಸುನೀಲ್ ಕುಮಾರ್ ಬಿರುಗಾಳಿಗೆ ತುತ್ತಾದ ಮನೆಗಳು, ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮನೆ ರಿಪೇರಿಗೆ ಶೀಘ್ರ ಪರಿಹಾರ ಮೊತ್ತ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಪರಿಹಾರಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸುವುದಾಗಿ ಹೇಳಿದರು.

    ಅಲ್ಲದೆ ಜಿಲ್ಲೆಯ ಚೇರ್ಕಾಡಿ ಗ್ರಾಮದ ಬೆನಗಲ್‍ನಲ್ಲಿ ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದ ಪರಿಣಾಮ 52 ವರ್ಷದ ಗಂಗಾ ಮರಕಾಲ ಎಂಬವರು ಮೃತಪಟ್ಟಿದ್ದಾರೆ.

  • ಕರಾವಳಿ, ಕಾಫಿನಾಡಿನಲ್ಲಿ ಮಳೆರಾಯನ ಆರ್ಭಟ

    ಕರಾವಳಿ, ಕಾಫಿನಾಡಿನಲ್ಲಿ ಮಳೆರಾಯನ ಆರ್ಭಟ

    ಕಾರವಾರ/ಉಡುಪಿ/ಚಿಕ್ಕಮಗಳೂರು: ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಬಿರುಗಾಳಿ ಜೊತೆ ಮಳೆಯ ಆರ್ಭಟ ಪ್ರಾರಂಭವಾಗಿದೆ.

    ವಾಯುಭಾರ ಕುಸಿತ ಹಾಗೂ ಗಾಳಿಯ ಆರ್ಭಟಕ್ಕೆ ಅರಬ್ಬಿ ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಾಗೆಯೇ ಉತ್ತರ ಕನ್ನಡದ ಹಲವೆಡೆ ಮಧ್ಯಾಹ್ನದಿಂದ ಮಳೆರಾಯನ ಆರ್ಭಟ ಜೋರಾಗಿದೆ. ಇತ್ತ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿರುವ ಕಾರಣಕ್ಕೆ ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿ, ಕಟ್ಟೆಚ್ಚರ ವಹಿಸಲಾಗಿದೆ.

    ಅಷ್ಟೇ ಅಲ್ಲದೆ ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕೂಡ ಮಳೆರಾಯ ಆರ್ಭಟಿಸಿದ್ದಾನೆ. ಗುಡುಗು-ಸಿಡಿಲು ಸಹಿತ ವರುಣ ಸುರಿಯುತ್ತಿದ್ದಾನೆ. ಬಾಳೆಹೊನ್ನುರು, ಮೂಡಿಗೆರೆ, ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಬೆಳಗ್ಗಿನಿಂದಲೂ ಜಿಲ್ಲಾದ್ಯಂತ ಅಲ್ಲಲ್ಲೇ ತುಂತುರು ಮಳೆಯಾಗಿತ್ತು, ಆದರೆ ಸಂಜೆ ವೇಳೆಗೆ ಮಲೆನಾಡಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಇದರಿಂದ ಸದ್ಯ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

    ಹಾಗೆಯೇ ಉಡುಪಿಯಲ್ಲಿ ಕೂಡ ಧಾರಾಕಾರ ಮಳೆಯಾಗಿದ್ದು ಮುಂಗಾರು ಮಳೆ ಪ್ರವೇಶದ ಮುನ್ಸೂಚನೆ ನೀಡಿದೆ. ಉಡುಪಿ, ಕಾಪು ತಾಲೂಕಿನ ಅಲ್ಲಲ್ಲಿ ಮಳೆಯಾಗಿದೆ. ಕುಂದಾಪುರ, ಬೈಂದೂರು ಕೆಲವೆಡೆ ತುಂತುರು ಮಳೆ ಸಿಂಚನವಾಗಿದೆ. ಇನ್ನೆರಡು ದಿನದಲ್ಲಿ ಭಾರೀ ಮಳೆ ನಿರೀಕ್ಷೆಯಿದ್ದು, ಜಿಲ್ಲೆಯಾದ್ಯಂತ ಕಾರ್ಮೋಡ ಆವರಿಸಿದ ವಾತಾವರಣ ನಿರ್ಮಾಣವಾಗಿದೆ.

  • ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್

    ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್

    – ಧರೆಗುರುಳಿತು 160 ವರ್ಷದ ಹಳೆಯ ಬೃಹತ್ ಆಲದ ಮರ

    ಬೆಂಗಳೂರು/ವಿಜಯಪುರ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

    ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

    ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್‍ಗಳು ಹರಸಾಹಸ ಪಡುತ್ತಿದ್ದಾರೆ.

    ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.