Tag: ಬಿಲ್ ಕಲೆಕ್ಟರ್

  • ವಿದ್ಯುತ್ ಬಿಲ್ ಕೇಳಿದಕ್ಕೆ ಕಲೆಕ್ಟರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ತಂದೆ ಮಗ

    ವಿದ್ಯುತ್ ಬಿಲ್ ಕೇಳಿದಕ್ಕೆ ಕಲೆಕ್ಟರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ತಂದೆ ಮಗ

    ಕೋಲಾರ: ಬಾಕಿ ವಿದ್ಯುತ್ ಬಿಲ್ ಕೇಳಿದ ಬಿಲ್ ಕಲೆಕ್ಟರ್‌ಗೆ ತಂದೆ ಮಗ ಹಿಗ್ಗಾಮುಗ್ಗಾ ಥಳಿಸಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಹಳ್ಳಿಯಲ್ಲಿ ಮನೆ ಮನೆಗೆ ತೆರಳಿ ವಿದ್ಯುತ್ ಬಿಲ್ ನೀಡುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಮೇಲೆ ಮನಸೋ ಇಚ್ಛೆ ಥಳಿಸಲಾಗಿದೆ. ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ವ್ಯಾಪ್ತಿಯ ಕೊತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹೊಡೆದಾಟದ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ.

    ವಿದ್ಯುತ್ ಬಿಲ್ ಕಲೆಕ್ಟರ್ ನಾಗೇಶ್ ಮೇಲೆ ಹಲ್ಲೆ ನಡಿಸಿದ್ದಾರೆ. ಗ್ರಾಮದ ಉತ್ತಣ್ಣ ಹಾಗೂ ಅವರ ಮಗ ಶ್ರೀನಾಥ್ ಹಲ್ಲೆ ಮಾಡಿದ್ದಾರೆ. ಉತ್ತಣ್ಣ 13,000 ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಇತ್ತೀಚೇಗೆ ಮುತ್ತಣ್ಣ ಮನೆಗೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿತ್ತು. ಇದನ್ನ ಪ್ರಶ್ನಿಸಿದ್ದಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಕೊಪ್ಪಳ ಅಬಕಾರಿ ಡಿಸಿ ಹಣ ಕೊಟ್ಟಿರೋದು ಶುದ್ದ ಸುಳ್ಳು: ಕೆ. ಗೋಪಾಲಯ್ಯ

    ಈ ವೇಳೆ ಬಿಲ್ ಕಲೆಕ್ವರ್ ನಾಗೇಶ್, ಶ್ರೀನಾಥ್ ಮಧ್ಯೆ ಹೊಡೆದಾಟ ನಡೆದಿದ್ದು, ಮಧ್ಯ ಪ್ರವೇಶ ಮಾಡಿದ ಉತ್ತಣ್ಣ ಸಹ ಹಲ್ಲೆ ಮಾಡಿದ್ದಾರೆ. ಹೊಡೆದಾಟ ದಿಂದ ನಾಗೇಶ್ ಗೆ ಸಣ್ಣ ಪುಟ್ಟ ಗಾಯಗಳಾಗಿ ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಮೊಬೈಲ್ ಕಸಿದುಕೊಂಡಿದ್ದಕ್ಕೆ ಮಚ್ಚಿನಿಂದ ತಂದೆಯ ಕತ್ತು ಕೊಯ್ದು ಮಗ

    ಮೊಬೈಲ್ ಕಸಿದುಕೊಂಡಿದ್ದಕ್ಕೆ ಮಚ್ಚಿನಿಂದ ತಂದೆಯ ಕತ್ತು ಕೊಯ್ದು ಮಗ

    ಚಿತ್ರದುರ್ಗ: ಮೊಬೈಲ್ ಕಸಿದುಕೊಂಡಿದ್ದಕ್ಕೆ ಸ್ವಂತ ಅಪ್ಪನನ್ನೇ ಅಪ್ರಾಪ್ತ ಬಾಲಕ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಆರ್.ಡಿ ಕಾವಲು ಗ್ರಾಮದಲ್ಲಿ ನಡೆದಿದೆ.

    ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಯಪ್ಪ (48) ಅವರನ್ನು ಯಾರೋ ದುಷ್ಕರ್ಮಿಗಳು ಕತ್ತು ಕೊಯ್ದ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸುದ್ದಿಯಾಗಿತ್ತು.

    ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಸ್ಥಳಕ್ಕೆ ಬಂದ ಪೊಲೀಸರು, ಮನೆಯಲ್ಲಿ ಇದ್ದವರನ್ನು ವಿಚಾರಿಸಿದ್ದಾರೆ. ಮನೆಯಲ್ಲಿ ಜಯಪ್ಪನ ಹೆಂಡತಿ ಸಂಬಂಧಿಕರ ಮನೆಗೆ ಹೋಗಿದ್ದು, ಮನೆಯಲ್ಲಿ ಅಪ್ಪ ಮಗ ಮಾತ್ರ ಇದ್ದರು ಎಂದು ಗೊತ್ತಾಗಿದೆ.

    ಆಗ ಮಗ 16 ವರ್ಷದ ಪುನೀತ್‍ನನ್ನು ಕರೆಸಿ ವಿಚಾರಣೆ ಮಾಡಿದ್ದಾರೆ. ಈ ವೇಳೆ ನಮ್ಮ ತಂದೆಯನ್ನು ನಾನೇ ಕೊಲೆ ಮಾಡಿದ್ದು ಎಂದು ಅಪ್ರಾಪ್ತ ಬಾಲಕ ಒಪ್ಪಿಕೊಂಡಿದ್ದಾನೆ. ರಾತ್ರಿ ಮೊಬೈಲ್ ನೋಡುತ್ತಿದ್ದ ಮಗನ ಮೇಲೆ ಗದರಿದ ಅಪ್ಪ ಮೊಬೈಲ್ ಕಸಿದುಕೊಂಡು ಬೈದು ಹೋಗಿ ಮಲಗಿದ್ದಾನೆ. ಮೊಬೈಲ್ ಕಸಿದುಕೊಂಡಿದಕ್ಕೆ ಕೋಪಗೊಂಡಿದ್ದ ಪುನೀತ್ ಬೆಳಗಿನ ಜಾವ ಮನೆಯಲ್ಲಿ ಇದ್ದ ಮಚ್ಚಿನಿಂದ ತಂದೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯ ಆರೋಪಿಯನ್ನು ಅರೆಸ್ಟ್ ಮಾಡಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

  • ಕತ್ತು ಕೊಯ್ದು ಗ್ರಾ.ಪಂ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ

    ಕತ್ತು ಕೊಯ್ದು ಗ್ರಾ.ಪಂ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ

    ಚಿತ್ರದುರ್ಗ: ಕತ್ತು ಕೊಯ್ದು ಗ್ರಾ.ಪಂ ಬಿಲ್ ಕಲೆಕ್ಟರ್‍ರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಆರ್.ಡಿ ಕಾವಲುನಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ಜಯಪ್ಪ (48) ಎಂದು ಗರುತಿಸಲಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ರಾತ್ರಿ ಮನೆಯಲ್ಲಿ ಜಯಪ್ಪ ಒಬ್ಬನೇ ಮಲಗಿದ್ದಾಗ ದುಷ್ಕರ್ಮಿಗಳು ಬಂದು ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

    ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

  • ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ಧಾರವಾಡ: ಹೈವೋಲ್ಟೇಜ್ ವಿದ್ಯುತ್ ಹರಿದ ಪರಿಣಾಮ ಗ್ರಾಮದ ಹಲವು ಮನೆಗಳ ಎಲೆಕ್ಟ್ರಾನಿಕ್ಸ್ ಉಪಕರಣಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಕ್ಯಾರಕೊಪ್ಪ ಗ್ರಾಮದಲ್ಲಿ ಬುಧವಾರ ತಡರಾತ್ರಿ ಹೈವೋಲ್ಟೇಜ್ ವಿದ್ಯುತ್‍ನಿಂದ ಹಲವು ಮನೆಗಳ ಟಿವಿ, ಫ್ರಿಡ್ಜ್, ಚಾರ್ಜ್ ಹಾಕಿದ್ದ ಮೊಬೈಲ್ ಫೋನ್‍ಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹೋಗಿದೆ. ಸುಮಾರು 8 ಮನೆಗಳಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹಾಳಾಗಿದೆ. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಬೆಳ್ಳಂಬೆಳಗ್ಗೆ ಗ್ರಾಮದ ಬಿಲ್ ಕಲೆಕ್ಟರ್‍ಗೆ ಕರೆ ಮಾಡಿ ಅವಘಡದ ಬಗ್ಗೆ ತಿಳಿದ್ದಾರೆ. ಅಲ್ಲದೆ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ.

    ಗ್ರಾಮಸ್ಥರ ಒತ್ತಾಯದ ಮೇಲೆ ಸ್ಥಳಕ್ಕೆ ಬಂದ ಬಿಲ್ ಕಲೆಕ್ಟರ್ ನನ್ನು ತರಾಟೆಗೆ ತೆರೆದುಕೊಂಡು, ನಂತರ ಮೇಲಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಿನ್ನನ್ನು ಬಿಡಲ್ಲ ಎಂದು ಗ್ರಾಮ ಪಂಚಾಯ್ತಿಯಲ್ಲಿದ್ದ ಕೋಣೆಯಲ್ಲಿ ಗ್ರಾಮಸ್ಥರು ಕೂಡಿ ಹಾಕಿದ್ದಾರೆ. ಹಾಗೆಯೇ ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv