Tag: ಬಿವಿ ಆಚಾರ್ಯ

  • ಪಕ್ಷಗಳು  ಮನಸ್ಸು ಮಾಡಿದ್ರೆ ಲೋಕಸಭಾ ಉಪ ಚುನಾವಣೆಯನ್ನು ತಡೆಯಬಹುದು : ಬಿವಿ ಆಚಾರ್ಯ

    ಪಕ್ಷಗಳು ಮನಸ್ಸು ಮಾಡಿದ್ರೆ ಲೋಕಸಭಾ ಉಪ ಚುನಾವಣೆಯನ್ನು ತಡೆಯಬಹುದು : ಬಿವಿ ಆಚಾರ್ಯ

    ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ತಡೆಯಲು ಅವಕಾಶ ಇದೆ ಎಂದು ಹಿರಿಯ ವಕೀಲ ಬಿವಿ ಆಚಾರ್ಯ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆಯ ಸಾರ್ವತ್ರೀಕ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವ ವೇಳೆ ಉಪ ಚುನಾವಣೆ ಘೋಷಣೆ ಆಗಿದೆ. ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 151 ಎ ಅಡಿ ಚುನಾವಣೆ ತಡೆಯಬಹುದುದಾಗಿದೆ. 151 ಎ ಪ್ರಕಾರ ಉಳಿದ ಲೋಕಸಭೆಯ ಅವಧಿ ಒಂದು ವರ್ಷಕ್ಕಿಂತ ಕಡಿಮೆ ಇದ್ದರೆ ಚುನಾವಣೆ ನಡೆಸುವ ಅವಶ್ಯಕತೆಯಿಲ್ಲ. ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಆಯೋಗಕ್ಕೆ ಮನವಿ ಸಲ್ಲಿಸಬೇಕಿದೆ. ಆಗ ಚುನಾವಣೆ ಆಯೋಗ ತನ್ನ ಕ್ರಮವನ್ನು ಮತ್ತೆ ವಿಮರ್ಶೆಗೆ ಒಳಪಡಿಸಬಹುದು ಎಂದು ವಿವರಿಸಿದರು.

    ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ ಅವರು, ಚುನಾವಣೆ ಮಾಡಬಾರದು ಎಂದು ನಿಯಮವಿಲ್ಲ. ಸದ್ಯ ಉಪ ಚುನಾವಣೆ ಘೋಷಣೆ ಮಾಡಿರುವುದರಲ್ಲಿ ಚುನಾವಣಾ ಆಯೋಗದ ತಪ್ಪಿಲ್ಲ ಎಂದು ಸ್ಪಷ್ಟನೆ ನೀಡಿದರು. ಆದರೆ ಯಾವುದೇ ಕಾರಣದಿಂದ ತೆರವಾದ ಸ್ಥಾನಗಳಿಗೆ 6 ತಿಂಗಳ ಒಳಗೆ ಚುನಾವಣೆ ನಡೆಸಬೇಕು ಎಂದು ಕಾನೂನಿದೆ. ಅದ್ದರಿಂದ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಹೀಗಾಗಿ ಚುನಾವಣಾ ಆಯೋಗ ತನ್ನ ಕೆಲಸ ಮಾಡಿದೆ. 151 ಎ ಸೆಕ್ಷನ್ ವಿಧಾನಸಭೆ, ವಿಧಾನ ಪರಿಷತ್ ಮತ್ತು ಲೋಕಸಭೆ, ರಾಜ್ಯಸಭೆಗಳಿಗೂ ಅನ್ವಯಿಸುತ್ತದೆ ಎಂದರು.

    ಎರಡು ಸಂದರ್ಭದಲ್ಲಿ ಉಪಚುನಾವಣೆ ಆಗಲ್ಲ:
    ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 151 ಎ ಪ್ರಕಾರ ಎರಡು ಸಂದರ್ಭದಲ್ಲಿ ಉಪ ಚುನಾವಣೆ ನಡೆಯುವುದಿಲ್ಲ. ಮೊದಲನೆಯದಾಗಿ, ತೆರವಾದ ನಿರ್ದಿಷ್ಟ ಲೋಕಸಭೆ ಕ್ಷೇತ್ರದ ಸದಸ್ಯನ ಉಳಿಕೆ ಅವಧಿ ಒಂದು ವರ್ಷಕ್ಕಿಂತ ಕಡಿಮೆ ಇದ್ದರೆ ಉಪ ಚುನಾವಣೆ ನಡೆಸಲು ಅವಕಾಶ ಇಲ್ಲ. ಎರಡನೆಯದಾಗಿ, ಚುನಾವಣೆ ಆಯೋಗ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ಉಳಿಕೆ ಅವಧಿಯಲ್ಲಿ ಉಪ ಚುನಾವಣೆ ನಡೆಸುವುದು ಕಷ್ಟ ಎಂದು ಹೇಳಿದರೆ ಚುನಾವಣೆ ನಡೆಯುವುದಿಲ್ಲ.

    2013ರಲ್ಲಿ ಸದಸ್ಯನ ಉಳಿಕೆ ಅವಧಿ ಒಂದು ವರ್ಷಕ್ಕಿಂತ ಹೆಚ್ಚು ಇರುವ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಸಲಾಗುವುದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿತ್ತು. ಈಗ ಅಸ್ತಿತ್ವದಲ್ಲಿರುವ 16ನೇ ಲೋಕಸಭೆಯ ಅವಧಿ 2019ರ ಮೇ ತಿಂಗಳಿನಲ್ಲಿ ಪೂರ್ಣಗೊಳ್ಳುತ್ತದೆ. ಶಿವಮೊಗ್ಗ, ಬಳ್ಳಾರಿ, ಮಂಡ್ಯ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 3 ರಂದು ನಡೆದರೆ ನವೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ. ಅಂದರೆ ಈ ಫಲಿತಾಂಶ ಬಂದ ಬಳಿಕ ಗೆದ್ದವರಿಗೆ ಸಿಗುವುದು ಕೇವಲ 4 ತಿಂಗಳು ಮಾತ್ರ. ಸದಸ್ಯರು ರಾಜೀನಾಮೆ ನೀಡಿದ 6 ತಿಂಗಳ ಒಳಗಡೆ ಚುನಾವಣೆ ನಡೆಸುವುದು ಆಯೋಗದ ಕರ್ತವ್ಯ. ಆದರೆ 3-4 ತಿಂಗಳ ಅವಧಿಗಾಗಿ ಹಣವನ್ನು ಖರ್ಚು ಮಾಡಿ ಈ ಚುನಾವಣೆ ನಡೆಸಬೇಕೇ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

    ಲೋಕಸಭಾ ಉಪಚುನಾವಣೆ ನಡೆಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ. ಈ ರೀತಿಯ ಪರಿಸ್ಥಿತಿ ಬಂದಾಗ ಏನು ಮಾಡಬಹುದು ನಿಮ್ಮ ಸಲಹೆಯನ್ನು ತಿಳಿಸಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೈಲಿಂದ ಶಶಿಕಲಾ ಹೊರಬರದಂತೆ ರಾಜ್ಯ ಸರ್ಕಾರದ ಪ್ಲಾನ್

    ಜೈಲಿಂದ ಶಶಿಕಲಾ ಹೊರಬರದಂತೆ ರಾಜ್ಯ ಸರ್ಕಾರದ ಪ್ಲಾನ್

    -ಸುಪ್ರೀಂ ತೀರ್ಪು ಪುನರ್ ಪರಿಶೀಲಿಸುವಂತೆ ಅರ್ಜಿ ಸಲ್ಲಿಸಲು ನಿರ್ಧಾರ

    ವಿಶೇಷ ವರದಿ
    ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರೋ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಿಂದ ಹೊರಬರದಂತೆ ರಾಜ್ಯ ಸರ್ಕಾರ ಪ್ಲಾನ್ ಮಾಡಿದೆ.

    ಸುಪ್ರೀಂಕೋರ್ಟ್ ತೀರ್ಪಿನ ಲೋಪ ಬಳಸಿ ಶಶಿಕಲಾ ಬಚಾವಾಗುವ ಸಂಭವವಿದ್ದು, ಇದನ್ನು ತಪ್ಪಿಸಲು ಫೆ.14ರ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸಲು ಅರ್ಜಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರ ನೀಡಿರುವ ಆದೇಶ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಅರ್ಜಿ ಸಲ್ಲಿಕೆಗೆ ಸರ್ಕಾರ ಮುಂದಾಗಿರೋದ್ಯಾಕೆ?: ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗುವ ವೇಳೆಗೆ ಜಯಾ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ತೀರ್ಪಿನಲ್ಲಿ ಜಯಲಲಿತಾಗೆ ಅಪರಾಧಿಯಿಂದ ವಿನಾಯ್ತಿ ಸಿಕ್ಕಿತ್ತು. ಜಯಾ ಸಾವಿನ ಮುನ್ನವೇ ಕೋರ್ಟ್‍ನಲ್ಲಿ ವಿಚಾರಣೆ ಪೂರ್ಣಗೊಂಡಿತ್ತು. ತೀರ್ಪಷ್ಟೇ ಪ್ರಕಟಿಸಲು ಕಾಯ್ದಿರಿಸಿದ್ದಾಗ ಜಯಲಲಿತಾ ಮೃತಪಟ್ಟಿದ್ರು. ಜಯಲಲಿತಾ ಅಪರಾಧಿ ಆಗದೇ ಶಶಿಕಲಾಗೆ ಶಿಕ್ಷೆ ನೀಡಲು ಬರುವುದಿಲ್ಲ. ತೀರ್ಪಲ್ಲಿ ಮಾರ್ಪಾಡು ಆದೇಶ ಹೊರಬೀಳದಿದ್ದರೆ ಶಶಿಕಲಾಗೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಿರುತ್ತದೆ. ಈ ಬಗ್ಗೆ ಹಿರಿಯ ವಕೀಲರಾದ ಬಿವಿ ಆಚಾರ್ಯ ರಾಜ್ಯದ ಗಮನ ಸೆಳೆದಿದ್ದರು. ಹೀಗಾಗಿ ಜಯಲಲಿತಾ ಅವರನ್ನೂ ಅಪರಾಧಿ ಎಂದು ಘೋಷಿಸಬೇಕು. ಜಯಾ ಅಪರಾಧಿ ಎಂದು ಆದೇಶದಲ್ಲಿ ಉಲ್ಲೇಖಿಸಬೇಕು ಎಂದು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

    ರಾಜ್ಯದ ಪರ ವಾದ ಮಂಡಿಸುವವರ್ಯಾರು?: ಖ್ಯಾತ ನ್ಯಾಯವಾದಿ ಜೋಸೆಫ್ ಅರಿಸ್ಟಾಟಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಿದ್ದಾರೆ. ವಿಶೇಷ ಪ್ರತಿನಿಧಿಯಾಗಿ ಹಿರಿಯ ನ್ಯಾಯವಾದಿ ಬಿ.ವಿ.ಆಚಾರ್ಯ ಅವರನ್ನ ರಾಜ್ಯ ಸರ್ಕಾರ ನೇಮಿಸಿದ್ದು, ಸರ್ಕಾರದ ಪರವಾಗಿ ಬಿವಿ ಆಚಾರ್ಯ ವಾದ ಮಂಡಿಸಲಿದ್ದಾರೆ. ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲೂ ಬಿ.ವಿ.ಆಚಾರ್ಯ ವಾದ ಮಂಡಿಸಿದ್ದರು.

    ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತು ಫೆಬ್ರವರಿ 14ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಶಶಿಕಲಾ, ಇಳವರಸಿ ಹಾಗೂ ಸುಧಾಕರನ್ ದೋಷಿ ಎಂದು ಪರಿಗಣಿಸಿ 4 ವರ್ಷ ಜೈಲು ಹಾಗೂ 10 ಕೋಟಿ ರೂ. ದಂಡ ವಿಧಿಸಿತ್ತು.

  • ಬಿಗ್ ಬುಲೆಟಿನ್ ಚೆನ್ನಾಗಿದೆ, ಆದ್ರೆ ಬೇರೆಯವರಿಗೆ ಮಾತನಾಡಲು ಬಿಡಲ್ಲ ಯಾಕೆ: ಬಿವಿ ಆಚಾರ್ಯ ಪ್ರಶ್ನೆ

    ಬೆಂಗಳೂರು: ಬಿಗ್ ಬುಲೆಟಿನ್ ಚೆನ್ನಾಗಿದೆ. ಆದರೆ ಕೋಪ ಯಾಕೆ? ವಿರೋಧ ಮಾತನಾಡುವರ ಮಾತನ್ನು ಕೇಳಲು ಬೀಡುವುದಿಲ್ಲ ಯಾಕೆ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿವಿ ಆಚಾರ್ಯ ಅವರು ಎಚ್.ಆರ್.ರಂಗನಾಥ್ ಅವರನ್ನು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಗೆ ಐದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕೋಪ ಕಡಿಮೆಯಾದರೆ ಬಿಗ್ ಬುಲೆಟಿನ್ ಮತ್ತಷ್ಟು ಚೆನ್ನಾಗಿ ಮೂಡಿಬರಬಹುದು ಎಂದು ಸಲಹೆ ನೀಡಿದರು.

    ಜಡ್ಜ್ ಆಗಿದ್ದವರಿಗೆ ಸಂಯಮ ಇರಬೇಕು. ಎರಡೂ ಕಡೆಯ ವಾದವನ್ನು ಅಲಿಸಬೇಕಾಗುತ್ತದೆ. ಅದೇ ರೀತಿಯಾಗಿ ವಾರ್ತಾ ನಿರೂಪಕರು ಎರಡು ಕಡೆಯ ವಾದವನ್ನು ಕೇಳಬೇಕು ಎನ್ನುವ ಅಭಿಪ್ರಾಯವನ್ನು ಹೇಳಿದರು.

    ದೇಶದಲ್ಲಿ ಒಬ್ಬರು ಪ್ರಖ್ಯಾತ ಪ್ರರ್ತಕರ್ತರಿದ್ದಾರೆ. ಅವರು ಏನು ಮಾತನಾಡಿರುತ್ತಾರೋ ಆ ವಿಚಾರದ ಪರ ಮಾತನಾಡಿದರೆ ಅತಿಥಿಗಳನ್ನು ಬಿಡುತ್ತಾರೆ. ವಿರೋಧ ಮಾತನಾಡಿದರೆ ಮಾತನಾಡಲು ಬಿಡುವುದಿಲ್ಲ. ಹಾಗೆ ನೀವು ಮಾಡುವುದಿಲ್ಲ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಎಚ್‍ಆರ್ ರಂಗನಾಥ್ ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ಬಿವಿ ಆಚಾರ್ಯ ಅವರ ಜೊತೆಗಿನ ಅನುಭವವನ್ನು ಮೆಲುಕು ಹಾಕಿದರು.

    ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ರಂಗನಾಥ್, ಪ್ರಜಾಪ್ರಭುತ್ವದಲ್ಲಿ ನಾವು ಪ್ರಶ್ನಾತೀತರಲ್ಲ. ನಾವು ಹೇಗೆ ಪ್ರಶ್ನೆ ಮಾಡುತ್ತೇವೋ ಅದೇ ರೀತಿಯಾಗಿ ನಮ್ಮನ್ನು ಜನ ಪ್ರಶ್ನೆ ಮಾಡಬೇಕು. ಇಲ್ಲಿ ಪಬ್ಲಿಕ್ ಟಿವಿಯನ್ನು ಹೊಗಳಿ ಮಾತನಾಡಬಾರದು, ನಮ್ಮ ತಪ್ಪುಗಳನ್ನು ತೋರಿಸಿ ಟೀಕಿಸಬೇಕು ಎಂದು ಅತಿಥಿಗಳನ್ನು ಕೇಳಿಕೊಂಡಿದ್ದರು.

    ಸಂವಾದದ ಕೊನೆಯಲ್ಲಿ ಎಲ್ಲ ಅತಿಥಿಗಳ ಪ್ರಶ್ನೆಗೆ ಉತ್ತರಿಸಿದ ರಂಗನಾಥ್, ನಿಮ್ಮೆಲ್ಲರ ಸಲಹೆಯನ್ನು ಪರಿಗಣಿಸಿದ್ದೇನೆ. ನಾಳೆಯಿಂದಲೇ ನಿಮ್ಮ ಸಲಹೆಗಳು ಜಾರಿ ಆಗುತ್ತದೆ ಎಂದು ಹೇಳಲಾರೆ. ಆದರೆ ಮುಂದಿನ ದಿನಗಳಲ್ಲಿ ನೀವು ಪಬ್ಲಿಕ್ ಟಿವಿಯಲ್ಲಿ ಬದಲಾವಣೆಯನ್ನು ಕಾಣಲಿದ್ದೀರಿ ಎಂದು ತಿಳಿಸಿದರು.

    ಈ ವಿಶೇಷ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಸತ್ಯನಾರಾಯಣ, ನಟ ಮುಖ್ಯಮಂತ್ರಿ ಚಂದ್ರು, ಹಿರಿಯ ನಟಿ ಅರುಂಧತಿ ನಾಗ್, ನಿವೃತ್ತ ಡಿಜಿ, ರೇವಣ ಸಿದ್ದಯ್ಯ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್, ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ದ್ವಾರಕನಾಥ್, ಬಿಜೆಪಿ ಮುಖಂಡ ಅಶ್ವತ್ಥ ನಾರಾಯಣ, ಉತ್ತರ ಕರ್ನಾಟಕನಿವಾಸಿಗಳ ಸಂಘದ ಅಧ್ಯಕ್ಷ ಚಂದ್ರೇಶಖರ್ ಸಾಂಬ್ರಾಣಿ, ಮಹಿಳಾ ಹೋರಾಟಗಾರ್ತಿ ವಿಮಲಾ ಅತಿಥಿಗಳಾಗಿ ಭಾಗವಹಿಸಿದ್ದರು.