Tag: ಬಿಸಿಲು ತಾಪಮಾನ

  • ಬಿಸಿಲಿನ ಆರ್ಭಟಕ್ಕೆ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆ: ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ ಆರಂಭ

    ಬಿಸಿಲಿನ ಆರ್ಭಟಕ್ಕೆ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆ: ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್‌ ಆರಂಭ

    ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ದಿನೇ ದಿನೇ ತಾಪಮಾನ ಹೆಚ್ಚಳವಾಗುತ್ತಲೇ ಇದೆ. ತಾಪಮಾನ ಹೆಚ್ಚಳದಿಂದ ಜನ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ (RIMS Hospital) ಹೀಟ್ ಸ್ಟ್ರೋಕ್ ಮ್ಯಾನೇಜ್ಮೆಂಟ್‌ ವಾರ್ಡ್‌‌ ಅನ್ನು ತೆರೆಯಲಾಗಿದೆ. ಬಿಸಿಲಿನ ತಾಪದಿಂದ ಉಂಟಾದ ಕಾಯಿಲೆಗಳ ಚಿಕಿತ್ಸೆಗೆ ರಿಮ್ಸ್ ವೈದ್ಯರು ವಿಶೇಷ ವಾರ್ಡ್ ಆರಂಭಿಸಿದ್ದಾರೆ.

    ಇಡೀ ರಾಜ್ಯದಲ್ಲಿ ಈ ಬಾರಿಯ ಬೇಸಿಗೆ (Summer) ಜನರನ್ನ ನಿತ್ರಾಣ ಮಾಡಿದೆ. ಅದರಲ್ಲೂ ಬಿಸಿಲನಾಡು ರಾಯಚೂರಿನಲ್ಲಿ ದಾಖಲೆಯ ತಾಪಮಾನ‌ ಜನರನ್ನ ಮನೆಯಿಂದ ಹೊರ ಬರದಂತೆ ಮಾಡಿದೆ. ಹೀಗಾಗಿ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆಯಲ್ಲಿ ಅತಿಯಾದ ಶಾಖ (Heat Wave) ಆರೋಗ್ಯ ಸಮಸ್ಯೆಗಳ ವಿಶೇಷ ವಾರ್ಡನ್ನ ತೆರೆಯಲಾಗಿದೆ. ಸದ್ಯ 8 ಹಾಸಿಗೆಗಳ ವಾರ್ಡನ್ನ ಅಗತ್ಯಕ್ಕೆ ತಕ್ಕಂತೆ 20 ಬೆಡ್‌ವರೆಗೆ ವಿಸ್ತರಿಸಲು ರಿಮ್ಸ್ ಆಡಳಿತ ಮಂಡಳಿ ಮುಂದಾಗಿದೆ.

    ವಿಶೇಷ ವಾರ್ಡ್‌ನಲ್ಲಿ ಅಗತ್ಯ ಫ್ಲೂಯಿಡ್ಸ್, ಡಿಫಿಬ್ರಲೇಟರ್ ಸೇರಿದಂತೆ ಅವಶ್ಯಕ ಪರಿಕರಗಳು, ಔಷಧಿ ವ್ಯವಸ್ಥೆ ಮಾಡಲಾಗಿದೆ. ಮಳೆ ಅಭಾವದಿಂದ ಈ ಬಾರಿ ರಣ ಬೇಸಿಗೆ ಇರುವುದರಿಂದ ಮೊದಲ ಬಾರಿಗೆ ಹೀಟ್ ಸ್ಟ್ರೋಕ್ ಮ್ಯಾನೇಜಮೆಂಟ್ ವಾರ್ಡ್‌ನ್ನ ತೆರೆಯಲಾಗಿದೆ. ಬೇಸಿಗೆಯ ಬೇಗೆಯಿಂದ ದೇಹದಲ್ಲಿ ಲವಣಾಂಶಗಳು ಏರುಪೇರಾದರೆ ಕಿಡ್ನಿ, ಹೃದಯ ಸಂಬಂಧಿ ತೊಂದರೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ವಿಶೇಷ ವಾರ್ಡ್ ತೆರೆಯಲಾಗಿದೆ.

    ಇನ್ನೂ ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ಈವರೆಗೆ ಯಾವುದೇ ರೋಗಿಗಳು ದಾಖಲಾಗದಿದ್ದರು, ಬಿಸಿಲಿನ ಅಬ್ಬರಕ್ಕೆ ಉರಿ ಮೂತ್ರ ತೊಂದರೆ, ಕಿಡ್ನಿ ಸಮಸ್ಯೆ, ಕಿಡ್ನಿಯಲ್ಲಿ ಕಲ್ಲು, ಡಿಹೈಡ್ರೇಷನ್, ಹೆಚ್ಚು ಸುಸ್ತಾಗುವುದು ಸೇರಿದಂತೆ ನಾನಾ ಸಮಸ್ಯೆಗಳಿಂದ ಹಲವಾರು ಜನ ಬಳಲುತ್ತಿದ್ದು. ಚಿಕ್ಕಮಕ್ಕಳಲ್ಲಿ ಹೆಚ್ಚಾಗಿ ನಿರ್ಜಲೀಕರಣ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಅನಾರೋಗ್ಯ ಪೀಡಿತರು ಎಡತಾಕುತ್ತಿದ್ದಾರೆ. ಆದ್ದರಿಂದ ಸಾಧ್ಯವಾದಷ್ಟು ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡುವಂತೆ, ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಬಿಸಿಲಿನಲ್ಲಿ ಹೆಚ್ಚು ಓಡಾಡುವುದು ಅಥವಾ ಕೆಲಸ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ.

  • ಉತ್ತರ ಪ್ರದೇಶದಲ್ಲಿ ರಣ ಬಿಸಿಲಿಗೆ ನಲುಗಿದ ಸರ್ಕಾರ – ಇಂದು ಹೈವೋಲ್ಟೇಜ್‌ ಸಭೆ

    ಉತ್ತರ ಪ್ರದೇಶದಲ್ಲಿ ರಣ ಬಿಸಿಲಿಗೆ ನಲುಗಿದ ಸರ್ಕಾರ – ಇಂದು ಹೈವೋಲ್ಟೇಜ್‌ ಸಭೆ

    ಲಕ್ನೋ: ರಣ ಬಿಸಿಲಿನ ತಾಪದಿಂದ (High Temperature) ಬಳಲುತ್ತಿರುವ ಉತ್ತರ ಪ್ರದೇಶದಲ್ಲಿ (Uttar Pradesh) ಮಂಗಳವಾರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ (Mansukh Mandaviya) ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರಾಜ್ಯವು ಶಾಖದ ಅಲೆಗೆ ನಲುಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

    ಹೌದು. ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಮಧ್ಯಪ್ರದೇಶ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಖದ ಅಲೆಗೆ ಸಾವು ನೋವುಗಳು ವರದಿಯಾಗಿವೆ.

    weather (1)

    UP ನಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ 54 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಹಠಾತ್ ಸಾವುಗಳು, ಜ್ವರ, ಉಸಿರಾಟದ ತೊಂದರೆ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಬಿಹಾರದಲ್ಲೂ 44 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಈಗಾಗಲೇ ಕೆಲವು ರಾಜ್ಯಗಳು ಬಿಸಿಲಿನ ತಾಪಮಾನದಿಂದ ಮಕ್ಕಳನ್ನು ರಕ್ಷಿಸಲು ಉದ್ದೇಶದಿಂದ ಬೇಸಿಗೆ ರಜೆ ವಿಸ್ತರಣೆ ಮಾಡಿವೆ.

    ಭಾರತೀಯ ಹವಾಮಾನ ಇಲಾಖೆ ಏಪ್ರಿಲ್‌ನಿಂದ ಜೂನ್‌ವರೆಗೆ ಭಾರತದಲ್ಲಿ ತಾಪಮಾನ ಹೆಚ್ಚಾಗಿರಲಿದೆ ಎಂದು ಹೇಳಿತ್ತು. ಅದಂತೆಯೇ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಣಬಿಸಿಲು ಜನರನ್ನ ಸುಡುತ್ತಿದೆ. ಈ ಪ್ರದೇಶಗಳಿಗೆ ಹಮಾವಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಸದ್ಯ ಉತ್ತರ ಪ್ರದೇಶದಲ್ಲಿ ಅತಿಯಾದ ಬಿಸಿಲಿನ ತಾಪದಿಂದ ಬೇರೆ ಯಾವುದಾರೂ ರೋಗಗಳು ಕಾಣಿಸಿಕೊಂಡಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳ ತಂಡ ನೇಮಿಸಿದೆ. ಏಕೆಂದರೆ ಅತಿಯಾದ ಬಿಸಿಲಿನ ತಾಪಮಾನ ಹಾಗೂ ಶೀತ ವಾತಾವರಣ ಮಧುಮೇಹ, ರಕ್ತದೊತ್ತಡ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವವರಿಗೆ ಇನ್ನಷ್ಟು ಅಪಾಯ ಉಂಟು ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.