Tag: ಬಿಸಿಸಿಐ ಅಧ್ಯಕ್ಷ

  • ಬಿಸಿಸಿಐ ಅಧ್ಯಕ್ಷರಾಗಿ ಮಿಥುನ್‌ ಮನ್ಹಾಸ್‌ ಅವಿರೋಧ ಆಯ್ಕೆ

    ಬಿಸಿಸಿಐ ಅಧ್ಯಕ್ಷರಾಗಿ ಮಿಥುನ್‌ ಮನ್ಹಾಸ್‌ ಅವಿರೋಧ ಆಯ್ಕೆ

    ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI)ಯ ಅಧ್ಯಕ್ಷರಾಗಿ ಮಿಥುನ್‌ ಮನ್ಹಾಸ್‌ (Mithun Manhas) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಭಾನುವಾರ ಮುಂಬೈನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಬಳಿಕ ಮಿಥುನ್ ಮನ್ಹಾಸ್ ಅವರನ್ನು ಅಧಿಕೃತವಾಗಿ ನೇಮಿಸಲಾಗಿದೆ. ಸೌರವ್ ಗಂಗೂಲಿ ಮತ್ತು ರೋಜರ್ ಬಿನ್ನಿ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೂರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಮತ್ತೆ ಪಾಕಿಗೆ ನೋ ಎಂದ ಸ್ಕೈ – ನಾನು ಏನು ಹೇಳಲ್ಲ ಎಂದ ಸಲ್ಮಾನ್ ಅಲಿ

    ರೋಜರ್ ಬಿನ್ನಿ ನಂತರ ಭಾರತೀಯ ಕ್ರಿಕೆಟ್ ಆಡಳಿತವನ್ನು ಮಾರ್ಗದರ್ಶನ ಮಾಡುವ ಜವಾಬ್ದಾರಿಯನ್ನು ಮನ್ಹಾಸ್ ವಹಿಸಿಕೊಂಡಿದ್ದಾರೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

    ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಅವರು ಕ್ರಿಕೆಟ್ ಆಡಳಿತ ಮತ್ತು ಕಾರ್ಯತಂತ್ರದ ಯೋಜನೆ ಎರಡರಲ್ಲೂ ಅಪಾರ ಅನುಭವ ಹೊಂದಿದ್ದಾರೆ. ದೇವಜಿತ್ ಸೈಕಿಯಾ ಅವರನ್ನು ಗೌರವಾನ್ವಿತ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಆದರೆ, ಪ್ರಭತೇಜ್ ಸಿಂಗ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ ಪಾತ್ರ ವಹಿಸಿದರು. ಎ.ರಘುರಾಮ್ ಭಟ್ ಅವರು ಖಜಾಂಚಿಯಾಗಿ ಹಣಕಾಸು ಉಸ್ತುವಾರಿ ವಹಿಸಲಿದ್ದಾರೆ. ಇದನ್ನೂ ಓದಿ: ಏಷ್ಯಾ ಕಪ್‌ಗಾಗಿ ಇಂದು ಭಾರತ-ಪಾಕ್‌ ಸಮರ – 41 ವರ್ಷಗಳ ಇತಿಹಾಸಲ್ಲೇ ಫೈನಲ್‌ನಲ್ಲಿ ಮೊದಲ ಮುಖಾಮುಖಿ

  • ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ

    ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ

    – ಮುಂದಿನ ಅಧ್ಯಕ್ಷರ ಆಯ್ಕೆವರೆಗೆ ರಾಜೀವ್ ಶುಕ್ಲಾ ಹಂಗಾಮಿ ಅಧ್ಯಕ್ಷ

    ನವದೆಹಲಿ: ಭಾರತದ ಮಾಜಿ ಆಲ್‌ರೌಂಡರ್ ರೋಜರ್ ಬಿನ್ನಿ (Roger Binny) ಅವರು ಬಿಸಿಸಿಐ  (BCCI) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಶುಕ್ಲಾ (Rajeev Shukla) ಮುಂದಿನ ಚುನಾವಣೆಯವರೆಗೂ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

    ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನಿಯಮಗಳ ಪ್ರಕಾರ, 70 ವಯಸ್ಸಿನ ನಂತರ ಯಾವುದೇ ಪದಾಧಿಕಾರಿಗಳು ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅನರ್ಹರಾಗುತ್ತಾರೆ. ಇತ್ತೀಚಿಗೆ ಜು.19ರಂದು ರೋಜರ್ ಬಿನ್ನಿ ಅವರು 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಹೀಗಾಗಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿ ಕೊಲೆ; ಮೃತದೇಹ ಸುಟ್ಟುಹಾಕಲು ಹೋಗಿದ್ದ ಆರೋಪಿಗಳು ಪೊಲೀಸರಿಗೆ ಲಾಕ್‌

    2017ರ ಸುಪ್ರೀಂ ಕೋರ್ಟ್‌ನ (Supreme Court) ಶಿಫಾರಸುಗಳ ಪ್ರಕಾರ, ಬಿಸಿಸಿಐನಂತಹ ಕೆಲವು ಭಾರತೀಯ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಒಟ್ಟು ಒಂಬತ್ತು ವರ್ಷಗಳು ಅಥವಾ ಸತತ ಆರು ವರ್ಷಗಳನ್ನು ಪೂರೈಸಿದ ನಂತರ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ. ಈ ನಿಯಮಗಳು ಹೊಸ ನಾಯಕತ್ವವನ್ನು ಉತ್ತೇಜಿಸುವ ಮತ್ತು ಅಧಿಕಾರದ ಕೇಂದ್ರೀಕರಣವನ್ನು ತಡೆಯುವ ಮೂಲ ಗುರಿಯನ್ನು ಹೊಂದಿದೆ.

    ಬುಧವಾರ (ಆ.29) ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಸಭೆಯು ಶುಕ್ಲಾ ಅವರ ನೇತೃತ್ವದಲ್ಲಿ ನಡೆದಿತ್ತು. ಸಭೆಯಲ್ಲಿ ಡ್ರೀಮ್ 11 ಒಪ್ಪಂದವನ್ನು ಮುಕ್ತಾಯಗೊಳಿಸುವುದರ ಜೊತೆಗೆ ಮುಂದಿನ ಎರಡೂವರೆ ವರ್ಷಗಳ ಕಾಲ ಹೊಸ ಪ್ರಾಯೋಜಕರ ಹುಡುಕಾಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನೂ ಸೆಪ್ಟೆಂಬರ್ 10ರಂದು ಏಷ್ಯಾ ಕಪ್ ಪ್ರಾರಂಭವಾಗುವುದರೊಳಗೆ ಹೊಸ ಪ್ರಾಯೋಜಕರನ್ನು ಕಂಡುಕೊಳ್ಳುವುದು ಬಿಸಿಸಿಐಗೆ ಹೊಸ ಸವಾಲಾಗಿ ಪರಿಣಮಿಸಿದೆ.

    ಏಷ್ಯಾ ಕಪ್‌ಗೆ ಇನ್ನು ಎರಡೇ ವಾರಗಳು ಬಾಕಿಯಿದ್ದು, ಈ ಸಮಯದಲ್ಲಿ ಹೊಸ ಟೆಂಡರ್ ಹುಡುಕಿ, ಅದರ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಏಷ್ಯಾ ಕಪ್‌ಗೆ ಅಲ್ಪಾವಧಿಯ ಪ್ರಾಯೋಜಕರ ಅವಶ್ಯಕತೆಯಿದೆ. ಆದರೆ ನಾವು ಮುಂದಿನ ಎರಡೂವರೆ ವರ್ಷಗಳ ಕಾಲ ಅಂದರೆ 2027ರ ಏಕದಿನ ವಿಶ್ವಕಪ್‌ವರೆಗೆ ಹೊಸ ಪ್ರಾಯೋಜಕರನ್ನು ಹುಡುಕುವಲ್ಲಿ ಗಮನಹರಿಸುತ್ತಿದ್ದೇವೆ ಎಂದಿರುವುದಾಗಿ ಮೂಲಗಳು ತಿಳಿಸಿವೆ.ಇದನ್ನೂ ಓದಿ: ಹುಬ್ಬಳ್ಳಿ | ಈದ್ಗಾ ಮೈದಾನ ಇನ್ಮುಂದೆ ರಾಣಿ ಚೆನ್ನಮ್ಮ ಮೈದಾನ – ಪಾಲಿಕೆಯಿಂದ ಅಧಿಕೃತ ಘೋಷಣೆ

  • ಗಂಗೂಲಿ ಬಿಜೆಪಿ ಸೇರಲು ನಿರಾಕರಿಸಿದ್ದರಿಂದ್ಲೇ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿದೆ – TMC

    ಗಂಗೂಲಿ ಬಿಜೆಪಿ ಸೇರಲು ನಿರಾಕರಿಸಿದ್ದರಿಂದ್ಲೇ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿದೆ – TMC

    ಕೋಲ್ಕತ್ತಾ: ಸೌರವ್ ಗಂಗೂಲಿ (SouravGanguly) ಅವರು ಬಿಜೆಪಿ (BJP) ಸೇರಲು ನಿರಾಕರಿಸಿದ್ದರಿಂದಲೇ 2ನೇ ಬಾರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಆಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (TMC) ಹೇಳಿದೆ.

    ಈ ಕುರಿತು ಮಾತನಾಡಿರುವ ಟಿಎಂಸಿ (TMC) ವಕ್ತಾರ ಕುನಾಲ್ ಘೋಷ್ (Kunal Ghosh), ಕಳೆದ ವಿಧಾನಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಳದಲ್ಲಿ (West Bengal) ಜನಪ್ರಿಯತೆ ಗಳಿಸಿರುವ ಸೌರವ್ ಗಂಗೂಲಿ ಅವರು ಪಕ್ಷಕ್ಕೆ ಸೇರುತ್ತಾರೆ ಎಂದು ಬಿಜೆಪಿ ಬಿಂಬಿಸಿತ್ತು. ಆದರೆ ಗಂಗೂಲಿ ಅವರು ಪಕ್ಷಕ್ಕೆ ಸೇರಲು ನಿರಾಕರಿಸಿದ್ದರಿಂದ ಬಿಜೆಪಿ ಅವರನ್ನು ಅವಮಾನಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಬಿಸಿಸಿಐ ಅಧ್ಯಕ್ಷರನ್ನಾಗಿ (BCCI President) ರೋಜರ್ ಬಿನ್ನಿ (Roger Binny) ಅವರನ್ನ ಬದಲಿಸಲು ಮುಂದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕನ್ನಡಿಗ ರೋಜರ್ ಬಿನ್ನಿಗೆ BCCI ಅಧ್ಯಕ್ಷ ಪಟ್ಟ?

    1983ರ ವಿಶ್ವಕಪ್ (WorldCup) ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಮಂಗಳವಾರ ಬಿಸಿಸಿಐ  ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಪುತ್ರ ಜಯ್ ಶಾ ಸಹ ನಾಮಪತ್ರ ಸಲ್ಲಿಸಿದ್ದಾರೆ. ಜಯ್ ಶಾ (Jay Shah) 2ನೇ ಬಾರಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದು. ಆದರೆ ಗಂಗೂಲಿ ಅವರನ್ನು ಹಾಗೆ ಮಾಡುತ್ತಿಲ್ಲ. ಇದು ಸೇಡಿನ ರಾಜಕಾರಣದ ಉದಾಹರಣೆಯಾಗಿದೆ ಎಂದು ಟೀಕಿಸಿದ್ದಾರೆ.

    ಇಂತಹ ವಿಷಯಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಬಿಜೆಪಿಯು ಇಂತಹ ಪ್ರಚಾರವನ್ನು ಮಾಡಿದ್ದರಿಂದ, ಊಹಾಪೋಹಗಳಿಗೆ ಪ್ರತಿಕ್ರಿಯಿಸುವುದು ನಮ್ಮ ಜವಾಬ್ದಾರಿ. ಗಂಗೂಲಿ ಅವರು 2ನೇ ಬಾರಿಗೆ ಬಿಸಿಸಿಐಗೆ ಆಯ್ಕೆಯಾಗದಿರುವ ಹಿಂದೆ ರಾಜಕೀಯವಿದೆ. ಸೌರವ್ ಅವರನ್ನು ಅವಮಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶ್ರೇಯಸ್‌ ಅಯ್ಯರ್‌, ಇಶಾನ್‌ ಕಿಶನ್‌ ಭರ್ಜರಿ ಬ್ಯಾಟಿಂಗ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ

    ಈ ಆರೋಪ ತಳ್ಳಿಹಾಕಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್, ಟಿಎಂಸಿ ಆರೋಪ ಆಧಾರ ರಹಿತವಾಗಿದೆ. ಬಿಜೆಪಿ ಎಂದಿಗೂ ಗಂಗೂಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಯಸಿಲ್ಲ. ಗಂಗೂಲಿ ಒಂದು ದಂತಕತೆ. ಆದರೆ ಬಿಸಿಸಿಐ ಅಧ್ಯಕ್ಷರಾದ ಮೇಲೆ ಅವರ ಪಾತ್ರ ಏನಾದರೂ ಇದೆಯೇ? ಟಿಎಂಸಿ ಪ್ರತಿಯೊಂದು ವಿಷಯವನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೌರವ್ ಗಂಗೂಲಿಗೆ ಕೊರೊನಾ ಪಾಸಿಟಿವ್

    ಸೌರವ್ ಗಂಗೂಲಿಗೆ ಕೊರೊನಾ ಪಾಸಿಟಿವ್

    ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ನಿನ್ನೆ ಸಂಜೆ ಕೊರೊನಾ ಸೋಂಕು ದೃಢಪಟ್ಟಿದ್ದು, ವುಡ್‌ಲ್ಯಾಂಡ್ಸ್ ನರ್ಸಿಂಗ್ ಹೋಮ್‌ಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

    ವೃತ್ತಿಪರ ಕೆಲಸದ ನಿಮಿತ್ತ ಗಂಗೂಲಿ ಹಲವೆಡೆ ಪ್ರವಾಸ ಕೈಗೊಂಡಿದ್ದರು. ಮುಂಜಾಗ್ರತೆ ಕ್ರಮವಾಗಿ ಆಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಇದನ್ನೂ ಓದಿ: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ದಿಗ್ಗಜ ಆಟಗಾರರ ಪಟ್ಟಿಗೆ ರಾಹುಲ್ ಸೇರ್ಪಡೆ

    ಗಂಗೂಲಿ ಅವರು ಅನಾರೋಗ್ಯದಿಂದಾಗಿ ಈ ವರ್ಷದಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿಯಲ್ಲಿ ಗಂಗೂಲಿ ಅವರು ಎದೆನೋವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಒಮ್ಮೆ ಹೃದಯಾಘಾತ ಕೂಡ ಆಗಿ ಚಿಕಿತ್ಸೆ ಪಡೆದುಕೊಂಡಿದ್ದರು.

    ನಿನ್ನೆ ರಾತ್ರಿ ಅವರನ್ನು ವುಡ್‌ಲ್ಯಾಂಡ್ಸ್ ನರ್ಸಿಂಗ್ ಹೋಮ್‌ಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಔಷಧೋಪಚಾರ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ