Tag: ಬಿಹಾರ್

  • ಕೋಚಿಂಗ್‌ ನಡುವೆ ಪ್ರೇಮಾಂಕುರ – 50 ವಯಸ್ಸಿನ ಶಿಕ್ಷಕನನ್ನು ವರಿಸಿದ 20ರ ವಿದ್ಯಾರ್ಥಿನಿ

    ಕೋಚಿಂಗ್‌ ನಡುವೆ ಪ್ರೇಮಾಂಕುರ – 50 ವಯಸ್ಸಿನ ಶಿಕ್ಷಕನನ್ನು ವರಿಸಿದ 20ರ ವಿದ್ಯಾರ್ಥಿನಿ

    ಪಾಟ್ನಾ: ಬಿಹಾರ್‌ನ (Bihar) ಸಮಸ್ತಿಪುರದಲ್ಲಿ (Samastipur) 50 ವರ್ಷ ವಯಸ್ಸಿನ ಇಂಗ್ಲಿಷ್‌ ಶಿಕ್ಷಕರೊಬ್ಬರು 20 ವಯಸ್ಸಿನ ತನ್ನ ವಿದ್ಯಾರ್ಥಿನಿಯೊಂದಿಗೆ ಸಪ್ತಪದಿ ತುಳಿದಿದ್ದಾರೆ.

    ಶ್ವೇತಾ ಕುಮಾರಿ ವಿದ್ಯಾರ್ಥಿನಿ (Student), ಶಿಕ್ಷಕ (Teacher) ಸಂಗೀತ್‌ ಕುಮಾರ್‌ ಅವರನ್ನು ವರಿಸಿದ್ದಾರೆ. 20 ವರ್ಷದ ವಿದ್ಯಾರ್ಥಿನಿಯು ಇಂಗ್ಲಿಷ್‌ ಕಲಿಯಲು ಮನೆಯಿಂದ ಕೋಚಿಂಗ್ ಸೆಂಟರ್‌ಗೆ ಹೋಗುತ್ತಿದ್ದಳು. ಅಲ್ಲಿ 50 ವರ್ಷದ ಇಂಗ್ಲಿಷ್ ಶಿಕ್ಷಕನೊಂದಿಗೆ ವಿದ್ಯಾರ್ಥಿನಿಗೆ ಪ್ರೇಮಾಂಕುರವಾಗಿದೆ. ಕೊನೆಗೆ ಇಬ್ಬರೂ ದೇವಸ್ಥಾನದಲ್ಲಿ ಮದುವೆಯಾದರು. ಇದನ್ನೂ ಓದಿ: ಪುಲ್ವಾಮಾದಲ್ಲಿ ಜೆಇಎಂ ಭಯೋತ್ಪಾದಕನ ಅಕ್ರಮ ಮನೆ ನೆಲಸಮ

    ಸಮಸ್ತಿಪುರದ ದೇವಸ್ಥಾನದಲ್ಲಿ ಇಬ್ಬರೂ ವಿವಾಹವಾಗಿದ್ದಾರೆ. ಇವರಿಬ್ಬರ ಮದುವೆಗೆ ಪರಿಚಯಸ್ಥರು ಸಾಕ್ಷಿಯಾಗಿದ್ದಾರೆ. ಇಬ್ಬರ ಮದುವೆಯ ವೀಡಿಯೋ ಕೂಡ ಮಾಡಲಾಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದೆ.

    50 ವರ್ಷದ ಇಂಗ್ಲಿಷ್ ಶಿಕ್ಷಕ ಸಂಗೀತ್ ಅವರ ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾದರು. ಅವರು ಎರಡನೇ ಮದುವೆ ಕೂಡ ಮಾಡಿಕೊಂಡಿರಲಿಲ್ಲ. ಶ್ವೇತಾ ಮತ್ತು ಅವರ ಮನೆ ಕೇವಲ 800 ಮೀಟರ್ ದೂರದಲ್ಲಿದೆ. ಇಂಗ್ಲಿಷ್ ಕೋಚಿಂಗ್ ಸಮಯದಲ್ಲಿ ಇಬ್ಬರೂ ಪ್ರೀತಿಸುತ್ತಿದ್ದರು. ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ ಮಾಡಿದ ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • MeeToo : ಆ ಅಸಹ್ಯ ನಿರ್ದೇಶಕನ ಕರಾಳ ಮುಖ ಬಿಚ್ಚಿಟ್ಟ ನಟಿ ರತನ್ ರಾಜಪೂತ್

    MeeToo : ಆ ಅಸಹ್ಯ ನಿರ್ದೇಶಕನ ಕರಾಳ ಮುಖ ಬಿಚ್ಚಿಟ್ಟ ನಟಿ ರತನ್ ರಾಜಪೂತ್

    ಹಿಂದಿ ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಆಗಿರುವ ರತನ್ ರಾಜಪೂತ್ (Ratan Rajput) ತಮಗಾದ ಕಾಸ್ಟಿಂಗ್ ಕಾಚ್ (Casting Couch) ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಒಂದು ವೇಳೆ ನಾನು ಅವನು ಹೇಳಿದಂತೆ ಕೇಳಿದ್ದರೆ, ಸ್ಟಾರ್ ನಟಿಯಾಗಿರುತ್ತಿದ್ದೆ. ಆದರೆ, ಅದು ನನಗಿಷ್ಟವಾಗದ ದಾರಿ. ಹಾಗಾಗಿ ಅವನ ಮುಖಕ್ಕೆ ಉಗಿದು ಬಂದೆ ಎಂದು ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಹದಿನಾಲ್ಕು ವರ್ಷಗಳ ಹಿಂದೆ ನಡೆದ ಘಟನೆಯನ್ನು ಅವರು ಹಂಚಿಕೊಂಡಿದ್ದಾರೆ.

    ಆ ನಿರ್ದೇಶಕನಿಗೆ ಅರವತ್ತರ ವಯಸ್ಸು. ನನ್ನನ್ನು ನಾಯಕಿಯನ್ನಾಗಿ ಮಾಡುತ್ತೇನೆ ಅಂದ. ನನಗೆ ಗಾಡ್ ಫಾದರ್ ಆಗುತ್ತೇನೆ ಅಂತಾನೂ ಹೇಳಿದ. ನನ್ನ ಚರ್ಮ, ಮುಖ ಸರಿ ಇಲ್ಲ. ತಲೆಗೂದಲು ಚೆನ್ನಾಗಿಲ್ಲ ಹೀಗೆ ಅನೇಕ ಸಂಗತಿಗಳನ್ನು ಪಟ್ಟಿಮಾಡಿ, ಇದೆಲ್ಲವನ್ನೂ ಸರಿ ಮಾಡಿ ನಿನ್ನನ್ನು ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳಬೇಕು ಅಂದರೆ ಒಂದಷ್ಟು ಲಕ್ಷ ರೂಪಾಯಿ ಖರ್ಚಾಗುತ್ತದೆ. ನಿನಗಾಗಿ ನಾನು ಆ ಖರ್ಚು ಮಾಡಬೇಕು ಅಂದರೆ, ನೀನು ನನ್ನವಳಾಗಬೇಕು ಎಂದಿದ್ದರಂತೆ ನಿರ್ದೇಶಕರು. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ಆ ವ್ಯಕ್ತಿಯು ನನ್ನೊಂದಿಗೆ ಫ್ರೆಂಡ್ ರೀತಿ ಇರಬೇಕು, ನಾನು ಕೇಳಿದ್ದನ್ನು ಕೊಡಬೇಕು ಅಂದಾಗ ನನಗೆ ಅರಿವಾಯಿತು. ನೀವು ನನ್ನ ತಂದೆ ಸಮಾನರು, ಗುರು ಕೂಡ. ದೊಡ್ಡವರಾಗಿ ಹೀಗೆ ಮಾತನಾಡಬಾರದು. ನಿಮ್ಮನ್ನು ನಾನು ಗೌರವದಿಂದ ಕಾಣುತ್ತಿದ್ದೇನೆ ಅಂದೆ. ನನ್ನ ಮಗಳು ನಟಿಯಾಗಿದ್ದರೂ, ನಾನು ಅವಳ ಜೊತೆ ಮಲಗುತ್ತಿದ್ದೆ ಎಂದು ಅಸಹ್ಯವಾಗಿ ಹೇಳಿದ. ಅಂತಹ ಅಸಹ್ಯ ವ್ಯಕ್ತಿಯಿಂದ ದೂರ ಬಂದು ಬಿಟ್ಟೆ. ಹೀಗೆ ಬಾಲಿವುಡ್ ನಲ್ಲಿ ಅನೇಕರಿಗೆ ಇಂತಹ ಅನುಭವ ಆಗಿರುತ್ತದೆ ಎಂದಿದ್ದಾರೆ ರತನ್.

    ರತನ್ ಬಿಹಾರ(Bihar) ಮೂಲದವರು. ಹಿಂದಿ ಕಿರುತೆರೆಯಲ್ಲಿ ಫೇಮಸ್ ಹೆಸರು. ಸಾಕಷ್ಟು ಹಿಂದಿ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ಬಿಗ್ ಬಾಸ್ ಸೀಸನ್ 9 ಹಿಂದಿಯಲ್ಲಿ ಭಾಗಿಯಾಗಿದ್ದರು. ಅಲ್ಲದೇ, ತಮ್ಮದೇ ಆದ ಯೂಟ್ಯೂಬ್ ಚಾನೆಲ್ ವೊಂದನ್ನು ಅವರು ನಡೆಸುತ್ತಿದ್ದು, ಮುಂಬೈಗೆ ಬಂದಾಗಿನ ಕೆಲ ಸಂಗತಿಗಳನ್ನು ಅವರು ಹಂಚಿಕೊಳ್ಳುತ್ತಲೇ ಇರುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ

    ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ

    ಚಿಕ್ಕಮಗಳೂರು: ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್‍ನಲ್ಲಿ ಪತ್ತೆಯಾಗಿದೆ.

    ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ಸೇನಾ ತಂಡ ಕೂಡಿಕೊಳ್ಳಬೇಕಾದ ಕಾರಣ ಜೂನ್ 9ರಂದು ಮನೆಯಿಂದ ವಾಪಸ್ ಹೋಗಿದ್ದರು. ಇಂದು ಸೇನಾ ತಂಡ ಕೂಡಿಕೊಳ್ಳಬೇಕಿತ್ತು. ಆದರೆ ಸೇನೆಗೆ ಹೋಗುವ ಮುನ್ನವೇ ಬಿಹಾರದ ಕಿಶನ್‍ಗಂಜ್‍ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: 2 ವಾರದಿಂದ ಸಿಕ್ಕಿಲ್ಲ ಸೈನಿಕರು – ಮುಂದುವರಿದ ಶೋಧಕಾರ್ಯ

    ನಿನ್ನೆ ಬೆಳಗ್ಗೆ ಅವರ ಪತ್ನಿ ಗಣೇಶ್ ಜೊತೆ ಮಾತನಾಡಿದ್ದರು. ಆಗ ಅವರು ಮುಖ ತೊಳೆಯುತ್ತಿದ್ದೇನೆ ಎಂದು ಹೇಳಿದ್ದರು. ಆದರೆ ಮಧ್ಯಾಹ್ನದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮತ್ತೆ ಕರೆ ಮಾಡಿಲ್ಲ. ಆದರೆ ನಿನ್ನೆ ರಾತ್ರಿ ಸೇನೆ ಅಧಿಕಾರಿಗಳು ಕರೆ ಮಾಡಿ ಗಣೇಶ್ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಹಾರದ ಕಿಶನ್ ಗಂಜ್‍ನಲ್ಲಿ ಅವರ ಮೃತದೇಹ ಕಂಡ ಅಂಬುಲೆನ್ಸ್ ಚಾಲಕ ಜೇಬಿನಲ್ಲಿದ್ದ ಐಡಿ ಕಾರ್ಡ್ ಹಾಗೂ ಆರ್ಮಿಯ ಪಾಸ್‍ ನೋಡಿ ಈತ ಯೋಧ ಎಂದು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸೇನೆಗೆ ವಾಪಸ್ ಹೋಗೇ ಇಲ್ಲ. ಅವರು ಹೇಗೆ ಸಾವನ್ನಪ್ಪಿದರು ಎಂಬುದು ಕುಟುಂಬಸ್ಥರು ಹಾಗೂ ಸ್ಥಳಿಯರಲ್ಲಿ ಯಕ್ಷಪ್ರಶ್ನೆಯಾಗಿದೆ. ತಾಲೂಕಿನ ಮಸಿಗದ್ದೆ ಗ್ರಾಮದ ನಾಗಯ್ಯ-ಗಂಗಮ್ಮ ದಂಪತಿಯ ಪುತ್ರನಾದ ಗಣೇಶ್ ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧ ಗಣೇಶ್ ಪ್ರಸ್ತುತ ಜಮ್ಮುವಿನಲ್ಲಿ ಸಿಗ್ನಲ್ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗಣೇಶ್‌ಗೆ ಐದು ವರ್ಷದ ಹೆಣ್ಣು ಮಗಳಿದ್ದಾಳೆ. ಇದನ್ನೂ ಓದಿ: ಪೊಲೀಸರನ್ನ ಹತ್ಯೆ ಮಾಡಿದ್ದ ಭಯೋತ್ಪಾದಕ ಎನ್‍ಕೌಂಟರ್

    ಕಳೆದ ಮೂರು ವರ್ಷಗಳ ಹಿಂದೆ ನಾಗಯ್ಯ-ಗಂಗಮ್ಮ ದಂಪತಿಯ ಇನ್ನೊಬ್ಬ ಮಗ ಹಾಗೂ ಯೋಧ ಗಣೇಶ್ ಸಹೋದರ ಕೂಡ ತೀರಿಕೊಂಡಿದ್ದರು. ಇದೀಗ ಯೋಧ ಗಣೇಶ್ ಕೂಡ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬಕ್ಕೆ ಆಧಾರವೇ ಇಲ್ಲದಂತಾಗಿದೆ. ಯೋಧನ ಸಾವಿನಿಂದ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತ ಯೋಧ ಗಣೇಶ್ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

  • ಮುದ್ದುಗಿಳಿ ಕಾಣೆಯಾಗಿದೆ ಹುಡುಕಿಕೊಡಿ – ನಗದು ಬಹುಮಾನ ಘೋಷಿಸಿದ ಕುಟುಂಬ

    ಮುದ್ದುಗಿಳಿ ಕಾಣೆಯಾಗಿದೆ ಹುಡುಕಿಕೊಡಿ – ನಗದು ಬಹುಮಾನ ಘೋಷಿಸಿದ ಕುಟುಂಬ

    ಪಾಟ್ನಾ: ಬಿಹಾರದ ಗಯಾ ಜಿಲ್ಲೆಯ ಕುಟುಂಬವೊಂದು ಕಳೆದ 12 ವರ್ಷಗಳಿಂದಲೂ ಮುದ್ದಾಗಿ ಸಾಕಿದ್ದ `ಪೊಪೊ’ ಗಿಳಿಯೊಂದು ಕಾಣೆಯಾಗಿದ್ದು, ಹುಡುಕಿಕೊಟ್ಟವರಿಗೆ ಆಕರ್ಷಕ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.

    ಇಲ್ಲಿನ ಪಿಪಾರಪತಿ ರಸ್ತೆಯ ನಿವಾಸಿಗಳಾದ ಶ್ಯಾಮ್ ದೇವ್ ಪ್ರಸಾದ್‌ಗುಪ್ತಾ ಹಾಗೂ ಅವರ ಪತ್ನಿ ಸಂಗೀತಾ ಗುಪ್ತಾ ತಮ್ಮ ಗಿಳಿಯನ್ನು ಹುಡುಕಿಕೊಟ್ಟವರಿಗೆ 5,100 ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ನಗರದ ಪ್ರಮುಖ ರಸ್ತೆಯ ಗೋಡೆಗಳ ಮೇಲೆ ಹಾಗೂ ಮಾರುಕಟ್ಟೆಗಳಲ್ಲಿ ಪಕ್ಷಿಯ ಫೋಟೋ ಇರುವ ಪೋಸ್ಟರ್‌ಗಳನ್ನು ಹಾಕಲಾಗಿದೆ. ಇದನ್ನೂ ಓದಿ: ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬ್ರಿಟಿಷ್ ಮಹಿಳೆಗೆ ಮುಂಬೈ ಕ್ಲಬ್‌ನಲ್ಲಿ ಕಿರುಕುಳ

    Pet parrot

    ಪೊಪೊ ಗಿಳಿ ಒಂದು ತಿಂಗಳ ಹಿಂದೆ ಮನೆಯಿಂದ ಹಾರಿಹೋಗಿದೆ. ಅದನ್ನು ಮರಳಿ ಪಡೆಯಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ವಿಶೇಷ ಧ್ವನಿಯಲ್ಲಿ ಕೂಗುವುದು, ಹತ್ತಿರದ ಮರಗಳಲ್ಲಿ ಹುಡುಕುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ.

    ಕೊನೆಯ ಪ್ರಯತ್ನವಾಗಿ ಪೋಸ್ಟರ್ ಮೂಲಕ ಕರೆ ಕೊಟ್ಟಿದ್ದಾರೆ. ಜೊತೆಗೆ ಫೇಸ್‌ಬುಕ್ ಹಾಗೂ ವಾಟ್ಸಾಪ್ ಮೂಲಕ ಸಂದೇಶ ರವಾನೆ ಮಾಡುವ ಮೂಲಕ ಹುಡುಕಾಟದ ಅಭಿಯಾನ ಶುರು ಮಾಡಿದ್ದಾರೆ. ಇದನ್ನೂ ಓದಿ: ಭಾವಿಪತಿಯನ್ನೇ ಅರೆಸ್ಟ್ ಮಾಡಿದ ಇನ್ಸ್‌ಪೆಕ್ಟರ್

    PARROT

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಗೀತಾ ಗುಪ್ತ ಅವರು, ಸುಮಾರು 12 ವರ್ಷಗಳಿಂದ ಗಿಳಿಯನ್ನು ಸಾಕುಪ್ರಾಣಿಯನ್ನು ಹೊಂದಿದ್ದೆವು. ಏಪ್ರಿಲ್ 5ರಂದು ಪಕ್ಷಿ ಮನೆಯಿಂದ ನಾಪತ್ತೆಯಾಗಿತ್ತು. ನಮ್ಮ ಪಕ್ಷಿಯನ್ನು ಯಾರೇ ತೆಗೆದುಕೊಂಡಿದ್ದರೂ ದಯವಿಟ್ಟು ಅದನ್ನು ನಮಗೆ ಹಿಂತಿರುಗಿಸಿ ಎಂದು ಮನವಿ ಮಾಡಿದ್ದೇವೆ. ಏಕೆಂದರೆ ಅದು ಪಕ್ಷಿ ಮಾತ್ರವಲ್ಲ ನಮ್ಮ ಕುಟುಂಬದ ಸದಸ್ಯ. ಅದಕ್ಕೆ ಪ್ರೀತಿಯಿಂದ ಪೊಪೊ ಎಂದು ಹೆಸರಿಡಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

  • ರಾಮ ದೇವರಲ್ಲ, ನನಗೆ ನಂಬಿಕೆಯೂ ಇಲ್ಲ: ಬಿಹಾರ್‌ ಮಾಜಿ ಸಿಎಂ

    ರಾಮ ದೇವರಲ್ಲ, ನನಗೆ ನಂಬಿಕೆಯೂ ಇಲ್ಲ: ಬಿಹಾರ್‌ ಮಾಜಿ ಸಿಎಂ

    ಪಟ್ನಾ: ರಾಮ ದೇವರಲ್ಲ, ರಾಮನ ಮೇಲೆ ನನಗೆ ನಂಬಿಕೆಯೂ ಇಲ್ಲ ಎಂದು ಬಿಹಾರ್‌ ಮಾಜಿ ಮುಖ್ಯಮಂತ್ರಿ ಜಿತನ್‌ ರಾಮ್‌ ಮಾನ್ಜಿ ಹೇಳಿದ್ದಾರೆ.

    ಹಿಂದೂಸ್ತಾನ್ ಅವಾಮ್ ಮೋರ್ಚಾ (ಹೆಚ್‌ಎಎಂ) ಮುಖ್ಯಸ್ಥ ಮಾನ್ಜಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಇದನ್ನೂ ಓದಿ: ಜೆ‌ಎನ್‌ಯು ಕ್ಯಾಂಪಸ್ ಬಳಿ ಕೇಸರಿ ಧ್ವಜ ಹಾರಿಸಿದ ಹಿಂದೂ ಸೇನೆ

    RAMANAVAMI

    ತುಳಸೀದಾಸ್‌ ಮತ್ತು ವಾಲ್ಮೀಕಿ ಅವರು ತಮ್ಮ ಸಂದೇಶಗಳನ್ನು ಹೇಳಲು ರಾಮ ಎನ್ನುವ ಪಾತ್ರವನ್ನು ಸೃಷ್ಟಿಸಿದ್ದಾರೆ. ಅವರು ಬರೆದಿರುವ ರಾಮಾಯಣ ಮಹಾಕಾವ್ಯದಲ್ಲಿ ಉತ್ತಮ ಅಂಶಗಳು ಇವೆ. ಅದರ ಮೇಲೆ ನನಗೆ ನಂಬಿಕೆ ಇದೆ. ನನಗೆ ತುಳಸೀದಾಸ್‌ ಮತ್ತು ವಾಲ್ಮೀಕಿ ಮೇಲೆ ನಂಬಿಕೆ ಇದೆಯೇ ಹೊರತು ರಾಮನಲ್ಲಲ್ಲ ಎಂದು ಮಾನ್ಜಿ ತಿಳಿಸಿದ್ದಾರೆ.

    ಈ ವಿಶ್ವದಲ್ಲಿರುವುದು ಎರಡೇ ಜಾತಿ. ಶ್ರೀಮಂತ ಮತ್ತು ಬಡವ ಜಾತಿ. ಆದರೆ ನಮ್ಮಲ್ಲಿ ದಲಿತರ ವಿಚಾರವಾಗಿ ಬ್ರಾಹ್ಮಣರು ತಾರತಮ್ಯ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೈಯಲ್ಲಿ ‘ಡೆಲ್ಲಿ ಫೈಲ್ಸ್’

    ಶಬರಿ ಕೊಟ್ಟ ರುಚಿಯ ಹಣ್ಣನ್ನು ರಾಮ ತಿಂದನು ಎಂಬುದು ನಾವು ನಿತ್ಯ ಕೇಳುವ ಕಥೆ. ನಾವು ಕಚ್ಚಿದ ಹಣ್ಣನ್ನು ನೀವು ತಿನ್ನುವುದಿಲ್ಲ. ಆದರೆ ನಾವು ಮುಟ್ಟಿದ್ದನ್ನು ತಿನ್ನುತ್ತೀರಿ ಎಂದು ಚಾಟಿ ಬೀಸಿದ್ದಾರೆ.

    ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿ ಬಿಹಾರ್‌ನಲ್ಲಿ ಬಿಜೆಪಿ, ಜೆಡಿ(ಯು), ಹೆಚ್‌ಎಎಂ, ವಿಐಪಿ ಪಕ್ಷಗಳು ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಮಾನ್ಜಿ ಅವರ ಪುತ್ರ ಸಂತೋಷ್‌ ಮಾನ್ಜಿ ಅವರು ನಿತೀಶ್‌ ಕುಮಾರ್‌ ನೇತೃತ್ವದ ಬಿಹಾರ್‌ ಸಂಪುಟದ ಸಚಿವರಾಗಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಮನೆ, ಬದುಕು ಕಸಿಯಲು ಬಿಜೆಪಿ ನಾಯಕರಲ್ಲೇ ಪೈಪೋಟಿ: ಮುಫ್ತಿ

  • ಸ್ವಗ್ರಾಮದಲ್ಲಿ ಬಿಹಾರ್ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆ

    ಸ್ವಗ್ರಾಮದಲ್ಲಿ ಬಿಹಾರ್ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆ

    ಪಟ್ನಾ: ಸ್ವಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ನಡೆದಿದೆ.

    ನಿತೀಶ್ ಕುಮಾರ್, ಸ್ವಗ್ರಾಮ ಭಕ್ತಿಯಾರ್‌ಪುರದಲ್ಲಿ ಸ್ಥಳೀಯ ಆಸ್ಪತ್ರೆಯ ಸಂಕೀರ್ಣದಲ್ಲಿದ್ದ ಬಿಹಾರ್ ಮೂಲದ ಸ್ವಾತಂತ್ರ್ಯ ಹೋರಾಟಗಾರ ಶಿಲಭದ್ರ ಯಾಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾದಾಗ ವ್ಯಕ್ತಿಯೋರ್ವ ಮುಖ್ಯಮಂತ್ರಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ನಿತೀಶ್ ಕುಮಾರ್ ಮಾಲಾರ್ಪಣೆ ಮಾಡಲು ಮುಂದಾಗುತ್ತಿದ್ದಂತೆ ಸಿಎಂಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಬಂದು ಹೊಡೆದಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಭದ್ರತಾ ಲೋಪ ಕಂಡುಬಂದಿದೆ.

    ಸಿಸಿಟಿವಿ ದೃಶ್ಯಗಳನ್ನು ಗಮನಿಸಿದಾಗ ಹಿಂದಿನಿಂದ ಬಂದ ವ್ಯಕ್ತಿ, ನಿತೀಶ್ ಕುಮಾರ್ ಅವರ ಬೆನ್ನಿಗೆ ಹೊಡೆಯುವ ಮೊದಲು ವೇದಿಕೆಯ ಮೇಲೆ ನಡೆದುಕೊಂಡು ಹೋಗಿರುವುದು ಕಂಡುಬಂದಿದೆ. ಸಿಎಂಗೆ ಹೊಡೆಯುತ್ತಿದ್ದಂತೆ ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಮೂಲಗಳ ಪ್ರಕಾರ ಹಲ್ಲೆ ಮಾಡಿದಾತನನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: 2 ಬಾರಿ ಮದುವೆ ದಿನವೇ ವರ ನಾಪತ್ತೆ- ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ವಧು ಕುಟುಂಬಸ್ಥರು

    ಕೆಲ ದಿನಗಳಿಂದ ನಿತೀಶ್ ಕುಮಾರ್ ಚುನಾವಣೆಗೆ ಸ್ಪರ್ಧಿಸಿದ ಬರ್ಹ್ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದಾರೆ. ಬರ್ಹ್ ಕ್ಷೇತ್ರದಿಂದ 5 ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ನಿತೀಶ್ ಕುಮಾರ್ ಈ ಹಿಂದೆ 2020ರಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಮಧುಬನಿಯಲ್ಲಿ ಹಲ್ಲೆ ನಡೆದಿತ್ತು.

  • 2 ಬಾರಿ ಮದುವೆ ದಿನವೇ ವರ ನಾಪತ್ತೆ- ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ವಧು ಕುಟುಂಬಸ್ಥರು

    2 ಬಾರಿ ಮದುವೆ ದಿನವೇ ವರ ನಾಪತ್ತೆ- ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ವಧು ಕುಟುಂಬಸ್ಥರು

    ಪಾಟ್ನಾ: ಮದುವೆಯ ದಿನದಂದೇ ವರ ನಾಪತ್ತೆಯಾಗಿದ್ದು, ಎಷ್ಟೇ ಕಾದರೂ ವರ ಬಾರದಿದ್ದಕ್ಕೆ ವಧುವಿನ ಕಟುಂಬಸ್ಥರು ಪೊಲೀಸ್ ಠಾಣೆ ಮಟ್ಟಿಲು ಹತ್ತಿದ ಘಟನೆ ಬಿಹಾರದ ಧನ್‍ಬಾದ್ ಪ್ರದೇಶದಲ್ಲಿ ನಡೆದಿದೆ.

    ಧನ್ಬಾದ್‍ನ ಭುಲಿ ನಿವಾಸಿ ರತ್ನೇಶ್ ಕುಮಾರ್ ವರ. ಇವರು ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮದುವೆ ಸಮಯದಲ್ಲಿ ರತ್ನೇಶ್ ನಾಪತ್ತೆಯಾಗಿದ್ದು, ಎಷ್ಟು ಕಾದರೂ ಬಾರದೇ ಇದ್ದಾಗ ವಧುವಿನ ಕಡೆಯವರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಈ ಬಗ್ಗೆ ವಧುವಿನ ಸಂಬಂಧಿಕರು, ವರ ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ನಂತರದಲ್ಲಿ ವರ ವಾಪಸ್ ಬಂದಿದ್ದಾನೆ. ತಡರಾತ್ರಿ ಮದುವೆ ಮಾಡಲಾಯಿತು.

    ಕಳೆದ ವರ್ಷವೂ ಇದೇ ರೀತಿ ಆಗಿತ್ತು, ಮದುವೆಯ ದಿನಾಂಕ ನಿಗದಿಯಾಗಿತ್ತು. ಆದರೆ ವರ ರತ್ನೇಶ್ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ವಧುವಿನ ಕಡೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರ ನಡುವೆ ಒಪ್ಪಂದವಾಗಿತ್ತು ಎಂದು ವಧು ಕಡೆಯವರು ತಿಳಿಸಿದ್ದಾರೆ.  ಇದನ್ನೂ ಓದಿ: ಮೂರು ವರ್ಷದ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

    ಆಗ ರತ್ನೇಶ್ ಕಡೆಯವರು ಪೊಲೀಸ್ ಸಮ್ಮುಖದಲ್ಲಿಯೇ ಮಾರ್ಚ್ 25ರಂದು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಇದರಿಂದಾಗಿ ವಧು ಕಡೆಯವರು ಮದುವೆಗೆ  ಸಂಪೂರ್ಣ ತಯಾರಿ ಮಾಡಿಕೊಂಡಿದ್ದರು. ಆದರೆ ವರ ಬಾರದಿದ್ದಾಗ ವಧುವಿನ ಕುಟುಂಬಸ್ಥರು ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.  ಇದನ್ನೂ ಓದಿ: ಒಬ್ಬರಿಗೊಬ್ಬರು ಬಡಿದಾಡಿಕೊಂಡ ಶಾಲಾ ಹುಡುಗರು – ವಿದ್ಯಾರ್ಥಿ ಬಲಿ

  • ಗೋರಕ್ಷಕರಿಂದ ಕಿರುಕುಳ, ಮಾರಣಾಂತಿಕ ಹಲ್ಲೆ- ಮುಸ್ಲಿಂ ಯುವಕ ಸಾವು

    ಗೋರಕ್ಷಕರಿಂದ ಕಿರುಕುಳ, ಮಾರಣಾಂತಿಕ ಹಲ್ಲೆ- ಮುಸ್ಲಿಂ ಯುವಕ ಸಾವು

    ಪಾಟ್ನಾ: ಬಿಹಾರದಲ್ಲಿ ಮುಸ್ಲಿಂ ಸಮುದಾಯದ ಯುವಕನೊಬ್ಬನಿಗೆ ಸ್ವಯಂಘೋಷಿತ ಗೋರಕ್ಷಕರು ಕಿರುಕುಳ ನೀಡಿ ಕೊಂದಿರುವ ಘಟನೆ ನಡೆದಿದೆ. ಆತನನ್ನು ಹೊಡೆದು ಕೊಂದು ಶವವನ್ನು ನಾಲೆಯಲ್ಲಿ ಹೂತಿರುವುದು ಬೆಳಕಿಗೆ ಬಂದಿದೆ. ಯುವಕನಿಗೆ ಕಿರುಕುಳ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

    ದಾಳಿಕೋರರು ದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದಾರೆ. ನಂತರ ದೇಹ ಬೇಗ ಕೊಳೆಯಲೆಂದು ದೇಹಕ್ಕೆ ಉಪ್ಪನ್ನು ಎರಚಿ ಸಮಾಧಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು

    ಬಿಹಾರ್‌ನ ವಿಪಕ್ಷ ನಾಯಕ ತೇಜಸ್ವಿ ಯಾದವ್‌ ಘಟನೆಗೆ ಸಂಬಂಧಿಸಿದ ಸುದ್ದಿಯನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ವಿರುದ್ಧ ಹರಿಹಾಯ್ದಿದ್ದಾರೆ.

    ಎನ್‌ಡಿಎ ನೇತೃತ್ವದ ಸರ್ಕಾರದ ಆಡಳಿತದಿಂದಾಗಿ ಬಿಹಾರ್‌ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜೆಡಿ(ಯು) ನಾಯಕನಾಗಿರುವ ಮುಸ್ಲಿಂ ಸಮುದಾಯದ ಯುವಕನಿಗೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಜೀವಂತವಾಗಿ ಸುಟ್ಟು ಸಮಾಧಿ ಮಾಡಲಾಗಿದೆ. ಇಂತಹ ದುರ್ಘಟನೆಗಳು ಬಿಹಾರ್‌ನಲ್ಲಿ ಯಾಕೆ ನಡೆಯುತ್ತಿವೆ ಎಂಬ ಬಗ್ಗೆ ನಿತೀಶ್‌ ಕುಮಾರ್‌ ಅವರು ಸ್ಪಷ್ಟನೆ ನೀಡಬೇಕು. ಜನರೇಕೆ ಕಾನೂನನ್ನು ಕೈಗೆ ತೆಗೆದುಕೊಂಡು ಹೀಗೆ ವರ್ತಿಸುತ್ತಿದ್ದಾರೆ ಎಂದು ಯಾದವ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

    https://twitter.com/yadavtejashwi/status/1496177664159371267?ref_src=twsrc%5Etfw%7Ctwcamp%5Etweetembed%7Ctwterm%5E1496177664159371267%7Ctwgr%5E%7Ctwcon%5Es1_&ref_url=https%3A%2F%2Fwww.ndtv.com%2Findia-news%2Fmuslim-man-beaten-to-death-in-bihar-video-points-to-cow-vigilantes-2784257

    ಖಲೀಲ್‌ನ ದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಮೃತನ ಕುಟುಂಬಸ್ಥರು ಖಲೀಲ್‌ ಕಾಣೆಯಾಗಿರುವ ಬಗ್ಗೆ ಫೆ.16ರಂದು ದೂರು ದಾಖಲಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಖಲೀಲ್‌ನ ಮೊಬೈಲ್‌ನಿಂದ ಕುಟುಂಬಸ್ಥರಿಗೆ ಕರೆ ಬಂದಿದೆ. ಫೋನ್‌ನಲ್ಲಿ ಮಾತನಾಡಿದಾತ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡಲು ತಡ ಮಾಡಿದರೆ, ಖಲೀಲ್‌ನ ಕಿಡ್ನಿಯನ್ನು ಮಾರುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

  • ಹಿಜಬ್‍ಧಾರಿಗೆ ಬ್ಯಾಂಕ್ ವಹಿವಾಟ ನಡೆಸದಂತೆ ನಿರ್ಬಂಧ

    ಹಿಜಬ್‍ಧಾರಿಗೆ ಬ್ಯಾಂಕ್ ವಹಿವಾಟ ನಡೆಸದಂತೆ ನಿರ್ಬಂಧ

    ಪಾಟ್ನಾ: ಹಿಜಬ್ ವಿವಾದ ದಿನೇ ದಿನೇ ತಾರಕಕ್ಕೆ ಏರುತ್ತಿದ್ದು, ಕೇವಲ ರಾಜ್ಯವೊಂದೇ ಅಲ್ಲ ದೇಶವ್ಯಾಪಿ ಹರಡಿದೆ. ಈಗ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಿಜಬ್ ಧರಿಸಿದ ಯುವತಿಗೆ ಯುಕೋ ಬ್ಯಾಂಕ್‍ನಲ್ಲಿ ವಹಿವಾಟು ನಡೆಸದಂತೆ ನಿರ್ಬಂಧ ಹೇರಿದ ಘಟನೆ ನಡೆದಿದೆ.

    ಯುವತಿ ರಾಷ್ಟ್ರೀಕೃತ ಬ್ಯಾಂಕ್‍ನಿಂದ ಹಣ ಡ್ರಾ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ವೀಡಿಯೋವನ್ನು ಯುವತಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋವು 2 ನಿಮಿಷ 20 ಸೆಕೆಂಡ್ ಇದೆ. ಯುವತಿಯು ಹಿಜಬ್ ಧರಿಸಿಕೊಂಡು ಬ್ಯಾಂಕ್‍ಗೆ ಬಂದಿದ್ದಾರೆ. ಇದಕ್ಕೆ ಬ್ಯಾಂಕ್‍ನ ಉದ್ಯೋಗಿಯು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಣವನ್ನು ಡ್ರಾ ಮಾಡಲು ಹಿಜಬ್ ತೆಗೆಯುವಂತೆ ಒತ್ತಾಯಿಸಿದ್ದಾರೆ. ಯಾರು ಹಿಜಬ್‍ನ್ನು ತೆಗೆಯುವಂತೆ ಹೇಳುತ್ತಾರೋ ಅವರು ದಾಖಲೆ ಸಮೇತ ಹೇಳಿ ಎಂದು ಯುವತಿಯ ಪೋಷಕರು ಒತ್ತಾಯಿಸಿದ್ದಾರೆ. ಅದಕ್ಕೆ ಬ್ಯಾಂಕ್ ಉದ್ಯೋಗಿಯು ಯುವತಿ ಮಾಡುತ್ತಿರುವ ವೀಡಿಯೋವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ಕೊಲೆಯಾದ ಹರ್ಷನನ್ನು ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ- ಡಿಜಿಪಿ ಸ್ಪಷ್ಟನೆ

    ವೀಡಿಯೋದಲ್ಲಿ ಏನಿದೆ?: ನಾನು ಹಾಗೂ ನನ್ನ ಮಗಳು ತಿಂಗಳಿಗೊಮ್ಮೆ ಈ ಬ್ಯಾಂಕ್‍ಗೆ ಬರುತ್ತಿದ್ದೆವು. ಈ ಹಿಂದೆ ಯಾರೂ ಸಹ ಹಿಜಬ್ ಬಗ್ಗೆ ಪ್ರಶ್ನೆ ಮಾಡಿರಲಿಲ್ಲ. ಇಂದು ಯಾಕೆ ಈ ರೀತಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಆಗುತ್ತಿರುವ ವಿವಾದವನ್ನು ಬಿಹಾರಕ್ಕೆ ಯಾಕೆ ತರುತ್ತೀರಾ, ಬ್ಯಾಂಕ್‍ಗಳಲ್ಲಿ ಹಿಜಬ್‍ನ್ನು ಧರಿಸಬಾರದು ಎನ್ನುವ ದಾಖಲೆ ಎಲ್ಲಿಯಾದರೂ ಇದೆಯೇ ಎಂದು ಯುವತಿಯ ಪೋಷಕರು ವೀಡಿಯೋದಲ್ಲಿ ಪ್ರಶ್ನಿಸಿದ್ದಾರೆ.

    ಈ ವೀಡಿಯೋವನ್ನು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ತೇಜಸ್ವಿ ಯಾದವ್ ಶೇರ್ ಮಾಡಿಕೊಂಡಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮ ಯೋಚನೆ, ಯೋಜನೆ ಹಾಗೂ ನಿಮ್ಮ ಜವಾಬ್ದಾರಿ ಬಗ್ಗೆ ನನಗೆ ಅರ್ಥವಾಗುತ್ತಿದೆ. ನೀವು ಸಂವಿಧಾನವನ್ನು ಗೌರವಿಸುವುದರ ಜೊತೆಗೆ ಬ್ಯಾಕ್‍ನ ಉದ್ಯೋಗಿಯನ್ನು ಬಂಧಿಸಿ ಎಂದು ಒತ್ತಾಯಿಸಿದ್ದಾರೆ. ದನ್ನೂ ಓದಿ: ಪ್ರಕ್ಷುಬ್ಧಗೊಂಡ ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ – ನಾಳೆ ಬೆಳಗ್ಗೆವರೆಗೂ ನಿಷೇಧಾಜ್ಞೆ, ಖಾಕಿ ಭದ್ರತೆ

    ಈ ಘಟನೆಯ ನಂತರ ಬ್ಯಾಂಕ್ ಅಧಿಸೂಚನೆಯನ್ನು ಹೊರಡಿಸಿದ್ದು, ಎಲ್ಲಾ ಧರ್ಮದವರ ಭಾವನೆಗಳನ್ನು ಬ್ಯಾಂಕ್ ಗೌರವಿಸುತ್ತದೆ. ಘಟನೆಯ ಕುರಿತು ಬ್ಯಾಂಕ್ ತನಿಖೆ ನಡೆಸುತ್ತದೆ ಎಂದು ತಿಳಿಸಿದೆ.

  • ತಲೆ ಮೇಲೆ ಯಾರು ಏನನ್ನೇ ಹಾಕೊಂಡು ಬರಲಿ, ನಾವು ಪ್ರಶ್ನಿಸಲ್ಲ: ಬಿಹಾರ್‌ ಸಿಎಂ

    ತಲೆ ಮೇಲೆ ಯಾರು ಏನನ್ನೇ ಹಾಕೊಂಡು ಬರಲಿ, ನಾವು ಪ್ರಶ್ನಿಸಲ್ಲ: ಬಿಹಾರ್‌ ಸಿಎಂ

    ಪಾಟ್ನ: ಬಿಹಾರ್‌ನಲ್ಲಿ ಹಿಜಬ್‌ ವಿವಾದ ಇಲ್ಲ. ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

    ತರಗತಿಗಳಲ್ಲಿ ಯಾರೇ ಆಗಲಿ ತಲೆಯ ಮೇಲೆ ಏನನ್ನಾದರೂ ಹಾಕಿಕೊಂಡರೂ ಅದನ್ನು ಪ್ರಶ್ನಿಸುವ ಅಗತ್ಯವಿಲ್ಲ ಎಂದು ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರಿಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ

    ಹಿಜಬ್‌ ವಿವಾದ ಬಿಹಾರದ ವಿಷಯವಲ್ಲ. ನಾವು ಅಂತಹ ವಿಷಯಗಳ ಬಗ್ಗೆ ಗಮನಹರಿಸಬಾರದು. ಇದು ನಿಷ್ಪ್ರಯೋಜಕ ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

    ಬಿಹಾರದ ಶಾಲೆಗಳಲ್ಲಿ ಮಕ್ಕಳು ಬಹುತೇಕ ಒಂದೇ ರೀತಿಯ ಉಡುಗೆಯನ್ನು ಧರಿಸುತ್ತಾರೆ. ಯಾರಾದರೂ ತಲೆಗೆ ಏನಾದರೂ ಹಾಕಿಕೊಂಡರೆ ಅದಕ್ಕೆ ಕಾಮೆಂಟ್‌ ಮಾಡುವ ಅಗತ್ಯವಿಲ್ಲ. ಅಂತಹ ವಿಷಯಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ನಾವು ಪರಸ್ಪರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಇವರ ಒತ್ತಡಕ್ಕೆ ಮಣಿಯುತ್ತಾ ಹೋದ್ರೆ ದೇಶವನ್ನೇ ತುಂಡರಿಸುತ್ತಾರೆ – ಖಾದರ್ ವಿರುದ್ಧ ಸಿಂಹ ಕಿಡಿ

    ಕರ್ನಾಟಕದ ಉಡುಪಿಯಲ್ಲಿ ಭುಗಿಲೆದ್ದ ಹಿಜಬ್‌ ವಿವಾದ ಈಗ ಇಡೀ ವಿಶ್ವದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಮೆರಿಕ, ಪಾಕಿಸ್ತಾನದಲ್ಲೂ ಹಿಜಬ್‌ ವಿವಾದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಅಂತೆಯೇ ದೇಶದ ಅನೇಕ ರಾಜ್ಯಗಳ ರಾಜಕೀಯ ನಾಯಕರು ಹಿಜಬ್‌ ವಿವಾದ ಕುರಿತು ಪ್ರತಿಕ್ರಿಯಿಸುತ್ತಿದ್ದಾರೆ. ಇದನ್ನೂ ಓದಿ: ಧರ್ಮ ಮುಖ್ಯ ಎಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ ಶಿವಮೊಗ್ಗ ವಿದ್ಯಾರ್ಥಿನಿಯರು