Tag: ಬಿಹಾರ್

  • ಮಗಳನ್ನು ಆಫೀಸರ್ ಮಾಡಲು ದರೋಡೆಗೆ ಇಳಿದ ತಂದೆ

    ಮಗಳನ್ನು ಆಫೀಸರ್ ಮಾಡಲು ದರೋಡೆಗೆ ಇಳಿದ ತಂದೆ

    -ದರೋಡೆಗೆ ಧಾರಾವಾಹಿಯೇ ಸ್ಫೂರ್ತಿಯಂತೆ!

    ಪಾಟ್ನಾ: ತಂದೆಯೊಬ್ಬ ಮಗಳನ್ನು ಆಫೀಸರ್ ಮಾಡುವುದಕ್ಕಾಗಿ ದರೋಡೆ ಮಾಡಲು ಪ್ರಾರಂಭಿಸಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

    ರಾಮ್ ಕಿಶೋರ್ ಸಿಂಗ್ ಅಲಿಯಾಸ್ ಬಾಬಾ ಎಂಬತಾನೇ ದರೋಡೆಗೆ ಇಳಿದ ತಂದೆ. ಶನಿವಾರ ಪೊಲೀಸರು ಬಂಧಿಸಿದ್ದ ನಾಲ್ವರು ದರೋಡೆಕೋರರಲ್ಲಿ ಈತನು ಒಬ್ಬನಾಗಿದ್ದು, ಆರೋಪಿಗಳೆಲ್ಲಾ ಪಾಟ್ನಾದ ನಿವಾಸಿಗಳಾಗಿದ್ದಾರೆ. ಕಿಶೋರ್ ಆರು ತಿಂಗಳ ಹಿಂದೆ ಈ ಗ್ಯಾಂಗ್ ಅನ್ನು ಸೇರಿದ್ದೇನೆಂದು ಪೊಲೀಸರಿಗೆ ತಿಳಿಸಿದ್ದಾನೆ. ನನ್ನ 12 ವರ್ಷದ ಮಗಳ ಶಾಲಾ ಶುಲ್ಕ ಹಾಗೂ ಟ್ಯೂಷನ್ ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಳ್ಳತನ ಮಾಡಲು ಶುರುಮಾಡಿದೆ ಎಂದು ಹೇಳಿದ್ದಾನೆ.

    ಕಿಶೋರ್ ಸಿಂಗ್ ಮೂಲತಃ ಪಾಟ್ನಾದ ದೇವಿ ಕಾಲೋನಿ ನಿವಾಸಿಯಾಗಿದ್ದು, ಮಗಳನ್ನು ಆಫೀಸರ್ ಮಾಡುವುದಕ್ಕೆ ದೂರದರ್ಶನದಲ್ಲಿ ಬರುವ ‘ಅಫ್ಸಾರ್ ಬಿಟಿಯಾ’ ಧಾರಾವಾಹಿ ನನ್ನ ಸ್ಫೂರ್ತಿ ಎಂಬುದು ತನಿಖೆಯ ವೇಳೆ ತಿಳಿದಿದೆ. ಕಿಶೋರ್ ಈ ಹಿಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, 6,000 ರೂ. ವೇತನ ಬರುತ್ತಿತ್ತು. ಆ ಕೆಲಸವನ್ನು ಬಿಟ್ಟು ಗ್ಯಾಂಗ್ ಸೇರಿದ್ದಾನೆ. ಮಗಳು ವೈಶಾಲಿ ಜಿಲ್ಲೆಯಿಂದ 15 ಕಿ.ಮೀ ದೂರವಿರುವ ಪ್ರಾಥಮಿಕ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಓದುತ್ತಿದ್ದಾಳೆ.

    ನಾನು ನನ್ನ ಮಗಳ ವಿದ್ಯಾಭ್ಯಾಸಕ್ಕಾಗಿ ಈ ಕೆಲಸವನ್ನು ಮಾಡಿದೆ. ನನನ್ನು ಕ್ಷಮಿಸಿ ನಾನು ಅಪರಾಧ ಮಾಡಿದ್ದೇನೆ ಎಂದು ಕ್ಷಮೆ ಕೇಳಿದ್ದಾನೆ ಎಂದು ವೈಶಾಲಿಯ ಪೊಲೀಸ್ ಅಧಿಕಾರಿ ಎಂ.ಎಸ್ ಧಿಲ್ಲನ್ ಸಿಂಗ್ ಹೇಳಿದರು.

    ಬಿಹಾರದ ಇತರ ಜಿಲ್ಲೆಗಳಲ್ಲಿ ದರೋಡೆಕೋರರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಪೊಲೀಸ್ ಕಾರ್ಯಾಚರಣೆ ಮಾಡುವಾಗ ರಾಜ್ ಕಿಶೋರ್ ಸಿಂಗ್, ಕೃಷ್ಣಕುಮಾರ್, ಮುನ್ನಾ ಯಾದವ್ ಮತ್ತು ರೋಶನ್ ಕುಮಾರ್ ಎಂಬವರನ್ನು ಶನಿವಾರ ಬಂಧಿಸಲಾಗಿತ್ತು.

    ಬಂಧಿಸಲಾಗಿದ್ದ ಆರೋಪಿಗಳಿಂದ 20 ಲಕ್ಷ ರೂ. ಮೌಲ್ಯದ ಆಭರಣಗಳು, ಇಬ್ಬರ ಬಳಿ ಬಂದೂಕುಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 10 ಲಕ್ಷ ರೂ. ನಗದು ಬಹುಮಾನ ಮತ್ತು ಯುಎಸ್ ಡಾಲರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಪೊಲೀಸರು ವಿದೇಶಿ ಕರೆನ್ಸಿಗಳ ಮೌಲ್ಯವನ್ನು ಬಹಿರಂಗಪಡಿಸಿಲ್ಲ. ಅಷ್ಟೇ ಅಲ್ಲದೇ ಕದ್ದ ಹಣದಿಂದ ಬಂಧಿತ ಆರೋಪಿಗಳು ಆಸ್ತಿಗಳನ್ನು ಖರೀದಿಸಿದ್ದಾರೆ. ಕೃಷ್ಣ ಯಾದವ್ ಇತ್ತೀಚೆಗೆ ದಾನಾಪುರದಲ್ಲಿ 15 ಲಕ್ಷ ರೂ. ಮೌಲ್ಯದ ಭೂಮಿಯನ್ನು ಖರೀದಿಸಿದ್ದು, ರೌಶನ್ ಕುಮಾರ್ ಎಂಬವನು ಸ್ಯಾಮಾಪಚ್ಚಕ್ ನಲ್ಲಿ ಅದೇ ಬೆಲೆಯಲ್ಲಿ ಖರೀದಿಸಿದ್ದಾನೆ. ಇದೀಗ ಆಸ್ತಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಳವೆ ಬಾವಿಯೊಳಗೆ ಬಿದ್ದ 3 ವರ್ಷದ ಬಾಲಕಿ ಸಾವು ಗೆದ್ದಳು!

    ಕೊಳವೆ ಬಾವಿಯೊಳಗೆ ಬಿದ್ದ 3 ವರ್ಷದ ಬಾಲಕಿ ಸಾವು ಗೆದ್ದಳು!

    – 30 ಗಂಟೆಗಳ ಕಾರ್ಯಾಚರಣೆ ಯಶಸ್ವಿ

    ಪಾಟ್ನಾ: ಮನೆಯ ಬಳಿ ಆಟವಾಡುತ್ತಾ 110 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿರುವ ಘಟನೆ ಬಿಹಾರ್‍ನ ಮುಂಗೇರಾ ಜಿಲ್ಲೆಯಲ್ಲಿ ನಡೆದಿದೆ.

    ಮೂರು ವರ್ಷದ ಸನ್ನೊ ಮಂಗಳವಾರ ಸಂಜೆ 4 ಗಂಟೆ ವೇಳೆ ಮನೆಯ ಬಳಿ ಇದ್ದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ವಿಷಯ ತಿಳಿದ ಪೋಷಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಾಷ್ಟ್ರಿಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಆರಂಭಿಸಿತ್ತು. ಸತತ 30 ಗಂಟೆಗಳ ಕಾರ್ಯಾಚರಣೆ ಬಳಿಕ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.

    ಕೊಳವೆ ಬಾವಿಯಿಂದ ಸನ್ನೋಳನ್ನು ರಕ್ಷಿಸಿದ ಬಳಿಕ ತಜ್ಞ ವೈದ್ಯರು ಬಾಲಕಿಯ ಆರೋಗ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಲಕಿಯ ಆರೋಗ್ಯ ಉತ್ತಮವಾಗಿದ್ದು, ಬಳಿಕ ಸನ್ನೋಳನ್ನು ಪೋಷಕರ ವಶಕ್ಕೆ ನೀಡಿದ್ದಾರೆ.

    ಕಾರ್ಯಾಚರಣೆ ವೇಳೆ ರಕ್ಷಣಾ ತಂಡ ಬಾಲಕಿ ಉಸಿರಾಟಕ್ಕೆ ಆಮ್ಲಜನಕವನ್ನು ಪೂರೈಸಿತ್ತು. ಅಲ್ಲದೇ ಬಾಲಕಿಯು ಇನ್ನೂ ಕೆಳಗೆ ಕುಸಿಯದಂತೆ ಮುಂಜಾಗ್ರತೆ ವಹಿಸಿದ್ದರು. ಬಳಿಕ ಕೊಳವೆಬಾವಿಯ ಪಕ್ಕದಲ್ಲಿ ಜೆಸಿಬಿ ಯಂತ್ರಗಳ ಸಹಾಯದಿಂದ ಬೃಹತ್ ಹೊಂಡ ನಿರ್ಮಿಸಿ ಬಾಲಕಿಯನ್ನು ಆದಷ್ಟು ಬೇಗ ರಕ್ಷಿಸುವ ಕಾರ್ಯ ನಡೆಸಿದ್ದರು.

    ಬಾಲಕಿ ಮಂಗಳವಾರ ತನ್ನ ಪೋಷಕರೊಂದಿಗೆ ಮುಂಗೇರಾದ ಮುರ್ಗಿಚಕ್ ಎಂಬಲ್ಲಿರುವ ಅಜ್ಜನ ಮನೆಗೆ ಬಂದಿದ್ದಳು. ಈ ವೇಳೆ ಮನೆಯ ಹತ್ತಿರ ಆಟವಾಡುತ್ತಿರುವಾಗ ಕೊಳವೆ ಬಾವಿಗೆ ಬಿದ್ದಿದ್ದಳು. ಕೊಳವೆಬಾವಿಯಲ್ಲಿ ಬಾಲಕಿಯು ಅಳುತ್ತಿರುವ ಧ್ವನಿ ಕೇಳಿದ ಬಳಿಕ ಬಾಲಕಿ ಜೀವಂತವಾಗಿದ್ದು ಖಚಿತವಾಗಿತ್ತು. ಕೂಡಲೇ ಎಚ್ಚೆತ್ತ ರಕ್ಷಣಾ ಪಡೆಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು.

  • ಆಟವಾಡುತ್ತಾ 110 ಅಡಿ ಆಳದ ಕೊಳವೆಬಾವಿಗೆ ಬಿದ್ದ ಬಾಲಕಿ

    ಆಟವಾಡುತ್ತಾ 110 ಅಡಿ ಆಳದ ಕೊಳವೆಬಾವಿಗೆ ಬಿದ್ದ ಬಾಲಕಿ

    ಪಾಟ್ನಾ: ಆಟವಾಡುತ್ತಾ ಮೂರು ವರ್ಷದ ಬಾಲಕಿಯು 110 ಅಡಿ ಆಳದ ಬೋರ್‍ವೆಲ್‍ಗೆ ಬಿದ್ದ ಘಟನೆ ಬಿಹಾರ್‍ನ ಮುಂಗೇರಾ ಜಿಲ್ಲೆಯಲ್ಲಿ ನಡೆದಿದೆ.

    ಮೂರು ವರ್ಷದ ಸನ್ನೊ ಕೊಳವೆಬಾವಿಗೆ ಬಿದ್ದ ಬಾಲಕಿ. ಮಂಗಳವಾರ ತನ್ನ ಪೋಷಕರೊಂದಿಗೆ ಸನ್ನೊ ಅಜ್ಜನಾದ ಉಮೇಶ್ ನಂದನ್ ರವರನ್ನು ನೋಡಲು ಮುಂಗೇರಾದ ಮುರ್ಗಿಚಕ್ ಏರಿಯಾಕ್ಕೆ ಬಂದಿದ್ದಳು. ಈ ವೇಳೆ ಮನೆಯ ಹತ್ತಿರ ಆಟವಾಡುತ್ತಿರುವಾಗ ಸಂಜೆ 4ರ ಸುಮಾರಿಗೆ ಮನೆಯ ಬಳಿಯಿದ್ದ ಸುಮಾರು 110 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದಾಳೆ.

    ವಿಷಯ ತಿಳಿದ ಪೋಷಕರು ಕೂಡಲೇ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಕೊಳವೆಬಾವಿಯಲ್ಲಿ ಬಾಲಕಿಯು ಅಳುತ್ತಿರುವ ಧ್ವನಿ ಕೇಳಿದೆ. ಕೂಡಲೇ ಎಚ್ಚೆತ್ತ ರಕ್ಷಣಾ ಪಡೆಯ ಅಧಿಕಾರಿಗಳು ಕೊಳವೆಬಾವಿಯ ಸುತ್ತ ಬಿಗಿಭದ್ರತೆ ಕೈಗೊಂಡಿದ್ದಾರೆ.

    ಘಟನೆ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ರಾಜ್ಯ ವಿಪತ್ತು ನಿರ್ವಹಣ ತಂಡದ ಅಧಿಕಾರಿಯಾದ ಸಂಜೀವ್ ಕುಮಾರ್ ರವರು, ಬಾಲಕಿಗೆ ಈಗಾಗಲೇ ಆಮ್ಲಜನಕವನ್ನು ಪೂರೈಕೆ ಮಾಡಿದ್ದು, ಬಾಲಕಿಯು ಇನ್ನೂ ಕೆಳಗೆ ಕುಸಿಯದಂತೆ ಮುಂಜಾಗ್ರತೆ ವಹಿಸಿದ್ದೇವೆ. ಅಲ್ಲದೇ ಕೂಡಲೇ ಆಕೆಯನ್ನು ಕೊಳವೆಬಾವಿಯಿಂದ ಹೊರತೆಗೆಯುತ್ತೇವೆ ಎಂದು ಹೇಳಿದ್ದಾರೆ.

    ರಾಜ್ಯ ವಿಪತ್ತು ನಿರ್ವಹಣಾ ತಂಡ ಈಗಾಗಲೇ ಕೊಳವೆಬಾವಿಯ ಪಕ್ಕದಲ್ಲಿ ಜೆಸಿಬಿ ಯಂತ್ರಗಳ ಸಹಾಯದಿಂದ 40 ಅಡಿಗೂ ಹೆಚ್ಚಿನ ಬೃಹತ್ ಹೊಂಡ ನಿರ್ಮಿಸಿದ್ದು, ಬಾಲಕಿಯನ್ನು ಆದಷ್ಟು ಬೇಗ ರಕ್ಷಿಸುವುದಾಗಿ ತಿಳಿಸಿವೆ.

    ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ವರಿಷ್ಠಾಧಿಕಾರಿಯಾದ ಹರಿಶಂಕರ್ ಕುಮಾರ್ ರವರು, ಈಗಾಗಲೇ ಘಟನಾ ಸ್ಥಳದಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದು, 2 ಪೊಲೀಸ್ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಿದ್ದೇವೆ. ರಕ್ಷಣಾ ಕಾರ್ಯಚರಣೆಗೆ ಪೊಲೀಸ್ ಇಲಾಖೆಯಿಂದ ಬೇಕಾಗುವ ಸಹಾಯವನ್ನು ಮಾಡಲಾಗುತ್ತದೆ ಎಂದು ಹೇಳಿದರು.

  • ವಾಚ್‍ಮ್ಯಾನ್ ಜೊತೆಗೆ 16ರ ಪೋರಿಯ ಸೆಕ್ಸ್-ನೋಡಿದ 8ರ ಹುಡ್ಗನ ಕೊಂದೇ ಬಿಟ್ಟಳು

    ವಾಚ್‍ಮ್ಯಾನ್ ಜೊತೆಗೆ 16ರ ಪೋರಿಯ ಸೆಕ್ಸ್-ನೋಡಿದ 8ರ ಹುಡ್ಗನ ಕೊಂದೇ ಬಿಟ್ಟಳು

    ಪಾಟ್ನಾ: ವಾಚ್‍ಮ್ಯಾನ್ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ದೃಶ್ಯವನ್ನು ನೋಡಿದ ಅಂತಾ 8 ವರ್ಷದ ಬಾಲಕನನ್ನು ಕೊಲೆ ಮಾಡಿದ್ದಾಗಿ, 16 ವರ್ಷದ ಬಾಲಕಿಯೊಬ್ಬಳು ಒಪ್ಪಿಕೊಂಡಿದ್ದಾಳೆ.

    ಜುಲೈ 9 ರಂದು ಬಿಹಾರದ ಪಾಟ್ನಾ ಜಿಲ್ಲೆಯ ಹಾಸ್ಟೆಲ್‍ವೊಂದರಲ್ಲಿ ಈ ಅಮಾನವೀಯ ಘಟನೆ ನಡೆದಿತ್ತು. ಅಭಿಮನ್ಯು ಕೊಲೆಯಾದ ಬಾಲಕ. ಪ್ರಕರಣದ ಕುರಿತು ಬಾಲಕಿಯನ್ನು ಈ ಮೊದಲು ವಿಚಾರಣೆಗೆ ಒಳಪಡಿಸಿದಾಗ, ಅಭಿಮನ್ಯು ತನ್ನ ಪುಸ್ತಕದ ಹಾಳೆ ಹರೆದಿದ್ದ, ಹೀಗಾಗಿ ಆತನನ್ನು ಜೋರಾಗಿ ದೂಡಿದಾಗ ಕೆಳಗೆ ಬಿದ್ದು ಮೃತಪಟ್ಟಿದ್ದ ಎಂದು ಕಥೆ ಹೇಳಿದ್ದಳು. ಪೊಲೀಸರು ಬಾಲಕಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಒಪ್ಪಿಕೊಂಡಿದ್ದಾಳೆ.

    ಅಂದು ನಡೆದಿದ್ದು ಏನು..?
    ಅಭಿಮನ್ಯು ಹಾಗೂ ಕೊಲೆ ಮಾಡಿದ ಬಾಲಕಿ ಪಾಟ್ನಾ ಸಮೀಪದ ಫೂತುಹಾದನ ಸೆಫಾಲಿ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು. ಅಭಿಮನ್ಯು ಎಲ್‍ಕೆಜಿ ಹಾಗೂ ಬಾಲಕಿ 8ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಒಂದೇ ಹಾಸ್ಟೆಲ್ ಹಾಗೂ ಒಂದೇ ರೂಮ್‍ನಲ್ಲಿ ಮತ್ತಿಬ್ಬರು ಬಾಲಕಿಯರೊಂದಿಗೆ ಇದ್ದರು. ಬಾಲಕಿ ವಾಚ್‍ಮ್ಯಾನ್ ಪಪ್ಪು ಎಂಬಾತನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಹಿಂದೆಯೂ ಪಪ್ಪು ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ದೃಶ್ಯವನ್ನು ತನ್ನ ಮೊಬೈಲ್‍ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದನು.

    ಜುಲೈ 6 ರಂದು ರಾತ್ರಿ ಬಾಲಕಿಯನ್ನು ಲೈಂಗಿಕ ಕ್ರಿಯೆಗೆ ಬರುವಂತೆ ಪಪ್ಪು ಒತ್ತಾಯಿಸಿದ್ದ. ಆದರೆ ಹಾಸ್ಟೆಲ್‍ನಲ್ಲಿ ಎಲ್ಲರೂ ಇದ್ದಾರೆ ನಾನು ಬರುವುದಿಲ್ಲ ಎಂದು ಬಾಲಕಿ ನಿರಾಕರಿಸಿದ್ದಕ್ಕೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುವುದಾಗಿ ಹೆದರಿಸಿದ್ದನು. ಹೀಗಾಗಿ ಶೌಚಾಲಯಕ್ಕೆ ಹೋದ ಬಾಲಕಿ ಪಪ್ಪು ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗಿದ್ದಾಗ ರೂಮಿನಲ್ಲಿದ್ದ ಅಭಿಮನ್ಯು ನೋಡಿದ್ದನು.

    ತನ್ನ ಕೃತ್ಯವನ್ನು ಅಭಿಮನ್ಯು ಬಯಲು ಮಾಡುತ್ತಾನೆ ಎಂದು ಅರಿತ ಬಾಲಕಿ, ಜುಲೈ 8ರಂದು ಅಭಿಮನ್ಯುನ ಕುತ್ತಿಗೆಯನ್ನು 10 ನಿಮಿಷ ಗಟ್ಟಿಯಾಗಿ ಹಿಡಿದು ಕೊಲೆ ಮಾಡಿದ್ದಳು. ಅಲ್ಲದೆ ದೇಹವನ್ನು ಸಾಗಿಸಲು ಪ್ರಯತ್ನಿಸಿ ವಿಫಲವಾಗಿ, ಆತನ ಹಾಸಿಗೆಯಲ್ಲಿ ಮಲಗಿಸಿದ್ದಳು.

    ಪ್ರಕರಣ ಗೊತ್ತಾಗುತ್ತಿದ್ದಂತೆ ಹಾಸ್ಟೆಲ್‍ಗೆ ಬಂದ ಪೊಲೀಸರು ಬಾಲಕಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕಟ್ಟು ಕತೆ ಹೇಳಿದ್ದಳು. ಕೊಲೆಯಾದ ದಿನದಿಂದ ಪಪ್ಪು ಕಾಣೆಯಾಗಿದ್ದರಿಂದ ಪೊಲೀಸರು ಬಾಲಕಿ ಮೇಲೆ ಶಂಕೆ ವ್ಯಕ್ತಪಡಿಸಿದ್ದರು. ತೀವ್ರ ತನಿಖೆಯ ನಂತರ, ತಾನು ಪಪ್ಪು ಜೊತೆಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವುದನ್ನು ಅಭಿಮನ್ಯು ನೋಡಿದ್ದನು. ಅವನು ಎಲ್ಲಿ ನನ್ನ ಪೋಷಕರಿಗೆ ಹಾಗೂ ಇತರರಿಗೆ ಹೇಳುತ್ತಾನೆ ಎಂದು ಹೆದರಿ ಕೊಲೆ ಮಾಡಿದ್ದಾಗಿ ಬಾಲಕಿ ಸತ್ಯ ಒಪ್ಪಿಕೊಂಡಿದ್ದಾಳೆ.

    ಬಾಲಕಿ ನಡತೆ ಸರಿಯಿಲ್ಲ. ಪಪ್ಪು ಜೊತೆಗೆ ಎಲ್ಲಂದರಲ್ಲಿ ಓಡಾಡುತ್ತಾಳೆ ಎಂದು ಅಭಿಮನ್ಯು ನಮ್ಮ ಬಳಿ ದೂರು ನೀಡಿದ್ದ. ಹೀಗಾಗಿ ಬಾಲಕಿ ಬಗ್ಗೆ ಎಚ್ಚರ ವಹಿಸುವಂತೆ ಶಾಲಾ ಆಡಳಿತ ಮಂಡಳಿಯ ತಿಳಿಸಿದ್ದೇವು. ಆದರೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಮೃತ ಅಭಿಮನ್ಯು ಚಿಕ್ಕಪ್ಪ ಸಂತೋಷ್ ಸಿಂಗ್ ಆರೋಪಿಸಿದ್ದಾರೆ.

  • ಮಾವಿನ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಗುಂಡಿಕ್ಕಿ ಹತ್ಯೆ!

    ಮಾವಿನ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಗುಂಡಿಕ್ಕಿ ಹತ್ಯೆ!

    ಪಾಟ್ನಾ: ಮಾವಿನ ಹಣ್ಣನ್ನು ಕಿತ್ತಿದ್ದಕ್ಕೆ ಬಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯ ಪಥ್ರೂ ಗ್ರಾಮದಲ್ಲಿ ನಡೆದಿದೆ.

    ಸತ್ಯಮ್ ಕುಮಾರ್ (10) ಮೃತ ಬಾಲಕನಾಗಿದ್ದಾನೆ. ಬಾಲಕ ಮೂಲತಃ ಶೇರ್ಗರ್ ಗ್ರಾಮದ ನಿವಾಸಿಯಾಗಿದ್ದು, ಗುರುವಾರ ತನ್ನ ಸ್ನೇಹಿತರ ಒಟ್ಟಿಗೆ ಆಟವಾಡಲು ಪಾಥ್ರೂ ಗ್ರಾಮದ ಬಳಿಯಿರುವ ತೋಟಕ್ಕೆ ಹೋಗಿದ್ದಾರೆ. ಈ ವೇಳೆ ಬಾಲಕರು ಮಾವಿನಹಣ್ಣನ್ನು ಕಿತ್ತಿದ್ದಾರೆ.

    ಮಾವಿನಹಣ್ಣು ಕಿತ್ತಿದ್ದಕ್ಕೆ ತೋಟದ ಕಾವಲುಗಾರ ಮಕ್ಕಳ ಮೇಲೆಯೇ ಗುಂಡು ಹಾರಿಸಿದ್ದಾನೆ. ಪರಿಣಾಮ ಸತ್ಯಮ್ ಗುಂಡು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಲೆ ಕಾವಲುಗಾರ ಸ್ಥಳದಿಂದ ಪರಾರಿಯಾಗಿದ್ದಾನೆ.

    ಬರೋಹ್ ಚೌದರಿ ಎಂಬವರ ತೋಟದ ಕಾವಲುಗಾರ ರಾಮಶೀಶ್ ಯಾದವ್ (43) ಮಗನ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ಗೋಗ್ರಿ ಠಾಣೆಯಲ್ಲಿ ಬಾಲಕನ ತಂದೆ ದೂರು ನೀಡಿದ್ದಾರೆ.

    ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗೋಗ್ರಿ ಠಾಣಾ ಪೊಲೀಸರು, ಮಾವಿನ ತೋಟದಲ್ಲಿ ಬಾಲಕನ ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೇ ಪರಾರಿಯಾದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಸೆರೆಗೆ ಪೊಲೀಸರು ಬಲೆ ಬೀಸಿದ್ದು, ಹೆಚ್ಚಿನ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

  • ಸರ್ಕಲ್‍ಗೆ ಮೋದಿ ಹೆಸರು ಇಟ್ಟಿದ್ದಕ್ಕೆ ತಕರಾರು- 70ರ ವ್ಯಕ್ತಿಯ ಶಿರಚ್ಛೇದನ

    ಸರ್ಕಲ್‍ಗೆ ಮೋದಿ ಹೆಸರು ಇಟ್ಟಿದ್ದಕ್ಕೆ ತಕರಾರು- 70ರ ವ್ಯಕ್ತಿಯ ಶಿರಚ್ಛೇದನ

    ಪಾಟ್ನಾ: 70 ವರ್ಷದ ವ್ಯಕ್ತಿಯ ಶಿರಚ್ಛೇದನ ಮಾಡಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ನಗರದ ಚೌಕಕ್ಕೆ ನರೇಂದ್ರ ಮೋದಿ ಚೌಕ್ ಎಂದು ಹೆಸರಿಟ್ಟ ಕಾರಣ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಬಿಜೆಪಿ ಬೆಂಬಲಿಗರಾಗಿದ್ದ ರಾಮಚಂದ್ರ ಯಾದವ್ ಮೃತ ದುರ್ದೈವಿ. ಇಲ್ಲಿನ ದರ್ಭಂಗಾ ಜಿಲ್ಲೆಯಲ್ಲಿ ಗುರುವಾರದಂದು 40-50 ಜನರ ಗುಂಪು ಯಾದವ್ ಅವರ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಸುಮಾರು 25-30 ಬೈಕ್‍ಗಳಲ್ಲಿ ಬಂದಿದ್ದ ತಂಡ ಹಾಕಿ ಸ್ಟಿಕ್ ಹಾಗೂ ಕತ್ತಿಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

    ನನ್ನ ತಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ಇದಕ್ಕೆ ಅಂತ್ಯ ಹಾಡಬೇಕೆಂದಿದ್ದರು. ಆದ್ರೆ ಹಾಕಿ ಸ್ಟಿಕ್ ಹಾಗೂ ಕತ್ತಿಗಳನ್ನ ಹಿಡಿದು ಬಂದ ತಂಡ ಅವರ ಮೇಲೆ ದಾಳಿ ಮಾಡಿತು. ನನ್ನ ಸಹೋದgನÀನ್ನೂ ಅವರು ಕೊಲೆ ಮಾಡಲು ಯತ್ನಿಸಿದರು ಎಂದು ರಾಮಚಂದ್ರ ಯಾದವ್ ಅವರ ಮಗ ತೇಜ್ ನಾರಾಯಣ್ ಮಾಧ್ಯಮಗಳಿಗೆ ಹೇಳಿದ್ದಾರೆ.

    2 ವರ್ಷಗಳ ಹಿಂದೆ ತನ್ನ ಸಹೋದರ ಚೌಕದಲ್ಲಿ ಪ್ರಧಾನಿ ಮೋದಿಯ ಫೋಟೋ ಹಾಕಿದ್ದಕ್ಕೆ ಅವರನ್ನೂ ಕೊಲೆ ಮಾಡಲಾಗಿತ್ತು ಎಂದು ತೇಜ್ ನಾರಾಯಣ್ ಹೇಳಿದ್ದಾರೆ. ದಾಳಿ ಮಾಡಿದವರು RJD(ರಾಷ್ಟ್ರೀಯ ಜನತಾ ದಳ) ಪಕ್ಷದ ಬೆಂಬಲಿಗರು ಎಂದು ಅವರು ತಿಳಿಸಿದ್ದಾರೆ.

    ದಾಳಿಗೆ ಪ್ರಚೋದನೆಯಾದ ಅಂಶವೇನು ಎಂಬುದಕ್ಕೆ ಉತ್ತರಿಸಿದ ಅವರು, RJDಯ ಭದ್ರಕೋಟೆಯಲ್ಲಿ ಮೋದಿ ಚೌಕವಿರುವ ಬಗ್ಗೆ ಅವರಿಗೆ ಅಸಮಾಧಾನವಿತ್ತು. ಉಪಚುನಾವಣೆಯಲ್ಲಿ ಆರ್‍ಜೆಡಿ ಗೆಲುವು ಸಾಧಿಸಿದ್ದು ಪ್ರಚೋದನೆಯಾಗಿದೆ ಎಂದು ಆರೋಪಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಭಂಗಾ ಪೊಲೀಸರು ಶುಕ್ರವಾರದಂದು ನಾಲ್ವರನ್ನ ಬಂಧಿಸಿದ್ದಾರೆ. 2016ರ ಡಿಸೆಂಬರ್ ನಲ್ಲಿ ರಾಮಚಂದ್ರ ಯಾದವ್ ಜಿಲ್ಲೆಯ ಬುಧಾಲಾ ಗ್ರಾಮದ ಚೌಕಕ್ಕೆ ಪ್ರಧಾನಿ ನರೇಂದ್ರ ಮೋದಿಯ ಹೆಸರನ್ನ ಇಟ್ಟಿದ್ದರು. ಆದ್ರೆ ಗುರುವಾರದಂದು ಆಯುಧಗಳನ್ನ ಹೊಂದಿದ್ದ ತಂಡ ಯಾದವ್ ಅವರಿಗೆ ಹೆಸರು ಬದಲಾಯಿಸುವಂತೆ ಹೇಳಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಆದ್ರೆ ಪೊಲೀಸರು ಈ ಬಗ್ಗೆ ಪ್ರತಿಕ್ರಿಯಿಸಿ, ಇದೊಂದು ಹಳೇ ಭೂವಿವಾದ. ಎಲ್ಲಾ ರೀತಿಯಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಈವರೆಗಿನ ತನಿಖೆಯ ಪ್ರಕಾರ ಉಪಚುನಾವಣೆ ಗೆಲುವಿಗೂ ಇದಕ್ಕೂ ಸಂಬಂಧ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

    ಇದಕ್ಕೆ ಯಾದವ್ ಒಪ್ಪದ್ದಕ್ಕೆ ಆಕ್ರೋಶಗೊಂಡ ತಂಡ ಅವರ ಶಿರಚ್ಛೇದನ ಮಾಡಿದೆ. ಈ ವೇಳೆ ತಂದೆಯನ್ನ ರಕ್ಷಿಸಲು ಬಂದ ಯಾದವ್ ಅವರ ಮಗ ಕಮಲ್ ದೇವ್ ಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಘಟನೆಯಿಂದಾಗಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೃತ್ಯದಲ್ಲಿ ಭಾಗಿಯಾದ ಇನ್ನಿತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.