Tag: ಬಿ.ಎಲ್ ಸಂತೋಷ್

  • ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

    ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

    ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (B.L Santhosh) ಹಾಡಿಹೊಗಳಿದ್ದಾರೆ.

    ಮಂಡ್ಯದಲ್ಲಿ ದಶಪಥ ಸಮಾವೇಶ ಹಾಗೂ ಮೋದಿ ರೋಡ್ ಶೋ ಸಕ್ಸಸ್ ಹಿನ್ನೆಲೆಯಲ್ಲಿ ಮಂಡ್ಯ ಬಿಜೆಪಿ ಪದಾಧಿಕಾರಿಗಳಿಗೆ ಹಾಗೂ ಮಂಡ್ಯ ಬಿಜೆಪಿ ಕಾರ್ಯಕರ್ತರಿಗೆ ಬಿ.ಎಲ್ ಸಂತೋಷ್ ಪತ್ರ ಬರೆದಿದ್ದಾರೆ. ಈ ಮೂಲಕ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

    ಮಂಡ್ಯದಲ್ಲಿ ನಡೆದ ಬೃಹತ್ ರೋಡ್ ಶೋ ಕಾರ್ಯಕ್ರಮದ ಸಂಪೂರ್ಣ ಯಶಸ್ಸು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಸಲ್ಲುತ್ತದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ಇತರ ಅಧಿಕಾರಿಗಳು ಹಗಲು ಇರುಳೆನ್ನದೆ ಶ್ರಮವಹಿಸಿ ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಮಾತೇನಲ್ಲ. 41 ವರ್ಷಗಳ ಬಳಿಕ ದೇಶದ ಪ್ರಧಾನಿಯೊಬ್ಬರು ಮಂಡ್ಯಕ್ಕೆ ಭೇಟಿ ನೀಡುವ ಅಪರೂಪದ ಸಂದರ್ಭ ಇದಾಗಿತ್ತು. ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಪರೂಪದ ವಿಷಯ. ಮಂಡ್ಯ ಬಿಜೆಪಿ ಘಟಕದ ಶಕ್ತಿ ಮತ್ತು ಅಲ್ಲಿಯ ಅವಕಾಶಗಳ ಬಗ್ಗೆ ಅನೇಕ ನಾಯಕರು ಸಂಶಯ ವ್ಯಕ್ತಪಡಿಸುತ್ತಾರೆ. ಬಹಳ ಅಪರೂಪವೇ ಎನ್ನುವಂತೆ ಬಿಜೆಪಿ ಕಛೇರಿಯ ಬಳಿ ನಾಯಕರ ಕಾರುಗಳು ನಿಲ್ಲುತ್ತವೆ ಎಂದಿದ್ದಾರೆ.

    ಹೆಚ್ಚಾಗಿ ಎಲ್ಲರ ಗಮನ ಮೈಸೂರು – ಕೊಡಗು ಅಥವಾ ಬೆಂಗಳೂರಿನ ಇನ್ನೊಂದು ಭಾಗದ ಕಡೆಗೆ ಇರುತ್ತದೆ. ಈ ಬಾರಿಯೂ ನಾಯಕರ ಒತ್ತಾಸೆ ಮೈಸೂರು ಅಥವಾ ಕೆಂಗೇರಿ ಕಡೆಗಿತ್ತು. ಅದಲ್ಲದೆ ಎರಡು ತಿಂಗಳು ಹಿಂದೆಯಷ್ಟೇ ಮಂಡ್ಯದಲ್ಲಿ ಗೃಹಸಚಿವ ಅಮಿತ್ ಶಾ ಅವರ ಅದ್ಧೂರಿ ಕಾರ್ಯಕ್ರಮ ನಡೆದಿತ್ತು. ಕೆಲವು ದಿನಗಳ ಹಿಂದೆ ವಿಜಯ ಸಂಕಲ್ಪ ಯಾತ್ರೆಯು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಹಾದುಹೋಗಿತ್ತು. ಆದರೆ ರಾಜ್ಯಪಕ್ಷದ ದೃಢನಿಲುವು, ಜಿಲ್ಲಾ ಘಟಕದ ದೃಢಸಂಕಲ್ಪವು ಈ ಕಾರ್ಯಕ್ರಮ ಮಂಡ್ಯದಲ್ಲಿಯೇ ನಡೆಯುವಂತೆ ಮಾಡಿತು. ಕಾರ್ಯಕ್ರಮಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿಗೆ ದೊರೆತ ಬೂಸ್ಟರ್ ಎಂದರೆ ಸಂಸದರಾದ ಸುಮಲತಾ ಅವರಿಂದ ದೊರೆತ ಬೆಂಬಲ. ಅವರು ಹೆಚ್ಚಿನ ಜನಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆನೀಡಿದ್ದರು ಎಂದಿದ್ದಾರೆ. ಇದನ್ನೂ ಓದಿ: Bengaluru Mysuru Expressway- ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ

    ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯದ ಜನಸಾಮಾನ್ಯರ ಮನ ಗೆದ್ದಿದ್ದಾರೆ. ಯೋಜನೆಗಳು ಜನರನ್ನು ತಲಪುವುದು ಎಂದಿಗೂ ಅರಿವಿಗೆ ಬಾರದೇ ಇರದು. ಕಾರ್ಯಕ್ರಮ ಮಾಡಲು ತೆಗೆದುಕೊಂಡ ಧೈರ್ಯವೂ ಸಾರ್ಥಕವೆನಿಸಿತು. ಇಂದು ಮಂಡ್ಯದ ಬಿಜೆಪಿಯಲ್ಲಿ ನಗುಮುಖಗಳು ಮಾತ್ರ ಇವೆ. ಈ ರೋಡ್ ಶೋ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಹೊಸ ತಿರುವನ್ನು ನೀಡಿದೆ. ಮುಂಬರುವ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಾರ್ಗದರ್ಶನ ಉಲ್ಲೇಖನಾರ್ಹವಾದದ್ದು. ಬಿ.ಎಸ್. ಯಡಿಯೂರಪ್ಪನವರು ತಮ್ಮ ತವರು ಜಿಲ್ಲೆಯಾದ ಮಂಡ್ಯಕ್ಕೆ ಸದಾ ಮಾರ್ಗದರ್ಶಕರಾಗಿದ್ದಾರೆ. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ದೊಡ್ಡಪಾತ್ರವನ್ನು ವಹಿಸಿದ ಪ್ರತಾಪ್ ಸಿಂಹ ಅವರು ಯಶಸ್ಸಿಗೆ ಸಾಥ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಮೆಗಾ ಶೋಗಾಗಿ ಮಂಡ್ಯ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರನ್ನು ನನ್ನ ಹೃದಯದಾಳದಿಂದ ಅಭಿನಂದಿಸುತ್ತೇನೆ. ಮುಂದಿನ ದಿನಗಳು ಇನ್ನಷ್ಟು ತಾಕತ್ತಿನದ್ದಾಗಿರಲಿದೆ. ಇನ್ನು ಮುಂದೆ ಹೆಚ್ಚಿನ ನಿರೀಕ್ಷೆಯ ಜೊತೆಜೊತೆಗೆ ವಿರೋಧವೂ ಇರಲಿದೆ. ಈ ಹಿಂದೆ ಇದ್ದ ಸಂದೇಹಗಳೆಲ್ಲವೂ ತಪ್ಪು ಎಂದು ಸಾಬೀತಾಗಿರುವುದರಿಂದ ಆರಂಭಿಸಿರುವ ಓಟವನ್ನು ಯಶಸ್ವಿಯಾಗಿ ಮುಗಿಸುವುದು ನಮ್ಮ ಕರ್ತವ್ಯವಾಗಿದೆ. ಸಂಘಟನೆಗೆ ಹೊಸ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರಗಳ ಗೆಲುವು ಸದಾ ವಿಶೇಷ ವಿಷಯವೇ. ಮಂಡ್ಯವನ್ನು ಗೆಲ್ಲುವುದು ಕರ್ನಾಟಕ ಬಿಜೆಪಿ ಬಹಳ ವಿಶೇಷವಾದದ್ದು. ನಮ್ಮ ಸಮಯವು ಈಗ ಬಂದಿದೆ. ಒಂದೇ ಮನಸ್ಸಿನಿಂದ ಗುರಿಯನ್ನು ಸಾಧಿಸೋಣ. ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್ ಎಂದು ಬಿ.ಎಲ್ ಸಂತೋಷ್ ಗುಣಗಾನ ಮಾಡಿದ್ದಾರೆ.

  • ಕಾರ್ಯಕಾರಿಣಿಯಲ್ಲಿ ಅಚ್ಚರಿ- ಬಿಎಸ್‍ವೈ, ಬಿಎಲ್‍ಎಸ್ ಕೈಕೈ ಹಿಡಿದು ಆತ್ಮೀಯ ಚರ್ಚೆ

    ಕಾರ್ಯಕಾರಿಣಿಯಲ್ಲಿ ಅಚ್ಚರಿ- ಬಿಎಸ್‍ವೈ, ಬಿಎಲ್‍ಎಸ್ ಕೈಕೈ ಹಿಡಿದು ಆತ್ಮೀಯ ಚರ್ಚೆ

    ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ (BJP Karyakarini) ಅಪರೂಪದ ಪ್ರಸಂಗಕ್ಕೆ ಸಾಕ್ಷಿಯಾಗಿತ್ತು. ಯಾಕಂದ್ರೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ (B S Yediyurappa), ಬಿ.ಎಲ್ ಸಂತೋಷ್ (B L Santhosh) ಜುಗಲ್ ಬಂದಿ ಕಂಡುಬಂತು.

    ಖುದ್ದು ಸಂತೋಷ್ ಕೈ ಹಿಡಿದು ಆತ್ಮೀಯವಾಗಿ ಬಿಎಸ್‍ವೈ ಮಾತಾಡಿಸಿದರು. ಬಿಎಸ್‍ವೈ-ಸಂತೋಷ್ ದೋಸ್ತಿ ಕಂಡು ಬಿಜೆಪಿ ಪಾಳಯದಲ್ಲಿ ಅಚ್ಚರಿ, ಕುತೂಹಲ, ದಿಗ್ಭ್ರಮೆ ಕೂಡ ಆಗಿದೆ. ಕಾರ್ಯಕರಿಣಿಗೆ ಯಡಿಯೂರಪ್ಪ ಬಂದಾಗ ಅವರನ್ನು ಕಂಡು ಬಿಎಲ್ ಸಂತೋಷ್ ಹಿಂದಿನ ಸಾಲಿಗೆ ಎದ್ದು ಹೊದ್ರು. ಇದನ್ನು ಗಮನಿಸಿದ ಬಿಎಸ್‍ವೈ ಸ್ವಲ್ಪ ಹೊತ್ತಿನ ಬಳಿಕ ಸಂತೋಷ್ ಕೈಹಿಡಿದು ನಗುತ್ತಾ ತಮ್ಮನ್ನು ಕಂಡು ಬೇರೆ ಕಡೆ ಹೋಗಿದ್ದೇಕೆಂದು ಕೇಳಿದ್ರು. ಈ ವೇಳೆ ಬಿಎಸ್‍ವೈಗೆ ಕೈಮುಗಿದು ಬಿಎಲ್ ಸಂತೋಷ್ ಉತ್ತರಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

    ಇದರ ಮಧ್ಯೆ ಬಿಜೆಪಿಯಲ್ಲಿ ಚರ್ಚೆ ಶುರುವಾಗಿರೋದು ಏನಂದ್ರೆ ಯಡಿಯೂರಪ್ಪ ಅವರು ಪುತ್ರನಿಗೆ, ಆಪ್ತರಿಗೆ ಟಿಕೆಟ್ ಕೊಡಿಸುವ ಅನಿವಾರ್ಯತೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‍ಗೆ ಹತ್ತಿರ ಇರುವ ಸಂತೋಷ್ ಜೊತೆ ವಿರಸ ಮರೆತು ಆತ್ಮೀಯತೆ ಬೆಳೆಸುವ ಕಸರತ್ತಾ..? ತಮ್ಮವರಿಗಾಗಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸಾ..? ಅಥವಾ ಒಗ್ಗಟ್ಟಿನ ಸಂದೇಶವಾ..? ಬಿಎಸ್‍ವೈ ಹಿಂದಿನ ಲೆಕ್ಕಾಚಾರ ಏನು..? ಅನ್ನೋದು ಸದ್ಯ ಬಿಜೆಪಿಯಲ್ಲಿ ಚರ್ಚೆ ಆಗ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕೆ ಇಳಿದ ಬಿ.ಎಲ್‌ ಸಂತೋಷ್‌

    ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕೆ ಇಳಿದ ಬಿ.ಎಲ್‌ ಸಂತೋಷ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ನಾಟಕಕ್ಕೂ ನಿಮಗೂ ಸಂಬಂಧ ಏನು? – ಬಿ.ಎಲ್.ಸಂತೋಷ್ ವಿರುದ್ಧ ಹೆಚ್‌ಡಿಕೆ ಕಿಡಿ

    ಕರ್ನಾಟಕಕ್ಕೂ ನಿಮಗೂ ಸಂಬಂಧ ಏನು? – ಬಿ.ಎಲ್.ಸಂತೋಷ್ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ (H.D.Devegowda) ಕುಟುಂಬ, ಜಾತ್ಯತೀತ ಜನತಾದಳ (JDS) ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಆಕ್ರೋಶ ವ್ಯಕ್ತಪಡಿಸಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ. ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು ಎಂದು ಸಂತೋಷ್ ಅವರನ್ನು ಏಕವಚನದಲ್ಲೇ ಪ್ರಶ್ನಿಸಿದರು. ಇದನ್ನೂ ಓದಿ: ಬೆರಕೆ ಅಂದ್ರೆ ಏನು? ಆ ಸಿ.ಟಿ ರವಿಗೆ ಸದ್ಬುದ್ಧಿ ಇಲ್ಲ – ಸಿದ್ದರಾಮಯ್ಯ

    ಮಿಸ್ಟರ್ ಸಂತೋಷ್, ಲೂಟಿ ದರೋಡೆ ಮಾಡಿ ಕರ್ನಾಟಕ ಹಣವನ್ನ ಕೊಂಡೊಯ್ದಿದ್ದೀರಾ. ಸಂತೋಷವಾಗಿದ್ದೀರಂತೆ ಲೂಟಿ ಹೊಡೆದು. ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಅಪರೇಶನ್ ಕಮಲ ಮಾಡಿ ನಮ್ಮ‌ ಸರ್ಕಾರ ತೆಗೆದಿರಿ ಎಂದು ಸಂತೋಷ್ ವಿರುದ್ಧ ಕಿಡಿಕಾರಿದರು.

    ಪ್ರಧಾನಿಗಳ ಬಳಿ ಕೇಳಿ, ನಮ್ಮ ಕುಟುಂಬ ಏನು ಅಂತ. ನಮ್ಮ ಮನೆತನ, ಮಾಜಿ ಪ್ರಧಾನಿಗಳೇ ಹೇಳ್ತಾರೆ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಿಮ್ಮದು 40% ಸರ್ಕಾರ. ನಮ್ಮ ಬಗ್ಗೆ ಮಾತಾಡಲು ನೈತಿಕತೆ ನಿಮಗೆ ಇಲ್ಲ. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು. ನಾನು ಸರ್ಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡ್ಬೇಡಿ ಮಿಸ್ಟರ್ ಅಶೋಕ್, ಮಿಸ್ಟರ್ ಸಂತೋಷ್ ಎಂದು ಸಂತೋಷ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ

    ಬಿಜೆಪಿಯವರು ದರೋಡೆಕೋರರು, ಲೂಟಿಕೋರರು. ಇಂಥ ಬಿಜೆಪಿಯವರ ಜೊತೆ ಸೇರಿ ನಾನು ಸರ್ಕಾರ ನಡೆಸುವುದಕ್ಕೆ ಆಗುತ್ತಾ? ಪಂಚರತ್ನ ಯೋಜನೆಗಳನ್ನು ಜಾರಿ ಮಾಡುವುದಕ್ಕೆ ಆಗುತ್ತಾ? 2023ರ ಚುನಾವಣೆ ನಂತರ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಆಗ ಬಿಜೆಪಿಯವರು ನಮ್ಮ ಮುಂದೆ ಅರ್ಜಿ ಹಿಡಿದು ಬರುತ್ತಾರೆ ನೋಡೋಣ. ಸಮಾಜವನ್ನು ಒಡೆಯುವ, ಜನರ ನಡುವೆ ದ್ವೇಷ ಭಿತ್ತುವ ಇಂಥವರ ಜತೆ ಸರ್ಕಾರ ರಚನೆ ಮಾಡಲು ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದರು.

    ಸಚಿವ ಅಶೋಕ್ ಮೇಲೆ ಹರಿಹಾಯ್ದ ಕುಮಾರಸ್ವಾಮಿ ಅವರು, ಬಾಯಿಗೆ ಬಂದ ಹಾಗೆ ಮಾತನಾಡಬೇಡಿ. ಚುನಾವಣೆ ಆದ ಮೇಲೆ ಮಾತನಾಡಿ ಎಂದು ಟಾಂಗ್ ಕೊಟ್ಟರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಸದಸ್ಯ ಹೆಚ್.ಎಂ.ರಮೇಶಗೌಡ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌?

    Live Tv
    [brid partner=56869869 player=32851 video=960834 autoplay=true]

  • ನಮ್ಮ ದೇಶದಲ್ಲಿ ಯಾವುದರಿಂದ್ಲೂ ಧರ್ಮವನ್ನು ಹೊರಗೆ ತೆಗೆಯೋಕೆ ಆಗಲ್ಲ: ಬಿ.ಎಲ್ ಸಂತೋಷ್

    ನಮ್ಮ ದೇಶದಲ್ಲಿ ಯಾವುದರಿಂದ್ಲೂ ಧರ್ಮವನ್ನು ಹೊರಗೆ ತೆಗೆಯೋಕೆ ಆಗಲ್ಲ: ಬಿ.ಎಲ್ ಸಂತೋಷ್

    ಬೆಳಗಾವಿ: ನಮ್ಮ ದೇಶದಲ್ಲಿ ಯಾವುದರಿಂದಲೂ ಧರ್ಮವನ್ನು ಹೊರಗೆ ತೆಗೆಯೋಕೆ ಯಾರೂ ಪ್ರಯತ್ನಪಟ್ಟರೂ ಆಗಲ್ಲ. ನಮ್ಮ ದೇಶದಲ್ಲಿ ಸಾಮಾಜಿಕ ಜನಜೀವನದಿಂದ ಆಡಳಿತ ವ್ಯವಸ್ಥೆಯಿಂದ ಧರ್ಮ ಹೊರ ತೆಗೆಯೋಕೆ ಯಾರು ಪ್ರಯತ್ನಪಟ್ಟರೂ ಆಗಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (B.L Santhosh) ಹೇಳಿದರು.

    ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ಕನ್ನೇರಿ ಮಠ ಹತ್ತಾರು ವಿಶ್ವವಿದ್ಯಾಲಯ, ನೂರಾರು ಸಂಘ ಸಂಸ್ಥೆಗಳ ಕೆಲಸ ಮಾಡ್ತಿದೆ. ಒಂದು ದೊಡ್ಡದಾದ ಸರ್ಕಾರ ಮಾಡಬೇಕಾದ ಕೆಲಸ ಒಂದು ಸೀಮಿತವಾದ ಜಾಗದಲ್ಲಿ ಮಾಡ್ತಿರೋದು ಹೆಮ್ಮೆ ಅನಿಸುತ್ತದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಪೂಜ್ಯ ಶ್ರೀಗಳು ತಮ್ಮ ಆಧ್ಯಾತ್ಮ ಶಕ್ತಿಯಿಂದ ಸಾಮಾಜಿಕ ಮನೋಭಾವ ಕಾರಣಕ್ಕೆ ಮಾಡಿ ತೋರಿಸುತ್ತಿದ್ದಾರೆ. ಇಲ್ಲಿ ಏನಿದೆ ಅಂತಾ ಪಟ್ಟಿ ಮಾಡುವುದಕ್ಕಿಂತ ಏನಿಲ್ಲ ಅಂತಾ ಪಟ್ಟಿ ಮಾಡಿದ್ರೆ ಬೇಗ ಮುಗಿದು ಹೋಗಿ ಬಿಡುತ್ತದೆ ಎಂದರು.

    ಗೋಶಾಲೆ ಕೇವಲ ಪೂಜೆಗೆ ಸೀಮಿತವಾಗಿಲ್ಲ, ಆರ್ಥಿಕತೆಗೆ ಗೋಶಾಲೆ ಹೇಗೆ ಬೆಳೆಸಬಹುದು ಎಂಬ ವ್ಯವಹಾರಿಕ ಪ್ರಜ್ಞೆ ಕೂಡ ಇದೆ. ಕೃಷಿ ವಿಜ್ಞಾನ ಕೇಂದ್ರವಿದೆ, ಭಾರತದ ಆಧ್ಯಾತ್ಮಿಕ ವಿಜ್ಞಾನ ಪರಂಪರೆಯನ್ನು ತೋರಿಸುವ ಆಲಯಗಳಿವೆ. ಶ್ರೀಗಳ ಸಾಮರ್ಥ್ಯದಿಂದ ಸುತ್ತಮುತ್ತಲಿನ 250ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಪ್ರವೇಶಾತಿ ಹಾಜರಾತಿ ಖಾಸಗಿ ಶಾಲೆಗಳಿಗಿಂತ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಸತ್ವ ಮತ್ತು ಶಾಸ್ತ್ರ ಧರ್ಮ ಮತ್ತು ರಾಜಪರಂಪರೆ ಈ ಎರಡೂ ಒಟ್ಟಿಗೆ ಸೇರಿದಾಗ ತುಂಬಾ ದೊಡ್ಡ ದೊಡ್ಡ ಬದಲಾವಣೆ ನಮ್ಮ ದೇಶದಲ್ಲಿ ಆಗಿವೆ. ಒಂದಿಷ್ಟು ವಿಶ್ವಾಮಿತ್ರರ ಜೊತೆ ರಾಮ-ಲಕ್ಷ್ಮಣರು ಕೈ ಜೋಡಿಸಿದಾಗ ಈ ದೇಶದಲ್ಲಿ ರಾವಣನ ಸಂಹಾರ ಆಗುತ್ತೆ, ರಾಮಾಯಣ (Ramayana) ಅಂತಾ ದೊಡ್ಡ ಕಥೆಗಳು ಸಿಗುತ್ತದೆ.

    ಸಮರ್ಥ ರಾಮದಾಸರ ಮಾರ್ಗದರ್ಶನ ಶಿವಾಜಿಗೆ ಸಿಕ್ಕಿದಾಗ ಶಿವಾಜಿ ಮಹಾರಾಜ ರಾಜ ಮಾತ್ರ ಆಗದೇ ಹಿಂದೂ ಸಾಮ್ರಾಜ್ಯ ಸ್ಥಾಪನೆ ಮಾಡ್ತಾರೆ ಅದಕ್ಕೆ ಸಮರ್ಥ ರಾಮದಾಸರು ಪ್ರೇರಣೆ ಆಗ್ತಾರೆ. ಹಾಗೆಯೇ ಹಕ್ಕ ಬುಕ್ಕರಿಗೆ ಸ್ವಾಮಿ ವಿದ್ಯಾರಣ್ಯರ ಮಾರ್ಗದರ್ಶನ ಸಿಕ್ಕಿದಾಗ ಆ ಕಾಲದಲ್ಲಿ ನವಾಬರ, ನಿಜಾಮರ ಅತ್ಯಾಚಾರ ದೌರ್ಜನ್ಯ ತುಂಬಿದ ಆಡಳಿತದ ವಿರುದ್ಧ ವಿಜಯ ನಗರ (Vijayanagar) ಸಾಮ್ರಾಜ್ಯ ಪ್ರಾರಂಭ ಮಾಡ್ತಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರದಲ್ಲಿ ವಿಸ್ತರಿಸಿದ ವಿಜಯ ನಗರ ಸಾಮ್ರಾಜ್ಯದಲ್ಲಿ ಆಡಳಿತ ಹೇಗಿರಬೇಕು, ಸಂಸ್ಕೃತಿ ಹೇಗೆ ಅರಳಬೇಕು? ಸಾಹಿತ್ಯ ಹೇಗೆ ನಿರ್ಮಾಣ ಆಗಬೇಕು? ಧರ್ಮಕ್ಕೆ ರಾಜ್ಯ ಆಧಾರವಾಗಬೇಕು ಎಂಬುದಕ್ಕೆ ವಿಜಯ ನಗರ ಸಾಮ್ರಾಜ್ಯ ಬಹುದೊಡ್ಡ ಉದಾಹರಣೆ ಎಂದರು. ಇದನ್ನೂ ಓದಿ: ಬಿಜೆಪಿ ಸುಳ್ಳಿನ ಫ್ಯಾಕ್ಟರಿ, ಮೋದಿ ಒಳ್ಳೆಯ ನಾಟಕವಾಡುತ್ತಾರೆ: ಸಿದ್ದರಾಮಯ್ಯ

    ಈ ದೇಶದಲ್ಲಿ ಧರ್ಮ ಆಡಳಿತದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದೆ. ಮಧ್ಯದಲ್ಲಿ ಯಾರದ್ದೋ ಕೆಲವರ ಮಹತ್ವಾಕಾಂಕ್ಷೆಗೆ ಇನ್ಯಾರದೋ ಕುತಂತ್ರಗಳಿಗೆ ನಮ್ಮ ದೇಶದಲ್ಲಿ ಜಾತ್ಯಾತೀತತೆ ಸೆಕ್ಯುಲರಿಸಮ್ ಭ್ರಮೆಯನ್ನು ನಮ್ಮೆಲ್ಲರ ಮನಸ್ಸಿನಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಪ್ರಯತ್ನವನ್ನು ಕೆಲ ರಾಜಕೀಯ ಶಕ್ತಿಗಳು ಮಾಡ್ತಾವೆ.ಕೆಲ ಬುದ್ಧಿ ಜೀವಿಗಳು ಮಾಡ್ತೀರ್ತಾರೆ. ನಿಜವಾದ ಅರ್ಥದಲ್ಲಿ ಆ ಜಾತ್ಯಾತೀತತೆ, ಸೆಕ್ಯುಲರಿಸಮ್‍ನ್ನು ಅಳವಡಿಸಿಕೊಂಡರೆ ಯಾವುದು ಏನೂ ಅಪಚಾರ ಇಲ್ಲ. ಎಲ್ಲರಿಗೂ ಒಂದೇ ತರಹವಾದ ಭಾವನೆ ಇರುತ್ತದೆ. ಆದರೆ ಜಾತ್ಯಾತೀತತೆ, ಸೆಕ್ಯುಲರಿಸಮ್ (Secularism) ಹೆಸರಲ್ಲಿ ನಮ್ಮ ಸಮಾಜದಲ್ಲಿ ಇರುವ ಒಳ್ಳೆಯ ಅಂಶಗಳನ್ನು ತೆಗೆದು ಹಾಕ್ತೀವಿ ಅಂತಾ ಪ್ರಯತ್ನ ಪಟ್ಟಾಗ ಸಮಾಜ ತನ್ನದೇ ರೀತಿ ವಿರೋಧಿಸುತ್ತದೆ. ಈ ದೇಶದಲ್ಲಿ ಮನುಷ್ಯನ ಬದುಕಿನಲ್ಲಿ ಧರ್ಮವೇ ಆಧಾರ. ಅಧಿಕಾರದ ನಿರ್ವಹಣೆಗೂ ಧರ್ಮವೇ ಆಧಾರ. ಶಿಕ್ಷಣ, ಸಂಸ್ಕಾರ ವ್ಯವಸ್ಥೆಗೂ ಧರ್ಮವೇ ಆಧಾರ ಎಂದು ಹೇಳಿದರು.

    ಕರ್ನಾಟಕದಲ್ಲಿ ವಿಜಯದಶಮಿ ದಿನ ಬನ್ನಿ ಮುಡಿತಾರೆ. ಹತ್ತಾರು ತಾಲೂಕಿನಲ್ಲಿ ಬನ್ನಿ ಮುಡಿಯುವ ಮೊದಲನೆಯ ವ್ಯಕ್ತಿ ಅಲ್ಲಿಯ ತಹಶೀಲ್ದಾರ್. ಕನ್ಯಾಕುಮಾರಿಯಲ್ಲಿ ನವರಾತ್ರಿ ದಿನ ಮೊದಲನೇಯ ಪೂಜೆಗೆ ನಿಂತುಕೊಳ್ಳುವುದು ತಿರುವನಂತಪುರದ ಎಸ್ ಪಿ ಡಿಸಿ ಮುಸಲ್ಮಾನ, ಕ್ರಿಶ್ಚಿಯನ್, ಹಿಂದೂ ಆಗಿರಲಿ ಮೊದಲನೆಯ ಪೂಜೆಗೆ ಬೇಕಾದ ವಸ್ತು ತೆಗೆದುಕೊಂಡು ಹೋಗುತ್ತಾರೆ. ನಮ್ಮ ದೇಶದಲ್ಲಿ ಯಾವುದರಿಂದಲೂ ಧರ್ಮವನ್ನು ಹೊರಗೆ ತೆಗೆಯೋಕೆ ಯಾರು ಪ್ರಯತ್ನ ಪಟ್ಟರೂ ಆಗಲ್ಲ. ನಮ್ಮ ದೇಶದಲ್ಲಿ ಸಾಮಾಜಿಕ ಜನಜೀವನದಿಂದ, ಆಡಳಿತ ವ್ಯವಸ್ಥೆಯಿಂದ ಧರ್ಮ ಹೊರ ತಗೆಯೋಕೆ ಯಾರು ಪ್ರಯತ್ನ ಪಟ್ಟರೂ ಆಗಲ್ಲ. ಯಾಕಂದ್ರೆ ಈ ಮಣ್ಣಿನ ಗುಣ ಅದು. ನಮ್ಮ ದೇಶದಲ್ಲಿ ಧರ್ಮವನ್ನು ದೂರ ಇಡಬೇಕು ಎಂಬ ಭ್ರಮೆ ಇದೆ. ಧರ್ಮವನ್ನು ದೂರ ಇಟ್ರೆ ಅಧರ್ಮ ಬೆಳೆಯುತ್ತದೆ ಎಂದು ಬಿ.ಎಲ್.ಸಂತೋಷ್ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ಹುಬ್ಬಳ್ಳಿ: ದೇಶಕ್ಕೆ ಗಾಂಧೀಜಿ (Gandhiji) ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿದ್ದಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ವೀರ ಸಾವರ್ಕರ್ (Veer Savarkar) ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ (BL Santosh)  ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಸ್ವರಾಜ್-75 ಪುಸ್ತಕ ಬಿಡುಗಡೆ ಸಮಾರಂಭದ ಭಾಷಣದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಒಬ್ಬರೇ ಹೋರಾಟವನ್ನು ಮಾಡಿಲ್ಲ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ಸ್ವಾತಂತ್ರ್ಯ ಹೋರಾಟ ರೂಪುಗೊಂಡಿತ್ತು. ಅನೇಕ ಮಹನೀಯರು ತ್ಯಾಗ-ಬಲಿದಾನದಿಂದ ಸ್ವಾತಂತ್ರ್ಯ ಬಂದದ್ದು. ಆದರೆ ಕೆಲವು ಇತಿಹಾಸಕಾರರು ಸತ್ಯವನ್ನು ಹೇಳಲೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಪೋಸ್ಟ್‌ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

    ನೇತಾಜಿ ಸುಭಾಷ್ ಚಂದ್ರ ಬೋಸ್ ಪುತ್ಥಳಿ ಸ್ಥಾಪಿಸಲು 2014ನೇ ಇಸವಿ ಬರಬೇಕಾಯಿತು. ಈ ದೇಶ ವಾಮ ಪಂಥೀಯರಿಂದಲೇ ಹಾಳಾಗಿದ್ದು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: BJP ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣರ ನಡುವೆ ಜಗಳ ತಂದಿಡುತ್ತಿದೆ: ಸುರ್ಜೇವಾಲಾ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಯೋಗ್ಯತೆ ಇಲ್ಲದವರು ಈಗ ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ – ಗುಡುಗಿದ ಬಿ.ಎಲ್ ಸಂತೋಷ್

    ಯೋಗ್ಯತೆ ಇಲ್ಲದವರು ಈಗ ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ – ಗುಡುಗಿದ ಬಿ.ಎಲ್ ಸಂತೋಷ್

    ಚಿಕ್ಕಬಳ್ಳಾಪುರ: ಯೋಗ್ಯತೆ ಇಲ್ಲದವರು ವೀರ ಸಾವರ್ಕರ್ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಸಾರ್ವಕರು ವಿರೋಧಿಗಳ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಗುಡುಗಿದ್ದಾರೆ.

    ಸಮೃದ್ದ ಭಾರತ ಎನ್‍ಜಿಒ ಸಂಸ್ಥೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ರೈಡ್‌ ಫಾರ್ ನೇಷನ್ ಎಂಬ ಬೈಕ್ ರ‍್ಯಾಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬಿ.ಎಲ್ ಸಂತೋಷ್ ಭಾಗಿಯಾಗಿದ್ದರು. ಬೈಕ್ ರೈಡರ್ಸ್ ಉದ್ದೇಶಿಸಿ ಭಾಷಣ ಮಾಡಿದ ಬಿ.ಎಲ್ ಸಂತೋಷ್ ಸಾವರ್ಕರ್ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನೃತ್ಯದಲ್ಲಿ ಸಾವರ್ಕರ್‌ ಫೋಟೋ – ಮುಖ್ಯೋಪಾಧ್ಯಾಯರನ್ನು ಕರೆಸಿ ಕ್ಷಮೆ ಹೇಳಿಸಿದ ಪಂಚಾಯತ್‌

    ಸಾವರ್ಕರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಯಾರು ಹೆಸರು ಹೇಳಲು ಯೋಗ್ಯತೆ ಇಲ್ಲದಂತಹ ವಂಶದಲ್ಲಿ ಹುಟ್ಟಿದ್ದಾರೋ ಅಂತವರು ಸಾವರ್ಕರ್ ಬಗ್ಗೆ ಮಾತನಾಡುತ್ತಾರೆ. ಹಿಂದಿನ ನಾಲ್ಕು ತಲೆಮಾರು ಮುಂದಿನ 25 ತಲೆಮಾರಿನ ಜನರಿಗೆ ಸಾವರ್ಕರ್ ಬಗ್ಗೆ ಮಾತನಾಡಲು ಯೋಗ್ಯತೆ ಇರಲ್ಲ. ಅಂತವರು ಸಾವರ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ – ಯುವಕನಿಗೆ ಚಾಕು ಇರಿತ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಹೊಸದಾಗಿ ನಾಯಕತ್ವ ಬಂದೇ ಬರುತ್ತದೆ: ರಘುಪತಿ ಭಟ್

    ರಾಜ್ಯದಲ್ಲಿ ಹೊಸದಾಗಿ ನಾಯಕತ್ವ ಬಂದೇ ಬರುತ್ತದೆ: ರಘುಪತಿ ಭಟ್

    ಉಡುಪಿ: ಬಿಜೆಪಿಯಲ್ಲಿ ಹೊಸಬರಿಗೆ ಅವಕಾಶ ಹೊಸತಲ್ಲ. ಹೊಸಬರು ಬಂದು ಹೊಸ ನಾಯಕತ್ವ ಸೃಷ್ಟಿಯಾಗುತ್ತದೆ. ರಾಜ್ಯದಲ್ಲಿ ಹೊಸದಾಗಿ ನಾಯಕತ್ವ ಬಂದೇ ಬರುತ್ತದೆ. ಬಿಜೆಪಿ ಪಕ್ಷ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಾನು ಮಾನಸಿಕವಾಗಿ ತಯಾರಾಗಿದ್ದೇನೆ ಎಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಬಗ್ಗೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿದ್ದಾರೆ.

    ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ರಾಜ್ಯ ಭೇಟಿ ಬಳಿಕ ಹೊಸತನದ ಘೋಷಣೆಯನ್ನು ಮಾಡಿ ಹೋಗಿದ್ದಾರೆ. ಮೈಸೂರಿನ ಕಾರ್ಯಕ್ರಮದ ನಂತರ ರಾಜ್ಯ ಬಿಜೆಪಿಯಲ್ಲಿ ಹೊಸತನ ಬಹಳ ಚರ್ಚೆಗಳನ್ನು ಹುಟ್ಟುಹಾಕಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ರಘುಪತಿ ಭಟ್, ನನ್ನನ್ನು ಬಿಟ್ಟು ಬೇರೆಯವರಿಗೆ ಅವಕಾಶ ಕೊಟ್ಟರೆ ಆ ನಿರ್ಧಾರವನ್ನು ಸ್ವೀಕರಿಸಿ ಅಭ್ಯರ್ಥಿಗಾಗಿ ಕೆಲಸ ಮಾಡುತ್ತೇನೆ. 2013ರಲ್ಲಿ ಮತ್ತೊಬ್ಬ ಅಭ್ಯರ್ಥಿ ಆಯ್ಕೆಯಾದಾಗ ನಾನು ಅವರಿಗಿಂತ ಹೆಚ್ಚು ಕೆಲಸ ಮಾಡಿದ್ದೇನೆ. ವೈಯಕ್ತಿಕವಾಗಿ ಅಲ್ಲ, ಪಕ್ಷಕ್ಕೋಸ್ಕರ ಕೆಲಸ ಮಾಡುವ ಸ್ವಭಾವವನ್ನು ಇಟ್ಟುಕೊಂಡಿದ್ದೇನೆ ಎಂದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರು ಸಾವು

    ಮಾನಸಿಕವಾಗಿ ಸಿದ್ಧರಾಗಿ:
    ಪಕ್ಷದ ಹಿರಿಯರು ತೀರ್ಮಾನ ಮಾಡಿದಂತೆ ಬಿಜೆಪಿಯಲ್ಲಿ ನಡೆಯುತ್ತದೆ. ಪಕ್ಷ ತೀರ್ಮಾನಿಸಿದಂತೆ ಟಿಕೆಟ್ ಕೊಡಲಾಗುತ್ತದೆ. ಮಾನಸಿಕವಾಗಿ ಸಿದ್ಧವಿರಬೇಕು. ನಮ್ಮ ಪಕ್ಷದಲ್ಲಿ ಯಾವುದನ್ನೂ ಬೇಕು ಅಂತ ಕೇಳಲಿಕ್ಕೆ ಇಲ್ಲ. ಬೇಡ ಅಂತ ಹೇಳಲಿಕ್ಕೂ ಇಲ್ಲ. ನಾನು ಹೊಸಬನೂ ಅಲ್ಲ ಹಳಬನೂ ಅಲ್ಲ. ನಾನು ಮಧ್ಯದಲ್ಲಿ ಇರುವ ಶಾಸಕ ನನಗಿಂತ ಬಹಳಷ್ಟು ಹಳೆಯ ಶಾಸಕರಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಹಣ ಇದ್ದವರು ಮಾತ್ರ ಸಿಎಂ ಆಗ್ತಾರೆ ಅನ್ನೋದು ಇತಿಹಾಸದಲ್ಲೇ ಇಲ್ಲ – ಯತ್ನಾಳ್‍ಗೆ ಶ್ರೀರಾಮುಲು ತಿರುಗೇಟು

    ಬಿಜೆಪಿಯಲ್ಲಿ 5-6 ಬಾರಿ ಗೆದ್ದವರಿದ್ದಾರೆ. ನಮ್ಮಲ್ಲಿ ಯಾವತ್ತು ಹೊಸತನ ಇದ್ದೇ ಇದೆ. ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಇದೆ ಆಂತರಿಕ ಚರ್ಚೆ ನಡೆಯುತ್ತದೆ. ಜನಾಭಿಪ್ರಾಯ ಸಂಗ್ರಹಿಸುವ ವ್ಯವಸ್ಥೆಗಳು ನಮ್ಮ ಪಕ್ಷದಲ್ಲಿ ಇದೆ. ಕಾರ್ಯಕರ್ತರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವ ಪದ್ಧತಿ ಬಿಜೆಪಿಯಲ್ಲಿದೆ. ಜನರ ಜೊತೆ ಇದ್ದ ಶಾಸಕರಿಗೆ ಸಮಸ್ಯೆ ಆಗುವುದಿಲ್ಲ. ಜನರಿಂದ ದೂರ ಇದ್ದವರಿಗೆ ಸಮಸ್ಯೆಯಾಗಬಹುದು. 2004ರಲ್ಲಿ ಹೊಸಬನಾಗಿದ್ದ ನನಗೆ ಅವಕಾಶ ಕೊಟ್ಟರು ಎಂದು ಅಭಿಪ್ರಾಯಪಟ್ಟರು.

  • ಬಿಜೆಪಿ ಪಕ್ಷಕ್ಕೆ ಬೂತ್ ಮಟ್ಟದಲ್ಲೇ ರೀಚಾರ್ಜ್: ಸುನಿಲ್ ಕುಮಾರ್

    ಬಿಜೆಪಿ ಪಕ್ಷಕ್ಕೆ ಬೂತ್ ಮಟ್ಟದಲ್ಲೇ ರೀಚಾರ್ಜ್: ಸುನಿಲ್ ಕುಮಾರ್

    ಉಡುಪಿ: ಕಾಂಗ್ರೆಸ್ ರೀತಿಯಲ್ಲಿ ನಾವು ಒಂದೇ ಮರಕ್ಕೆ ಜೋತು ಬೀಳುವವರಲ್ಲ. ನಮ್ಮ ಪಕ್ಷದ ರಿಚಾರ್ಜ್ ನಮ್ಮ ಬೂತ್‍ಗಳಲ್ಲಿ ನಡೆಯುತ್ತದೆ. ಪಕ್ಷದ ರೀ ಚಾರ್ಜಿಂಗ್ ಸೆಂಟರ್ ನಮ್ಮ ಕಾರ್ಯಕರ್ತರ ಕೈಯಲ್ಲಿದೆ ಎಂದು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದರು.

    ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಭಾರತೀಯ ಜನತಾ ಪಕ್ಷ ಈಗಾಗಲೇ ಚುನಾವಣಾ ಸಿದ್ಧತೆಗೆ ಸಂಘಟನಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಕೇಂದ್ರ ಬಿಜೆಪಿಯ ಟಾಪ್ ನಾಯಕರಲ್ಲಿ ಒಬ್ಬರಾದ ಬಿ.ಎಲ್ ಸಂತೋಷ್ ಮೈಸೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸತನದ ಹೇಳಿಕೆ ಕೊಟ್ಟಿದ್ದಾರೆ. ಪಕ್ಷದಲ್ಲಿ ಹೊಸತನಕ್ಕೆ ಆದ್ಯತೆ ಎಂಬ ವಿಚಾರ ರಾಜ್ಯ ಬಿಜೆಪಿಯಲ್ಲಿ ಬಿಸಿ ಚರ್ಚೆಗೆ ಕಾರಣವಾಗಿದೆ. ಹಿರಿಯರು ಚಿಂತೆಗೆ ಬಿದ್ದಿದ್ದು, ಹೊಸಬರು ಯಾರು, ಯುವಕರು ಯಾರು ಎಂಬ ಪರಾಮರ್ಶೆ ಶುರುವಾಗಿದೆ. ಈ ವಿಚಾರಕ್ಕೆ ಕುರಿತಂತೆ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುನಿಲ್ ಕುಮಾರ್, ಹೊಸತನ ನಮ್ಮ ಸಂಘಟನೆಯ ಮೂಲ ಸ್ವರೂಪದಲ್ಲೇ ಇದೆ. ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಹೊಸತನ ಇದೆ. ಕಾರ್ಯಕರ್ತರ ಹೊಸತನವನ್ನು ಸಂಘಟನೆಗೆ ಸಮಾಜಕ್ಕೆ ಪೂರಕವಾಗಿ ಬಳಸುತ್ತೇವೆ. ನಮ್ಮ ಸಂಘಟನೆಗಳಲ್ಲಿ ಇರುವಷ್ಟು ಹೊಸತನ ಬೇರೆ ಯಾವ ಸಂಘಟನೆಯಲ್ಲೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ನಮ್ಮಲ್ಲಿ ಹೊಸತನಗಳಿಗೆ ಅವಕಾಶವನ್ನೂ ಕೊಡುತ್ತಾರೆ. ಹೊಸತನಕ್ಕೆ ಅವಕಾಶ ನಿರಂತರವಾದ ಪ್ರಕ್ರಿಯೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

    ಬೂತ್ ಮತ್ತು ಕಾರ್ಯಕರ್ತರನ್ನು ರಿಚಾರ್ಜ್ ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ. ಯಾರ ಹೇಳಿಕೆಗಳ ಮೂಲಕ ನಾವು ರೀಚಾರ್ಜ್ ಆಗುವುದಿಲ್ಲ. ನಮ್ಮ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರೀಚಾರ್ಜ್ ಆಗುತ್ತಾರೆ. ಹಳೇಬೇರು ಹೊಸಚಿಗುರು ಇದ್ದರೇನೇ ಒಳ್ಳೆಯದು ಎನ್ನುವ ಗಾದೆ ಇದೆಯಲ್ಲ ಹಾಗೆ ಬಿಜೆಪಿ ಇದೆ ಎನ್ನುತ್ತಾ, ಕಾಂಗ್ರೆಸ್ ಪಕ್ಷದ ಕಾಲೆಳೆದರು. ಇದನ್ನೂ ಓದಿ: ಅಮಿತ್ ಶಾರೊಂದಿಗೆ ಸಚಿವರಿಗೂ ಊಟಕ್ಕೆ ಆಹ್ವಾನ – ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ

  • ಬಿಜೆಪಿ ಕಾರ್ಯಕರ್ತರೂ ಈ ಸರ್ಕಾರವನ್ನು ಮೆಚ್ಚುವುದಿಲ್ಲ: ಎಚ್.ವಿಶ್ವನಾಥ್

    ಬಿಜೆಪಿ ಕಾರ್ಯಕರ್ತರೂ ಈ ಸರ್ಕಾರವನ್ನು ಮೆಚ್ಚುವುದಿಲ್ಲ: ಎಚ್.ವಿಶ್ವನಾಥ್

    ಮೈಸೂರು: ಪ್ರತಿದಿನ ಒಂದಲ್ಲ ಒಂದು ಹಗರಣಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ. ಈ ಸರ್ಕಾರವನ್ನು ಯಾರು ತಾನೇ ಮೆಚ್ಚೆಕೊಳ್ತಾರೆ. ಬಿಜೆಪಿ ಕಾರ್ಯಕರ್ತರೂ ಮೆಚ್ಚುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಡಳಿತ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದರು.

    ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನಕ್ಕೊಂದು ಹಗರಣ ಬಯಲಾಗುತ್ತಿರುವಾಗ ಈ ಸರ್ಕಾರಕ್ಕೆ ಜನರಿಂದ ಒಳ್ಳೆಯ ಹೆಸರು ಬರುತ್ತದೆಯೇ? ಈ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರೂ ಮೆಚ್ಚುವುದಿಲ್ಲ ಎಂದು ಕೆಂಡಾಮಂಡಲವಾದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

    H VISHWANATH

    ಸಾಫ್ಟ್ ಆಗಿ ಆಡಳಿತ ಮಾಡುತ್ತಿದ್ದೇನೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಗರಂ ಆದ ಅವರು, ಇದು ಒಬ್ಬ ಮುಖ್ಯಮಂತ್ರಿ ನೀಡುವ ಹೇಳಿಕೆಯಲ್ಲ. ಆಡಳಿತದಲ್ಲಿ ಸಾಫ್ಟ್ ಅಥವಾ ಹಾರ್ಡ್ ಅಂತಾ ಇಲ್ಲ. ಇರುವ ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಬೇಕು ಅಷ್ಟೇ. ನಿಮ್ಮ ಹಾರ್ಡ್ ವೆಪನ್ ಅನ್ನು ಹಗರಣ ಮಾಡಿದವರ ಮೇಲೆ ಬಳಸಿ ಎಂದು ಹೇಳಿದರು.

    ಪಿಎಸ್‌ಐ ಹಗರಣದಲ್ಲಿ ಕಿಂಗ್‌ಪಿನ್ ಜೊತೆಗೆ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದಾರೆ ಎಂದು ಹೇಳುತ್ತಿದ್ದಾರೆ. ಇಲ್ಲಿ ಶಾಸಕಾಂಗ, ಕಾರ್ಯಾಂಗ ಎರಡೂ ಹಗರಣದಲ್ಲಿ ಸೇರಿವೆ. ಸರ್ಕಾರಿ ತನಿಖಾ ಸಂಸ್ಥೆಗಳು ಪ್ರಾಮಾಣಿಕವಾಗಿ ವಿಚಾರಣೆ ನಡೆಸಿದಾಗ ಸಾರ್ವಜನಿಕರಿಗೆ ನಂಬಿಕೆ ಬರುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    BASAVARAJ BOMMAI 2

    ಸಂತೋಷ್ ಹೇಳಿಕೆ ಸಮರ್ಥನೆ: ಇದೇ ವೇಳೆ ಸಚಿವ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಎಚ್.ವಿಶ್ವನಾಥ್, ಈ ಹಿಂದೆ ಪ್ರಧಾನಿ ನರೇಂದ್ರಮೋದಿ ಅವರು ನಾಗ್ಪುರದಲ್ಲಿ ಸಿಬಿಐ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕುಟುಂಬ ರಾಜಕಾರಣ ಜನತಂತ್ರ ವ್ಯವಸ್ಥೆಯಲ್ಲಿ ಗೆದ್ದಿಲು ರೀತಿ ತಿನ್ನುತ್ತಿದೆ. ಇದಕ್ಕೊಂದು ವಿರಾಮ ಕೊಡಬೇಕು ಎಂದು ಹೇಳಿದ್ದರು. ಅದೇ ಅರ್ಥದಲ್ಲಿ ಬಿ.ಎಲ್.ಸಂತೋಷ್ ಹೊಸ ಮುಖಗಳಿಗೆ ಆದ್ಯತೆ ಕೊಡಬೇಕು ಎಂದು ಹೇಳಿದ್ದಾರೆ. ಇದರಲ್ಲಿ ತಪ್ಪೇನಿಲ್ಲ. ಆದರೆ, ಇದಕ್ಕೆ ಬೇರೆ ಅರ್ಥ ಕೊಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‍ವೈ

    CT Ravi

    ಸಿಟಿ ರವಿ ವಿರುದ್ಧ ಕಿಡಿ:  ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ ವಿಶ್ವನಾಥ್, ನಮ್ಮ ಪಕ್ಷದವರೇ ಆದ ಸಿ.ಟಿ.ರವಿ ಓಹೋಹೋ ಎಂದು ಬಾಯಿಗೆ ಬಂದಂತೆ ಮಾತನಾಡ್ತಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ವಿದ್ಯಮಾನಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಬೇಕು. ನೀನು ಕಳ್ಳ-ನೀನು ಕಳ್ಳ ಎಂದರೆ ಸರಿಹೋಗುವುದಿಲ್ಲ ಎಂದು ತಿಳಿವಳಿಕೆ ನೀಡಿದರು.