Tag: ಬಿ.ಎಲ್ ಸಂತೋಷ್

  • ಬಿಜೆಪಿಯ ಪ್ರಭಾವಿ ನಾಯಕ ಬಿಎಲ್ ಸಂತೋಷ್ ಜೊತೆ ಸುಮಲತಾ ಚರ್ಚೆ

    ಬಿಜೆಪಿಯ ಪ್ರಭಾವಿ ನಾಯಕ ಬಿಎಲ್ ಸಂತೋಷ್ ಜೊತೆ ಸುಮಲತಾ ಚರ್ಚೆ

    ಬೆಂಗಳೂರು: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯ ಪ್ರಭಾವಿ ನಾಯಕರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮುಂದುವರಿಸಿದ್ದಾರೆ.

    ಸಂಸದೆ ಸುಮಲತಾ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಇತ್ತೀಚೆಗಷ್ಟೇ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ.

    ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದ ಸುಮಲತಾ ಅವರನ್ನು ಬಿ.ಎಲ್.ಸಂತೋಷ್ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಚೇರಿಯ ವಿಐಪಿ ಕೊಠಡಿಯಲ್ಲಿ ಬಿ.ಎಲ್ ಸಂತೋಷ್ ಮತ್ತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಜೊತೆ ಸುಮಲತಾ ಅಂಬರೀಷ್ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಚರ್ಚೆ ಬಳಿಕ ಮಾತನಾಡಿದ ಸುಮಲತಾ ಅಂಬರಿಷ್ ಅವರು, ಚುನಾವಣೆಯಲ್ಲಿ ನನಗೆ ಬೆಂಬಲ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಲು ಬಂದಿದ್ದೇನೆ. ಬಾಹ್ಯ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಕೇಳಿಕೊಂಡಿಲ್ಲ ಹಾಗೂ ಈ ಕುರಿತು ಯಾವುದೇ ಚರ್ಚೆಯಾಗಿಲ್ಲ. ಒಂದು ವೇಳೆ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾದರೆ ಮಂಡ್ಯ ಜನತೆ ಜೊತೆ ಚರ್ಚಿಸಿ ಮುಂದುವರಿಯುತ್ತೇನೆ ಎಂದು ತಿಳಿಸಿದರು.

    ಮಂಡ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ಅಗತ್ಯವಾಗುತ್ತದೆ ಎಂದು ಹೇಳಿದರು.

    ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಇಲ್ಲದ ಸಂದರ್ಭದಲ್ಲೇ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿರುವ ಸುಮಲತಾ ಅವರ ನಡೆ ಕುತೂಹಲ ಮೂಡಿಸಿದೆ.

  • ಸೋಲ್ತೇವೆ ಅನ್ನೋ ಹತಾಶೆಯಿಂದ ಏನೇನೋ ಮಾತಾಡ್ತವೆ – ಸಂತೋಷ್‍ಗೆ ಸಿದ್ದರಾಮಯ್ಯ ಟಾಂಗ್

    ಸೋಲ್ತೇವೆ ಅನ್ನೋ ಹತಾಶೆಯಿಂದ ಏನೇನೋ ಮಾತಾಡ್ತವೆ – ಸಂತೋಷ್‍ಗೆ ಸಿದ್ದರಾಮಯ್ಯ ಟಾಂಗ್

    ಬೆಳಗಾವಿ: ಸೋಲುತ್ತೇವೆ ಎಂಬ ಹತಾಶೆಯಿಂದ ಏನೇನೋ ಮಾತಾಡುತ್ತವೆ. ಸಂತೋಷ್‍ಗೆ ಬುದ್ಧಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್‍ಗೆ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅವರು ಸಿಂಗಲ್ ಡಿಜಿಟ್ ಅಷ್ಟೇ ಡಬಲ್ ದಾಟಲ್ಲ ಅಂದ್ರು. ಸಿದ್ದರಾಮಯ್ಯನ ಆತ್ಮ ಕೊಪ್ಪಳದಲ್ಲಿದೆ ಎಂಬ ಹೇಳಿಕೆ ಪ್ರತಿಕ್ರಿಯಿಸಿದ ಅವರು, ನನ್ನ ಆತ್ಮ ಎಲ್ಲಾ ಕಡೆ ಇದೆ. ನನ್ನ ಆತ್ಮ ಹೃದಯದಲ್ಲಿದೆ. ಎಲ್ಲಾ ಕಡೆ ಆತ್ಮ ಇರೋಕೆ ನಾನೇನು ದೇವರು ಅಲ್ಲ ಎಂದು ಸಂತೋಷ್‍ಗೆ ತಿರುಗೇಟು ನೀಡಿದ್ರು.

    ಹತ್ತು ಕೆ.ಜಿ ಅಕ್ಕಿ ಹೇಗೆ ಕೊಡ್ತಾರೆ ಎಂಬ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶೋಭಾ ಕರಂದ್ಲಾಜೆಗೆ ಏನೂ ಗೊತ್ತಾಗಲ್ಲ. ಏಳು ಕೆ.ಜಿ ಕೊಡುವವರಿಗೆ ಹತ್ತು ಕೆ.ಜಿ ಕೊಡುವುದಕ್ಕೆ ಆಗಲ್ವ. ಅವರು ಪೆದ್ದು ಪೆದ್ದಾಗಿ ಮಾತಾಡುತ್ತಾರೆ. ಬುದ್ಧಿ ಇಲ್ಲ ಅವಕ್ಕೆ. ಈಶ್ವರಪ್ಪ ಪೆದ್ದ. ಪೆದ್ದನ ಮಾತಿಗೆ ಉತ್ತರ ಕೊಡಲು ಆಗಲ್ಲ ಎಂದು ವ್ಯಂಗ್ಯವಾಡಿದ್ರು.

    ಬಿಜೆಪಿ ಕಡೆ ಬೆರಳು ಮಾಡಿದ್ರೆ ಕೈಕಟ್ ಮಾಡುತ್ತೀವಿ ಎಂದು ಕೇಂದ್ರ ಸಚಿವ ಮನೋಜ್ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಮಾಜಿ ಸಿಎಂ, ಬಿಜೆಪಿಯವರಿಗೆ ಹೊಡಿ, ಬಡಿ, ಕೊಲೆ ಮಾಡುವುದು ಬಿಟ್ಟರೆ ಏನೂ ಗೊತ್ತಿಲ್ಲ. ಬಿಜೆಪಿಯವರು ಮನುಷ್ಯತ್ವ ಇಲ್ಲದವರು. ಮಾನವೀಯತೆ ಇಲ್ಲದವರು, ಯಾರಿಗೆ ಮಾನವೀಯತೆ ಇಲ್ಲವೋ ಅವರು ರಾಕ್ಷಸ ಗುಣದವರು ಎಂದು ಕಿಡಿಕಾರಿದ್ರು.

    ಇದೇ ಸಂದರ್ಭದಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆ ಕುರಿತು ಮಾತನಾಡಿದ ಅವರು, ನಾನು ಈಗಲ್ಲ ಹೇಳಿದ್ದು ಮುಂದೆ ಚುನಾವಣೆ ಬಂದಾಗ ಹೇಳಿರೋದು. ಆಗ 10 ಕೆ.ಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದೆ. ನಮ್ಮ ಪಕ್ಷ ಸ್ವಂತ ಶಕ್ತಿ ಮೇಲೆ ಬಂದ ಬಳಿಕ ಸಿಎಂ ಆಗ್ತೀನಿ ಎಂದು ಹೇಳಿರುವುದು ಎಂದು ಸ್ಪಷ್ಟಪಡಿಸಿದರು.

  • ಚುನಾವಣೆಗೆ 2 ದಿನ ಇದ್ದಾಗ ಅನಾರೋಗ್ಯದ ಕತೆ ಹೇಳಿ ಸಿಎಂ ಹಾಸಿಗೆ ಹಿಡಿಯುತ್ತಾರೆ: ಸಂತೋಷ್

    ಚುನಾವಣೆಗೆ 2 ದಿನ ಇದ್ದಾಗ ಅನಾರೋಗ್ಯದ ಕತೆ ಹೇಳಿ ಸಿಎಂ ಹಾಸಿಗೆ ಹಿಡಿಯುತ್ತಾರೆ: ಸಂತೋಷ್

    ಶಿವಮೊಗ್ಗ: ಚುನಾವಣೆಗೆ ಇನ್ನೆರಡು ದಿನ ಇರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯದ ಕತೆ ಹೇಳಿ ಹಾಸಿಗೆ ಹಿಡಿಯಬಹುದು. ಆದರೆ ಏ.18ರ ನಂತರ ಆರೋಗ್ಯವಾಗಿ ಓಡಾಡಿಕೊಂಡಿರುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವ್ಯಂಗ್ಯವಾಡಿದ್ದಾರೆ.

    ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಕುಮಾರಸ್ವಾಮಿ, ನನ್ನ ಆರೋಗ್ಯ ಸರಿಯಿಲ್ಲ ನಾನು ಎಷ್ಟು ದಿನ ಬದುಕುತ್ತೇನೆ ಗೊತ್ತಿಲ್ಲ. ಹಾಗಾಗಿ ಮತ ಕೊಡಿ ಎಂದು ಹೇಳುತ್ತಾರೆ” ಎಂದು ವ್ಯಂಗ್ಯವಾಡಿದರು.

    55 ವರ್ಷದ ಕುಮಾರಸ್ವಾಮಿಗಳೇ ಅನಾರೋಗ್ಯದ ಬಗ್ಗೆ ಮಾತನಾಡಿದರೆ, 69 ವರ್ಷದ ಮೋದಿ ಬಗ್ಗೆ ಇನ್ನೇನು ಹೇಳಬೇಕು ಹೇಳಿ ಎಂದು ಪ್ರಶ್ನಿಸಿದ್ದಾರೆ. ದೇವೇಗೌಡರ ಕುಟುಂಬವೇ ರಾಜಕಾರಣದಲ್ಲಿ ಪಾದಾರ್ಪಣೆ ಮಾಡಿದೆ. ಆದರೆ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲೂ ಮೋದಿಗೆ ಮತ ಹಾಕುವರಿದ್ದಾರೆ. ಮೋದಿ ತನ್ನ ವಿಪಕ್ಷದವರ ಮನೆಯಲ್ಲೂ ಮತ ಪಡೆಯುವ ಕೆಲಸ ಮಾಡಿದ್ದಾರೆ. ತೋರಿಕೆಗೆ ಅವರು ಮೋದಿಯನ್ನು ವಿರೋಧಿಸುತ್ತಾರೆ. ಏಕೆಂದರೆ ಮೋದಿಯ ಆಡಳಿತದ ದಿಟ್ಟತನ ಅಷ್ಟು ಪಾರದರ್ಶಕವಾಗಿದೆ ಎಂದರು.

    ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್, ಪಾಕಿಸ್ತಾನದ ಬಾಲಕೋಟ್‍ನಲ್ಲಿರುವ ಭಯೋತ್ಪಾದಕರ ಕೇಂದ್ರದ ಮೇಲೆ ಸೇನೆ ಕಾರ್ಯಾಚರಣೆ ನಡೆಸಿದಾಗ ನಮ್ಮ ವಿಪಕ್ಷಗಳು ಸಾಕ್ಷಿ ಕೊಡಿ ಎನ್ನುತ್ತಿವೆ. ಆದರೆ ಅಡಿಕೆ ಮರಕ್ಕೆ, ಫಸಲಿಗೆ ಹತ್ತಿದ ಹುಳ ನಾಶವಾಗಲಿ ಎಂದು ಔಷಧಿ ಹೊಡೆಯುತ್ತಾರೆ. ಅದು ಸತ್ತಮೇಲೆ ಯಾವನು ಲೆಕ್ಕ ಹಾಕುತ್ತಾ ಕೂರಲ್ಲ ಎಂದರು. ಪಾಕ್ ಮೇಲೆ ದಾಳಿ ನಡೆಸಲು ಸಾಮಾಜಿಕ ಘಾತುಕ ಶಕ್ತಿಯನ್ನು ನಿಗ್ರಹಿಸಲು ಪ್ರಬಲ ನಾಯಕತ್ವ ಬೇಕು ಅದನ್ನು ಮೋದಿ ತೋರಿಸಿದ್ದಾರೆ ಎಂದು ಹೇಳಿದರು.

  • ಮೋದಿ ಹೇಳಿದ್ದ ಮಾತು ನಿಜವಾಯ್ತು ಅಂದ್ರು ಬಿ.ಎಲ್ ಸಂತೋಷ್!

    ಮೋದಿ ಹೇಳಿದ್ದ ಮಾತು ನಿಜವಾಯ್ತು ಅಂದ್ರು ಬಿ.ಎಲ್ ಸಂತೋಷ್!

    – ನಿಖಿಲ್ ನಿರುದ್ಯೋಗಿಯಾಗೋದು ಪಕ್ಕಾ

    ವಿಜಯಪುರ: ದುಡ್ಡು ತಿಂದವರೆಲ್ಲರನ್ನು ಬೀದಿಗೆ ತಂದು ನಿಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೀಗ ಅವರ ಮಾತು ನಿಜವಾಯಿತು ಎಂದು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ದೋಸ್ತಿ ಸರ್ಕಾರಕ್ಕೆ ಟಾಂಗ್ ನೀಡಿದ್ರು.

    ನಗರದಲ್ಲಿ ಪ್ರಬುದ್ಧರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಟಿ ದಾಳಿ ರಾಜ್ಯದಲ್ಲಿ ರಾಜಕೀಯ ಭೂಕಂಪ ಉಂಟು ಮಾಡಿತು. ನಂತರ ಸಿಎಂ, ಸಂಪುಟ ಸಚಿವರು, ಕಾಂಗ್ರೆಸ್ ಮುಖಂಡರು ರಸ್ತೆಗೆ ಬಂದು ಪ್ರತಿಭಟನೆ ನಡೆಸಿದರು. ದುಡ್ಡು ತಿಂದವರೆಲ್ಲರನ್ನು ಬೀದಿಗೆ ತಂದು ನಿಲ್ಲಿಸುತ್ತೇನೆ ಎಂದು ಮೋದಿ ಈ ಹಿಂದೆ ಹೇಳಿದ ಮಾತು ಇಂದು ನಿಜವಾಯಿತು ಅಂದ್ರು.

    ಅಲ್ಲದೆ ಸಿಎಂ ಕುಮಾರಸ್ವಾಮಿ ಯೋಧರ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಚುನಾವಣೆಯಲ್ಲಿ ನಿಖಿಲ್ ಗೆಲ್ಲಲ್ಲ, ನಿಖಿಲ್ ಮಾಡುವ ಸಿನಿಮಾ ಓಡಲ್ಲ. ಚುನಾವಣೆ ನಂತರ ಸಿಎಂ ಎಚ್‍ಡಿ ಕುಮಾರಸ್ವಾಮಿ ಮಗ ನಿಖಿಲ್ ನಿರುದ್ಯೋಗಿ ಆಗೋದು ಪಕ್ಕಾ ಎಂದು ವ್ಯಂಗ್ಯವಾಡಿದರು.

    ಆಗ ಕುಮಾರಸ್ವಾಮಿ ನಿಖಿಲ್‍ನನ್ನು ಸೇನೆಗೆ ಸೇರಿಸಲಿ. ಅಲ್ಲಿ ಪರಿಸ್ಥಿತಿ ಹೇಗಿರುತ್ತೆ ಅನ್ನೋದು ಗೊತ್ತಾಗುತ್ತೆ. ನಮ್ಮ ಸೈನಿಕರು ಯಾವತ್ತೂ ಶತ್ರುಗಳ ಗುಂಡಿಗೆ ಬೆನ್ನು ಕೊಟ್ಟಿಲ್ಲ. ಬೆನ್ನಿಗೆ ಗುಂಡು ಬಿದ್ದು ಹುತಾತ್ಮರಾದ ಉದಾಹರಣೆಯೂ ಇಲ್ಲ. ಸೈನಿಕರು ಗುಂಡಿಗೆ ಎದೆಯೊಡ್ಡಿದ್ದಾರೆಂದು ಸೈನಿಕರ ಸಾಧನೆಯನ್ನು ಶ್ಲಾಘಿಸಿ ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

    ಸಂವಾದ ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಆಹ್ವಾನಿಸಿಲ್ಲ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ ಜಿರಾಳೆ ಬಿ.ಎಲ್ ಸಂತೋಷ್ ಗೆ ಪ್ರಶ್ನಿಸಿದರು. ಆಗ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ನಂತರ ಸಂತೋಷ್ ಮಾತನಾಡಿ, ಪಕ್ಷದ ಆಂತರಿಕ ವಿಚಾರ. ಯಾರನ್ನು ಎಲ್ಲಿ ಕರೆಯಬೇಕೆಂಬುದು ಪಕ್ಷಕ್ಕೆ ಗೊತ್ತಿದೆ ಎಂದರು.

  • ನಮ್ಮ ಸೈನಿಕರು ಸಾಧನೆ ಮಾಡಿದ್ದಾರೆ, ಮೋದಿ ಮಾಡಿದ್ದಾರೆಂತ ಹೇಳಿಲ್ಲ- ಬಿ.ಎಲ್ ಸಂತೋಷ್

    ನಮ್ಮ ಸೈನಿಕರು ಸಾಧನೆ ಮಾಡಿದ್ದಾರೆ, ಮೋದಿ ಮಾಡಿದ್ದಾರೆಂತ ಹೇಳಿಲ್ಲ- ಬಿ.ಎಲ್ ಸಂತೋಷ್

    ಉಡುಪಿ: ನಮ್ಮ ಸೈನಿಕರು ಸಾಧನೆ ಮಾಡಿದ್ದಾರೆ. ಆದ್ರೆ ಅದನ್ನು ಮೋದಿ ಮಾಡಿದ್ದಾರೆ ಎಂದು ನಾವು ಹೇಳಿಲ್ಲ. ಎಲ್ಲವನ್ನೂ ಮಾಡೋದಕ್ಕೆ ಮೋದಿ ಜೇಮ್ಸ್ ಬಾಂಡ್ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

    ಮಣಿಪಾಲದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಸೈನಿಕರ ಜಾತಿ ಹುಡುಕುವ ರೋಗ ಹಿಂದೆ ಇರಲಿಲ್ಲ. ಈಗ ಎಲ್ಲಾ ಘಟನೆಗೂ ಸಾಕ್ಷಿ ಕೇಳುವವರು ಹುಟ್ಟಿಕೊಂಡಿದ್ದಾರೆ. ನಮ್ಮ ಸೈನಿಕರು ಸಾಧನೆ ಮಾಡಿದ್ದಾರೆ. ಆದ್ರೆ ಅದನ್ನು ಮೋದಿ ಮಾಡಿದ್ದಾರೆ ಎಂದು ನಾವು ಎಲ್ಲೂ ಹೇಳಿಲ್ಲ. ಮೋದಿ ಎರಡೂ ಕೈಯಲ್ಲಿ ಪಿಸ್ತೂಲು ಹಿಡಿದು ಹೋರಾಡಲ್ಲ. ಸೈನ್ಯವನ್ನು ಟ್ಯೂನ್ ಮಾಡೋಕೆ ಮೋದಿಗೆ ಗೊತ್ತು ಎಂದು ಹೇಳಿದರು.

    ಮೋದಿ ಭ್ರಷ್ಟಾಚಾರ ವಿರೋಧಿ ನೀತಿ ಕಠಿಣವಾಗಿದೆ. ನಮ್ಮ ಪಕ್ಷದ ಒಳಗೂ ಅನೇಕರಿಗೆ ಕಿರಿಕಿರಿ ಆಗುತ್ತದೆ. ಬೀದಿ ಕಸದ ಜೊತೆಗೆ ಮನೆಯ ಕಸವೂ ಗುಡಿಸಬೇಕು. ಮೋದಿಯ ಶಿಸ್ತು ಕೆಲ ಬಿಜೆಪಿಗರಿಗೇ ಆಗಲ್ಲ. ರಾಜಕೀಯ ಅಂದ್ರೆ ಲಫಂಗನ ಕೊನೆಯ ಮೆಟ್ಟಿಲು ಆಗಿರುತ್ತದೆ. ಮೋದಿಯವರು ರಾಜಕಾರಣಕ್ಕೆ ಕ್ರೆಡಿಬಿಲಿಟಿ ಕೊಟ್ಟರು ಅಂದ್ರು.

    ಬರ್ತ್, ಮ್ಯಾರೇಜ್ ಸರ್ಟಿಫಿಕೇಟ್ ಹಿಡ್ಕೊಂಡು ವಿಧಾನಸಭೆಗೆ ಬರುವವರಿದ್ದಾರೆ. ಮೋದಿ ಜಾತಿ, ವಂಶದ ಆಧಾರದಲ್ಲಿ ರಾಜಕಾರಣ ಮಾಡಲಿಲ್ಲ. ಅವರು ಪಾರ್ಲಿಮೆಂಟ್ ಗೆ ತಲೆಬಾಗಿ ನಮಿಸಿ ಒಳಗೆ ಬರುತ್ತಾರೆ. ಈ ಬಡ್ಡಿ ಮಗಂಗೆ ಇದೆಲ್ಲಾ ಹೇಗೆ ಹೊಳೀತು ಎಂದು ಖರ್ಗೆ ಹೇಳ್ತಾರೆ. ಇದೆಲ್ಲಾ ಹೊಳೆಯೋದಲ್ಲ ಎದೆಯಲ್ಲಿ ಅರಳೋದು ಎಂದು ಖರ್ಗೆಗೆ ಗೊತ್ತಿಲ್ಲ ಎಂದು ಟಾಂಗ್ ನೀಡಿದ್ರು.

    ಐಟಿ ದಾಳಿಯಾದ್ರೆ ಸಿಎಂ ಪ್ರತಿಭಟನೆ ಮಾಡ್ತಾರೆ. ಎರಡೂ ಪಕ್ಷಗಳ ಅಧ್ಯಕ್ಷರು ಬೀದಿಗೆ ಬರುತ್ತಾರೆ. ಐಟಿ ದಾಳಿ ಆಗಿರೋದು ಯಾರ ಮನೆಗೆ. ಯಾರದ್ದೋ ಮನೆಗೆ ರೇಡ್ ಆದ್ರೆ ಸಿಎಂ ಯಾಕೆ ಧರಣಿ ಮಾಡಬೇಕು. ಭ್ರಷ್ಟಾಚಾರಿಯನ್ನು ಬೀದಿಗೆ ತರುತ್ತೇನೆಂದು ಮೋದಿ ಅಂದಿದ್ದರು. ಆದ್ರೆ ಈ ರೀತಿ ಭ್ರಷ್ಟರು ಬೀದಿಗೆ ಬರುತ್ತಾರೆಂದು ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.

    ಮಹಿಳೆಯರ ಮೂಲಕ ದೇಶ ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಕ್ಯಾಬಿನೆಟ್ ನಲ್ಲಿ ಮಹಿಳೆಯರು ಪ್ರಮುಖ ಸ್ಥಾನ ಪಡೆದದ್ದು ಅರ್ಹತೆಯಿಂದ ಬಾಲಾಕೋಟ್ ದಾಳಿಯ ಒಂಬತ್ತು ಯುದ್ಧ ವಿಮಾನ ಪೈಕಿ ಒಂದನ್ನು ಲೇಡಿ ಪೈಲಟ್ ಚಾಲನೆ ಮಾಡಿದ್ದಾರೆ ಅಂದ್ರು.

  • ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಹೇಗೆ: ಬಿ.ಎಲ್ ಸಂತೋಷ್ ಪ್ರಶ್ನೆ

    ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಹೇಗೆ: ಬಿ.ಎಲ್ ಸಂತೋಷ್ ಪ್ರಶ್ನೆ

    ಚಾಮರಾಜನಗರ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ್ದರ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಸ್ತಕ್ಷೇಪವಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಪಾರ್ಟಿ ಮೆಂಬರ್ ಸ್ಲಿಪ್‍ಗೆ ಬೆಲೆ ಬೇಕಲ್ಲ ಎಂದು ಪರೋಕ್ಷವಾಗಿ ಹೇಳುವ ಮೂಲಕ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ತಪ್ಪಿದೆ ಎಂದು ಬಿ.ಎಲ್. ಸಂತೋಷ್ ಹೇಳಿದ್ದಾರೆ.

    ಚಾಮರಾಜನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಎಲ್.ಸಂತೋಷ್, ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಕಟ್ಟಿದ ಇಬ್ಬರಲ್ಲಿ ದಿವಂಗತ ಅನಂತ್‍ಕುಮಾರ್ ಸಹ ಒಬ್ಬರು. ಅನಂತ್‍ಕುಮಾರ್ ಅವರಿಗೆ ಏನು ಕ್ರೆಡಿಟ್ ಕೊಡಬೇಕು ಅದನ್ನು ಸಂಘ ಪರಿವಾರ ಹಿಂದಿನಿಂದಲೂ ಕೊಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಕೊಡುತ್ತದೆ. ಅದೇ ಕ್ರೆಡಿಟ್ ಅವರ ಹೆಂಡತಿ ತೇಜಸ್ವಿನಿ ಪಡೆದುಕೊಳ್ಳಬೇಕೆಂದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

    20-30 ವರ್ಷ ಪಾರ್ಟಿ ರಾಜಕಾರಣದಲ್ಲಿ ಮುಂದುವರಿಯಲು ಸಾಮರ್ಥ್ಯ ಇರುವವರಿಗೆ ಟಿಕೆಟ್ ಕೊಟ್ಟಿದ್ದೇವೆ. ಸದ್ಯ ಟಿಕೆಟ್ ಪಡೆದವರು ತಮ್ಮ ಸಾಮರ್ಥ್ಯವನ್ನು ಮುಂದಿನ ಐದು ವರ್ಷಗಳಲ್ಲಿ ಸಾಬೀತು ಮಾಡಬೇಕಾಗುತ್ತದೆ. ತೇಜಸ್ವಿನಿ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಹೇಳುವುದು ಸರಿಯಲ್ಲ. ಪಕ್ಷ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠವಾಗಿಸಲು ಯಾರಿಗೂ ಅಗೌರವ ಸೂಚಿಸದೇ ಯುವಕರಿಗೆ ಟಿಕೆಟ್ ನೀಡಲಾಗಿದೆ. ಜೀನ್ಸ್, ಡಿಎನ್‍ಎ ಆಧಾರದ ಮೇಲೆ ಟಿಕೆಟ್ ನೀಡಿ ಎಂದು ಎಲ್ಲರೂ ಕೇಳಿದರೆ ಪಾರ್ಟಿಯ ಮೆಂಬರ್ ಶಿಪ್ ರಶೀದಿಗೆ ಬೆಲೆ ಇರಲ್ಲ. ಹಾಗಾಗಿ ಪಕ್ಷ ಎಲ್ಲರನ್ನೂ ಗೌರವದಿಂದ ನೋಡಿ ಸೂಕ್ತ ಸ್ಥಾನಮಾನಗಳನ್ನು ನೀಡುತ್ತಿದೆ ಎಂದರು.

    ಸದ್ಯ ತೇಜಸ್ವಿನಿ ಅವರ ಗೌರವ ಮತ್ತು ಸಾಮರ್ಥ್ಯವನ್ನು ಲೆಕ್ಕ ಹಾಕಿ ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನೀಡಿರುವ ಅವಕಾಶ ಬಳಸಿಕೊಂಡು ತಮ್ಮನ್ನು ತಾವು ಪಕ್ಷದಲ್ಲಿ ಗುರುತಿಸಿಕೊಳ್ಳಬಹುದು. ಟಿಕೆಟ್ ನೀಡಿದ್ರೆ ಗೌರವ, ನೀಡಲ್ಲ ಅಂದ್ರೆ ಅಗೌರವ ಎಂದು ಹೇಳೋದು ತಪ್ಪಾಗುತ್ತದೆ. ಈ ರೀತಿ ಟಿಕೆಟ್ ನೀಡುವುದು ಪಕ್ಷಕ್ಕೆ ತುಂಬಾನೇ ಅಪಾಯಕಾರಿ. ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ಪಕ್ಷದಲ್ಲಿ ಅವರು ಬೆಳೆಯಬಹುದು ಎಂದು ಹೇಳುವ ಮೂಲಕ ತೇಜಸ್ವಿ ಸೂರ್ಯರಿಗೆ ಟಿಕೆಟ್ ನೀಡಿದ್ದನ್ನು ಬಿ.ಎಲ್.ಸಂತೋಷ್ ಸಮರ್ಥಿಸಿಕೊಂಡಿದ್ದಾರೆ.

  • ಅತೃಪ್ತರ ಸಮಾವೇಶಕ್ಕೆ ಸಹಕಾರ ನೀಡಿದ ಆರೋಪ- ಬಿಜೆಪಿ ಕೇಂದ್ರ ಕಚೇರಿಯ ಸಿಬ್ಬಂದಿ ವಜಾ

    ಅತೃಪ್ತರ ಸಮಾವೇಶಕ್ಕೆ ಸಹಕಾರ ನೀಡಿದ ಆರೋಪ- ಬಿಜೆಪಿ ಕೇಂದ್ರ ಕಚೇರಿಯ ಸಿಬ್ಬಂದಿ ವಜಾ

    ಬೆಂಗಳೂರು: ನಗರದಲ್ಲಿ ಗರುವಾರದಂದು ನಡೆದ ಅತೃಪ್ತರ ಸಮಾವೇಶದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಬಿಜೆಪಿ ಕೇಂದ್ರ ಕಚೇರಿಯಲ್ಲಿದ್ದ ಸಿಬ್ಬಂದಿ ವಜಾಕ್ಕೆ ಬಿಎಸ್‍ವೈ ಸೂಚನೆ ನೀಡಿದ್ದಾರೆ.

    ಸಮಾವೇಶದ ಕರಪತ್ರ ಡ್ರಾಫ್ಟ್ ಸಿದ್ದಪಡಿಸಿದ್ದು, ಕೆಲ ನಾಯಕರಿಗೆ ಮೇಲ್ ಹಾಕಿದ ಆರೋಪದ ಮೇಲೆ ಕಂಪ್ಯೂಟರ್ ಅಪರೇಟರ್ ಮಲ್ಲಿಕಾರ್ಜುನ್ ವಜಾಕ್ಕೆ ಬಿಎಸ್‍ವೈ ಗರುವಾರ ಸಂಜೆಯೇ ಸೂಚನೆ ನೀಡಿದ್ದಾರೆ. ಮಲ್ಲಿಕಾರ್ಜುನ, ಬಿಎಲ್ ಸಂತೋಷ್ ಅವರ ಬೆಂಬಲಿಗರಾಇದ್ದು, 10 ವರ್ಷಗಳಿಂದ ಕೆಲಸ ಮಾಡ್ತಿದ್ದರು.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಬಿಎಸ್‍ವೈ, ಬಿಜೆಪಿ ಕಚೇರಿ ಉದ್ಯೋಗಿ ಮಲ್ಲಿಕಾರ್ಜುನ್ ಸಿಐಡಿಯಂತೆ ಕೆಲಸ ಮಾಡ್ತಿದ್ದ. ಅದಕ್ಕೆ ವಜಾ ಮಾಡಿದ್ದೀನಿ. ಈಶ್ವರಪ್ಪ ನಡವಳಿಕೆ ತಿದ್ದುಕೊಳ್ಳಬೇಕು. ಸಂತೋಷ್ ಅವರು ರಾಷ್ಟ್ರೀಯ ಜವಾಬ್ದಾರಿ ನೋಡಿಕೊಳ್ಳಲಿ, ರಾಜ್ಯದ ಬಗ್ಗೆ ಬೇಡ. ಸಂತೋಷ್ ಜೊತೆ ಈಶ್ವರಪ್ಪ ಗಂಟೆಗಟ್ಟಲೆ ಮಾತನಾಡ್ತಿದ್ರೆ ಏನ್ ಅನಿಸುತ್ತೆ ಎಂದು ಪರೋಕ್ಷವಾಗಿ ಬಿ.ಎಲ್ ಸಂತೋಷ್ ಅವರ ಬಗ್ಗೆ ಬಿಎಸ್‍ವೈ ಅಸಮಾಧಾನ ವ್ಯಕ್ತಪಡಿಸಿದ್ರು.

    ವಿಪಕ್ಷ ನಾಯಕ ಸ್ಥಾನದಿಂದ ಈಶ್ವರಪ್ಪರನ್ನ ಕೆಳಗಿಳಿಸೋ ವಿಚಾರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಎಂಎಲ್‍ಸಿಗಳ ಬೇಡಿಕೆಯನ್ನ ಗಮನಿಸಿ ನಿರ್ಧಾರ ಪ್ರಕಟಿಸುತ್ತೇವೆ. ನಾನು ಬದಲಾಗಿಲ್ಲ, ಮಾತು ಬದಲಾಗಿಲ್ಲ. ಈಶ್ವರಪ್ಪ ಬಹಿರಂಗ ಸಭೆ ನಡೆಸಿ ಪಕ್ಷ ವಿರೋಧಿ ಧೋರಣೆ ತಾಳಿದ್ದಾರೆ. ದೆಹಲಿಗೆ ಹೋಗ್ತಿದ್ದೀನಿ ರಾಮಲಾಲ್, ಅಮಿತ್ ಷಾ ಅವರನ್ನ ಭೇಟಿ ಮಾಡ್ತೀನಿ ಅಂದ್ರು.