Tag: ಬಿ.ಸಿ ರೋಡ್‌

  • ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ ಬಳಿಕ ಬಿ.ಸಿ.ರೋಡ್‌ನಲ್ಲಿ (BC Road) ಮತ್ತೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಮದ್ಯದಂಗಡಿ ಬಂದ್ ಮಾಡುವುದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ (Mullai Muhilan) ಆದೇಶ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದ.ಕ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

    ಬಂಟ್ವಾಳ (Bantwal) ಪುರಸಭಾ ವ್ಯಾಪ್ತಿಯಲ್ಲಿ 48 ಗಂಟೆಗಳ ಕಾಲ ಮದ್ಯದಂಗಡಿ, ಶೇಂದಿ ಮಾರಾಟದ ಅಂಗಡಿಗಳ ಬಾಗಿಲು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಅಂಗಡಿಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು ಬಿದ್ದಿದೆ. ಇದನ್ನೂ ಓದಿ: ಮಂಗಳವಾರ ಸಚಿವ ಸಂಪುಟ ಸಭೆ – ಇಂದೇ ಕಲಬುರಗಿ ತಲುಪಿದ ಸಿಎಂ

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಪೊಲೀಸರು ಬಿಗಿ ಬಂದೋಬಸ್ತ್ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ. ಇದನ್ನೂ ಓದಿ: ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್

    ಉದ್ವಿಗ್ನಗೊಂಡಿದ್ದು ಯಾಕೆ?
    ನಾಗಮಂಗಲ (Nagamangala) ಗಲಭೆ ಖಂಡಿಸಿ ಸೆ.12ರಂದು ಮಂಗಳೂರಿನಲ್ಲಿ (Mangaluru) ನಡೆದಿದ್ದ ಪ್ರತಿಭಟನಾ ಭಾಷಣದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಸರ್ಕಾರ ಈದ್ ಮಿಲಾದ್ ಮೆರವಣಿಗೆ ತಡೆಯಬೇಕು. ಇಲ್ಲದಿದ್ದಲ್ಲಿ ಮತ್ತೆ ಇವರು ಗಲಭೆ ನಡೆಸ್ತಾರೆ ಎಂದಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಹಮ್ಮದ್ ಶರೀಫ್ ಹಾಗೂ ಆತನ ಸಹೋದರ ಹಸೀನಾರ್ ತಾಕತ್ ಇದ್ದರೆ ಸೋಮವಾರ ಬಿಸಿ ರೋಡ್‌ನ ಈದ್ ಮಿಲಾದ್ ಮೆರವಣಿಗೆಗೆ ಬನ್ನಿ ಅಂತ ಶರಣ್ ಪಂಪ್ ವೆಲ್‌ಗೆ ಸವಾಲ್ ಹಾಕಿ ಆಡಿಯೋ ಹರಿಯ ಬಿಟ್ಟಿದ್ದರು. ಆಡಿಯೋ ಹರಿ ಬಿಟ್ಟಿದ್ದ ಇಬ್ಬರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಸವಾಲು ಸ್ವೀಕರಿಸಿದ ಬಜರಂಗದಳ-ವಿಎಚ್‌ಪಿ ಇವತ್ತು ಬಿ.ಸಿ.ರೋಡ್ ಚಲೋ ಕರೆ ನೀಡಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

  • ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    – ಬೈಕ್ ರ‍್ಯಾಲಿ ವೇಳೆ ಹಸಿರು ಬಾವುಟ ಪ್ರದರ್ಶನ – ಬಜರಂಗದಳ, ವಿಹೆಚ್‌ಪಿ ಆಕ್ರೋಶ

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

    ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

    ಏನಿದರ ಹಿನ್ನೆಲೆ?
    ಬಜರಂಗದಳ (Bajarangadala) ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು.ಇದನ್ನೂ ಓದಿ: ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ.

  • ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಮಂಗಳೂರು: ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಗಿರೀಶ್.ಎನ್  (Girish.N) ತಿಳಿಸಿದ್ದಾರೆ.

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ (B C Road) ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಪೊಲೀಸರ ಬಿಗಿ ಬಂದೋಬಸ್ತಿನಿಂದಾಗಿ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿರುವ ಕುರಿತು ದ.ಕ ಎಸ್ಪಿ ಎನ್. ಯತೀಶ್ (N. Yatish) ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್ ಮಾತನಾಡಿ, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೇವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ ಅಷ್ಟೇ ಎಂದು ತಿಳಿಸಿದರು.

    ಪ್ರಚೋದನಾಕಾರಿ ಆಡಿಯೋ ಹರಿಬಿಟ್ಟ ಇಬ್ಬರ ಮೇಲೆಯೂ ಕ್ರಮವಾಗಿದೆ. ಶರೀಫ್ ಹಾಗೂ ಹಸೀನಾರ್ ಇಬ್ಬರನ್ನು ಬಂಧಿಸಿದ್ದೇವೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಮುನ್ನವೇ ಶಾಂತಿ ಸಭೆ ಮಾಡಿದ್ದೇವೆ. ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮುಂದೆಯೂ ಅಹಿತಕರ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಬಿ.ಸಿ ರೋಡಿನಲ್ಲಿ ಬಂದೋಬಸ್ತ್ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

    ಮತ್ತೋರ್ವ ಅಧಿಕಾರಿ ಗಿರೀಶ್.ಎನ್ ಮಾತನಾಡಿ, ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಿ.ಸಿ.ರೋಡ್ ಚಲೋ ಹಾಗೂ ಈದ್ ಮಿಲಾದ್ ಶಾಂತಿಯುತವಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಘಟನೆಗೆ ಕಾರಣವಾದ ಆಡಿಯೋ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ಹದಿಹರೆಯದ ಹುಡುಗಿಯರ ಮಿದುಳಿಗೆ ಬೇಗ ವಯಸ್ಸಾಗ್ತಿದೆಯಂತೆ; ಯಾಕೆ ಗೊತ್ತಾ? – ಅಧ್ಯಯನ ಹೇಳೋದೇನು?

  • ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    – ಖಾಕಿ ಪಡೆ ಕಣ್ಗಾವಲು; ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ ನೂಕಾಟ

    ಮಂಗಳೂರು: ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದಾರೆ.

    ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್‌ಗೆ ಬರದಂತೆ ಮುಂಜಾಗ್ರತಾ ಕ್ರಮವಾಗಿ ಕೈಕಂಬ ಮಸೀದಿ ಪಕ್ಕದಲ್ಲೇ ಮೆರವಣಿಗೆ ಪೊಲೀಸರು ರಸ್ತೆ ಬದಲಾವಣೆ ಮಾಡಿದ್ದಾರೆ. ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು

    ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಬಿ.ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಜಮಾಯಿಸಿದ್ದಾರೆ. ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಮುಖಂಡ ಪುನೀತ್ ಅತ್ತಾವರ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಎಸ್‌ಆರ್‌ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮೊಕ್ಕಾಂ ಹೂಡಿವೆ. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!

    ವಿಎಚ್‌ಪಿಯ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಭಜರಂಗದಳ ಹಾಗೂ ವಿಎಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟವೂ ನಡೆದೆ. ಇದನ್ನೂ ಓದಿ:  ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?