Tag: ಬೀಗರೂಟ

  • ಬೀಗರೂಟದಲ್ಲಿ ರಾಜಕೀಯ ತರಬೇಡಿ : ಅಭಿಷೇಕ್ ಅಂಬರೀಶ್ ಮನವಿ

    ಬೀಗರೂಟದಲ್ಲಿ ರಾಜಕೀಯ ತರಬೇಡಿ : ಅಭಿಷೇಕ್ ಅಂಬರೀಶ್ ಮನವಿ

    ಇಂದು ಮಂಡ್ಯದಲ್ಲಿ ನಡೆದ ಅಭಿಷೇಕ್ ಅಂಬರೀಶ್ (Ambarish) ಮತ್ತು ಅವಿವಾ (Aviva) ಮದುವೆಯ ಬೀಗರೂಟದ ಬಗ್ಗೆ ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಬೀಗರೂಟ (Beegaruta) ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಅಭಿಷೇಕ್ (Abhishek) ಅಂಬರೀಶ್ ಪ್ರತಿಕ್ರಿಯೆ ನೀಡಿದ್ದು, ಇದನ್ನು ರಾಜಕೀಯಕ್ಕೆ ತರಬೇಡಿ ಎಂದು ಹೇಳಿದ್ದಾರೆ.

    ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚು ಪ್ರೀತಿ ತೋರಿಸಿದ್ದಾರೆ. ಊಟಕ್ಕಿಂತ ನಿಮ್ಮನ್ನು ನೋಡಲು ಬಂದೆ ಅನ್ನೋರು ಇದ್ರು. ಊಟ ಮಿಸ್ ಆಗಿದ್ದಕ್ಕೆ ಬೇಜಾರಾಗಿದೆ. ರಾಜಕೀಯ ವಿರೋಧಿಗಳು ಇದನ್ನು ಬಳಸಿಕೊಂಡರೆ ಅವರಿಗೂ ಒಳ್ಳೆಯದು ಆಗಲಿ. ಊಟ ಶಾರ್ಟೇಜ್ ಅನ್ನೋದು ಸುಳ್ಳು. ಊಟ ಬಿದ್ದಿದೆ. ನಮ್ಮ ತಂದೆಯ ಆಸೆಯಂತೆ ಮದುವೆಯಾಗಿದ್ದೇನೆ. ಇಲ್ಲದಿದ್ದರೆ ಸಿಂಪಲ್ ಆಗಿ ಮದುವೆಯಾಗುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ಲವ್ ಮಾಡುವಾಗ ಎಷ್ಟು ಈಜಿಯಾಗಿ ನಿಭಾಸಬಹುದೋ, ಮದುವೆಯಾದ ಮೇಲೂ ಈಜಿಯಾಗಿ ನಿಭಾಯಿಸಬಹುದು ಅನ್ನೋ ಉದ್ದೇಶದಿಂದ ಮದುವೆಯಾದೆ. ಮುಂದಿನ ದಿನಗಳಲ್ಲಿ ಅವಿವಾ ನನ್ನ ಮೂವಿ ಪ್ರಮೋಷನ್ ಗೂ ಬರಬಹುದು. ನಮ್ಮ ಮಂಡ್ಯ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಡ್ಯ ಜನತೆ ಆರ್ಶೀವಾದ ಮಾಡಿದ್ದಾರೆ. ನಮ್ಮ ತಂದೆ-ತಾಯಿ ಆಸೆಯಂತೆ ಮಂಡ್ಯದಲ್ಲಿ ಬೀಗರ ಊಟ ಏರ್ಪಿಡಿಸಿದ್ದೇವೆ. ತುಂಬಾ ಜನ ಕಷ್ಟಪಟ್ಟು ವ್ಯವಸ್ಥೆ ಮಾಡಿದ್ರು. ಬೀಗರ ಊಟದಲ್ಲಿ ಶಾರ್ಟೇಜ್ ಆಗಿಲ್ಲ. ಯಾರಿಗೂ ದುಡ್ಡು ಕೊಟ್ಟು ಕರೆಸಿಲ್ಲ. ಪ್ರೀತಿ,ಅಭಿಮಾನದಿಂದ ಬಂದಿದ್ದಾರೆ. ಕೆಲವರು ಪ್ರವೋಕ್ ಮಾಡಿದಾಗ ಸಣ್ಣ ಪ್ರವೋಕ್ ಆದಾಗ ಅವ್ಯವಸ್ಥೆ ಆಗಿದೆ. ಅಡುಗೆ ಮನೆಗೆ ಕೆಲವರು ನುಗ್ಗಿದಾಗ ಘಟನೆ ಆಗಿದೆ. ಊಟ ಇಲ್ಲದೇ ಹೋಗಬೇಕು ಅಂತಾ ಕರೆಸಿಲ್ಲ. ದಯವಿಟ್ಟು ಕ್ಷಮಿಸಿ ಬಿಡಿ. ಯಾರು ಬೇಜಾರಾಗಬೇಡಿ ಎಂದು ಕ್ಷಮೆ ಕೇಳಿದ್ದಾರೆ ಅಭಿಷೇಕ್.

    ತಂದೆ ಮೇಲೆ ಪ್ರೀತಿ ಇಟ್ಟುಕೊಂಡು ಬಂದಿದ್ದರು. ಊಟ ಖಾಲಿಯಾಗತ್ತಾ ಬಂದ ಹಾಗೆ ರೆಡಿ ಮಾಡಿ ಅಂತಾ ಹೇಳಿದ್ದೇನೆ. ತುಂಬಾ ಊಟ ಹಾಳಾಗಿದೆ. ಬೀಗರ ಊಟ ಹಾಳು ಮಾಡಿದ್ದು ಯಾರು ಅಂತಾ ಗೊತ್ತಿಲ್ಲ. ಎಲೆಕ್ಷನ್ ಉದ್ದೇಶ ಇಟ್ಟುಕೊಂಡು ಬೀಗರ ಊಟ ಏರ್ಪಡಿಸಿಲ್ಲ. ಇದು ಅಂಬರೀಶ್ ಅಣ್ಣನ ಮಗನ ಸಮಾರಂಭ. ಇದರಲ್ಲಿ ರಾಜಕೀಯ ತರಬೇಡಿ ಎಂದು ಅಭಿಷೇಕ್ ವಿರೋಧಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

  • ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ನಾಳೆ ಮಂಡ್ಯದಲ್ಲಿ (Mandya) ಅಂಬಿ ಕುಟುಂಬ ಬೀಗರೂಟವನ್ನು ಆಯೋಜನೆ ಮಾಡಿದೆ. ಬೀಗರೂಟಕ್ಕೆ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಸಿದ್ದತೆಯನ್ನು ಪರಿಶೀಲಿಸಲು ಅಭಿಷೇಕ್ ಅಂಬರೀಶ್ (Abhishek) ಇಂದು ಮಂಡ್ಯಗೆ ಆಗಮಿಸಿದ್ದರು. ಪರಿಶೀಲನೆ ಮುಗಿಸಿ ಮಂಡ್ಯದಲ್ಲಿಯ ಮಹಾವೀರ ವೃತ್ತದಲ್ಲಿರುವ ಟೀ ಅಂಗಡಿಯಲ್ಲಿ ಚಹಾ (Tee) ಕುಡಿದ ಸಂಭ್ರಮಿಸಿದರು ಯಂಗ್ ರೆಬಲ್ ಸ್ಟಾರ್. ತಮ್ಮ ಕುಟುಂಬದ ಅತ್ಯಾಪ್ತ ಇಂಡುವಾಳು ಸಚ್ಚಿದಾನಂದ ಜೊತೆಗೆ ಆಗಮಿಸಿದ್ದ ಅಭಿ, ಕೆಲ ಹೊತ್ತು ಅಂಗಡಿಯಲ್ಲಿ ಕಾಲ ಕಳೆದರು.

    ಅಂಬರೀಶ್ (Ambarish) ಅವರು ಮಂಡ್ಯಗೆ ಬಂದಾಗ ಹೀಗೆಯೇ ಮಾಡುತ್ತಿದ್ದರಂತೆ. ಯಾವುದೋ ಟೀ ಅಂಗಡಿ, ಇನ್ನ್ಯಾವುದೋ ಹೋಟೆಲ್ ಹೊಕ್ಕು ಖುಷಿ ಖುಷಿಯಾಗಿ ತಿಂದು ಹೋಗುತ್ತಿದ್ದರಂತೆ. ಅಭಿಷೇಕ್ ಕೂಡ ತಂದೆಯಂತೆಯೇ ಎಲ್ಲರೊಂದಿಗೆ ಬರೆಯುತ್ತಿದ್ದಾರೆ. ಹಾಗಾಗಿ ಥೇಟ್ ಅಂಬಿಯನ್ನೇ ಅಭಿಷೇಕ್ ಗುಣದಲ್ಲಿ ಹೋಲುತ್ತಿದ್ದಾರೆ ಎನ್ನುತ್ತಾರೆ ಅಭಿಮಾನಿಗಳು. ಇದನ್ನೂ ಓದಿ:ಹೊಸ ಐಷಾರಾಮಿ ಕಾರು ಖರೀದಿಸಿದ ‘ಕೆಜಿಎಫ್’ ಸ್ಟಾರ್ ಯಶ್

    ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ (Beegaruta) ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್‌ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ್ ಅವಿವಾ ಅವರ ಮಂಡ್ಯದ ಬೀಗರ ಔತಣಕೂಟಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದ್ದು ಹೀಗಾಗಿ ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಯಾಗಲಿದ್ದು ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ ಇಂದು ರಾತ್ರಿಯಿಂದಲೇ ನಡೆಯುತ್ತದೆ. ಬೀಗರ ಔತಣಕೂಟ ಮೆನು ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಇರಲಿದೆ.

  • ಬೀಗರೂಟಕ್ಕೆ ಬನ್ನಿ: ಮಂಡ್ಯದ ಜನತೆಗೆ ಆಹ್ವಾನ ನೀಡಿದ ಸುಮಲತಾ ಅಂಬರೀಶ್

    ಬೀಗರೂಟಕ್ಕೆ ಬನ್ನಿ: ಮಂಡ್ಯದ ಜನತೆಗೆ ಆಹ್ವಾನ ನೀಡಿದ ಸುಮಲತಾ ಅಂಬರೀಶ್

    ಭಿಷೇಕ್ (Abhishek) ಅಂಬರೀಶ್-ಅವಿವಾ (Aviva)  ಮದುವೆಯ ಬೀಗರೂಟ ನಾಳೆ ಮಂಡ್ಯದಲ್ಲಿ ನಡೆಯಲಿದೆ. ಮಂಡ್ಯದ ಸರ್ವ ಜನರೂ ಬೀಗರೂಟಕ್ಕೆ (Beegaruta) ಬರುವಂತೆ ಸುಮಲತಾ (Sumalatha) ಅಂಬರೀಶ್ ಆಹ್ವಾನ ನೀಡಿದ್ದಾರೆ. ಸುದೀರ್ಘ ಬರಹವೊಂದನ್ನು ಪೋಸ್ಟ್ ಮಾಡಿರುವ ಸುಮಲತಾ, ಕುಟುಂಬ ಸಮೇತ ಎಲ್ಲರೂ ಬೀಗರೂಟಕ್ಕೆ ಬರುವಂತೆ ವಿನಂತಿಸಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದ ಮೂಲಕ ಆಹ್ವಾನ ನೀಡಿರುವ ಸುಮಲತಾ, ‘ಮಂಡ್ಯ ಜಿಲ್ಲೆಯ ಆತ್ಮೀಯ ಜನತೆಗೆ ನಿಮ್ಮ ಸುಮಲತಾ ಅಂಬರೀಶ್ ಮಾಡುವ ನಮಸ್ಕಾರಗಳು. ತಮ್ಮೆಲ್ಲರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ  ನನ್ನ ಮಗನಾದ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಮದುವೆಯನ್ನು  ಮತ್ತು  ಆರತಕ್ಷತೆ ಕಾರ್ಯಕ್ರಮವನ್ನು  ಬೆಂಗಳೂರಿನಲ್ಲಿ ನೆರವೇರಿಸಿರುತ್ತೇನೆ. ಮಂಡ್ಯದ  (Mandya) ಸ್ವಾಭಿಮಾನಿ ಜನತೆ  ಅಂಬರೀಶ್ ಕುಟುಂಬದ ಮೇಲೆ  ಇಟ್ಟಿರುವ ಪ್ರೀತಿ ವಾತ್ಸಲ್ಯ ಅಭಿಮಾನಕ್ಕೆ  ನಾವು ಸದಾ ಚಿರಋಣಿಯಾಗಿರುತ್ತೇವೆ. ಅಭಿಷೇಕ್ ಹಾಗೂ ಅವಿವಾ ಮದುವೆಯ  ಸಂಭ್ರಮವನ್ನು  ತಮ್ಮೊಂದಿಗೆ ಹಂಚಿಕೊಳ್ಳುವ  ಉದ್ದೇಶದಿಂದ ಇದೇ ಶುಕ್ರವಾರ,  ದಿನಾಂಕ 16/06/2023 ರಂದು  ಬೆಳಿಗ್ಗೆ 11:30  ರಿಂದ  ಬೀಗರ ಔತಣವನ್ನು ಏರ್ಪಡಿಸಲಾಗಿದೆ.  ಇದಕ್ಕಾಗಿ ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ  ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಮದುವೆ ಕಾರ್ಯಕ್ರಮಗಳು ಮತ್ತು  ಇನ್ನಿತರೆ  ಕಾರ್ಯದ  ಒತ್ತಡದಿಂದ  ನಾನು ಖುದ್ದಾಗಿ  ಬಂದು ಬೀಗರ ಔತಣಕ್ಕೆ ತಮ್ಮನ್ನು ಆಹ್ವಾನಿಸಲು ಸಾಧ್ಯವಾಗುತ್ತಿಲ್ಲ.  ಆದ್ದರಿಂದ ತಾವೆಲ್ಲರೂ ಅನ್ಯತಾ ಭಾವಿಸದೆ ತಮ್ಮ ಕುಟುಂಬ ಸಮೇತರಾಗಿ ಬೀಗರ ಔತಣಕ್ಕೆ ಆಗಮಿಸಿ  ನಮ್ಮ ಆತಿಥ್ಯವನ್ನು ಸ್ವೀಕರಿಸಿ,  ವಧು ವರರನ್ನು ಆಶೀರ್ವದಿಸಬೇಕಾಗಿ  ಈ ಮೂಲಕ ಕೋರುತ್ತೇನೆ.  ಈ ಸಂದೇಶವನ್ನು ನನ್ನ ವೈಯಕ್ತಿಕ ಆಹ್ವಾನವೆಂದು ಭಾವಿಸಿ,  ತಮ್ಮ ಕುಟುಂಬ ಸಮೇತರಾಗಿ ಬೀಗರ  ಔತಣಕ್ಕೆ ಆಗಮಿಸಲು  ಮತ್ತೊಮ್ಮೆ ಕೋರುತ್ತೇನೆ. ಅಂಬರೀಶ್ ಅವರ ಕುಟುಂಬಕ್ಕೆ ತಾವು  ಇಲ್ಲಿಯವರೆಗೆ ತೋರಿದ  ಪ್ರೀತಿ ವಿಶ್ವಾಸ ಮತ್ತು ಆಶೀರ್ವಾದವನ್ನು,  ಇನ್ನು ಮುಂದೆಯೂ ಸಹ ನೀಡಲು ತಮ್ಮನ್ನು ಕೋರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

    ಜನರಿಗೆ ಬೊಂಬಾಟ್ ಬಾಡೂಟ ಹಾಕಿಸಲು ಅಂಬಿ (Ambarish) ಕುಟುಂಬ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಮಂಡ್ಯ ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್‌ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ್ ಅವಿವಾ ಅವರ ಮಂಡ್ಯದ ಬೀಗರ ಔತಣಕೂಟಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದ್ದು ಹೀಗಾಗಿ ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಯಾಗಲಿದ್ದು ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ ಇಂದು ರಾತ್ರಿಯಿಂದಲೇ ನಡೆಯುತ್ತದೆ. ಬೀಗರ ಔತಣಕೂಟ ಮೆನು ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಇರಲಿದೆ.

  • ನಾಳೆ ಮಂಡ್ಯದಲ್ಲಿ ಅಭಿಷೇಕ್-ಅವಿವಾ ಮದುವೆ ಬೀಗರ ಊಟ: ಭರ್ಜರಿ ಭೋಜನ

    ನಾಳೆ ಮಂಡ್ಯದಲ್ಲಿ ಅಭಿಷೇಕ್-ಅವಿವಾ ಮದುವೆ ಬೀಗರ ಊಟ: ಭರ್ಜರಿ ಭೋಜನ

    ನಾಳೆ ರೆಬಲ್ ಸ್ಟಾರ್ ಅಂಬರೀಶ್ (Ambarish)  ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ (Abhishek) ಅಂಬರೀಶ್ ಅವರ ಮದುವೆಯ ಬೀಗರ ಔತಣಕೂಟ ಮಂಡ್ಯದಲ್ಲಿ ಜರುಗಲಿದೆ. ಮಂಡ್ಯ ಜನರಿಗೆ ಬೊಂಬಾಟ್ ಬಾಡೂಟ ಹಾಕಿಸಲು ಅಂಬಿ ಕುಟುಂಬ ಭರ್ಜರಿ ತಯಾರಿ ಮಾಡಿಕೊಂಡಿದೆ.

    ಮಂಡ್ಯ (Mandya) ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ (Sumalatha) ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್‌ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ:ಮಾಡ್ರನ್ ಅವತಾರ ಬದಿಗಿಟ್ಟು ಲೆಹೆಂಗಾದಲ್ಲಿ ಮಿಂಚಿದ ‘ಪುಟ್ಟಗೌರಿ’- ಸೊಂಟ ಸೂಪರ್ ಎಂದ ನೆಟ್ಟಿಗರು

    ಅಭಿಷೇಕ್ – ಅವಿವಾ (Aviva) ಅವರ ಮಂಡ್ಯದ ಬೀಗರ ( Begaruta) ಔತಣಕೂಟಕ್ಕೆ ರಾಜಕೀಯ ಹಾಗೂ ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದ್ದು ಹೀಗಾಗಿ ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಯಾಗಲಿದ್ದು ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ ಇಂದು ರಾತ್ರಿಯಿಂದಲೇ ನಡೆಯುತ್ತದೆ. ಬೀಗರ ಔತಣಕೂಟ ಮೆನು ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಇರಲಿದೆ.

  • ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ

    ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ

    ದುವೆ, ಆರತಕ್ಷತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಮುಗಿಸಿಕೊಂಡಿರುವ ನಟ ಅಭಿಷೇಕ್ (Abhishek), ಮಾಡೆಲ್ ಅವಿವಾ (Aviva) ಜೂನ್ 16 ರಂದು ಮಂಡ್ಯದ ಜನತೆಗೆ ಬೀಗರೂಟ (Beegarota)ಮಾಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮದುವೆ ಮತ್ತು ಆರತಕ್ಷತೆ ಬೆಂಗಳೂರಿನಲ್ಲಿ ನಡೆದಿರುವ ಕಾರಣದಿಂದಾಗಿ ಬೀಗರೂಟವನ್ನು ಮಂಡ್ಯದಲ್ಲಿ ಏರ್ಪಡಿಸಲಾಗಿದೆ.

    ಈ ಹಿಂದೆ ಮಂಡ್ಯಕ್ಕೆ (Mandya) ಪ್ರಧಾನಿ ನರೇಂದ್ರ ಮೋದಿ ಬಂದಾಗ, ಯಾವ ಜಾಗದಲ್ಲಿ ಅವರಿಗೆ ಕಾರ್ಯಕ್ರಮ ಮಾಡಲು ತಯಾರಿ ಮಾಡಿಕೊಳ್ಳಲಾಗಿತ್ತೋ, ಅದೇ ಜಾಗದಲ್ಲೇ ಬೀಗರೂಟವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಲಾಗುತ್ತಿದೆ. ಅಲ್ಲಿಯೇ ಬೀಗರೂಟ ನಡೆಯಲಿದೆ. ಇದನ್ನೂ ಓದಿ:ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ಬೀಗರೂಟಕ್ಕೆ ಕನಿಷ್ಠ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಟೆಂಟ್ ಹಾಕುವಂತಹ ಕಾರ್ಯ ನಡೆದಿದ್ದು, ಸುಮಲತಾ ಅಂಬರೀಶ್  ಇಂದು ಅದರ ಪರಿಶೀಲನೆ ಕೂಡ ಮಾಡಿದ್ದಾರೆ. ಬೀಗರೂಟಕ್ಕೆ ಭರ್ಜರಿ ಬಾಡೂಟವೇ ಇರಲಿದ್ದು, ಪಕ್ಕಾ ಮಂಡ್ಯ ಶೈಲಿಯಲ್ಲಿ ಆಹಾರವನ್ನು ಸಿದ್ಧ ಪಡಿಸಲಾಗುತ್ತದೆಯಂತೆ. ಮುದ್ದೆಯೊಂದಿಗೆ ಭರ್ಜರಿ ಮಾಂಸದೂಟ ಕೂಡ ಜೊತೆಯಾಗಲಿದೆ. ಮುದ್ದೆ, ಬೋಟಿ ಗೊಜ್ಜು, ಮೊಟ್ಟೆ, ಮಟನ್, 2 ತರ ಚಿಕನ್, ಗೀ ರೈಸ್, ಅನ್ನ, ತಿಳಿ ಸಾಂಬಾರ್, ಮಜ್ಜಿಗೆ, ಬಾಳೆಹಣ್ಣು, ಬೀಡಾ ನಂದಿನಿ ಐಸ್ ಕ್ರೀಂ ಇರಲಿದೆ.

    ಬೀಗರ ಊಟದ ಸಿದ್ಧತೆಯನ್ನು ಅಂಬರೀಶ್ (Ambareesh) ಕುಟುಂಬದ ಆಪ್ತ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ (RockLine Venkatesh)ಪರಿಶೀಲನೆ ನಡೆಸಿದರು. ಈ ವೇಳೆ ಎಲ್ಲರಿಗೂ ಸಲಹೆ ಸೂಚನೆಯನ್ನು ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ರಾಕ್‌ಲೈನ್ ವೆಂಕಟೇಶ್ ಅಂಬರೀಶ್‌ಗೆ ಪ್ರಿಯವಾದ ಮಂಡ್ಯ ಶೈಲಿಯ ಬಾಡೂಟವನ್ನು ಬೀಗರ ಊಟದ ಮೆನುವಾಗಿ ಮಾಡಲಾಗುತ್ತದೆ. ಎಷ್ಟೇ ಸಾವಿರ ಜನರು ಬಂದರೂ ಊಟದ ವ್ಯವಸ್ಥೆ ಇದ್ದು, ಬೆಳಿಗ್ಗೆ 11ಗಂಟೆಯಿಂದಲೇ ಊಟದ ಆರಂಭವಾಗಲಿದೆ. ಸಿನಿಮಾ ಹಾಗೂ ರಾಜಕೀಯದಲ್ಲಿ ಅಂಬಿ ಕುಟುಂಬ ಪರ ನಿಂತ ಎಲ್ಲರಿಗೂ ಊಟ ಹಾಕಿಸುವುದು ಕುಟುಂಬಸ್ಥರ ಆಸೆ ಇದೆ, ಅದರಂತೆ ಅಭಿಷೇಕ್ ಬೀಗರ ಊಟ ಮಂಡ್ಯದಲ್ಲೇ ಮಾಡಲಾಗ್ತಿದೆ. ಮಂಡ್ಯ ಜಿಲ್ಲೆಯ ಬಾಣಸಿಗರಿಂದಲೇ ಬಾಡೂಟವನ್ನು ತಯಾರು ಮಾಡಿಸಲಾಗುತ್ತದೆ. ಅಂಬರೀಶ್ ಅವರಿಗೆ ಪ್ರಿಯವಾದ ಕೈಮಾ, ಬೋಟಿ ಗೊಜ್ಜು, ಮಟನ್ ಸೇರಿದಂತೆ ಮಂಡ್ಯ ಶೈಲಿಯಲ್ಲೇ ಅಡುಗೆ ಇರಲಿದೆ. ವಧು ವರರಿಗೆ ಕೇಕ್, ಹಾರ – ಬೊಕ್ಕೆ ತರದೆ ಜನರು ಬಂದು ಆಶೀರ್ವಾದ ಮಾಡಿದರೆ ಸಾಕು ಎಂದು ಅಭಿ ಮನವಿ ಮಾಡಿದ್ದಾರೆ ಎಂದು ರಾಕ್‌ಲೈನ್ ಹೇಳಿದರು.

  • ಕೋಲಾರ, ಮಂಡ್ಯದಲ್ಲಿ ಬೀಗರೂಟ ಕ್ಯಾನ್ಸಲ್

    ಕೋಲಾರ, ಮಂಡ್ಯದಲ್ಲಿ ಬೀಗರೂಟ ಕ್ಯಾನ್ಸಲ್

    ಕೋಲಾರ/ಮಂಡ್ಯ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮದುವೆ, ಔತಣ ಕೂಟ ಮುಂತಾದ ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ರದ್ದು ಮಾಡಬೇಕು ಎಂದು ಶುಕ್ರವಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಹಾಗೂ ಮಂಡ್ಯದಲ್ಲಿ ನಡೆಯಬೇಕಿದ್ದ ಬೀಗರ ಊಟವನ್ನು ಕ್ಯಾನ್ಸಲ್ ಮಾಡಲಾಗಿದೆ.

    ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದ ಬಳಿ ಜೆಡಿಎಸ್ ಮುಖಂಡ ನಂಜುಂಡಗೌಡ ಪುತ್ರನ ವಿವಾಹದ ಪ್ರಯುಕ್ತ ಬಾಡೂಟ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು. ಆದರೆ ನಾಳೆ ನಡೆಯಬೇಕಿದ್ದ ಈ ಬೀಗರೂಟ ಕಾರ್ಯಕ್ರಮ ರದ್ದಾಗಿದೆ. 30 ಕೆ.ಜಿ ಕುರಿ, 50 ಕ್ವಿಂಟಾಲ್ ಕೋಳಿಯ ಬೃಹತ್ ಬಾಡೂಟಕ್ಕೆ ಸಿದ್ಧತೆ ನಡೆಸಲಾಗಿತ್ತು. ಲಕ್ಷಾಂತರ ರೂ. ಖರ್ಚು ಮಾಡಿ ಬಾಡೂಟ ಕಾರ್ಯಕ್ರಮ ಆಯೋಜನೆ ಮಾಡಿದ್ದವರು ಕಂಗಾಲಾಗಿದ್ದಾರೆ.

    ಕಳೆದೊಂದು ವಾರದಿಂದ ಊಟಕ್ಕಾಗಿ ಮೂರು ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸಬೇಕಿದ್ದರು. ಜಿಲ್ಲೆಯಲ್ಲಿ ಮುಂದಿನ ಒಂದು ವಾರ ಯಾವುದೇ ಸಭೆ ಸಮಾರಂಭ ಇಲ್ಲ. ಜಾತ್ರೆ, ಉತ್ಸವ, ಮದುವೆ, ಸಂತೆ ಆಯೋಜನೆಗೆ ಜಿಲ್ಲಾಧಿಕಾರಿ ಸಿ ಸತ್ಯಭಾಮ ಆದೇಶಿಸಿದ್ದರಿಂದ ಕಾರ್ಯಕ್ರಮ ರದ್ದಾಗಿದೆ.

    ಮಂಡ್ಯದಲ್ಲೂ ಕ್ಯಾನ್ಸಲ್:
    ಇತ್ತ ಮಂಡ್ಯದಲ್ಲಿ ಕೂಡ ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬೀಗರ ಔತಣಕೂಟ ಮುಂದೂಡಿಕೆಯಾಗಿದೆ. ನಾಳೆ ಮಂಡ್ಯದ ಗ್ರೀನ್ ಪ್ಯಾಲೇಸ್‍ನಲ್ಲಿ ಬೀಗರೂಟ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಶುಕ್ರವಾರ ಸುಪ್ರೀತ್ ಹಾಗೂ ಶ್ರೀಲಕ್ಷ್ಮೀ ಅವರ ವಿವಾಹವನ್ನು ಅವರ ಪೋಷಕರು ಧರ್ಮಸ್ಥಳದಲ್ಲಿ ಸರಳವಾಗಿ ಶಾಸ್ತ್ರೋಕ್ತವಾಗಿ ಮಾಡಿದ್ದರು. ಆದರೆ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿದ್ದ ಬೀಗರ ಊಟವನ್ನು ಮೂಂದೂಡಿಕೆ ಮಾಡಲಾಗಿದೆ ಎಂದು ವರ ಸುಪ್ರೀತ್ ತಂದೆ ಮಾಧು ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಸರ್ಕಾರದ ಆದೇಶವನ್ನ ಸ್ವಾಗತಿಸುತ್ತೇವೆ. ಜನರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೀಗರ ಔತಣಕೂಟಕ್ಕಾಗಿ ನಾವು ಎಲ್ಲಾ ತಯಾರಿ ಮಾಡಿದ್ದೆವು. ಆದರೆ ಸರ್ಕಾರ ನೂರಕ್ಕೂ ಹೆಚ್ಚು ಜನರನ್ನ ಸೇರಿಸಿ ಕಾರ್ಯಕ್ರಮ ಮಾಡುವಂತಿಲ್ಲ ಎಂದು ಆದೇಶ ಮಾಡಿದೆ. ಹೀಗಾಗಿ ಬೀಗರ ಊಟಕ್ಕೆ ಎರಡು ಸಾವಿರಕ್ಕೂ ಹೆಚ್ಚು ಜನ ಸೇರುತ್ತಿದ್ದರಿಂದ ಕಾರ್ಯಕ್ರಮವನ್ನ ಮುಂದೂಡಲಾಗಿದೆ. ಆಹ್ವಾನ ನೀಡಿದವರಿಗೆಲ್ಲಾ ಕಾರ್ಯಕ್ರಮ ಮುಂದೂಡಿದ ಬಗ್ಗೆ ಮಾಹಿತಿ ನೀಡಿದ್ದೇವೆ. ಕಾರ್ಯಕ್ರಮಕ್ಕಾಗಿ ಎಲ್ಲಾ ತಯಾರಿ ಮಾಡಿಕೊಂಡು ಅಡುಗೆಯವರಿಗೆ, ಸಮುದಾಯದ ಭವನದವ್ರಿಗೆ ಎಲ್ಲರಿಗೂ ಅಡ್ವಾನ್ಸ್ ನೀಡಲಾಗಿತ್ತು. ಈಗ ಕಾರ್ಯಕ್ರಮ ಮುಂದೂಡುವುದರಿಂದ ಅಡ್ವಾನ್ಸ್ ಪಡೆದವರೆಲ್ಲಾ ಸಹಕರಿಸುವುದಾಗಿ ತಿಳಿಸಿದ್ದಾರೆ. ತಂದೆಯಾಗಿ ಮಗನ ಮದುವೆ ಊಟ ಹಾಕಿಸಬೇಕೆಂಬ ಆಸೆ ಸಹಜವಾಗೆ ಇದೆ. ಆದರೆ ಸರ್ಕಾರದ ಆದೇಶಕ್ಕೆ ತಲೆಬಾಗಿದ್ದೇನೆ ಎಂದು ತಿಳಿಸಿದ್ದಾರೆ.