Tag: ಬೀದಿ ವ್ಯಾಪಾರ

  • ರೈಲ್ವೆ ಸ್ಟೇಷನ್ ಬಳಿ ವ್ಯಾಪಾರಿಗಳಿಂದ 17ರ ಹುಡುಗಿ ಮೇಲೆ ಅತ್ಯಾಚಾರ

    ರೈಲ್ವೆ ಸ್ಟೇಷನ್ ಬಳಿ ವ್ಯಾಪಾರಿಗಳಿಂದ 17ರ ಹುಡುಗಿ ಮೇಲೆ ಅತ್ಯಾಚಾರ

    ನವದೆಹಲಿ: 17 ವರ್ಷದ ಹುಡುಗಿಯ ಮೇಲೆ ಇಬ್ಬರು ವ್ಯಾಪಾರಿಗಳು ಅತ್ಯಾಚಾರ ಎಸಗಿದ ಘಟನೆ ರಾಷ್ಟ್ರ ರಾಜಧಾನಿಯ ತಿಲಕ್ ಸೇತುವೆ ಬಳಿ ನಡೆದಿದೆ.

    ತಿಲಕ್ ಸೇತುವೆ ಬಳಿ ರೈಲ್ವೆ ಹಳಿಗಳ ಬಳಿ ಈ ಘಟನೆ ನಡೆದಿದೆ. ಹುಡುಗಿಯು ಗುಜರಾತ್ ಮೂಲದವರಾಗಿದ್ದು, ಸ್ನೇಹಿತನ ಜೊತೆ ರೈಲ್ವೆ ಸ್ಟೇಷನ್‍ಗೆ ಬಂದಿದ್ದಳು. ಆದರೆ ಹುಡುಗಿಗೂ ಸ್ನೇಹಿತನಿಗೂ ಜಗಳವಾಗಿದೆ. ಇದಾದ ನಂತರ ಸ್ನೇಹಿತನು ಅವಳನ್ನು ಅಲ್ಲೇ ಬಿಟ್ಟು ಹೋಗಿದ್ದನು. ಆ ಸಂದರ್ಭದಲ್ಲಿ ವ್ಯಾಪಾರಿಗಳು 17 ವರ್ಷದ ಹುಡುಗಿಯನ್ನು ರೈಲಿಗೆ ಹತ್ತಿಸುವ ನೆಪದಲ್ಲಿ ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

    ಹುಡುಗಿಯು ವ್ಯಾಪಾರಿಗಳ ಬಳಿ ತನ್ನ ಮನೆಗೆ ಕರೆ ಮಾಡಲು ಮೊಬೈಲ್‍ನ್ನು ನೀಡುವಂತೆ ಕೇಳಿದ್ದಾಳೆ. ಇದಾದ ಬಳಿಕ ರೈಲನ್ನು ಹತ್ತಲು ಸಹಾಯ ಮಾಡುವಂತೆ ಯುವತಿ ವ್ಯಾಪಾರಿಗಳನ್ನು ಕೇಳಿದ್ದಾರೆ. ಆ ಸಂದರ್ಭದಲ್ಲಿ ವ್ಯಾಪಾರಿಗಳು ಈ ನಿಲ್ದಾಣದಲ್ಲಿ ರೈಲಿಲ್ಲ. ಬದಲಿಗೆ ಬೇರೆ ನಿಲ್ದಾಣದಲ್ಲಿ ರೈಲು ಲಭ್ಯವಿರುತ್ತೆ ಎಂದು ಹೇಳಿ ಬೇರೆ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮುಂದೆ ನಗ್ನತೆ ಪ್ರದರ್ಶನ – ವ್ಯಕ್ತಿಯ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ

    ನಂತರ ಅಲ್ಲಿ ಇಬ್ಬರು ವ್ಯಾಪಾರಿಗಳು ಸೇರಿ ಹುಡುಗಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 16 ವರ್ಷದ ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಿದ ದುಷ್ಕರ್ಮಿ

    Live Tv
    [brid partner=56869869 player=32851 video=960834 autoplay=true]

  • ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್

    ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್

    ಲಕ್ನೋ: ಬೀದಿ ವ್ಯಾಪಾರಿಯೊಬ್ಬ ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿದ್ದು, ಆರೋಗ್ಯ ದೃಷ್ಟಿಯಿಂದ ಅಂಗಡಿಯವನನ್ನು ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಲಕ್ನೋದ ಹೊರವಲಯದಲ್ಲಿರುವ ಕಾಕೋರಿಯ ರಸ್ತೆಬದಿಯಲ್ಲಿ ಉಪಾಹಾರ ಗೃಹವಿತ್ತು. ಆ ಅಂಗಡಿಯವನು ರೊಟ್ಟಿಯನ್ನು ತಯಾರಿಸಲು ಹಿಟ್ಟಿನ ಮೇಲೆ ಉಗುಳುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ 22 ಸೆಕೆಂಡಿನ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ಪರಿಣಾಮ ಅಂಗಡಿಯವನನ್ನು ಸೇರಿ ಐದು ಸಹಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು

    ಈ ಕುರಿತು ಪ್ರತಿಕ್ರಿಯಿಸಿದ ಕಕೋರಿ ಸಹಾಯಕ ಪೊಲೀಸ್ ಕಮಿಷನರ್ ಅಶುತೋಷ್ ಕುಮಾರ್, ಧಾಬಾ ಮಾಲೀಕ ಯಾಕೂಬ್ ಮತ್ತು ಡ್ಯಾನಿಶ್, ಹಫೀಜ್, ಮುಖ್ತಾರ್, ಫಿರೋಜ್ ಮತ್ತು ಅನ್ವರ್‍ರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

    ಆರೋಪಿಗಳ ವಿರುದ್ಧ ರೋಗ ಹರಡಿಸುವ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ಸಮಯದಲ್ಲಿ ಈ ರೀತಿಯ ಕೃತ್ಯ ಮಾಡಿದರುವುದು ದೊಡ್ಡ ಅಪರಾಧವಾಗಿದೆ. ಈ ರೀತಿ ರೊಟ್ಟಿ ಮಾಡುವುದರಿಂದ ಸೋಂಕು ಹೆಚ್ಚುತ್ತೆ. ಇವರ ನಿರ್ಲಕ್ಷ್ಯ ಸೋಂಕು ಹರಡಲು ದಾರಿಯಾಗುತ್ತೆ. ಇವರು ಸೋಂಕನ್ನು ಹರಡಲು ಮಾರಣಾಂತಿಕ ಕೃತ್ಯ ಎಸಗಿದ್ದಾರೆ ಎಂದರು. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    POLICE JEEP

    ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಸುಶೀಲ್ ರಜಪೂತ್ ಅಪ್ಲೋಡ್ ಮಾಡಿದ್ದಾನೆ. ವೀಡಿಯೋವನ್ನು ದೂರದಿಂದ ಚಿತ್ರೀಕರಿಸಲಾಗಿದೆ. ಅಡುಗೆಯವರು ನಿಜವಾಗಿಯೂ ಉಗುಳಿದ್ದಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಅದಕ್ಕೆ ನಾವು ಈ ಆರೋಪವನ್ನು ಖಚಿತಪಡಿಸಿಕೊಳ್ಳಲು ತಾಂತ್ರಿಕ ನೆರವು ಪಡೆಯುತ್ತೇವೆ ಎಂದು ವಿವರಿಸಿದರು.