Tag: ಬೀಫ್

  • ರಣ್ಬೀರ್ ಬೀಫ್ ತಿಂದ ಹೇಳಿಕೆ: ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗದಳ ಕಾರ್ಯಕರ್ತರು

    ರಣ್ಬೀರ್ ಬೀಫ್ ತಿಂದ ಹೇಳಿಕೆ: ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗದಳ ಕಾರ್ಯಕರ್ತರು

    ಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಸಿನಿಮಾ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹಾಗಾಗಿ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಊರೂರು ತಿರುಗುತ್ತಿದ್ದಾರೆ. ಪ್ರಚಾರದಲ್ಲಿ ತೊಡಗಿದ್ದಾರೆ. ಸದ್ಯ ಮಧ್ಯ ಪ್ರದೇಶದಲ್ಲಿರುವ  ಈ ಜೋಡಿ ಅಲ್ಲಿನ ಸುಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಬಂದ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸದಂತೆ ಅಲ್ಲಿನ ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

    ranbir alia

    ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಸಾಂಪ್ರದಾಯಿಕ ಬಟ್ಟೆಯಲ್ಲೇ ದೇವಸ್ಥಾನಕ್ಕೆ ಬಂದಿದ್ದಾರೆ. ದೇವಸ್ಥಾನದ ಶಿಷ್ಟಾಚಾರಗಳನ್ನೂ ಪಾಲಿಸಿದ್ದಾರೆ. ತಮಗೆ ಮತ್ತು ಸಿನಿಮಾಗೆ ಒಳ್ಳೆದಾಗಲಿ ಎಂದು ಪ್ರಾರ್ಥಿಸಲು ಬಂದ ಜೋಡಿಯನ್ನು ಭಜರಂಗ ದಳದ ಕಾರ್ಯಕರ್ತರು ತಡೆದಿರುವುದಕ್ಕೆ ಕಾರಣ, ರಣ್ಬೀರ್ ಕಪೂರ್ ಈ ಹಿಂದೆ ಹೇಳಿದ್ದ ಹೇಳಿಕೆ. ಹಲವು ವರ್ಷಗಳ ಹಿಂದೆ ಹೇಳಿದ್ದ ಆ ಹೇಳಿಕೆ ಇವತ್ತು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದನ್ನೂ ಓದಿ:ನಟ ಧನಂಜಯ್ ಮತ್ತು ಅದಿತಿ ಪ್ರಭುದೇವ್ ರಿಯಲ್ ಆಗಿ ಮದುವೆ ಆಗ್ಬೇಕಿತ್ತು: ಆದರೆ ತಪ್ಪಿಸಿದವರು ಯಾರು?

    ರಣ್ಬೀರ್ ಕಪೂರ್ ಈ ಹಿಂದೆ ಸಂದರ್ಶನವೊಂದರಲ್ಲಿ ನಾನ್ ವೆಜ್ ಕುರಿತು ಮಾತನಾಡುತ್ತಾ, ತಮ್ಮದು ಮಾಂಸದೂಟ ಮಾಡುವ ಕುಟುಂಬ. ಅದರಲ್ಲೂ ನಾನಾ ರೀತಿಯ ಮಾಂಸದಡಿಗೆ ತಮ್ಮ ಮನೆಯಲ್ಲಿ ತಯಾರಾಗುತ್ತದೆ. ನನಗೆ ಬೀಫ್ ಅಂದರೆ ತುಂಬಾ ಇಷ್ಟ ಎಂದು ಹೇಳಿದ್ದರು. ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂಗಳು ದೇವರು ಎಂದು ಪೂಜಿಸುವ ಗೋವಿನ ಮಾಂಸವನ್ನು ತಿನ್ನುವ ರಣ್ಬೀರ್ ನಮ್ಮ ದೇವಸ್ಥಾನಗಳಿಗೆ ಬರುವುದು ಬೇಡವೆಂದು ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

    ಸಡನ್ನಾಗಿ ನಡೆದ ಬೆಳವಣಿಗೆಯಿಂದ ಗಲಿಬಿಲಿಗೊಂಡ ರಣ್ಬೀರ್ ಮತ್ತು ಆಲಿಯಾ ಭಟ್, ಅದೆಷ್ಟೇ ಸಮಾಧಾನ ಹೇಳಿದರೂ ಕೇಳದ ಕಾರಣದಿಂದಾಗಿ ದೇವಸ್ಥಾನದಿಂದ ಅವರು ಹೊರಗುಳಿದಿದ್ದಾರೆ. ಕೇವಲ ನಿರ್ದೇಶಕ ಅಯಾನ್ ಮುಖರ್ಜಿ ಒಬ್ಬರೇ ದೇವಸ್ಥಾನದ  ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದಿದ್ದಾರೆ. ಮತ್ತು ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಶೇರ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ – ಸಿದ್ದರಾಮಯ್ಯ

    ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ – ಸಿದ್ದರಾಮಯ್ಯ

    ಬೆಂಗಳೂರು: ನನ್ನ ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ ಹೇಳಿದ್ದಾರೆ.

    ಕೊಡವರೂ ಬೀಫ್‌ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ. ವಿಶೇಷವಾದ ಗೌರವವೂ ಇದೆ ಎಂದು ಟ್ವೀಟ್‌ ಮಾಡಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದು ಏನು?
    ತಮ್ಮ ಮೈಸೂರಿನ ಭಾಷಣದಲ್ಲಿ ಬಿಜೆಪಿ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಮಾತನಾಡುತ್ತಾ, ಸಿದ್ದರಾಮಯ್ಯ ಗೋಹತ್ಯೆ ಪರವಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಬೀಫ್ ಅನ್ನು‌ ಮುಸ್ಲಿಮರು ಮಾತ್ರ ತಿನ್ನುತ್ತಾರಾ? ಕ್ರೈಸ್ತರು ತಿನ್ನುತ್ತಾರೆ, ದಲಿತರು ತಿನ್ನುತ್ತಾರೆ. ಕೊಡವರು ತಿನ್ನುತ್ತಾರೆ. ಬೇರೆ ಬೇರೆ ಕಡೆ ತಿನ್ನುತ್ತಾರೆ. ಹಿಂದುಳಿದವರು ತಿನ್ನುತ್ತಾರೆ. ನನಗೆ ತಿನ್ನಬೇಕು ಅಂತ ಅನಿಸಿದ್ರೆ ನಾನು ಯಾವುದು ಬೇಕಾದರೂ ತಿನ್ನುತ್ತೇನೆ. ಅದನ್ನು ಪ್ರಶ್ನೆ ಮಾಡಲು ನೀನು ಯಾರು ಅಂತ ನಾನು ಈ ಹಿಂದೆ ಸದನದಲ್ಲಿ ಪ್ರಶ್ನೆ ಮಾಡಿದ್ದೆ. ನನಗೆ ಯಾವುದು ಇಷ್ಟ ಆಗುತ್ತದೋ ಅದನ್ನು ತಿನ್ನುತ್ತೇನೆ ಎಂದು ಹೇಳಿದ್ದರು.

    ಅರ್ಥ ಕಲ್ಪಿಸಬೇಡಿ:
    ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ. ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ. ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ ಎಂದು ಟ್ವೀಟ್‌ ಮಾಡಿದ್ದಾರೆ.

  • ಬೀಫ್ ರಫ್ತಿನಲ್ಲಿ ದೇಶ ಮುಂಚೂಣಿಯಲ್ಲಿದೆ, ತಾಕತ್ತಿದ್ದರೆ ಈಶ್ವರಪ್ಪ ತಡೆಯಲಿ: ಉಗ್ರಪ್ಪ ಸವಾಲು

    ಬೀಫ್ ರಫ್ತಿನಲ್ಲಿ ದೇಶ ಮುಂಚೂಣಿಯಲ್ಲಿದೆ, ತಾಕತ್ತಿದ್ದರೆ ಈಶ್ವರಪ್ಪ ತಡೆಯಲಿ: ಉಗ್ರಪ್ಪ ಸವಾಲು

    ಬೆಂಗಳೂರು: ಬೀಫ್(ದನದ ಮಾಂಸ) ರಫ್ತಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಈಶ್ವರಪ್ಪನವಗೆ ಧಮ್ಮು, ತಾಕತ್ತು ಇದ್ದರೆ ದೇಶದ ಬೀಫ್ ರಫ್ತನ್ನು ತಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ಬಿಡಬೇಕು ಮಿಸ್ಟರ್ ಈಶ್ವರಪ್ಪ. ನಿನ್ನೆಯಷ್ಟೇ ಈಶ್ವರಪ್ಪನವರು ಬಿಜೆಪಿಗೆ ಮತ ಹಾಕದವರು ಪಾಕ್ ಪರ ಇರುತ್ತಾರೆ ಎಂದು ಹೇಳಿಕೆ ನೀಡಿದ್ದರು ಇದಕ್ಕೆ ಇಂದು ಉಗ್ರಪ್ಪ ತಿರುಗೇಟು ನೀಡಿದ್ದಾರೆ.

    ಹಿಂದಿ ಹೇರಿಕೆ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ದೇಶದಲ್ಲಿ ಹಲವು ಭಾಷೆಗಳಿವೆ. ಗುಜರಾತಿ, ಕನ್ನಡ, ಮಲೆಯಾಳಿ, ತಮಿಳು, ತೆಲುಗು, ಅಸ್ಸಾಮಿ, ಪಂಜಾಬಿ ಸೇರಿ 22 ಭಾಷೆಗಳಿವೆ. ನಿಮ್ಮ ಗುಜರಾತಿ ಕೂಡ ಪ್ರಾಂತೀಯ ಭಾಷೆ. ಇದನ್ನು ನೋಡಿಯೂ ನೀವು ಹಿಂದಿ ಹೇರಿಕೆಗೆ ಹೊರಟಿದ್ದೇಕೆ, ವಿವಿಧತೆಯಲ್ಲಿ ಏಕತೆಯನ್ನು ಮುರಿಯೋಕೆ ನೋಡುತ್ತಿದ್ದೀರಾ, ಸಂವಿಧಾನದ ಬಗ್ಗೆ ನಿಮಗೆ ಗೌರವವಿದ್ದರೆ ಈ ನಿರ್ಧಾರವನ್ನು ಕೈಬಿಡಿ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರಿಗೆ ಮನುಷ್ಯತ್ವ ಇಲ್ಲ. ನೆರೆ ವಿಚಾರದಲ್ಲಿ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಲಿಲ್ಲ. ಈಶ್ವರಪ್ಪ, ಮಾಧುಸ್ವಾಮಿ, ಲಕ್ಷ್ಮಣ ಸವದಿ ಬಳಸಿರುವ ಪದಗಳು ಅಧಿಕಾರದ ಮದ ನೆತ್ತಿಗೇರಿರುವುದನ್ನು ಸಾಬೀತುಪಡಿಸುತ್ತವೆ. ನಾನು ನೀಲಿ ಚಿತ್ರ ನೋಡಿದ್ದೇನಷ್ಟೇ. ಕಾಂಗ್ರೆಸ್ ಅವರು ನೀಲಿಚಿತ್ರ ಮಾಡುತ್ತಾರೆ ಎಂದು ಸವದಿ ಹೇಳಿದ್ದಾರೆ. ಯಾರು ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸಲಿ. ಒಬ್ಬ ಉನ್ನತ ಹುದ್ದೆಯಲ್ಲಿ ಇರುವವರಿಗೆ ಈ ರೀತಿ ಮಾತು ಜಾರಬಾರದು ಎಂದು ಎಚ್ಚರಿಸಿದ್ದಾರೆ.

    ಬೆಳಗಾವಿಯಲ್ಲಿ ಅಧಿವೇಶನ ನಡೆಸಲೇ ಬೇಕು. ಅಲ್ಲಿ ಅಧಿವೇಶನ ನಡೆಸದಿದ್ದರೆ ಆ ಭಾಗದ ಜನರಿಗೆ ಸರ್ಕಾರ ಮೋಸ ಮಾಡಿದಂತೆ. ಅಲ್ಲದೆ, ಅನ್ಯಾಯ ಮಾಡಿದಂತೆ. ಇದು ಬಿಜೆಪಿಗರ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೆ, ಎಸ್‍ಇಪಿ, ಟಿಎಸ್‍ಪಿ ಹಣವನ್ನು ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಶೋಷಿತ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಡೈವರ್ಟ್ ಮಾಡಲು ಹೊರಟಿರುವುದು ಸರಿಯಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಅತ್ಯಾಚಾರ ಸಂತ್ರಸ್ತರಿಗೆ, ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸಹ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಮುಸ್ಲಿಂ ಮತ ಸೆಳೆಯಲು ಮಾಜಿ ಸಿಎಂನಿಂದ ಬೀಫ್ ಅಸ್ತ್ರ..!

    ಮುಸ್ಲಿಂ ಮತ ಸೆಳೆಯಲು ಮಾಜಿ ಸಿಎಂನಿಂದ ಬೀಫ್ ಅಸ್ತ್ರ..!

    ಬಾಗಲಕೋಟೆ: ಮುಸ್ಲಿಂ ಸಮುದಾಯದ ಮತ ಸೆಳೆಯಲು ಮಾಜಿ ಸಿಎಂ ಸಿದ್ಧರಾಮಯ್ಯ ಬೀಫ್ ಅಸ್ತ್ರ ಬಿಟ್ಟಿದ್ದಾರೆ. ನಾನು ಈವರೆಗೂ ಬೀಫ್ ತಿಂದಿಲ್ಲ, ತಿನ್ನಬೇಕು ಅನ್ನಿಸಿದ್ರೆ ತಿಂತೇನೆ. ಕೇಳೋಕೆ ನೀವ್ಯಾರು ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಗೋಹತ್ಯೆ ವಿರೋಧಿಗಳನ್ನ ಪ್ರಶ್ನಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮತ ಓಲೈಕೆಗೆ ಮುಂದಾಗಿದ್ದಾರೆ.

    ಜಮಖಂಡಿಯಲ್ಲಿ ಪ್ರಚಾರದ ವೇಳೆ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಿ, ಸಿದ್ದರಾಮಯ್ಯ ಮಾತನಾಡಿದ್ರು. ಇದಕ್ಕೆ ಜನ ಭರ್ಜರಿ ಚಪ್ಪಾಳೆ ಹೊಡೆದ್ರು. ಯಡಿಯೂರಪ್ಪ ಸಿಎಂ ಆಗಬಾರದೆಂದು ಅವ್ರ ಪಕ್ಷದಲ್ಲೇ ಶಡ್ಯಂತ್ರ ನಡೆದಿದೆ, ಅವರು ಚೀಫ್‍ಮಿನಿಸ್ಟರ್ ಆಗಬಾರದು ಅನ್ನೋದು ಅನ್ನೋ ಒಂದು ಗುಂಪು ಬಿಜೆಪಿಯಲ್ಲಿದೆ. ಅವರು ಸಿಎಂ ಆಗೋದು ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

    ಯಡಿಯೂರಪ್ಪ ಸಿಎಂ ಆಗೋಕೆ ಅವ್ರ ಪಕ್ಷಕ್ಕೆ ಮೆಜಾರಿಟಿ ಇಲ್ಲ. ಯಡಿಯೂರಪ್ಪ ಸಿಎಂ ಆಗಲು ಏನೇ ಪ್ರಯತ್ನ ಮಾಡಿದ್ರು ಅದಕ್ಕೆ ಅಡ್ಡಗಾಲು ಹಾಕಲು, ಬಿಜೆಪಿಯಲ್ಲಿ ಬಹಳಷ್ಟು ಜನ ಇದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಸಿಎಂ ಕುಮಾರಸ್ವಾಮಿ ಆಗಮನದ ಬಗ್ಗೆ ಪ್ರತಿಕ್ರಿಯಿಸಿ, ಹಾಗೇನೂ ಇಲ್ಲ, ಕುಮಾರಸ್ವಾಮಿ ಬಳ್ಳಾರಿಗೆ ಬರ್ತಾರೆ. ಆದ್ರೆ ಜಮಖಂಡಿ ಕ್ಷೇತ್ರಕ್ಕೆ ಬರೋ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ ಅಂದ್ರು.

    ನರೇಂದ್ರ ಮೋದಿ, ಪ್ರಧಾನಿಯಾಗೋ ಮುಂಚೆ, ಗ್ಯಾಸ್ ಸಿಲಿಂಡರ್ ಬೆಲೆ 400 ಇತ್ತು. ಇಂದು 900 ಚಿಲ್ಲರೆ ಆಗಿದೆ. ಈ ನರೇಂದ್ರ ಮೋದಿ ತೊಲಗಬೇಕು, ತೊಲಗದಿದ್ರೆ ಅಲ್ಪಸಂಖ್ಯಾತರಿಗೆ, ದಲಿತರಿಗೆ, ಹಿಂದುಳಿದವ್ರಿಗೆ ನೆಮ್ಮದಿ ಇರಲ್ಲ ಎಂದ್ರಲ್ಲದೇ, ಬಿಜೆಪಿಯವ್ರ ಬಣ್ಣದ ಮಾತುಗಳಿಗೆ ಕಿವಿಗೊಡಬೇಡಿ. ಕುಂಬಾರಹಳ್ಳ ಗ್ರಾಮಸ್ಥರೆಲ್ಲರೂ ಹಸ್ತದ ಗುರಿತಿಗೆ ಓಟ್ ಹಾಕಬೇಕು. ಕಮಲ ಮುದುಡಬೇಕು. ನಾನು ನಮ್ಮಪ್ಪನ ಮನೆ ದುಡ್ಡು ಕೊಟ್ಟಿಲ್ಲ. ಜನರ ದುಡ್ಡು ಜನ್ರಿಗೆ ಕೊಟ್ಟಿದ್ದೇನೆ. ಯಡಿಯೂರಪ್ಪ ಅವ್ರಪ್ಪನ ಮನೆ ದುಡ್ಡು ಕೊಡ್ತಾರಾ? ಎಂದು ಬಿಜೆಪಿ ಹಾಗೂ ಮೋದಿ ಬಗ್ಗೆ ವಾಗ್ದಾಳಿ ನಡೆಸಿದ್ರು.

    ನಮ್ಮಲ್ಲಿ ಒಳ್ಳೆಯ ಜನರಿದ್ದಾರೆ, ಅಲ್ಲಿ ದುಷ್ಟರಿದ್ದಾರೆನ್ನುವ ಮೂಲಕ, ಬಿಜೆಪಿಯ ನಾಯಕರು ದುಷ್ಟರೆಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv