Tag: ಬುಲೆಟ್ ಟ್ರೈನ್

  • ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಬುಲೆಟ್ ಟ್ರೈನ್ ಯೋಜನೆಯ ಮುಖ್ಯಸ್ಥರಾಗಿದ್ದ ಸತೀಶ್ ಅಗ್ನಿಹೋತ್ರಿ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ.

    NARENDRA MODI

    ರಾಷ್ಟ್ರೀಯ ಹೈಸ್ಪೀಡ್‌ ರೈಲ್ವೇ ಕಾರ್ಪೋರೇಶನ್‌ ಲಿಮಿಟೆಡ್‌ (NHSRCL) ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಮೇಲೆ ಅಧಿಕಾರ ದುರ್ಬಳಕೆ ಮತ್ತು ಯೋಜನೆ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿರುವ ಮತ್ತು ಬೇರೆ ಕಂಪನಿಗೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಜಾಗೊಳಿಸಿದೆ. ಇದನ್ನೂ ಓದಿ: ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್‌ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್‌ ಕರೆ

    ಸತೀಶ್ ಅಗ್ನಿಹೋತ್ರಿ ಬುಲೆಟ್ ಟ್ರೈನ್ ಮುಖ್ಯಸ್ಥ ಹುದ್ದೆಯನ್ನು ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲು ನಿರ್ದೇಶಿಸಲಾಗಿದೆ ಎಂದು NHSRCL ಕಂಪನಿ ಕಾರ್ಯದರ್ಶಿಗೆ ಜುಲೈ 7 ರಂದು ರೈಲ್ವೇ ಮಂಡಳಿ ಬರೆದ ಪತ್ರದಲ್ಲಿ ಸ್ಪಷ್ಟವಾಗಿದೆ. ಪ್ರಸ್ತುತ NHSRCLನಲ್ಲಿ ನಿರ್ದೇಶಕರಾಗಿ ಅಧಿಕಾರದಲ್ಲಿರುವ ರಾಜೇಂದ್ರ ಪ್ರಸಾದ್ ಅವರಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಳ್ಳಲು ನಿರ್ದೇಶಿಸಲಾಗಿದೆ. ಇದನ್ನೂ ಓದಿ: 100ಕ್ಕೂ ಹೆಚ್ಚು ಟ್ವಿಟ್ಟರ್ ಎಚ್‌ಆರ್ ಉದ್ಯೋಗಿಗಳು ವಜಾ

    ಅಗ್ನಿಹೋತ್ರಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988ರ ಅಡಿಯಲ್ಲಿ ತನಿಖೆ ನಡೆಸಿ ಆರು ತಿಂಗಳೊಳಗೆ ಅಥವಾ 2022ರ ಡಿಸೆಂಬರ್ 12 ರೊಳಗೆ ತನಿಖಾ ವರದಿಯನ್ನು ಲೋಕಪಾಲ್ ಕಚೇರಿಗೆ ಸಲ್ಲಿಸುವಂತೆ ಲೋಕಪಾಲ್ ನ್ಯಾಯಾಲಯವು ಸಿಬಿಐಗೆ ನಿರ್ದೇಶನ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ: ಸೆಹ್ವಾಗ್

    ಧೋನಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ: ಸೆಹ್ವಾಗ್

    – ಮುರುಳಿ ವಿಜಯ್ ಟಿ-20 ಆಡುವಂತೆ ಕಾಣುತ್ತಿಲ್ಲ

    ನವದೆಹಲಿ: ಎಂಎಸ್ ಧೋನಿಯವರು ಚೆನ್ನೈ ತಂಡಕ್ಕಾಗಿ ನಾಲ್ಕನೇ ಕ್ರಮಾಂಕದಲ್ಲಿ ಆಡುವಷ್ಟರಲ್ಲಿ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತೆ ಎಂದು ಭಾರತದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರ ಹಾಸ್ಯ ಮಾಡಿದ್ದಾರೆ.

    ಐಪಿಎಲ್‍ನಲ್ಲಿ ಮೂರು ಬಾರಿ ಚಾಂಪಿಯನ್ ಆಗಿರುವ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಈ ಬಾರಿಯ ಐಪಿಎಲ್‍ನಲ್ಲಿ ನಿರಾಸೆಯ ಪ್ರದರ್ಶನ ತೋರುತ್ತಿದೆ. ಅನುಭವಿ ಆಟಗಾರ ಗೈರು, ಉತ್ತಮ ಆಟಗಾರ ಗಾಯದ ಸಮಸ್ಯೆಯಿಂದ ಚೆನ್ನೈ ತಂಡ ವೀಕ್ ಆದಂತೆ ಕಾಣುತ್ತಿದೆ. ಈ ನಡುವೆ ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆಯೂ ಚರ್ಚೆಯಾಗುತ್ತಿದೆ.

    ಈ ನಡುವೆ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಮಾತನಾಡಿರುವ ಸೆಹ್ವಾಗ್ ಅವರು, ಸಿಎಸ್‍ಕೆ ತಂಡದ ಆರಂಭ ಉತ್ತಮವಾಗಿತ್ತು. ಆದರೆ ಕಳೆದ ಎರಡು ಪಂದ್ಯಗಳಿಂದ ಚೆನ್ನೈ ತಂಡ ಮಂಕಾಗಿದೆ. ಮುರುಳಿ ವಿಜಯ್ ಟಿ-20 ಆಡುವಂತೆ ಕಾಣುತ್ತಿಲ್ಲ. ಶೇನ್ ವಾಟ್ಸನ್ ಹಳೆಯ ಇಂಜಿನ್‍ನಂತೆ. ಅವರಿಗೆ ಸ್ಟಾರ್ಟಿಂಗ್ ಟ್ರಬಲ್ ಇದೆ. ಫಾಪ್ ಡು ಫ್ಲೆಸಿಸ್ ಅವರು ಬಂದು ತಮ್ಮ ತಂಡಕ್ಕೆ ನಾವು ಆಡುತ್ತಿರುವುದು ಟಿ-20, ಟೆಸ್ಟ್ ಅಲ್ಲ ಎಂಬುದನ್ನು ಆರ್ಥ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಇದೇ ವೇಳೆ ಧೋನಿ ಬ್ಯಾಟಿಂಗ್ ಕ್ರಮಾಂಕದ ಕುರಿತು ಮಾತನಾಡಿರುವ ಸೆಹ್ವಾಗ್, ತಂಡ ತೊಂದರೆಯಲ್ಲಿ ಇದ್ದರೂ ಕೂಡ ಎಂಎಸ್ ಧೋನಿಯವರು ಬ್ಯಾಟ್ ಮಾಡಲು ಬರುತ್ತಿಲ್ಲ. ಎಂಎಸ್ ಧೋನಿ ತಂಡಕ್ಕಾಗಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಮನಸ್ಸು ಮಾಡುವುದರೊಳಗೆ ಭಾರತಕ್ಕೆ ಬುಲೆಟ್ ಟ್ರೈನ್ ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಸದ್ಯ ಸೆಹ್ವಾಗ್ ಅವರ ಈ ವಿಡಿಯೋ ವೈರಲ್ ಆಗಿದೆ.

    ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯ ಸೋಲನ್ನು ಕಂಡಾಗ ಟ್ವೀಟ್ ಮಾಡಿದ್ದ ಸೆಹ್ವಾಗ್ ಅವರು, ಚೆನ್ನೈ ಬ್ಯಾಟ್ಸ್ ಮನ್ಸ್ ಸರಿಯಾಗಿ ಆಡುತ್ತಿಲ್ಲ. ಮುಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಹೋಗುವ ಮೊದಲು ಗ್ಲುಕೋಸ್ ತೆಗೆದುಕೊಂಡು ಬರುವಂತೆ ಹೇಳಿದ್ದರು. ಜೊತೆಗೆ ಧೋನಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬರುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

    ಚೆನ್ನೈ ತಂಡದ ಕೀ ಪ್ಲೇಯರ್ಸ್ ಟೀಮಿನಲ್ಲಿ ಇಲ್ಲದೇ ಇರುವುದು ಚೆನ್ನೈಗೆ ಮುಳುವಾಗಿ ಕಾಡುತ್ತಿದೆ. ವೈಯಕ್ತಿಕ ಕಾರಣ ಹೇಳಿ ರೈನಾ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಜೊತೆಗೆ ಉತ್ತಮ ಲಯದಲ್ಲಿದ್ದ ಅಂಬಾಟಿ ರಾಯುಡು ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ ತಂಡದಲ್ಲಿ ಬ್ಯಾಟಿಂಗ್ ಲೈನಪ್ ಜೋಡಣೆ ಮಾಡುವುದು ಕಷ್ಟವಾಗುತ್ತಿದೆ ಎಂದು ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಅಭಿಪ್ರಾಯ ಪಟ್ಟಿದ್ದಾರೆ. ಚೆನ್ನೈ ಮುಂದಿನ ಪಂದ್ಯವನ್ನು ಅಕ್ಟೋಬರ್ 2ರಂದು ಆಡಲಿದ್ದು, ಈ ತಂಡದಲ್ಲಿ ಉತ್ತಮ ಆಟದೊಂದಿಗೆ ತಂಡ ಕಮ್‍ಬ್ಯಾಕ್ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

  • ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ

    ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ

    ಮುಂಬೈ: ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 80 ಗಂಟೆಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ನಾನು ಯಾವುದೇ ಹಣಕಾಸು ನಿರ್ಧಾರವನ್ನು ಕೈಗೊಂಡಿಲ್ಲ. ಈ ಕುರಿತು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ ಯಾವುದೇ ಹಣವನ್ನು ಕೇಂದ್ರ ಸರ್ಕಾರಕ್ಕೆ ಮರಳಿ ಕಳುಹಿಸಿಲ್ಲ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಣಕಾಸು ವ್ಯವಸ್ಥೆಯನ್ನು ಪರಿಶೀಲಿಸಿದರೆ ಈ ಕುರಿತು ತಿಳಿಯುತ್ತದೆ ಸ್ಪಷ್ಟಪಡಿಸಿದರು.

    ಈ ಎಲ್ಲ ಹೇಳಿಕೆಗಳು ಸುಳ್ಳು, ಬುಲೆಟ್ ರೈಲು ಯೋಜನೆಯಲ್ಲಿ ಸಹ ಕೇಂದ್ರ ಸರ್ಕಾರ ನಿಯೋಜಿಸಿದ ಕಂಪನಿ ಕಾಮಗಾರಿ ನಡೆಸುತ್ತಿದೆ. ರಾಜ್ಯ ಸರ್ಕಾರ ಬುಲೆಟ್ ರೈಲಿಗೆ ಕೇವಲ ಭೂಮಿಯನ್ನು ಮಾತ್ರ ನೀಡುತ್ತಿದೆ. ಇದನ್ನು ಹೊರತು ಪಡಿಸಿದರೆ ಯಾವುದೇ ಹಣಕಾಸು ವ್ಯವಹಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ನಡೆದಿಲ್ಲ. ಹೀಗಿರುವಾಗ ಹಣ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಹೇಳಿಕೆಗಳು ಸುಳ್ಳು ಎಂದು ತಿಳಿಸಿದರು.

    ನಾನು ಯಾವುದೇ ಪ್ರಮುಖ ನಿರ್ಧಾರವನ್ನು ಕೈಗೊಂಡಿಲ್ಲ, ಸರ್ಕಾರದ ವಿತ್ತ ವಿಭಾಗವನ್ನು ಪರಿಶೀಲಿಸಿದರೆ ಸತ್ಯ ತಿಳಿಯುತ್ತದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

    ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದು ಡ್ರಾಮಾ, ಕೇಂದ್ರ ಸರ್ಕಾರದ ಹಣವನ್ನು ಸಿಎಂ ಖಾತೆಯಿಂದ ಮರಳಿ ಕೇಂದ್ರಕ್ಕೆ ಕಳುಹಿಸಲು ಫಡ್ನವಿಸ್ 80 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು ಎಂದು ಸಂಸದ ಅನಂತ್‍ಕುಮಾರ್ ಹೆಗ್ಡೆ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಹೆಗ್ಡೆ ಮಾತನಾಡಿದ್ದರು.

    ವಿಡಿಯೋದಲ್ಲಿ ಹೇಳಿದ್ದೇನು..?
    ನಿಮಗೆಲ್ಲ ಗೊತ್ತಿದೆ. ಮಹರಾಷ್ಟ್ರದಲ್ಲಿ ಕೇವಲ 80 ತಾಸಿಗೆ ನಮ್ಮವರು ಮುಖ್ಯಮಂತ್ರಿಯಾದರು. ನಂತರ ಫಡ್ನವಿಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಯಾಕೆ ಈ ನಾಟಕ ಮಾಡಬೇಕಿತ್ತು?. ನಮಗೇನೂ ಗೊತ್ತಿರಲಿಲ್ವ. ಬಹುಮತ ಇಲ್ಲ ಎಂದು ಗೊತ್ತಿದ್ದರೂ ಯಾಕೆ ಸಿಎಂ ಆಗಲು ಹೋದ್ರು? ಇಂದು ಸಾಮಾನ್ಯವಾಗಿ ಎಲ್ಲರನ್ನೂ ಕೇಳಬಹುದಾದ ಪ್ರಶ್ನೆಯಾಗಿದೆ.

    ಸುಮಾರು 40 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಸಿಎಂ ಅವರ ನಿಯಂತ್ರಣದಲ್ಲಿತ್ತು. ಕಾಂಗ್ರೆಸ್ಸಿನವರು, ಎನ್‍ಸಿಪಿ ಮತ್ತು ಶಿವಸೇನೆಯವರು ಬಂದರೆ ಖಂಡಿತವಾಗಿ ಆ 40 ಸಾವಿರ ಕೋಟಿ ರೂ. ಹಣಕ್ಕೂ ತುಳಸಿ ನೀರು ಬಿಡುತ್ತಿದ್ದರು. ಅದು ಅಭಿವೃದ್ಧಿಗೆ ಹೋಗುತ್ತಿರಲಿಲ್ಲ. ಯಾಕಂದರೆ ಅದಷ್ಟೂ ಕೇಂದ್ರ ಸರ್ಕಾರದ್ದಾಗಿತ್ತು.

    ಈ ಎಲ್ಲಾನು ಮುಂಚೆನೇ ಪ್ಲಾನ್ ಮಾಡಿದ್ದರು. ಹೀಗಾಗಿ ಏನಾದ್ರೂ ಆಗಲಿ ಒಂದು ದೊಡ್ಡ ನಾಟಕ ಆದರೂ ಮಾಡಲೇಬೇಕು ಅಂತ ತೀರ್ಮಾನವಾಯಿತು. ಅದಕ್ಕೋಸ್ಕರ ಸ್ವಲ್ಪ ಮಟ್ಟಿಗೆ ಹೊಂದಾಣಿಕೆ ಮಾಡಿಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಮಾಡಿ 15 ಗಂಟೆಯೊಳಗಡೆ ಅದಷ್ಟೂ ಗಣವನ್ನು ಎಲ್ಲೆಲ್ಲಿ ತಲುಪಿಸಬೇಕಿತ್ತೋ ಅಲ್ಲಲ್ಲಿ ತಪಿಸುವ ಮೂಲಕ ವ್ಯವಸ್ಥಿತವಾಗಿ ಅದನ್ನು ರಕ್ಷಣೆ ಮಾಡುವ ಕೆಲಸವನ್ನು ಫಡ್ನವಿಸ್ ಮಾಡಿದರು.

    ಸಂಪೂರ್ಣವಾಗಿ ಹಣವನ್ನು ಕೇಂದ್ರ ಸರ್ಕಾರಕ್ಕೆ ವಾಪಸ್ ನೀಡಿದರು. ಇಲ್ಲೇ ಇದ್ದರೆ ಮುಂದಿನ ಮುಖ್ಯಮಂತ್ರಿ ಮುಂದೇನು ಮಾಡಬಹುದೆಂದು ನಿಮಗೆ ಗೊತ್ತಿದೆ ಅಲ್ವ ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

    ಒಟ್ಟಿನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯ ಖಾತೆಯಲ್ಲಿ 40 ಸಾವಿರ ಕೋಟಿ ರೂಪಾಯಿ ಇತ್ತು. ಈ ದುಡ್ಡನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಖಾತೆಗೆ ವರ್ಗಾ ಮಾಡಬೇಕಿತ್ತು. ಅದಕ್ಕಾಗಿ ನಾಟಕ ಮಾಡಿದರು ಎಂದು ಹೇಳಿದ್ದು, ಸದ್ಯ ಸಂಸದರ ಈ ಹೇಳಿಕೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಫಡ್ನವಿಸ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

  • ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು: ಮೆಟ್ರೋಮ್ಯಾನ್ ಇ. ಶ್ರೀಧರನ್

    ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು: ಮೆಟ್ರೋಮ್ಯಾನ್ ಇ. ಶ್ರೀಧರನ್

    ಬೆಂಗಳೂರು: ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು. ಅದು ಅತ್ಯಂತ ದುಬಾರಿ. ಅದು ಜನಸಾಮಾನ್ಯರನ್ನು ತಲುಪಲು ಸಾಧ್ಯವೇ ಇಲ್ಲ. ನಮಗೆ ಬೇಕಾಗಿರೋದು ಆಧುನಿಕ, ಸ್ವಚ್ಛ, ಸುರಕ್ಷಿತ ಮತ್ತು ವೇಗದ ರೈಲು ವ್ಯವಸ್ಥೆ ಎಂದು ಮೆಟ್ರೋಮ್ಯಾನ್ ಎಂದೇ ಖ್ಯಾತರಾಗಿರೋ ಇ. ಶ್ರೀಧರನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

    ಖಾಸಗಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತಾಡಿದ ಶ್ರೀಧರನ್, ಪರೋಕ್ಷವಾಗಿಯೇ ಪ್ರಧಾನಿ ಮೋದಿಯ ಮಹತ್ವಕಾಂಕ್ಷೆಯ 1 ಲಕ್ಷ ಕೋಟಿ ರೂಪಾಯಿ ವೆಚ್ಚದ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಪ್ರಾಮಾಣೀಕರಣ ಹಾಗೂ ಸ್ಥಳೀಯೀಕರಣಕ್ಕಾಗಿ ಮೆಟ್ರೋ ಸೇವೆ ದೀರ್ಘ ಕಾಲ ಇರಲಿ. ಪ್ರಾಮಾಣೀಕರಣದಿಂದ ರೈಲುಗಳ ಸಾಮಥ್ರ್ಯ ಹೆಚ್ಚುತ್ತದೆ ಹಾಗೂ ವೆಚ್ಚ ಕಡಿಮೆಗೊಳಿಸುತ್ತದೆ. ನಾವು ಇದರಿಂದ ‘ಮೇಕ್ ಇನ್ ಇಂಡಿಯಾ’ ಪ್ರಾಜೆಕ್ಟ್ ನಲ್ಲಿ ಕೋಚ್ ಹಾಗೂ ಉಳಿದ ಭಾಗಗಳನ್ನು ತಯಾರಿಸಬಹುದು ಎಂದು ಹೇಳಿದ್ದಾರೆ.

    ದೆಹಲಿ ಮೆಟ್ರೋ ದೇಶದಲ್ಲೇ ಒಂದು ಹೊಸ ಮೆಟ್ರೋ ಕ್ರಾಂತಿಯನ್ನು ಸೃಷ್ಟಿಸಿದೆ. ಈಗ 13 ಮೆಟ್ರೋ ರೈಲುಗಳನ್ನು ತಯಾರಿಸಲಾಗುತ್ತಿದೆ. 20 ವರ್ಷದಲ್ಲಿ ದೆಹಲಿ ಮೆಟ್ರೋ 260 ಕಿ.ಮೀವರೆಗೂ ತಲುಪುತ್ತಿದ್ದು, ವಿಶ್ವದಲ್ಲೇ ಅತ್ಯಂತ ವೇಗವಾಗಿ ತಲುಪುತ್ತಿದೆ. ನನಗೆ ದೆಹಲಿ ಮೆಟ್ರೋ ರೈಲ್ ಕಾರ್ಪೋರೇಶನ್ ಬಗ್ಗೆ ಹಮ್ಮೆ ಇದೆ ಎಂದು ತಿಳಿಸಿದ್ದಾರೆ.

    ಭಾರತೀಯ ರೈಲ್ವೇ ವ್ಯವಸ್ಥೆ 20 ವರ್ಷಗಳಷ್ಟು ಹಿಂದಿದೆ. ಬಯೋ ಟಾಯ್ಲೆಟ್ ಬಿಟ್ಟು ರೈಲ್ವೆಯಲ್ಲಿ ಏನೂ ಸುಧಾರಣೆ ಆಗಿಲ್ಲ. ರೈಲುಗಳ ವೇಗ ಅದರಲ್ಲೂ ಪ್ರತಿಷ್ಠಿತ ರೈಲುಗಳ ಸರಾಸರಿ ವೇಗ ಕಡಿಮೆಯಾಗಿದೆ. ರೈಲು ಅಪಘಾತಗಳಲ್ಲಿ ಪ್ರತಿವರ್ಷ 20 ಸಾವಿರ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶ್ರೀಧರನ್, ದೇಶಾದ್ಯಂತ ಸ್ವದೇಶಿ ಮೆಟ್ರೋ ರೈಲು ವ್ಯವಸ್ಥೆ ಜಾರಿಗೆ ಮೋದಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ.

  • ಬುಲೆಟ್ ರೈಲು ಕಾಂಗ್ರೆಸ್ ಯೋಜನೆ, ಈಗ ಮೋದಿಯದ್ದು ಎಲೆಕ್ಷನ್ ರೈಲು: ಮಲ್ಲಿಕಾರ್ಜುನ ಖರ್ಗೆ

    ಬುಲೆಟ್ ರೈಲು ಕಾಂಗ್ರೆಸ್ ಯೋಜನೆ, ಈಗ ಮೋದಿಯದ್ದು ಎಲೆಕ್ಷನ್ ರೈಲು: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಬುಲೆಟ್ ರೈಲು ಅಲ್ಲ. ಇದು ಮೋದಿಯ ಎಲೆಕ್ಷನ್ ರೈಲು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ಬುಲೆಟ್ ರೈಲು ಯೋಜನೆ ಆರಂಭಿಸಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿಯೇ ಯೋಜನೆ ಸಿದ್ದಪಡಿಸಲಾಗಿತ್ತು. 2005 ರಿಂದ ಬುಲೆಟ್ ಟ್ರೈನ್ ಯೋಜನೆಗೆ ತಯಾರಿ ನಡೆದಿದೆ ಎಂದು ಹೇಳಿದರು.

    ಮೂರು ವರ್ಷದಿಂದ ಸುಮ್ಮನಿದ್ದ ಮೋದಿ ಈಗ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಮುಂಬೈ-ಅಹಮದಾಬಾದ್ ಮಧ್ಯೆ 12 ನಿಲ್ದಾಣ ಬರಲಿವೆ. ಬುಲೆಟ್ ರೈಲಿಗೆ 12 ನಿಲ್ದಾಣಗಳು ಯಾಕೆ? ಅದರಲ್ಲೂ ಗುಜರಾತ್ ನಲ್ಲೇ ಅತ್ಯಧಿಕ ನಿಲ್ದಾಣಗಳು ಬರಲಿದೆ. ಹೀಗಾಗಿ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗಿಂತ ಕಡೆಯಾಗಿ ಬುಲೆಟ್ ರೈಲು ನಿಲ್ದಾಣ ತಲುಪಲಿದೆ ಎಂದು ವ್ಯಂಗ್ಯವಾಡಿದರು.

    ಶೇ.1 ರ ಬಡ್ಡಿಯಲ್ಲಿ ಜಪಾನ್ ಆರ್ಥಿಕ ಸಹಾಯ ಮಾಡಿದೆ ಅಂತಾ ಮೋದಿ ಹೇಳುತ್ತಾರೆ. ಆದರೆ ಜಪಾನ್ ಹಣವನ್ನು ಪುಕ್ಕಟೆ ನೀಡುತ್ತಿಲ್ಲ. ಜಪಾನ್ ದೇಶದಲ್ಲೇ ಹಳಿ, ಬೋಗಿ ತಯಾರಾಗುತ್ತದೆ. ನಮ್ಮ ದೇಶದಲ್ಲಿ ಹಳಿ, ಬೋಗಿ ತಯಾರು ಮಾಡಲು ಕಾರ್ಖಾನೆಗಳಿಲ್ಲ. ಅದರ ಕಮಿಷನ್ ಯಾರಿಗೆ ಹೋಗುತ್ತೆ ಅಂತಾ ಗೊತ್ತಿದೆಯಾ? ಮೇಕ್ ಇನ್ ಇಂಡಿಯಾಗೆ ಅರ್ಥ ಎಲ್ಲಿದೆ ಎಂದು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.