Tag: ಬುಲೆಟ್ ಪ್ರಕಾಶ್

  • ಇನ್ಮುಂದೆ ನನ್ನದೇ ರೌಂಡು, ನನ್ನದೇ ಸೌಂಡು- ಬುಲೆಟ್ ಪುತ್ರನ ಹೊಸ ಅಧ್ಯಾಯ

    ಇನ್ಮುಂದೆ ನನ್ನದೇ ರೌಂಡು, ನನ್ನದೇ ಸೌಂಡು- ಬುಲೆಟ್ ಪುತ್ರನ ಹೊಸ ಅಧ್ಯಾಯ

    ಗುರುಶಿಷ್ಯರು, ಬಿಗ್ ಬಾಸ್ ಸೀಸನ್ 10ರ (Bigg Boss Kannada 10) ಮೂಲಕ ಮೋಡಿ ಮಾಡಿದ ರಕ್ಷಕ್ ಬುಲೆಟ್ (Rakshak Bullet) ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಧ್ಯಾಯ ಶುರು ಮಾಡಲು ಸಜ್ಜಾಗಿದ್ದಾರೆ. ಬುಲೆಟ್ ಪ್ರಕಾಶ್ ಪುತ್ರ ಹೀರೋ ಆಗಿ ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಬುಲೆಟ್ ಪ್ರಕಾಶ್ (Bullet Prakash) 47ನೇ ವರ್ಷದ ಹುಟ್ಟುಹಬ್ಬದ ದಿನವೇ ರಕ್ಷಕ್ ತಮ್ಮ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

    ಎಲ್ಲಾ ನನ್ನ ಆತ್ಮೀಯರೇ, ಇಂದು (ಏ.2) ನನ್ನ ಪೂಜ್ಯ ತಂದೆ ದಿವಂಗತ ‘ಬುಲೆಟ್’ ಪ್ರಕಾಶ್ (Bullet Prakash) ಅವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು. ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರತಂಡಕ್ಕೂ ಹರಸಿ, ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ರಕ್ಷಕ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ನಡುವೆ ಕಾಣೆಯಾದ್ರಾ ಕುಡ್ಲದ ಬೆಡಗಿ ನೇಹಾ ಶೆಟ್ಟಿ?

     

    View this post on Instagram

     

    A post shared by rakshak sena (@rakshak_bullet)

    ತಮ್ಮ ಮೊದಲ ಸಿನಿಮಾ ರಕ್ಷಕ್ ಮಾಸ್ ಆಗಿ ಎಂಟ್ರಿ ಕೊಡಲಿದ್ದಾರೆ. ಶೇರ್ ಮಾಡಿರುವ ಪೋಸ್ಟರ್‌ನಲ್ಲಿ ಡೈಲಾಗ್‌ಗಳು ಪಂಚಿಂಗ್ ಆಗಿವೆ. ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜಾನ್ ಗಾಡಿಗಳು ಸೌಂಡ್ ಮಾಡ್ತಾವೆ. ಆದರೆ ಸೌಂಡ್ ಕೇಳ್ತಿದ್ದಂಗೆ ಇದೇ ಗಾಡಿ ಅಂತ ಹೇಳೋದು ಒಂದುನ್ನೆ. ‘ಬುಲೆಟ್’… ಇನ್ನುಂದೆ ನಂದೆ ರೌಂಡು, ನನ್ನದೇ ಸೌಂಡು ಎಂಬ ಡೈಲಾಗ್ ಹೈಲೆಟ್ ಆಗಿದೆ.

    ‘R B 01’ ಚಿತ್ರಕ್ಕೆ ಶ್ರೀಹರಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಕ್ರಿಶ್ ಎಂಬುವವರು ನಿರ್ದೇಶನ ಮಾಡಲಿದ್ದಾರೆ. ಶ್ರೀಧರ್ ಕಶ್ಯಪ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಸದ್ಯ ರಕ್ಷಕ್ ಲುಕ್, ಪಾತ್ರ ಸಿನಿಮಾದಲ್ಲಿ ಹೇಗಿರಲಿದೆ ಎಂಬುದರ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ. ತಂದೆ ಬುಲೆಟ್ ಪ್ರಕಾಶ್‌ರಂತೆಯೇ ರಕ್ಷಕ್ ಕೂಡ ಚಿತ್ರರಂಗದಲ್ಲಿ ಬೆಳೆಯಲಿ ಎಂಬುದೇ ಅಭಿಮಾನಿಗಳ ಆಶಯ.

  • ದುಬಾರಿ ಕಾರು ಖರೀದಿಸಿದ ರಕ್ಷಕ್- ದುಡ್ಡು ಎಲ್ಲಿಂದ ಬಂತು ಎಂದ ನೆಟ್ಟಿಗರು

    ದುಬಾರಿ ಕಾರು ಖರೀದಿಸಿದ ರಕ್ಷಕ್- ದುಡ್ಡು ಎಲ್ಲಿಂದ ಬಂತು ಎಂದ ನೆಟ್ಟಿಗರು

    ಹಾಸ್ಯ ನಟ ಬುಲೆಟ್ ಪ್ರಕಾಶ್ (Bullet Prakash) ಪುತ್ರ ರಕ್ಷಕ್ ಬುಲೆಟ್ (Rakshak Bullet) ಇದೀಗ ದುಬಾರಿ ಕಾರುವೊಂದನ್ನು ಖರೀದಿಸಿದ್ದಾರೆ. ರಕ್ಷಕ್ ಮನೆಗೆ ಹೊಸ ಅತಿಥಿ ಆಗಮನ ಆಗಿರೋ ಸಂತಸದಲ್ಲಿದ್ದಾರೆ. ದುಬಾರಿ ಕಾರು ಖರೀದಿ ಮಾಡಿದಕ್ಕೆ ಬುಲೆಟ್ ಪ್ರಕಾಶ್ ಪುತ್ರನಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ. ಕೋಟಿ ಕೋಟಿ ಹಣ ಎಲ್ಲಿಂದ ಬಂತು ಅಂತ ನೆಟ್ಟಿಗರು ರಕ್ಷಕ್ ಕಾಲೆಳೆದಿದ್ದಾರೆ.

    ಸದಾ ಒಂದಲ್ಲಾ ಒಂದು ವಿಚಾರವಾಗಿ ಟ್ರೋಲಿಗರ ಬಾಯಿಗೆ ಆಹಾರವಾಗುವ ರಕ್ಷಕ್ ಈ ಬಾರಿ ಕಾಲೆಳೆಯುವವರಿಗೆ ಡೋಂಟ್ ಕೇರ್ ಎಂದಿದ್ದಾರೆ. ದುಬಾರಿ ಕಾರು ಖರೀದಿಸುವ ಮೂಲಕ ಟ್ರೋಲ್ ಮಾಡುವವರಿಗೆ ಸಖತ್ ಆಗಿ ತಿರುಗೇಟು ನೀಡಿದ್ದಾರೆ.

    ರಕ್ಷಕ್ ಮನೆಗೆ ಬಿಎಂಡಬ್ಲೂ ಕಾರು ಬಂದಿರುವ ಫೋಟೋ ಶೇರ್ ಮಾಡಿ ‘ಹೊಸ ಸದಸ್ಯ ಮನೆಗೆ ಸ್ವಾಗತ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಹೊಸ ಅತಿಥಿ ಆಗಮನದ ಬೆನ್ನಲ್ಲೇ ಇಲಿಯಾನಾ ಕೊಟ್ರು ಗುಡ್ ನ್ಯೂಸ್

    ದುಬಾರಿ ಕಾರಿನ ಫೋಟೋ ರಕ್ಷಕ್ ಶೇರ್ ಮಾಡ್ತಿದ್ದಂತೆ ಕಣ್ಣು ಬಿಟ್ಟಂತೆ ಕಾರಿನ ಬೆಲೆ ಬಗ್ಗೆ ನೆಟ್ಟಿಗರು ಚರ್ಚೆ ಮಾಡ್ತಿದ್ದಾರೆ. ಬಿಎಂಡಬ್ಲೂ ಕಾರಿನ ಬೆಲೆ ಕಡಿಮೆ ಅಂದರೂ 40 ಲಕ್ಷ ರೂ.ಯಿಂದ 2.60 ಕೋಟಿ ರೂ. ಒಳಗಿದೆ. ಇಷ್ಟೊಂದು ಕಾಸು ರಕ್ಷಕ್ ಬಳಿ ಬಂದಿದ್ದಾದರೂ ಹೇಗೆ? ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ.

    ಅಂದ್ಹಾಗೇ ಕಳೆದ ವರ್ಷ ತಮ್ಮ ಸಹೋದರಿಯ ಮದುವೆಗೆ ಮುನ್ನ, ರಕ್ಷಕ್ ಮಹಿಂದ್ರಾ ಥಾರ್ ಕಾರನ್ನ ಖರೀದಿ ಮಾಡಿದ್ದರು. ಈಗ ಬಿ.ಎಂ.ಡಬ್ಲೂ ಕಾರು ರಕ್ಷಕ್ ಮನೆಗೆ ಎಂಟ್ರಿ ಕೊಟ್ಟಿದೆ.

    ತಂದೆಯಂತೆ ಉತ್ತಮ ಕಲಾವಿದನಾಗಿ ಮಿಂಚಲು ರಕ್ಷಕ್ ಪ್ರಯತ್ನಿಸುತ್ತಿದ್ದಾರೆ. ‘ಗುರು ಶಿಷ್ಯರು’ ಸಿನಿಮಾದಲ್ಲಿ ನಟಿಸಿದ ಮೇಲೆ ‘ಬಿಗ್ ಬಾಸ್ ಕನ್ನಡ 10’ರಲ್ಲಿ (Bigg Boss Kannada 10) ರಕ್ಷಕ್ ಸ್ಪರ್ಧಿಯಾಗಿದ್ದರು. ಬಿಗ್ ಬಾಸ್ ಶೋ ರಕ್ಷಕ್‌ಗೆ ಹೆಚ್ಚಿನ ಜನಪ್ರಿಯತೆ ಕೊಟ್ಟಿದೆ.

  • ರಕ್ಷಕ್‌ ಬುಲೆಟ್‌ಗೆ ಇದ್ಯಂತೆ 5 ಮದುವೆ ಆಗುವ ಯೋಗ

    ರಕ್ಷಕ್‌ ಬುಲೆಟ್‌ಗೆ ಇದ್ಯಂತೆ 5 ಮದುವೆ ಆಗುವ ಯೋಗ

    ನರಂಜನೆಗೆ ಮತ್ತೊಂದು ಹೆಸರೇ ಬಿಗ್ ಬಾಸ್ (Bigg Boss Kannada 10) ರಿಯಾಲಿಟಿ ಶೋ. ಲವ್, ಫ್ರೆಂಡ್‌ಶಿಪ್, ಬ್ರೇಕಪ್ ಹೀಗೆ ನಾನಾ ರೀತಿಯ ಗಾಸಿಪ್ ಕಥೆಗಳನ್ನ ದೊಡ್ಮನೆಯಲ್ಲಿ ನೋಡಬಹುದು. ಇದೀಗ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ತನ್ನ ಮದುವೆ (Wedding) ಬಗ್ಗೆ ಬಾಯ್ಬಿಟ್ಟಿದ್ದಾರೆ. ತನ್ನ ಜಾತಕದಲ್ಲಿರೋ 5 ಮದುವೆ ಯೋಗದ ಬಗ್ಗೆ ರಕ್ಷಕ್ ಮಾತನಾಡಿದ್ದಾರೆ.

    ದೊಡ್ಮನೆಯ ಆಟ 2ನೇ ವಾರಕ್ಕೆ ಕಾಲಿಟ್ಟಿದೆ. ತಣ್ಣಗೆ ಇದ್ದ ಮನೆ ಈಗ ರಣರಂಗವಾಗಿದೆ. ಇದೆಲ್ಲದರ ನಡುವೆ ಸ್ಪರ್ಧಿಗಳಾದ ಸಿರಿ, ಸ್ನೇಹಿತ್, ತನಿಷಾ, ರಕ್ಷಕ್ ತಮ್ಮ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸ್ನೇಹಿತ್ ತನ್ನ ಬ್ರೇಕಪ್‌ಗಳ ಕತೆ ಹೇಳಿದ್ರೆ, ಹಿರಿಯ ನಟಿ ಸಿರಿ (Siri) ತಮಗೆ ಮದುವೆ ಬಗ್ಗೆ ಆಸಕ್ತಿ ಇಲ್ಲದೇ ಇರೋದರ ಬಗ್ಗೆ ಮಾತನಾಡಿದ್ದಾರೆ.

    ಆಗ ರಕ್ಷಕ್ ತಮ್ಮ ಮದುವೆ ಬಗ್ಗೆ ಬಾಯ್ಬಿಟ್ಟಿದ್ದಾರೆ. ತಂದೆ ಬುಲೆಟ್ ಪ್ರಕಾಶ್ ಅವರಿದ್ದಾಗ ಒಮ್ಮೆ ರಕ್ಷಕ್ ಜಾತಕ ತೋರಿಸಿದ್ರಂತೆ, ಆಗ ಜ್ಯೋತಿಷಿ ರಕ್ಷಕ್‌ಗೆ 5 ಮದುವೆಯಾಗುವ ಯೋಗದ ಬಗ್ಗೆ ಹೇಳಿದ್ರಂತೆ. ಈ ವಿಚಾರ ಮನೆಮಂದಿ ಮುಂದೆ ರಕ್ಷಕ್ ಹೇಳುವಾಗ, ಸ್ನೇಹಿತ್ ಕಾಲೆಳೆದಿದ್ದಾರೆ. ಅದಕ್ಕೆ ನಾ ವೈಲ್ಡ್ ಕಾರ್ಡ್ ಎಂಟ್ರಿ ಬರಲಿ ಅಂತಾ ಹೇಳ್ತಾ ಇದ್ದಿದ್ದು ಅಂತ ತಮಾಷೆ ಮಾಡಿದ್ದಾರೆ. ರಕ್ಷಕ್-ಸ್ನೇಹಿತ್ ಮಾತಿಗೆ ಮನೆಮಂದಿ ನಕ್ಕಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಅಂದ್ರೆ ಸುಮ್ನೆನಾ?: ಕ್ಯಾಪ್ಟನ್‌ಗೇ ಪನಿಶ್‌ಮೆಂಟ್

    ಕಾಮಿಡಿ ಪಂಚ್ ಮೂಲಕ ಮನೆಮಾತಾದ ಖ್ಯಾತ ನಟ ಬುಲೆಟ್ ಪ್ರಕಾಶ್ (Bullet Prakash) ಪುತ್ರ ಈಗ ದೊಡ್ಮನೆಯಲ್ಲಿ ಕಮಾಲ್ ಮಾಡ್ತಿದ್ದಾರೆ. ‘ಗುರು ಶಿಷ್ಯರು’ ಚಿತ್ರದ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಯುವ ನಟ ಸಾಕಷ್ಟು ಟ್ರೋಲ್‌ಗಳ ಮೂಲಕ ಹೈಲೆಟ್ ಆಗಿದ್ದರು. ಈಗ ಬಿಗ್ ಬಾಸ್ ಮನೆಯಲ್ಲಿ ಖಡಕ್ ಡೈಲಾಗ್ ಹೇಳುವ ಮೂಲಕ ಮಿಂಚ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Big Boss Kannada: ಹೋಲ್ಡ್‌ನಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್

    Big Boss Kannada: ಹೋಲ್ಡ್‌ನಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್

    ‘ನನ್ನ ಮೇಲೆ ನೆಗೆಟಿವ್ ಇಮೇಜ್ ಕಟ್ಟಿದರು ಕೆಲವರು. ನನ್ನ ನಿಜವಾದ ಫೇಸ್ ತೋರಿಸಬೇಕು. ಅದನ್ನು ಮನೆಯೊಳಗೆ ಖಂಡಿತ ತೋರಿಸ್ತೀನಿ. ಬದುಕಿನಲ್ಲಿ ಪಾಸಿಟಿವ್ ನೆಗೆಟಿವ್ ಎರಡೂ ಇರಬೇಕು’ ಎಂದು ವಯಸ್ಸಿಗೂ ಮೀರಿ ಪ್ರಬುದ್ಧವಾಗಿ ಮಾತಾಡುವ ಹುಡುಗ ರಕ್ಷಕ್‌ (Rakshak), ಹಿರಿಯ ಹಾಸ್ಯನಟ ಬುಲೆಟ್ ಪ್ರಕಾಶ್‌ (Bullet Prakash) ಅವರ ಪುತ್ರ.

    ‘ಜನರ ಬಾಯಿ ಮುಚ್ಚಿಸಲಾಗದು. ಟ್ರೋಲ್, ರೋಸ್ಟ್‌ ಮಾಡಿದರು ಜನರು… ಅದಕ್ಕೆಲ್ಲ ಕೇರ್ ಮಾಡಲ್ಲ. ನನ್ನ ಸ್ವಂತ ಐಡೆಂಟಿಟಿಯೊಂದಿಗೆ ಬಿಗ್‌ಬಾಸ್ ಮನೆಯೊಳಗೆ ಹೋಗ್ತೀನಿ’ ಎಂದು ನೇರವಾಗಿ ಮಾತಾಡುವ ರಕ್ಷಕ್‌, ಕೌಟುಂಬಿಕ ಪ್ರೇಕ್ಷಕರ ಮನಸಲ್ಲಿ ಜಾಗ ಕಂಡುಕೊಳ್ಳುವ ಉದ್ದೇಶವನ್ನು ಇಟ್ಟುಕೊಂಡು ಬಿಗ್‌ಬಾಸ್ ವೇದಿಕೆಗೆ ಬಂದಿದ್ದರು.

    ‘ರಾಜಕೀಯ ಸಿನಿಮಾ ಎರಡರಲ್ಲಿಯೂ ನೆಗೆಟಿವ್ ಪಾಸಿಟಿವ್ ಎರಡೂ ಇರತ್ತೆ. ಹೋಗುತ್ತಾ ಹೋಗುತ್ತಾ ಈ ನೆಗೆಟಿವೇ ಪಾಸಿಟಿವ್ ಆಗುತ್ತದೆ’ ಎನ್ನುವ ನಂಬಿಕೆಯಲ್ಲಿರುವ ರಕ್ಷಕ್‌ ಅವರು ಮನೆಯೊಳಗೆ ಮಾತುಗಳಿಗೆ ಸೆನ್ಸಾರ್ ಅಳವಡಿಸಿಕೊಂಡೇ ಮನೆಯೊಳಗೆ ಹೋಗಲು ನಿರ್ಧರಿಸಿದ್ದರು. ‘ನನ್ನ ರಿಯಲ್ ಫೇಸ್‌ ನೋಡಲಿಕ್ಕಾಗಿ ನನಗೆ ವೋಟ್ ಮಾಡಿ’ ಎಂಬ ರಕ್ಷಕ್ ಮನವಿಗೆ ಜನರು 53% ವೋಟ್ ಮಾಡಿ ಹೋಲ್ಡ್‌ನಲ್ಲಿ ಇಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಬಿಚ್ಚಿಟ್ಟ ನಿರ್ದೇಶಕ ವಿಜಯ್ ಪ್ರಸಾದ್

    ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಬಿಚ್ಚಿಟ್ಟ ನಿರ್ದೇಶಕ ವಿಜಯ್ ಪ್ರಸಾದ್

    ನೀನಾಸಂ ಸತೀಸ್ ನಟನೆಯ `ಪೆಟ್ರೋಮ್ಯಾಕ್ಸ್'(Petromax) ಚಿತ್ರದ ಸೋಲಿನ ನಂತರ ಇದೀಗ `ಪರಿಮಳಾ ಲಾಡ್ಜ್'(Parimala Lodge) ಚಿತ್ರವನ್ನು ನಿರ್ದೇಶಕ ವಿಜಯ್ ಪ್ರಸಾದ್ ಕೈಗೆತ್ತಿಕೊಂಡಿದ್ದಾರೆ. ಈ ವೇಳೆ ದಿವಂಗತ ಬುಲೆಟ್ ಪ್ರಕಾಶ್(Bullet Prakash) ಅವರನ್ನ ನೆನಪಿಕೊಂಡಿದ್ದಾರೆ. ಅವರನ್ನು ನೆನೆದು ಭಾವನ್ಮಾತಕ ಪತ್ರವೊಂದನ್ನ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ತೋತಾಪುರಿ, ಪೆಟ್ರೋಮ್ಯಾಕ್ಸ್ ಚಿತ್ರದ ಗೆಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡೋದರಲ್ಲಿ ಸೋತಿತ್ತು. ಇದೀಗ ʻಪರಿಮಳಾ ಲಾಡ್ಜ್ʼ ಚಿತ್ರಕ್ಕೆ ವಿಜಯ್ ಪ್ರಸಾದ್ ಕೈಹಾಕಿದ್ದಾರೆ. ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಈ ಪತ್ರದ ಮೂಲಕ ತೆರೆದಿಟ್ಟಿದ್ದಾರೆ. ʻಪರಿಮಳಾ ಲಾಡ್ಜ್ʼ ಚಿತ್ರದ ಸಣ್ಣ ತುಣುಕೊಂದು 3 ವರ್ಷಗಳು ಹಿಂದೆ ರಿಲೀಸ್ ಆಗಿತ್ತು. ಹಲವು ಕಾರಣಗಳಿಂದ ಸಿನಿಮಾ ಮುಂದಕ್ಕೆ ಹೋಗಿರಲಿಲ್ಲ. ಇದೀಗ ಮತ್ತೆ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು

    ನೀವು ನನಗೆ ಹಾಗಾಗ ನೆನಪಾಗುತ್ತಿರಿ. ಹಾಗೆ ನೆನಪಾದಾಗಲೆಲ್ಲಾ ನಿಮ್ಮ ಕಾಮಿಡಿ ದೃಶ್ಯದ ತುಣುಕುಗಳನ್ನ ನೋಡಿ ಮೌನವಾಗಿ ಬಿಡುತ್ತೇನೆ. `ಗೆಳೆಯ’ ಚಿತ್ರದಲ್ಲಿ ನನಗೆ ಸಿಕ್ಕಾಪಟ್ಟೆ ಇಷ್ಟವಾಗಿ ಹೋದಿರಿ ನಿಮ್ಮೊಳಗಿನ ಹಾಸ್ಯ ಸಮಯದ ಪ್ರಜ್ಞೆ ಅಮೋಘ. ನಿಮ್ಮ ಜೊತೆ ಕೆಲಸ ಮಾಡಬೇಕೆಂಬ ನನ್ನ ಹಂಬಲ ಮತ್ತು ಆಸೆ ಕೇವಲ ಟ್ರೇಲರ್‌ಗೇ ಸೀಮಿತವಾಗಿ ಹೋಗಿದ್ದು ತುಂಬಾ ನೋವಿನ ವಿಚಾರ ಇಂದು ಆಫೀಸಿನಲ್ಲಿ ಪರಿಮಳ ಲಾಡ್ಜ್ ಬರವಣಿಗೆಯಲ್ಲಿ ಇದ್ದೆ. ನಿಮ್ಮ ಪಾತ್ರದ ಬಗ್ಗೆ ಬಂದಾಗ ವಿಪರೀತ ನೆನಪಾದಿರಿ ಹಾಗೆ ಸಂಕಟವೂ ಆಯಿತು.

    ನೀವು ಇದ್ದಿದ್ದರೆ ಗುಡ್ಡೆಮಾಂಸ ಪಾತ್ರವನ್ನ ನುಂಗಿ ನೀರು ಕುಡಿದು ಬಿಡುತ್ತಿದ್ದಿರಿ. ನಿಮ್ಮಿಂದ ಮಾತ್ರ ಆ ಶೈಲಿ ಸಾಧ್ಯ. ನಿಮ್ಮ ನೆನಪಿಗಾಗಿ, ಪ್ರೀತಿಗಾಗಿ ಮತ್ತು ಗೌರವಕ್ಕಾಗಿ ಪಾತ್ರದ ಹೆಸರನ್ನ ಬುಲೆಟ್ ಪ್ರಕಾಶ್ ಅಂತಲೇ ಇಟ್ಟು, ಅಡ್ಡ ಹೆಸರಾಗಿ ಗುಡ್ಡೆಮಾಂಸ ಅಂತ ಉಳಿಸಿಕೊಳ್ಳುತ್ತಿದ್ದೇನೆ. ಆದರೂ ನೀವು ಇಷ್ಟು ಬೇಗ ಹೋಗಬಾರದಿತ್ತು ಹಾಗೆ ಇನ್ನೂ ಬೆಳಗಿ ಬಾಳಬೇಕಿತ್ತು. ಟ್ರೇಲರ್ ಚಿತ್ರೀಕರಣದ ಸಮಯದಲ್ಲಿ ನಿಮ್ಮ ನಗು, ಮಾತು, ಕೀಟಲೆ, ಚೇಷ್ಟೇ ಎಲ್ಲವೂ ನನ್ನಲ್ಲಿ ಇನ್ನೂ ಹಚ್ಚಹಸಿರಾಗೇ ಇದೆ ಮಿಸ್ಸಿಂಗ್ ಯೂ ಸರ್ ಎಂದು ವಿಜಯ್ ಭಾವುಕರಾಗಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದಾಳಿ

    ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದಾಳಿ

    ಬೆಂಗಳೂರು: ಹಾಸ್ಯ ನಟ ದಿ.ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣ ನಗರದ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ.

    ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ಬರುತ್ತಿದ್ದಾಗ ಹೆಬ್ಬಾಳ ಫ್ಲೈ ಓವರ್ ಬಳಿ ದಿ.ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ. ಮಂಗಳಮುಖಿಯರು ಬ್ಯಾಗ್ ಇಡಿದು ಎಳೆದ ಕಾರಣ ರಕ್ಷಕ್ ಗಾಡಿಯಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಿಂದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ದ್ವಿಚಕ್ರ ವಾಹನ ಸಹ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ ಸಂಬಂಧ ಯಾರ ಒತ್ತಡಕ್ಕೂ ಪೊಲೀಸರು ಹಿಂಜರಿಯುವುದಿಲ್ಲ: ಅರಗ ಜ್ಞಾನೇಂದ್ರ

    ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ದ್ವಿಚಕ್ರ ವಾಹನವನ್ನು ಫ್ಲೈಓವರ್ ಮೇಲೆ ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದರು. ಬಳಿಕ ಹೆಬ್ಬಾಳ ಪೊಲೀಸರ ನೆರವಿನಿಂದ ಗಾಡಿಯನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಚಂದನವನಕ್ಕೆ ಬುಲೆಟ್ ಪ್ರಕಾಶ್ ಪುತ್ರನ ಎಂಟ್ರಿ

    ಚಂದನವನಕ್ಕೆ ಬುಲೆಟ್ ಪ್ರಕಾಶ್ ಪುತ್ರನ ಎಂಟ್ರಿ

    ಬೆಂಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಈಗಾಗಲೇ ಒಂದು ಶೆಡ್ಯೂಲ್ ಕಂಪ್ಲೀಟ್ ಮಾಡಿಕೊಂಡು ಬಂದಿರು ರಕ್ಷಕ್ ಮುಂದಿನ ಕೆಲಸಕ್ಕೆ ಸಜ್ಜಾಗ್ತಿದ್ದಾರೆ.

    ಗುರುಶಿಷ್ಯರು ಹಿರಿಯನಟ ದ್ವಾರಕೀಶ್ ನಟಿಸಿ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ದಾಖಲಾಗಿರುವ ಸೂಪರ್ ಹಿಟ್ ಸಿನಿಮಾ. ಈ ಟೈಟಲ್‍ನಲ್ಲಿ ಶರಣ್ ಮತ್ತು ತಂಡದವರು ಹೊಸ ಕಥೆ ಹೇಳು ಹೊರಟಿದ್ದಾರೆ. ಜಡೇಶ್ ಗುರುಶಿಷ್ಯರು ಕಥೆಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ತರುಣಿ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರ ಮಾಡ್ತಿದ್ದಾರೆ ರಕ್ಷಕ್. ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರು ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಸಿಕ್ಕಿದೆ.

    ಯಾವ ಯಾವ ಸ್ಟಾರ್ ಮಕ್ಕಳು ಯಾವ ಪಾತ್ರ ಮಾಡುತ್ತಿದ್ದಾರೆ ಅನ್ನೋದು ಈ ತಿಂಗಳ ಅಂತ್ಯದಲ್ಲಿ ಚಿತ್ರತಂಡ ಹೇಳಲಿದೆ. ಮಗನನ್ನ ಹೀರೋ ಮಾಡಬೇಕು ಅಂತ ಬುಲೆಟ್ ಪ್ರಕಾಶ್ ಬಹಳ ಯೋಚನೆ ಮಾಡಿದ್ದರು. ಫೈಟ್, ಡ್ಯಾನ್ಸ್, ಜಿಮ್ ಅಂತ ಆಗಲೇ ತಯಾರಿ ಆರಂಭಿಸಿದ್ದರು. ಆದ್ರೆ ಮಗ ಬಣ್ಣ ಹಚ್ಚುವ ಮೊದಲೇ ಅನಾರೋಗ್ಯದಿಂದ ಬುಲೆಟ್ ಪ್ರಕಾಶ್ ನಿಧನರಾಗಿದ್ದಾರೆ. ಅಪ್ಪನ ಆಸೆಯಂತೆ ಬುಲೆಟ್ ಸ್ನೇಹಿತರ ಮಾರ್ಗದರ್ಶನದಂತೆ ಮೊದಲ ಸಿನಿಮಾಗೆ ರಕ್ಷಕ್ ಬಣ್ಣ ಹಚ್ಚಿದ್ದಾರೆ. ಮುಂದಿನ ತಿಂಗಳು ಗುರುಶಿಷ್ಯರು ಸಿನಿಮಾ ಮತ್ತೊಂದು ಶೆಡ್ಯೂಲ್ ಪ್ಲಾನ್ ಆಗಿದೆ.

  • ಹೆಬ್ಬಾಳ ರುದ್ರಭೂಮಿಯಲ್ಲಿ ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

    ಹೆಬ್ಬಾಳ ರುದ್ರಭೂಮಿಯಲ್ಲಿ ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

    ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಸೋಮವಾರ ಕೊನೆಯುಸಿರೆಳೆದಿದ್ದರು. ಇಂದು ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

    ತೆರೆದ ವಾಹನದಲ್ಲಿ ಮನೆಯಿಂದ ಹೆಬ್ಬಾಳ ರುದ್ರಭೂಮಿವರೆಗೆ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ತರಲಾಯಿತು. ಲಾಕ್‍ಡೌನ್ ಜಾರಿಯಲ್ಲಿರುವ ಹಿನ್ನೆಲೆ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದೆ. ಹೀಗಾಗಿ ಪೊಲೀಸರು ಅಂತ್ಯಸಂಸ್ಕಾರದಲ್ಲಿ ಪ್ರಕಾಶ್ ಕುಟುಂಬಸ್ಥರು ಮಾತ್ರ ಭಾಗಿಯಾಗಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಹೀಗಾಗಿ ರುದ್ರಭೂಮಿಯತ್ತ ಆಗಮಿಸಿದ್ದ ಅಭಿಮಾನಿಗಳನ್ನ ಪೊಲೀಸರು ತಡೆದಿದ್ದರು. ತಂದೆಯ ಅಂತಿಮ ಕಾರ್ಯವನ್ನು ಪುತ್ರ ರಕ್ಷಕ್ ನೆರವೇರಿಸಿದ್ದು, ಮಡಿವಾಳ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯಿತು.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು.

  • ಗೆಳೆಯನ ಮಗಳ ಮದ್ವೆ ಜವಾಬ್ದಾರಿ ಹೊತ್ತ ದರ್ಶನ್

    ಗೆಳೆಯನ ಮಗಳ ಮದ್ವೆ ಜವಾಬ್ದಾರಿ ಹೊತ್ತ ದರ್ಶನ್

    ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಒಂದು ಬಹುದೊಡ್ಡ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಮೂಲಕ ಪ್ರಕಾಶ್ ಅವರ ಕುಟುಂಬದವರಿಗೆ ನೆರವಾಗಿದ್ದಾರೆ.

    ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ತಕ್ಷಣ ನಟ ದರ್ಶನ್ ಅವರ ಕುಟುಂಬಸ್ಥರಿಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ನಿಮ್ಮ ಕಷ್ಟಕ್ಕಾಗುವ ಹಾಗೂ ಮಗಳ ಮದುವೆ ಮಾಡಿಸುವ ಜವಾಬ್ದಾರಿ ನನ್ನ ಮೇಲಿರಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

    ಟ್ವಿಟ್ಟರಿನಲ್ಲಿ ಕೂಡ ಬುಲೆಟ್ ಪ್ರಕಾಶ್ ಜೊತೆಗಿರುವ ಫೋಟೋವನ್ನು ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. “ಹಾಸ್ಯ ಕಲಾವಿದರಾದ ಬುಲೆಟ್ ಪ್ರಕಾಶ್ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ನೋವಿನಿಂದ ಬರೆದುಕೊಂಡಿದ್ದಾರೆ.

    ದರ್ಶನ್ ಮತ್ತು ಬುಲೆಟ್ ಪ್ರಕಾಶ್ ತುಂಬಾ ಆತ್ಮೀಯರಾಗಿದ್ದರು. ದರ್ಶನ್ ಪ್ರತಿಯೊಂದು ಸಿನಿಮಾದಲ್ಲೂ ಬುಲೆಟ್ ಪ್ರಕಾಶ್ ಒಂದು ಪಾತ್ರ ಮಾಡುತ್ತಿದ್ದರು. ಹೀಗಾಗಿ ದರ್ಶನ್ ಮತ್ತು ಪ್ರಕಾಶ್ ಜೊತೆಗಿನ ಕಾಂಬಿನೇಷನ್ ಭಾರೀ ಕಚಗುಳಿ ಇಡುತ್ತಿತ್ತು.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಇಂದು ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಲಾಕ್‍ಡೌನ್ ನಿಯಮದ ಪ್ರಕಾರ ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗಿಯಾಗುವ ಅವಕಾಶ ನೀಡಲಾಗಿದೆ.

  • ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

    ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

    ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. ಬಲೆಟ್ ಪ್ರಕಾಶ್ ಇದ್ದಲ್ಲಿ ನಗು ಇರುತ್ತಿತ್ತು. ಅವರೊಬ್ಬ ಅದ್ಭುತ ನಟ. ನನ್ನ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    44 ವರ್ಷದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಲಿವರ್, ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 325ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಬುಲೆಟ್ ಪ್ರಕಾಶ್, ಸ್ಯಾಂಡಲ್‍ವುಡ್ ಎಲ್ಲಾ ಸ್ಟಾರ್ ನಟರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿನ ಕಾಂಬಿನೇಷನ್ ಭಾರೀ ಕಚಗುಳಿ ಇಡ್ತಿತ್ತು. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಬುಲೆಟ್ ಪ್ರಕಾಶ್ ಅವರ ನಿಧನದ ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ರಂಗಾಯಣ ರಘು ಅವರು, ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದರು. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು ನೆನೆದಿದ್ದರು.

    ಸಿನಿಮಾದಲ್ಲಿ ಹಾಸ್ಯನಟನಾಗಿ ಖ್ಯಾತಿ ಪಡೆದಿದ್ದ ಬುಲೆಟ್, ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಸ್ನೇಹಿಮುಖಿಯಾಗಿದ್ದ ಬುಲೆಟ್ ಪ್ರಕಾಶ್ ಅವರು ಅಷ್ಟೇ ನೇರನುಡಿ ಹೊಂದಿದ ವ್ಯಕ್ತಿಯಾಗಿದ್ದರು.