Tag: ಬುಲೆಟ್ ರೈಲು

  • 508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?

    508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?

    ಭಾರತ ತಂತ್ರಜ್ಞಾನಗಳು ಬೆಳೆದಂತೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಮಹತ್ವದ ಹೆಜ್ಜೆಗಳನ್ನು ಇಡುತ್ತಲೇ ಹೊರಟಿದೆ. ಉಗಿ ಬಂಡೆಗಳ ರೈಲುಗಳನ್ನು ಬಳಸುತ್ತಿದ್ದ ನಾವುಗಳು ಇದೀಗ ಇಂಧನ, ವಿದ್ಯುತ್ ಬಳಸಿ ರೈಲುಗಳಲ್ಲಿ ಸಂಚರಿಸುತ್ತಿದ್ದೇವೆ. ಈಗ ಭಾರತ ಮತ್ತೆ ಮಹತ್ವದ ಹೆಜ್ಜೆ ಹಾಕಲು 508 ಕಿಮೀ ಉದ್ದದ ಹೈ ಸ್ಪೀಡ್ ಬುಲೆಟ್ ರೈಲು ಯೋಜನೆಯನ್ನು ನಿರ್ಮಿಸುತ್ತಿದೆ.

    2017ರ ಸೆಪ್ಟೆಂಬರ್ 14ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತದ ಅತಿ ಉದ್ದದ ಹೈ ಸ್ಪೀಡ್ ಬುಲೆಟ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗಾಗಲೇ ಇದರ ನಿರ್ಮಾಣ ಆರಂಭವಾಗಿದ್ದು, ಪ್ರಗತಿಯ ಹಂತದಲ್ಲಿದೆ.

    ಮುಂಬೈ ಮತ್ತು ಅಹಮದಾಬಾದ್ ನಡುವೆ ಸಂಚರಿಸುವ ಈ ರೈಲು 508 ಕಿಮೀ ಉದ್ದದ ಯೋಜನೆಯಾಗಿದ್ದು, 300 ಕಿಮೀ ನಷ್ಟು ವಯಾಡಕ್ಟ್ ಮೂಲಕ ಸಂಚರಿಸಲಿದೆ. ಒಟ್ಟು 1.08 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬುಲೆಟ್ ರೈಲು ನಿರ್ಮಾಣಗೊಳ್ಳಲಿದೆ. ಈ ಪೈಕಿ ತಲಾ 5000 ಕೋಟಿ ರೂಪಾಯಿಗಳನ್ನು ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪಾವತಿಸುತ್ತೇವೆ ಹಾಗೂ NHSRCL ಗೆ ಕೇಂದ್ರವು 10,000 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಈಗಾಗಲೇ ಈ ಬುಲೆಟ್ ರೈಲಿನ ಪ್ರಮುಖ ಘಟ್ಟವಾದ 300 ಕಿಮೀ ವಯಾಡಕ್ಟ್ ನಿರ್ಮಿಸುವ ಹಂತವನ್ನು ಪೂರ್ಣಗೊಳಿಸಿದೆ.

    ಒಟ್ಟು ರೈಲಿನ ಉದ್ದದ ಪೈಕಿ 300 ಕಿಮೀ ವಯಾಡಕ್ಟ್ ನಲ್ಲಿ ಎಂಟು ನದಿಗಳಿದ್ದು, ಆ ಪೈಕಿ 5 ನದಿಗಳಿಗೆ ಸೇತುವೆಗಳನ್ನು ನಿರ್ಮಿಸಲಾಗಿದೆ. ಇನ್ನುಳಿದಂತೆ 21 ಕಿಮೀ ಭೂಗತ, 7 ಕಿಮೀ ಸಮುದ್ರದ ಆಳ ಮತ್ತು 5 ಕಿ.ಮೀ ಪರ್ವತ ಸುರಂಗಗಳನ್ನ ಒಳಗೊಂಡಿದೆ. ಈ ರೈಲು ಮುಂಬೈನಿಂದ ಅಹಮದಾಬಾದ್ ಗೆ ಸಂಚರಿಸಲು 2.07 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. 12 ನಿಲ್ದಾಣಗಳ ಮೂಲಕ ಚಲಿಸುವುದರಿಂದ ಒಟ್ಟು 2.58 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.

    ಬುಲೆಟ್ ರೈಲು ಯೋಜನೆಯ 12 ನಿಲ್ದಾಣಗಳು:
    ಈ ಬುಲೆಟ್ ರೈಲು ಯೋಜನೆ ಒಟ್ಟು 12 ನಿಲ್ದಾಣಗಳನ್ನು ಒಳಗೊಂಡಿದ್ದು, ಗುಜರಾತ್ ನಲ್ಲಿ 9 ಹಾಗೂ ಮಹಾರಾಷ್ಟ್ರದಲ್ಲಿ ಮೂರು ನಿಲ್ದಾಣಗಳನ್ನು ಒಳಗೊಂಡಿದೆ. ಸಬರಮತಿ, ಅಹಮದಾಬಾದ್, ಆನಂದ್, ವಡೋದರ, ಭರೂಚ್, ಸೂರತ್, ಬಿಲಿಮೋರಾ, ವಾಪಿ, ಬೋಯಿಸರ್, ವಿರಾರ್, ಥಾಣೆ ಹಾಗೂ ಮುಂಬೈ.

    ಇನ್ನು ಈ ಬುಲೆಟ್ ರೈಲು ಯೋಜನೆ ಒಂದು ವಿಶೇಷತೆ ಎಂದರೆ ಇದು ಯುರೋಪಿಯನ್ ಸಿಗ್ನಲಿಂಗ್ ತಂತ್ರಜ್ಞಾನವನ್ನು ಆಧರಿಸಿದೆ ಎನ್ನಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಜರ್ಮನ್ ಸಂಸ್ಥೆ ಸಿಮೇನ್ಸ್ ಹಾಗೂ ಅಹ್ಮದಾಬಾದ್ ಮೂಲದ ದಿನೇಶ್ ಚಂದ್ ಆರ್ ಅಗರ್ವಾಲ್ ಅವರು ಈ ಕುರಿತು ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ.

    ಆರಂಭದಲ್ಲಿ ಇರಲು ಯೋಜನೆ 2026 ಹೊತ್ತಿಗೆ ಪೂರ್ಣಗೊಳ್ಳಲಿದೆ ಎಂದಿದ್ದರು. ಆದರೆ ಸದ್ಯದ ಪ್ರಗತಿಯ ಪ್ರಕಾರ 2028ರಲ್ಲಿ ಬುಲೆಟ್ ರೈಲು ಯೋಜನೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ಇದೆ.

  • Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

    Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

    ಗಾಂಧಿನಗರ: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

    ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: Hassan| ಶಾಲೆಗೆಂದು ಮೀಸಲಿಟ್ಟಿದ್ದ ಜಾಗ ವಕ್ಫ್ ಹೆಸರಿಗೆ – ಹೆಚ್‌ಕೆ ಸುರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕರೆ

    ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು (Bullet Train) ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (NHSRCL) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: Raichur | ಎಗ್ಗಿಲ್ಲದೆ ಕಲಬೆರಕೆ ಸೇಂದಿ ಮಾರಾಟ- ಅಧಿಕಾರಿಗಳ ದಾಳಿ ವೇಳೆ 500 ಗ್ರಾಂ ಸಿಎಚ್ ಪೌಡರ್ ಜಪ್ತಿ

    ಘಟನೆಯಲ್ಲಿ ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು ಎಂದು ಆನಂದ್‌ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಜರ್‌ಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಲಾರಿ, ಕಾರು ನಡುವೆ ಅಪಘಾತ- ದಂಪತಿ ಸ್ಥಳದಲ್ಲೇ ಸಾವು

  • ಬುಲೆಟ್‌ ರೈಲು ಎಲ್ಲಿ-  ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

    ಬುಲೆಟ್‌ ರೈಲು ಎಲ್ಲಿ- ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

    ಬೆಂಗಳೂರು: ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ಮೋದಿ ಸರ್ಕಾರದ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandnna) ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ (Anjali Nimbalkar) ಅವರು ಬುಲೆಟ್ ರೈಲಿನ (Bullet Rail) ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿದ್ದಾರೆ.

    ಮುಂಬೈ – ಅಹಮದಾಬಾದ್ (Mubai-Ahmedabad) ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: 60 ವರ್ಷದ ಕನಸಿನ ಯೋಜನೆ – ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

     

    ರಶ್ಮಿಕಾ ಹೇಳಿದ್ದೇನು?
    ಪ್ರಧಾನಿ ಮೋದಿ (PM Narendra Modi) ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (ಮುಂಬೈ ಟ್ರಾನ್ಸ್‌ ಹಾರ್ಬರ್‌ ಲಿಂಕ್‌) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರು.

    ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.

    ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ಮಾತನಾಡಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಸಾಧನೆಯನ್ನು ನಟಿ ಕೊಂಡಾಡಿದ್ದರು.


    ಮೋದಿ ಮೆಚ್ಚುಗೆ
    ಅಟಲ್‌ ಸೇತು ಬಗ್ಗೆ ನಟಿ ಹೆಮ್ಮೆಯ ಮಾತುಗಳನ್ನಾಡಿರುವ ವೀಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು.

    ಏನಿದು ಬುಲೆಟ್‌ ರೈಲು ಯೋಜನೆ?
    ಅಹಮದಾಬಾದ್‌-ಮುಂಬೈ ಮಧ್ಯೆ 2023ಕ್ಕೆ ಬುಲೆಟ್‌ ರೈಲು (Bullet Rail) ಭಾರತದಲ್ಲಿ ಸಂಚರಿಸಲಿದೆ ಎಂದು ಮೋದಿ ಹೇಳಿದ್ದರು. ಈಗ ಈ ಯೋಜನೆಯ ಡೆಡ್‌ಲೈನ್‌ ಮುಂದಕ್ಕೆ ಹೋಗಿದೆ. ಆರಂಭದಲ್ಲಿ ಭೂಸ್ವಾಧೀನ ವಿಳಂಬವಾಗಿತ್ತು. ನಂತರ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಅಸ್ವಿತ್ವಕ್ಕೆ ಬಂದಿತ್ತು. 2019 ಬುಲೆಟ್‌ ರೈಲು ಯೋಜನೆಗೆ ಮಿತ್ರ ಪಕ್ಷವಾದ ಎನ್‌ಸಿಪಿ ವಿರೋಧ ವ್ಯಕ್ತಪಡಿಸಿ ಈ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿತ್ತು. ಕೋವಿಡ್‌ ಕಾರಣದಿಂದ ಮತ್ತಷ್ಟು ವಿಳಂಬವಾಯಿತು. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಬಂದ ನಂತರ ಬುಲೆಟ್‌ ರೈಲು ಯೋಜನೆ ಕೆಲಸ ಚುರುಕು ಪಡೆದಿದೆ.

  • ಬ್ರಿಟಿಷರ ರೈಲಿನಲ್ಲಿ ಊಟಿ ರೌಂಡ್ಸ್‌!

    ಬ್ರಿಟಿಷರ ರೈಲಿನಲ್ಲಿ ಊಟಿ ರೌಂಡ್ಸ್‌!

    ಬುಲೆಟ್‌ ರೈಲು ಬಗ್ಗೆ ನೀವು ಕೇಳಿರಬಹುದು. ಸೆಮಿ-ಹೈ-ಸ್ಪೀಡ್‌ ರೈಲಿನಲ್ಲಿ ನೀವು ಸಂಚರಿಸಿರಬಹುದು. ಆದರೆ ಮೀಟರ್‌ ಗೇಜ್‌ ರೈಲಿನಲ್ಲಿ ಸಂಚರಿಸಬೇಕಿದ್ದಲ್ಲಿ ನೀವು ಊಟಿಗೆ ಬರಬೇಕು. ಮೀಟರ್‌ ಗೇಜ್‌ ರೈಲಿನಲ್ಲಿ ಪ್ರಯಾಣಿಸಿದರೆ ಮಾತ್ರ ಊಟಿ ಪ್ರವಾಸ ಕಂಪ್ಲೀಟ್‌ ಆಗಿದೆ ಅಂತ ಹೇಳಬಹುದು.

    ಈಗ ನಾವೆಲ್ಲ ಸಂಚರಿಸುತ್ತಿರುವುದು ಬ್ರಾಡ್‌ ಗೇಜ್‌ ರೈಲಿನಲ್ಲಿ. ಈ ರೈಲಿನ ಹಳಿಯ ಅಗಲ1.676 ಮೀಟರ್‌(5.4 ಅಡಿ). ಆದರೆ ಮೀಟರ್‌ ಗೇಜ್‌ ಹಳಿಯ ಅಗಲ ಕೇವಲ 1 ಮೀಟರ್‌(3.2 ಅಡಿ) ಮಾತ್ರ. ಊಟಿಯಿಂದ ಮೆಟ್ಟುಪಾಳ್ಯಂವರೆಗೆ ಈ ಮೀಟರ್‌ ಗೇಜ್‌ ರೈಲು ಸಂಚರಿಸುತ್ತದೆ. ಕೂನೂರಿನಲ್ಲಿರುವ ಪ್ರವಾಸಿ ತಾಣಕ್ಕೆ ತೆರಳಲು ವಾಹನದ ಮೂಲಕ ಹೋಗಬಹುದಾದರೂ ಈ ರೈಲಿನಲ್ಲಿ ಸಂಚರಿಸಿದರೆ ಸಿಗುವ ಮಜಾವೇ ಬೇರೆ.

    ಊಟಿ ಪ್ರವಾಸ ಯಶಸ್ವಿಯಾಗಬೇಕಾದರೆ ಮೊದಲೇ ನೀವು ಬಹಳ ಮುಖ್ಯವಾದ ಕೆಲಸ ಮಾಡಬೇಕು. ಐಆರ್‌ಸಿಟಿಸಿ ವೆಬ್‌ಸೈಟ್‌ಗೆ ಹೋಗಿ 15-20 ದಿನದ ಮೊದಲೇ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕಾಗುತ್ತದೆ. ಊಟಿ-ಕೂನೂರು-ಊಟಿಗೆ ಒಬ್ಬರಿಗೆ 325 ರೂ. ಟಿಕೆಟ್‌ ದರವಿದೆ.

    ಊಟಿಯಿಂದ ಕುನೂರಿಗೆ 21 ಕಿ.ಮೀ ದೂರವಿದೆ. ಒಟ್ಟು 1:15 ನಿಮಿಷ ಪ್ರಯಾಣ. ರೈಲಿನಲ್ಲಿ ಎದುರು ಬದುರು ಕುಳಿತುಕೊಳ್ಳಬೇಕು. ಒಂದು ಸೀಟ್‌ನ ಸಾಲಿನಲ್ಲಿ 4 ಜನ ಮಾತ್ರ ಕುಳಿತುಕೊಳ್ಳಬಹುದು. ಸಣ್ಣದಾಗಿರುವ 3 ಸುರಂಗದಲ್ಲಿ ಸಾಗುವ ಈ ರೈಲಿನಲ್ಲಿ ಟೀ ಎಸ್ಟೇಟ್‌ಗಳನ್ನು ನೋಡಬಹುದು. ನೇರವಾಗಿ ಬೆಳೆದಿರುವ ನೀಲಗಿರಿ ಮರಗಳಿರುವ ಕಾಡನ್ನು ವೀಕ್ಷಿಸುವುದು ಕಣ್ಣಿಗೆ ಹಬ್ಬ. ಪ್ರಕೃತಿ ಸೌಂದರ್ಯವನ್ನು ಅನುಭವಿಸುವವರ ನೆನಪಿನಲ್ಲಿ ಉಳಿಯುವ ರೈಲು ಪ್ರಯಾಣ ಇದು ಆಗುವುದರಲ್ಲಿ ಯಾವುದೇ ಅನುಮಾನವೇ ಇಲ್ಲ.

    ಕೂನೂರು ರೈಲ್ವೇ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಬಾಡಿಗೆ ಕಾರು ಚಾಲಕರು ಬರುತ್ತಾರೆ. ಇಂಟರ್‌ನೆಟ್‌ನಲ್ಲಿ ಚೆಕ್‌ ಮಾಡಿದರೆ ಕೂನೂರು ಸಮೀಪವೇ ಬಹಳಷ್ಟು ಪ್ರವಾಸಿ ತಾಣಗಳಿವೆ. ಇವುಗಳನ್ನು ನೋಡಲು ಒಂದು ದಿನ ಪೂರ್ತಿ ಬೇಕಾದಿತು. ಹೆಚ್ಚಿನ ಜನರು ʼಡಾಲ್ಫಿನ್‌ ನೋಸ್‌ʼ ನೋಡಲು ತೆರಳುತ್ತಾರೆ. ಎತ್ತರದ ಘಾಟಿ ರಸ್ತೆಗಳಲ್ಲಿ ನಿಂತು ನೋಡಿದಾಗ ಹೇಗೆ ಪರಿಸರ ಕಾಣುತ್ತದೆ ಆ ರೀತಿ ವ್ಯೂ ನಿಮಗೆ ಇಲ್ಲೂ ಕಾಣುತ್ತದೆ. ಈ ಜಾಗ ವೀಕ್ಷಣೆ ಮಾಡಿದ ಟೀ ಫ್ಯಾಕ್ಟರಿಗೆ ಹೋಗಬಹುದು.

    ದೇಶದ ಮೊದಲ ಸೇನಾ ಪಡೆಗಳ ಮುಖ್ಯಸ್ಥ(ಸಿಡಿಎಸ್‌) ಬಿಪಿನ್‌ ರಾವತ್‌ರಿಂದಾಗಿ ಕೂನೂರು ಸುದ್ದಿಯಲ್ಲಿತ್ತು. ರಾವತ್‌ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡ ಜಾಗ ಈ ಕೂನೂರು ತಾಲೂಕಿನಲ್ಲೇ ಬರುತ್ತದೆ. ರಾವತ್‌ ಅವರಿಂದ ಹೆಲಿಕಾಪ್ಟರ್‌ ಪತನಕ್ಕೆ ತಾಂತ್ರಿಕ ದೋಷ ಕಾರಣವಲ್ಲ. ಹವಾಮಾನ ವೈಪರೀತ್ಯದಿಂದ ದುರಂತ ಸಂಭವಿಸಿದೆ ಎಂದು ಸೇನೆಯ ತನಿಖಾ ತಂಡ ವರದಿ ನೀಡಿತ್ತು. ಈ ವರದಿ ನಿಜವೂ ಹೌದು. ಇಲ್ಲಿನ ಹವಾಮಾನ ಹೇಗೆ ದಿಢೀರ್‌ ಬದಲಾಗುತ್ತದೆ ಅಂದರೆ ಒಮ್ಮೆ ಬೆಟ್ಟ ದೂರದಿಂದ ಕಾಣುತ್ತಿರುತ್ತದೆ. ಕೆಲ ನಿಮಿಷದಲ್ಲಿ ಆ ಬೆಟ್ಟ ನಿಮ್ಮ ಕಣ್ಣಿನಿಂದ ಮರೆ ಆಗಿರುತ್ತದೆ. ಅಷ್ಟೊಂದು ಮಂಜು ಆವರಿಸಿರುತ್ತದೆ. ಇದನ್ನೂ ಓದಿ: ರಾವತ್ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ: ಭಾರತೀಯ ವಾಯುಪಡೆ

    ಮುಗಿಸುವ ಮುನ್ನ ಈ ಮೀಟರ್‌ ಗೇಜ್‌ ರೈಲನ್ನು ಆರಂಭಿಸಿದವರು ಬ್ರಿಟಿಷರು. 1854ರಿಂದ ಕಾಮಗಾರಿ ಆರಂಭವಾದರೂ ಪೂರ್ಣಗೊಂಡದ್ದು 1899ಕ್ಕೆ. 2005ರಲ್ಲಿ ಯುನೆಸ್ಕೋ ನೀಲಗಿರಿ ರೈಲ್ವೇಯನ್ನು ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸಿದೆ. ಮೀಟರ್‌ ಗೇಜ್‌ ರೈಲು ಊಟಿಯಲ್ಲಿ ಮಾತ್ರ ಇಲ್ಲ. ಭಾರತದ ಹಲವು ಕಡೆ ಸೇವೆಯಲ್ಲಿದೆ.

    – ಅಶ್ವಥ್‌ ಸಂಪಾಜೆ

    Live Tv
    [brid partner=56869869 player=32851 video=960834 autoplay=true]

  • 140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ಬಿಟ್ಟ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

    ಬೀಜಿಂಗ್: ಹೈಸ್ಪೀಡ್ ಬುಲೆಟ್ ರೈಲೊಂದು ಹಳಿ ತಪ್ಪಿದ್ದು, ಚಾಲಕ ಮೃತಪಟ್ಟ ಘಟನೆ ಚೀನಾದ ಗ್ಯುಝೌ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಬುಲೆಟ್ ರೈಲು ಚೀನಾದ ಸೌತ್ ವೆಸ್ಟರ್ನ್ ಗುಯಾಂಗ್ ಪ್ರಾಂತ್ಯದಿಂದ ದಕ್ಷಿಣ ಪ್ರಾಂತ್ಯದ ಗುವಾಂಗ್‌ಝೌಗೆ ಚಲಿಸುತ್ತಿದ್ದಾಗ ರೊಂಗ್‌ಜಿಯಾಂಗ್ ನಿಲ್ದಾಣದ ಸುರಂಗ ಪ್ರವೇಶದ್ವಾರದಲ್ಲಿ ಹಳಿತಪ್ಪಿದೆ. ರೋಜಿಯಾಂಗ್ ನಿಲ್ದಾಣದಲ್ಲಿ ಮಣ್ಣು ಕುಸಿದಿದ್ದ ಕಾರಣ ರೈಲಿನ 2 ಬೋಗಿಗಳು ಹಳಿತಪ್ಪಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    ಘಟನೆ ಬಳಿಕ ಆನ್ ಬೋರ್ಡ್ ಡೇಟಾ ಪರಿಶೀಲಿಸಿದಾಗ, ಬುಲೆಟ್ ರೈಲು ಯುಝೈ ಸುರಂಗ ಪ್ರವೇಶಿಸುವ ಸಂದರ್ಭ ಹಳಿಯಲ್ಲಿ ದೋಷವಿರುವುದನ್ನು ಚಾಲಕ ಕೇವಲ 5 ಸೆಕೆಂಡುಗಳಲ್ಲಿ ಗುರುತಿಸಿ, ತಕ್ಷಣವೇ ಬ್ರೇಕ್ ಹಾಕಿದ್ದಾನೆ. ಆದರೂ ರೈಲು 900 ಮೀಟರ್ ದೂರಕ್ಕೆ ಜಾರಿದೆ. ಇದನ್ನೂ ಓದಿ: 37 ವರ್ಷದ ಹಳೆಯ ಕಾರನ್ನು ರಾಷ್ಟ್ರೀಯ ಆಸ್ತಿಯೆಂದು ಘೋಷಿಸಿದ ರವಿಶಾಸ್ತ್ರಿ

    ಚಾಲಕನ ಸಮಯಪ್ರಜ್ಞೆಯಿಂದ ಸುಮಾರು 140 ಪ್ರಯಾಣಿಕರು ಪಾರಾಗಿದ್ದಾರೆ. ಘಟನೆಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದು, ಚಾಲಕ ಮಾತ್ರ ಪ್ರಾಣ ಬಿಟ್ಟಿದ್ದಾನೆ.

  • ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350  ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350 ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ಗಾಂಧಿನಗರ: ಗಂಟೆಗೆ 350 ಕಿಲೋಮೀಟರ್ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆಗೆ ಸೂರತ್‍ನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು, ಇದು ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿರುತ್ತದೆ ಎಂದು ವರದಿಯಾಗಿದೆ.

    2026ರಲ್ಲಿ ಗುಜರಾತ್‍ನ ಬಿಲಿಮೋರಾ ಮತ್ತು ಸೂರತ್ ನಡುವೆ ಗಂಟೆಗೆ 350 ಕಿಮೀ ವೇಗದಲ್ಲಿ ಬುಲೆಟ್ ರೈಲಿನ ಮೊದಲ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮೊದಲು ಬಿಲಿಮೋರಾ ಮತ್ತು ಸೂರತ್ ನಡುವೆ ಪ್ರಾಯೋಗಿಕ ಪರೀಕ್ಷೆ ನಂತರ ಇತರ ಭಾಗಗಳಲ್ಲಿ ಪ್ರಾಯೋಗಿಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: 10 ಕೋಟಿ ಭಾರತೀಯ ಬಳಕೆದಾರರಿಗೆ ಯುಪಿಐ ಸೇವೆ ನೀಡಲಿದೆ ವಾಟ್ಸಪ್

    ಇದು ಪ್ರಯಾಣಿಕರಿಗೆ ಗೇಮ್ ಚೇಂಜರ್ ಆಗಿರುತ್ತದೆ ಮತ್ತು ವಿಮಾನ ಪ್ರಯಾಣಕ್ಕೆ ಪೈಪೋಟಿ ನೀಡುವ ಸಾಮರ್ಥ್ಯ ಹೊಂದಿದೆ. ಬುಲೆಟ್ ರೈಲುಗಳು ಕಡಿಮೆ ಚೆಕ್ ಇನ್ ಸಮಯದಲ್ಲಿ ಹೆಚ್ಚು ಸ್ಥಳಗಳ ಸಂಪರ್ಕ ಸಾಧಿಸಲು ಪ್ಲಾನ್ ರೂಪಿಸಲಾಗಿದೆ. ಪ್ರಸ್ತುತ ಗಂಟೆಗೆ 350 ಕಿಮೀ ವೇಗದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದರೂ ಈ ವೇಗದಲ್ಲಿ ರೈಲುಗಳು ಸಂಚರಿಸುವುದಿಲ್ಲ. ಕಾರ್ಯಾಚರಣೆಯ ವೇಗ ಗಂಟೆಗೆ 320 ಕಿಮೀ ಆಗಿರುತ್ತದೆ. ಬುಲೆಟ್ ರೈಲು ಸ್ಲ್ಯಾಬ್ ಟ್ರ್ಯಾಕ್ ಸಿಸ್ಟಮ್ ಎಂಬ ವಿಶೇಷ ಟ್ರ್ಯಾಕ್‍ಗಳಲ್ಲಿ ಚಲಿಸುತ್ತವೆ. ಜಪಾನ್ ತಂತ್ರಜ್ಞಾನದ ನೆರವಿನಿಂದ ಇದನ್ನು ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಲಿಂಗಿಗಳ ಮದುವೆ ಮಾನ್ಯತೆ ಮನವಿ ತಿರಸ್ಕರಿಸಿದ ಹೈಕೋರ್ಟ್

    ಈಗಾಗಲೇ ಬುಲೆಟ್ ರೈಲು ಹಳಿಗಾಗಿ ಗುಜರಾತ್‍ನಲ್ಲಿ ಸ್ಥಳಗಳನ್ನು ಖರೀದಿಸಿರುವ ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ತಿಂಗಳಲ್ಲಿ ಬಿಲಿಮೋರಾ ಮತ್ತು ಸೂರತ್ ನಡುವೆ 200 ರಿಂದ 250 ಪಿಲ್ಲರ್‌ಗಳ ರಚನೆಗೆ ಪ್ಲಾನ್ ಹಾಕಿದೆ. ಈಗಾಗಲೇ 237 ಕಿಮೀ ಬುಲೆಟ್ ರೈಲು ಹಳಿ ತಯಾರಾಗಿದ್ದು, ಇನ್ನುಳಿದ 115 ಕಿಮೀ ಕಾಮಗಾರಿ ನಡೆಯುತ್ತಿದೆ. ಬುಲೆಟ್ ರೈಲು ಪ್ರಯಾಣಕ್ಕೆ ಸಿದ್ಧವಾದರೆ 2 ಗಂಟೆ 58 ನಿಮಿಷಗಳ ಅಂತರದಲ್ಲಿ ಅಹಮದಾಬಾದ್‍ನಿಂದ ಮುಂಬೈಗೆ ಸಂಚರಿಸಬಹುದಾಗಿದೆ.

  • ಡೀಸೆಲ್ ಇಂಜಿನ್‍ಗೆ ಬ್ರೇಕ್- 100 ಕೋಟಿ ಉಳಿಸಲಿದೆ ಕೊಂಕಣ ರೈಲ್ವೆ ಇಲಾಖೆ

    – ಕರಾವಳಿ ಭಾಗದ ವಿದ್ಯುದೀಕರಣ ಪೂರ್ಣ

    ಕಾರವಾರ: ಕಳೆದ ಮೂರು ವರ್ಷಗಳಿಂದ 1,100 ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ಕೊಂಕಣ ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಭರದಿಂದ ಸಾಗಿತ್ತು. ಇದೀಗ ರಾಜ್ಯದಲ್ಲಿ ಕಾಮಗಾರಿ ಪೂರ್ಣಗೊಂದ್ದು, ತೋಕೂರಿನಿಂದ ಕಾರವಾರದವರೆಗೆ ಮೊದಲ ಬಾರಿ ನಡೆಸಿದ ವಿದ್ಯುತ್ ಚಾಲಿತ ಲೋಕೊದ (ಎಂಜಿನ್) ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿದೆ.

    ಈ ಹಿಂದೆ ದಕ್ಷಿಣ ಕನ್ನಡದ ತೋಕೂರಿನಿಂದ ಉಡುಪಿ ಜಿಲ್ಲೆಯ ಬಿಜೂರುವರೆಗೆ ಸುಮಾರು 105 ಕಿಲೋಮೀಟರ್ ಮಾರ್ಗದ ವಿದ್ಯುದೀಕರಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿತ್ತು. ಇದೀಗ ಉತ್ತರ ಕನ್ನಡದಲ್ಲೂ ವಿದ್ಯುದೀಕರಣ ಸಂಪೂರ್ಣವಾಗಿದ್ದು, ಕೊಂಕಣ ರೈಲ್ವೆಯು ಲೋಕೋದ ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿದೆ.

    ಪರೀಕ್ಷಾರ್ಥ ಸಂಚಾರದಲ್ಲಿ ಗರಿಷ್ಠ 110 ಕಿಲೋಮೀಟರ್ ವೇಗದಲ್ಲೂ ಯಾವುದೇ ತಾಂತ್ರಿಕ ಸಮಸ್ಯೆಯಿಲ್ಲದೇ ಸಂಚರಿಸಿದ್ದು, ಯಾವುದೇ ಲೋಪದೋಷಗಳು ಕಂಡುಬಂದಿರದ ಕಾರಣ ಶೀಘ್ರದಲ್ಲಿ ಮಂಗಳೂರಿನಿಂದ ಕಾರವಾರದ ವರೆಗೆ ವಿದ್ಯುದೀಕರಣಗೊಂಡ ರೈಲುಗಳು ಸಂಚರಿಸುವ ಮೂಲಕ ಡೀಸೆಲ್ ಇಂಜಿನ್‍ಗೆ ಶಾಶ್ವತ ಮುಕ್ತಿ ದೊರೆಯಲಿದೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ರೋಹಾದಿಂದ ರತ್ನಗಿರಿವರೆಗಿನ ಮಾರ್ಗದಲ್ಲಿ ಮಾರ್ಚ್ 7ರಂದು ಯಶಸ್ವಿ ಪರೀಕ್ಷಾರ್ಥ ಸಂಚಾರ ಮಾಡಲಾಗಿತ್ತು. ಇತ್ತ ಗೋವಾದ ಮಡಗಾಂವ್‍ನಿಂದ ಮಹಾರಾಷ್ಟ್ರದ ಕರ್ಮಾಲಿವರೆಗಿನ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದೆ.

    ಇನ್ನು ಕಾರವಾರದಿಂದ ಗೋವಾ ಮಡಗಾಂವ್ ವರೆಗೆ ಜೂನ್ ತಿಂಗಳಲ್ಲಿ ವಿದ್ಯುದೀಕರಣ ಪೂರ್ಣ ಗೊಳ್ಳಲಿದೆ. ಇದರಿಂದ ಅತೀ ಹೆಚ್ಚು ಬಳಕೆಯಾಗುತಿದ್ದ ಡೀಸೆಲ್ ಇಂಧನದ ಖರ್ಚು ಉಳಿಯಲಿದ್ದು, ಇಲಾಖೆಗೆ ವರ್ಷಕ್ಕೆ 100 ಕೋಟಿ ರೂ. ಉಳಿತಾಯವಾಗಲಿದೆ ಎಂದು ಕ್ಷೇತ್ರಿಯ ರೈಲ್ವೆ ಪ್ರಬಂಧಕ ಬಾಳಾಸಾಹೇಬ್ ಬಿ.ನಿಕಮ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಕೊಂಕಣ ರೈಲ್ವೆ ಮಾರ್ಗವು ಒಟ್ಟು 756 ಕಿಲೋಮೀಟರ್ ಉದ್ದವಿದ್ದು, ಮಹಾರಾಷ್ಟ್ರದ ರೋಹಾದಿಂದ ಮಂಗಳೂರು ಸಮೀಪದ ತೋಕೂರಿನವರೆಗೆ ಚಾಚಿಕೊಂಡಿದೆ.

    ಸಬ್ ಸ್ಟೇಷನ್‍ಗಳ ಸ್ಥಾಪನೆ ಪೂರ್ಣ
    ರೈಲ್ವೆ ಮಾರ್ಗಕ್ಕೆ ಬೇಕಾಗುವ ವಿದ್ಯುತ್ ಪೂರೈಕೆಗೆ ಸಬ್ ಸ್ಟೇಷನ್‍ಗಳ ಸ್ಥಾಪನೆ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಇವೆ. ಕಾರವಾರ, ಮುರಡೇಶ್ವರ, ಸೇನಾಪುರ, ಬಾರ್ಕೂರು, ಮೂಲ್ಕಿಯಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಿವೆ. ಇದೇ ರೀತಿ ಕೊಂಕಣ ರೈಲ್ವೆಯ ಮಾರ್ಗದುದ್ದಕ್ಕೂ ಸ್ಥಾಪನೆ ಮಾಡಲಾಗುತ್ತಿದೆ. ಈ ವರ್ಷ ಡಿಸೆಂಬರ್ ಒಳಗೆ ವಿದ್ಯುತ್ ಚಾಲಿತ ರೈಲುಗಳ ಸಂಚಾರ ಈ ಮಾರ್ಗದಲ್ಲಿ ಆರಂಭವಾಗುವ ನಿರೀಕ್ಷೆಯಿದೆ.

    ಕರಾವಳಿಗರಿಗೆ ಹೆಚ್ಚಿನ ಲಾಭ
    ವಿದ್ಯುದೀಕರಣ ಗೊಂಡ ರೈಲು ಸಂಚರಿಸುವುದರಿಂದ ಇಂಧನ ವೆಚ್ಚ ಅತೀ ಕಡಿಮೆಯಾಗಲಿದೆ. ಇದರಿಂದ ಹೆಚ್ಚು ರೈಲುಗಳನ್ನು ಓಡಿಸಲು ಸಹಾಯವಾಗಲಿದೆ. ಕರ್ನಾಟಕದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗವು ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ಸಂಬಂಧ ಮಹಾರಾಷ್ಟ್ರ ಹಾಗೂ ಗೋವಾ ವನ್ನು ಅವಲಂಭಿಸಿದೆ. ಉದ್ಯೋಗಕ್ಕಾಗಿ ಪ್ರತಿ ದಿನ ಸಾವಿರಾರು ಜನ ಕಾರವಾರದಿಂದ ಗೋವಾಕ್ಕೆ ಸಂಚಾರ ಮಾಡುತ್ತಾರೆ. ಹೀಗಾಗಿ ಹೆಚ್ಚು ಉಪಯೋಗವಾಗಲಿದ್ದು, ಮಾತ್ರವಲ್ಲದೆ ಮಹಾರಾಷ್ಟ್ರದಲ್ಲಿ ಸಂಚರಿಸುವ ಹೈ ಸ್ಪೀಡ್ ರೈಲಿನಂತೆ ಈ ಭಾಗದಲ್ಲೂ ಮುಂದಿನ ದಿನದಲ್ಲಿ ಹೈ ಸ್ಪೀಡ್ ರೈಲು ಸಂಚರಿಸಲು ಸಹಾಯವಾಗಲಿದೆ.

  • ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬುಲೆಟ್ ರೈಲು ಯೋಜನೆ ರದ್ದು

    ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬುಲೆಟ್ ರೈಲು ಯೋಜನೆ ರದ್ದು

    ಮುಂಬೈ: ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಬುಲೆಟ್ ರೈಲು ಯೋಜನೆ ರದ್ದಾಗುವ ಸಾಧ್ಯತೆಯಿದೆ.

    ಈ ಸಂಬಂಧ ಕಾಂಗ್ರೆಸ್ ನಾಯಕರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ತಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಬುಲೆಟ್ ರೈಲು ಯೋಜನೆಗೆ ಮಹಾರಾಷ್ಟ್ರ ಸರ್ಕಾರ ಯಾವುದೇ ಹಣ ನೀಡುವುದಿಲ್ಲ. ಯೋಜನೆ ಪೂರ್ಣವಾಗಬೇಕಾದರೆ ಕೇಂದ್ರ ಸರ್ಕಾರವೇ ಎಲ್ಲ ಹಣವನ್ನು ಒದಗಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ – ಇಲ್ಲಿಯವರೆಗೆ ಬುಲೆಟ್ ರೈಲು ಅಪಘಾತವಾಗಿಲ್ಲ ಯಾಕೆ?

    ಎನ್‍ಸಿಪಿ ನಾಯಕರೊಬ್ಬರು ಪ್ರತಿಕ್ರಿಯಿಸಿ, ಸರ್ಕಾರ ರಚನೆ ಸಂಬಂಧ ಮೂರು ಪಕ್ಷದ ನಾಯಕರು ನಡೆಸಿದ ಮೊದಲ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 1.8 ಲಕ್ಷ ಕೋಟಿ ರೂ. ವೆಚ್ಚದ ಈ ಯೋಜನೆಗೆ ಮಹಾರಾಷ್ಟ್ರ ಸರ್ಕಾರ 5 ಸಾವಿರ ಕೋಟಿ ರೂ. ಹಣವನ್ನು ನೀಡಬೇಕಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಗೆ ಮೀಸಲಿಟ್ಟ ಹಣವನ್ನು ಜನರ ಕಲ್ಯಾಣಕ್ಕೆ ಸಂಬಂಧಿಸಿದ ಇತರೇ ಯೋಜನೆಗಳಿಗೆ ಬಳಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    2022ಕ್ಕೆ ಸ್ವತಂತ್ರ ಸಿಕ್ಕಿ 75 ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಯೋಜನೆ ಲೋಕಾರ್ಪಣೆ ಮಾಡಲು ಭಾರತ ಪ್ರಯತ್ನ ನಡೆಸುತ್ತಿದೆ. ಭಾರತ ಪಡೆದುಕೊಳ್ಳುವ ಸಾಲಕ್ಕೆ ಜಪಾನ್ 50 ವರ್ಷಕ್ಕೆ 0.1% ಬಡ್ಡಿ ವಿಧಿಸಿದೆ. ಮೇಕ್ ಇನ್ ಇಂಡಿಯಾ ಆಶಯದ ಸಫಲತೆಗೆ ಈ ಯೋಜನೆ ಬಹಳ ಮುಖ್ಯವಾಗಿದ್ದು ತ್ವರಿತಗತಿಯಲ್ಲಿ ಯೋಜನೆಯನ್ನು ಮುಗಿಸುವುದರಲ್ಲಿ ಕೇಂದ್ರ ಸರ್ಕಾರ ಉತ್ಸುಕವಾಗಿದೆ. ಆದರೆ ರೈತರು ಈ ಯೋಜನೆ ವಿರುದ್ಧ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಕೆಲ ಸಮಯ ಅಡ್ಡಿಯಾಗಿತ್ತು. ಅಹ್ಮದಾಬಾದ್-ಮುಂಬೈ ನಡುವೆ ಬುಲೆಟ್ ರೈಲು ಒಟ್ಟು 508 ಕಿ.ಮೀ. ಸಂಚರಿಸಲಿದ್ದು, 12 ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ. ಇದನ್ನೂ ಓದಿ – ಡೆಡ್‍ಲೈನ್ ಒಳಗೆ ಬುಲೆಟ್ ರೈಲು ಯೋಜನೆ ಕಂಪ್ಲೀಟ್ ಆಗೋದು ಡೌಟ್!

    ಮುಂಬೈ – ಅಹ್ಮದಾಬಾದ್ ಮಧ್ಯೆ ಗಂಟೆಗೆ 320 ಕಿ.ಮೀ ವೇಗದಲ್ಲಿ ರೈಲು ಸಂಚರಿಸಲಿದೆ. ಜಪಾನ್ ನೀಡುತ್ತಿರುವ 88 ಸಾವಿರ ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಬೇಕಾದರೆ ಪ್ರತಿ ದಿನ 100 ಟ್ರಿಪ್ ರೈಲು ಸಂಚರಿಸಬೇಕು ಅಥವಾ ದಿನಕ್ಕೆ 88 ಸಾವಿರದಿಂದ 1.18 ಲಕ್ಷ ಪ್ರಯಾಣಿಕರು ಸಂಚರಿಸಬೇಕು ಎಂದು ಈ ಹಿಂದೆ ಈ ಯೋಜನೆ ಬಗ್ಗೆ ಅಧ್ಯಯನ ನಡೆಸಿದ್ದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಹಮದಾಬಾದ್ ರೈಲ್ವೇ ಇಲಾಖೆಗೆ ವರದಿ ನೀಡಿತ್ತು. ಅಷ್ಟೇ ಅಲ್ಲದೇ 300 ಕಿ.ಮೀ ಪ್ರಯಾಣಕ್ಕೆ ಒಂದು ಟಿಕೆಟ್‍ಗೆ 1500 ರೂ ದರವನ್ನು ನಿಗದಿ ಮಾಡಬೇಕೆಂಬ ಅಂಶವನ್ನು ವರದಿಯಲ್ಲಿ ತಿಳಿಸಿತ್ತು.

  • ಮುಂಬೈ-ಅಹ್ಮದಾಬಾದ್ ಬುಲೆಟ್ ಟ್ರೈನ್ ದರ 3 ಸಾವಿರ ರೂ.

    ಮುಂಬೈ-ಅಹ್ಮದಾಬಾದ್ ಬುಲೆಟ್ ಟ್ರೈನ್ ದರ 3 ಸಾವಿರ ರೂ.

    ಅಹ್ಮದಾಬಾದ್: ಬಹು ನಿರೀಕ್ಷಿತ ಬುಲೆಟ್ ರೈಲು ಯೋಜನೆಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಇದೀಗ ಹೈ ಸ್ಪೀಡ್ ರೈಲು ಪ್ರಯಾಣದ ಅಂದಾಜು ದರವನ್ನೂ ಸಹ ಪ್ರಕಟಿಸಲಾಗಿದೆ.

    ಮುಂಬೈ-ಅಹ್ಮದಾಬಾದ್ ನಡುವೆ ಸಂಚರಿಸಲಿರುವ ಹೈ ಸ್ಪೀಡ್ ರೈಲಿನ ದರ ಅಂದಾಜು 3 ಸಾವಿರ ರೂ. ಇರಲಿದೆ ಎಂದು ನ್ಯಾಷನಲ್ ಹೈ ಸ್ಪೀಡ್ ರೇಲ್ ಕಾರ್ಪೋರೇಷನ್ ಲಿ.(ಎನ್‍ಎಚ್‍ಎಸ್‍ಆರ್‍ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಅಚಲ್ ಖರೆ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

    ಮುಂಬೈ-ಅಹ್ಮದಾಬಾದ್ ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಒಟ್ಟು 1,380 ಹೆಕ್ಟೇರ್ ಭೂಮಿಯ ಅಗತ್ಯವಿದ್ದು, ಈಗಾಗಲೇ 622 ಹೆಕ್ಟೇರ್ (ಶೇ.45ರಷ್ಟು)ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಉಳಿದ ಭೂಮಿಯನ್ನು ಸಹ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಬುಲೆಟ್ ರೈಲು ಯೋಜನೆಗೆ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಒಟ್ಟು 1,380 ಹೆಕ್ಟೇರ್ ಭೂಮಿಯ ಅಗತ್ಯವಿದ್ದು, ಇದರಲ್ಲಿ ಖಾಸಗಿ, ಸರ್ಕಾರಿ, ಅರಣ್ಯ ಮತ್ತು ರೈಲ್ವೇ ಭೂಮಿ ಒಳಗೊಂಡಿದೆ. ಈವರೆಗೆ 622 ಹೆಕ್ಟೇರ್(ಶೇ.45) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದೇವೆ. ಡಿಸೆಂಬರ್ 2023ರ ಗಡುವು ಗಮನದಲ್ಲಿರಿಸಿಕೊಂಡು ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

    ಕಾಮಗಾರಿ ಪೂರ್ಣಗೊಂಡ ನಂತರ ಪ್ರತಿ ದಿನ ಬುಲೆಟ್ ರೈಲು 70 ಟ್ರಿಪ್ ಸಂಚರಿಸಲಿದ್ದು, ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರ ವರೆಗೆ ಕಾರ್ಯನಿರ್ವಹಿಸಲಿದೆ. ನಾಲ್ಕು ಪ್ರಮುಖ ಪ್ಯಾಕೇಜ್‍ಗಳಿಗೆ ಟೆಂಡರ್ ನೀಡಲಾಗಿದೆ. ಮಾರ್ಚ್ 2020ರೊಳಗೆ ನಿರ್ಮಾಣ ಕಾರ್ಯಗಳು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

    ಈ ಪ್ಯಾಕೇಜ್‍ಗಳಲ್ಲಿ ವಾಪಿ ಮತ್ತು ವಡೋದರಾ ನಡುವೆ 237 ಕಿ.ಮೀ. ಸೇತುವೆ ನಿರ್ಮಾಣ ಹಾಗೂ ವಡೋದರಾ ಮತ್ತು ಅಹ್ಮದಾಬಾದ್ ನಡುವೆ 87ಕಿ.ಮೀ. ಇನ್ನೊಂದು ಪ್ಯಾಕೇಜ್ ಗುರುತಿಸಲಾಗಿದೆ. ಈ ಯೋಜನೆಯನ್ನು ಒಟ್ಟು 27 ಪ್ಯಾಕೇಜ್‍ಗಳಾಗಿ ವಿಂಗಡಿಸಿದ್ದು, ಮಹಾರಾಷ್ಟ್ರದಲ್ಲಿ ಸಮುದ್ರದೊಳಗಿನ ಸುರಂಗ ಮಾರ್ಗ ಸೇರಿದಂತೆ ನಾಲ್ಕು ಪ್ರಮುಖ ಪ್ಯಾಕೇಜ್‍ಗಳಿಗೆ ಈಗಾಗಲೇ ಟೆಂಡರ್ ನೀಡಿದ್ದೇವೆ ಎಂದು ಖರೆ ವಿವರಿಸಿದರು.

    ಪ್ರಸ್ತುತ ಇಡೀ ಯೋಜನೆಯ ಅಂದಾಜು ವೆಚ್ಚ 1.08 ಲಕ್ಷ ಕೋಟಿ ರೂ.ಗಳಾಗಿದೆ. ಡಿಸೆಂಬರ್ 2022ರೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಭೂಸ್ವಾಧಿನದ ಕುರಿತು ಕೆಲವು ರೈತರಲ್ಲಿ ಅಸಮಾಧಾನ ಇರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ರೈತರು ವಿರೋಧ ವ್ಯಕ್ತಪಡಿಸಿಲ್ಲ ಎಂದು ತಿಳಿಸಿದರು.

    ಗುಜರಾತ್‍ನಲ್ಲಿ ಸ್ವಾಧೀನಪಡಿಸಿಕೊಳ್ಳಬೇಕಿದ್ದ ಸುಮಾರು 5,300 ಖಾಸಗಿ ಪ್ಲಾಟ್‍ಗಳಲ್ಲಿ ಈಗಾಗಲೇ 2,600 ಪ್ಲಾಟ್‍ಗಳನ್ನು ಸ್ವಾಧೀನಪಡಿಸಿಕೊಂಡಿದ್ದೇವೆ. ಗುಜರಾತ್‍ನ ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, 4,000 ದೊಡ್ಡ ಮರಗಳನ್ನು ಕತ್ತರಿಸುವ ಬದಲು ಸ್ಥಳಾಂತರಿಸಲಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

    ನಗರದ ಪ್ರಸ್ತುತ ರೈಲ್ವೆ ನಿಲ್ದಾಣಗಳಲ್ಲೇ ಅಹ್ಮದಾಬಾದ್‍ನ ಹೈ ಸ್ಪೀಡ್ ರೈಲ್ವೆ ನಿಲ್ದಾಣದ ಕಾಮಗಾರಿಗಳು ಈಗಾಗಲೇ ಪ್ರಾರಂಭವಾಗಿವೆ. ಈಗಿರುವ ರೈಲ್ವೇ ಮಾರ್ಗಗಳ ಮೇಲೆಯೇ ಬುಲೆಟ್ ರೈಲು ನಿಲ್ದಾಣವನ್ನು ನಿರ್ಮಿಸಲಾಗುವುದು. ಅಹ್ಮದಾಬಾದ್-ಮುಂಬೈ ನಡುವೆ ಬುಲೆಟ್ ರೈಲು ಒಟ್ಟು 508 ಕಿ.ಮೀ. ಸಂಚರಿಸಲಿದ್ದು, 12 ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.

    2022ಕ್ಕೆ ಸ್ವತಂತ್ರ ಸಿಕ್ಕಿ 75 ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಯೋಜನೆ ಲೋಕಾರ್ಪಣೆ ಮಾಡಲು ಭಾರತ ಪ್ರಯತ್ನ ನಡೆಸುತ್ತಿದೆ. ಭಾರತ ಪಡೆದುಕೊಳ್ಳುವ ಸಾಲಕ್ಕೆ ಜಪಾನ್ 50 ವರ್ಷಕ್ಕೆ 0.1% ಬಡ್ಡಿ ವಿಧಿಸಿದೆ. ಮೇಕ್ ಇನ್ ಇಂಡಿಯಾ ಆಶಯದ ಸಫಲತೆಗೆ ಈ ಯೋಜನೆ ಬಹಳ ಮುಖ್ಯವಾಗಿದ್ದು ತ್ವರಿತಗತಿಯಲ್ಲಿ ಯೋಜನೆಯನ್ನು ಮುಗಿಸುವುದರಲ್ಲಿ ಕೇಂದ್ರ ಸರ್ಕಾರ ಉತ್ಸುಕವಾಗಿದೆ. ಆದರೆ ರೈತರು ಈ ಯೋಜನೆ ವಿರುದ್ಧ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಕೆಲ ಸಮಯ ಅಡ್ಡಿಯಾಗಿತ್ತು.

    ಮುಂಬೈ ಅಹ್ಮದಾಬಾದ್ ಮಧ್ಯೆ 508.5 ಕಿ.ಮೀ ಅಂತರವಿದ್ದು ಗಂಟೆಗೆ 320 ಕಿ.ಮೀ ವೇಗದಲ್ಲಿ ರೈಲು ಸಂಚರಿಸಲಿದೆ. ಜಪಾನ್ ನೀಡುತ್ತಿರುವ 88 ಸಾವಿರ ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಬೇಕಾದರೆ ಪ್ರತಿ ದಿನ 100 ಟ್ರಿಪ್ ರೈಲು ಸಂಚರಿಸಬೇಕು ಅಥವಾ ದಿನಕ್ಕೆ 88 ಸಾವಿರದಿಂದ 1.18 ಲಕ್ಷ ಪ್ರಯಾಣಿಕರು ಸಂಚರಿಸಬೇಕು ಎಂದು ಈ ಹಿಂದೆ ಈ ಯೋಜನೆ ಬಗ್ಗೆ ಅಧ್ಯಯನ ನಡೆಸಿದ್ದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಹಮದಾಬಾದ್ ರೈಲ್ವೇ ಇಲಾಖೆಗೆ ವರದಿ ನೀಡಿತ್ತು. ಅಷ್ಟೇ ಅಲ್ಲದೇ 300 ಕಿ.ಮೀ ಪ್ರಯಾಣಕ್ಕೆ ಒಂದು ಟಿಕೆಟ್‍ಗೆ 1500 ರೂ ದರವನ್ನು ನಿಗದಿ ಮಾಡಬೇಕೆಂಬ ಅಂಶವನ್ನು ವರದಿಯಲ್ಲಿ ತಿಳಿಸಿತ್ತು.

  • ಚೀನಾದಲ್ಲಿ ಓಡಲಿದೆ ಗಂಟೆಗೆ 1 ಸಾವಿರ ಕಿ.ಮೀ ವೇಗದ ಫ್ಲೈಟ್- ರೈಲು!

    ಚೀನಾದಲ್ಲಿ ಓಡಲಿದೆ ಗಂಟೆಗೆ 1 ಸಾವಿರ ಕಿ.ಮೀ ವೇಗದ ಫ್ಲೈಟ್- ರೈಲು!

    ಬೀಜಿಂಗ್: ಗಂಟೆಗೆ 1 ಸಾವಿರ ಕಿ.ಮೀ. ವೇಗದಲ್ಲಿ ಚಲಿಸುವ ಫ್ಲೈಟ್-ಟ್ರೈನ್ ಮಾದರಿಯನ್ನು ಚೀನಾ ಅನಾವರಣಗೊಳಿಸಿದೆ.

    ಚೀನಾದಲ್ಲಿ ಈಗ ಗಂಟೆಗೆ 350 ಕಿ.ಮೀ ವೇಗದಲ್ಲಿ ಕ್ರಮಿಸುವ ಬುಲೆಟ್-ರೈಲು ಇದೆ. ಸುಧೀರ್ಘ ಸಂಶೋಧನೆಯ ನಂತರ ಮುಂದಿನ ಪೀಳಿಗೆಯ ಮ್ಯಾಗ್ನೆಟಿಕ್-ಲೆವಿಟೇಷನ್ ರೈಲುಗಳನ್ನ ತರಲು ಸಿದ್ಧತೆ ನಡೆಸುತ್ತಿದ್ದು, 2025ಕ್ಕೆ ಗಂಟೆಗೆ 1 ಸಾವಿರ ಕಿ.ಮೀ ವೇಗದಲ್ಲಿ ಸಂಚರಿಸುವ ಈ ರೈಲು ಹಳಿಗೆ ಇಳಿಯುವ ಸಾಧ್ಯತೆಯಿದೆ.

    ಈ ಹೊಸ ಮಾದರಿಯ ಫ್ಲೈಟ್-ಟ್ರೈನ್ ಮಾದರಿಯನ್ನು ಸಸಿಚ್ವಾನ್ ಪ್ರಾಂತ್ಯದ ಚೆಂಗ್ಡುವಿನಲ್ಲಿ ನಡೆದ 2018 ರ ರಾಷ್ಟ್ರೀಯ ಆವಿಷ್ಕಾರ ಮತ್ತು ಉದ್ಯಮಶೀಲತೆ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗಿದೆ.

    ಈ ಮಾದರಿಯನ್ನ ಚೈನಾ ಏರೋಸ್ಪೇಸ್ ಸೈನ್ಸ್ ಆಂಡ್ ಇಂಡಸ್ಟ್ರಿ ಕಾರ್ಪೊರೇಷನ್ ಲಿಮಿಟೆಡ್ (ಸಿಎಎಸ್‍ಐಸಿ) 2015 ರಿಂದಲೇ ಅಭಿವೃದ್ಧಿ ಪಡಿಸುತ್ತ ಬಂದಿದೆ. ಈ ರೈಲಿನ ವಿಶೇಷತೆ ಏನೆಂದರೆ, 29.2 ಮೀಟರ್ ಉದ್ದ ಮತ್ತು 3 ಮೀಟರ್ ಅಗಲವಿದ್ದು, ಬೆಳಕು ಮತ್ತು ಶಾಖ-ನಿರೋಧಕ ಕ್ಯಾಬಿನ್ ವ್ಯವಸ್ಥೆ ಇರುತ್ತದೆ.

    ವಾಕ್ಯೂಮ್ ರೈಲ್ವೇ ಎನ್ವಿರನ್‍ಮೆಂಟ್ ಮತ್ತು ಮ್ಯಾಗ್ನೆಟಿಕ್ ಲೆವಿಟೇಷನ್ ತಂತ್ರಜ್ಞಾನವನ್ನು ಬಳಸಿ ಹಳಿಯ 100 ಮಿಲಿಮೀಟರ್ ಎತ್ತರದಲ್ಲಿ ರೈಲು ಸಂಚರಿಸಲಿದೆ. ಈ ರೈಲು 1,000 ಕಿ.ಮೀ.ಗೆ ನಿಧಾನವಾಗಿ ತನ್ನ ವೇಗವನ್ನ ಹೆಚ್ಚಿಸುತ್ತದೆ ಮತ್ತು ಪ್ರಯಾಣಿಕರು ಆರಾಮವಾಗಿ ಮತ್ತು ಸುರಕ್ಷಿತವಾಗಿರುತ್ತಾರೆಂದು ಸಿಎಎಸ್‍ಐಸಿ ನ ಅಧಿಕಾರಿ ವಾಂಗ್ ಹೇಳಿದ್ದಾರೆ.

    ಅಮೆರಿಕದ ಸ್ಪೇಸ್ ಎಕ್ಸ್ ಕಂಪನಿ ಗಂಟೆಗೆ 1 ಸಾವಿರ ಕಿ.ಮಿ ವೇಗದಲ್ಲಿ ಚಲಿಸುವ ಚಲಿಸುವ ಹೈಪರ್ ಲೂಪ್ ಅಭಿವೃದ್ಧಿ ಪಡಿಸುತ್ತಿದೆ. ವಿಶ್ವದಲ್ಲಿ ಚೀನಾದಲ್ಲೇ ಅತಿ ದೊಡ್ಡ ಹೈ ಸ್ಪೀಡ್ ರೈಲಿನ ಜಾಲ ಇದ್ದು ಒಟ್ಟು, ದೇಶದ ಒಳಗಡೆಯೇ 22 ಸಾವಿರ ಕಿ.ಮೀ ಹಳಿಯನ್ನು ಹೊಂದಿದೆ. ಇದನ್ನು ಓದಿ: ಮುಂಬೈ ನಿಂದ ಪುಣೆಗೆ ಜಸ್ಟ್ 25 ನಿಮಿಷ ಸಾಕು- ಹೈಪರ್‍ಲೂಪ್ ಪಡೆಯುವಲ್ಲಿ ಭಾರತವೇ ಮೊದಲ ದೇಶವಾಗೋ ನಿರೀಕ್ಷೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv