Tag: ಬೃಂದಾವನ

  • ವರ್ಷ ಜೊತೆಗಿನ ಬ್ರೇಕಪ್ ಬೆನ್ನಲ್ಲೇ ಹೀರೋ ಆದ ವರುಣ್ ಆರಾಧ್ಯ

    ವರ್ಷ ಜೊತೆಗಿನ ಬ್ರೇಕಪ್ ಬೆನ್ನಲ್ಲೇ ಹೀರೋ ಆದ ವರುಣ್ ಆರಾಧ್ಯ

    ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರೋ ವರುಣ್ ಆರಾಧ್ಯ (Varun Aradhya) ಇದೀಗ ಸೀರಿಯಲ್ ಲೋಕಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದಾರೆ. ವರ್ಷ ಕಾವೇರಿ (Varsha Kaveri) ಜೊತೆಗಿನ ಬ್ರೇಕಪ್ ಬೆನ್ನಲ್ಲೇ ‘ಬೃಂದಾವನ’ ಸೀರಿಯಲ್ ಹೀರೋ ಆಗಿ ಬಣ್ಣದ ಜಗತ್ತಿಗೆ ಪರಿಚಯವಾಗುತ್ತಿದ್ದಾರೆ. ಇದನ್ನೂ ಓದಿ:ಬಿಗ್‌ಬಾಸ್ ಮನೆಯಿಂದ ಇಶಾನಿ ಔಟ್- ‌ಇಂದು ಇನ್ನೊಬ್ಬರಿಗೆ ಕಾದಿದೆ ಶಾಕ್

    ಕೆಲ ದಿನಗಳ ಹಿಂದಷ್ಟೇ ಕಲರ್ಸ್ ಕನ್ನಡ ವಾಹಿನಿಯ ‘ಬೃಂದಾವನ’ (Brindavana) ಸೀರಿಯಲ್ ಅದ್ದೂರಿಯಾಗಿ ಲಾಂಚ್ ಆಗಿತ್ತು. ಸಿಂಗರ್ ಕಮ್ ಬಿಗ್ ಬಾಸ್ ಸ್ಪರ್ಧಿ ವಿಶ್ವನಾಥ್ ಹಾವೇರಿ ಹೀರೋ ಆಗಿ ಪರಿಚಯವಾಗಿದ್ದರು. ಇದೀಗ ಅದೇ ಪಾತ್ರಕ್ಕೆ ವರುಣ್ ಆರಾಧ್ಯ ಎಂಟ್ರಿ ಕೊಟ್ಟಿದ್ದಾರೆ. ವಿಶ್ವನಾಥ್ ಆಕಾಶ್ ಪಾತ್ರದಿಂದ ಹೊರನಡೆದಿದ್ದಾರೆ.

    ಟಿಕ್ ಟಾಕ್ ಆ ನಂತರ ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ಮನೆ ಮಾತಾಗಿದ್ದ ವರುಣ್ ಅವರು ಕಳೆದ ಕೆಲ ತಿಂಗಳುಗಳಿಂದ ವರ್ಷ ಕಾವೇರಿ ಜೊತೆಗಿನ ಲವ್ ಬ್ರೇಕಪ್ ವಿಷ್ಯವಾಗಿ ಟಾಕ್‌ನಲ್ಲಿದ್ರು. ಬೇಕಂತಲೇ ಸುದ್ದಿ ಮಾಡುತ್ತಾ ಬಿಗ್ ಬಾಸ್‌ಗೆ ಹೋಗೋಕೆ ಹೀಗೆ ಮಾಡ್ತಿದ್ದಾರೆ ಎನ್ನಲಾಗಿತ್ತು. ಆದರೆ ಬಿಗ್ ಬಾಸ್‌ನಲ್ಲಿ ಇಬ್ಬರಲ್ಲಿ ಒಬ್ಬರು ಕೂಡ ಎಂಟ್ರಿ ಕೊಟ್ಟಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬ್ರೇಕಪ್ ಬಗ್ಗೆ ಇಬ್ಬರೂ ಸ್ಪಷ್ಟನೆ ನೀಡಿ ಸುಮ್ಮನಾಗಿ ಬಿಟ್ಟಿದ್ದರು.

    ‘ಬೃಂದಾವನ’ ಸೀರಿಯಲ್ 25 ಎಪಿಸೋಡ್ ಪೂರೈಸಿದ ಬೆನ್ನಲ್ಲೇ ಹೀರೋ ಜೇಂಜ್ ಆಗಿದ್ದಾರೆ. ಟಿಕ್ ಟಾಕ್ ಸ್ಟಾರ್ ಆಗಿ ಮನಗೆದ್ದಿದ್ದ ವರುಣ್, ಈಗ ನಟನಾಗಿ ಕೂಡ ಸೈ ಎನಿಸಿಕೊಳ್ಳುತ್ತಾರಾ ಕಾದುನೋಡಬೇಕಿದೆ.

  • ಜಯತೀರ್ಥರ ಆರಾಧನೆಗೆ ಅವಕಾಶ – ಉತ್ತರಾಧಿ ಮಠದವರಿಂದ ಮೌನ ಪ್ರತಿಭಟನೆ

    ಜಯತೀರ್ಥರ ಆರಾಧನೆಗೆ ಅವಕಾಶ – ಉತ್ತರಾಧಿ ಮಠದವರಿಂದ ಮೌನ ಪ್ರತಿಭಟನೆ

    ಕೊಪ್ಪಳ: ನವಬೃಂದಾವನ (Vrindavan) ಗಡ್ಡೆಯಲ್ಲಿ ರಾಯರ ಮಠದವರಿಗೆ ಜಯತೀರ್ಥರ ಆರಾಧನೆಗೆ ಕೋರ್ಟ್ (Court) ಆದೇಶ ನೀಡಿದ್ದಕ್ಕೆ ಉತ್ತರಾಧಿ ಮಠದವರು ಇಂದು ಮೌನ ಪ್ರತಿಭಟನೆ ನಡೆಸಿದ್ದಾರೆ.

    ಗಂಗಾವತಿಯ ಆನೆಗೊಂದಿ ಸಮೀಪದ ನವಬೃಂದಾವನ ಗಡ್ಡೆಯ ಒಂದೇ ಬೃಂದಾವನಕ್ಕೆ ರಘುವರ್ಯ ತೀರ್ಥರ ಬೃಂದಾವನ ಹಾಗೂ ಜಯತೀರ್ಥರ ಬೃಂದಾವನ ಎಂದು ರಾಯರ ಮಠ ಹಾಗೂ ಉತ್ತರಾಧಿ ಮಠದವರ ನಡುವೆ ಗೊಂದಲ ಉಂಟಾಗಿತ್ತು. ಇದನ್ನೂ ಬಗೆಹರಿಸಲು ಎರಡು ಮಠದವರು ಕೋರ್ಟ್ ಮೊರೆ ಹೋಗಿದ್ದರು. ಪರಿಶೀಲನೆ ನಡೆಸಿ ನ್ಯಾಯಾಲಯವು ಜು. 6 ರಿಂದ 8ರ ವರೆಗೆ ಮೂರು ದಿನಗಳ ಕಾಲ ಉತ್ತರಾಧಿ ಮಠದವರು ರಘುವರ್ಯ ತೀರ್ಥರ ಮಹಿಮೋತ್ಸವವನ್ನು ಆಚರಣೆ ಮಾಡಬೇಕು. ರಾಯರ ಮಠದವರು ಜು.08 ರಿಂದ 10ರ ವರೆಗೆ ಮೂರು ದಿನಗಳ ಕಾಲ ಜಯತೀರ್ಥರ ಆರಾಧನೆ ಮಹೋತ್ಸವವನ್ನು ನಡೆಸಬೇಕು ಎಂದು ಆದೇಶ ಹೊರಡಿಸಿದೆ. ಇದನ್ನೂ ಓದಿ: ದ.ಕನ್ನಡ, ಉಡುಪಿ, ಉತ್ತರ ಕನ್ನಡದ 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂತ್ರಾಲಯದ ರಾಯರ ಮಠದವರಿಗೆ (Mantralaya) ಜಯತೀರ್ಥರ ಆರಾಧನೆಯನ್ನು ಮಾಡಲು ಅವಕಾಶ ನೀಡಿರುವುದು ಉತ್ತರಾಧಿ ಮಠದ ಭಕ್ತರು ಬೇಸರಿಸಿಕೊಂಡಿದ್ದಾರೆ. ನ್ಯಾಯಕ್ಕಾಗಿ ಒತ್ತಾಯಿಸಿ, ನ್ಯಾಯಕ್ಕಾಗಿ ಪ್ರಾರ್ಥನೆ ಎಂಬ ಪೋಸ್ಟರ್‌ಗಳನ್ನು ಹಿಡಿದು ಮೌನ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: ಕಾಡಾನೆಯೊಂದಿಗೆ ಸೆಲ್ಫಿ – 20 ಸಾವಿರ ರೂ. ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ತಿಂಗಳು ಬೃಂದಾವನದಲ್ಲಿ ಪ್ರತ್ಯಕ್ಷವಾಗುತ್ತಿದ್ದ ಚಿರತೆ ಬೋನಿಗೆ

    2 ತಿಂಗಳು ಬೃಂದಾವನದಲ್ಲಿ ಪ್ರತ್ಯಕ್ಷವಾಗುತ್ತಿದ್ದ ಚಿರತೆ ಬೋನಿಗೆ

    ಮಂಡ್ಯ: ಕಳೆದ 2 ತಿಂಗಳಿನಿಂದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್‌ಎಸ್ ಡ್ಯಾಂ (KRS Dam) ಹಾಗೂ ಬೃಂದಾವನದ (Brindavana Garden) ಸುತ್ತಮುತ್ತ ಪದೇ ಪದೇ ಪ್ರತ್ಯಕ್ಷವಾಗುವ ಮೂಲಕ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ (Leopard) ಕೊನೆಗೂ ಬೋನಿಗೆ ಬಿದ್ದಿದೆ. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

    ಕೆಆರ್‌ಎಸ್ ಡ್ಯಾಂ ಹಾಗೂ ಬೃಂದಾವನ ವ್ಯಾಪ್ತಿಯಲ್ಲಿ ಕಳೆದ 2 ತಿಂಗಳಿನಿಂದ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಇಲ್ಲಿನ ಜನರು, ಅಧಿಕಾರಿಗಳು ಹಾಗೂ ಪ್ರವಾಸಿಗರು ಆತಂಕಕ್ಕೆ ಒಳಾಗಿದ್ದರು. ಚಿರತೆಯಿಂದ ಯಾವುದೇ ತೊಂದರೆಯಾಗಬಾರದೆಂಬ ಕಾರಣಕ್ಕೆ ಕಾವೇರಿ ನೀರಾವರಿ ನಿಗಮ ಬೃಂದಾವನ ಗಾರ್ಡನ್‌ಗೆ ಪ್ರವಾಸಿಗರನ್ನು ನಿರ್ಬಂಧಿಸಿತ್ತು. ಇದಲ್ಲದೇ ಕೆಆರ್‌ಎಸ್ ಗ್ರಾಮದ ಜನರು ಜಮೀನಿಗೆ ತೆರಳಲು ಭಯ ಪಡುತ್ತಿದ್ದರು. ಇದನ್ನೂ ಓದಿ: ಟ್ರಕ್‍ನಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಡ್ಯಾಂ ಹಾಗೂ ಬೃಂದಾವನ ವ್ಯಾಪ್ತಿಯಲ್ಲಿ 4 ಬೋನ್ ಇರಿಸಿ, ಬೋನ್‌ನಲ್ಲಿ ನಾಯಿಯನ್ನು ಕಟ್ಟಿ ಹಾಕಿದ್ದರು. ಕಳೆದ ರಾತ್ರಿ ಬೋನ್‌ನಲ್ಲಿ ಇದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿದೆ.

    ಚಿರತೆ ಬೋನಿಗೆ ಬಿದ್ದಿರುವ ಹಿನ್ನೆಲೆ ಜನರು, ಅಧಿಕಾರಿಗಳು ಹಾಗೂ ಪ್ರವಾಸಿಗರು ನಿಟ್ಟುಸಿರುವ ಬಿಡುವಂತಾಗಿದೆ. ಆದರೆ ಈ ಭಾಗದಲ್ಲಿ ಇನ್ನೊಂದು ಚಿರತೆ ಇರುವ ಅನುಮಾನವನ್ನು ಸ್ಥಳೀಯರು ವ್ಯಕ್ತಡಪಸಿದ್ದು, ಬೋನ್ ಅನ್ನು ಮತ್ತೆ ಇಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಿನಿ ಬಸ್, ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ – 12 ವಿದ್ಯಾರ್ಥಿಗಳಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಚಿರತೆ ಕಣ್ಣಾಮುಚ್ಚಾಲೆ, 15 ದಿನಗಳಿಂದ ಬೃಂದಾವನ ಕ್ಲೋಸ್ – ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

    ಚಿರತೆ ಕಣ್ಣಾಮುಚ್ಚಾಲೆ, 15 ದಿನಗಳಿಂದ ಬೃಂದಾವನ ಕ್ಲೋಸ್ – ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

    ಮಂಡ್ಯ: ಅದು ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಪ್ರವಾಸಿ ಸ್ಥಳ. ಆ ಸ್ಥಳದಲ್ಲಿ ಇಚೆಗೆ ಚಿರತೆ (Leopard) ಕಾಣಿಸಿಕೊಂಡಿದ್ದು, 15 ದಿನಗಳಿಂದ ಬಾಗಿಲು ಮುಚ್ಚಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೇಜವಾಬ್ದಾರಿತನ ಪ್ರದರ್ಶನ ಮಾಡುತ್ತಾ ಇದ್ದಾರೆ. ಇತ್ತ ಪ್ರವಾಸಿ ಸ್ಥಳವನ್ನು ಜೀವನೋಪಾಯಕ್ಕಾಗಿ ನಂಬಿಕೊಂಡಿದ್ದ ವ್ಯಾಪಾರಸ್ಥರು ಕಣ್ಣೀರು ಹಾಕುತ್ತ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

    ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಈ ಸಂಘರ್ಷದಿಂದ ಕೆಲ ಕಡೆ ಕಾಡು ಪ್ರಾಣಿಗಳಿಗೆ ತೊಂದರೆಯಾದರೆ, ಇನ್ನೂ ಕೆಲವೆಡೆ ಮನುಷ್ಯರಿಗೆ ತೊಂದರೆಯಾಗುತ್ತಿದೆ. ಇಂತಹದೇ ಪರಿಸ್ಥಿತಿ ನಿರ್ಮಾಣವಾಗಿರುವುದು ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್‌ನ (KRS) ಬೃಂದಾವನದಲ್ಲಿ (Brindavan Garden). ಕಳೆದ 1 ತಿಂಗಳಿನಿಂದ ಕೆಆರ್‌ಎಸ್ ಹಾಗೂ ಬೃಂದಾವನದಲ್ಲಿ ಚಿರತೆ ಕಣ್ಣಾಮುಚ್ಚಾಲೆಯಾಡುತ್ತಿದೆ. ಇದರಿಂದ ಕಳೆದ 15 ದಿನಗಳಿಂದ ಸುಧೀರ್ಘವಾಗಿ ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ.

    ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಕಾವೇರಿ ನೀರಾವರಿ ನಿಗಮ ಬೃಂದಾವನವನ್ನು ಬಂದ್ ಮಾಡಿದೆ. ಇತ್ತ ನಾವು ಚಿರತೆಯನ್ನು ಹಿಡಿಯುತ್ತೇವೆ ಎಂದು ಕಾಟಚಾರಕ್ಕೆ 8 ಬೋನ್‌ಗಳನ್ನು ಅರಣ್ಯ ಇಲಾಖೆ ಇರಿಸಿದೆ. ಇದಲ್ಲದೆ ಕೆಲ ಟ್ರ‍್ಯಾಪ್ ಕ್ಯಾಮೆರಾವನ್ನು ಸಹ ಅಳವಡಿಸಿದ್ದಾರೆ. ಆದರೆ ಇದರಿಂದ ಯಾವುದೇ ಪ್ರಯೋಜವಾಗುತ್ತಿಲ್ಲ. ಕೂಂಬಿಂಗ್ ಮಾಡಿ ಚಿರತೆ ಕಾರ್ಯಾಚರಣೆ ಮಾಡಬೇಕಾದ ಅರಣ್ಯ ಇಲಾಖೆ ಸಿಬ್ಬಂದಿ ಕಾಟಾಚಾರಕ್ಕೆ ಆಗೊಮ್ಮೆ ಈಗೊಮ್ಮೆ ಬಂದು ಹೋಗುತ್ತಾ ಇದ್ದಾರೆ.

    ಒಂದು ಕಡೆ ಚಿರತೆಯ ಆತಂಕದಲ್ಲಿ ಬೃಂದಾವನವನ್ನು 15 ದಿನಗಳಿಂದ ಬಂದ್ ಮಾಡಲಾಗಿದ್ದು, ಇತ್ತ ಅರಣ್ಯ ಇಲಾಖೆಯ ಅಧಿಕಾರಿಗಳು ನಾವು ಚಿರತೆ ಹಿಡಿಯುತ್ತಿದ್ದೇವೆ, ಆದರೆ ಚಿರತೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಪ್ರತಿ ದಿನ ಸಿಸಿ ಕ್ಯಾಮೆರಾದಲ್ಲಿ ಚಿರತೆಯ ಚಲನವಲನಗಳು ಸೆರೆಯಾಗುತ್ತಿದೆ. ನಿನ್ನೆಯೂ ಸಹ ಉತ್ತರ ಬೃಂದಾವನದ ವ್ಯಾಪ್ತಿಯಲ್ಲಿ ಮುಳ್ಳು ಹಂದಿಯ ಜೊತೆ ಚಿರತೆ ಸೆಣೆಸಾಡುವ ದೃಶ್ಯ ಕಾಣಿಸಿಕೊಂಡಿದೆ. ಆದರೆ ಕಾಟಾಚಾರದ ಅಧಿಕಾರಿಗಳಿಗೆ ಮಾತ್ರ ಚಿರತೆ ಕಾಣಿಸುತ್ತಿಲ್ಲ. ದೊಡ್ಡದಾದ 8 ಬೋನ್ ಇಟ್ಟಿದ್ದೇವೆ ಎನ್ನುತ್ತಿದ್ದಾರೆ. ಇದನ್ನೂ ಓದಿ: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್- ಪೊಲೀಸರ ಮುಂದೆ ನಾಲ್ವರು ತಪ್ಪೊಪ್ಪಿಗೆ

    ಬೋನ್ ಇಟ್ಟರೆ ಮಾತ್ರ ಚಿರತೆ ಬೀಳುವುದಿಲ್ಲ. ಸರಿಯಾದ ರೀತಿಯ ಕೂಂಬಿಂಗ್ ಮಾಡಿದರೆ ಮಾತ್ರ ಚಿರತೆ ಸೆರೆಯಾಗುವುದು. ಬೋನ್ ಇಟ್ಟು ಕೂಂಬಿಂಗ್‌ಗೆ ಇವರು ಬಂದಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಇಷ್ಟಾದರೂ ಸಹ ಸಚಿವರು ಆಗಲಿ, ಜಿಲ್ಲಾಧಿಕಾರಿಯಾಗಲಿ ಇತ್ತ ತಲೆಹಾಕಿಲ್ಲ.

    ಕಳೆದ 15 ದಿನಗಳಿಂದ ಬೃಂದಾವನ ಬಂದ್ ಆಗಿರುವ ಕಾರಣ ಇದನ್ನೇ ಜೀವನ ನಿರ್ವಹಣೆಗೆ ಆಧಾರವನ್ನಾಗಿ ಮಾಡಿಕೊಂಡಿರುವ ವ್ಯಾಪಾರಸ್ಥರ ಸ್ಥಿತಿ ಚಿಂತಾಜನಕವಾಗಿದೆ. ಪ್ರವಾಸಿಗರನ್ನೇ ನಂಬಿಕೊಂಡಿದ್ದ ವ್ಯಾಪಾರಸ್ಥರು ಇದೀಗ ವ್ಯಾಪಾರವಿಲ್ಲದೇ ಕುಟುಂಬ ನಿರ್ವಹಣೆಗೂ ಕಷ್ಟಪಡುವ ಸ್ಥಿತಿಗೆ ಬಂದಿದ್ದಾರೆ. ಇವರು ಚಿರತೆ ಇದೆ ಅಂತಾರೆ ಆದರೆ ಚಿರತೆ ಹಿಡಿಯೋಕೆ ಮಾತ್ರ ಬರ್ತಾ ಇಲ್ಲ. ನಮ್ಮ ಕಷ್ಟ ಕೇಳೋರು ಯಾರು ಸ್ವಾಮಿ ಎಂದು ವ್ಯಾಪಾರಸ್ಥರು ಕಣ್ಣೀರು ಹಾಕುತ್ತಿದ್ದಾರೆ.

    ಒಟ್ಟಾರೆ ಬೃಂದಾವನಲ್ಲಿ ಚಿರತೆಯ ಕಣ್ಣಾಮುಚ್ಚಾಲೆಯಿಂದ ಪ್ರವಾಸಿಗರಿಗೆ ನೀರಾಸೆಯಾದರೆ, ಇದನ್ನೇ ನಂಬಿಕೊಂಡಿರುವ ವ್ಯಾಪಾರಸ್ಥರು ಕಷ್ಟಪಡುವಂತಾಗಿದೆ. ಈಗಲಾದರೂ ಅರಣ್ಯ ಇಲಾಖೆಯ ಅಧಿಕಾರಿಗಳು ತನ್ನ ಬೇಜವಾಬ್ದಾರಿತನ ಬಿಟ್ಟು ಚಿರತೆ ಸೆರೆಗೆ ಸರಿಯಾಗಿ ಕಾರ್ಯಾಚರಣೆ ಮಾಡಬೇಕಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳು ರಿಲೀಸ್

    Live Tv
    [brid partner=56869869 player=32851 video=960834 autoplay=true]

  • ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ – ಬೋನ್‍ನಲ್ಲಿ ನಾಯಿಯನ್ನು ಕಟ್ಟಿ ಹಾಕಿ ಕಾವಲು

    ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ – ಬೋನ್‍ನಲ್ಲಿ ನಾಯಿಯನ್ನು ಕಟ್ಟಿ ಹಾಕಿ ಕಾವಲು

    ಮಂಡ್ಯ: ಕೆಆರ್‌ಎಸ್‌ (KRS)  ಡ್ಯಾಂ (Dam) ಬಳಿ ಪದೇ ಪದೇ ಚಿರತೆ (Leopard) ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆ ವಿಶ್ವ ಪ್ರಸಿದ್ಧ ಬೃಂದಾವನಕ್ಕೆ (Brindavana) ಪ್ರವಾಸಿಗರ ನಿರ್ಬಂಧ ಮುಂದುವರಿದಿದೆ.

     

    ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಲ್ಲಿನ ಸಿಬ್ಬಂದಿ ಡ್ಯಾಂನ ಮೆಟ್ಟಿಲು ಬಳಿ ಗಿಡದ ಗಂಟೆಗಳನ್ನು ಕೀಳುವ ಸಂದರ್ಭದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಸಿಬ್ಬಂದಿ ಅಲ್ಲಿಂದ ಬಂದು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ನಿನ್ನೆ ಒಂದು ದಿನ ತಾತ್ಕಾಲಿಕವಾಗಿ ಚಿರತೆಯ ಭಯದಿಂದ ಪ್ರವಾಸಿಗರಿಗೆ ಬೃಂದಾವನಕ್ಕೆ ನಿರ್ಬಂಧ ಏರಿದ್ರು. ಆದ್ರೆ ಕಳೆದ ರಾತ್ರಿಯೂ ಅದೇ ಚಿರತೆ ಡ್ಯಾಂನ ಪಕ್ಕದಲ್ಲಿ ಓಡಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೀಗಾಗಿ ಇಂದು ಸಹ ಪ್ರವಾಸಿಗರಿಗೆ ನಿರ್ಬಂಧ ಏರಲಾಗಿದೆ. ಭಾನುವಾರ ಪ್ರವಾಸಿಗರಿಂದ ತುಂಬಿ-ತುಳಕಬೇಕಿದ್ದ ಬೃಂದಾವನ, ಪ್ರವಾಸಿಗರೇ ಇಲ್ಲದೇ ಬಣಗುಡುತ್ತಿದೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ಸೋಮಣ್ಣ

    ಒಂದು ಕಡೆ ಪ್ರವಾಸಿಗರು ಇಲ್ಲದೇ ಬೃಂದಾವನ ಬಣಗುಡುತ್ತಿದ್ರೆ, ಅತ್ತ ಆಪರೇಷನ್ ಲಿಪರ್ಡ್‍ಗೆ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಮುಂದಾಗಿದೆ. ನಿನ್ನೆ ಕಾಣಿಸಿಕೊಂಡಿರುವ ಸ್ಥಳದಲ್ಲೇ ಬೋನ್ ಇರಿಸಿ ಬೋನ್‍ನಲ್ಲಿ ನಾಯಿಯನ್ನು (Dog) ಕಟ್ಟಿ ಹಾಕಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ಈ ಭಾಗದಲ್ಲಿ ಇದೇ ಮೊದಲು ಅಲ್ಲ. ಈ ಹಿಂದೆ ಎರಡು ಬಾರಿ ಚಿರತೆ ಕಾಣಿಸಿಕೊಂಡಿದ್ದು, ಒಂದು ಬಾರಿ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವ ಕಾರಣ ಮುಂದಿನ ಆದೇಶದ ವರೆಗೆ ಪ್ರವಾಸಿಗರ ಹಿತದೃಷ್ಟಿಯಿಂದ ಬೃಂದಾವನಕ್ಕೆ ನಿಷೇಧ ಏರಲಾಗಿದೆ. ಇದನ್ನೂ ಓದಿ: RSSನವರು ಹೆಚ್ಚು ಮಕ್ಕಳನ್ನು ಹುಟ್ಟಿಸಲಿ ನಾವು ಹುಟ್ಟಿಸಲ್ಲ: ಅಸಾದುದ್ದೀನ್ ಓವೈಸಿ

    Live Tv
    [brid partner=56869869 player=32851 video=960834 autoplay=true]

  • ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರು: ಭಕ್ತರಿಂದ ಪರ-ವಿರೋಧ ವ್ಯಕ್ತ

    ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರು: ಭಕ್ತರಿಂದ ಪರ-ವಿರೋಧ ವ್ಯಕ್ತ

    ಕೊಪ್ಪಳ: ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಸಮೀಪದ ನವಬೃಂದಾವನ ಗಡ್ಡೆಯಲ್ಲಿ ಮೂಲ ಬೃಂದಾವನಕ್ಕೆ ಸಂಬಂಧಪಟ್ಟಂತೆ ಎರಡು ಮಠಗಳ ನಡುವೆ ಮತ್ತೊಂದು ವಿವಾದ ಉಂಟಾಗಿದೆ. ಈ ಬಗ್ಗೆ ಭಕ್ತರಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ.

    ವಿಜಯನಗರ ಕಾಲದ ಪೂರ್ವ ಇತಿಹಾಸವನ್ನು ಹೊಂದಿರುವ ನವಬೃಂದಾವನ ಗಡ್ಡೆಯಲ್ಲಿ ಶ್ರೇಷ್ಠ ಯತಿಗಳ ಬೃಂದಾವನಗಳನ್ನು ನಿರ್ಮಾಣ ಮಾಡಲಾಗಿದೆ. ಹಂತ-ಹಂತವಾಗಿ ಕಾಲಘಟ್ಟಗಳಿಗೆ ಅನುಗುಣವಾಗಿ ಆಗಮಿಸಿದ ಒಟ್ಟು 9 ಯತಿಗಳ ಬೃಂದಾವನಗಳನ್ನು ತುಂಗಭದ್ರಾ ನಡುಗಡ್ಡೆಯಲ್ಲಿ ನಿರ್ಮಾಣಗೊಂಡಿರುವುದನ್ನು ಇಲ್ಲಿ ಕಾಣಬಹುದು. ಇದನ್ನೂ ಓದಿ: ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

    ಇಂತಹ ಇತಿಹಾಸ ಇರುವ ನವಬೃಂದಾವನ ಗಡ್ಡೆಯ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಸುಮಾರು ವರ್ಷಗಳಿಂದ ರಾಯರಮಠ ಮತ್ತು ಉತ್ತರಾಧಿಮಠಗಳ ನಡುವೆ ಗಲಾಟೆ ನಡೆಯುತ್ತಿದೆ. ಈ ವಿವಾದ ಇನ್ನೂ ಇತ್ಯರ್ಥವನ್ನು ಪಡೆದುಕೊಂಡಿಲ್ಲ. ಇದರ ನಡುವೆಯೇ ಈಗ ಮತ್ತೊಂದು ವಿವಾದ ಎರಡು ಮಠಗಳ ನಡುವೆ ಇದ್ದು, ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ.

    ನವಬೃಂದಾವನ ಗಡ್ಡೆಯಲ್ಲಿ ಇರುವ ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರುಗಳನ್ನು ಕರೆಯುವ ಮೂಲಕ ವಿವಾದ ಹುಟ್ಟು ಹಾಕಲಾಗಿದೆ. ಉತ್ತರಾಧಿ ಮಠದವರು ರಘುವರ್ಯ ತೀರ್ಥರ ಬೃಂದಾವನ ಎಂದು ಕರೆದರೆ, ಅದೇ ಬೃಂದಾವನಕ್ಕೆ ರಾಯರ ಮಠದವರು ಜಯತೀರ್ಥರ ಬೃಂದಾವನ ಎಂದು ಕರೆಯುತ್ತಿದ್ದಾರೆ. ಇದು ಭಕ್ತರಲ್ಲಿ ಸಾಕಷ್ಟು ಗೊಂದಲವನ್ನು ಉಂಟುಮಾಡಿದೆ.

    ಪೂಜೆಯಲ್ಲಿ ಗೊಂದಲ
    ನವಬೃಂದಾವನ ಗಡ್ಡೆಯಲ್ಲಿ ಇರುವ 9 ಯತಿಗಳ ಬೃಂದಾವನಗಳಿಗೂ ಅವರ ಬೃಂದಾವನ ಸ್ಥಾನಗೊಂಡಿರುವ ಸಮಯ, ನಕ್ಷತ್ರಕ್ಕೆ ಅನುಗುಣವಾಗಿ ಆರಾಧನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದೇ ರೀತಿ ರಘುವರ್ಯತೀರ್ಥರ, ಜಯತೀರ್ಥರ ಆರಾಧನೆ ಮಹೋತ್ಸವವನ್ನು ನಡೆಸಲಾಗುತ್ತಿದೆ. ಕಳೆದ ಜೂನ್ 16ರಿಂದ ಮೂರು ದಿನಗಳ ಕಾಲ ಉತ್ತರಾಧಿ ಮಠದ ನೇತೃತ್ವದಲ್ಲಿ ರಘುವರ್ಯ ತೀರ್ಥರ ಆರಾಧನೆ ಮಹೋತ್ಸವವನ್ನು ಹಮ್ಮಿಕೊಂಡು ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

    ಆರಾಧನೆ ಮಹೋತ್ಸವ ಮುಗಿದ ಮಾರನೇ ದಿನ ಅಂದರೆ ಜೂನ್ 19 ರಂದು ಅದೇ ಬೃಂದಾವನಕ್ಕೆ ರಾಯರ ಮಠದವರು ಜಯತೀರ್ಥರ ಅಷ್ಟೋತ್ತರ ಪಾರಾಯಣ ಎಂದು ವಿಶೇಷ ಧಾರ್ಮಿಕ ಪೂಜೆಗಳನ್ನು ಸಲ್ಲಿಸಿ, ಸಾಮೂಹಿಕ ಭಜನೆ ಕಾರ್ಯಕ್ರಮಗಳನ್ನು ನಡೆಸಿದರು. ಅಷ್ಟೇ ಅಲ್ಲದೆ ಮುಂದಿನ ತಿಂಗಳು ರಾಯರ ಮಠದಿಂದ ಜಯತೀರ್ಥರ ಆರಾಧನೆ ಮಹೋತ್ಸವವನ್ನು ನವ ಬೃಂದಾವನ ಗಡ್ಡೆಯಲ್ಲಿ ನಡೆಸಲು ಅದ್ದೂರಿ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರಲ್ಲಿ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಎರಡು ಮಠಗಳ ಭಕ್ತರ ನಡುವೆ ಗೊಂದಲಗಳು ಉಂಟಾಗುತ್ತಿವೆ.

    ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
    ಮೂಲ ಬೃಂದಾವನಕ್ಕೆ ಸಂಬಂಧಪಟ್ಟಂತೆ ಎರಡು ಮಠಗಳ ಭಕ್ತರು ಫೇಸ್‍ಬುಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು ನಡೆಸುತ್ತಿದ್ದಾರೆ. ರಾಯರಮಠದವರು ಜಯತೀರ್ಥರ ಮೂಲ ಬೃಂದಾವನ ಆನೆಗೊಂದಿಯಲ್ಲಿ ಇದೆ ಎಂದು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಕೆಲವರು ಪರವಾಗಿ ಕಾಮೆಂಟ್ ಮಾಡಿದರೆ ಇನ್ನೂ ಕೆಲವರು ಜಯತೀರ್ಥರ ಬೃಂದಾನವ ಇರುವುದು ಆನೆಗೊಂದಿಯಲ್ಲಿ ಅಲ್ಲ, ಕಲಬುರಗಿಯ ಮಳಖೇಡದಲ್ಲಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧಗಳು ಚರ್ಚೆಯಾಗುತ್ತಿದ್ದು, ಎರಡು ಮಠಗಳ ಭಕ್ತರು ಮುಸುಕಿನ ಗುದ್ದಾಟವನ್ನು ನಡೆಸಿದ್ದಾರೆ.

    ರಾಯರ ಯತಿಗಳ ಬೃಂದಾನಗಳಿವೆ
    ಇತಿಹಾಸವನ್ನು ಹೊಂದಿರುವ ನವಬೃಂದಾವನ ಗಡ್ಡೆಯಲ್ಲಿ ವಿಜಯನಗರ ಕಾಲದ ಕೃಷ್ಣದೇವರಾಯ ಅರಸರ ಗುರುಗಳು ಆಗಿರುವ ವ್ಯಾಸರಾಜ ತೀರ್ಥರು ಬೃಂದಾವನ ಹಾಗೂ ಕಾಲಘಟ್ಟಗಳಿಗೆ ಅನುಗುಣವಾಗಿ ಆಗಮಿಸಿದ ಪದ್ಮನಾಭ ತೀರ್ಥರು, ಕವೀಂದ್ರ ತೀರ್ಥರು, ವಾಗೀಶ್ ತೀರ್ಥರು, ಶ್ರೀನಿವಾಸ್ ತೀರ್ಥರು, ರಾಮ ತೀರ್ಥರು, ಸುಧೀಂದ್ರ ತೀರ್ಥರು ಮತ್ತು ಗೋವಿಂದ್ ಒಡೆಯರ ಮೂಲ ಬೃಂದಾವನಗಳನ್ನು ಇಲ್ಲಿ ಕಾಣಬಹುದು. ಆದರೆ ಒಂದೇ ಬೃಂದಾವನಕ್ಕೆ ರಘುವರ್ಯ ತೀರ್ಥರು ಮತ್ತು ಜಯತೀರ್ಥರ ಬೃಂದಾವನ ಇರುವುದು ಈಗ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇನ್ಸ್‌ಪೆಕ್ಟರ್

    ಮಳಖೇಡದಲ್ಲಿ ಎಂದು ವಾದ
    ರಾಯರ ಮಠದವರು ಜಯತೀರ್ಥರು ಬೃಂದಾವನ ಆನೆಗೊಂದಿಯಲ್ಲಿ ನವಬೃಂದಾವನ ಗಡ್ಡೆಯಲ್ಲಿ ಇದೆ ಎಂದು ವಾದ ಮಾಡುತ್ತಿದ್ದಾರೆ. ಅದನ್ನು ಒಪ್ಪದ ಉತ್ತರಾಧಿಮಠದವರು ಜಯತೀರ್ಥರ ಮೂಲ ಬೃಂದಾವನ ಕಲಬುರಗಿಯ ಮಳಖೇಡದಲ್ಲಿದೆ. ಅಲ್ಲಿನ ಭಕ್ತರು ಸುಮಾರು ವರ್ಷಗಳಿಂದ ಜಯತೀರ್ಥರ ಬೃಂದಾವನಕ್ಕೆ ಪೂಜೆಯನ್ನು ಸಲ್ಲಿಸಿ ಬರುತ್ತಿದ್ದಾರೆ.

    ಆನೆಗೊಂದಿಯ ನವಬೃಂದಾವನ ಗಡ್ಡೆಯಲ್ಲಿ ಇರುವುದು ರಘುವರ್ಯ ತೀರ್ಥರ ಬೃಂದಾವನ ಎನ್ನುವುದು ಉತ್ತರಾಧಿ ಮಠದವರ ವಾದವಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಕಲಬುರಗಿ ಹಾಗೂ ಮಳಖೇಡನಲ್ಲಿ ಎರಡು ಮಠಗಳಿಂದ ಪರ-ವಿರೋಧವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

    Live Tv

  • ಬೃಂದಾವನದಲ್ಲಿ ಅನುಮತಿ ಇಲ್ಲದೇ ರಾತ್ರಿ ಶೂಟಿಂಗ್ – ಯೂಟ್ಯೂಬ್ ಅಡ್ಮಿನ್ ಅರೆಸ್ಟ್

    ಬೃಂದಾವನದಲ್ಲಿ ಅನುಮತಿ ಇಲ್ಲದೇ ರಾತ್ರಿ ಶೂಟಿಂಗ್ – ಯೂಟ್ಯೂಬ್ ಅಡ್ಮಿನ್ ಅರೆಸ್ಟ್

    ನವದೆಹಲಿ: ಒಂದು ವಾರದ ಹಿಂದೆ ಬೃಂದಾವನದಲ್ಲಿ ರಾತ್ರಿಯ ಸಮಯದಲ್ಲಿ ಚಿತ್ರೀಕರಣಕ್ಕೆ ನಿರ್ಬಂಧಿಸಲಾಗಿದ್ದು, ಅದನ್ನು ಮೀರಿ ಶೂಟಿಂಗ್ ಮಾಡಿದ ಯೂಟ್ಯೂಬ್ ಚಾನೆಲ್ ನಿರ್ವಾಹಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

    ಬೃಂದಾವನದ ಧಾರ್ಮಿಕ ತಾಣವಾದ ‘ನಿಧಿವನ್ ರಾಜ್’ ಒಳಗೆ ಯಾರಿಗೂ ವೀಡಿಯೋ ಮಾಡಲು ಅವಕಾಶವಿಲ್ಲ. ಅದರೂ ಸಹ ಗೌರವ್‍ಜೋನ್ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಗೌರವ್ ಶರ್ಮಾ ವೀಡಿಯೋವನ್ನು ಶೂಟ್ ಮಾಡಲಾಗಿದೆ. ಈ ಹಿನ್ನೆಲೆ ಶರ್ಮಾ ಅವರನ್ನು ದೆಹಲಿಯ ಅವರ ನಿವಾಸದಲ್ಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬೃಂದಾವನದ ‘ನಿಧಿವನ್ ರಾಜ್’ ಅಲ್ಲಿ ರಾತ್ರಿಯ ಸಮಯದಲ್ಲಿ ರಾಧೆ ಮತ್ತು ಭಗವಾನ್ ಶ್ರೀಕೃಷ್ಣ ‘ರಾಸ ಲೀಲಾ’ ಆಡುವ ಪವಿತ್ರ ಸ್ಥಳವಾಗಿದೆ. ಅದಕ್ಕೆ ಆ ಸಮಯದಲ್ಲಿ ಯಾರನ್ನು ಸ್ಥಳಕ್ಕೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಆದರೆ ಶರ್ಮಾ ಅವರು ಆ ಜಾಗವನ್ನು ಅಪವಿತ್ರ ಮಾಡಿದಲ್ಲದೇ ನವೆಂಬರ್ 9 ರಂದು ಯೂಟ್ಯೂಬ್ ನಲ್ಲಿ ವೀಡಿಯೋವನ್ನು ಅಪ್‍ಲೋಡ್ ಮಾಡಿದ್ದಾರೆ. ಆದರೆ ಚಿತ್ರೀಕರಣವನ್ನು ಪುರೋಹಿತರು ವಿರೋಧಿಸಿದ ನಂತರ ಅದನ್ನು ಡಿಲೀಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಡಿ, ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷ ವಿಸ್ತರಿಸಿದ ಕೇಂದ್ರ

    ‘ನಿಧಿವನ್ ರಾಜ್’ ಅರ್ಚಕ ರೋಹಿತ್ ಗೋಸ್ವಾಮಿ ಅವರ ದೂರಿನ ಮೇರೆಗೆ ಬೃಂದಾವನ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ರ ಅಡಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ಶರ್ಮಾ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆತನ ಜೊತೆಗಿದ್ದವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾರ್ತಾಂಡ್ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.

    ನವೆಂಬರ್ 6 ರ ರಾತ್ರಿ ಶೂಟಿಂಗ್ ಮಾಡಿದ್ದು, ಈ ವೇಳೆ ಶರ್ಮಾ ಅವರ ಸೋದರಸಂಬಂಧಿ ಪ್ರಶಾಂತ್, ಸ್ನೇಹಿತರಾದ ಮೋಹಿತ್ ಮತ್ತು ಅಭಿಷೇಕ್ ಅವರೊಂದಿಗೆ ‘ಪವಿತ್ರ’ ಸ್ಥಳದಲ್ಲಿ ವೀಡಿಯೋವನ್ನು ಚಿತ್ರೀಕರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಹಿಂದೆಯು ಶರ್ಮಾ ಅವರು, ಇದೇ ವರ್ಷದ ಮೇ ತಿಂಗಳಲ್ಲಿ ನಾಯಿ ಡಾಲರ್ ಅನ್ನು ಬಲೂನ್‍ಗಳಿಗೆ ಕಟ್ಟಿ ಗಾಳಿಯಲ್ಲಿ ತೇಲುವಂತೆ ವೀಡಿಯೋವನ್ನು ಮಾಡಿ ತಮ್ಮ ಚಾನೆಲ್‍ನಲ್ಲಿ ಪೋಸ್ಟ್ ಮಾಡಿದರು. ಈ ಪರಿಣಾಮ ಅವರನ್ನು ಬಂಧಿಸಲಾಗಿತ್ತು. ನಂತರ ವೀಡಿಯೋವನ್ನು ಡಿಲೀಟ್ ಮಾಡಿ ತನ್ನ ಕೃತ್ಯಕ್ಕೆ ಕ್ಷಮೆ ಯಾಚಿಸಿದ್ದರು. ಇದನ್ನೂ ಓದಿ: ಇಂದಿನಿಂದ ಶಬರಿಮಲೆ ಯಾತ್ರೆ ಆರಂಭ – 2 ಡೋಸ್ ಲಸಿಕೆ ಕಡ್ಡಾಯ

  • ಮರೆಯಲಾಗದಂತಹ ನೈಜ ಘಟನೆ ಹಂಚಿಕೊಂಡ ಜಗ್ಗೇಶ್

    ಮರೆಯಲಾಗದಂತಹ ನೈಜ ಘಟನೆ ಹಂಚಿಕೊಂಡ ಜಗ್ಗೇಶ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ದಿನ ರಾಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ರಾಯರು ಹಾಗೂ ಜಗ್ಗೇಶ್ ನಡುವೆ ನಡೆದ ಮರೆಯಲಾರದ ಸತ್ಯ ಘಟನೆಯೊಂದು ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಇನ್‍ಸ್ಟಾದಲ್ಲಿ ಬರೆದುಕೊಂಡಿರುವ ನವರಸ ನಾಯಕ, ನೆನೆದವರ ಮನದಲ್ಲಿ ಗುರುರಾಯ ಎಂದು ಶೀರ್ಷಿಕೆ ಕೊಟ್ಟು ಸ್ನೇಹಿತರೆ ಇಂದು ನನ್ನ ರಾಯರ ನಡುವೆ ನಡೆದ ಮರೆಯಲಾಗದ ಘಟನೆ ಎಂದು ವಿವರಿಸಿದ್ದಾರೆ.

    ಘಟನೆ ಏನು..?
    ಪರಿಮಳ 9 ಗಂಟೆಗೆ ನನ್ನ ಏಕಾಂತ ಜಾಗದಲ್ಲಿ ಊಟ ಬಡಿಸಿ ಆನ್‍ಲೈನ್ ಕೆಲಸಕ್ಕೆ ತನ್ನ ಹಾಲಿಗೆ ಹೋದಳು. ನಾನು ಊಟ ಮುಗಿಸಿ ಒಂದು ಬಾರಿ ಸ್ಮರಣೆ ಸಾಲದೆ ಹಾಡು ಕೇಳುತ್ತಾ ರಾಯರ ಚಿತ್ರಪಟ ನೋಡುತ್ತ ಮಂತ್ರಮುಗ್ಧನಾಗಿ ಧ್ಯಾನದಲ್ಲಿ ಕೂತುಬಿಟ್ಟೆ. ಆಗ ನನ್ನ ಮನಸ್ಸಿನಲ್ಲಿ ರಾಯರ ಜೊತೆ ಸಂಭಾಷಣೆ ಶುರುವಾಯಿತು.

    ರಾಯರೆ ನಾನು ಬದುಕಲ್ಲಿ ಕೇಳಿದ್ದೆಲ್ಲಾ ಕೊಟ್ಟಿದ್ದೀರಿ, ಕೊಡುತ್ತಿದ್ದೀರಿ. ನಿಮ್ಮ ಭಿಕ್ಷೆಯಿಂದ ನಾನು ಕೋಟ್ಯಂತರ ಪ್ರೀತಿಸುವ ಯೋಗ ಪಡೆದಿರುವೆ. ಆದರೆ ಪಾಪಿಯಾದ ನಾನು ನಿಮ್ಮ ಶಾಸ್ತ್ರೋಕ್ತವಾಗಿ ಭಜಿಸುವ ವಿದ್ಯೆ ಪಡೆಯಲಿಲ್ಲ. ಕಲಿಯುವ ವಯಸ್ಸಲ್ಲಿ ಅಪ್ಪ ಬಿಡಲಿಲ್ಲ. ಅಲ್ಪಸ್ವಲ್ಪ ಚಿತ್ರ ಗೀತೆ ಹಾಡುವೆ. ದಯಮಾಡಿ ನಿಮ್ಮ ಮುಂದೆ ಕೂತು ಹಾಡಲು ಆಶೀರ್ವದಿಸಿ. ಮನತುಂಬಿ ಹಾಡುವಾಸೆ ದಯಮಾಡಿ ಕರುಣಿಸಿ ಎಂದು ಪ್ರಾರ್ಥಿಸುತ್ತಿದ್ದೆ.

    ಸ್ನೇಹಿತರೆ ಮಿಂಚಿನಂತೆ ಮಂತ್ರಾಲಯ ಆತ್ಮೀಯ ಸಹೋದರ ಮಠದ ಪಿಆರ್‍ಓ ನರಸಿಂಹಾಚಾರ್ ಅವರ ಮೊಬೈಲ್ ನಿಂದ ವಾಟ್ಸಾಪ್ ವೀಡಿಯೋ ಕಾಲ್ ಬಂತು. ಕರೆ ಸ್ವೀಕರಿಸಿದಾಗ ಬೃಂದಾವನ ದರ್ಶನ ಆಯಿತು. ಅಳು ತಡೆಯಲಾಗಲಿಲ್ಲ. ಮನ ಬಿಚ್ಚಿ ರಾಯರಿಗೆ ಹೇಳಿದೆ, ನನ್ನ ಮಾತು ಬೃಂದಾವನಕ್ಕೆ ಕೇಳುವ ಸೌಭಾಗ್ಯ ನನಗೆ ನೀಡಿದ ನಿಮ್ಮ ಕರುಣೆ ಸಾಕು. ಈ ಜನ್ಮಕ್ಕೆ ಇನ್ನೆಂದಿಗೂ ನನಗೆ ಮನುಜನ್ಮ ಬೇಡ. ನಿಮ್ಮ ಪಾದದಡಿಯ ಧೂಳಾಗಿ ಜನ್ಮಕೊಡಿ ಸಾಕು ಎಂದು ಪ್ರಾರ್ಥಿಸಿದೆ. ಈ ಸರಿಹೊತ್ತಲ್ಲಿ ರಾಯರ ಬೃಂದಾವನ ದರ್ಶನ ನನಗೆ ಮಾಡಿಸಲು ಏನು ಪ್ರೇರಣೆ ಆಯಿತು ಎಂದು ನರಸಿಂಹಾಜಾರ್ ಅವರನ್ನು ಕೇಳಿದೆ. ಅದಕ್ಕೆ ಅವರು ಬೃಂದಾವನ ಅಲಂಕಾರ ತೆಗೆಯಬೇಕಾದರೆ ಅಲ್ಲೆ ನಿಂತಿದ್ದೆ. ಇದ್ದಕ್ಕಿದ್ದಂತೆ ಜಗ್ಗೇಶನಿಗೆ ಬೃಂದಾವನ ತೋರಿಸುವಂತೆ ರಾಯರ ಪ್ರೇರಣೆ ಆಯಿತು ಎಂದರು.

    ಈ ಬರವಣಿಗೆಯಲ್ಲೂ ಕಣ್ಣೀರು ನಿಂತಿಲ್ಲ. ಜನ್ಮಪಾವನ ಹಾಗೂ ರಾಯರ ಪರಿಚಯಿಸಿ ಕಣ್ಣಿಗೆ ಕಾಣದ ಊರಿಗೆ ಹೋದ ನನ್ನ ದೇವತೆ ಅಮ್ಮನಿಗೆ ಉಸಿರು ನಿಲ್ಲುವವರೆಗೆ ಧನ್ಯವಾದ. ಮಾತೃದೇವೋಭವ ಗುರುದೇವೊಭವ. ಕೋಟಿ ಬಾರಿ ಪ್ರಮಾಣಿಸಿ ಹೇಳುವೆ ರಾಯರು ತಾಯಂತೆ ಮಕ್ಕಳು ಬಯಸಿದಾಗ ಬಂದು ಬಿಡುವರು. ಈ ಸಮಯ ಬದುಕಿನ ಆನಂದಮಯ.. ಎಂದು ಜಗ್ಗೇಶ್ ನಡೆದ ಘಟನೆಯನ್ನು ವಿವರಿಸಿದ್ದಾರೆ.

  • ಪೇಜಾವರ ಶ್ರೀಗಳ ಬೃಂದಾವನದ ಮುಂದೆ ಶಿಷ್ಯ ವೃಂದದಿಂದ ಮಂತ್ರಪಟನೆ

    ಪೇಜಾವರ ಶ್ರೀಗಳ ಬೃಂದಾವನದ ಮುಂದೆ ಶಿಷ್ಯ ವೃಂದದಿಂದ ಮಂತ್ರಪಟನೆ

    – ದಿನ ಪೂರ್ತಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು

    ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ರಾತ್ರಿಯಿಂದನೂ ಕೂಡ ಭಜನೆ ಆರಾಧನೆಗಳು ನಡೆದಿವೆ. ಜೊತೆಗೆ ಮುಂಜಾನೆ 5 ಗಂಟೆಗೆ ಶ್ರೀಯುತರ ಶಿಷ್ಯ ವೃಂದದಿಂದ ಮಂತ್ರಪಟನೆ ಆಗಿದೆ.

    ಶಿಷ್ಯ ವೃಂದದವರಿಂದ ಬೃಂದಾವನದ ಮುಂದೆ ಪವಮಾನಸೂಕ್ತ ಮಂತ್ರಪಟನೆ. ವಾಯು ದೇವರ ಮೂರು ಅವತಾರಗಳಾದ ಹನುಮಂತ, ಭೀಮ ಮತ್ತು ಮಧ್ವ ದೇವರ ಮಂತ್ರ ಪಟನೆ ನಡೆಯುತ್ತಿದ್ದು, ಇಂದು 9 ಗಂಟೆಗೆ ಹವನ ಹೋಮ ಆರಂಭವಾಗಿದೆ.

    ಪೂರ್ಣ ಪ್ರಜ್ಞಾ ವಿದ್ಯಾಪೀಠದ ಕೃಷ್ಣ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ನಿರ್ಮಾಣ ಆಗಿದೆ. ಭಕ್ತರಿಗೆ ವಿಶ್ವೇಶ ತೀರ್ಥ ಶ್ರೀಗಳ ಬೃಂದಾವನ ವೀಕ್ಷಣೆಗೆ ಅನುಮತಿ ನೀಡಲಾಗಿದೆ. ಮುಂಜಾನೆಯಿಂದಲೂ ಭಕ್ತರು ಶ್ರೀಯುತರ ಬೃಂದಾವನದ ದರ್ಶನ ಪಡೆಯುತ್ತಿದ್ದಾರೆ. 11 ದಿನಗಳವರೆಗೂ ವಿಶೇಷ ಪಾರಾಯಣ ಧಾರ್ಮಿಕ ಕಾರ್ಯಕ್ರಮಗಳು ಬೃಂದಾವನದ ಮುಂದೆ ನೆರವೇರಲಿವೆ. ಇಂದು ಸಹ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು, ಭಕ್ತರು ಭಾಗವಹಿಸಬಹುದಾಗಿದೆ.

    ಚತುರ್ವೇದ ಪಾರಾಯಣ, ಅನ್ನ ಸಂತಪರ್ಣೆ ಭಜನೆ, ಚರ್ತುಮೂರ್ತಿ ಆರಾಧನೆ, ಐದು ಮೂರ್ತಿಗಳ ಆರಾಧನೆ, ಹವನ ಹೋಮ ಮತ್ತು ಪವನ ಸೂಕ್ತ ಮಂತ್ರ ಪಠಣೆಗಳು ಇಂದು ವಿದ್ಯಾಪೀಠದಲ್ಲಿ ನೆರವೇರಲಿದೆ.

  • ಇಂದಿನಿಂದ ಭಕ್ತರಿಗೆ ಪೇಜಾವರ ಶ್ರೀಗಳ ಬೃಂದಾವನ ದರ್ಶನಕ್ಕೆ ಅವಕಾಶ

    ಇಂದಿನಿಂದ ಭಕ್ತರಿಗೆ ಪೇಜಾವರ ಶ್ರೀಗಳ ಬೃಂದಾವನ ದರ್ಶನಕ್ಕೆ ಅವಕಾಶ

    ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಭಕ್ತರು ಶ್ರೀಗಳ ಬೃಂದಾವನ ದರ್ಶನ ಮಾಡಬಹುದು ಎಂದು ಪೂರ್ಣ ಪ್ರಜ್ಞಾ ವಿದ್ಯಾಪೀಠದ ಕಾರ್ಯದರ್ಶಿ ಕೇಶವ ಚಾರ್ಯ ತಿಳಿಸಿದ್ದಾರೆ.

    ಭಾನುವಾರ ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದೆ. ರಾತ್ರಿಪೂರ್ತಿ ಅವರ ಬೃಂದಾವನ ಪ್ರವೇಶ ಆಗಿದ್ದು, ರಾತ್ರಿ ಪೂರ್ತಿ ಭಜನೆ-ಆರಾಧನೆ ನಡೆದಿದೆ. ಹೀಗಾಗಿ ಇಂದಿನಿಂದ ಶ್ರೀಗಳ ಬೃಂದಾವನ ದರ್ಶನ ಮಾಡಬಹುದು. ಇದನ್ನೂ ಓದಿ: ವಿಶ್ವಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯ – ಬೆಂಗಳೂರಿನ ವಿದ್ಯಾಪೀಠದಲ್ಲಿ ವೃಂದಾವನಸ್ಥ

    ಪೇಜಾವರ ಶ್ರೀಗಳ ಬೃಂದಾವನ ಪ್ರವೇಶದ ಬಳಿಕ ಮಾತನಾಡಿದ ಕೇಶವ ಚಾರ್ಯ, ಇಂದಿನಿಂದ ಪ್ರತಿನಿತ್ಯ ಪಾಯಶ್ಚಿತ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ, ಇತ್ಯಾದಿ ಶಾಂತಿ ಹೋಮಗಳು ಮತ್ತು ಯಾಗಗಳು ನಡೆಯಲಿವೆ. 12ನೇ ದಿನಕ್ಕೆ ವಿಶೇಷ ಮಹಾಸಮಾರಾಧನೆ ನಡೆಯುತ್ತೆ. ಪರಮಪೂಜ್ಯ ವಿಶ್ವ ಪ್ರಸನ್ನ ಅವರ ನೇತೃತ್ವದಲ್ಲಿ ಅವರ ಆದೇಶದಂತೆ ಸತ್ಕಾರ್ಯಗಳು ನಡೆಯಲಿವೆ.

    ಇಂದಿನಿಂದ ಭಕ್ತಾದಿಗಳು ಪೇಜಾವರ ಶ್ರೀಗಳ ಬೃಂದಾವನ ದರ್ಶನ ಮಾಡಲಿಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬೃಂದಾವನ ನಿರ್ಮಾಣ ಮಾಡೋದಕ್ಕೆ ಒಂದೂವರೆ ವರ್ಷ ಬೇಕಾಗಿತ್ತೆ. ಇದು ತಾತ್ಕಾಲಿಕ ಬೃಂದಾವನವಾಗಿದ್ದು, ಪ್ರತಿದಿನ ಪೂಜೆ ಪುನಸ್ಕಾರಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.