Tag: ಬೆಂಕಿ ಪೊಟ್ಟಣ

  • 2ರೂ. ಬೆಂಕಿ ಪೊಟ್ಟಣದಲ್ಲಿ 36 ಕಡ್ಡಿ ಬದ್ಲು 50 ಕಡ್ಡಿ

    2ರೂ. ಬೆಂಕಿ ಪೊಟ್ಟಣದಲ್ಲಿ 36 ಕಡ್ಡಿ ಬದ್ಲು 50 ಕಡ್ಡಿ

    ಚೆನ್ನೈ: 14 ವರ್ಷಗಳ ನಂತರ ಬೆಂಕಿ ಪೊಟ್ಟಣದ ಬೆಲೆ ಏರಿಕೆ ಆಗಿರುವ ಬೆನ್ನಲ್ಲೆ ಇದೀಗ ಪೊಟ್ಟಣದಲ್ಲಿ(matchbox) ಇರುವ ಕಡ್ಡಿಗಳ ಸಂಖ್ಯೆಯಲ್ಲೂ ಏರಿಕೆ ಮಾಡಲಾಗಿದೆ. ಡಿಸೆಂಬರ್ 1ರಿಂದ ಬೆಂಕಿ ಪೊಟ್ಟಣದ ಬೆಲೆ 1 ರೂಪಾಯಿನಿಂದ 2ರೂ.ಗೆ ಏರಿಕೆಯಾಗುತ್ತಿದ್ದು, ಬೆಲೆ ಹೆಚ್ಚಾದರೂ ಪೊಟ್ಟಣದಲ್ಲಿ ಬೆಂಕಿ ಕಡ್ಡಿಗಳು ಹೆಚ್ಚಿಗೆ ಸಿಗುತ್ತಿದೆ ಎಂದು ಕಂಪನಿಗಳು ಸ್ಪಷ್ಟಪಡಿಸಿವೆ.

    14 ವರ್ಷದ ನಂತರ ಬೆಲೆ ಹೆಚ್ಚಿಸುತ್ತಿದ್ದು, 2ರೂಪಾಯಿಯ ಪೊಟ್ಟಣದಲ್ಲಿ ಇನ್ಮುಂದೆ36 ಕಡ್ಡಿಗಳ ಬದಲು 50 ಕಡ್ಡಿಗಳು ಇರಲಿದೆ ಎಂದು ತಿಳಿಸಿವೆ. ಬೆಂಕಿ ಪೊಟ್ಟಣ ತಯಾರಿಕೆಗೆ ಬಳಸುವ 14 ಕಚ್ಚಾವಸ್ತುಗಳು ಬೆಲೆ ಏರಿಕೆ ಸಮೇತ ವಿವರ ನೀಡಿರುವ ಕಂನಿಗಳು ತಮ್ಮ ನಿರ್ಧಾರ ಸಮರ್ಥಿಸಿಕೊಂಡಿವೆ. ಇದನ್ನೂ ಓದಿ: ಲೆಹೆಂಗಾದಲ್ಲಿ ಡ್ರಗ್ಸ್ ಇಟ್ಟು ಸಾಗಾಟ – ಹೈದರಾಬಾದ್ ಟು ಆಸ್ಟ್ರೇಲಿಯಾಗೆ ಸಪ್ಲೈ

    ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆಯಲ್ಲೂ ಹೆಚ್ಚಳವಾಗುತ್ತಲೇ ಇದೆ. ಆದರೆ ಕಳೆದ 14 ವರ್ಷಗಳಿಂದ ಬೆಂಕಿ ಪೊಟ್ಟಣದ ಬೆಲೆ ಮಾತ್ರ ಕಿಂಚಿತ್ತೂ ಏರಿಕೆಯಾಗದೆ ಸ್ಥಿರವಾಗಿತ್ತು. ಈ ಹಿಂದೆ 50 ಪೈಸೆ ಇದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2007ರಲ್ಲಿ ಪರಿಷ್ಕರಿಸಲಾಗಿತ್ತು. ಆಗ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಗುರುವಾರ ಶಿವಕಾಶಿಯಲ್ಲಿ ಮುಕ್ತಾಯಗೊಂಡ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚೆಸ್ (All India Chamber Of Matches) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಚ್ಚಾ ಸಾಮಗ್ರಿಗಳಲ್ಲಿ ಆಗುತ್ತಿರುವ ಬೆಲೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

    ಬೆಲೆ ಏರಿಕೆಗೆ ಕಾರಣವೇನು?: ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 10 ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಬೆಂಕಿ ಪೊಟ್ಟಣ ತಯಾರಕರು ಬೆಲೆಯೇರಿಕೆಯ ನಿರ್ಧಾರವನ್ನು ಅವಿರೋಧವಾಗಿ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ 600 ಬೆಂಕಿ ಪೊಟ್ಟಣಗಳ ಒಂದು ಬಂಡಲ್ 270ರಿಂದ 300 ರೂಪಾಯಿಗೆ ಮಾರಾಟವಾಗುತ್ತಿದೆ. ಅದನ್ನು 430ರಿಂದ 480 ರೂಪಾಯಿಗೆ ಏರಿಸಲು ನಿರ್ಧರಿಸಲಾಗಿದೆ.

  • 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    ಚೆನ್ನೈ: 14 ವರ್ಷಗಳ ನಂತರ ಬೆಂಕಿ ಪೊಟ್ಟಣದ (matchbox) ಬೆಲೆ ಏರಿಕೆಯಾಗಿದೆ. ಡಿಸೆಂಬರ್ 1ರಿಂದ ಬೆಂಕಿಪೊಟ್ಟಣದ ಬೆಲೆ 2 ರೂಪಾಯಿ ಆಗಲಿದೆ. ತಮಿಳುನಾಡಿನ ಶಿವಕಾಶಿಯಲ್ಲಿ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ದಿನನಿತ್ಯ ಬಳಕೆಯ ಸಾಮಗ್ರಿಗಳ ಬೆಲೆಯಲ್ಲೂ ಹೆಚ್ಚಳವಾಗುತ್ತಲೇ ಇದೆ. ಆದರೆ ಕಳೆದ 14 ವರ್ಷಗಳಿಂದ ಬೆಂಕಿಪೊಟ್ಟಣದ ಬೆಲೆ ಮಾತ್ರ ಕಿಂಚಿತ್ತೂ ಏರಿಕೆಯಾಗದೆ ಸ್ಥಿರವಾಗಿತ್ತು.

    ಈ ಹಿಂದೆ 50 ಪೈಸೆ ಇದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2007ರಲ್ಲಿ ಪರಿಷ್ಕರಿಸಲಾಗಿತ್ತು. ಆಗ ಬೆಂಕಿ ಪೊಟ್ಟಣದ ಬೆಲೆಯನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಗುರುವಾರ ಶಿವಕಾಶಿಯಲ್ಲಿ ಮುಕ್ತಾಯಗೊಂಡ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚೆಸ್ (All India Chamber Of Matches) ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಚ್ಚಾ ಸಾಮಗ್ರಿಗಳಲ್ಲಿ ಆಗುತ್ತಿರುವ ಬೆಲೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

    ಬೆಲೆ ಏರಿಕೆಗೆ ಕಾರಣವೇನು?: ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಲೆಹೆಂಗಾದಲ್ಲಿ ಡ್ರಗ್ಸ್ ಇಟ್ಟು ಸಾಗಾಟ – ಹೈದರಾಬಾದ್ ಟು ಆಸ್ಟ್ರೇಲಿಯಾಗೆ ಸಪ್ಲೈ


    ಅಕ್ಟೋಬರ್ 10 ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ಉದ್ಯಮದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಬೆಂಕಿಪೊಟ್ಟಣ ತಯಾರಕರು ಬೆಲೆಯೇರಿಕೆಯ ನಿರ್ಧಾರವನ್ನು ಅವಿರೋಧವಾಗಿ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸದ್ಯ 600 ಬೆಂಕಿ ಪೊಟ್ಟಣಗಳ ಒಂದು ಬಂಡಲ್ 270ರಿಂದ 300 ರೂಪಾಯಿಗೆ ಮಾರಾಟವಾಗುತ್ತಿದೆ. ಅದನ್ನು 430ರಿಂದ 480 ರೂಪಾಯಿಗೆ ಏರಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಡಿಲೇ ಆಗಿದ್ದಕ್ಕೆ ಯಾವ ಮಾನಮರ್ಯಾದೆ ಹೋಗಲ್ಲ, ಬದನೆಕಾಯಿಯೂ ಆಗಿಲ್ಲ: ಸುದೀಪ್

  • ನ್ಯಾಯಾಲಯಕ್ಕೆ ಖಾರದ ಪುಡಿ ತಂದ ಖೈದಿ

    ನ್ಯಾಯಾಲಯಕ್ಕೆ ಖಾರದ ಪುಡಿ ತಂದ ಖೈದಿ

    ಧಾರವಾಡ/ಹುಬ್ಬಳ್ಳಿ: ವಿಚಾರಣಾಧೀನ ಖೈದಿಯೊಬ್ಬ ನ್ಯಾಯಾಲಯಕ್ಕೆ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣ ತಗೆದುಕೊಂಡು ಬಂದು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಗರದ ಹೊಸ ಕೋರ್ಟ್ ನಲ್ಲಿ ನಡೆದಿದೆ.

    ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಹಾನಗಲ್ ಮೂಲದ ನಾಗರಾಜ್ ಎಂಬಾತನೇ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣವನ್ನು ಕಿಸೆಯಲ್ಲಿ ಇಟ್ಟುಕೊಂಡು ನ್ಯಾಯಾಲಯಕ್ಕೆ ಆಗಮಿಸಿದ ಆರೋಪಿ. ಹಾವೇರಿ ಟೌನ್ ಠಾಣೆ ಪೊಲೀಸರು ಮನೆಗಳ್ಳತನ ಪ್ರಕರಣದಲ್ಲಿ ಈತನನ್ನು ಬಂಧಿಸಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕಳುಹಿಸಿದ್ದರು. ಇಂದು ಬಳ್ಳಾರಿ ಜೈಲಿನಿಂದ ಹುಬ್ಬಳ್ಳಿ ಕೋರ್ಟ್ ಗೆ ವಿಚಾರಣೆಗಾಗಿ ಕರೆ ತರಲಾಗಿತ್ತು. ಆದ್ರೆ ಕೋರ್ಟ್ ಆವರಣ ಪ್ರವೇಶಕ್ಕೂ ಮುನ್ನ ಭದ್ರತಾ ಸಿಬ್ಬಂದಿ ಈತನನ್ನು ತಪಾಸಣೆ ಮಾಡಿದಾಗ ಈತನ ಬಳಿ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣ ಪತ್ತೆಯಾಗಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

    ಜೈಲಿನಲ್ಲಿ ಈತನಿಗೆ ಖಾರದ ಪುಡಿ ಹಾಗೂ ಬೆಂಕಿ ಪೊಟ್ಟಣ ಕೊಟ್ಟವರು ಯಾರು ಎಂಬ ಅನುಮಾನ ಕಾಡುತ್ತಿದೆ. ಅದರ ಜೊತೆಗೆ ಈ ವಸ್ತುಗಳನ್ನು ನ್ಯಾಯಾಲಯಕ್ಕೆ ಏಕೆ ತಗೆದುಕೊಂಡ ಬಂದ. ಈತನ ಉದ್ದೇಶ ಏನಾಗಿತ್ತು ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಈತನ ಬಳಿ ಇಂತಹ ವಸ್ತುಗಳು ಪತ್ತೆಯಾಗಿದ್ದು ಬಳ್ಳಾರಿ ಜೈಲಿನ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ. ಆದ್ರೆ ಕೋರ್ಟ್ ನ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಆಗಬಹುದಾದ ಅನಾಹುತ ತಪ್ಪಿದಂತಾಗಿದೆ.

  • ಬೆಂಕಿಪೊಟ್ಟಣ ಕದ್ದ ಆರೋಪ- ಯುವಕ ನೇಣಿಗೆ ಶರಣು

    ಬೆಂಕಿಪೊಟ್ಟಣ ಕದ್ದ ಆರೋಪ- ಯುವಕ ನೇಣಿಗೆ ಶರಣು

    ಕೊಪ್ಪಳ: ಬೆಂಕಿ ಪೊಟ್ಟಣ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಹೊರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದಲ್ಲಿ ಈ ಘಟನೆ ನಡೆದಿದ್ದು, 20 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಡಿಸೆಂಬರ್ 17 ರಂದು ಈ ಘಟನೆ ನಡೆದಿದೆ.

    ಡಿ.17 ರಂದು ಮುಂಜಾನೆ 3 ಗಂಟೆ ಸುಮಾರಿಗೆ ಹೊಲಕ್ಕೆ ನೀರು ಕಟ್ಟಲು ಹೋಗುವಾಗ ಬೆಂಕಿಪೊಟ್ಟಣ ಇಲ್ಲ ಎಂದು ರಾಜೇಶ್, ಪಕ್ಕದಲ್ಲೆ ಇರುವ ಬುಡ್ಡಪ್ಪ ಎಂಬವರ ಹೋಟೆಲ್ ಗೆ ಬಂದು ಅಲ್ಲೆ ಇದ್ದ ಬೆಂಕಿ ಪೊಟ್ಟಣ ತೆಗೆದುಕೊಂಡು ಹೋಗುತ್ತಿದ್ದನು. ಈ ವೇಳೆ ಹೋಟೆಲ್ ಮಾಲೀಕರಾದ ಬುಡ್ಡಪ್ಪ, ಶೇಖರಪ್ಪ, ಶಾಂತಮ್ಮ, ಲಕ್ಷ್ಮಿ ಎಂಬವರು ರಾಜೇಶನನ್ನು ಹಿಡಿದು, ಬೆಂಕಿಪೊಟ್ಟಣ ಕಳವು ಮಾಡುತ್ತೀಯಾ ಎಂದು ಥಳಿಸಿದ್ದಾರೆ.

    ವಿಷಯ ತಿಳಿದ ರಾಜೇಶನ ತಂದೆ ಆ ಮೇಲೆ ಮಾತಾಡೋಣ ಎಂದು ಸಮಾಧಾನ ಮಾಡಿ ಮಗನನ್ನು ಕರೆದುಕೊಂಡು ಹೋಗಿದ್ದಾರೆ. ಇದರಿಂದ ಮನನೊಂದ ರಾಜೇಶ್ ಕೆಲ ಹೊತ್ತಿನಲ್ಲೇ ತಮ್ಮ ಹೊಲಕ್ಕೆ ಹೋಗಿ ಅಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಕೇವಲ ಬೆಂಕಿಪೊಟ್ಟಣ ಕಳ್ಳತನ ಆರೋಪ ಹೊರಿಸಿ ನನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದಾರೆಂದು ರಾಜೇಶ್ ತಂದೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ರು. ಕಳ್ಳತನ ಆರೋಪ ಹೊರಿಸಿದ್ದ ಬುಡ್ಡಪ್ಪ, ಶೇಖರಪ್ಪ, ಲಕ್ಷ್ಮಿ, ಶಾಂತಮ್ಮ ಎಂಬರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv