Tag: ಬೆಂಗಳೂರ

  • ಪುಟ್ಟಣ್ಣ ಕಣಗಲ್ ಜಯಂತಿಯನ್ನು ನಿರ್ದೇಶಕರ ದಿನವಾಗಿ ಆಚರಣೆ

    ಪುಟ್ಟಣ್ಣ ಕಣಗಲ್ ಜಯಂತಿಯನ್ನು ನಿರ್ದೇಶಕರ ದಿನವಾಗಿ ಆಚರಣೆ

    ನ್ನಡ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕ ಪುಟ್ಟಣ್ಣ ಕಣಗಲ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುಟ್ಟಣ್ಣ ಕಣಗಲ್ ಜಯಂತಿಯನ್ನು ಆಚರಣೆ ಮಾಡಿತು. ಇದೇ ವೇಳೆ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ‘ನಿರ್ದೇಶಕರ ದಿನ’ ಎಂದು ಆಚರಿಸಲು ವಾಣಿಜ್ಯ ಮಂಡಳಿ ನಿರ್ಧರಿಸಿರೋದಾಗಿ ಘೋಷಿಸಲಾಯಿತು.

    ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಮಾತನಾಡಿ ತೆಲುಗು ಚಿತ್ರರಂಗದಲ್ಲೂ ‘ನಿರ್ದೇಶಕರ ದಿನ’ ಎಂದಿದೆ. ನಮ್ಮಲ್ಲೂ ಪ್ರತಿ ವರ್ಷ ಡಿಸೆಂಬರ್ 1ರ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ‘ನಿರ್ದೇಶಕರ ದಿನ’ವನ್ನಾಗಿ ಆಚರಣೆ ಮಾಡೋಣ ಎಂದು ಪದಾಧಿಕಾರಿಗಳೆಲ್ಲರೂ ಸೇರಿ ಚರ್ಚೆ ಮಾಡಿ ನಿರ್ಧಾರ ಮಾಡಿಕೊಂಡಿದ್ದೇವೆ. ಈಗಿನವರ ಜೊತೆಗೆ ಮುಂದಿನ ಪೀಳಿಗೆಗೂ ಅವರ ಸಿನಿಮಾಗಳ ಬಗ್ಗೆ, ನಿರ್ದೇಶನದ ಬಗ್ಗೆ ತಿಳಿಸಿಕೊಡುವಂತಹ ಕೆಲಸ ಇದರಿಂದಾಗಬೇಕು. ಆ ದೃಷ್ಟಿಯಿಂದ ಅವರ ಜನ್ಮದಿನವಾದ ಡಿಸೆಂಬರ್ 1ನ್ನು ‘ನಿರ್ದೇಶಕರ ದಿನ’ವನ್ನಾಗಿ ಆಚರಣೆ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ರು. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಚಿನ್ನೇಗೌಡ ಮಾತನಾಡಿ ಇತ್ತೀಚೆಗೆ ವಾಣಿಜ್ಯ ಮಂಡಳಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬರುತ್ತಿದೆ. ಈ ತರಹದ ಬೆಳವಣಿಗೆ ಆಗಬೇಕು. ಪುಟ್ಟಣ್ಣ ಕಣಗಲ್ ಜಯಂತಿಯನ್ನು ನಿರ್ದೇಶಕರ ದಿನ ಎಂದು ಆಚರಣೆ ಮಾಡಲು ನಿರ್ಧಾರ ಮಾಡಿದ್ದು ಬಹಳ ಒಳ್ಳೆಯ ಕೆಲಸ. ಈ ಮೂಲಕ ಚಿತ್ರರಂಗದಲ್ಲಿ ಏನಾಗಿತ್ತು, ಯಾರ್ಯಾರು ಇದ್ರು ಎಂಬುದು ಮುಂದಿನ ಪೀಳಿಗೆಗೆ ತಿಳಿಯಬೇಕು ಈ ನಿಟ್ಟಿನಲ್ಲಿ ವಾಣಿಜ್ಯ ಮಂಡಳಿ ಇಟ್ಟಿರುವ ಈ ಹೆಜ್ಜೆ ಅಭಿನಂದನಾರ್ಹ ಎಂದು ತಿಳಿಸಿದ್ರು. ಜೊತೆಗೆ ಪುಟ್ಟಣ್ಣ ಕಣಗಲ್ ಅವರೊಂದಿಗಿನ ಹಳೆಯ ದಿನಗಳನ್ನು ಇದೇ ಸಮಯದಲ್ಲಿ ಹಂಚಿಕೊಂಡ್ರು.

    ನಿರ್ದೇಶಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎನ್. ಆರ್. ನಂಜುಡೇಗೌಡ ಮಾತನಾಡಿ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ನಿರ್ದೇಶಕರ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಘೋಷಣೆ ಆಗಿದ್ದು ಬಹಳ ಖುಷಿಯ ಸಂಗತಿ ಎಂದು ವಾಣಿಜ್ಯ ಮಂಡಳಿಯ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ರು. ನಿರ್ದೇಶಕರ ಸಂಘದ ಅಧ್ಯಕ್ಷನಾಗಿ ಈಗ ತಾನೇ ನಮ್ಮ ಕೆಲಸ ಆರಂಭಿಸಿದ್ದೇವೆ. ನಮ್ಮೆಲ್ಲರನ್ನು ಕರೆದು ಸನ್ಮಾನ ಮಾಡಿದ್ದು ತುಂಬಾ ಖುಷಿಯ ಸಂಗತಿ. ನಾವು ಮಾಡಬೇಕಾದ ಕೆಲಸ ತುಂಬಾ ಇದೆ ಅನ್ನೋ ಜವಾಬ್ದಾರಿಯನ್ನು ಈ ಸನ್ಮಾನ ನೀಡಿದೆ. ಮುಂದಿನ ದಿನಗಳಲ್ಲಿ ನಿರ್ದೇಶಕರಿಗೆ ಗೌರವ ತಂದು ಕೊಡುವ ಕೆಲಸವನ್ನು ನಮ್ಮ ಸಂಘ ಮಾಡಲಿದೆ. ಹಲವು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋದಾಗಿ ತಿಳಿಸಿದ್ರು.

    ಇದೇ ವೇಳೆ ನೂತನವಾಗಿ ಆಯ್ಕೆಯಾದ ನಿರ್ದೇಶಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರಿಗೆ ಸನ್ಮಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಕೆ.ಸಿ. ಎನ್ ಕುಮಾರ್, ಕಾರ್ಯದರ್ಶಿ ಎಲ್‌. ಸಿ. ಕುಶಾಲ್,  ಖಜಾಂಚಿ ಟಿ.ಪಿ.ಸಿದ್ದರಾಜು, ಉಪಾಧ್ಯಕ್ಷ ರಾದ ಶಿಲ್ಪಾ ಶ್ರೀನಿವಾಸ್ ಭಾಗಿಯಾಗಿ ಪುಟ್ಟಣ್ಣ ಕಣಗಲ್ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡ್ರು.

    Live Tv
    [brid partner=56869869 player=32851 video=960834 autoplay=true]

  • ಮಂಗಳಮುಖಿಯರಿಂದ ನೆಲಮಂಗಲ ಟೋಲ್‍ನಲ್ಲಿ ರಸ್ತೆ ಜಾಗೃತಿ

    ಮಂಗಳಮುಖಿಯರಿಂದ ನೆಲಮಂಗಲ ಟೋಲ್‍ನಲ್ಲಿ ರಸ್ತೆ ಜಾಗೃತಿ

    ಬೆಂಗಳೂರ: ಹೆದ್ದಾರಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಂಗಳಮುಖಿಯರು ರಸ್ತೆ ನಿಯಮ ಪಾಲಿಸುವಂತೆ ಕೈಮುಗಿದು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದ ಘಟನೆ ನಗರದ ನೆಲಮಂಗಲ ಟೋಲ್ ಗೇಟ್ ಬಳಿ ನಡೆದಿದೆ.

    ನಗರದ ಹೊರವಲಯದ ನೆಲಮಂಗಲದ ಟೋಲ್ ಗೇಟ್ ಬಳಿ ಸಂಚಾರಿ ಪೊಲೀಸರು ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಅವರ ಈ ಕಾರ್ಯಕ್ಕೆ ಟೋಲ್ ಗೇಟ್ ಬಳಿ ನಿಂತಿದ್ದ ಮಂಗಳಮುಖಿಯರೂ ಸಾಥ್ ನೀಡಿದರು.

    ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್ ಗೇಟ್ ನಲ್ಲಿ ಪೊಲೀಸರು ಆರಂಭಿಸಿದ್ದ ಈ ಅಭಿಯಾನದಲ್ಲಿ ಮಂಗಳಮುಖಿಯರು, ಅಲ್ಲಿಗೆ ಬರುತ್ತಿದ್ದ ಪ್ರತಿಯೊಂದು ಕಾರು ಚಾಲಕರಿಗೆ ಸೀಟ್ ಬೆಲ್ಟ್ ಹಾಗೂ ದ್ವಿಚಕ್ರ ಸವಾರರಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಕೈ ಮುಗಿದು ಹೇಳಿದರು.

    ತೃತೀಯ ಲಿಂಗಿಗಳ ಈ ಸಮಾಜಮುಖಿ ಕಾರ್ಯಕ್ಕೆ ಸ್ಥಳೀಯರು, ವಾಹನ ಸವಾರರು ಹಾಗೂ ಪೊಲೀಸ್ ಅಧಿಕಾರಿಗಳೂ ಸಹ ಅಭಿನಂದನೆ ಸಲ್ಲಿಸಿದರು.

     

  • ಬೆಂಗಳೂರು ವಿವಿ ಈಜುಕೊಳದಲ್ಲಿ ಪೂಲ್ ಪಾರ್ಟಿ – ವರದಿ ಮಾಡದಂತೆ ಹಣದ ಆಮಿಷ

    ಬೆಂಗಳೂರು ವಿವಿ ಈಜುಕೊಳದಲ್ಲಿ ಪೂಲ್ ಪಾರ್ಟಿ – ವರದಿ ಮಾಡದಂತೆ ಹಣದ ಆಮಿಷ

    ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಏನಾದ್ರು ಆಯೋಜನೆ ಮಾಡುವಾಗ ಸಂಬಂಧಪಟ್ಟವರು ಲಿಖಿತ ಅನುಮತಿ ನೀಡಬೇಕು ಅಥವಾ ಯಾರಾದ್ರೂ ಹೊರಗಿನವರು ಕಾರ್ಯಕ್ರಮ ಮಾಡೋವಾಗ ಬಾಡಿಗೆ ನೀಡಬೇಕು. ಆದ್ರೆ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಲ್ಲಿರುವ ಈಜುಕೊಳದಲ್ಲಿ ಪಾರ್ಟಿ ಮಾಡಲು ಪ್ರಾಂಶುಪಾಲರಾದ ಕೃಷ್ಣಸ್ವಾಮಿ ಯಾವುದೇ ಲಿಖಿತ ಅನುಮತಿ ನೀಡದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಲಾಗಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ.

    ಇಂದು ಈ ಕಾರ್ಯಕ್ರಮ ಇದೆ ಅಂತ ಆಯೋಜಕರು ಮಾಧ್ಯಗಳಿಗೆ ಆಹ್ವಾನ ನೀಡಿದ್ರು. ಆದ್ರೆ ಮಾಧ್ಯಮದವರು ಅಲ್ಲಿ ಹೋದಾಗ ಅಲ್ಲಿನ ಪ್ರಾಂಶುಪಾಲರಾದ ಕೃಷ್ಣಸ್ವಾಮಿ ಗಲಿಬಿಲಿಗೆ ಒಳಗಾಗಿ, ನನಗೆ ಈ ಕಾರ್ಯಕ್ರಮದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಅನುಮತಿ ಕೊಟ್ಟಿದ್ದೆ. ಈಗ ಕಾರ್ಯಕ್ರಮ ನಡೆಸಲ್ಲ ಎಂದು ಮಾಧ್ಯಮದವರನ್ನ ಸಾಗಹಾಕಿದ್ರು. ಹೀಗಾಗಿ ಮಾಧ್ಯಮದವರು ಹಿಂದಿರುಗಿದ್ದಾರೆ. ಆದ್ರೆ ಆ ಬಳಿಕ ಜುಲೈ 29ರಂದು ಸಂಜೆ ಅನುಮತಿ ನೀಡಿದ್ದಾರೆ. ಯಾಕೆ ಈ ರೀತಿ ನಮ್ಮನ್ನ ದೂರ ಇಟ್ರು ಅಂತ ಮಾಧ್ಯಮ ಮಂದಿ ಹುಡುಕಾಡಿದಾಗ ಅಲ್ಲಿನ ಪಾರ್ಟಿಗೆ ಕೇವಲ ಮೌಖಿಕ ಅನುಮತಿ ನೀಡಲಾಗಿದೆಯೆಂದು ತಿಳಿದುಬಂತು. ಈ ಬಗ್ಗೆ ಪಬ್ಲಿಕ್ ಟಿವಿ ವಿವಿಯ ಪ್ರಾಂಶುಪಾಲ ಕೃಷ್ಣಸ್ವಾಮಿಯರನ್ನು ಪ್ರಶ್ನಿಸಿದಾಗ, ಕಾರ್ಯಕ್ರಮ ನಿಲ್ಲಿಸುತ್ತೇವೆ ಅಂದ್ರು. ಆದ್ರೆ ಅಂದು ಕಾರ್ಯಕ್ರಮ ನಡೆದಿದೆ. ಹೇಗೆ ಅನುಮತಿ ನೀಡಿದ್ರಿ ಅಂದ್ರೆ ಮೌಖಿಕವಾಗಿಯೇ ಅನುಮತಿ ಕೊಟ್ಟೆ ಅನ್ನೋದು ಬಿಟ್ಟು ಬೇರೆ ಮಾತಾಡಲ್ಲ ಪ್ರಾಂಶುಪಾಲ ಕೃಷ್ಣಸ್ವಾಮಿ.

    ಲಿಖಿತ ಆದೇಶ ಎಲ್ಲಿ ಅಂದ್ರೆ ಯಾವುದೋ ಪ್ರಿಂಟ್ ತಂದು ತೊರಿಸ್ತಾರೆ. ಅದು ಅಲ್ಲಿಯೇ ಸಹಿ ಮಾಡಿದ್ದು. ಮೌಖಿಕ ಆದೇಶ ಅಂದ್ರಿ ಇದೆಲ್ಲಿಂದ ಬಂತು? ಅಂತ ಕೇಳಿದ್ರೆ ಮತ್ತೆ ಗಲಿಬಿಲಿಯಾಗ್ತಾರೆ. ಇನ್ನು ಈ ಬಗ್ಗೆ ರಿಜಿಸ್ಟ್ರಾರ್ ರವಿಯವರನ್ನ ಕೇಳಿದ್ರೆ ಇದಕ್ಕೂ ನನಗೂ ಸಂಬಂಧ ಇಲ್ಲ. ಕೃಷ್ಣಸ್ವಾಮಿಯನ್ನ ಕೇಳಿ ಅಂತಾರೆ. ಏನೋ ಕೊಡ್ತೀವಿ ಸುಮ್ಮನಾಗಿ ಸರ್ ಅಂತ ಹಣದ ಆಮಿಷ ಬೇರೆ ನೀಡ್ತಾರೆ ಈ ಪ್ರಿನ್ಸಿಪಾಲ್.

    ವಿವಿಯ ದೈಹಿಕ ಶಿಕ್ಷಣ ವಿಭಾಗದಲ್ಲಿ ಅಕ್ರಮ ನಡೆದಿದೆ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತಿದ್ರೂ ಸಂಬಂಧಪಟ್ಟವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ವಿಶ್ವವಿದ್ಯಾಲಯದ ಈಜುಕೊಳ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಅಂತ ಇರೋದು. ಅದರಲ್ಲಿ ಕಾರ್ಯಕ್ರಮ ಮಾಡೋದೇ ಆದ್ರೆ ಅನುಮತಿಯ ಮೇರೆಗೆ ಆಗಬೇಕು. ಆದ್ರೆ ಈ ರೀತಿ ತಪ್ಪು ಮಾಡಿದೋರ ವಿರುದ್ಧ ಕ್ರಮ ಯಾವಾಗ ಅನ್ನೊದೇ ಪ್ರಶ್ನೆ.