ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.
ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪಾಲಿಕೆ ಸದಸ್ಯ ಎರಡು ಲಕ್ಷ ಘೋಷಣೆ ಮಾಡಿದ್ದಾರೆ.
ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದರು. ಆದರೆ ಅನಗತ್ಯ ಗಲಭೆ ಮಾಡಿದವರ ಕುಟುಂಬಕ್ಕೆ ಪರಿಹಾರ ಕೊಟ್ಟರೆ ಬೇರೆಯದ್ದೇ ಸಂದೇಶ ರವಾನೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬುದ್ಧಿ ಹೇಳಿದ್ದಾರೆ ಎನ್ನಲಾಗಿತ್ತು. ಇದನ್ನೂ ಓದಿ: ಜಮೀರ್ ಇನ್ ಟ್ರಬಲ್ – ಪಕ್ಷದ ನಾಯಕರಿಂದ ಎಚ್ಚರಿಕೆ
ಮೃತರ ಕುಟುಂಬಕ್ಕೆ ಪರಿಹಾರ ಕೊಡುವುದಾದರೆ ಕೊಡಿ. ಆದರೆ ಈ ವಿಷಯ ಮಾತ್ರ ಬಹಿರಂಗ ಆಗಬಾರದು ಎಂದು ಕಾಂಗ್ರೆಸ್ ನಾಯಕರು ಎಂದಿದ್ದಾರೆ. ಎಲ್ಲಿಯೂ ಸಹ ಪರಿಹಾರ ಕೊಟ್ಟೆ ಅಂತ ಹೇಳಬಾರದು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು.
ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಹೊಸ ತಿರುವ ಸಿಕ್ಕಿದೆ. ಕಾರ್ಪೋರೇಟರ್ ಸಂಪತ್ ರಾಜ್ ಸೋದರಳಿಯನ ಮೂಲಕ ಗಲಾಟೆ ಮಾಡಿಸಿದ್ರಾ ಅನ್ನೋ ಅನುಮಾನಗಳು ದಟ್ಟವಾಗ್ತಿವೆ. ಗಲಭೆಗೆ ಸಂಬಂಧಿಸಿದಂತೆ ಕಾರ್ಪೋರೇಟರ್ ಸಂಪತ್ ರಾಜ್ ಸೋದರಳಿಯ ಅರುಣ್ ನನ್ನು ಸಿಸಿವಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಅರುಣ್ ನೀಡಿರುವ ಹೇಳಿಕೆಗಳು ಸಂಪತ್ರಾಜ್ ಅವರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಸಿಸಿಬಿ ಪೊಲೀಸರ ಮುಂದೆ ಅರುಣ್ ಮಂಡಿಯೂರಿದ್ದಾನೆ ಎನ್ನಲಾಗಿದ್ದು, ಗಲಭೆಯಲ್ಲಿ ನಡೆದ ಘಟನಾವಳಿಗಳ ಬಗ್ಗೆ ಒಂದೊಂದಾಗಿ ಬಾಯಿಬಿಟ್ಟಿದ್ದಾನೆ. ಅರುಣ್ ಗಲಭೆ ನಡೆದಾಗ ನಡೆದ ಫೋನ್ ಸಂಭಾಷಣೆಯ ವಿಚಾರ ಅರುಣ್ ಒಪ್ಪಿಕೊಂಡಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದೀಗ ಸಿಸಿಬಿ ಪೊಲೀಸರು ಅರುಣ್ ಹೇಳಿಕೆಯನ್ನಾಧರಿಸಿ ಟೆಕ್ನಿಕಲ್ ಸಾಕ್ಷ್ಯ ಸಂಗ್ರಹಣೆಗೆ ಮುಂದಾಗಿದ್ದಾರೆ. ಅರುಣ್ ಹೇಳಿಕೆಗಳು ಸಂಪತ್ ರಾಜ್ಗೆ ಮುಳುವಾಗಲಿದೆ ಎನ್ನಲಾಗಿದೆ.
ಅರುಣ್ ಬಂಧನ ಖಂಡಿಸಿ ಆತನ ಸಂಬಂಧಿಕರು ಸ್ಟೇಷನ್ ಎದುರು ಪ್ರತಿಭಟನೆ ನಡೆಸಿದರು. ಕಾರಣ ಇಲ್ಲದೆಯೇ ಅರುಣ್ನನ್ನ ಬಂಧಿಸಿ ಚಿತ್ರಹಿಂಸೆ ಕೊಡುತ್ತಿದ್ದಾರೆ. ಕೂಡಲೇ ಬಿಡುಗಡೆ ಮಾಡುವಂತೆ ಆಕ್ರೋಶ ಹೊರಹಾಕಿದರು.
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದ ಕುರಿತು ಪೊಲೀಸರು ಬಗೆದಷ್ಟು ಸತ್ಯ ಹೊರಗೆ ಬರುತ್ತಿದ್ದು, ಕೆಲ ಆರೋಪಿಗಳು ದೇಶದ್ರೋಹಿಗಳ ಜೊತೆ ಸಂಪರ್ಕದಲ್ಲಿರುವುದು, ಇನ್ನೂ ಕೆಲವರು ದುಷ್ಕೃತ್ಯದಲ್ಲಿ ತೊಡಗಿರುವ ಕುರತ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಇದೀಗ ಮತ್ತೊಂದು ಭಯಾನಕ ಸತ್ಯ ಹೊರ ಬಿದ್ದಿದ್ದು, ಡಿಜೆ ಹಳ್ಳಿ ಗಲಭೆ ಪ್ರಕರಣ ಪುಂಡರಿಗೆ ಚರ್ಚ್ ಸ್ಟ್ರೀಟ್ ಬಾಂಬ್ ಬ್ಲಾಸ್ಟ್ ಲಿಂಕ್ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ಚರ್ಚ್ ಸ್ಟ್ರೀಟ್ ಬಾಂಬ್ ಬ್ಲಾಸ್ಟ್ ರುವಾರಿಗೆ ಪುಂಡರು ನಿಕಟ ಸಂಬಂಧಿಗಳು ಎಂಬ ಮಾಹಿತಿ ಲಭ್ಯವಾಗಿದೆ.
ಗಲಭೆ ಪ್ರಕರಣದಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿ ಅಫ್ರೀದಿ ಸಹೀದರ ಮೊಹಮದ್ನ್ನು ಪೊಲೀಸರು ಬಂಧಿಸಿದ್ದು, ಅಫ್ರೀದಿಯು ಸಿಯಾವುದ್ದೀನ್, ಮೊಹಮದ್ ಸೇರಿದಂತೆ ಐವರು ಆರೋಪಿಗಳ ಜೊತೆ ಒಡನಾಟ ಹೊಂದಿದ್ದ ಎನ್ನಲಾಗಿದೆ. ಸದ್ಯ ಬಾಂಬ್ ಬ್ಲಾಸ್ಟ್ ಲಿಂಕ್ ಬಗ್ಗೆ ಸಿಸಿಬಿಯಿಂದ ತನಿಖೆ ಮುಂದುವರಿದಿದ್ದು, ಎಲ್ಲ ರೀತಿಯಿಂದಲೂ ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಹಿಂದಿನ ಸತ್ಯವನ್ನು ಬಾಯ್ಬಿಡಿಸುತ್ತಿದ್ದಾರೆ.
2014ರ ಡಿಸೆಂಬರ್ ನಲ್ಲಿ ಚರ್ಚ್ ಸ್ಟ್ರೀಟ್ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಇದು ಸಿಲಿಕಾನ್ ಸಿಟಿ ಜನರನ್ನು ಬೆಚ್ಚಿ ಬೀಳಿಸಿತ್ತು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಹಲವರನ್ನು ಬಂಧಿಸಿದ್ದರು. ಇದೀಗ ಪ್ರಮುಖ ಆರೋಪಿಯೊಂದಿಗೆ ಈತ ಸಂಪರ್ಕ ಹೊಂದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ. ಬಾಂಬ್ ಬ್ಲಾಸ್ಟ್ ರುವಾರಿ ಸಾರಾಯಿಪಾಳ್ಯದ ಹುಡುಗಿಯನ್ನು ಮದುವೆಯಾಗಿದ್ದ. ಬಳಿಕ ಪರಪ್ಪನ ಅಹ್ರಹಾರದಲ್ಲಿ ಎನ್ಐಎ ಆತನನ್ನು ಬಂಧಿಸಿತ್ತು.
ಬೆಂಗಳೂರು: ನಗರದ ಡಿ.ಜೆ ಹಳ್ಳಿ ಹಾಗೂ ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ನೈಜ ಅಪರಾಧಿಗಳನ್ನು ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಗಂಭೀರ ಆರೋಪ ಮಾಡಿದ್ದಾರೆ.
ರಾಜಕೀಯದ ಕೆಸರೆರಚಾಟ ಮಾಡುವ ಬದಲು ಸಮಾಜಘಾತುಕ ಶಕ್ತಿ ಯಾರೇ ಇರಲಿ ಅವರನ್ನ ಮಟ್ಟ ಹಾಕಿ ನಿಮ್ಮ ಬದ್ದತೆಯನ್ನ ತೋರಿಸಿ.ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಧಿಕಾರದಲ್ಲಿ ಕುಳಿತು ಇನ್ನೊಬ್ಬರ ಮೇಲೆ ಬೆರಳು ತೋರಿಸುವುದೇ ನಿಮ್ಮ ಸ್ವರ್ಣಯುಗವೇ? ಬಂಧಿಸಿದ ನಿರಪರಾಧಿಗಳಿಗೆ ಮುಕ್ತಿ ನೀಡಿ,ನೈಜ ಅಪರಾಧಿಯನ್ನ ಶಿಕ್ಷಿಸಿ,ಸಮಾಜವನ್ನ ರಕ್ಷಿಸಿ.(4)
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರದ ಭಯ ಇದ್ರೆ ಪುಂಡರು ಈ ರೀತಿ ವರ್ತಿಸುತ್ತಿರಲಿಲ್ಲ. ಇದು ಸರ್ಕಾರದ ವೈಫಲ್ಯವಲ್ಲದೆ ಮತ್ತೇನು? ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರ ಅಮಾಯಕರನ್ನ ಬಂಧಿಸುತ್ತಿದೆ. ಈ ಮೂಲಕ ನೈಜ ಅಪರಾಧಿಗಳಿಗೆ ರಕ್ಷಣೆ ನೀಡ್ತಾ ಇದೆ ಎಂದರು.
ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಬೀಳೋ ತನಕ, ಪೊಲೀಸ್ ಠಾಣೆ ಸುಟ್ಟು ಬೂದಿಯಾಗೋ ತನಕ, ಪೊಲೀಸರು ಏನೂ ಮಾಡಿಲ್ಲ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯಾದ ಪ್ರಕರಣದ ಕಥೆ ಏನಾಯ್ತು ಗೊತ್ತಿಲ್ಲ. ಮಂಗಳೂರು ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿರಿ, ಹಾಗಿದ್ದರೆ ಒಬ್ಬ ಕೇರಳಿಗರನ್ನ ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಬೀಳೋ ತನಕ,ಪೋಲಿಸ್ ಠಾಣೆ ಸುಟ್ಟು ಬೂದಿಯಾಗೋ ತನಕ, ಪೋಲಿಸರು ಏನೂ ಮಾಡಿಲ್ಲ, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯಾದ ಪ್ರಕರಣದ ಕಥೆ ಏನಾಯ್ತು ಗೊತ್ತಿಲ್ಲ,ಮಂಗಳೂರು ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿರಿ,ಹಾಗಿದ್ದರೆ ಒಬ್ಬ ಕೇರಳಿಗರನ್ನ ಏಕೆ ಬಂದಿಸಿಲ್ಲ?(2)@CMofKarnataka@BSYBJP@BSBommai
ರಾಜಕೀಯದ ಕೆಸರೆರಚಾಟ ಮಾಡುವ ಬದಲು ಸಮಾಜಘಾತುಕ ಶಕ್ತಿ ಯಾರೇ ಇರಲಿ ಅವರನ್ನ ಮಟ್ಟ ಹಾಕಿ ನಿಮ್ಮ ಬದ್ಧತೆಯನ್ನ ತೋರಿಸಿ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಧಿಕಾರದಲ್ಲಿ ಕುಳಿತು ಇನ್ನೊಬ್ಬರ ಮೇಲೆ ಬೆರಳು ತೋರಿಸುವುದೇ ನಿಮ್ಮ ಸ್ವರ್ಣಯುಗವೇ? ಬಂಧಿಸಿದ ನಿರಪರಾಧಿಗಳಿಗೆ ಮುಕ್ತಿ ನೀಡಿ, ನೈಜ ಅಪರಾಧಿಯನ್ನ ಶಿಕ್ಷಿಸಿ, ಸಮಾಜವನ್ನ ರಕ್ಷಿಸಿ ಎಂದು ತಿಳಿಸಿದ್ದಾರೆ.
ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ತಡೆಯಲಾಗಲಿಲ್ಲ. ಆರೋಪಗಳಿನ್ನೂ ಪತ್ತೆ ಹಚ್ಚಲಾಗಲಿಲ್ಲ. ಪ್ರವಾದಿಗೆ ನಿಂದಿಸಿದ ವ್ಯಕ್ತಿ ಪಕ್ಕದಲ್ಲೇ ಇದ್ದರೂ ಬಂಧಿಸಲಿಲ್ಲ ಎಂದು ಕಿಡಿಕಾರಿದ್ದಾರೆ.
– 13 ವಿಚಾರಗಳನ್ನು ಪ್ರಶ್ನಿಸಿ ಸಿಎಂಗೆ ಸಿದ್ದರಾಮಯ್ಯ ಪತ್ರ – ಗಲಭೆಗೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿರುವುದು ಯಾಕೆ?
ಬೆಂಗಳೂರು: ಕೆ.ಜೆ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಗುಪ್ತಚರ ಇಲಾಖೆಯ ವೈಫಲ್ಯವೂ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಬಿಟ್ಟು ವಿರೋಧ ಪಕ್ಷವಾದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.
ಪತ್ರದಲ್ಲಿ ಏನಿದೆ? 1. ಡಿ.ಜೆ.ಹಳ್ಳಿಯ ಘಟನೆಯ ನೈತಿಕ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು. ಆಡಳಿತ ಕೇಂದ್ರದ ಕೈಯಳತೆ ದೂರದಲ್ಲಿರುವ ಈ ಪ್ರದೇಶದಲ್ಲಾದ ಅನಾಹುತವನ್ನು ನಿಭಾಯಿಸಲು ಆಗಲಿಲ್ಲವೆಂದರೆ ಸರ್ಕಾರ ಯಾಕಿರಬೇಕು. ಪ್ರವಾದಿಯವರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ಕುರಿತು ದೂರು ಬಂದ ತಕ್ಷಣ ಪೊಲೀಸರು ಕ್ರಮ ಕೈಗೊಂಡಿದ್ದರೆ ಈ ಅನಾಹುತಕ್ಕೆ ಅವಕಾಶ ಇರುತ್ತಿರಲಿಲ್ಲ.
2. ಪ್ರವಾದಿಯವರ ಬಗೆಗೆ ಕೆಟ್ಟ ಚಿತ್ರ ರಚಿಸಿ ನವೀನ್ ಎಂಬ ಹುಡುಗನಿಗೆ ಕೊಟ್ಟವರಾರು? ಆ ಚಿತ್ರಗಳು ಸೋಷಿಯಲ್ ಮೀಡಿಯಾಗಳಿಗೆ ಬಿತ್ತರಿಸಲು ಕಾರಣರಾದವರು ಯಾರ್ಯಾರು ? ಇದರ ಹಿಂದೆ ದೊಡ್ಡ ಪಿತೂರಿ ಇದ್ದಂತಿದೆ. ಈ ಕುರಿತು ಸಮರ್ಪಕವಾದ ತನಿಖೆಯಾಗಬೇಕು.
3. ಪ್ರಾಮಾಣಿಕರು, ದಕ್ಷರು ಅನ್ನಿಸಿಕೊಂಡ ಹಲವು ಪೊಲೀಸ್ ಅಧಿಕಾರಿಗಳನ್ನು ‘ನಾನ್ ಎಕ್ಸಿಕ್ಯೂಟಿವ್’ ಹುದ್ದೆಗಳಲ್ಲಿ ಕೂರಿಸಿದ್ದೀರಿ. ಭ್ರಷ್ಟರು, ಅಸೂಕ್ಷ್ಮರು ಆದ ಹಲವರಿಗೆ ಆಯಕಟ್ಟಿನ ಹುದ್ದೆಗಳನ್ನು ನೀಡಲಾಗಿದೆ. ಹೀಗಾಗಿ ಸೂಕ್ಮವಾದ ಇಂಥ ಘಟನೆಗಳನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ.
4. ಘಟನೆ ನಡೆದಿರುವುದು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ (ಈ ಹಿಂದೆಯೂ ಈ ಪ್ರದೇಶಗಳಲ್ಲಿ ಸಮಸ್ಯೆಗಳಾಗಿದ್ದವು) ಮತ್ತು ಘಟನೆಗೆ ಕಾರಣವಾದ ವಿಷಯವೂ ಅತ್ಯಂತ ಸೂಕ್ಷ್ಮವಾಗಿತ್ತು. ಇದನ್ನು ನಿರ್ಲಕ್ಷಿಸಲು ಕಾರಣವೇನು?
5. ಶಾಸಕರ ಮನೆಯನ್ನು, ಪೊಲೀಸ್ ಠಾಣೆಯನ್ನು ರಕ್ಷಿಸಿಕೊಳ್ಳಲಾಗದ ಸರ್ಕಾರದಿಂದ ರಾಜ್ಯದ ಜನರಿಗೆ ಯಾವ ರಕ್ಷಣೆಯನ್ನು ನೀಡಲು ಸಾಧ್ಯ? ಇದರ ಜವಾಬ್ದಾರಿಯನ್ನು ಸರ್ಕಾರ ಹೊರುವುದನ್ನು ಬಿಟ್ಟು ತಲೆಕೆಟ್ಟ. ಹುಡುಗರ ಮೇಲೆ ಹೊರಿಸಿ ತಮ್ಮ ಸರ್ಕಾರ ಅತ್ಯಂತ ಸಮರ್ಥವಾಗಿದೆ ಎಂದು ಹೇಳುವುದು ಅತ್ಯಂತ ದುಷ್ಟ ಮತ್ತು ನಿರ್ಲಜ್ಜ ರಾಜಕಾರಣದ ಪರಮಾವಧಿಯ ನಿಲುವು.
6. ಗೃಹ ಸಚಿವರನ್ನು ಭೇಟಿಯಾದ ಕರಾವಳಿಯ ಕೋಮುವಾದಿಯೊಬ್ಬನಿಗೆ, ಸಚಿವರು ನಿಮ್ಮ ಮೇಲಿನ ಎಲ್ಲಾ ಪ್ರಕರಣ ವಾಪಸ್ ತೆಗೆದುಕೊಳ್ಳುತ್ತೇವೆಂದು ಹೇಳುವ ಮಾತುಕತೆಯೊಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದು ನಿಜವೇ ಆಗಿದ್ದರೆ ಸಮಾಜದ ಸ್ವಾಸ್ಥ್ಯವನ್ನು ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೆ?
7. ನೀವು ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಜನರನ್ನು ಕಮ್ಯುನಲ್ ಗೂಂಡಾಗಳೆಂದು ಗುರುತಿಸಿದ್ದೀರಿ? ಎಷ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ ಗಡಿಪಾರು ಮಾಡಿದ್ದೀರಿ? ಈ ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸುವ ತಾಕತ್ತನ್ನು ನೀವು ಪ್ರದರ್ಶಿಸಲು ಸಾಧ್ಯವೆ? ನಿಮ್ಮ ಕಡತದಲ್ಲಿನ ದಾಖಲೆಗಳ ಪ್ರಕಾರ ನಿಮ್ಮದೇ ಪಕ್ಷದ ಅಂಗ ಸಂಘಟನೆಗಳು ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿ ಅಸಂಖ್ಯಾತ ಪ್ರಕರಣಗಳಿವೆ. ಈ ಎಲ್ಲರ ಮೇಲೆಯೂ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಿ ನಾವು ಈ ವಿಷಯದಲ್ಲಿ ನಿಮ್ಮ ಜೊತೆ ಇರುತ್ತೇವೆ.
8. ಹಿಂದೆ ಮುಂದೆ ನೋಡದೆ ಜನರನ್ನು ಧರ್ಮದ ಆಧಾರದ ಮೇಲೆ ದೊಂಬಿಯೆಬ್ಬಿಸಲು ಪ್ರಯತ್ನಿಸಿದ ಶೃಂಗೇರಿಯ ಜೀವರಾಜ್ ಅವರ ಮೇಲೂ ಪ್ರಕರಣ ದಾಖಲಿಸಿ ಕ್ರಮವಹಿಸಿ. ಶೃಂಗೇರಿಯಲ್ಲಿ ಆರೋಪಿ ಪತ್ತೆಯಾಗುವ ಮೊದಲೇ ಅಪರಾಧಿಗಳು ಯಾರು ಎಂದು ಬಿ.ಜೆ.ಪಿ. ತೀರ್ಮಾನಿಸಿತ್ತು. ಬಡ ತರಕಾರಿ ವ್ಯಾಪಾರಿಗಳು/ಬೀದಿ ಬದಿಯ ವ್ಯಾಪಾರಿಗಳೇ ಈ ಕೃತ್ಯ ಮಾಡಿರುವುದೆಂದು ಅವರ ತಲೆಗೆ ಅಪರಾಧವನ್ನು ಕಟ್ಟಲಾಗಿತ್ತು. ಮಸೀದಿಯಲ್ಲಿ ಸಿ.ಸಿ.ಟಿವಿಗಳು ಇರದಿದ್ದರೆ ಬಜರಂಗದಳದ ಮಾಜಿ ಕಾರ್ಯಕರ್ತನ ಬದಲಿಗೆ ಇನ್ಯಾರೋ ಇರುತ್ತಿದ್ದರು.
9. ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಮಾಡಿದವರಿಂದ ನಷ್ಟ ವಸೂಲು ಮಾಡುವುದು ಒಳ್ಳೆಯ ವಿಚಾರವೇ. ಆದರೆ ಇದು ಒಂದು ಗುಂಪಿಗೆ, ಒಂದು ಘಟನೆಗೆ ಮಾತ್ರ ಸಂಬಂಧಿಸಿರಬಾರದು. ಹಾಗೆ ಮಾಡುವುದಾದರೆ ಪೂರ್ವಾನ್ವಯಗೊಳಿಸಬೇಕು. ಕಳೆದ ಮೂವತ್ತು ವರ್ಷಗಳಿಂದೀಚೆಗೆ ಕಮ್ಯುನಲ್ ಮತ್ತಿತರ ಗಲಭೆಗಳಲ್ಲಿ ಮಾಡಿರುವ ಹಾನಿಯ ನಷ್ಟವನ್ನು ಸಂಬಂಧಿಸಿದವರಿಂದ ವಸೂಲಿ ಮಾಡಬೇಕೆಂದು ಆಗ್ರಹಿಸುತ್ತೇನೆ.
10. ಆಡಳಿತ ಪಕ್ಷವೊಂದು ಸತ್ಯ ಶೋಧನಾ ತಂಡ ರಚಿಸುವುದು ಪ್ರಜಾಪ್ರಭುತ್ವದ ಭೀಕರ ಅಪಹಾಸ್ಯದಂತೆ ಕಾಣುತ್ತಿದೆ. ಆಡಳಿತ ಪಕ್ಷವೊಂದು ಸತ್ಯ ಶೋಧನೆ ಮಾಡುತ್ತೇನೆಂದು ಹೊರಟರೆ ಅದು ತನಿಖೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
11. ನಿಮ್ಮ ಸರ್ಕಾರಕ್ಕೆ ಪೊಲೀಸರ ಮೇಲೆ ನಂಬಿಕೆ ಇಲ್ಲವೆ? ನಿಮ್ಮ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಅವರಿಗೆ ಜನರ ತೆರಿಗೆಯ ಹಣದಲ್ಲಿ ಸಂಬಳ, ಸಾರಿಗೆ ಮುಂತಾದ ಸವಲತ್ತುಗಳನ್ನು ಯಾಕೆ ಕೊಡತ್ತಿದ್ದೀರಿ? ಮುಲಾಜಿಲ್ಲದೆ ಅವರನ್ನು ಮನೆಗೆ ಕಳಿಸಿ.
12. ಘಟನೆಯಲ್ಲಿ ಎಸ್ಡಿಪಿಐ ಪಾತ್ರ ಇದೆ ಎಂದು ಹೇಳಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಯಾವ ಸಂಘಟನೆಯೇ ತಪ್ಪು ಮಾಡಿದ್ದರೂ ಸಮರ್ಪಕವಾದ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ.
13. ಈ ಘಟನೆಯ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.
ಬೆಂಗಳೂರು: ನವೀನ್ ನ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಕೇವಲ ನೆಪ ಆಗಿತ್ತು. ಪೋಸ್ಟ್ ನೆಪದಲ್ಲಿ ಮುಸ್ಲಿಂ ಸಮುದಾಯದೊಳಗೆ ಕಿಡಿ ಹತ್ತಿಸಿ ಹಬ್ಬಿಸಿ ಗಲಭೆ ನಡೆಯುವಂತೆ ಸಂಚು ರೂಪಿಸಿಲಾಗಿತ್ತು – ಇದು ಬಿಜೆಪಿ ಶೋಧಿಸಿದ ಸತ್ಯ.
ದೇವರಜೀವನ ಹಳ್ಳಿ ಮತ್ತು ಕಾಡಗೊಂಡನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧ ರಾಜ್ಯ ಬಿಜೆಪಿ ಅರವಿಂದ ಲಿಂಬಾವಳಿ, ಮಾಲೀಕಯ್ಯ ಗುತ್ತೇದಾರ್, ಎಂ ಶಂಕರಪ್ಪ, ಪಿ ಸಿ ಮೋಹನ್, ಎ ನಾರಾಯಣಸ್ವಾಮಿ, ಛಲವಾದಿ ನಾರಾಯಣಸ್ವಾಮಿ ಅವರಿದ್ದ ಸತ್ಯಶೋಧನಾ ಸಮಿತಿಯನ್ನು ನೇಮಿಸಿತ್ತು.
ಮೂರು ದಿನಗಳ ಹಿಂದೆ ರಚನೆ ಆಗಿದ್ದ ಸಮಿತಿ ಈಗ ಮಾಹಿತಿಗಳನ್ನು ಕಲೆ ಹಾಕಿ ವರದಿ ತಯಾರಿಸಿದ್ದು ಇಂದು ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಲಿದೆ.
ಬಿಜೆಪಿಯ ಸತ್ಯ ಶೋಧನೆ ಏನು?
ಪ್ರಕರಣದಲ್ಲಿ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರೇ ಟಾರ್ಗೆಟ್ ಆಗಿದ್ದರು. ಕಾಂಗ್ರೆಸ್ನಲ್ಲಿದ್ದರೂ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬಂಟಿಯಾಗಿದ್ದರು. ಕ್ಷೇತ್ರದಲ್ಲಿ ಅಖಂಡ ಪರ ಯಾವ ಕಾಂಗ್ರೆಸ್ ಮುಖಂಡರು, ನಾಯಕರು ಇರಲಿಲ್ಲ.
ಮುಂಬರುವ ಬಿಬಿಎಂಪಿ ಚುನಾವಣೆ ಮತ್ತು ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸ ಮೂರ್ತಿಗೆ ಬೆಂಬಲಿಸಬಾರದು, ಟಿಕೆಟ್ ಸಿಗದಂತೆ ನೋಡಿಕೊಳ್ಳಬೇಕು. ಟಿಕೆಟ್ ಸಿಕ್ಕಿದ್ದರೂ ಸೋಲಿಸಬೇಕು ಎಂಬ ಉದ್ದೇಶ ಇತ್ತು.
ನವೀನ್ ನ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಕೇವಲ ನೆಪ ಆಗಿತ್ತು. ಪೋಸ್ಟ್ ನೆಪದಲ್ಲಿ ಮುಸ್ಲಿಂ ಸಮುದಾಯದೊಳಗೆ ಕಿಡಿ ಹತ್ತಿಸಿ ಹಬ್ಬಿಸಿ ಗಲಭೆ ನಡೆಯುವಂತೆ ಸಂಚು ರೂಪಿಸಲಾಗಿತ್ತು. ಪ್ರತಿಭಟನೆ ಉದ್ದೇಶ ಇದ್ದ ಗುಂಪಿಗೆ ಅಖಂಡ ಮೇಲೆ ದಾಳಿ ಮಾಡುವಂತೆ ಪ್ರಚೋದಿಸಲಾಗಿತ್ತು.
ಗಲಭೆಗೆ ಕಾಂಗ್ರೆಸ್ ಸ್ಥಳೀಯ ಮುಖಂಡರು, ಲೋಕಲ್ ಪಾಲಿಟಿಕ್ಸ್, ಎಸ್ಡಿಪಿಐ ಕಾರಣ. ಇದು ದಲಿತ ಶಾಸಕರೊಬ್ಬರ ವಿರುದ್ಧ ನಡೆದ ವ್ಯವಸ್ಥಿತ ರಾಜಕೀಯ ಹುನ್ನಾರ.
ಬೆಂಗಳೂರು: ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಸಂಬಂಧ ಕ್ಲೈಮ್ ಕಮಿಷನ್ ನೇಮಕಕ್ಕೆ ಹೈಕೋರ್ಟಿಗೆ ಮನವಿ ಮಾಡಿಕೊಳ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಹೈಕೋರ್ಟಿಗೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಸಂಬಂಧ ಕ್ಲೈಮ್ ಕಮಿಷನ್ ನೇಮಕ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಈ ಸಂಬಂಧ ಪ್ರಕ್ರಿಯೆ ಶುರು ಮಾಡಿದ್ದೇವೆ. ಕ್ಲೈಮ್ ಕಮಿಷನ್ ನೇಮಕವಾದರೆ ಅವರಿಗೆ ಎಲ್ಲ ಸಹಕಾರ ನೀಡುತ್ತೇವೆ. ಕಮಿಷನ್ ಮೂಲಕ ಘಟನೆಯಲ್ಲಿ ಉಂಟಾದ ಆಸ್ತಿಗಳ ನಷ್ಟ ಮೌಲ್ಯ ಪರಿಶೀಲಿಸಲಾಗುತ್ತೆ. ಆ ಬಳಿಕ ಆರೋಪಿಗಳಿಂದ ಎಷ್ಟು ದಂಡ ವಸೂಲು ಮಾಡಬೇಕೆಂಬ ಪ್ರಕ್ರಿಯೆ ಆರಂಭವಾಗುತ್ತೆ ಎಂದು ವಿವರಿಸಿದರು.
ಇದೇ ವೇಳೆ ಎನ್ಐಎ ಪ್ರಕಟಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ರಾಮಯ್ಯ ಕಾಲೇಜಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಿಂದ ಒಬ್ಬ ವೈದ್ಯನ ಬಂಧನ ಆಗಿದೆ. ಈ ಬಗ್ಗೆ ಈಗಾಗಲೇ ಎನ್ಐಎ ಪ್ರಕಟಣೆ ಹೊರಡಿಸಿದೆ. ಈಗಾಗಲೇ ಎರಡು ಉಗ್ರ ಗುಂಪುಗಳ ಲಿಂಕ್ ಇರುವುದು ಬಹಿರಂಗ ಪಡಿಸಲಾಗಿದೆ. ದೇಶದ ವಿರುದ್ಧ ಕೆಲಸ ಮಾಡುತ್ತಿರುವ ಶಕ್ತಿಗಳ ವಿರುದ್ಧ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ. ಎನ್ಐಎ ಜೊತೆ ನಮ್ಮ ಐಎಸ್ಡಿ ನಿರಂತರ ಸಂಪರ್ಕದಲ್ಲಿದ್ದಾರೆ. ನಾವು ಎನ್ಐಎ ಗೆ ಸಹಕಾರ ನೀಡುತ್ತಿದ್ದೇವೆ ಎಂದರು.
ಇದೇ ವೇಳೆ ಸಿಎಂ ಬಿಎಸ್ವೈ ಪದಚ್ಯುತಿಗೆ ಆರ್.ಎಸ್.ಎಸ್ ಹತ್ತಿರದ ನಾಯಕರಿಂದ ಸಂಚು ಎಂಬ ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷದಲ್ಲೇ ಒಳಗಿನ ವಾತಾವರಣ ಸೂಕ್ಷ್ಮವಾಗಿದೆ. ಆದ್ದರಿಂದ ಅವರು ಬಿಜೆಪಿ ಬಗ್ಗೆ ಅವರು ಮಾತಾಡೋದು ಬೇಡ. ಬಿಎಸ್ವೈ ಅವರು ಸಂಘದ ಹಿನ್ನೆಲೆಯಿಂದ ಬಂದವರು. ಸಂಘ ಮತ್ತು ಬಿಎಸ್ವೈ ಎರಡೂ ಒಂದೇ. ನಮ್ಮಲ್ಲಿ ವ್ಯತ್ಯಾಸಗಳು ಯಾವುದೂ ಇಲ್ಲ. ವ್ಯತ್ಯಾಸಗಳಿದ್ದರೆ ಅದು ಕಾಂಗ್ರೆಸ್ನಲ್ಲಿ ಮಾತ್ರ ಎಂದು ತಿರುಗೇಟು ನೀಡಿದರು.
-ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?
-ಬಾದಾಮಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳಿದ ಮಾಜಿ ಸಿಎಂ
ಬೆಂಗಳೂರು: ಉತ್ತರ ಕರ್ನಾಟಕದ ಜನ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ರೆ, ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರೊಟ್ಟಿ ಬಡಿಯುತ್ತಾ ಕುಳಿತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ.
ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ. ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ? ಸಿಎಂ ಯಡಿಯೂರಪ್ಪನವರೇ ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಎಂದು ಆಗ್ರಹಿಸಿದ್ದಾರೆ.
ಕ್ಷೇತ್ರದ ಜನರಲ್ಲಿ ಕ್ಷಮೆ: ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ವಿಚಾರಣೆ ಸಂಬಂಧ ಪ್ರತಿಕ್ರಿಯಿಸಿ, ಉದ್ದೇಶಪೂರ್ವಕವಾಗಿ ನಮ್ಮ ನಾಯಕರ ವಿಚಾರಣೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಾತ್ರ ಇದೇ ಎಂದು ಸಾಬೀತು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ಹುಳುಕು ಮುಚ್ಚಿಕೊಳ್ಳಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ಕಾಂಗ್ರೆಸ್ ಮೇಲೆ ತಪ್ಪು ಅಭಿಪ್ರಾಯ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಾನು ಪೊಲೀಸ್ ಮೂಲಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ನಮ್ಮ ನಾಯಕರದ್ದು ಯಾವುದೇ ಪಾತ್ರ ಈ ಪ್ರಕರಣದಲ್ಲಿಲ್ಲ ಎಂದರು.
ನನಗಿರುವ ಮಾಹಿತಿ ಪ್ರಕಾರ, ನವೀನ್ ಬಿಜೆಪಿ ಕಾರ್ಯಕರ್ತ. ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮುಖ್ಯ, ಈ ಅಂಶವನ್ನೇ ನವೀನ್ ಹಂಚಿಕೊಂಡಿದ್ದಾರೆ. ನನಗೆ ಶುಭಾಶಯ ಕೋರಿದಾಕ್ಷಣ ಕಾಂಗ್ರೆಸ್ ಕಾರ್ಯಕರ್ತ ಅಲ್ಲ. ನವೀನ್ ಮೇಲೆ ಆರೋಪ ಬಂದಾಗ ಯಾಕೆ ಬಂಧಿಸಿಲ್ಲ ಎಂದು ಪೊಲೀಸರನ್ನು ಕೇಳಿ. ಶಾಸಕರಿಗೆ ರಕ್ಷಣೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಲ್ಲ. ಬಿಜೆಪಿ, ದಲಿತ ಹೆಸರಿನ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ಎರಡನೇ ಹಂತದಲ್ಲಿ ಆಪರೇಷನ್ ಕಮಲ ವಿಚಾರದ ಸಂಬಂಧ ಪ್ರತಿಕ್ರಿಯಿಸಿ, ಬಿಜೆಪಿ ಮತ್ತೊಂದು ಆಪರೇಷನ್ ಮಾಡಿದ್ರೆ ಸ್ವಾಗತ. ಎಷ್ಟು ಜನರನ್ನು ಆಪರೇಷನ್ ಮಾಡ್ತಾರೆ ಮಾಡಲಿ. ಅವರು ಎಲ್ಲ ಶಾಸಕರ ಸಂಪರ್ಕದಲ್ಲಿದ್ದಾರೆ. ನನ್ನನೂ ಸೇರಿದಂತೆ 224 ಶಾಸಕರ ಸಂಪರ್ಕದಲ್ಲಿದ್ದಾರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.
ಧಾರವಾಡ: ಬೆಂಗಳೂರು ಗಲಾಟೆಯ ಆರೋಪಿಯೋರ್ವನಿಗೆ ಐಸಿಸ್ ನಂಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಈ ಸಂಬಂಧ ಪತ್ರಿಕ್ರಿಯೆ ನೀಡಿರುವ ಅವರು, ಬೆಂಗಳೂರು ಗಲಭೆಯ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇರುವುದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ. ಈ ರೀತಿಯ ಗಲಾಟೆಯ ಸಾಕಷ್ಟು ಪ್ರಕ್ರಿಯೆಗಳು ನಮ್ಮ ಕರ್ನಾಟಕದಲ್ಲಿ ಆಗಿವೆ. ಈಗ ಅದೆನ್ನೆಲ್ಲವನ್ನೂ ಶೋಧನೆ ಮಾಡಬೇಕು ಎಂದರು.
ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ ಮಾತ್ರವೇ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಜಾಗೃತ ಆಗುತ್ತದೆ. ಆದರೆ ನಿತ್ಯ 24 ಗಂಟೆಯೂ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಕಣ್ಣು, ಕಿವಿ ತೆರೆದು ಕೆಲಸ ಮಾಡಬೇಕಿದೆ. ಇಂಥಹ ಧಂಗೆಕೋರರನ್ನು ಹದ್ದುಬಸ್ತಿನಲ್ಲಿಡಬೇಕಿದೆ. ಇಲ್ಲದೇ ಹೋದಲ್ಲಿ ಮುಂದೆ ಅನಾಹುತಗಳು ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.