Tag: ಬೆಂಗಳೂರು ಚಲೋ

  • ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ

    ಬೆಳಗಾವಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ (Dehli Chalo) ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದಾರೆ.

    ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ (Farmers Association) ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ (Bengaluru Chalo) ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

    ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

    ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

  • ಮತ್ತೆ ಹೆಚ್ಚಾದ ಕಳಸಾ ಬಂಡೂರಿ ಕಿಚ್ಚು – ಸಾವಿರಾರು ರೈತರಿಂದ ಬೆಂಗಳೂರು ಚಲೋ

    ಮತ್ತೆ ಹೆಚ್ಚಾದ ಕಳಸಾ ಬಂಡೂರಿ ಕಿಚ್ಚು – ಸಾವಿರಾರು ರೈತರಿಂದ ಬೆಂಗಳೂರು ಚಲೋ

    ಹುಬ್ಬಳ್ಳಿ: ಕಳಸಾ ಬಂಡೂರಿ ಹೋರಾಟ ಕಿಚ್ಚು ಮತ್ತೆ ಹೆಚ್ಚಾಗಿದೆ. ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನೂರಾರು ರೈತರು ಬೆಂಗಳೂರು ಚಲೋ ಅಭಿಯಾನ ಆರಂಭಿಸಿದ್ದಾರೆ.

    ಕಳಸಾ ಬಂಡೂರಿ ಅನುಷ್ಠಾನಕ್ಕಾಗಿ ಗೆಜೆಟೆಡ್ ನೋಟಿಫಿಕೇಶನ್ ಹೊರಡಿಸುವಂತೆ ಆಗ್ರಹಿಸಿ ಕಳೆದ ಒಂದು ತಿಂಗಳು ಪತ್ರ ಚಳುವಳಿ ಆರಂಭಿಸಿದ್ದ ರೈತರು ಹೋರಾಟಗಾರರು ಇದೀಗ ರಾಜಭವನ ಚಲೋ ಹೋರಾಟ ಆರಂಭಿಸಿದ್ದಾರೆ.

    ನಾಳೆ ಬೆಳಿಗ್ಗೆ ರಾಜಭವನಕ್ಕೆ ತೆರಳಿ ನೂರಾರು ರೈತರು ಹೋರಾಟಗಾರರು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತ ಹೋರಾಟಗಾರ ವೀರೇಶ ಸೊಬರದಮಠ ನೇತೃತ್ವದಲ್ಲಿ ಬೆಂಗಳೂರು ಚಲೋ ಆರಂಭಗೊಂಡಿದೆ.

    ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ರೈಲಿನ ಮೂಲಕ ಬೆಂಗಳೂರು ಚಲೋ ಆರಂಭಿಸಿದ ರೈತರು ಗುರುವಾರ ರಾಜ್ಯಪಾಲರ ಕಚೇರಿಗೆ ಹೋಗಿ ಮನವಿ ಸಲ್ಲಿಸುವ ಮೂಲಕ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಲಿದ್ದಾರೆ.

  • ಇಂದು, ನಾಳೆ ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ

    ಇಂದು, ನಾಳೆ ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ

    ಬೆಂಗಳೂರು: ಇಂದು ಮತ್ತು ನಾಳೆ ಅಂದರೆ ಬುಧವಾರ ಸಿಲಿಕಾನ್ ಸಿಟಿಯಲ್ಲಿ ಪ್ರಯಾಣಿಕರಿಗೆ, ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

    ಕರ್ನಾಟಕದಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹಿಸಿ ಸುಮಾರು 2 ಸಾವಿರ ಮಹಿಳೆಯರಿಂದ ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗದ ಕ್ರೀಡಾಂಗಣದಲ್ಲಿ ಜನವರಿ 19ರಂದು ಮಹಿಳೆಯರು ಕಾಲ್ನಡಿಗೆ ಜಾಥಾ ಆರಂಭಿಸಿದ್ದರು. ಇಂದು ಬೆಂಗಳೂರು ನಗರಕ್ಕೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಟ್ರಾಫಿಕ್ ಉಂಟಾಗುವ ಸಾಧ್ಯತೆ ಇದೆ.

    ಪ್ರತಿಭಟನಾ ಮಹಿಳೆಯರು ಇಂದು ರಾತ್ರಿಯಿಡೀ ಕಾಲ್ನಡಿಗೆ ಜಾಥಾ ಮಾಡಲಿದ್ದು, ನೈಸ್‍ರೋಡ್, ಜಾಲಹಳ್ಳಿ, ಗೊರಗುಂಟೆಪಾಳ್ಯ ಹಾಗೂ ಯಶವಂತಪುರ, ಮಾರ್ಗವಾಗಿ ಮಲ್ಲೇಶ್ವರಂ ಗ್ರೌಂಡ್ ನಲ್ಲಿ ರಾತ್ರಿ ಪ್ರತಿಭಟನಾಕಾರರು ತಂಗಲಿದ್ದಾರೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಟನೆಕಾರರು ಕಾಲ್ನಡಿಗೆ ಜಾಥದ ಮೂಲಕ ಬರುವುದರಿಂದ ಬೆಂಗಳೂರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

    ಬುಧವಾರ ಮಲ್ಲೇಶ್ವರಂನಿಂದ ಕಾಲ್ನಡಿಗೆಯಲ್ಲಿ ವಿಧಾನಸೌಧಕ್ಕೆ ಜಾಥಾ ಹೋಗಿ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಈ ಮಾರ್ಗಗಳಲ್ಲಿ ಟ್ರಾಫಿಕ್ ಉಂಟಾಗಲಿದ್ದು, ವಾಹನ ಸವಾರರಿಗೆ ತೊಂದರೆ ಆಗುವ ಸಾದ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ‘ಸುಳ್ಳುಗಾರ’, ‘ಅವಿವೇಕಿ’ ಮುಖ್ಯಮಂತ್ರಿ- ಎಚ್‌ಡಿಕೆ ವಿರುದ್ಧ ಸಿಡಿದೆದ್ದ ರೈತರು

    ‘ಸುಳ್ಳುಗಾರ’, ‘ಅವಿವೇಕಿ’ ಮುಖ್ಯಮಂತ್ರಿ- ಎಚ್‌ಡಿಕೆ ವಿರುದ್ಧ ಸಿಡಿದೆದ್ದ ರೈತರು

    –   ತಾಕತ್ತಿದ್ದರೆ ಸಿಎಂ ಗೋಲಿಬಾರ್ ಮಾಡಿಸಲಿ

    ಬೆಂಗಳೂರು: ಕಬ್ಬು ಬಾಕಿ ಪಾವತಿ, ಸೂಕ್ತ ಬೆಂಬಲ ಬೆಲೆ ನಿಗದಿಗಾಗಿ ಹೋರಾಡ್ತಿರೋ ರೈತರು ಇಂದು ಬೆಂಗಳೂರಿಗೆ ಬಂದಿಳಿದಿದ್ದು, ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಗೂಂಡಾಗಳು, ದರೋಡೆ ಹೇಳಿಕೆ ವಿರುದ್ಧ ಸಿಡಿದೆದ್ದಿದ್ದಾರೆ.

    ವಿಧಾನಸೌಧ ಚಲೋಗಾಗಿ ಬೆಂಗಳೂರಿಗೆ ಬಂದ ಅನ್ನದಾತರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮುಖ್ಯಮಂತ್ರಿಗಳು ಉದ್ಧಟತನದಿಂದ ಮಾತನಾಡಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇವರು ನಾಚಿಗೆಟ್ಟ, ವಚನಭ್ರಷ್ಟ ಹಾಗೂ ನೀಚಗೆಟ್ಟ ಮುಖ್ಯಮಂತ್ರಿ. ಭಾರತದ ಇತಿಹಾಸದಲ್ಲೇ ಕರ್ನಾಟಕ್ಕೆ ಇಂತಹ ಮುಖ್ಯಮಂತ್ರಿ ಬಂದಿರಲಿಲ್ಲ. ಯಾಕಂದ್ರೆ ಇವನು ನಿನ್ನೆ ಆಡಿದ ಮಾತು ಇವತ್ತಿಲ್ಲ. ಇವತ್ತು ಆಡದ ಮಾತು ನಾಳೆಗಿಲ್ಲ. ನಾನು ಸೋಮವಾರ ಬೆಳಗಾವಿಯಲ್ಲಿ ಸಭೆ ಕರೀತಿನಿ ಅಂತ ಹೇಳಿದ್ದಾನೆ. ಆದ್ರೆ ಈ ಅವಿವೇಕಿ ಮುಖ್ಯಮಂತ್ರಿ ಇವತ್ತು ಆಗಲ್ಲ ಮಂಗಳವಾರ ಬರುತ್ತೇನೆ ಅಂತ ಹೇಳುತ್ತಿದ್ದಾನೆ. ಸಾಲ ಕೊಡಬೇಕಾದದ್ದು ಇವರೋ ಅಥವಾ ಕಾರ್ಖಾನೆಗಳೋ ಅಂತ ಸಿಎಂ ಅವರನ್ನು ಏಕವಚನದಲ್ಲಿ ಸಂಭೋದಿಸುವ ಮೂಲಕ ಪ್ರಶ್ನಿಸಿದ್ದಾರೆ.

    ಮತ್ತೊಬ್ಬರು ರೈತ ಮಾತನಾಡಿ, ಮುಖ್ಯಮಂತ್ರಿಯವರು 4 ವರ್ಷದಿಂದ ಎಲ್ಲಿ ಮಲಗಿದ್ದಿಯಾಮ್ಮ ಅಂತ ಕೇಳಿದ್ದಾರಲ್ಲ, ಇದೇ ಮಾತನ್ನು ರೈತರು ಅವರಿಗೆ ಕೇಳಿದ್ರೆ ಅವರಿಗೆ ಏನ್ ಅನಿಸತ್ತೆ?. ಇವನೊಬ್ಬ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದಾನೆ. ನಂಬರ್ ಒನ್ ಸುಳ್ಳುಗಾರ. ಮಣ್ಣಿನ ಮಕ್ಕಳೆಂದೇ ಖ್ಯಾತರಾಗಿದ್ದ ಈ ಅಪ್ಪ-ಮಕ್ಕಳಿಗೆ ಇಂದು ಅದ್ಯಾವುದಿಲ್ಲ. ಅವರ ಅಣ್ಣ ಹೇಳ್ತಾರೆ ದುಡ್ಡನ್ನು ಪ್ರಿಂಟ್ ಮಾಡಕ್ಕಾಗುತ್ತಾ ಅಂತ. ಹಾಗಾದ್ರೆ ನಿಮಗೆ ರಾಮನಗರ ಖರೀದಿ ಮಾಡುವಾಗ ನಿಮ್ಮ ಬಳಿ ಹಣವಿತ್ತಾ? ಇವರಿಗೆ ಸಾಲಮನ್ನಾ ಮಾಡಲು ಆಗಲ್ಲ. ರೈತರ ಪರ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ತಾಕತ್ತಿದ್ದರೆ ಗೋಲಿಬಾರ್ ಮಾಡಿಸಲಿ ಅಂತ ಸವಾಲೆಸೆದ್ರು.

    ವಿವಿಧ ಜಿಲ್ಲೆಗಳಿಂದ ರೈತರು ಸಿಲಿಕಾನ್ ಗೆ ಆಗಮಿಸಿದ್ದು, ಸರ್ಕಾರದ ವಿರುದ್ಧ ಬೆಂಗಳೂರು ಚಲೋ ಆರಂಬಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews