Tag: ಬೆಂಗಳೂರು ಪೊಲೀಸ್ ಕಮಿಷನರ್

  • ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್‌

    ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್‌

    ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ (Reels) ಮಾಡುವ ಪೊಲೀಸರಿಗೆ ಪೊಲೀಸ್ ಕಮಿಷನರ್ (Bengaluru Police Commissioner) ದಯಾನಂದ್ ಬಿಸಿ ಮುಟ್ಟಿಸಿದ್ದಾರೆ.

    ಪೊಲೀಸರು ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಕ್ರೇಜ್ ಹೆಚ್ಚಿಸಿಕೊಂಡಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ ರೀಲ್ಸ್ ಸ್ಟಾರ್‌ಗೆ ಠಕ್ಕರ್ ಕೊಡುವ ಮಟ್ಟಕ್ಕೆ ಪೊಲೀಸರು ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸಮಾಜಿಕ ಜಾಲಾತಾಣದಲ್ಲಿ ಶೇರ್ ಮಾಡಿಕೊಳ್ತಾ ಇದ್ದಾರೆ. ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸ್ಟಾರ್ ಆಗೋ ಪ್ರಯತ್ನದಲ್ಲಿದ್ದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಒಂದೇ ರಾತ್ರಿ 6 ಮನೆ, 2 ದೇವಸ್ಥಾನ ಕಳ್ಳತನ ಮಾಡಿದ ಚಡ್ಡಿಗ್ಯಾಂಗ್

    ಇಲಾಖೆಗೆ ಸಂಬಂಧಪಡದ ವಿಷಯಗಳನ್ನ ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಳ್ಳುವ ಹಾಗಿಲ್ಲ. ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿದ್ರೆ ಅಶಿಸ್ತು ತೋರಿಸುತ್ತೆ. ಹಾಗಾಗಿ ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ದಯಾನಂದ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

    ಆದೇಶ ಉಲ್ಲಂಘನೆ ಮಾಡಿ ಅಶಿಸ್ತು ತೋರಿಸುವ ಸಿಬ್ಬಂದಿ ಮೇಲೆ ನಿಗಾ ಇಡಲು ಸೂಚನೆ ಕೊಡಲಾಗಿದೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳಲ್ಲಿ ಫೋಟೊ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಗೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಳಗಾವಿಗೆ ವಂದೇ ಭಾರತ್ ರೈಲು ವಿಸ್ತರಣೆ ಇಲ್ಲ: ಎಂಬಿ ಪಾಟೀಲ್

    ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಫೋರಮ್‌ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆಯನ್ನ ಕೊಡಲಾಗಿದೆ.

  • ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ

    ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ

    ಬೆಂಗಳೂರು: ಟೌನ್‍ಹಾಲ್ ಎದುರು ನಡೆದ ಸಿಎಎ ಪರ ಪ್ರತಿಭಟನೆ ವೇಳೆ ಸಂಸದ ತೇಜಸ್ವಿಸೂರ್ಯ ಮತ್ತು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಎಸ್‍ಡಿಪಿಐ ಕಾರ್ಯಕರ್ತರು ಸ್ಕೆಚ್ ಹಾಕಿದ್ದರು ಎಂಬ ನಗರ ಪೊಲೀಸ್ ಆಯುಕ್ತರು ಅಘಾತಕಾರಿ ಮಾಹಿತಿ ಇಂದು ಹೊರಹಾಕಿದ್ದಾರೆ. ಆದರೆ ಘಟನೆಗೂ ನಮ್ಮ ಸಂಘಟನೆಗೂ ಸಂಬಂಧವಿಲ್ಲ ಎಂದು ಎಸ್‍ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಇಲಿಯಾಸ್ ಮಹಮ್ಮದ್ ತುಂಬೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ತುಂಬೆ ಅವರು, ಪ್ರಕರಣದಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಬಂಧಿತರಾಗಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ಪಡೆದಿದ್ದೇವೆ. ಆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದು, ಆ ವೇಳೆ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರಲ್ಲ ಎಂಬುವುದು ತಿಳಿದು ಬಂದಿದೆ ಎಂದರು. ಇದನ್ನು ಓದಿ: ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ – ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

    ನಮ್ಮ ಸಂಘಟನೆಯ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಆರೋಪವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಾಬೀತು ಮಾಡದಿದ್ದರೆ ಅವರು ಒಬ್ಬ ಸುಳ್ಳುಗಾರ ಎನಿಸಿಕೊಳ್ಳುತ್ತಾರೆ. ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಅವರ ಅಧಿಕಾರದಲ್ಲಿ ಮೇಲೇರಲು, ಯಾರನ್ನೋ ಮೆಚ್ಚಿಸಲು ಈ ಆರೋಪ ಮಾಡಿದ್ದಾರೆ. ಮಾಧ್ಯಮಗಳು ಕೂಡ ಸುಖಾಸುಮ್ಮನೆ ವರದಿ ಮಾಡುತ್ತಿದೆ. ನಮ್ಮ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದರೆ ಎಂದಾದರೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಕಾನೂನಿನ ಅಡಿ ಶಿಕ್ಷೆ ಕೊಡಿಸುವ ಕಾರ್ಯಕ್ಕೆ ಮುಂದಾಗಬೇಕು. ಕಮಿಷನರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದರೆ ನಾವು ಅವರು ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದರು. ಇದನ್ನು ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

    ಬಿಜೆಪಿ ಪಕ್ಷದವರಿಗೆ ಸೈದ್ಧಾಂತಿಕವಾಗಿ ನಮ್ಮನ್ನು ಎದುರಿಸಲು ಸಾಧ್ಯವಾಗದೇ ಹೀಗೆಲ್ಲಾ ಮಾಡುತ್ತಿದ್ದಾರೆ. ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರು ಎಂದು ಹೇಳಲು ಕಮಿಷನರ್ ಅವರ ಬಳಿ ಯಾವ ಸಾಕ್ಷಿಯಿದೆ ಇದೆ. ಈ ಆರೋಪಿಗಳಿಗೂ ಎಸ್‍ಡಿಪಿಐಗೂ ಸಂಬಂಧವೇ ಇಲ್ಲ. ಆದರೆ ಇದು ಉದ್ದೇಶ ಪೂರ್ವಕವಾಗಿ ಮಾಡಲಾಗುತ್ತಿರುವ ಆರೋಪ. ಭಾಸ್ಕರ್ ರಾವ್ ಜೊತೆರೊಂದಿಗೆ ಯಾರಿದ್ದಾರೆ ಎಂಬುವುದು ನಮಗೂ ಗೊತ್ತಿದೆ ಎಂದರು. ಇದೇ ವೇಳೆ ಮಂಗಳೂರು ಕಮಿಷನರ್ ಹರ್ಷ ವಿರುದ್ಧ ಕ್ರಮ ಕೈಗೊಂಡಿದ್ದಾರಾ ಎಂದು ತುಂಬೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಓದಿ: ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಅನಿಸ್ತಿದೆ: ಸೂಲಿಬೆಲೆ