ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಹಿಂಬದಿಯಿಂದ ಓಮ್ನಿ ಕಾರು ಲಾರಿಗೆ (Omni- Lorry Accident) ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.
ಗುದ್ದಿದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಬೆಂಗಳೂರು – ಮೈಸೂರು ದಶಪಥ ರಸ್ತೆ (Mysuru Bengaluru Expressway) ಅಪಘಾತ ವಿಚಾರ ಸದ್ದು ಮಾಡಿದೆ. ಹೆದ್ದಾರಿಯಲ್ಲಿ ಬೈಕ್ ಹಾಗೂ ತ್ರಿಚಕ್ರ ವಾಹನಗಳ ಓಡಾಟ ನಿಷೇಧ ಮಾಡುವಂತೆ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ನಾಯಕ ಮರಿತಿಬ್ಬೇಗೌಡ (Marithibbe Gowda) ಒತ್ತಾಯಿಸಿದ್ದಾರೆ.
ದಶಪಥ ರಸ್ತೆ ಸಾವಿನ ಹೆದ್ದಾರಿಯಾಗಿದೆ. 6 ತಿಂಗಳಲ್ಲಿ 512 ಅಪಘಾತಗಳಾಗಿವೆ. ಅದರಲ್ಲಿ ಇಲ್ಲಿಯ ವರೆಗೂ 123 ಜನ ಮೃತಪಟ್ಟಿದ್ದಾರೆ. 575 ಜನರಿಗೆ ತೀವ್ರ ಗಾಯಗಳಾಗಿವೆ. ಅಪಘಾತದಲ್ಲಿ ಅನೇಕ ಪ್ರಾಣಿಗಳು ಸತ್ತಿವೆ. ಈ ಹೆದ್ದಾರಿಯಲ್ಲಿ ಫೆನ್ಸಿಂಗ್ ಸರಿಯಾಗಿ ಆಗಿಲ್ಲ. ಮೇಲ್ಸೇತುವೆ ಮಳೆ ಬಂದರೆ ಸೋರುತ್ತಿದೆ. ಹೆದ್ದಾರಿ ಕೆಲಸ ಇನ್ನು 30% ಬಾಕಿ ಇದೆ. ಮದ್ದೂರು ಬಳಿ ಈಗ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ ಸುರಕ್ಷಿತ ಕ್ರಮಗಳು ಸರಿಯಾಗಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ – ಪರಿಷತ್ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ
ಹೆದ್ದಾರಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಇಲ್ಲ. ಅಪಘಾತವಾದರೆ ಅಂಬುಲೆನ್ಸ್ ವ್ಯವಸ್ಥೆ ಇಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಇದರ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದಿದ್ದಾರೆ.
ಇದಕ್ಕೆ ಉತ್ತರ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highways Authority) ವ್ಯಾಪ್ತಿಗೆ ಬರುತ್ತದೆ. ಈಗಾಗಲೇ ಕೇಂದ್ರದ ಮಂತ್ರಿಗಳಿಗೆ ಮನವರಿಕೆ ಮಾಡಲಾಗಿದೆ. ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಪೊಲೀಸ್ ಅಧಿಕಾರಿಗಳು ಸಭೆ ಮಾಡಿ ಕ್ರಮಗಳನ್ನು ಸೂಚಿಸಿದ್ದಾರೆ. ಇದನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದು ಸರಿ ಮಾಡಿಸುವ ಕೆಲಸ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ – ರಾಮಲಿಂಗಾರೆಡ್ಡಿ
ಮಂಡ್ಯ: ಬೆಂಗಳೂರು- ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ (Bengaluru- Mysuru Expressway) ಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ರಾಮನಗರದ ನಂತರ ಇದೀಗ ಮಂಡ್ಯ ವ್ಯಾಪ್ತಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ವೃದ್ಧೆಯೊಬ್ಬರು ಎಡಿಜಿಪಿ ಮುಂದೆ ತಮ್ಮ ಅಳಲುತೋಡಿಕೊಂಡಿದ್ದಾರೆ.
ವೃದ್ಧೆ ಹೇಳಿದ್ದೇನು..?: ಸ್ವಾಮಿ ಇವರು ಮಾಡಿರೋ ಕೆಲಸಕ್ಕೆ ನನ್ನ ಗುಡಿಸಲಿಗೆ ನೀರು ಬರುತ್ತಿದೆ. ಇವರು ಸರ್ವಿಸ್ ರಸ್ತೆಯ ಚರಂಡಿಯನ್ನು ಸರಿಯಾಗಿ ಮಾಡಿಲ್ಲ. ಮಳೆ ನೀರು ಎಲ್ಲಾ ನನ್ನ ಗುಡಿಸಲಿಗೆ ಬರುತ್ತಿದೆ. ನೋಡಿ ಸ್ವಾಮಿ ನೆಮ್ಮದಿಯಾಗಿ ಬದುಕೋಕೆ ಆಗುತ್ತಿಲ್ಲ. ಅವರಿಗೆ ಹೇಳಿ ಸರಿ ಮಾಡಿಸಿ ಸ್ವಾಮಿ ಎಂದು ವೃದ್ಧೆ ಮನವಿ ಮಾಡಿಕೊಂಡಿದ್ದಾರೆ. ವೃದ್ಧೆಯ ಮಾತು ಕೇಳಿರುವ ಎಡಿಜಿಪಿ ಸರಿ ಮಾಡಿಸುವ ಭರವಸೆ ನೀಡಿದರು.
ಇತ್ತ ಜನರು ಕೂಡ ಎಡಿಜಿಪಿ ಅಲೋಕ್ ಕುಮಾರ್ ಗೆ ದೂರು ನೀಡಿದ್ದಾರೆ. ಸರ್ವಿಸ್ ರಸ್ತೆಯನ್ನು ಸಹ ಇವರು ಸರಿಯಾಗಿ ಮಾಡಿಲ್ಲ. ಸರ್ವಿಸ್ ರಸ್ತೆಯಲ್ಲಿ ಚರಂಡಿಗಳು ಆಗಿಲ್ಲ. ಬೇಡದ ಸ್ಥಳದಲ್ಲಿ ರಸ್ತೆ ಹಂಪ್ಸ್ ಹಾಕಿದ್ದಾರೆ. ಬೇಕಾಗಿರುವ ಸ್ಥಳದಲ್ಲಿ ರಸ್ತೆ ಹಮ್ಸ್ ಹಾಕಿಲ್ಲ. ಇದರಿಂದ ಹೆಚ್ಚು ಅಪಘಾತಗಳು ಆಗುತ್ತಿವೆ ಎಂದು ದೂರಿದ್ದಾರೆ.
ಜನರ ದೂರು ಸ್ವೀಕರಿಸಿರುವ ಅಲೋಕ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲ ತಪ್ಪುಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಜನರು ನಿಮ್ಮ ಜೊತೆಗೆ ಪೊಲೀಸ್ ಇಲಾಖೆಗೆ ಬೈಯ್ಯುತ್ತಾರೆ. ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ತಿರುವು ಇರುವ ಕಡೆ ನಾಮ ಫಲಕ ಹಾಕಬೇಕು. ಸರ್ವಿಸ್ ರಸ್ತೆಯಲ್ಲಿ ಲೋಪಗಳನ್ನು ಸರಿಪಡಿಸಿ. ಅಪಘಾತ ಪ್ರಕರಣಗಳನ್ನು ತಡೆಯುವುದು ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಕರ್ತವ್ಯ ಎಂದಿದ್ದಾರೆ.
ಅಪಘಾತ ಪ್ರಕರಣಗಳ ಅಂಕಿ-ಅಂಶ: 2023 ರ ಜನವರಿಯಿಂದ ಜೂನ್ 26 ರ ರಾತ್ರಿ 9 ಗಂಟೆಗೆವರೆಗೆ ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣಗಳ ಅಂಕಿ ಅಂಸಗಳು ಇಂತಿವೆ. ಮಾರಾಣಾಂತಿಕ ಅಪಘಾತ ಪ್ರಕರಣಗಳ ಸಂಖ್ಯೆ- 61, ಮಾರಾಣಾಂತಿಕವಲ್ಲ ಅಪಘಾತ ಪ್ರಕರಣ- 210, ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ- 64, ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ- 335 ಆಗಿದೆ.
ಮಂಡ್ಯ: ಬೆಂಗಳೂರು-ಮೈಸೂರು (Bengaluru-Mysuru) ದಶಪಥ ಹೆದ್ದಾರಿ ರಸ್ತೆ (Dashpath Highway Road) ಕಾಮಗಾರಿ ಅಂತಿಮ ಘಟ್ಟಕ್ಕೆ ತಲುಪಿದ್ದು, ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha)ಮಾಹಿತಿ ನೀಡಿದ್ದಾರೆ.
ಮದ್ದೂರು (Madduru) ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು – ಬಸ್ ಚಾಲಕನಿಗೆ ಸಾರ್ವಜನಿಕರಿಂದ ಥಳಿತ
ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು. ಕೆಲವೆಡೆ ಕೆನಾಲ್, ಅಂಡರ್ ಪಾಸ್ನ ಸಣ್ಣ ಪುಟ್ಟ ಕೆಲಸವಿದೆ, ಆ ಕೆಲಸದ ಬಳಿ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೇಸ್ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕರ್ನಾಟಕಕ್ಕೂ ವಂದೇ ಭಾರತ್ ರೈಲು (Vande Bharat Express) ಬರಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚೆನ್ನೈ-ಬೆಂಗಳೂರು-ಮೈಸೂರು (Bengaluru-Mysuru) ಮಾರ್ಗವಾಗಿ ಸಂಚರಿಸಲಿದೆ.
ದೆಹಲಿ – ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಸರಣಿಯ 4ನೇ ರೈಲಿಗೆ ಪ್ರಧಾನಿ ಮೋದಿ (Narendra Modi) ಹಿಮಾಚಲ ಪ್ರದೇಶದಲ್ಲಿ ಗುರುವಾರ ಚಾಲನೆ ನೀಡಿದ್ದಾರೆ. ಇದರೊಂದಿಗೆ ನವೆಂಬರ್ 10 ರಂದು ವಂದೇ ಭಾರತ್ ಎಕ್ಸ್ಪ್ರೆಸ್ (Express Train) 5ನೇ ರೈಲು ಚಾಲನೆಗೊಳ್ಳಲಿದೆ. ಇದನ್ನೂ ಓದಿ: ದೊಡ್ಮನೆಯಲ್ಲಿ ಮಕ್ಕಳ ದರ್ಬಾರ್: ಮಗುವನ್ನು ತಬ್ಬಿ ಗಳಗಳನೆ ಅತ್ತ ಮಯೂರಿ
The Vande Bharat train flagged off earlier today will improve connectivity and give an opportunity for many more people to explore the natural beauty and spirituality of Himachal Pradesh. pic.twitter.com/GZnqjmLEka
ಪ್ರಧಾನಿ ನರೇಂದ್ರ ಮೋದಿ ಅವರು 4ನೇ ವಂದೇ ಭಾರತ್ ಸೆಮಿ ಹೈಸ್ಪೀಡ್ (Semi HighSpeed Train) ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ಬುಧವಾರ ಹೊರತುಪಡಿಸಿ ವಾರದ ಉಳಿದೆಲ್ಲ ದಿನಗಳಲ್ಲೂ ಸಂಚರಿಸಲಿದೆ. ಮೊದಲ ಮೂರು ರೈಲಿಗಿಂತಲೂ ಗುಣಮಟ್ಟದ್ದಾಗಿದ್ದು, ಉನಾದಿಂದ ದೆಹಲಿಯ ನಡುವೆ 2 ಗಂಟೆ ಪ್ರಯಾಣದ ಸಮಯವನ್ನು ಕಡಿಮೆಗೊಳಿಸಲಿದೆ.
ಫೆಬ್ರುವರಿ 15, 2019ರಂದು ದೇಶದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ನವದೆಹಲಿ – ಕಾನ್ಪುರ – ಅಲಹಾಬಾದ್ – ವಾರಣಾಸಿ ಮಾರ್ಗದಲ್ಲಿ ಈ ರೈಲು ಸಂಚರಿಸುತ್ತಿದೆ. 2ನೇ ರೈಲು ದೆಹಲಿಯಿಂದ ವಾರಣಾಸಿಗೆ ಸಂಚರಿಸುತ್ತಿದೆ. ಇದನ್ನೂ ಓದಿ: ಸ್ವಂತ ಉದ್ಯಮದ ಕನಸು ನನಸು – B ಟೆಕ್ ವಿದ್ಯಾರ್ಥಿನಿ ಈಗ `ಚಾಯ್ವಾಲಿ’
ಏನಿದರ ವಿಶೇಷತೆ?
ಎಲ್ಲಾ ಕೋಚ್ಗಳಲ್ಲೂ ಆಟೋ ಮ್ಯಾಟಿಕ್ ಡೋರ್ಗಳು ಇರುತ್ತವೆ. ಜಿಪಿಎಸ್ (GPS) ಆಧಾರಿತ ಆಡಿಯೋ ವಿಶ್ಯುಯಲ್ಸ್ ಪ್ರಯಾಣಿಕ ಮಾಹಿತಿ ವ್ಯವಸ್ಥೆ ಇರುತ್ತದೆ. ಉಚಿತ ವೈಫೈ ವ್ಯವಸ್ಥೆ ಇರುತ್ತದೆ. ಸೀಟ್ಗಳು ಆರಾಮದಾಯವಾಗಿ ಇರುತ್ತವೆ. ಟಾಯ್ಲೆಟ್ಗಳು ಬಯೋ ವ್ಯಾಕ್ಯೂಮ್ ತಂತ್ರಜ್ಞಾನ ಆಧಾರಿತವಾಗಿರುತ್ತವೆ. ಪ್ರತಿ ಸೀಟ್ಗೂ ಪ್ರತ್ಯೇಕ ಲೈಟ್ ವ್ಯವಸ್ಥೆ ಇರುತ್ತದೆ. ಇದನ್ನೂ ಓದಿ: ರಾಯಚೂರಿನಲ್ಲಿ ರಸ್ತೆ ಮಾರ್ಗವಿಲ್ಲದೆ ತುಂಬು ಗರ್ಭಿಣಿ ಪರದಾಟ
ಪ್ರಯಾಣಿಕರಿಗೆ ಬಿಸಿ-ಬಿಸಿ ಆಹಾರ (Food) ವಿತರಣೆ ಮಾಡಲಾಗುತ್ತದೆ. ಬಿಸಿ ಹಾಗೂ ತಂಪು ಪಾನೀಯಗಳು ಲಭ್ಯವಾಗುತ್ತವೆ. ರೈಲು ಸಾಗುವಾಗ ಪ್ರಯಾಣಿಕರಿಗೆ ಹೆಚ್ಚಿನ ಶಬ್ಧ ಕೇಳಿ ಬರೋದಿಲ್ಲ. ಪ್ರತಿಯೊಂದು ವಂದೇ ಭಾರತ್ ರೈಲಿನಲ್ಲಿ 1,128 ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ವಂದೇ ಭಾರತ್ ರೈಲಿನಲ್ಲಿ ಅಪಘಾತ ತಡೆ ವ್ಯವಸ್ಥೆಗೆ ತುಂಬಾನೇ ಸುಧಾರಿತ ತಂತ್ರಜ್ಞಾನ ಬಳಸಲಾಗಿದೆ.
ಪ್ರತಿ ಕೋಚ್ನಲ್ಲೂ ತುರ್ತು ನಿರ್ಗಮನ ಕಿಟಕಿ, ಸಿಸಿಟಿವಿ (CCTV) ಕ್ಯಾಮರಾ ಇರುತ್ತದೆ. ಅಗ್ನಿ ಅನಾಹುತ ತಡೆಯುವ ವ್ಯವಸ್ಥೆ ಕೂಡಾ ಇದೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರೇ ಎಚ್ಚರವಾಗಿರಿ. ಯಾವ ಸಮಯದಲ್ಲೂ ಬೇಕಾದರೂ ನಿಮ್ಮ ದರೋಡೆ ಆಗಬಹುದು. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಒಂದೇ ವಾರದಲ್ಲಿ ನಡೆದ 2 ದರೋಡೆ ಪ್ರಕರಣಗಳು ನಡೆದಿವೆ.
ಚನ್ನಪಟ್ಟಣದಿಂದ ಕೆಂಗೇರಿ ನಡುವೆ ಬೋಗಿಗಳ ಬಾಗಿಲು ಬಂದ್ ಮಾಡೋ ದರೋಡೆಕೋರರು ಸಿಕ್ಕಷ್ಟು ಬಾಚಿಕೊಂಡು, ಮಾರಕಾಸ್ತ್ರಗಳಿಂದ ಬೆದರಿಸಿ ನಗನಾಣ್ಯ, ಮೊಬೈಲ್ ಎಲ್ಲವನ್ನೂ ಕಿತ್ತುಕೊಂಡು ಟ್ರೈನ್ನ ಚೇನ್ ಎಳೆದು ಇಲ್ಲವೇ ಕ್ರಾಸಿಂಗ್ನಲ್ಲಿ ಜಂಪ್ ಮಾಡಿ ಪರಾರಿಯಾಗುತ್ತಿದ್ದಾರೆ. ಇದರಿಂದ ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿದೆ.
ಡಿಸೆಂಬರ್ 20, ರಾತ್ರಿ 10 ಗಂಟೆ: ಮೈಸೂರಿನಿಂದ ಹೊರಟಿದ್ದ ರೈಲಿನಲ್ಲಿ ದರೋಡೆ ನಡೆದಿದೆ. ಚನ್ನಪಟ್ಟಣದಲ್ಲಿ ಹತ್ತಿದ ನಾಲ್ವರು ದರೋಡೆಕೋರರು ಹೆಜ್ಜಾಲ-ನಾಯಂಡಹಳ್ಳಿ ನಡುವೆ ರೈಲಿನ ಎಸ್1, ಎಸ್2 ಬೋಗಿಯ ಬಾಗಿಲುಗಳನ್ನ ಬಂದ್ ಮಾಡಿ ಮಾರಕಾಸ್ತ್ರಗಳಿಂದ ಹೆದರಿಸಿ ಪ್ರಯಾಣಿಕರಿಂದ ಸುಮಾರು ಎರಡೂವರೆ ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ದೋಚಿ ರೈಲಿನ ಚೇನ್ ಎಳೆದು ಪರಾರಿಯಾಗಿದ್ದಾರೆ.
ಡಿಸೆಂಬರ್ 22, ಮಧ್ಯರಾತ್ರಿ 12.30: ನೈಟ್ ಕ್ವೀನ್ಸ್ ಪ್ಯಾಸೆಂಜರ್ ರೈಲು ಚನ್ನಪಟ್ಟಣ ಹಾಗೂ ರಾಮನಗರ ನಡುವೆ ಸಂಚರಿಸೋ ವೇಳೆ ಜನರಲ್ ಕಂಪಾರ್ಟ್ ಮೆಂಟ್ನಲ್ಲೇ ದರೋಡೆ ನಡೆದಿದೆ. ಬಾಗಿಲ ಬಳಿ ನಿಂತಿದ್ದ ಕೋಲಾರದ ರೈತ ನಾಗರಾಜು, ಎಚ್.ಡಿ ಕೋಟೆಯ ರಾಮೇಗೌಡ ಎಂಬವರನ್ನ ಶೌಚಾಲಯಕ್ಕೆ ಎಳೆದೊಯ್ದು ಥಳಿಸಿ ನಗನಾಣ್ಯ, ಮೊಬೈಲ್ ದೋಚಿ ರೈಲಿನ ಚೇನ್ ಎಳೆದು ಪರಾರಿಯಾಗಿದ್ದಾರೆ.
ರೈಲ್ವೆ ಪೊಲೀಸರು ಎಚ್ಚೆತ್ತು ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಗಸ್ತು ಪಡೆಯನ್ನೇ ಹೆಚ್ಚಿಸಿ ದರೋಡೆಕೋರರ ಹೆಡೆಮುರಿ ಕಟ್ಟಬೇಕಿದೆ. ಆ ಮೂಲಕ ರೈಲ್ವೇ ಪ್ರಯಾಣಿಕರಿಗೆ ಭದ್ರತೆ ಒದಗಿಸಬೇಕಾಗಿದೆ.