Tag: ಬೆಂಗಾವಲು ವಾಹನ

  • ವಾರಣಾಸಿ ರೋಡ್‍ ಶೋ ವೇಳೆ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ!

    ವಾರಣಾಸಿ ರೋಡ್‍ ಶೋ ವೇಳೆ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ!

    ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ವಾರಣಾಸಿಯಲ್ಲಿ ನಡೆಯುತ್ತಿದ್ದ ತಮ್ಮ ರೋಡ್ ಶೋ ವೇಳೆ ಅಂಬುಲೆನ್ಸ್ ಗೆ (Ambulance) ದಾರಿ ಮಾಡಿಕೊಡಲು ತಮ್ಮ ಬೆಂಗಾವಲು (Convoy) ವಾಹನವನ್ನು ನಿಲ್ಲಿಸಿದ್ದಾರೆ. ಈ ಮೂಲಕ ಪ್ರಧಾನಿಯವರು ಮಾನವೀಯತೆ ಮೆರೆದಿದ್ದಾರೆ. ಸದ್ಯ ಮೋದಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಕಳೆದ ವರ್ಷ ಸೆಪ್ಟೆಂಬರ್ 30 ರಂದು ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಅಂಬುಲೆನ್ಸ್ ಗೆ ದಾರಿ ಮಾಡಿ ಕೊಡಲು ಗುಜರಾತ್‍ನ (Gujrat) ಮುಖ್ಯ ರಸ್ತೆಯಲ್ಲಿ ನಿಂತಿತು. ಅಂದು ಪ್ರಧಾನಿ ಮೋದಿ ಮತ್ತು ಅಧಿಕಾರಿಗಳು ಅಹಮದಾಬಾದ್‍ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದರು. ಇದೇ ರೀತಿ 2022ರ ನವೆಂಬರ್ 9 ರಂದು ಮೋದಿಯವರು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ರೋಡ್ ಶೋ ಬಳಿಕ ಮೈದಾನದಿಂದ ಹಿಂದಿರುಗಿದ ನಂತರ ಅಂಬುಲೆನ್ಸ್ ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು.

    ಈ ವರ್ಷ ವಾರಣಾಸಿಗೆ ತಮ್ಮ 2 ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ವಾರಣಾಸಿ ಮತ್ತು ಪೂರ್ವಾಂಚಲ್‍ಗೆ 19,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ 37 ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದು ರಸ್ತೆಗಳು ಮತ್ತು ಸೇತುವೆಗಳು, ಆರೋಗ್ಯ ಮತ್ತು ಶಿಕ್ಷಣ, ಪೊಲೀಸ್ ಕಲ್ಯಾಣ, ಸ್ಮಾರ್ಟ್ ಸಿಟಿ ಮತ್ತು ನಗರಾಭಿವೃದ್ಧಿ ಯೋಜನೆಗಳು, ರೈಲ್ವೆ ಮತ್ತು ವಿಮಾನ ನಿಲ್ದಾಣಗಳ ಯೋಜನೆಗಳನ್ನು ಒಳಗೊಂಡಿದೆ.

    ವಾರಣಾಸಿಗೆ ಭೇಟಿ ನೀಡಿದ ಮೊದಲ ದಿನ, ಪ್ರಧಾನಿ ಮೋದಿ ಅವರು ನಮೋ ಘಾಟ್‍ನಲ್ಲಿ ಸಂಜೆ ಕಾಶಿ ತಮಿಳು ಸಂಗಮಂನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಲಿದ್ದಾರೆ. ಸಮಾರಂಭದಲ್ಲಿ ಅವರು ಕನ್ಯಾಕುಮಾರಿ ಮತ್ತು ವಾರಣಾಸಿ ನಡುವೆ ಸಂಚರಿಸಲಿರುವ ಕಾಶಿ ತಮಿಳು ಸಂಗಮಂ ಎಕ್ಸ್ ಪ್ರೆಸ್‍ಗೆ ಚಾಲನೆ ನೀಡಲಿದ್ದಾರೆ. ಡಿಸೆಂಬರ್ 17-31 ರವರೆಗೆ ನಡೆಯಲಿರುವ ಕಾಶಿ ತಮಿಳು ಸಂಗಮಂ ತಮಿಳುನಾಡು ಮತ್ತು ಪುದುಚೇರಿಯ 1,400 ಗಣ್ಯರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ವಾರಣಾಸಿ, ಪ್ರಯಾಗ್ರಾಜ್ ಮತ್ತು ಅಯೋಧ್ಯೆಗೆ ಭೇಟಿ ನೀಡಲು ನಿರ್ಧರಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

    ತಮಿಳುನಾಡು ಮತ್ತು ಕಾಶಿ ಎರಡರಿಂದಲೂ ಕಲೆ, ಸಂಗೀತ, ಕೈಮಗ್ಗ, ಕರಕುಶಲ ವಸ್ತುಗಳು, ಪಾಕಪದ್ಧತಿ ಮತ್ತು ಇತರ ವಿಶಿಷ್ಟ ಉತ್ಪನ್ನಗಳ ಶ್ರೀಮಂತ ವಸ್ತ್ರವನ್ನು ಪ್ರದರ್ಶಿಸುವ ಪ್ರದರ್ಶನವು ಕಾರ್ಯಸೂಚಿಯಲ್ಲಿದೆ. ಸೋಮವಾರ, ಪ್ರಧಾನಿ ಮೋದಿ ಅವರು ಸೇವಾಪುರಿ ಡೆವಲಪ್‍ಮೆಂಟ್ ಬ್ಲಾಕ್‍ನ ಬಾರ್ಕಿ ಗ್ರಾಮ ಸಭೆಯಲ್ಲಿ ವಿಕ್ಷಿತ್ ಭಾರತ್ ಸಂಕಲ್ಪ್ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

  • ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿಯಾಗಿಲ್ಲ: ಸ್ಪಷ್ಟನೆ

    ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿಯಾಗಿಲ್ಲ: ಸ್ಪಷ್ಟನೆ

    ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra Escort Vehicle) ಅವರ ಬೆಂಗಾವಲು ವಾಹನ ಯಾವುದೇ ಅಪಘಾತಕ್ಕೆ ಕಾರಣವಾಗಿರುವುದಿಲ್ಲ ಎಂದು ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.

    ಸ್ಪಷ್ಟನೆ ಏನು..?: ಗೃಹ ಸಚಿವರ ಬೆಂಗಾವಲು ವಾಹನವು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ನಿಧನಕ್ಕೆ ಕಾರಣವಾಗಿದೆ ಎಂಬ ವರದಿಗಳು ಸತ್ಯಕ್ಕೆ ದೂರವಾಗಿದ್ದಾಗಿದೆ. ಗೃಹ ಸಚಿವರು ಪ್ರಯಾಣಿಸುತ್ತಿದ್ದ ಹಾಗೂ ಅವರ ಬೆಂಗಾವಲು ವಾಹನಗಳು ಯಾವುದೇ ಅಪಘಾತಕ್ಕೆ ಕಾರಣವಾಗಿರುವುದಿಲ್ಲ.

    ಗೃಹ ಸಚಿವರ ಪ್ರವಾಸದ ವೇಳೆಯಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸುತ್ತಿದ್ದಾಗ ಜಿಲ್ಲಾ ಪೊಲೀಸ್ ವಾಹನವೊಂದು ಬೆಂಗಾವಲು ವಾಹನದ ಬಹಳ ಹಿಂದಕ್ಕೆ ಬರುವಾಗ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ಎಸ್ಕಾರ್ಟ್ ವಾಹನಕ್ಕೆ ಬೈಕ್ ಸವಾರ ಸಾವು- ಆರಗ ವಿರುದ್ಧ ಜನಾಕ್ರೋಶ

    ಇದೊಂದು ಸಚಿವರ ಗಮನಕ್ಕೆ ಬಾರದೆ ಹೋದ ದುರದೃಷ್ಟಕರ ಘಟನೆಯಾಗಿದೆ. ಡಿಕ್ಕಿ ಹೊಡೆದು ಅವಘಡ ನಡೆದರೂ ಸಚಿವರು ಲೆಕ್ಕಿಸದೆ ಹೋದರು ಎಂಬ ವರದಿಗಳು ಸತ್ಯಕ್ಕೆ ದೂರವಾದುದಾಗಿದೆ ಎಂದು ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.

  • ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ – ಪೊಲೀಸರಿಗೆ ಗಂಭೀರ ಗಾಯ

    ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ – ಪೊಲೀಸರಿಗೆ ಗಂಭೀರ ಗಾಯ

    ಪಾಟ್ನಾ: ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ (Ashwini Choubey) ಅವರ ಬೆಂಗಾವಲು ವಾಹನವು (Escort Vehicle) ಭಾನುವಾರ ರಾತ್ರಿ ಅಪಘಾತಕ್ಕೀಡಾಗಿದ್ದು (Accident), ಹಲವಾರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಪಲ್ಟಿಯಾದ (Overturn) ಬೆಂಗಾವಲು ವಾಹನವನ್ನು ಸಚಿವರು ಪರಿಶೀಲಿಸುತ್ತಿರುವ ವೀಡಿಯೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಅವರು, ಬಕ್ಸರ್‌ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಕೊರಂಸಾರೈ ಪೊಲೀಸ್ ಠಾಣೆಯ ಕಾರು ಕಾರ್ಕೇಡ್‌ನಲ್ಲಿನ ಮಥಿಲ-ನಾರಾಯಣಪುರ ರಸ್ತೆಯ ಸೇತುವೆಯ ಕಾಲುವೆಯಲ್ಲಿ ಬಿದ್ದು, ಅಪಘಾತಕ್ಕೀಡಾಗಿದೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ವ್ಯಕ್ತಿಯ ದೇಹ 8 ಪೀಸ್ ಮಾಡಿ ವೀಡಿಯೋ ರೆಕಾರ್ಡ್ – ಪಾಕಿಸ್ತಾನಕ್ಕೆ ಶೇರ್

    ವರದಿಗಳ ಪ್ರಕಾರ, ಪೊಲೀಸ್ ಸಿಬ್ಬಂದಿ ಮತ್ತು ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿರುವುದರಿಂದ ಅವರನ್ನು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ನಿನ್ನ ಬ್ಯಾನರ್ ಇಲ್ಯಾಕೆ..?- ವಿಜಯನಗರ ವಿಧಾನಸಭೆ ಕ್ಷೇತ್ರದ ಕೈ ಆಕಾಂಕ್ಷಿಗಳ ಗಲಾಟೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ  ಕಲ್ಲು ತೂರಾಟ – 13 ಮಂದಿ ಅರೆಸ್ಟ್

    ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್

    ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ ಎಂದು ಪಾಟ್ನಾ ಪೊಲೀಸರು ತಿಳಿಸಿದ್ದಾರೆ.

    ಭಾನುವಾರ ಸಂಜೆ 5 ಗಂಟೆಗೆ ಈ ಘಟನೆ ನಡೆದಿದ್ದು, ಪಾಟ್ನಾ-ಗಯಾ ಮಾರ್ಗದ ಗೌರಿಚಕ್‍ನ ಸೊಹ್ಗಿ ಗ್ರಾಮದಲ್ಲಿ ಗುಂಪೊಂದು ಸಿಎಂ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಮೂರು-ನಾಲ್ಕು ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಇದನ್ನೂ ಓದಿ: ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ

    ಇತ್ತೀಚೆಗಷ್ಟೇ ಸೊಹ್ಗಿ ಪ್ರದೇಶದಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿತ್ತು. ಇದು ಸೊಹ್ಲಿ ವಲಯದ ಗ್ರಾಮಸ್ಥರನ್ನು ಕೆರಳಿಸಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ದಾರಿಯಲ್ಲಿ ತೆರಳುತಿದ್ದ ನಿತೀಶ್ ಕುಮಾರ್ ಬೆಂಗಾವಲು ಪಡೆಯ ಮೇಲೆ ಉದ್ರಿಕ್ತರ ಗುಂಪು ಕಲ್ಲುಗಳಿಂದ ದಾಳಿ ಮಾಡಿದೆ. ಇದನ್ನೂ ಓದಿ: ಪೊಲೀಸ್ ವಾಹನದಲ್ಲೇ ಕುಳಿತು ರಾಜಾರೋಷವಾಗಿ ಕೇಕ್ ಕತ್ತರಿಸಿದ ಕೊಲೆ ಆರೋಪಿ – ವೀಡಿಯೋ ವೈರಲ್

    ಕೆಲವು ದಿನಗಳ ಹಿಂದೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿ ‘ಮಹಾಘಟಬಂಧನ್’ -02 ಸರ್ಕಾರ ರಚನೆಯಾಗಿತ್ತು. ಬಿಜೆಪಿ ಜೊತೆಗಿನ ದೀರ್ಘ ಸಂಬಂಧವನ್ನು ಕಡಿದುಕೊಂಡು ಆರ್‌ಜೆಡಿ ನೇತೃತ್ವದ ವಿಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಆಂಬುಲೆನ್ಸ್‌ಗೆ ದಾರಿ ಕಲ್ಪಿಸಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಯೋಗಿ ಆದಿತ್ಯನಾಥ್‌

    ಆಂಬುಲೆನ್ಸ್‌ಗೆ ದಾರಿ ಕಲ್ಪಿಸಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಯೋಗಿ ಆದಿತ್ಯನಾಥ್‌

    ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ, ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬುಲೆನ್ಸ್‌ಗೆ ಸಂಚಾರಕ್ಕೆ ದಾರಿ ಮಾಡಿಕೊಟ್ಟು ಮಾದರಿಯಾಗಿದ್ದಾರೆ.

    ಯೋಗಿ ಆದಿತ್ಯನಾಥ್‌ ಅವರ ಮಾನವೀಯ ನಡೆ ಕುರಿತು ಟ್ರಾಫಿಕ್‌ ಡಿಸಿಪಿ ಸುಭಾಷ್‌ ಚಂದ್ರ ಶಾಕ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 20 ಕಡೆ ದಾಳಿ, ಸಾವಿರಾರು ಜನರ ಹತ್ಯೆ – ಮೋದಿಗೆ ಕೊಲೆ ಬೆದರಿಕೆ

    ಹಜರತ್‌ಗಂಜ್‌ನಿಂದ ಬಂದರಿಯಾಬಾಗ್ ಕಡೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪ್ರಯಾಣ ಬೆಳೆಸಿದ್ದರು. ಬೆಂಗಾವಲು ವಾಹನಗಳು ಜೊತೆಯಲ್ಲಿ ಸಾಗಿದ್ದವು. ಈ ವೇಳೆ ಇತರೆ ವಾಹನಗಳ ನಡುವೆ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್‌ವೊಂದು ಸಿಲುಕಿತ್ತು.

    ಯೋಗಿ ಆದಿತ್ಯನಾಥ್‌ ಅವರು ತಮ್ಮ ವಾಹನ ಹಾಗೂ ಬೆಂಗಾವಲು ವಾಹನಗಳ ಸುಗಮ ಸಂಚಾರಕ್ಕಾಗಿ, ಟ್ರಾಫಿಕ್‌ನಲ್ಲಿ ನಿಂತಿದ್ದ ಆಂಬುಲೆನ್ಸ್ ಕಂಡ ತಕ್ಷಣ, ಅವರು ತಮ್ಮ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲು ಭದ್ರತಾ ಸಿಬ್ಬಂದಿಗೆ ಸೂಚನೆ ನೀಡಿದರು. ನಂತರ ಆಂಬುಲೆನ್ಸ್‌ಗೆ ಹೋಗಲು ಅವಕಾಶ ಮಾಡಿಕೊಡುವಂತೆ ಸೂಚನೆ ನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಚಂಡೀಗಢವನ್ನು ಪಂಜಾಬ್‌ಗೆ ವರ್ಗಾಯಿಸಿ: ಪಂಜಾಬ್ ಸಿಎಂ ನಿರ್ಣಯ ಮಂಡನೆ

    ದ್ವಿಚಕ್ರ ವಾಹನ ಟ್ರಾಫಿಕ್‌ನಲ್ಲೇ ಇದ್ದ ಭಾಸ್ಕರ್ ಸಿಂಗ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಮಾನವೀಯ ನಡೆಗೆ ಇದು ನಿದರ್ಶನವಾಗಿದೆ ಎಂದು ಹೊಗಳಿದ್ದಾರೆ.

  • ಸಿ.ಸಿ.ಪಾಟೀಲ್ ಬೆಂಗಾವಲು ವಾಹನ ಅಪಘಾತ- ಪ್ರಾಣಾಪಾಯವಿಲ್ಲ

    ಸಿ.ಸಿ.ಪಾಟೀಲ್ ಬೆಂಗಾವಲು ವಾಹನ ಅಪಘಾತ- ಪ್ರಾಣಾಪಾಯವಿಲ್ಲ

    ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಸಮೀಪದ ಆತಿಥ್ಯ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಸಮೀಪ ಸಚಿವರ ಬೆಂಗಾವಲು ವಾಹನಕ್ಕೆ ಲಾರಿ ಅಡ್ಡ ಬಂದಿದ್ದು, ಬೆಂಗಾವಲು ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ವಾಹನವನ್ನು ನಿಯಂತ್ರಿಸಿದ್ದರಿಂದ ಬಾನೆಟ್ ಮಾತ್ರ ಜಖಂ ಆಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಅಪಘಾತವಾದ ಹಿನ್ನಲೆಯಲ್ಲಿ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆ ಮಾಡಿ, ಸಚಿವರನ್ನು ಕಳುಹಿಸಿಕೊಡಲಾಯಿತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

  • ಸಿಎಂ ಬೆಂಗಾವಲು ವಾಹನ ಪಲ್ಟಿ- ಚಾಲಕನಿಗೆ ಗಾಯ

    ಸಿಎಂ ಬೆಂಗಾವಲು ವಾಹನ ಪಲ್ಟಿ- ಚಾಲಕನಿಗೆ ಗಾಯ

    ಚಿಕ್ಕಮಗಳೂರು: ಮಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಸಿಎಂಗೆ ಬೆಂಗಾವಲು ವಾಹನವಾಗಿ ಹೋಗಿದ್ದ ಚಿಕ್ಕಮಗಳೂರಿನ ಡಿ.ಆರ್.ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವಂತಹ ಘಟನೆ ತಾಲೂಕಿನ ಜೇನುಗದ್ದೆ ಗ್ರಾಮದ ಬಳಿ ನಡೆದಿದೆ.

    ಬಿಜೆಪಿ ಕಾರ್ಯಕಾರಣಿ ಸಭೆಗೆ ಸಿಎಂ ಕೂಡ ಆಗಮಿಸಿದ್ದ ಹಿನ್ನೆಲೆ ಸಿಎಂ ಬಂದೋಬಸ್ತ್ ಗಾಗಿ ಚಿಕ್ಕಮಗಳೂರಿನಿಂದ ಪೊಲೀಸರು ಹಾಗೂ ಡಿ.ಆರ್.ವಾಹನ ಹೋಗಿತ್ತು. ಸಿಎಂ ನಿನ್ನೆಯೇ ಬೆಂಗಳೂರಿಗೆ ಹಿಂದಿರುಗಿದ್ದರು. ಆದರೆ ಡಿ.ಆರ್.ಕಾರ್ಯಕ್ರಮ ಮುಗಿಸಿ ವಾಹನ ಇಂದು ಚಿಕ್ಕಮಗಳೂರಿಗೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ.

    ಮಂಗಳೂರಿನಿಂದ ವಾಪಸ್ಸಾಗುವ ವೇಳೆ ಪೊಲೀಸ್ ಜೀಪ್ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದ ಬಳಿ ಬರುತ್ತಿದ್ದಂತೆ ಜೀಪಿನ ಬ್ರೇಕ್ ಜಾಮ್ ಆದ ಪರಿಣಾಮ ಜೀಪ್ ಪಲ್ಟಿಯಾಗಿದೆ. ಜೀಪಿನಲ್ಲಿ ಚಾಲಕ ನನ್ನ ಹೊರತುಪಡಿಸಿ ಬೇರೆ ಯಾವುದೇ ಸಿಬ್ಬಂದಿ ಇರಲಿಲ್ಲ. ಜೀಪ್ ಪಲ್ಟಿಯಾದ ಹಿನ್ನೆಲೆ ಚಾಲಕ ಶರತ್‍ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಚಾಲಕ ಶರತ್ ನನ್ನ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಟ್ರಂಪ್‍ಗೆ ಹೈ ಸೆಕ್ಯೂರಿಟಿ – 1,2,3….14 ಬೆಂಗಾವಲು ವಾಹನಗಳ ವಿಶೇಷತೆ ಏನು? ಯಾವುದರಲ್ಲಿ ಏನಿದೆ?

    ಟ್ರಂಪ್‍ಗೆ ಹೈ ಸೆಕ್ಯೂರಿಟಿ – 1,2,3….14 ಬೆಂಗಾವಲು ವಾಹನಗಳ ವಿಶೇಷತೆ ಏನು? ಯಾವುದರಲ್ಲಿ ಏನಿದೆ?

    ಸೋಮವಾರದಿಂದ ಡೊನಾಲ್ಡ್ ಟ್ರಂಪ್ ಅವರ ಭಾರತದ ಅಧಿಕೃತ ಪ್ರವಾಸ ಆರಂಭಗೊಳ್ಳಲಿದ್ದು ಈಗಾಗಲೇ ಅವರ ಭದ್ರತೆಗೆ ನಿಯೋಜನೆಗೊಂಡಿರುವ ಬೆಂಗಾವಲು ವಾಹನಗಳು ಗುಜರಾತಿನ ಅಹಮದಾಬಾದಿಗೆ ಬಂದಿಳಿದಿದೆ.

    ಅಮೆರಿಕದ ಅಧ್ಯಕ್ಷರು ಬಳಸುವ ಅಧಿಕೃತ ‘ಬೀಸ್ಟ್’ ಕಾರು ಸೇರಿದಂತೆ 14 ವಾಹನಗಳು ರಸ್ತೆಯಲ್ಲಿ ಸಂಚರಿಸಲಿವೆ. ಈ ವಾಹನಗಳು ಈಗಾಗಲೇ ವಿಶೇಷ ಕಾರ್ಗೋ ವಿಮಾನದ ಮೂಲಕ ಲ್ಯಾಂಡ್ ಆಗಿದೆ. ಈ 14 ವಾಹನಗಳ ವಿಶೇಷತೆ ಏನು ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    1. ಸ್ವೀಪರ್ಸ್:
    14 ಬೆಂಗಾವಲು ಪಡೆಯ ವಾಹನಗಳು ಒಟ್ಟೊಟ್ಟಿಗೆ ರಸ್ತೆಯಲ್ಲಿ ಸಂಚರಿಸುವಾಗ ಆರಂಭದಲ್ಲಿ ಬೈಕ್ ನಲ್ಲಿ  ಪೊಲೀಸ್ ಸಿಬ್ಬಂದಿ ಸಂಚರಿಸುತ್ತಾರೆ. ರಸ್ತೆಯ ಬದಿಯಲ್ಲಿ ಜನರಿದ್ದರೆ , ಆ ವ್ಯಕ್ತಿಗಳು ರಸ್ತೆಗೆ ಬಾರದಂತೆ ತಡೆದು ನಿಲ್ಲಿಸಿ ಸುಗಮ ಸಂಚಾರಕ್ಕೆ ಈ ಸಿಬ್ಬಂದಿ ಅನುವು ಮಾಡಿಕೊಡುತ್ತಾರೆ.

    2. ರೂಟ್ ಕಾರ್:
    ಬೆಂಗಾವಲು ಪಡೆಯಲ್ಲಿ ಮೊದಲು ಈ ಕಾರು ಕಾಣಿಸುತ್ತದೆ. ಸಂಪೂರ್ಣವಾಗಿ ಬೆಂಗಾವಲು ಪಡೆಯನ್ನು ಈ ಕಾರು ಮುನ್ನಡೆಸುತ್ತದೆ. ಸಾಧಾರಣವಾಗಿ ದುಬಾರಿ ಬೆಲೆಯ ಎಸ್‍ಯುವಿ(ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್) ಅಥವಾ ಹೈ ಎಂಡ್ ಸೆಡಾನ್ ಕಾರು ಇರುತ್ತದೆ. ಟ್ರಂಪ್ ಅವಧಿಯಲ್ಲಿ ಬಿಎಂಡಬ್ಲ್ಯೂ ಸೆಡಾನ್ ಕಾರು ಹಲವು ಬಾರಿ ರೂಟ್ ಕಾರ್ ಆಗಿ ಬಳಕೆಯಾಗಿದೆ.

    3. ಲೀಡ್ ಕಾರ್:
    ಹೆಸರೇ ಹೇಳುವಂತೆ ಟ್ರಂಪ್ ಕಾರಿಗೆ ಭದ್ರತೆ ನೀಡುವ ಕಾರು. ಈ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಕುಳಿತಿರುತ್ತಾರೆ. ಶಸ್ತ್ರ ಸಜ್ಜಿತ ಎಸ್‍ಯುವಿ ಶೆವರ್ಲೆಟ್ ಸಬ್ ಅರ್ಬನ್ ಕಾರನ್ನು ಬಳಕೆ ಮಾಡಲಾಗುತ್ತದೆ.

    4. ದಿ ಡಿಕೊಯ್ ಕಾರ್:
    ಒಂದು ವೇಳೆ ಬೀಸ್ಟ್ ಕಾರಿನ ಮೇಲೆ ದಾಳಿ ನಡೆದರೆ ಅಧ್ಯಕ್ಷರನ್ನು ಪಾರು ಮಾಡಲೆಂದು ಈ ಕಾರನ್ನು ಬಳಸಲಾಗುತ್ತದೆ. ಬೀಸ್ಟ್ ಕಾರಿನ ಮುಂದೆ ಈ ಕಾರು ಸಂಚರಿಸುತ್ತಿರುತ್ತದೆ. ಬೀಸ್ಟ್ ಕಾರಿನಲ್ಲಿ ಏನೇಲ್ಲ ವಿಶೇಷತೆಗಳು ಇದೆಯೋ ಅದೆಲ್ಲವೂ ಈ ಕಾರಿನಲ್ಲಿ ಇರುತ್ತದೆ.

    5. ದಿ ಬೀಸ್ಟ್ ಕಾರು:
    ಯಾವುದೇ ವಿದೇಶ ಪ್ರವಾಸ ಕೈಗೊಂಡರೂ ಅಮೆರಿಕದ ಅಧ್ಯಕ್ಷರು ರಸ್ತೆಯಲ್ಲಿ ಈ ಕಾರಿನ ಮೂಲಕವೇ ಸಂಚರಿಸುತ್ತಾರೆ. ಶಸ್ತ್ರ ಸಜ್ಜಿತ ಕಾರು ಇದಾಗಿದ್ದು ಯಾವುದೇ ಅಪಾಯವನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಟ್ರಂಪ್ ಜೊತೆಗೆ ಭಾರತಕ್ಕೆ ಬರುತ್ತಿದೆ ದಿ ಬೀಸ್ಟ್ ಕಾರ್- ಕಾರಿನ ವಿಶೇಷತೆ ಏನು? ಮೈಲೇಜ್ ಎಷ್ಟು?

    6. ಹಾಫ್‍ಬ್ಯಾಕ್:
    ಬೀಸ್ಟ್ ಕಾರಿನ ಹಿಂದೆ ಹಾಫ್‍ಬ್ಯಾಕ್ ಕಾರು ಸಂಚರಿಸುತ್ತದೆ. ಈ ಕಾರಿನಲ್ಲಿ ಅಮೆರಿಕ ಸೀಕ್ರೇಟ್ ಸರ್ವಿಸ್ ಅಧಿಕಾರಿಗಳು ಸಂಚರಿಸುತ್ತಾರೆ. ಭದ್ರತಾ ಉದ್ದೇಶದಿಂದಾಗಿ ಹಲವು ಕಾರುಗಳನ್ನು ಬಳಕೆ ಮಾಡಲಾಗುತ್ತದೆ. ಈ ಎಸ್‍ಯುವಿ ಕಾರುಗಳು ಶಸ್ತ್ರ ಸಜ್ಜಿತವಾಗಿ ಇರುತ್ತದೆ.


    7. ವಾಚ್ ಟವರ್:
    ವಿಶ್ವದ ದೊಡ್ಡಣ್ಣ ಅಮೆರಿಕ ಆದ ಕಾರಣ ಅಧ್ಯಕ್ಷರಿಗೆ ಯಾವಾಗಲೂ ಶತ್ರುಗಳಿಂದ ಬೆದರಿಕೆ ಇದ್ದೆ ಇರುತ್ತದೆ. ಈ ಬೆದರಿಕೆ ಮಟ್ಟ ಹಾಕಲು ಅಧ್ಯಕ್ಷರು ಸಂಚರಿಸುವ ಸಂದರ್ಭದಲ್ಲಿ ವಾಚ್ ಟವರ್ ವಾಹನ ಸಂಚರಿಸುತ್ತದೆ. ಮೇಲುಗಡೆ ದೊಡ್ಡ ಏರಿಯಲ್ ಗಳು ಮತ್ತು ಒಂದು ಗುಮ್ಮಟ ಇರುತ್ತದೆ. ಇದರಲ್ಲಿ ಸಿಗ್ನಲ್ ಜಾಮರ್ ಗಳು, ರೇಡಾರ್ ಜಾಮ್ ಮಾಡುವ ವ್ಯವಸ್ಥೆ ಇದೆ. ಅಷ್ಟೇ ಅಲ್ಲದೇ ಶ್ವೇತಭವನ ಮತ್ತು ಪೆಂಟಾಗನ್(ಅಮೆರಿಕದ ರಕ್ಷಣಾ ಇಲಾಖೆಯ ಕೇಂದ್ರ ಕಚೇರಿ ಇರುವ ಸ್ಥಳ) ಜೊತೆ ನೇರ ಸಂಪರ್ಕ ಸಾಧಿಸುವ ವ್ಯವಸ್ಥೆ ಇರುತ್ತದೆ. ಫೋರ್ಡ್ ಕಂಪನಿಯ ಕಸ್ಟಮೈಸ್ಡ್ ಎಸ್‍ಯುವಿ ಕಾರು ವಾಚ್ ಟವರ್ ಆಗಿ ಕಾರ್ಯನಿರ್ವಹಿಸುತ್ತದೆ.

    8. ಕಂಟ್ರೋಲ್ ಕಾರು:
    ಈ ಕಾರಿನಲ್ಲಿ ಅಧ್ಯಕ್ಷರ ಸಿಬ್ಬಂದಿ, ವೈದ್ಯರು, ಮಿಲಿಟರಿ ಸಿಬ್ಬಂದಿ ಇರುತ್ತಾರೆ.

    9. ಭದ್ರತಾ ಪಡೆಯ ಕಾರು:
    ಅಮೆರಿಕ ಸಿಕ್ರೇಟ್ ಸರ್ವಿಸ್ ಯೋಧರು ಈ ಕಾರಿನಲ್ಲಿ ತೆರಳುತ್ತಿರುತ್ತಾರೆ. ಇದನ್ನೂ ಓದಿ: ‘ನಾನು ಬಾಹುಬಲಿ’ ಎಂದ ಡೊನಾಲ್ಡ್ ಟ್ರಂಪ್ – ವಿಡಿಯೋ ವೈರಲ್

    10. ಪ್ರೆಸ್ ಬಸ್:
    ಅಮರಿಕದ ಪ್ರಮುಖ ಮಾಧ್ಯಮಗಳ ಪತ್ರಕರ್ತರು, ಶ್ವೇತ ಭವನದ ಮಾಧ್ಯಮ ತಂಡದ ಸದಸ್ಯರು ಇರುತ್ತಾರೆ.

    11. ಅಪಾಯವನ್ನು ತಪ್ಪಿಸುವ ವಾಹನ
    ಅಣ್ವಸ್ತ್ರ, ಜೈವಿಕ ಅಥವಾ ರಾಸಾಯನಿಕ ಅಸ್ತ್ರ ದಾಳಿಯನ್ನು ತಡೆಯಬಲ್ಲ ಸಾಧನಗಳು ಈ ವಾಹನದಲ್ಲಿ ಇರುತ್ತದೆ.

    12, 13 ಬೆಂಗಾವಲು ಬಸ್:
    ಬೆಂಗಾವಲು ಪಡೆಗೆ ನಿಯೋಜನೆಗೊಂಡಿರುವ ಇತರೆ ಸದಸ್ಯರನ್ನು ಈ ಬಸ್ಸು ಹೊತ್ತುಕೊಂಡು ಸಾಗುತ್ತದೆ.

    14. ಪೊಲೀಸ್ ಕಾರು:
    ಹಿಂದುಗಡೆಯಿಂದ ಯಾವುದೇ ವಾಹನ ನುಗ್ಗದಂತೆ ತಡೆಯಲು ಪೊಲೀಸರು ಈ ಕಾರಿನಲ್ಲಿ ಇರುತ್ತಾರೆ. ಇಷ್ಟೇ ಅಲ್ಲದೇ ಎರಡು ಬದಿಗಳಲ್ಲಿ ರಕ್ಷಣಾ ಸಿಬ್ಬಂದಿಯ ಇತರೇ ಕಾರುಗಳ ಸಂಚರಿಸಿದರೆ ಅಧ್ಯಕ್ಷರ ಕಾರು ರಸ್ತೆಯ ಮಧ್ಯದಲ್ಲಿ ಸಂಚರಿಸುತ್ತಿರುತ್ತದೆ.

  • ಯಶವಂತಪುರ ಫ್ಲೈ ಓವರ್ ಮೇಲೆ ಸಿಎಂ ಕಾರ್ಯದರ್ಶಿ ಕಾರು ಅಪಘಾತ

    ಯಶವಂತಪುರ ಫ್ಲೈ ಓವರ್ ಮೇಲೆ ಸಿಎಂ ಕಾರ್ಯದರ್ಶಿ ಕಾರು ಅಪಘಾತ

    ಬೆಂಗಳೂರು: ಸಿಎಂ ಬೆಂಗಾವಲು ವಾಹನವನ್ನು ಫಾಲೋ ಮಾಡುತ್ತಿದ್ದ ಕಾರೊಂದು ಅತಿವೇಗವಾಗಿ ಬಂದು ಮತ್ತೊಂದು ಬದಿಯ ರಸ್ತೆಗೆ ನುಗ್ಗಿದ ಘಟನೆ ಯಶವಂತಪುರ ಫ್ಲೈ ಓವರ್ ಮೇಲೆ ನಡೆದಿದೆ.

    ಕಾರ್ಯಕ್ರಮದ ನಿಮಿತ್ತ ಸಿಎಂ ಯಡಿಯೂರಪ್ಪ ಬೆಂಗಳೂರಿನಿಂದ ತುಮಕೂರಿಗೆ ಹೊರಟ್ಟಿದ್ದರು. ಆ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ಸೆಲ್ವಕುಮಾರ್ ಅವರು ಕೂಡ ಸಿಎಂ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಅವರ ಕಾರು ಬೆಂಗಾವಲು ವಾಹನವನ್ನು ಫಾಲೋ ಮಾಡುತಿತ್ತು.

    ಸಿಎಂ ಬೆಂಗವಾಲು ವಾಹನ ಅತಿವೇಗವಾಗಿ ಹೋಗುವಾಗ ಕಾರ್ಯದರ್ಶಿ ಅವರ ಕಾರು ಚಾಲಕ ಅದೇ ವೇಗವನ್ನು ಪಾಲನೆ ಮಾಡಲು ಹೋಗಿದ್ದಾನೆ. ಆದರೆ ಫ್ಲೈ ಓವರ್ ಮೇಲೆ ಗಾಡಿ ನಿಯಂತ್ರಣಕ್ಕೆ ಸಿಗದೇ ಅಪಘಾತಕ್ಕೆ ಒಳಗಾಗಿದೆ. ಚಾಲಕ ವಿನಯ್‍ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಅಪಘಾತದ ರಭಸಕ್ಕೆ ಮತ್ತೊಂದು ರಸ್ತೆಯಲ್ಲಿ ಬರುತ್ತಿದ್ದ ವಾಹನಗಳಾದ ಕ್ಯಾಂಟರ್ ಮತ್ತು ಆಟೋ ಜಖಂ ಆಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

  • ಆರ್.ವಿ ದೇಶಪಾಂಡೆ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ

    ಆರ್.ವಿ ದೇಶಪಾಂಡೆ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ

    ಕಾರವಾರ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಕಾರವಾರ ತಾಲೂಕಿನ ಕದ್ರಾ ಬಳಿ ಅಣಶಿ ಘಟ್ಟ ರಸ್ತೆಯಲ್ಲಿ ನಡೆದಿದ್ದು, ಇಬ್ಬರಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    ಎಆರ್ ಎಸ್‍ಐ ಪ್ರಕಾಶ್ ಮತ್ತು ಚಾಲಕ ರಾಜೇಶ್ ಗಾಯಗೊಂಡಿದ್ದಾರೆ. ಇಬ್ಬರಿಗೂ ಕೆನ್ನೆಯ ಭಾಗ ಮತ್ತು ಒಳ ಏಟುಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟ್ಟ ರಸ್ತೆಯ ಎರಡನೇ ಹೇರ್ ಪಿನ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಕಾರು ರಸ್ತೆ ಬಿಟ್ಟು ಕೆಳಗೆ ಇಳಿದಿದೆ. ಪರಿಣಾಮ ಪಲ್ಟಿ ಹೊಡೆದು ಕೆಳಗಿನ ರಸ್ತೆಗೆ ಬಿದ್ದಿದೆ. ಬೊಲೆರೊ ಕಾರು ಜಖಂಗೊಂಡಿದ್ದು, ಅದರಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಕದ್ರಾ ಆಸ್ಪತ್ರೆಗೆ ಸಾಗಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಆರ್.ವಿ. ದೇಶಪಾಂಡೆ ಅವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಅವರಿಗೆ ಸೂಚಿಸಿದರು. ಬಳಿಕ ಅಲ್ಲಿಂದ ಕಾರವಾರಕ್ಕೆ ಆಗಮಿಸಿದರು.