Tag: ಬೆಟ್ಟ ಕುಸಿತ

  • ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

    ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

    ಮಡಿಕೇರಿ: ಕೊಡಗಿನ ಜನರ ಮೇಲೆ ಪ್ರಕೃತಿ ಮಾತೆ ಈ ಬಾರಿಯು ಮುನಿಸಿಕೊಂಡಂತೆ ಕಾಣುತ್ತಿದೆ. 2018ರಲ್ಲಿ ಸಾಕಷ್ಟು ಪ್ರಕೃತಿ ವಿಕೋಪದಿಂದ ನಲುಗಿಹೋಗಿದ್ದ ಕೊಡಗಿನ ಜನತೆ ಈ ಬಾರಿಯು ಮಳೆ ಅವಾಂತರಗಳಿಂದ ಭೂಕಂಪನ, ಜಲಸ್ಫೋಟ, ಬೆಟ್ಟ ಕುಸಿತದಿಂದಾಗಿ ಬೆಚ್ಚಿ ಬೀಳುತ್ತಿದ್ದಾರೆ.

    ಕಳೆದ ರಾತ್ರಿ ಗ್ರಾಮದ ಬೆಟ್ಟ ಪ್ರದೇಶದಲ್ಲಿ ಜಲಸ್ಫೋಟವಾಗಿ ಒಂದು ಭಾಗದ ಬೆಟ್ಟವೇ ಕುಸಿತವಾಗಿದೆ. ಜಿಲ್ಲೆಯಲ್ಲಿ ಮಳೆ ಅರ್ಭಟ ಕಡಿಮೆ ಅಗಿದ್ರು ಮಳೆಯ ಅವಾಂತರಗಳು ಮಾತ್ರ ಮುಂದುವರಿಯುತ್ತಿದೆ. ಮಡಿಕೇರಿ ತಾಲೂಕಿನ ರಾಮಕೊಲ್ಲಿಯಲ್ಲಿ ಜಲಸ್ಫೋಟ, 2ನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಬೆನ್ನಲ್ಲೇ ನಿನ್ನೆ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಸಮೀಪದ ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಮಾತ್ರವಲ್ಲ ಬೆಟ್ಟ ಜರಿದು ಬಿದ್ದಿದೆ. ಸದ್ಯ ಬೆಟ್ಟದ ಒಂದು ಭಾಗದ ಸಂಪೂರ್ಣ ಮಣ್ಣು ನೀರಿನೊಂದಿಗೆ ಜರಿದುಕೊಂಡು ಮದೆನಾಡಿನ ಮೂಲಕ ಜೋಡುಪಾಲದವರೆಗೆ ಕೆಸರು ಮಿಶ್ರಿತ ನೀರು ಹರಿದುಕೊಂಡು ಬಂದಿದೆ. ಸದ್ಯ ಅಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆ ಭಾಗದಲ್ಲಿ ಮನೆಗಳಿಲ್ಲ. ಕೆಳ ಭಾಗದಲ್ಲಿ ಇರುವ 15 ಮನೆಯ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಕುಂದಾಪುರದ ಉಪನ್ಯಾಸಕ ನೇಣಿಗೆ ಶರಣು

    ಜಿಲ್ಲೆಯಲ್ಲಿ ಜೋರಾಗಿ ಮಳೆ ಸುರಿದ್ರೆ ಜಲಸ್ಫೋಟವಾದ ಬೆಟ್ಟ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಮಾತ್ರವಲ್ಲ ಹಾಗೆ ಕುಸಿದು ಬಂದ ಮಣ್ಣು ಜೋಡುಪಾಲದ ತನಕ ಬಂದು ರಾಷ್ಟ್ರೀಯ ಹೆದ್ದಾರಿಯ ರಸ್ತೆಗೆ ಬೀಳುವ ಸಾಧ್ಯತೆ ಹೆಚ್ಚಿದೆ. 2018ರಲ್ಲೇ ಈ ಬೆಟ್ಟ ಜರಿದ ಪರಿಣಾಮ ಜೋಡುಪಾಲದಲ್ಲಿ ಸಾಕಷ್ಟು ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬೆಟ್ಟ ಜರಿದ ಒಂದು ಭಾಗವಷ್ಟೇ ಕಣ್ಣಿಗೆ ಗೋಚರಿಸುತ್ತಿದೆ. ಬೆಟ್ಟ ಕುಸಿತವಾಗುವ ಮೊದಲು ಬೆಟ್ಟ ಪ್ರದೇಶದಿಂದ ಜೋರಾದ ಶಬ್ಧ ಕೇಳಿ ಬಂದಿದ್ದು ಗ್ರಾಮದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ‘ಜೈ ಶ್ರೀರಾಮ್’ ಹೇಳದ ಹುಡುಗನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಗಜಗಿರಿ ಬೆಟ್ಟ ಕುಸಿತ ಪ್ರಕರಣ- ಶಾಂತಾ ಆಚಾರ್ ಮರಣ ಪರಿಹಾರ ಬಿಡುಗಡೆ

    ಗಜಗಿರಿ ಬೆಟ್ಟ ಕುಸಿತ ಪ್ರಕರಣ- ಶಾಂತಾ ಆಚಾರ್ ಮರಣ ಪರಿಹಾರ ಬಿಡುಗಡೆ

    ಮಡಿಕೇರಿ: ಕೊಡಗಿನ ಪವಿತ್ರ ತೀರ್ಥ ಕ್ಷೇತ್ರ ತಲಕಾವೇರಿಯ ಗಜಗಿರಿಬೆಟ್ಟ ಕುಸಿದು ಬೆಟ್ಟದ ಮಣ್ಣಿನಲ್ಲಿ ಕಣ್ಮರೆಯಾಗಿದ್ದ ಶಾಂತಾ ಆಚಾರ್ ಮತ್ತು ಶ್ರೀನಿವಾಸ್ ಪಡಿಲ್ಲಾಯ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದೆ.

    ತಲಕಾವೇರಿಯ ಪ್ರಧಾನ ಅರ್ಚಕರಾಗಿದ್ದ ನಾರಾಯಣ್ ಆಚಾರ್ ಅವರ ಪತ್ನಿ ಶಾಂತಾ ಆಚಾರ್ ಕೂಡ ಆಗಸ್ಟ್ ಐದರಂದು ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ ಕಣ್ಮರೆಯಾಗಿದ್ದರು. ಬಳಿಕ ಸತತ 12 ದಿನಗಳ ಕಾಲ ಕಾರ್ಯಚರಣೆ ನಡೆಸಿದರೂ ಶಾಂತಾ ಆಚಾರ್ ಅವರು ಪತ್ತೆಯಾಗಿರಲಿಲ್ಲ. ಜೊತೆಗೆ ಸಹಾಯಕ ಅರ್ಚಕರಾಗಿದ್ದ ಮಂಗಳೂರಿನ ಶ್ರೀನಿವಾಸ್ ಪಡಿಲ್ಲಾಯ ಕೂಡ ಕಣ್ಮರೆಯಾಗಿದ್ದರು. ಕೊನೆಗೂ ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಮತ್ತು ಪೊಲೀಸ್ ಇಲಾಖೆಯ ತಂಡಗಳು ಜಿಲ್ಲಾಡಳಿತದ ನಿರ್ದೇಶನದಂತೆ ಕಾರ್ಯಚರಣೆ ನಿಲ್ಲಿಸಿದ್ದವು.

    ಕೊನೆಗೆ ನಾಪತ್ತೆಯಾಗಿದ್ದ ನಾರಾಯಣ್ ಆಚಾರ್ ಅವರ ಪತ್ನಿ ಶಾಂತಾ ಆಚಾರ್ ಮತ್ತು ಶ್ರೀನಿವಾಸ್ ಪಡಿಲ್ಲಾಯ ಇಬ್ಬರು ಭೂಕುಸಿತದಲ್ಲಿ ನಾಪತ್ತೆಯಾಗಿರುವುದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿದ ಸರ್ಕಾರ ಇಬ್ಬರಿಗೂ ಪ್ರಾಕೃತಿಕ ವಿಕೋಪದಲ್ಲಿ ಮೃತಪಟ್ಟವರೆಂದು ಪರಿಹಾರ ಘೋಷಿಸಿತ್ತು.

    ಇದೀಗ ಪರಿಹಾರದ ಹಣ ಬಿಡುಗಡೆಯಾಗಿದ್ದು, ನಾಳೆ ಶಾಸಕರ ನಿರ್ದೇಶನದಂತೆ ನಾರಾಯಣ ಆಚಾರ್ ಅವರ ಮಕ್ಕಳಾದ ಶಾಂತಾ ಆಚಾರ್ ಮತ್ತು ನಮಿತಾ ಆಚಾರ್ ಗೆ ಪರಿಹಾರದ ಹಣ ನೀಡಲಾಗುವುದು ಎಂದು ತಹಶೀಲ್ದಾರ್ ಹೇಳಿದ್ದಾರೆ. ಅಲ್ಲದೆ ಶ್ರೀನಿವಾಸ್ ಪಡಿಲ್ಲಾಯ ಅವರ ಪೋಷಕರಿಗೂ ಪರಿಹಾರದ ಹಣವನ್ನು ನೀಡುವುದಾಗಿ ಮಡಿಕೇರಿ ತಹಶೀಲ್ದಾರ್ ಮಹೇಶ್ ಹೇಳಿದ್ದಾರೆ.

  • ನಾರಾಯಣ್ ಅಚಾರ್ ಮಕ್ಕಳಿಗೆ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿ

    ನಾರಾಯಣ್ ಅಚಾರ್ ಮಕ್ಕಳಿಗೆ ಪರಿಹಾರದ ಹಣ ಪಡೆಯಲು ಮತಾಂತರ ಅಡ್ಡಿ

    ಮಡಿಕೇರಿ: ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ್ ಅಚಾರ್ ಪುತ್ರಿಯರಿಬ್ಬರು ಹಿಂದೂ ಧರ್ಮವನ್ನು ತೊರೆದು ಅನ್ಯಧರ್ಮಕ್ಕೆ ಮತಾಂತರಗೊಂಡಿರುವುದು ರಾಜ್ಯ ಸರ್ಕಾರದ ಪರಿಹಾರದ ಹಣ ಪಡೆಯಲು ಇದೀಗ ಅಡ್ಡಿಯಾಗಿದೆ.

    ಅಗಸ್ಟ್ 15 ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಇಬ್ಬರು ಪುತ್ರಿಯರಿಗೆ ತಲಾ 2.50 ಲಕ್ಷ ರೂ ನಂತೆ ಪರಿಹಾರ ಹಣ ನೀಡಿದ್ದರು. ಅಗಸ್ಟ್ 5 ರಂದು ಬ್ರಹ್ಮಗಿರಿ ಬೆಟ್ಟದ ಸಾಲಿನ ಗಜಗಿರಿ ಬೆಟ್ಟ ಕುಸಿದು ನಾರಾಯಣ ಅಚಾರ್, ಶಾಂತ ಅಚಾರ್, ಆನಂದ ತೀರ್ಥ ಸ್ವಾಮಿಜಿ, ರವಿ ಕಿರಣ್ ಮತ್ತು ಶ್ರೀನಿವಾಸ್ ಅದರು ಭೂ ಸಮಾಧಿಯಾಗಿದ್ದರು. ಈ ಪೈಕಿ ಶಾಂತ ಅಚಾರ್ ಮತ್ತು ಶ್ರೀನಿವಾಸ್ ಭಟ್ ಅವರ ಮೃತ ದೇಹಗಳು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.

    ಆಸ್ಟ್ರೇಲಿಯಾ, ನ್ಯೂಜಿಲೆಂಡ್ ದೇಶದಲ್ಲಿ ನೆಲೆಸಿರುವ ನಾರಾಯಣ್ ಅಚಾರ್ ಮಕ್ಕಳು ವಿದೇಶದಿಂದ ಮರಳಿ ಬಂದ ಮೇಲೆ ತಮ್ಮ ಪಾಲಕರು ನಾಪತ್ತೆಯಾಗಿರುವ ಬಗ್ಗೆ ಭಾಗಮಂಡಲ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದಕ್ಕೂ ಮೊದಲು ನಾರಾಯಣ್ ಅಚಾರ್ ಸಹೋದರಿಯ ಸುಶೀಲಾ ಅವರು ನಾಪತ್ತೆ ಅಗಿರುವ ಬಗ್ಗೆ ದೂರು ದಾಖಲು ಮಾಡಿದ್ರು.

    ದೂರು ನೀಡುವ ಸಂದರ್ಭ ಪುತ್ರಿಯರು ಶಾರದ ಅಚಾರ್ ಮತ್ತು ನಮಿತಾ ಅಚಾರ್ ಎಂದು ತಮ್ಮ ಹೆಸರು ಉಲ್ಲೇಖ ಮಾಡಿದ್ರು. ಅದರ ಆಧಾರದ ಮೇಲೆ ರಾಜ್ಯ ಸರ್ಕಾರ ಪರಿಹಾರ ಹಣವನ್ನು ನಮಿತಾ ಶಾರದಾ ಅಚಾರ್ ಎಂದು ಹೆಸರು ಉಲ್ಲೇಖ ಮಾಡಿ ಹಂಚಿಕೆ ಮಾಡಿದ್ರು. ಹಣ ಹಂಚಿಕೆ ಮಾಡುವ ಸಂದರ್ಭ ಆನಂದ ತೀರ್ಥ ಸ್ವಾಮೀಜಿಯರ ಹಣವು ನಮಗೆ ಬರಬೇಕು ಎಂದು ಹೇಳಿದ್ರು.

    ಇದೀಗ ಪರಿಹಾರದ ಚೆಕ್ ಅನ್ನು ಭಾಗಮಂಡಲದ ನಾಡ ಕಚೇರಿಗೆ ನಾರಾಯಣ್ ಅಚಾರ್ ಮಕ್ಕಳು ಚೆಕ್ ವಾಪಸ್ಸು ಮಾಡಿದ್ದಾರೆ. ನಮ್ಮ ಇಬ್ಬರ ಹೆಸರು ಬದಲು ಮಾಡಬೇಕು. ಶೆನೋನ್ ಫರ್ನಾಂಡೀಸ್ (ಶಾರದಾ ಅಚರ್), ನಮಿತಾ ನಜೇರತ್ ಎಂಬ ಹೆಸರಿಗೆ ಚೆಕ್ ನೀಡಬೇಕು ಎಂದು ಕೊರಿದ್ದಾರೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ತಹಶೀಲ್ದಾರ್ ಮಹೇಶ್ ಚೆಕ್ ತಡೆಹಿಡಿದಿದ್ದಾರೆ. ಹೆಸರು ಬದಲಾವಣೆ ಮಾಡಿಕೊಂಡು ಇರುವುದಕ್ಕೆ ಸೂಕ್ತವಾದ ದಾಖಲೆಗಳನ್ನು ನೀಡಿ ಪರಿಹಾರದ ಹಣ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

  • ಮೂರು ವರ್ಷಗಳಿಂದ ಬೆಟ್ಟವೆಂದರೆ ಭಯಪಡುತ್ತಿರುವ ಕೊಡಗಿನ ಜನತೆ

    ಮೂರು ವರ್ಷಗಳಿಂದ ಬೆಟ್ಟವೆಂದರೆ ಭಯಪಡುತ್ತಿರುವ ಕೊಡಗಿನ ಜನತೆ

    – ಬೆಟ್ಟದ ಮೇಲೆ ಹೋಂ ಸ್ಟೇ, ಮನೆ ಕಟ್ಟಿಕೊಳ್ಳಿ ಹಿಂದೇಟು

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬ್ರಹ್ಮಗಿರಿ ಬೆಟ್ಟ ಅಪ್ಪಳಿಸಿ ಅರ್ಚಕರ ಮನೆ ನೆಲಸಮವಾಗಿ ನಾಲ್ವರು ಮೃತಪಟ್ಟಿದ್ದರು. ತಲಕಾವೇರಿಯಲ್ಲಿ ಆಗಿದ್ದ ಈ ದುರಂತದಲ್ಲಿ ಕಣ್ಮರೆ ಆಗಿರುವ ಇನ್ನಿಬ್ಬರು ಸುಳಿವು ಇನ್ನೂ ಸಿಕ್ಕಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಇನ್ನೂ ಕೆಲ ಗುಡ್ಡಗಳು ಕುಸಿಯುವ ಭೀತಿಯಲ್ಲಿವೆ.

    ಕರ್ನಾಟಕದ ಕಾಶ್ಮೀರ ಎಂದು ಕರೆಸಿಕೊಳ್ಳುವ ಕೊಡಗಿನಲ್ಲಿ ಮೂರು ವರ್ಷಗಳಿಂದ ಆಗುತ್ತಿರುವ ಭೂಕುಸಿತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಕೆಲವು ಬೆಟ್ಟಗಳಲ್ಲಿ ಮತ್ತೆ ಬಿರುಕುಬಿಟ್ಟಿದ್ದು, ಜನರು ನಿದ್ದೆಬಿಟ್ಟು ರಾತ್ರಿ ಇಡೀ ಪಾರಕಾಯುತ್ತಿದ್ದಾರೆ. ಬೆಟ್ಟದ ಮೇಲೆ ಮನೆ, ಹೋಂ ಸ್ಟೇ, ರೆಸಾರ್ಟ್ ಮಾಡಿ ಪ್ರವಾಸಿಗರನ್ನು ಸೆಳೆಯುತ್ತಿದ್ದ ವ್ಯಾಪಾರಸ್ಥರು, ಕಳೆದ ಮೂರು ವರ್ಷಗಳಿಂದ ಆಗುತ್ತಿರುವ ಭೂಕುಸಿತದಿಂದ ಬೆಟ್ಟಗಳ ಸಹವಾಸವೇ ಬೇಡ ಎನ್ನುವಂತಾಗಿದೆ.

    ವಿರಾಜಪೇಟೆ ನಗರದ ಅಯ್ಯಪ್ಪ ಬೆಟ್ಟದ ತುದಿಯವರೆಗೆ ನೂರಾರು ಜನರು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಮೂರು ವರ್ಷಗಳಿಂದಲೂ ಆಗಸ್ಟ್ ತಿಂಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಳೆದ ವರ್ಷವೇ ಅಯ್ಯಪ್ಪ ಬೆಟ್ಟದಲ್ಲಿ ಭಾರೀ ಬಿರುಕು ಮೂಡಿತ್ತು. ಆಗಸ್ಟ್ ತಿಂಗಳು ಕಳೆದ ನಂತರ ಮಳೆ ಕಡಿಮೆ ಆಗಿದ್ದರಿಂದ ಅಲ್ಲಿನ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದರು. ಈ ವರ್ಷವೂ ಆಗಸ್ಟ್ ಆರಂಭದಿಂದಲೂ ಭಾರೀ ಮಳೆಯಾಗುತ್ತಿದ್ದು, ಬೆಟ್ಟದ ಹಲವೆಡೆ ಸಣ್ಣ ಪ್ರಮಾಣದಲ್ಲಿ ಕುಸಿದಿದೆ.

    ಕಳೆದ ಬಾರಿ ಬೆಟ್ಟ ಬಿರುಕು ಬಿಟ್ಟ ಜಾಗಕ್ಕೆ ಸಿಮೆಂಟ್ ಹಾಕಿ ಮುಚ್ಚಲಾಗಿತ್ತು. ಈ ಬಾರಿ ಬೆಟ್ಟದ ಮೇಲಿರುವ ಹಲವು ಮನೆಗಳ ಗೋಡೆಗಳಲ್ಲಿ ಬಿರುಕು ಮೂಡಿದ್ದು, ಜನರು ನಿದ್ದೆಬಿಟ್ಟು ರಾತ್ರಿ ಇಡೀ ಪಾರಕಾಯುತ್ತಿದ್ದಾರೆ. ಅದರಲ್ಲೂ ಕಳೆದ ಬಾರಿ ಇದೇ ರೀತಿ ಬಿರುಕು ಬಿಟ್ಟು ಕೆಲವು ದಿನಗಳ ಹಿಂದೆಯಷ್ಟೇ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದು ಬಿದ್ದು ಅರ್ಚಕರ ಕುಟುಂಬ ನಾಪತ್ತೆಯಾಗಿತ್ತು. ಈ ದುರಂತದಿಂದ ಬೆಚ್ಚಿಬಿದ್ದಿರುವ ಅಯ್ಯಪ್ಪ ಬೆಟ್ಟದ ನಿವಾಸಿಗಳು ಹಗಲು ರಾತ್ರಿ ಆತಂಕದಲ್ಲೇ ಬದುಕುತ್ತಿದ್ದಾರೆ.

    ವರ್ಷದ ಹಿಂದೆ ಈ ಬೆಟ್ಟ ಬಿರುಕು ಬಿಟ್ಟಾಗ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಬಳಿಕ ಸಿಮೆಂಟ್ ಹಾಕಿ ಬಿರುಕಿಗೆ ನೀರು ಹೋಗದಂತೆ ಮುಚ್ಚಲಾಗಿತ್ತು. ಆದರೆ ಇದೀಗ ಬೆಟ್ಟ ಅಲ್ಲಲ್ಲಿ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಉಸ್ತುವಾರಿ ಸಚಿವ ವಿ.ಸೋಮಣ್ಣ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಎಲ್ಲ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಚಿಂತಿಸಲಾಗಿದೆ. ಮುಂದಿನ ಮಳೆಗಾಲದ ಹೊತ್ತಿಗೆ ಶಾಶ್ವತ ಪರಿಹಾರ ಒದಗಿಸಲಾಗುದು ಎಂದು ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್ ಭರವಸೆ ನೀಡಿದ್ದಾರೆ.

  • ಮೃತ ನಾರಾಯಣ್ ಅಚಾರ್ ಮಕ್ಕಳಿಗೆ ಪರಿಹಾರ ವಿತರಿಸಿದ ಸಚಿವ ವಿ.ಸೋಮಣ್ಣ

    ಮೃತ ನಾರಾಯಣ್ ಅಚಾರ್ ಮಕ್ಕಳಿಗೆ ಪರಿಹಾರ ವಿತರಿಸಿದ ಸಚಿವ ವಿ.ಸೋಮಣ್ಣ

    ಮಡಿಕೇರಿ: ತಲಕಾವೇರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ನಾರಾಯಣ ಆಚಾರ್ ಹಾಗೂ ಸೋದರ ಆನಂದತೀರ್ಥ ಅವರ ಕುಟುಂಬಸ್ಥರಿಗೆ ಸಚಿವ ವಿ.ಸೋಮಣ್ಣ ಪರಿಹಾರ ಚೆಕ್ ವಿತರಿಸಿದ್ದಾರೆ.

    ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರ ಐದು ಲಕ್ಷ ಪರಿಹಾರದಲ್ಲಿ ಇಬ್ಬರು ಮಕ್ಕಳಾದ ನಮಿತಾ ಹಾಗೂ ಸುಶೀಲಾ ಅವರಿಗೆ ತಲಾ 2.5 ಲಕ್ಷ ಪರಿಹಾರ ಚೆಕ್ ವಿತರಿಸಿ ಸಾಂತ್ವನ ಹೇಳಿದ್ದಾರೆ. ಆನಂದ ತೀರ್ಥ ಅವರು ಬ್ರಹ್ಮಚಾರಿ ಆಗಿದ್ದ ಹಿನ್ನೆಲೆಯಲ್ಲಿ ತಂಗಿ ಸುಶೀಲಾ ಅವರಿಗೆ 5 ಲಕ್ಷ ಚೆಕ್ ನೀಡಲಾಗಿದೆ. ಇನ್ನು ಇಡೀ ಕುಟುಂಬವನ್ನು ಕಳೆದುಕೊಂಡು ಒಂಬಂಟಿ ಆಗಿದ್ದೇನೆ. ಮತ್ತೆ ಮನೆಗೆ ಬರಲು ಯಾರೂ ಇಲ್ಲ ಎಂದು ನಾರಾಯಣ ಆಚಾರ್ ಸಹೋದರಿ ಅಣ್ಣಂದಿರನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ನನ್ನ ಅಣ್ಣ ತಮ್ಮಂದಿರು ಸ್ವಲ್ಪವೂ ನೋವಾಗದಂತೆ ನೋಡಿಕೊಂಡಿದ್ದರು.ಈಗ ನನಗೆ ತವರು ಮನೆಕಡೆಯವರಾಗಿ ಒಬ್ಬರೂ ಇಲ್ಲ. ಅತ್ತ ತವರು ಮನೆಯೂ ಇಲ್ಲ. ನನ್ನ ತಾಯಿಯ ಸಂಬಂಧಿಯಾಗಿ ಇನ್ನು ಯಾರು ಇಲ್ಲ ಎಂದು ಆನಂದತೀರ್ಥರ ತಂಗಿ ಸುಶೀಲ ಕಣ್ಣೀರು ಹಾಕಿದರು.

    ಭೂಕುಸಿತವಾದ ಸ್ಥಳದಲ್ಲಿ ಇಂದು ಮತ್ತೊಂದು ಶವ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದೇ ಭೂಕುಸಿತದಲ್ಲಿ ರವಿಕಿರಣ್ ಮತ್ತು ಶ್ರೀನಿವಾಸ್ ಇಬ್ರು ನಾಪತ್ತೆಯಾಗಿದ್ದರು. ಸದ್ಯ ದೊರೆತಿರುವ ಶವ ಯಾರದ್ದೆಂದು ಗುರುತಿಸಲು ಸಾಧ್ಯವಾಗುತ್ತಿಲ್ಲ. ಇಬ್ಬರ ಸಂಬಂಧಿಕರು ಬಂದು ಬಳಿಕ ಶವದ ಗುರುತು ಪತ್ತೆ ಹಚ್ಚಬೇಕಾಗಿದೆ. ಇಲ್ಲದಿದ್ದರೆ ಡಿಎನ್‍ಎ ಪರೀಕ್ಷೆಗೆ ಕಳುಹಿಸ ಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.