Tag: ಬೆತ್ತಲೆ

  • ಸಮಂತಾ ಬೆತ್ತಲೆ ಫೋಟೋ: ನಿಜವಾದ ಫೋಟೋ ಹಿಂದಿದ್ದಾರೆ ನೀಲಿತಾರೆ

    ಸಮಂತಾ ಬೆತ್ತಲೆ ಫೋಟೋ: ನಿಜವಾದ ಫೋಟೋ ಹಿಂದಿದ್ದಾರೆ ನೀಲಿತಾರೆ

    ಳೆದ ಎರಡ್ಮೂರು ದಿನಗಳಿಂದ ಸಮಂತಾ ಅವರದ್ದು ಎನ್ನಲಾದ ಬೆತ್ತಲೆ (nude) ಫೋಟೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗುತ್ತಿದೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಬೆತ್ತಲೆ ಫೋಟೋ ಹಾಕಿ, ಡಿಲಿಟ್ ಮಾಡಿದ್ದಾರೆ ಎಂದು ಸಮಂತಾ ಮೇಲೆ ಆರೋಪ ಮಾಡಲಾಗುತ್ತಿದೆ. ಸಮಂತಾ ಹೀಗೆಲ್ಲ ಹೇಗೆ ಮಾಡೋಕೆ ಸಾಧ್ಯವೆಂದು ಅವರ  ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದರು. ಅದು ಯಾರ ಫೋಟೋ ಎಂದು ಬೆನ್ನುಕೂಡ ಬಿದ್ದಿದ್ದರು. ಈಗ ಸತ್ಯ ಬಯಲಾಗಿದೆ.

    ಸಮಂತಾರದ್ದು ಎನ್ನಲಾದ ಆ ಬೆತ್ತಲೇ ಫೋಟೋ ಅಮೆರಿಕಾದ ನೀಲಿ ತಾರೆ ವೇನಸ್ ವೇಲೆನ್ಸಿಯಾದ್ದು (Venus Valency) ಎಂದು ಅಭಿಮಾನಿಯೊಬ್ಬ ಪತ್ತೆ ಮಾಡಿದ್ದಾನೆ. ಆ ಫೋಟೋವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿ, ಸಮಂತಾ ಅಂಥವರು ಅಲ್ಲವೆಂದು ಸಾರಿದ್ದಾನೆ. ಅಭಿಮಾನಿಯ ಈ ಹುಡುಕಾಟಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

    ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬೆತ್ತಲೆ ಫೋಟೋ ಹಾಕಿದ್ದಾರೆ ಎನ್ನುವ ವಿಚಾರ ಮೊನ್ನೆಯಿಂದ ಭರ್ಜರಿ ಸೇಲ್ ಆಗಿತ್ತು.

    ಡಿವೋರ್ಸ್ ನಂತರ ಸಮಂತಾ ಯಾಕೆ ಹೀಗೆ ಆದರು ಎನ್ನುವ ಪ್ರಶ್ನೆಯನ್ನೂ ಹಲವರು ಮಾಡಿದ್ದರು. ಬೆತ್ತಲೇ ಫೋಟೋ ಹಾಕಿ, ಯಾಕೆ ಡಿಲಿಟ್ ಮಾಡಿದರು ಎನ್ನುವ ಕುತೂಹಲ ಕೂಡ ಹಲವರದ್ದಾಗಿತ್ತು. ಅದು ಅವರೇ ಮಾಡಿದ್ದಾರಾ? ಅಥವಾ ಬೇರೆ ಯಾರಾದರೂ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎನ್ನುವ ಚರ್ಚೆ ಕೂಡ ಮಾಡಲಾಯಿತು.

     

    ಈಗ ಸಮಂತಾ ಈ ಕುರಿತಂತೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮದಲ್ಲದ ತಪ್ಪಿಗೆ ಅಥವಾ ಪ್ರತಿಕ್ರಿಯೆ ನೀಡಲು ಯೋಗ್ಯವಲ್ಲದಕ್ಕೆ ಪ್ರತಿಕ್ರಿಯೆ ನೀಡಬಾರದು ಎಂದು ಬರೆದುಕೊಂಡಿದ್ದಾರೆ. ಅಂದರೆ, ಅದು ತಮ್ಮಿಂದ ಆಗಿರುವ ತಪ್ಪಲ್ಲ. ಹಾಗಾಗಿ ಪ್ರತಿಕ್ರಿಯೆ ಅನಗತ್ಯ ಎಂದಿದ್ದಾರೆ.

  • ಹಣ ಪಡೆದು ಬೆತ್ತಲೆ ನಾಟಕ: ನಟಿ ಶ್ರೀರೆಡ್ಡಿ ರಹಸ್ಯ ಬಯಲು

    ಹಣ ಪಡೆದು ಬೆತ್ತಲೆ ನಾಟಕ: ನಟಿ ಶ್ರೀರೆಡ್ಡಿ ರಹಸ್ಯ ಬಯಲು

    ನಗೆ ಅನ್ಯಾಯವಾಗಿದೆ,  ಲೈಂಗಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಹಲವಾರು ಬಾರಿ ತೆಲುಗು ನಿರ್ಮಾಪಕರ ಸಂಘ, ಕಲಾವಿದರ ಸಂಘದ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ (Protest) ಮಾಡಿದ್ದ ನಟಿ ಶ್ರೀರೆಡ್ಡಿ (Srireddy) ಕುರಿತಾಗಿ ಆಘಾತಕಾರಿ ಸುದ್ದಿಯೊಂದು ಬಂದಿದೆ. ಬೇರೆಯವರಿಂದ ಹಣ ಪಡೆದುಕೊಂಡು ಹೀಗೆ ಬೆತ್ತಲೆ (Bettale) ನಾಟಕ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರವೇ ಹೊರ ಹಾಕಲಾಗುವುದು ಎಂದು ಉದ್ಯಮದವರು ಹೇಳುತ್ತಿದ್ದಾರೆ.

    ಶ್ರೀರೆಡ್ಡಿ ಈ ಹಿಂದೆ ಮೀಟೂ ಆರೋಪ ಮಾಡಿದ್ದರು. ಅದರಲ್ಲೂ ನರೇಶ್ ಮತ್ತು ಪವಿತ್ರಾ ಲೋಕೇಶ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಹಿಂದೆ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರೆಡ್ಡಿ ಬೆತ್ತಲೆ ಪ್ರತಿಭಟನೆ ಮಾಡಿದ್ದರು ಈ ಸಂದರ್ಭವನ್ನು ನೆನಪಿಸಿಕೊಂಡು ಲೈವ್ ಮಾಡಿದ್ದ ಶ್ರೀರೆಡ್ಡಿ ಮತ್ತೆ ನರೇಶ್ ಹಾಗೂ ಪವಿತ್ರಾ ವಿಷಯವನ್ನು ಪ್ರಸ್ತಾಪಿಸಿದ್ದರು. ‘ನಾನು ಮೀಟೂ ವಿರುದ್ಧ ಪ್ರತಿಭಟನೆ ನಡೆಸಿದಾಗ ನರೇಶ್‌, ಆ್ಯಸಿಡ್‌ನಿಂದ ಕೈ ತೊಳಯಬೇಕು ಎಂದು ಕಾಮೆಂಟ್ ಮಾಡಿದ್ದರು. ಈಗ ಅವರ ಸ್ಥಿತಿ ಏನಾಗಿದೆ ನೋಡಿ’ ಎಂದು ಕಾಮೆಂಟ್ ಮಾಡಿದ್ದರು.

    ಯಾರ ಬದುಕಿನಲ್ಲೂ ಯಾರು ಬಿರುಗಾಳಿ ಎಬ್ಬಿಸಬಾರದು ಎಂದು ಪರೋಕ್ಷವಾಗಿ ಪವಿತ್ರಾ ಲೋಕೇಶ್ ಕುರಿತಾಗಿಯೂ ಮಾತನಾಡಿದ್ದ ಶ್ರೀರೆಡ್ಡಿ, ರಮ್ಯಾ ಅವರ ಜೀವನವನ್ನು ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ. ಅಲ್ಲದೇ, ಮಹಿಳೆ ಅಂದಾಕ್ಷಣ ಅವರ ಶೀಲವನ್ನು ಶಂಕಿಸಲಾಗುತ್ತದೆ. ರಮ್ಯಾ ಮೇಲೂ ಅದೇ ಆಗಿದೆ. ಆದರೆ, ನಿಜವಾಗಿಯೂ ಜನರ ಮುಂದೆ ಬೆತ್ತಲೆ ಆದವರು ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ನರೇಶ್ ಅವರನ್ನು ಕೇಳಿದ್ದರು.

     

    ಶ್ರೀರೆಡ್ಡಿ ಲೈವ್ ಗೆ ಬಂದು ಮತ್ತೆ ಹಲವು ಕಲಾವಿದರ ಹೆಸರುಗಳನ್ನು ಬಹಿರಂಗ ಪಡಿಸಿದ್ದರು. ಅವರು ಜೀವನವೂ ಇದೇ ಹಾದಿಯಲ್ಲಿದೆ. ಮುಂದೆ ಜನರಿಗೂ ಗೊತ್ತಾಗಲಿದೆ ಎಂದು ಅಬ್ಬರಿಸಿದ್ದರು. ಶ್ರೀರೆಡ್ಡಿ ಲೈವ್ ಗೆ ಬರುತ್ತಿದ್ದಂತೆಯೇ ಮೀಟೂ ಚಳವಳಿ ಮತ್ತೆ ಆರಂಭವಾಗಲಿದೆಯಾ ಅನ್ನುವ ಅನುಮಾನವನ್ನಂತೂ ಅವರು ಹುಟ್ಟು ಹಾಕಿದ್ದರು. ಇದೆಲ್ಲದ ಹಿಂದೆ ಹಣದ ವಾಸನೆ ಇದೆ ಎನ್ನಲಾಗುತ್ತಿದೆ.

  • ‘ಆಸ್ಕರ್’ ವೇದಿಕೆಯ ಮೇಲೆ ಬೆತ್ತಲೆ: ಜಾನ್ ಸೇನಾ ವಿರುದ್ಧ ಭಾರೀ ಟೀಕೆ

    ನಿನ್ನೆಯಷ್ಟೇ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಬ್ಲುಡಬ್ಲುಇ ಸ್ಟಾರ್ ಹಾಗೂ ಹಾಲಿವುಡ್ ನಟ ಜಾನ್ ಸೇನಾ, ಬೆತ್ತಲೆಯಾಗಿ ವೇದಿಕೆಗೆ ಆಗಮಿಸಿದ್ದರು. ಈ ನಡೆ ಭಾರೀ ಟೀಕೆಗೆ ವ್ಯಕ್ತವಾಗಿದೆ. ಜಗತ್ತಿನ ಸಾಕಷ್ಟು ದಿಗ್ಗಜರು ಸೇರಿದಂತೆ ಸಿನಿ ಪ್ರೇಮಿಗಳು ಈ ನಡೆಯನ್ನು ಖಂಡಿಸಿದ್ದಾರೆ. ಪ್ರತಿಷ್ಠಿತ ವೇದಿಕೆಯಲ್ಲಿ ಇಂಥದ್ದೆಲ್ಲ ಆಗಬಾರದು ಎಂದು ಸಲಹೆ ನೀಡಿದ್ದಾರೆ.

    ಆಸ್ಕರ್ ‍ಪ್ರಶಸ್ತಿ (Oscar Award) ಪ್ರದಾನ ಸಮಾರಂಭದಲ್ಲಿ ಒಂದಿಲ್ಲೊಂದು ಎಡವಟ್ಟು ನಡೆಯೋದು ಕಾಮನ್ ಅನ್ನುವಂತಾಗಿದೆ. ಕೆಲವನ್ನು ಆಸ್ಕರ್ ಸಮಿತಿಯೇ ಡಿಸೈನ್ ಮಾಡಿದರೆ, ಇನ್ನೂ ಕೆಲವು ತಾನಾಗಿಯೇ ಅಲ್ಲಿ ನಡೆದು ಬಿಡುತ್ತವೆ. ಈವರೆಗೂ ನಡೆದ ಎಲ್ಲ ಸಂಗತಿಗಳು ವೈರಲ್ ಆಗುವುದರ ಜೊತೆಗೆ ವಿವಾದವನ್ನೂ ಹುಟ್ಟು ಹಾಕಿವೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿಯನ್ನು ಘೋಷಣೆ ಮಾಡುವುದಕ್ಕಾಗಿ ಖ್ಯಾತ ಹಾಲಿವುಡ್ ನಟ, ಡಬ್ಲುಡಬ್ಲುಇ ಸ್ಟಾರ್ ಜಾನ್ ಸೇನಾ  (John Cena)ಬೆತ್ತಲೆಯಾಗಿ (Nude) ವೇದಿಕೆಗೆ ಬಂದಿದ್ದರು. ಸ್ಟೋರಿ ಬೋರ್ಡ್ ನಿಂದ ಖಾಸಗಿ ಅಂಗಾಂಗ ಮುಚ್ಚಿಕೊಂಡು ಮೈಕ್ ಮುಂದೆ ನಿಂತಿದ್ದರು. ನಂತರ ಅವರಿಗೆ ವೇದಿಕೆಯ ಮೇಲೆ ಡಿಸೈನರ್ ಬಟ್ಟೆ ತೊಡಿಸಲಾದರೂ, ಈ ನಡೆ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

    ಪ್ರತಿಷ್ಠಿತ 96ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕಾದ ಲಾಸ್ ಏಂಜಲೀಸ್ ನ ಡಾಲ್ಬಿ ಚಿತ್ರಮಂದಿರದಲ್ಲಿ ನಡೆಯಿತು. ಅತ್ಯಂತ ಕುತೂಹಲ ಮೂಡಿಸಿದ್ದ ನಾಮ ನಿರ್ದೇಶನ ಪಟ್ಟಿಯಲ್ಲಿ ಯಾರೆಲ್ಲ ಪ್ರಶಸ್ತಿ ಪಡೆಯಲಿದ್ದಾರೆ ಎನ್ನುವ ಸಹಜ ನಿರೀಕ್ಷೆ ಇದ್ದೇ ಇತ್ತು. ಈ ಬಾರಿ ಅತ್ಯುತ್ತಮ ನಟ ಪ್ರಶಸ್ತಿಯು ಓಪನ್ ಹೈಮರ್ ಸಿನಿಮಾಗಾಗಿ ಸಿಲಿಯನ್ ಮರ್ಫಿ ಪಡೆದುಕೊಂಡರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಪೂರ್ ಥಿಂಗ್ಸ್ ಸಿನಿಮಾಗಾಗಿ ಎಮ್ಮಾ ಸ್ಟೋನ್ ಪಡೆದುಕೊಂಡಿದ್ದಾರೆ.

     

    ಅತ್ಯುತ್ತಮ ಚಿತ್ರ ಪ್ರಶಸ್ತಿಯು ಓಪನ್ ಹೈಮರ್ ಚಿತ್ರ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಓಪನ್ ಹೈಮರ್ ಚಿತ್ರಕ್ಕಾಗಿ ಪಡೆದುಕೊಂಡಿದ್ದಾರೆ. ಓಪನ್ ಹೈಮರ್ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೆ, ದಿ ಹೋಲ್ಡೋವರ್ಸ್ ಸಿನಿಮಾದಲ್ಲಿನ ಅಭಿನಯಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್‍ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

  • ಆಸ್ಕರ್ ಪ್ರಶಸ್ತಿ: ಅತ್ಯುತ್ತಮ ಕಾಸ್ಟ್ಯೂಮ್ ಡಿಸೈನರ್ ಘೋಷಿಸಲು ಬೆತ್ತಲೆಯಾಗಿ ಬಂದ ನಟ

    ಆಸ್ಕರ್ ಪ್ರಶಸ್ತಿ: ಅತ್ಯುತ್ತಮ ಕಾಸ್ಟ್ಯೂಮ್ ಡಿಸೈನರ್ ಘೋಷಿಸಲು ಬೆತ್ತಲೆಯಾಗಿ ಬಂದ ನಟ

    ಸ್ಕರ್ ‍ಪ್ರಶಸ್ತಿ (Oscar Award) ಪ್ರದಾನ ಸಮಾರಂಭದಲ್ಲಿ ಒಂದಿಲ್ಲೊಂದು ಎಡವಟ್ಟು ನಡೆಯೋದು ಕಾಮನ್ ಅನ್ನುವಂತಾಗಿದೆ. ಕೆಲವನ್ನು ಆಸ್ಕರ್ ಸಮಿತಿಯೇ ಡಿಸೈನ್ ಮಾಡಿದರೆ, ಇನ್ನೂ ಕೆಲವು ತಾನಾಗಿಯೇ ಅಲ್ಲಿ ನಡೆದು ಬಿಡುತ್ತವೆ. ಈವರೆಗೂ ನಡೆದ ಎಲ್ಲ ಸಂಗತಿಗಳು ವೈರಲ್ ಆಗುವುದರ ಜೊತೆಗೆ ವಿವಾದವನ್ನೂ ಹುಟ್ಟು ಹಾಕಿವೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಅತ್ಯುತ್ತಮ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿಯನ್ನು ಘೋಷಣೆ ಮಾಡುವುದಕ್ಕಾಗಿ ಖ್ಯಾತ ಹಾಲಿವುಡ್ ನಟ, ಡಬ್ಲುಡಬ್ಲುಇ ಸ್ಟಾರ್ ಜಾನ್ ಸೇನಾ  (John Sena)ಬೆತ್ತಲೆಯಾಗಿ (Nude) ವೇದಿಕೆಗೆ ಬಂದಿದ್ದಾರೆ. ಸ್ಟೋರಿ ಬೋರ್ಡ್ ನಿಂದ ಖಾಸಗಿ ಅಂಗಾಂಗ ಮುಚ್ಚಿಕೊಂಡು ಮೈಕ್ ಮುಂದೆ ನಿಂತಿದ್ದಾರೆ. ನಂತರ ಅವರಿಗೆ ವೇದಿಕೆಯ ಮೇಲೆ ಡಿಸೈನರ್ ಬಟ್ಟೆ ತೊಡಿಸಲಾಗಿದೆ. ಈ ನಡೆ ಸಾಕಷ್ಟು ವಿರೋಧಕ್ಕೂ ಕಾರಣವಾಗಿದೆ.

    ಪ್ರತಿಷ್ಠಿತ 96ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕಾದ ಲಾಸ್ ಏಂಜಲೀಸ್ ನ ಡಾಲ್ಬಿ ಚಿತ್ರಮಂದಿರದಲ್ಲಿ ನಡೆಯಿತು. ಅತ್ಯಂತ ಕುತೂಹಲ ಮೂಡಿಸಿದ್ದ ನಾಮ ನಿರ್ದೇಶನ ಪಟ್ಟಿಯಲ್ಲಿ ಯಾರೆಲ್ಲ ಪ್ರಶಸ್ತಿ ಪಡೆಯಲಿದ್ದಾರೆ ಎನ್ನುವ ಸಹಜ ನಿರೀಕ್ಷೆ ಇದ್ದೇ ಇತ್ತು. ಈ ಬಾರಿ ಅತ್ಯುತ್ತಮ ನಟ ಪ್ರಶಸ್ತಿಯು ಓಪನ್ ಹೈಮರ್ ಸಿನಿಮಾಗಾಗಿ ಸಿಲಿಯನ್ ಮರ್ಫಿ ಪಡೆದುಕೊಂಡರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಪೂರ್ ಥಿಂಗ್ಸ್ ಸಿನಿಮಾಗಾಗಿ ಎಮ್ಮಾ ಸ್ಟೋನ್ ಪಡೆದುಕೊಂಡಿದ್ದಾರೆ.

    ಅತ್ಯುತ್ತಮ ಚಿತ್ರ ಪ್ರಶಸ್ತಿಯು ಓಪನ್ ಹೈಮರ್ ಚಿತ್ರ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಓಪನ್ ಹೈಮರ್ ಚಿತ್ರಕ್ಕಾಗಿ ಪಡೆದುಕೊಂಡಿದ್ದಾರೆ. ಓಪನ್ ಹೈಮರ್ ಚಿತ್ರದ ನಟನೆಗಾಗಿ ರಾಬರ್ಟ್ ಡೌನಿ ಜ್ಯೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೆ, ದಿ ಹೋಲ್ಡೋವರ್ಸ್ ಸಿನಿಮಾದಲ್ಲಿನ ಅಭಿನಯಕ್ಕಾಗಿ ಡೇವಿನ್ ಜಾಯ್ ರಾಂಡೋಲ್ಫ್‍ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

    ಕಳೆದ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿ ಬಂದಿದ್ದವು. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಬಂದಿದ್ದರೆ, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರವೂ ಆಸ್ಕರ್ ಪ್ರಶಸ್ತಿ ಪಡೆದಿತ್ತು. ಈ ಬಾರಿ ಭಾರತದ ಯಾವುದೇ ಚಿತ್ರಕ್ಕೆ ಅಥವಾ ಡಾಕ್ಯುಮೆಂಟರಿಗೆ ಪ್ರಶಸ್ತಿ ಬಾರದೇ ನಿರಾಸೆ ಮೂಡಿಸಿದೆ. ಸಾಕ್ಷ್ಯಚಿತ್ರ ವಿಭಾಗದಲ್ಲಿ ಟು ಕಿಲ್ ಎ ಟೈಗರ್ ಸಾಕ್ಷ್ಯ ಚಿತ್ರವಿತ್ತು. ಆದರೆ, ಅದಕ್ಕೆ ಈ ಬಾರಿ ಪ್ರಶಸ್ತಿ ಬಂದಿಲ್ಲ.

  • ಭಾರತ ಕ್ರಿಕೆಟ್ ತಂಡ ಫೈನಲ್ ಗೆದ್ದರೆ ಬೆತ್ತಲಾಗುವೆ ಎಂದ ನಟಿ ರೇಖಾ

    ಭಾರತ ಕ್ರಿಕೆಟ್ ತಂಡ ಫೈನಲ್ ಗೆದ್ದರೆ ಬೆತ್ತಲಾಗುವೆ ಎಂದ ನಟಿ ರೇಖಾ

    ನಿನ್ನೆಯಷ್ಟೇ ಭಾರತ ಕ್ರಿಕೆಟ್ ತಂಡ (Team India) ಸೆಮಿ ಫೈನಲ್ ಗೆದ್ದು, ಫೈನಲ್ ತಲುಪಿದೆ. ಇಡೀ ದೇಶಕ್ಕೆ ದೇಶವೇ ಟೀಮ್ ಬಗ್ಗೆ ಕೊಂಡಾಡುತ್ತಿದೆ. ಆದರೆ, ನಟಿ ತೆಲುಗಿನ ನಟಿ ರೇಖಾ ಬೊಜ್ (Rekha Boj) ಮತ್ತೊಂದು ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ.

    ಭಾರತ ಕ್ರಿಕೆಟ್ (Cricket) ತಂಡವು ಫೈನಲ್ ನಲ್ಲಿ ಗೆದ್ದರೆ ತಾವು ವಿಶಾಖಪಟ್ಟಣಂ ಬೀಚ್ ನಲ್ಲಿ ಬೆತ್ತಲೆಯಾಗಿ (Nude) ನಡೆಯುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    12 ವರ್ಷಗಳ ಹಿಂದೆ ಬಾಲಿವುಡ್ ನಟಿ ಪೂನಂ ಪಾಂಡೆ ಅವರು ಇಂಥದ್ದೊಂದು ಸ್ಟೇಟ್ ಮೆಂಟ್ ಕೊಟ್ಟು ಪ್ರಸಿದ್ಧಿಯಾಗಿದ್ದರು. ಭಾರತ ತಂಡ ವಿಶ್ವಕಪ್ ಗೆದ್ದರೆ ಮುಂಬೈ ಬೀದಿಗಳಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಹೇಳಿ ಬಿಟ್ಟಿ ಪ್ರಚಾರ ಪಡೆದಿದ್ದರು. ಇದೀಗ ಇಂಥದ್ದೇ ಹಾದಿಯನ್ನು ತುಳಿದಿದ್ದಾರೆ ನಟಿ ರೇಖಾ.

    ರೇಖಾ ಆಗಿರುವ ಪೋಸ್ಟ್ ಗ ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಗೆಲ್ಲುತ್ತದೆ. ಅಂದು ನಾವು ಬೀಚ್ ನಲ್ಲಿ ಕಾಯುತ್ತೇವೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ದಿನಾಂಕ ಮತ್ತು ಸಮಯವನ್ನು ತಿಳಿಸಿಲ್ಲ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಮಾತಿಗೆ ತಪ್ಪಬಾರದು ಎಂದು ವಿನಂತಿಸಿದ್ದಾರೆ.

     

    ಸೋಷಿಯಲ್ ಮೀಡಿಯಾದಲ್ಲಿ ಸದಾ ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ಸುದ್ದಿಯಾಗುವ ರೇಖಾ, ರಂಗೀಲಾ, ಸ್ವಾತಿ ಚಿನುಕು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಅವರಿಗೆ ಸಿಕ್ಕಿಲ್ಲ. ಹೀಗಾಗಿ ಪದೇ ಪದೇ ವಿವಾದಾತ್ಮಕ ಪೋಸ್ಟ್ ಗಳನ್ನು ಇವರು ಹಂಚಿಕೊಳ್ಳುತ್ತಲೇ ಇರುತ್ತಾರೆ.

  • ನಾನು ಅನ್ಯಗ್ರಹದಿಂದ ಬಂದಿದ್ದೇನೆ – ಬೀದಿಯಲ್ಲಿ ಬೆತ್ತಲಾಗಿ ಓಡಾಡ್ತಿದ್ದ ವ್ಯಕ್ತಿ ಅರೆಸ್ಟ್

    ನಾನು ಅನ್ಯಗ್ರಹದಿಂದ ಬಂದಿದ್ದೇನೆ – ಬೀದಿಯಲ್ಲಿ ಬೆತ್ತಲಾಗಿ ಓಡಾಡ್ತಿದ್ದ ವ್ಯಕ್ತಿ ಅರೆಸ್ಟ್

    ವಾಷಿಂಗ್ಟನ್: ಬಾಲಿವುಡ್‌ನ ಪಿಕೆ ಸಿನಿಮಾ ನೋಡಿದವರಿಗೆ ಈ ಒಂದು ಘಟನೆ ಥೇಟ್ ಅದರಂತೆಯೇ ಎನಿಸುತ್ತದೆ. ಅಮೆರಿಕದಲ್ಲಿ (America) ವ್ಯಕ್ತಿಯೊಬ್ಬ ಬೀದಿಯಲ್ಲಿ ಬೆತ್ತಲಾಗಿ (Naked) ಸಂಚರಿಸಿದ್ದಕ್ಕೆ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆತ ಅನ್ಯಗ್ರಹದಿಂದ (Alien) ಬಂದಿರುವುದಾಗಿ ತಿಳಿಸಿದ್ದಾನೆ.

    ಫ್ಲೋರಿಡಾದ (Florida) ಪಾಮ್ ಬೀಚ್‌ನಲ್ಲಿ (Palm Beach) 44 ವರ್ಷದ ವ್ಯಕ್ತಿಯೊಬ್ಬ ಬೆತ್ತಲಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಳಿಕ ಆತ ತಾನು ಬೇರೊಂದು ಗ್ರಹದಿಂದ ಬಂದಿದ್ದೇನೆ ಎಂದಿದ್ದಾನೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ಪೊಲೀಸರು ಬಂಧಿಸಿದಾಗ ಆತ ನಾನು ಬಟ್ಟೆಗಳನ್ನು ಎಲ್ಲಿ ಇಟ್ಟಿದ್ದೇನೋ ಗೊತ್ತಿಲ್ಲ ಎಂದಿದ್ದಾನೆ. ಆತ ತನ್ನ ಹೆಸರು ಅಥವಾ ಯಾವುದೇ ಗುರುತುಗಳನ್ನು ನೀಡಲು ನಿರಾಕರಿಸಿದ್ದಾನೆ. ಇದಾದ ಬಳಿಕ ಪೊಲೀಸರು ಆತನ ಬಗ್ಗೆ ಪತ್ತೆ ಹಚ್ಚಿ, ಹೆಸರನ್ನು ಜೇಸನ್ ಸ್ಮಿತ್ ಎಂದು ಗುರುತಿಸಿದ್ದಾರೆ.

    ವ್ಯಕ್ತಿ ನಾನು ಭೂಮಿಯವನೇ ಅಲ್ಲ, ಅನ್ಯಗ್ರಹದಿಂದ ಬಂದಿದ್ದೇನೆ. ಕೆಲ ದಿನಗಳಿಂದ ಪಾಮ್ ಬೀಚ್‌ನಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೀಗ ಪೊಲೀಸರು ಅಸಭ್ಯವಾಗಿ ವರ್ತಿಸಿರುವುದಕ್ಕೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಾಸಕ ಎನ್ ಮಹೇಶ್‌ಗೆ ಎದೆನೋವು – ಆಸ್ಪತ್ರೆಗೆ ದಾಖಲು

  • ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ

    ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ

    ನಿರ್ಮಾಪಕರೊಬ್ಬರು ತಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ ಮಾಡಿದ ಘಟನೆ ತೆಲುಗು ಚಿತ್ರೋದ್ಯಮದಲ್ಲಿ ನಡೆದಿದೆ. ತೆಲುಗು ಸಿನಿಮಾ ರಂಗದಲ್ಲಿ ಸಾಕಷ್ಟು ಹಿಟ್ ಸಿನಿಮಾಗಳನ್ನು ತಯಾರಿಸಿದ ನಿರ್ಮಾಪಕ ಹಾಗೂ ವಿತರಕರೂ ಆಗಿರುವ ಬನ್ನಿ ವಾಸು ಆಫೀಸ್ ಮುಂದೆ ಹೈಡ್ರಾಮಾ ನಡೆದಿದ್ದು, ನಟಿ ಸುನಿತಾ ಬೋಯಾ ಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಬೆಳಗ್ಗೆ ಬನ್ನಿ ವಾಸು ಅವರ ಗೀತಾ ಆರ್ಟ್ಸ್ ಕಚೇರಿ ಮುಂದೆ ಬಂದ ನಟಿ ಸುನಿತಾ ಬೋಯಾ, ಬೆತ್ತಲೆಯಾಗಿ ಪ್ರತಿಭಟನೆಗೆ ಕೂತಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಟಿಯನ್ನು ವಶಕ್ಕೆ ಪಡೆದಿದ್ದಾರೆ. ಆನಂತರ ಆಕೆಗೆ ಬಟ್ಟೆ ಹಾಕಿ ಸಮಾಧಾನದ ಮಾತುಗಳನ್ನೂ ಆಡಿದ್ದಾರೆ. ಸುನಿತಾಗೆ ಆದ ಮೋಸವನ್ನು ಕೇಳಿದ್ದಾರೆ. ನಂತರ ಆಕೆಗೆ ಸ್ವಲ್ಪ ಹಣ ಕೊಟ್ಟೂ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್

    ಬನ್ನಿ ವಾಸು ನಿರ್ಮಾಣದ ಧಾರಾವಾಹಿಯಲ್ಲಿ ಸುನಿತಾ ನಟಿಸುತ್ತಿದ್ದರಂತೆ. ಅವರಿಗೆ ಕೊಡಬೇಕಾದ ಹಣವನ್ನು ಪಾವತಿಸಿಲ್ಲವಂತೆ. ಹಾಗಾಗಿ ತಮಗೆ ಬದುಕು ನಡೆಸಲೂ ಕಷ್ಟವಾಗುತ್ತಿದೆ. ನನಗೆ ದುಡ್ಡು ಕೊಡದೇ ಸತಾಯಿಸುತ್ತಿದ್ದಾರೆ ಎಂದು ನಟಿ ಪೊಲೀಸ್ ಮುಂದೆ ಹೇಳಿಕೊಂಡಿದ್ದಾರೆ. ಕೂಡಲೇ ವಾಸು ಅವರನ್ನು ಪೊಲೀಸರು ಸಂಪರ್ಕಿಸಿ, ಹಣ ಕೊಡುವ ಭರವಸೆಯನ್ನೂ ನಟಿಗೆ ಕೊಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣ: ಇಂದು ಪೊಲೀಸ್ ಠಾಣೆಗೆ ಬರಲಿಲ್ಲ ನಟ

    ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣ: ಇಂದು ಪೊಲೀಸ್ ಠಾಣೆಗೆ ಬರಲಿಲ್ಲ ನಟ

    ಬಾಲಿವುಡ್ ನಟ ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರು ಪೊಲೀಸ್ ಠಾಣೆಗೆ ಹಾಜರಾಗಿ, ತನಿಖೆ ಎದುರಿಸಬೇಕಿತ್ತು. ಆಗಸ್ಟ್ 22 ರಂದು ಮುಂಬೈ ಠಾಣೆಗೆ ಬರುವಂತೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ಆದರೆ, ರಣ್ವೀರ್ ಇವತ್ತು ಠಾಣೆಗೆ ಬಾರದೇ ತಪ್ಪಿಸಿಕೊಂಡಿದ್ದಾರೆ. ಇನ್ನೂ ಎರಡು ವಾರಗಳ ಸಮಯಾವಕಾಶವನ್ನು ಅವರು ಕೇಳಿದ್ದಾರೆ.

    ಮುಂಬೈ ಎನ್.ಜಿಓ ಸಂಸ್ಥೆಯೊಂದು ರಣ್ವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಪಾಲ್ಗೊಂಡಿದ್ದಕ್ಕೆ ದೂರು ದಾಖಲಿಸಿತ್ತು. ಇದೊಂದು ಮಹಿಳೆಯರಿಗೆ ಮಾಡುತ್ತಿರುವ ಅವಮಾನ ಎಂದು ದೂರಿನಲ್ಲಿ ದಾಖಲಾಗಿತ್ತು. ಈ ಸಂಬಂಧ ಆಗಸ್ಟ್ 12 ರಂದು ಮುಂಬೈ ಪೊಲೀಸರು ರಣ್ವೀರ್ ಸಿಂಗ್ ಗೆ ಸಮನ್ಸ್ ಜಾರಿ ಮಾಡಿದ್ದರು. ಠಾಣಾಧಿಕಾರಿಯ ಮುಂದೆ ಹಾಜರಾಗಬೇಕೆಂದು ತಿಳಿಸಿದ್ದರು. ಇದನ್ನೂ ಓದಿ:ಬಾಲಿವುಡ್ ರಾಧೆ ಆಲಿಯಾ ಭಟ್ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ!

    ತಾವು ಸತತವಾಗಿ ಶೂಟಿಂಗ್ ನಲ್ಲಿ ಬ್ಯುಸಿ ಆಗಿರುವ ಕಾರಣದಿಂದಾಗಿ ಪೊಲೀಸ್ ಸ್ಟೇಶನ್ ಗೆ ಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇನ್ನೂ ಎರಡು ವಾರಗಳ ಕಾಲ ಸಮಯ ಕೊಡಿ ಎಂದು ಠಾಣಾಧಿಕಾರಿಗೆ ಪತ್ರ ಬರೆದಿದ್ದಾರೆ ರಣ್ವೀರ್. ನಂತರದ ದಿನಗಳಲ್ಲಿ ಠಾಣೆಗೆ ಬರುವುದಾಗಿ ಅವರು ತಿಳಿಸಿದ್ದಾರೆ. ಈ ಫೋಟೋ ಶೂಟ್ ವೈರಲ್ ಆಗುತ್ತಿದ್ದಂತೆಯೇ ಇನ್ನೂ ಕೆಲವ ನಟರು ಇದೇ ಹಾದಿಯನ್ನು ತಿಳಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಗ್ನ ಫೋಟೋ ವಿವಾದ: ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್‌ಗೆ ಸಮನ್ಸ್ ಜಾರಿ

    ನಗ್ನ ಫೋಟೋ ವಿವಾದ: ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್‌ಗೆ ಸಮನ್ಸ್ ಜಾರಿ

    ರ್ನಾಟಕದ ಅಳಿಯ, ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಈ ಹಿಂದೆ ನಗ್ನ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ರಣವೀರ್ ಸಿಂಗ್ ಅವರೇ ಈ ರೀತಿ ಫೋಟೋಶೂಟ್ ಮಾಡಿಸಿಕೊಂಡಿರುವಾಗ, ನಾವು ಏಕೆ ಹಾಗೆ ಮಾಡಬಾರದು ಎಂದು ಹಲವರು ಇದೇ ದಾರಿಯಲ್ಲೇ ನಡೆದರು. ಹಾಗಾಗಿ ರಣವೀರ್ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಅವರ ಮೇಲೆ ದೂರು ದಾಖಲಿಸಲಾಯಿತು.

    ರಣವೀರ್ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನನ್ವಯ ಮುಂಬೈ ಪೊಲೀಸರು ರಣವೀರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ರಣವೀರ್ ಅವರ ಆಪ್ತರ ಪ್ರಕಾರ, ಅವರು ಮುಂಬೈನಿಂದ ದೂರವಿದ್ದು, ಆಗಸ್ಟ್ 16ರ ನಂತರ ವಾಪಸ್ಸಾಗಲಿದ್ದಾರಂತೆ. ಆನಂತರವಷ್ಟೇ ತನಿಖಾಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಟ್ರೈಯಾಂಗಲ್‌ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ

    ಮುಂಬೈ ಮೂಲದ ಸ್ವಯಂ ಸೇವಾ ಸಂಸ್ಥೆಯೊಂದು ಚೆಂಬೂರು ಪೊಲೀಸ್ ಠಾಣೆಯಲ್ಲಿ ಜುಲೈ 26 ರಂದು ದೂರು ನೀಡಿ, ಎಫ್‍.ಐ.ಆರ್ ದಾಖಲಿಸಿದ್ದರು. ಇದು ಮಹಿಳೆಯರನ್ನು ಅಪಮಾನ ಮಾಡುವ ಉದ್ದೇಶದಿಂದ ಆಗಿರುವ ಫೋಟೋ ಶೂಟ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇವೆಲ್ಲವನ್ನೂ ಪರಿಗಣಿಸಿ, ರಣವೀರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲಾಗಿದ್ದೆ ಬಂತು ಆಫರ್ ಗಳ ಮೇಲೆ ಆಫರ್ ಬರುತ್ತಿವೆಯಂತೆ. ಮೊದ ಮೊದಲು ಈ ನಟ ಯಾಕೆ ಹೀಗೆ ಮಾಡಿದರು ಎನ್ನುವ ಮಾತುಗಳು ಕೇಳಿ ಬಂದವು. ಹಲವರು ರಣವೀರ್ ವಿರುದ್ಧ ಸಿಡಿದು ಬಿದ್ದರು, ಕೆಲವರು ಗೇಲಿ ಮಾಡಿದರು. ಇನ್ನೂ ಕೆಲವರು ತಾವೂ ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡು ಸಂಭ್ರಮಿಸಿದರು. ಇಷ್ಟೆಲ್ಲಗಳ ನಡುವೆ ರಣವೀರ್ ತಮ್ಮ ಪಾಡಿಗೆ ತಾವು ಸುಮ್ಮನಿದ್ದರು. ಈಗ ಅವರು ಮಾತನಾಡಬೇಕಾದ ಸಂದರ್ಭ ಬಂದಿದೆ.

    ಪ್ರಾಣಿಗಳ ದಯಾ ಸಂಘ ಪೇಟಾ ರಣವೀರ್ ಸಿಂಗ್ ಅವರಿಗೆ ಹೀಗೊಂದು ಮನವಿ ಮಾಡಿದ್ದು, ಪ್ರಾಣಿಗಳ ರಕ್ಷಣೆಗಾಗಿ ನೀವು ಬೆತ್ತಲಾಗಬೇಕೆಂದು ಮನವಿ ಮಾಡಿದೆ. ಈ ಬೆತ್ತಲೆ ಆಗುವುದಕ್ಕೂ ಪ್ರಾಣಿಗಳ ರಕ್ಷಣೆಗೂ ಏನು ಸಂಬಂಧ ಎನ್ನುವ ಪ್ರಶ್ನೆ ಮೂಡುವುದು ಸಹಜ. ಬೆತ್ತಲೆಯಾದರೆ, ಜನರ ಗಮನ ಸೆಳೆಯುವುದು ಸಲೀಸು. ಈ ಸಮಯದಲ್ಲಿ ಪ್ರಾಣಿಗಳ ರಕ್ಷಣೆ ಕುರಿತು ರಣವೀರ್ ಮಾತನಾಡಬಹುದು ಎನ್ನುವ ಉಪಾಯ ಇದರ ಹಿಂದಿದೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಪೇಟಾ ಈ ಹಿಂದೆ ಇಂತಹ ಅನೇಕ ಪ್ರಯೋಗಗಳನ್ನು ಮಾಡಿದೆ. ಅದರಲ್ಲಿ ಗೆಲುವು ಕೂಡ ಕಂಡಿದೆ. ಪ್ರಾಣಿಗಳ ದಯೆ ವಿಷಯದಲ್ಲಿ ಅನೇಕ ಬಾರಿ ಸಿನಿಮಾಗಳ ವಿರುದ್ಧವೇ ಇದು ದಾವೆ ಹೂಡಿದೆ. ಆದರೂ, ಈ ಬಾರಿ ಸಿನಿಮಾ ಕಲಾವಿದರ ಮೂಲಕ ಪ್ರಾಣಿಗಳ ರಕ್ಷಣೆ ಕುರಿತಾಗಿ ಅಭಿಯಾನ ಮಾಡಲು ಹೊರಟಿದೆ. ಪೇಟಾ ಏನೋ ಇಂಥದ್ದೊಂದು ಕನಸು ಕಂಡಿದೆ. ಅದಕ್ಕೆ ರಣವೀರ್ ಸಿಂಗ್ ಹೇಗೆ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]