Tag: ಬೆಲ್ಜಿಯಂ

  • ಮೆಹುಲ್ ಚೋಕ್ಸಿಗೆ ಮುಂಬೈನ ಆರ್ಥರ್ ರೋಡ್‌ನಲ್ಲಿ ಸಿದ್ಧವಾಗಿರೋ ಜೈಲು ಕೋಣೆ ಹೇಗಿದೆ ಗೊತ್ತಾ?

    ಮೆಹುಲ್ ಚೋಕ್ಸಿಗೆ ಮುಂಬೈನ ಆರ್ಥರ್ ರೋಡ್‌ನಲ್ಲಿ ಸಿದ್ಧವಾಗಿರೋ ಜೈಲು ಕೋಣೆ ಹೇಗಿದೆ ಗೊತ್ತಾ?

    – ಟಿವಿ, ವೆಸ್ಟರ್ನ್ ಟಾಯ್ಲೆಟ್ ಸೇರಿ ಹಲವು ಹೈಟೆಕ್‌ ಸೌಲಭ್ಯ

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ (PNB Loan Scam) ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi)ಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿಸಿದೆ. ಭಾರತಕ್ಕೆ ಹಸ್ತಾಂತರಿಸಲು ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ಆಂಟ್ವೆರ್ಪ್ ಕೋರ್ಟ್ ಹೇಳಿದೆ.

    ಇನ್ನು ಭಾರತಕ್ಕ ಹಸ್ತಾಂತರ ಬೆನ್ನಲ್ಲೇ ಮೆಹುಲ್ ಚೋಕ್ಸಿಗಾಗಿ ಮುಂಬೈನ ಆರ್ಥರ್ ರೋಡ್ ಜೈಲು (Mumbai’s Arthur Road Jail) ಸಜ್ಜಾಗಿದೆ. ಭಾರತಕ್ಕೆ ಬಂದ್ಮೇಲೆ ಆತನನ್ನ ಬ್ಯಾರಕ್ ನಂ.12ರಲ್ಲಿ ಇರಿಸಲಾಗುತ್ತೆ. ಅದರ ಒಳಾಂಗಣ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ: PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    500 ಚದರ ಅಡಿ ಬ್ಯಾರಕ್ ಇದಾಗಿದ್ದು, 2 ಕೋಣೆಗಳಿವೆ. ಟಿವಿ, ವೆಸ್ಟರ್ನ್ ಟಾಯ್ಲೆಟ್, ವಾಶ್‌ರೂಮ್, ಪ್ಯಾಸೇಜ್, ಸೊಳ್ಳೆ ಪರದೆ, ಟ್ಯೂಬ್‌ಲೈಟ್, ಸೀಲಿಂಗ್ ಫ್ಯಾನ್ ಸೌಲಭ್ಯಗಳೊಂದಿಗೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ.

    ಇನ್ನೂ ವೈದ್ಯಕೀಯ ತಪಾಸಣೆ, ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಹೊರತುಪಡಿಸಿ ಉಳಿದ ಸಮಯದಲ್ಲಿ ಚೋಕ್ಸಿ ಜೈಲಿನ ಒಳಾಂಗಣದಲ್ಲೇ ಇರಲಿದ್ದಾರೆ. ಸದ್ಯ ಚೋಕ್ಸಿ ಬ್ಲಡ್‌ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸಾಲ ಮಾಡಿ ವಿದೇಶಕ್ಕೆ ಪರಾರಿ – ಫೆಬ್ರವರಿಯಲ್ಲಿ ನೀರವ್‌ ಮೋದಿ ಆಸ್ತಿ ಹರಾಜು

    13 ಸಾವಿರ ಕೋಟಿ ವಂಚನೆ
    ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ, ಸಾಲ ಮರುಪಾವತಿಸದೇ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರು. ಇವರಿಬ್ಬರಿಗಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿತ್ತು. 2018ರಲ್ಲಿ ದೇಶದಿಂದ ಪರಾರಿಯಾಗಿದ್ದ ಚೋಕ್ಸಿ, ಮೊದಲು ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು. ಬಳಿಕ ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಚೋಕ್ಸಿಯನ್ನ ಬೆಲ್ಜಿಯಂನಲ್ಲಿ ಬಂಧಿಸಲಾಗಿತ್ತು.

    1,271 ಕೋಟಿ ಮೌಲ್ಯದ ಆಸ್ತಿ ಜಪ್ತಿ
    2018 ರಲ್ಲಿ ಇಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಮುಂಬೈನ ಐಷಾರಾಮಿ ಪ್ರದೇಶದಲ್ಲಿರುವ ಅವರ 2 ಫ್ಲಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕ್ರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್, ನಾಗ್ಪುರದಲ್ಲಿನ ಜಮೀನುಗಳು, ಅಲ್ಲಾಬಾಗ್‌ನಲ್ಲಿರುವ 2 ಬಂಗಲೆಗಳು ಮತ್ತು ಸೂರತ್‌ನಲ್ಲಿರುವ ಕಚೇರಿಯನ್ನು ಇಡಿ ವಶಪಡಿಸಿಕೊಂಡಿತ್ತು. ಈವರೆಗೆ ಇಡಿ ಚೋಕ್ಸಿ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದೆ. 2019ರಲ್ಲಿ ಚೋಕ್ಸಿ ದೇಶದಿಂದ ಪರಾರಿಯಾಗಿದ್ದಾನೆ ಎಂದು ಹೇಳಿತ್ತು.

  • ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು (Mehul Choksi) ಬೆಲ್ಜಿಯಂನ (Belgium) ಅಧಿಕಾರಿಗಳು ಬಂಧಿಸಿದ್ದಾರೆ. ಭಾರತದ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED) ಮಾಡಿದ ಕೋರಿಕೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    65 ವರ್ಷದ ಮೆಹುಲ್ ಚೋಕ್ಸಿ, 2018ರಿಂದ ಭಾರತದಿಂದ ಪರಾರಿಯಾಗಿದ್ದರು. ಈ ವರ್ಷದ ಏ.12 ರಿಂದ ಬೆಲ್ಜಿಯಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರನ್ನು ಬಂಧಿಸಲಾಗಿದೆ. ಚೋಕ್ಸಿ ಆರೋಗ್ಯ ಕಾರಣಗಳಿಗಾಗಿ ಆಂಟಿಗುವಾದಿಂದ ಬೆಲ್ಜಿಯಂಗೆ ತೆರಳಿದ್ದರು ಎನ್ನಲಾಗಿದೆ.ಇದನ್ನೂ ಓದಿ: ಜಾತಿ ಸಮೀಕ್ಷೆ | 1 ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? – ಅಶೋಕ್ ಕಿಡಿ

    ಭಾರತೀಯ ತನಿಖಾ ಸಂಸ್ಥೆಗಳು ಅವರ ವಿರುದ್ಧ ಜಾರಿಯಲ್ಲಿರುವ ಎರಡು ಬೇಲ್ ರಹಿತ ವಾರಂಟ್‌ಗಳನ್ನು ಆಧರಿಸಿ 2024ರ ಸೆಪ್ಟೆಂಬರ್‌ನಲ್ಲಿ ಬೆಲ್ಜಿಯಂ ಸರ್ಕಾರಕ್ಕೆ ಹಸ್ತಾಂತರ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಮನವಿಯ ಆಧಾರದ ಮೇಲೆ ಮೆಹುಲ್ ಚೋಕ್ಸಿಯನ್ನು ಬಂಧಿಸಲಾಗಿದೆ.

    ಪ್ರಸ್ತುತ ಚೋಕ್ಸಿಯನ್ನು ಬೆಲ್ಜಿಯಂನ ಬಂಧನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದು, ಕಳೆದ ಆರು ತಿಂಗಳಿನಿಂದ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ಹೇಳಲಾಗುತ್ತಿದ್ದು, ಅವರು ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ಸೂಚಿಸಿವೆ.

    ಚೋಕ್ಸಿಗೆ ಪೌರತ್ವ ಸಿಕ್ಕಿದ್ದು ಹೇಗೆ?
    65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ಎಫ್-ರೆಸಿಡೆನ್ಸಿ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದರು. ಅವನ ಪತ್ನಿ ಬೆಲ್ಜಿಯಂನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    2024ರ ಸೆಪ್ಟೆಂಬರ್‌ನಲ್ಲಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಬೆಲ್ಜಿಯಂಗೆ ಮನವಿ ಮಾಡಿದ್ದವು. ಆದ್ರೆ ಅಂದು ಚೋಕ್ಸಿ ಪರ ವಕೀಲರು, ನನ್ನ ಕಕ್ಷಿಗಾರನ ಆರೋಗ್ಯ ಸರಿಯಿಲ್ಲ, ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಅಧಿಕಾರಿಗಳು, ಚೋಕ್ಸಿ ಭಾರತದಲ್ಲೂ ಚಿಕಿತ್ಸೆ ಪಡೆಯಬಹುದು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇಡಿ ಮತ್ತು ಸಿಬಿಐನಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಬೆಲ್ಜಿಯಂ ಪೊಲೀಸರು ಅವರನ್ನು ಬಂಧಿಸಿದ್ದಾರೆ.

    ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ, ಪಿಎನ್‌ಬಿ ಬ್ಯಾಂಕ್‌ನ 13,500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆಯ ಆರೋಪದಲ್ಲಿದ್ದಾರೆ. ಚೋಕ್ಸಿಯ ಕಂಪನಿಯಾದ ಗೀತಾಂಜಲಿ ಜೆಮ್ಸ್, ಬ್ಯಾಂಕ್‌ನ ಕೆಲವು ಅಧಿಕಾರಿಗಳ ಸಹಕಾರದೊಂದಿಗೆ ಲೆಟರ್ ಆಫ್ ಅಂಡರ್‌ಟೇಕಿಂಗ್ (ಎಲ್‌ಒಯು) ಮತ್ತು ಫಾರಿನ್ ಲೆಟರ್ ಆಫ್ ಕ್ರೆಡಿಟ್ (ಎಫ್‌ಎಲ್‌ಸಿ)ಗಳನ್ನು ಕಾನೂನುಬಾಹಿರವಾಗಿ ಬಳಸಿಕೊಂಡು ಈ ವಂಚನೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ಈಗಾಗಲೇ ಹಲವು ಚಾರ್ಜ್ಶೀಟ್‌ಗಳನ್ನು ಸಲ್ಲಿಸಿವೆ.ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು

  • PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi)ಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದ ವಜ್ರದ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ, ಸಾಲ ಮರುಪಾವತಿಸದೇ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರು. ಇವರಿಬ್ಬರಿಗಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸುತ್ತಿದೆ. ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಚೋಕ್ಸಿ ಅವರನ್ನು ಬೆಲ್ಜಿಯಂನಲ್ಲಿ ಶನಿವಾರ ಬಂಧಿಸಲಾಗಿದೆ. ಸದ್ಯ ಚೋಕ್ಸಿ ಜೈಲಿನಲ್ಲಿದ್ದಾರೆ ಎಂದು ತಿಳಿದುಬಂದಿದೆ.

    2018ರಲ್ಲಿ ದೇಶದಿಂದ ಪರಾರಿಯಾಗಿದ್ದ ಚೋಕ್ಸಿ, ಆರಂಭದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು ಎಂದು ಹೇಳಾಗುತ್ತಿತ್ತು. ಆದರೆ, ಇತ್ತೀಚೆಗೆ ಅವರು ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಸಿಬಿಐ ಬೆಲ್ಡಿಯಂ ಸರ್ಕಾರಕ್ಕೆ ಮನವಿ ಮಾಡಿತ್ತು. ಇನ್ನೂ ನೀರವ್‌ ಮೋದಿ ಗಡೀಪಾರು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.

    ಸದ್ಯ ಚೋಕ್ಸಿ ಬೆಲ್ಜಿಯಂ ಕೋರ್ಟ್‌ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಮನವಿ ಮಾಡಬಹುದು. ಹೀಗಾಗಿ ಆರೋಪಿಯನ್ನ ಭಾರತಕ್ಕೆ ಕರೆತರಲು ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    1,271 ಕೋಟಿ ಮೌಲ್ಯದ ಆಸ್ತಿ ಜಪ್ತಿ
    2018 ರಲ್ಲಿ ಇಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಮುಂಬೈನ ಐಷಾರಾಮಿ ಪ್ರದೇಶದಲ್ಲಿರುವ ಅವರ 2 ಫ್ಲಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕ್ರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್, ನಾಗ್ಪುರದಲ್ಲಿನ ಜಮೀನುಗಳು, ಅಲ್ಲಾಬಾಗ್‌ನಲ್ಲಿರುವ 2 ಬಂಗಲೆಗಳು ಮತ್ತು ಸೂರತ್‌ನಲ್ಲಿರುವ ಕಚೇರಿಯನ್ನು ಇಡಿ ವಶಪಡಿಸಿಕೊಂಡಿತ್ತು. ಈವರೆಗೆ ಇಡಿ ಚೋಕ್ಸಿ ವಿರುದ್ಧ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿದೆ. 2019ರಲ್ಲಿ ಚೋಕ್ಸಿ ದೇಶದಿಂದ ಪರಾರಿಯಾಗಿದ್ದಾನೆ ಎಂದು ಹೇಳಿತ್ತು.

    ಚೋಕ್ಸಿಗೆ ಪೌರತ್ವ ಸಿಕ್ಕಿದ್ದು ಹೇಗೆ?
    65 ವರ್ಷದ ಚೋಕ್ಸಿ 2023ರ ನವೆಂಬರ್‌ 15ರಿಂದ ʻಎಫ್‌- ರೆಸಿಡೆನ್ಸಿʼ ಪೌರತ್ವ ಕಾರ್ಡ್‌ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದ. ಅವನ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್‌ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

    ಬ್ಲಡ್‌ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಚೊಕ್ಸಿ
    2024ರ ಸೆಪ್ಟೆಂಬರ್‌ನಲ್ಲಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಬೆಲ್ಜಿಯಂಗೆ ಮನವಿ ಮಾಡಿದ್ದವು. ಆದ್ರೆ ಅಂದು ಚೋಕ್ಸಿ ಪರ ವಕೀಲರು, ನನ್ನ ಕಕ್ಷಿಗಾರನ ಆರೋಗ್ಯ ಸರಿಯಿಲ್ಲ, ಬ್ಲಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಅಧಿಕಾರಿಗಳು, ಚೋಕ್ಸಿ ಭಾರತದಲ್ಲೂ ಚಿಕಿತ್ಸೆ ಪಡೆಯಬಹುದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ಇಡಿ ಮತ್ತು ಸಿಬಿಐನಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಬೆಲ್ಜಿಯಂ ಪೊಲೀಸರು ಅವರನ್ನು ಬಂಧಿಸಿದ್ದಾರೆ.

  • ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ತನ್ನ ದೇಶದಲ್ಲಿರುವುದಾಗಿ ಯೂರೋಪಿಯನ್‌ ದೇಶವಾದ ಬೆಲ್ಜಿಯಂ (Belgium) ಖಚಿತಪಡಿಸಿದೆ ಎಂದು ವರದಿಯಾಗಿದೆ.

    ಸಂದರ್ಶನವೊಂದರಲ್ಲಿ ಮಾತನಾಡುವಾಗ ಬೆಲ್ಜಿಯಂ ವಿದೇಶಾಂಗ ಸಚಿವಾಲಯವು ಅವರ ಉಪಸ್ಥಿತಿಯನ್ನು ಖಚಿತಪಡಿಸಿದೆ. ಆದಾಗ್ಯೂ ಅವರ ವೈಯಕ್ತಿಕ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದ್ರೆ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ತಮ್ಮ ಸಹವರ್ತಿಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿಕೊಂಡಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ.

    ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ʻಎಫ್- ರೆಸಿಡೆನ್ಸಿʼ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

  • ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ (PNB Scam) ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ಬೆಲ್ಜಿಯಂನ್‌ ಆಂಟ್ವೆರ್ಪ್‌ನಲ್ಲಿ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ಬೆಲ್ಜಿಯಂ ಅಧಿಕಾರಿಗಳನ್ನ ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (PNB) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!

    ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಷಂಸ್ಥೆಯೊಂದು ವರದಿ ಮಾಡಿದೆ.

    65 ವರ್ಷದ ಚೋಕ್ಸಿ 2023ರ ನವೆಂಬರ್‌ 15ರಿಂದ ʻಎಫ್‌- ರೆಸಿಡೆನ್ಸಿʼ ಪೌರತ್ವ ಕಾರ್ಡ್‌ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್‌ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬಿಸಿಲಿನಿಂದ ಬರಿದಾದ ವೇದಾವತಿ ನದಿ ಒಡಲು – ತೀರದಲ್ಲೇ ಬೋರ್ ಕೊರೆಸಲು ರೈತರ ಸಾಹಸ

    ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್‌ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್‌ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

  • ಮೊರೊಕ್ಕೊ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

    ಮೊರೊಕ್ಕೊ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

    ಬೆಲ್ಜಿಯನ್: ಫಿಫಾ ವಿಶ್ವಕಪ್‍ನಲ್ಲಿ (FIFA World Cup) ಮೊರೊಕ್ಕೊ (Morocco) ವಿರುದ್ಧ ಬೆಲ್ಜಿಯಂ (Belgium) ಸೋತ ಬೆನ್ನಲ್ಲೇ ಬೆಲ್ಜಿಯನ್‍ನಲ್ಲಿ ಅಭಿಮಾನಿಗಳು ರೊಚ್ಚಿಗೆದ್ದು ಹಿಂಸಾಚಾರಕ್ಕಿಳಿದಿದ್ದಾರೆ.

    ಬೆಲ್ಜಿಯಂ ವಿರುದ್ಧ ಮೊರೊಕ್ಕೊ 2-0 ಅಂತರದಲ್ಲಿ ಗೆದ್ದ ಬೆನ್ನಲ್ಲೇ ಇತ್ತ ಬೆಲ್ಜಿಯಂ ರಾಜಧಾನಿ ಬೆಲ್ಜಿಯನ್‍ನಲ್ಲಿ ಫುಟ್‍ಬಾಲ್ ಅಭಿಮಾನಿಗಳು ಹಿಂಸಾಚಾರಕ್ಕೆ ಇಳಿದಿದ್ದಾರೆ. ರಸ್ತೆಯಲ್ಲಿದ್ದ ಕಾರ್, ಬೈಕ್‍ಗಳಿಗೆ ಬೆಂಕಿ ಇಟ್ಟು ಮೊರೊಕ್ಕೊ ದೇಶದ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!

    ಫುಟ್‍ಬಾಲ್ ಅಭಿಮಾನಿಗಳ ಕೋಪಕ್ಕೆ ಹಿಂಸಾಚಾರ ಹೆಚ್ಚುತ್ತಿದ್ದಂತೆ ಬೆಲ್ಜಿಯಂ ಪೊಲೀಸರು 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಡಿದ ವರುಣ – 2ನೇ ಏಕದಿನ ಪಂದ್ಯ 12 ಓವರ್‌ಗಳಿಗೆ ಅಂತ್ಯ

    ಹಿಂಸಾಚಾರಕ್ಕೆ ಇಳಿದ ಗುಂಪೊಂದು ರಾಷ್ಟ್ರೀಯ ಹೆದ್ದಾರಿಗಿಳಿದು ದಾಂಧಲೆಗೆ ಮುಂದಾಗಿದೆ. ಘಟನೆಯಲ್ಲಿ ಪತ್ರಕರ್ತರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಪೊಲೀಸರು ಹಿಂಸಾಚಾರದ ಸ್ಥಳದಲ್ಲಿ ಟಿಯರ್ ಗ್ಯಾಸ್ ಹಾಗೂ ನೀರು ಸಿಂಪಡಿಸಿ ಜನರನ್ನು ಚದುರಿಸಿದ್ದಾರೆ. ಈಗಾಗಲೇ ಬೆಲ್ಜಿಯನ್‍ನಲ್ಲಿ ಹಲವು ನಿರ್ಬಂಧಗಳನ್ನು ಹೊರಡಿಸಲಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೆಟ್ರೋ ರೈಲ್ವೆ ಹಳಿಗೆ ತಳ್ಳಿದ ವ್ಯಕ್ತಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

    ಮೆಟ್ರೋ ರೈಲ್ವೆ ಹಳಿಗೆ ತಳ್ಳಿದ ವ್ಯಕ್ತಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

    ಮೆಟ್ರೋ ರೈಲು ಆಗಮಿಸುತ್ತಿದ್ದ ವೇಳೆ ಫ್ಲಾಟ್ ಫಾರ್ಮ್‍ನಲ್ಲಿ ನಿಂತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಉದ್ದೇಶ ಪೂರ್ವಕವಾಗಿ ರೈಲ್ವೆ ಹಳಿಗೆ ತಳ್ಳಿದ್ದರೂ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾಳೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    metro train

    ಶುಕ್ರವಾರ ಸಂಜೆ ಬೆಲ್ಜಿಯಂನಲ್ಲಿ ಈ ಘಟನೆ ನಡೆದಿದ್ದು, 30 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ಮಹಿಳೆ ಮೆಟ್ರೋ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿರುವುದನ್ನು ಕಾಣಬಹುದಾಗಿದೆ. ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಕಪ್ಪು ಬಣ್ಣದ ಟಿ-ಶರ್ಟ್ ಧರಿಸಿದ್ದ ವ್ಯಕ್ತಿಯೊರ್ವ ಮಹಿಳೆಯನ್ನು ಹಿಂದಿನಿಂದ ಬಂದು ತಳ್ಳಿದ್ದಾನೆ. ಈ ವೇಳೆ ರೈಲ್ವೆ ಹಳಿಯ ಮೇಲೆ ಮಹಿಳೆ ಬಿದ್ದು, ಪ್ರಜ್ಞೆ ಕಳೆದುಕೊಳ್ಳುತ್ತಾಳೆ. ಇದನ್ನು ಗಮನಿಸಿದ ರೈಲು ಚಾಲಕ ಕೂಡಲೇ ಬ್ರೇಕ್ ಹಾಕಿದ್ದು, ಕೇವಲ ಇಂಚುಗಳ ಅಂತರದಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ನಂತರ ಸ್ಥಳದಲ್ಲಿಯೇ ಇದ್ದ ಜನರು ಆಕೆಯ ಸಹಾಯಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಎಫೆಕ್ಟ್ ದಾಖಲೆ ಮಾರಾಟ – 358 ಕೋಟಿ ಟ್ಯಾಬ್ಲೆಟ್‍ಗಳು ಮಾರಾಟ

    ನಂತರ ಸಂತ್ರಸ್ತೆ ಹಾಗೂ ಮೆಟ್ರೋ ಚಾಲಕ ಇಬ್ಬರನ್ನು ಸಹ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಿ ಕೊಡಲಾಯಿತು. ಮಹಿಳೆಯನ್ನು ರೈಲ್ವೆ ಹಳಿಗೆ ತಳ್ಳಿ ಓಡಿ ಹೋಗುತ್ತಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆತನ ಮಾನಸಿಕ ಸ್ಥಿತಿಯನ್ನು ಪರಿಶೀಲಿಸಲು ನ್ಯಾಯಾಲಯದಿಂದ ಮನೋವೈದ್ಯಕೀಯ ತಜ್ಞರನ್ನು ನೇಮಿಸಲಾಗಿದ್ದು, ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಆರೋಗ್ಯ ಸಚಿವರ ತವರೂರಲ್ಲೇ ಕುರಿ ಸಂತೆ- ಸಾವಿರಾರು ಮಂದಿ ಜಮಾವಣೆ

  • ಖಾಲಿಸ್ತಾನಿ ಉಗ್ರರಿಂದ ರೈತನಾಯಕನ ಹತ್ಯೆಗೆ ಸಂಚು

    ಖಾಲಿಸ್ತಾನಿ ಉಗ್ರರಿಂದ ರೈತನಾಯಕನ ಹತ್ಯೆಗೆ ಸಂಚು

    – ಭಾರತದಲ್ಲಿ ಅಶಾಂತಿ ಸೃಷ್ಟಿಸಲು ಯತ್ನ
    – ಅಂತರಾಷ್ಟ್ರಿಯ ಷಡ್ಯತಂತ್ರದ ಬಗ್ಗೆ ಸ್ಫೋಟಕ ವಿಚಾರ ಪ್ರಕಟ

    ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಓರ್ವ ರೈತ ನಾಯಕನ ಹತ್ಯೆಗೆ ಖಲಿಸ್ತಾನಿ ಉಗ್ರರು ಸಂಚು ರೂಪಿಸಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಬೆಲ್ಜಿಯಂ ಮತ್ತು ಇಂಗ್ಲೆಂಡ್‍ನ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಂಚು ರೂಪಿಸುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ಗುಪ್ತಚರ ವಿಭಾಗ ಸರ್ಕಾರಕ್ಕೆ ತಿಳಿಸಿದೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಗುಪ್ತಚರ ವಿಭಾಗ ತಿಳಿಸಿರುವ ಮಾಹಿತಿ ಪ್ರಕಾರ ಸಿಂಘುಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತ ನಾಯಕರನ್ನು ಗುರಿಯಾಗಿಸಿ ಅವರ ಮೇಲೆ ದಾಳಿ ಮಾಡಲು ಇಂಗ್ಲೆಂಡ್ ಮತ್ತು ಬೆಲ್ಜಿಯಂನ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳು ಮಾಹಿತಿ ಕಲೆಹಾಕಿ ವ್ಯವಸ್ಥಿತ ಸಂಚನ್ನು ಮಾಡುತ್ತಿದೆ. ಇದರೊಂದಿಗೆ ಈ ಭಯೋತ್ಪಾದಕ ಸಂಘಟನೆಗಳಿಗೆ ಭಾರತದಲ್ಲೇ ಇರುವ ಕೆಲವು ಸಂಘಟನೆಗಳು ಬೆಂಬಲ ನೀಡುತ್ತಿದೆ. ಅದೇ ರೀತಿ ಭಾರತ ನೆರೆಯ ರಾಷ್ಟ್ರಗಳಾದ ಕೆನಡಾ, ಇಂಗ್ಲೆಂಡ್, ಬೆಲ್ಜಿಯಂ ಮತ್ತು ಪಾಕಿಸ್ತಾನದ ಹಲವು ಸಂಘಟನೆಗಳು ಖಲಿಸ್ತಾನದ ಭಯೋತ್ಪಾದಕರಿಗೆ ಬೆಂಬಲ ಸೂಚಿಸುತ್ತಿದೆ ಎಂದು ಮಾಹಿತಿಯನ್ನು ನೀಡಿದೆ.

    ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿ ಒಬ್ಬರು ತಿಳಿಸಿರುವ ಮಾಹಿತಿ ಪ್ರಕಾರ ಖಲಿಸ್ತಾನಿ ಭಯೋತ್ಪಾದಕರು ಈಗಾಗಲೇ ಮೂರು ರೀತಿಯ ಸಂಚನ್ನು ರೂಪಿಸಿ ರೈತನಾಯಕರನ್ನು ಹತ್ಯೆಮಾಡಲು ಪ್ಲಾನ್ ರೂಪಿಸಿದ್ದರು. ಇದರೊಂದಿಗೆ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುವ ರೈತರನ್ನೇ ಗುರಿಯಾಗಿಸಿದ್ದಾರೆ ಎಂದು ತಿಳಿಸಿದ್ದಾರೆ.

    ರೈತ ಪ್ರತಿಭಟನೆಯಲ್ಲಿ ನಿರತರಾಗಿರುವ ನಾಯಕರನ್ನು ಹತ್ಯೆ ಮಾಡಿ ನಂತರ ಭಾರತದಲ್ಲಿ ತೀವ್ರವಾಗಿ ಗಲಾಟೆಗಳನ್ನು ಎಬ್ಬಿಸಿ ಅಶಾಂತಿ ಕದಡುವ ಮೂಲಕ ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲು ಸಂಚು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ.

    ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗೆ ಪಾಕಿಸ್ತಾನದ ಬೆಂಬಲವಿದ್ದು, ಈಗಾಗಲೇ ಪಾಕಿಸ್ತಾನದಿಂದ 400 ಟ್ವಿಟ್ಟರ್ ಖಾತೆಗಳು ರೈತ ಪ್ರತಿಭಟನೆಯ ಕುರಿತು ಕಾರ್ಯಾಚರಣೆ ಮಾಡುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

  • ಬೆಲ್ಜಿಯಂ ಟು ಬೆಂಗಳೂರು – ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕಹಾನಿ

    ಬೆಲ್ಜಿಯಂ ಟು ಬೆಂಗಳೂರು – ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕಹಾನಿ

    – ಡ್ರಗ್ಸ್‌ ಮಾರಾಟದ ಕಿಂಗ್‌ಪಿನ್‌ ಅನಿಕಾ ಅರೆಸ್ಟ್‌
    – ಒಂದು ಮಾತ್ರೆ 1500 ರೂ.ಗೆ ಮಾರಾಟ
    – ಗ್ರಾಹಕರಾಗಿದ್ದಾರೆ ಸ್ಟಾರ್‌ ನಟ, ನಟಿಯರು

    ಬೆಂಗಳೂರು: ಸ್ಯಾಂಡಲ್‌ವುಡ್‌ ಸ್ಟಾರ್‌ ನಟ, ನಟಿಯರು, ಸಂಗೀತಗಾರರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ವಿತರಿಸುತ್ತಿರುವ ಬೃಹತ್‌ ಜಾಲ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಇದೇ 21 ರಂದು ಕಲ್ಯಾಣನಗರದ ರಾಯಲ್ ಸೂಟ್ಸ್ ಅಪಾರ್ಟ್ ಮೆಂಟ್ ಮೇಲೆ ಸಿಸಿಬಿಯ ನಾರ್ಕೋಟಿಕ್ಸ್ ಬ್ಯೂರೋ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಾಗಿರುವ ಅನಿಕಾ, ಅನೂಪ್‌, ರವೀಂದ್ರನ್‌ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಯಾಂಡಲ್‌ವುಡ್‌ ತಾರೆಯರು ಇವರ ನಿತ್ಯದ ಗ್ರಾಹಕರಾಗಿದ್ದ ವಿಚಾರ ತಿಳಿದು ಬಂದಿದೆ.

    ಏನು ಸಿಕ್ಕಿದೆ?
    ಆಗಸ್ಟ್ 21ರಂದು ಬೆಂಗಳೂರಿನ ಕಲ್ಯಾಣ್ ನಗರ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್‍ಮೆಂಟ್‍ನಿಂದ 145 ಎಂಡಿಎಂಎ(ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಮಾತ್ರೆಗಳು ಮತ್ತು 2.20 ಲಕ್ಷಕ್ಕೂ ಹೆಚ್ಚಿನ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ನಿಕೊ ಹೌಸ್‍ನಲ್ಲಿ 96 ಎಂಡಿಎಂಎ ಮಾತ್ರೆಗಳು ಮತ್ತು 180 ಎಲ್‍ಎಸ್‌ಡಿ(ಲೈಸರ್ಜಿಕ್ ಆಸಿಡ್‌ ಡೈಥೈಲಾಮೈಡ್) ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಿರುತರೆಯ ನಂಟು ಹೇಗೆ?
    ಡ್ರಗ್ಸ್ ದಂಧೆಯ ಕಿಂಗ್ ಪಿನ್ ಅನಿಕಾ ಆಗಿದ್ದು ಆಕೆಗೆ ಕಿರುತೆರೆಯ ನಂಟು ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಿಚಾರಣೆಯ ಸಂದರ್ಭದಲ್ಲಿ ಅನಿಕಾ ಕಿರುತೆರೆಯ ನಟರೊಂದಿಗೂ ಸಂಪರ್ಕ ಬೆಳೆಸಿದ್ದ ವಿಚಾರ ತಿಳಿದು ಬಂದಿದೆ. ಆಕೆ ಕೆಲ ಧಾರಾವಹಿಯಲ್ಲೂ ನಟಿಸಿದ್ದು ಹಲವು ನಟ, ನಟಿಯರಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದಳು.

    ರಾಜೇಶ್‌ ಮತ್ತು ಅನೂಪ್‌ ಮೊಬೈಲ್‌ ಪರಿಶೀಲಿಸಿದ ವೇಳೆ ಒಂದು ತಿಂಗಳಿಗೆ 2 ಸಾವಿರ ಗ್ರಾಹಕರನ್ನು ಸಂಪರ್ಕಿಸಿರುವ ಸ್ಫೋಟಕ ಮಾಹಿತಿ ಸಿಕ್ಕಿದೆ. ಅನಿಕಾ ಜರ್ಮನಿ ಮತ್ತು ಬೆಲ್ಜಿಯಂನಿಂದ ಅರ್ಡರ್ ಮಾಡಿ ಡ್ರಗ್ಸ್‌ ತರಿಸುತ್ತಿದ್ದಳು. ಡಾರ್ಕ್ ವೆಬ್ ನ ಮೂಲಕ ಅನಿಕಾ ಡೀಲ್ ಮಾಡುತ್ತಿದ್ದಳು.

    ಕೋವಿಡ್‌ 19 ಲಾಕ್ ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಈ ಸಮಯದಲ್ಲಿ ಡ್ರಗ್ಸ್‌ಗೆ ಬೇಡಿಕೆ ಹೆಚ್ಚಾಗಿತ್ತು. ಈ ತಂಡ ಭಾರೀ ವ್ಯವಹಾರ ನಡೆಸಿದ್ದು ಇಲ್ಲಿಯವರೆಗೆ ಒಟ್ಟು 3 ಕೋಟಿಗೂ ಹೆಚ್ಚು ವ್ಯವಹಾರ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅನಿಕಾ ಹೇಳಿಕೆ ಆಧಾರಿಸಿ ನಟ, ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಯಿದೆ.

    ಪಾರ್ಟಿಯಲ್ಲಿ ಬಳಕೆ:
    ಎಂಡಿಎಂಎ ಮಾದಕ ವಸ್ತಗಳನ್ನು ನಟ, ನಟಿಯರ ಪಾರ್ಟಿಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಜೊತೆಗೆ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಟಾರ್ಗೆಟ್ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಪ್ರತಿ ಎಂಡಿಎಂ ಮಾತ್ರೆಗಳನ್ನು ಆರೋಪಿಗಳನ್ನು ೧,೫೦೦ ರಿಂದ ೨,೫೦೦ ರೂ.ಗೆ ಮಾರಾಟ ಮಾಡುತ್ತಿದ್ದರು.

    ಕಸ್ಟಮ್ ಅಧಿಕಾರಿಗಳು ಭಾಗಿ
    ಎಲ್‌ಎಸ್‌ಡಿ(ಲೈಸರ್ಜಿಕ್ ಆಸಿಡ್‌ ಡೈಥೈಲಾಮೈಡ್) ಡೆನ್ಮಾರ್ಕ್‌, ಬೆಲ್ಜಿಯಂ, ಜರ್ಮನಿಯಲ್ಲಿ ಈ ವ್ಯವಹಾರ ಹಚ್ಚು.ಈ ಎಲ್‌ಎಸ್‌ಡಿಯನ್ನು ಡಾರ್ಕ್‌ ವೆಬ್‌ ಮೂಲಕ ಬುಕ್‌ ಮಾಡಲಾಗುತ್ತಿತ್ತು. ಬೆಲ್ಜಿಯಂ, ಡೆನ್ಮಾರ್ಕ್‌ ಮೂಲಕ ಕೊರಿಯರ್‌ ಬರುತ್ತಿತ್ತು. ದೇಶಕ್ಕೆ ವಿಮಾನದಲ್ಲಿ ಬರುವ ಕೊರಿಯರ್‌ಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲಿಸಬೇಕಾಗುತ್ತದೆ. ಆದರೆ ಸರಿಯಾಗಿ ಪರಿಶೀಲನೆ ನಡೆಸದೇ ಒಳಗಡೆ ಬಿಡುತ್ತಿರುವ ಹಿನ್ನೆಲೆಯಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಮೇಲೆಯೇ ಈಗ ಶಂಕೆ ವ್ಯಕ್ತವಾಗಿದೆ.

    ಅಂಚೆ ಇಲಾಖೆಯಲ್ಲೂ ಚೋರರು:
    ಡೆನ್ಮಾರ್ಕ್, ಬೆಲ್ಜಿಯಂನಿಂದ ಬಂದ ಬಾಕ್ಸ್‌ಗಳು ಅಂಚೆ ಇಲಾಖೆಯಿಂದಲೂ ವಿಲೇವಾರಿಯಾಗುತ್ತದೆ. ಯಾರಿಗೆ ಸೇರಬೇಕೋ ಅವರಿಗೆ ಅಂಚೆ ಇಲಾಖೆಯಿಂದ ಫೋನ್‌ ಹೋಗುತ್ತದೆ. ಫೋನ್ ಮಾಡಿ ಬಾಕ್ಸ್ ಸಂಗ್ರಹಿಸಲು ಗ್ರಾಹಕರನ್ನು ಕರೆಯುತ್ತಾರೆ. ಬಾಕ್ಸ್‌ನಲ್ಲಿ ಬಂದ ವಸ್ತುಗಳನ್ನು ಸ್ಕ್ಯಾನ್‌ ಮಾಡಬೇಕಾಗುತ್ತದೆ. ಆದರೆ ಸ್ಕ್ಯಾನ್‌ ಮಾಡದೇ ಅಂಚೆ ಇಲಾಖೆಯ ಅಧಿಕಾರಿಗಳು ಗ್ರಾಹಕರಿಗೆ ನೀಡುತ್ತಿರುವ ಹಿನ್ನೆಲೆಯಲ್ಲಿ ಈಗ ಅವರ ಮೇಲೂ ಅನುಮಾನ ಕಾಣಿಸಿದೆ.

    ಏನಿದು ಎಲ್ಎಸ್‌ಡಿ?
    ಲೈಸರ್ಜಿಕ್ ಆಸಿಡ್‌ ಡೈಥೈಲಾಮೈಡ್( ಎಲ್ಎಸ್‌ಡಿ) ಮತ್ತು ಬರುವ ಮಾದಕ ವಸ್ತು ಆಗಿದ್ದು, ಒಮ್ಮೆ ಇದನ್ನು ಸೇವಿಸಿದರೆ ರಕ್ತದ ಒತ್ತಡ ಹೆಚ್ಚಾಗುತ್ತದೆ. ದೇಹದ ಉಷ್ಣಾಂಶ ಏರುತ್ತದೆ. ಅರ್ಧ ಗಂಟೆಯಲ್ಲಿ ಕಿಕ್ ಕೊಡಲು ಆರಂಭಿಸುತ್ತದೆ. ಈ ಮಾದಕ ವಸ್ತು 12 ಗಂಟೆಗಳ ಮನುಷ್ಯ ದೇಹದಲ್ಲಿರುತ್ತದೆ. ನಾಲಿಗೆ ಮೂಲಕ ಎಲ್‌ಎಸ್‌ಡಿಯನ್ನು ಸೇವಿಸಬಹುದು. ಹಲವು ದೇಶಗಳಲ್ಲಿ ಎಲ್‌ಎಸ್ ಡಿ ಮಾದಕ ದ್ರವ್ಯವನ್ನು ನಿಷೇಧ ಮಾಡಲಾಗಿದೆ.

  • ಮತ್ತೆ 8 ವಾರ ಬೆಲ್ಜಿಯಂ ಲಾಕ್‍ಡೌನ್

    ಮತ್ತೆ 8 ವಾರ ಬೆಲ್ಜಿಯಂ ಲಾಕ್‍ಡೌನ್

    ಬ್ರಸೆಲ್ಸ್: ಈಗಾಗಲೇ ಹೇರಲಾಗಿರುವ ಲಾಕ್ ಡೌನ್ ಮುಂದಿನ 8 ವಾರಗಳ ಮುಂದುವರಿಯಲಿದೆ ಎಂದು ಬೆಲ್ಜಿಯಂ ಸರ್ಕಾರ ಹೇಳಿದೆ.

    ಬೆಲ್ಜಿಯಂನಲ್ಲಿ 3,401 ಮಂದಿಗೆ ಕೊರೊನಾ ಬಂದಿದ್ದು 340 ಗುಣಮುಖರಾದರೆ 75 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 17 ರಿಂದ ಲಾಕ್‍ಡೌನ್ ಆದೇಶ ಬಂದಿದ್ದು ಮುಂದಿನ ಕನಿಷ್ಟ 8 ವಾರಗಳ ಕಾಲ ಮುಂದುವರಿಯಲಿದೆ ಎಂದು ಆರೋಗ್ಯ ಸಚಿವ ಮ್ಯಾಗ್ಗಿ ಡೆ ಬ್ಲಾಕ್ ತಿಳಿಸಿದ್ದಾರೆ.

    ಈ ಲಾಕ್‍ಡೌನ್ ಎಲ್ಲಿಯವರೆಗೆ ಇರಲಿದೆ ಎಂದು ಪ್ರಶ್ನಿಸಿದ್ದಕ್ಕೆ ಆರೋಗ್ಯ ಸಚಿವರು, ಇದೊಂದು ಮಿಲಿಯನ್ ಡಾಲರ್ ಪ್ರಶ್ನೆ. ಕೊರೊನಾ ಪೀಡಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಟ 8 ವಾರಗಳ ಕಾಲ ಈ ಲಾಕ್‍ಡೌನ್ ಮುಂದುವರಿಯುತ್ತದೆ ಎಂದು

    ಮಾರ್ಚ್ 17 ರಿಂದ ಕೇವಲ ಆಹಾರ ಮತ್ತು ಔಷಧಿ ಮಳಿಗೆಗಳಿಗೆ ತೆರೆಯಲು ಅನುಮತಿ ನೀಡಲಾಗಿದೆ. ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳು ಕಂಪನಿಗಳು ಬಂದ್ ಆಗಿದೆ. ಖಾಸಗಿ ಕಂಪನಿಗಳ ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು ಪೊಲೀಸರು ನಗರದಲ್ಲಿ ಗಸ್ತು ತಿರುಗುತ್ತಿದ್ದಾರೆ.