Tag: ಬೆಲ್ ಬಾಟಮ್ 2

  • ‘ಕಾಂತಾರ 2’ ಸಿನಿಮಾದ ಪ್ಲ್ಯಾನ್ ಮುಂದೂಡಿದ ರಿಷಬ್ ಶೆಟ್ಟಿ: ಬೆಲ್ ಬಾಟಮ್ 2 ಮಾಡ್ತಾರಾ?

    ‘ಕಾಂತಾರ 2’ ಸಿನಿಮಾದ ಪ್ಲ್ಯಾನ್ ಮುಂದೂಡಿದ ರಿಷಬ್ ಶೆಟ್ಟಿ: ಬೆಲ್ ಬಾಟಮ್ 2 ಮಾಡ್ತಾರಾ?

    ಎರಡ್ಮೂರು ದಿನಗಳ ಹಿಂದೆಯಷ್ಟೇ ಕಾಂತಾರ 2 ಸಿನಿಮಾ ಮಾಡುವ ಕುರಿತು ದೈವ ಕೇಳಿದ್ದರು ನಿರ್ದೇಶಕ ರಿಷಬ್ ಶೆಟ್ಟಿ. ದೈವವು ಅಪ್ಪಣೆ ಕೊಡುವುದರ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಗಮನಕ್ಕೂ ತರುವಂತೆ, ಅವರ ಪರವಾನಿಗೆ ತಗೆದುಕೊಳ್ಳುವಂತೆ ಸೂಚಿಸಿತ್ತು. ಅಲ್ಲದೇ, ಸರಿಯಾದ ಕ್ರಮದಲ್ಲಿ ಮತ್ತು ನಂಬಿಕೆ ಹಾಗೂ ಶ್ರದ್ಧೆಯಿಂದ ಸಿನಿಮಾ ಮಾಡುವಂತೆ ಸೂಚಿಸಿತ್ತು. ದೈವವೇ ಸಿನಿಮಾ ಮಾಡುವಂತೆ ಗ್ರೀನ್ ಸಿಗ್ನಲ್ ಕೊಟ್ಟನಂತರ ರಿಷಬ್ ಸ್ಕ್ರಿಪ್ಟ್ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಿಷಬ್ ಹೇಳಿದ್ದೇ ಬೇರೆ.

    ಮಾಧ್ಯಮಗಳ ಜೊತೆ ಮಾತನಾಡಿರುವ ರಿಷಬ್ ಶೆಟ್ಟಿ, ಸದ್ಯಕ್ಕೆ ಕಾಂತಾರ 2 ಸಿನಿಮಾದ ಬಗ್ಗೆ ಏನೂ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ. ಕಾಂತಾರ 2 ಸಿನಿಮಾ ಕುರಿತಾಗಿ ಯಾವುದೇ ನಿರ್ಧಾರ ತಗೆದುಕೊಂಡಿಲ್ಲ ಎಂದೂ ಅವರು ಹೇಳಿದ್ದಾರೆ. ದೈವವನ್ನು ಕೇಳುವುದಕ್ಕಿಂತ ಮುಂಚೆ ಆಗಲೇ ಸ್ಕ್ರಿಪ್ಟ್ ಕೆಲಸದಲ್ಲೂ ಅವರು ತೊಡಗಿದ್ದಾರೆ ಎಂದು ಹೇಳಲಾಗಿತ್ತು. ಟೀಮ್ ಕಟ್ಟಿಕೊಂಡು ಕಾಂತಾರ 2 ಕಥೆಯನ್ನು ಹೆಣೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ಬಗ್ಗೆ ಏನೂ ಯೋಚನೆ ಮಾಡಿಲ್ಲ ಎಂದು ಹೇಳುವ ಮೂಲಕ ಎಲ್ಲವನ್ನೂ ನಿರಾಕರಿಸಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ರಿಷಬ್ ಶೆಟ್ಟಿ ಅವರು ಇಷ್ಟೊತ್ತಿಗಾಗಲೇ ಬೆಲ್ ಬಾಟಮ್ 2 ಸಿನಿಮಾ ಮಾಡಬೇಕಿತ್ತು. ವರ್ಷದ ಹಿಂದೆಯೇ ಈ ಸಿನಿಮಾ ಮುಹೂರ್ತ ಕೂಡ ಆಗಿದೆ. ಕಾಂತಾರ 2 ಸಿನಿಮಾ ಬಗ್ಗೆ ಯೋಚನೆ ಮಾಡದೇ ಇದ್ದರೆ, ಬೆಲ್ ಬಾಟಮ್ 2 ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರಾ ಎನ್ನುವ  ಅನುಮಾನ ಕೂಡ ಮೂಡಿದೆ. ಆದರೆ, ಈ ಕುರಿತು ರಿಷಬ್ ಆಗಲಿ ಅಥವಾ ಬೆಲ್ ಬಾಟಮ್ 2 ಸಿನಿಮಾದ ನಿರ್ಮಾಪಕರಾಗಲಿ ಯಾವುದೇ ಮಾಹಿತಿ ನೀಡಿಲ್ಲ.

    ಕಾಂತಾರ 2 ಸದ್ಯಕ್ಕೆ ಮಾಡುತ್ತಿಲ್ಲ ಎಂದು ರಿಷಬ್ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಂತೆಯೇ ಬೆಲ್ ಬಾಟಮ್ ಸಿನಿಮಾದ ಸುದ್ದಿಗೆ ಮಹತ್ವ ಬಂದಿದೆ. ಬಲ್ಲ ಮೂಲಗಳ ಪ್ರಕಾರ ಕಾಂತಾರ 2 ಸಿನಿಮಾದ ನಂತರವಷ್ಟೇ ಬೆಲ್ ಬಾಟಮ್ 2 ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ರಿಷಬ್ ಶೆಟ್ಟಿ ಅವರೇ ಸ್ಪಷ್ಟನೆ ನೀಡಬೇಕು. ಅಲ್ಲಿವರೆಗೂ ಯಾವ ಸಿನಿಮಾದ ಬಗ್ಗೆ ಶೆಟ್ಟರು ಮೊದಲು ಅಪ್ ಡೇಟ್ ಕೊಡುತ್ತಾರೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

    Live Tv
    [brid partner=56869869 player=32851 video=960834 autoplay=true]

  • ಮಾರ್ಚ್‌ನಲ್ಲಿ ಬೆಲ್ ಬಾಟಮ್ 2 ಪಕ್ಕಾ

    ಮಾರ್ಚ್‌ನಲ್ಲಿ ಬೆಲ್ ಬಾಟಮ್ 2 ಪಕ್ಕಾ

    ಒಂದೂವರೆ ವರ್ಷಗಳ ಹಿಂದೆ ಮುಹೂರ್ತ ಕಂಡ ಜಯತೀರ್ಥ ನಿರ್ದೇಶನದ ‘ಬೆಲ್ ಬಾಟಮ್ 2’ ಸಿನಿಮಾ, ಆನಂತರ ಕೊರೋನಾದಿಂದಾಗಿ ಶೂಟಿಂಗ್ ಆರಂಭಿಸಿರಲಿಲ್ಲ. ಸದ್ದಿಲ್ಲದೇ ಚಿತ್ರ ತಂಡ ಇದೀಗ ಶೂಟಿಂಗ್‌ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಹೊತ್ತಿಗೆ ಚಿತ್ರೀಕರಣ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ನಿರ್ಮಾಪಕ ಸಂತೋಷ್ ಕುಮಾರ್.

    ನಿರ್ದೇಶಕ ಜಯತೀರ್ಥ ‘ಬನಾರಸ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಿಷಭ್ ಶೆಟ್ಟಿ ‘ಕಾಂತಾರ’ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಹರಿಪ್ರಿಯಾ ಕೂಡ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಾರ್ಚ್ ಅಥವಾ ಏಪ್ರಿಲ್ ಹೊತ್ತಿಗೆ ಇವರೆಲ್ಲರ ಶೂಟಿಂಗ್ ಡೇಟ್ ಹೊಂದಾಣಿಕೆ ಆಗುವುದರಿಂದ ಚಿತ್ರೀಕರಣಕ್ಕೆ ತಂಡ ಹೊರಟಿದೆ.

    ಬೆಲ್ ಬಾಟಮ್ 1ರಲ್ಲಿ ನಟಿಸಿದ ಬಹುತೇಕ ಕಲಾವಿದರೇ ಈ ಸಿನಿಮಾದಲ್ಲಿ ಇರಲಿದ್ದು, ಹರಿಪ್ರಿಯಾ ಅವರ ಪಾತ್ರಕ್ಕೆ ಮತ್ತಷ್ಟು ಜೀವ ತುಂಬುವ ಕೆಲಸ ಮಾಡಲಾಗಿದೆ. ನಾಯಕ ಡಿಟೆಕ್ಟಿವ್ ದಿವಾಕರ್ ಈ ಬಾರಿ ವಿಶೇಷ ಪ್ರಕರಣವೊಂದನ್ನು ಬೆನ್ನತ್ತುವುದು ವಿಶೇಷ. ಪೇದೆಯಾಗಿದ್ದ ದಿವಾಕರ್ ಈ ಸಿನಿಮಾದಲ್ಲಿ ಪ್ರಮೋಷನ್ ಪಡೆಯುತ್ತಾರಾ ಅಥವಾ ಅದೇ ಪೇದೆಯಾಗಿಯೇ ಪ್ರಕರಣ ಬೆನ್ನು ಹತ್ತುತ್ತಾರೆ ಎನ್ನುವುದು ಕುತೂಹಲ. ಇದನ್ನೂ ಓದಿ: ವಿಷ್ಣುವರ್ಧನ್ ಅವರ ಸಿನಿಮಾಗೆ ಬಪ್ಪಿ ಲಹರಿ ಹಾಡು

    2019ರಲ್ಲಿ ತೆರೆಕಂಡ ‘ಬೆಲ್ ಬಾಟಮ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಆಗಿತ್ತು. 25ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಶತದಿನ ಪ್ರದರ್ಶನ ಕಂಡಿತ್ತು. 80ರ ದಶಕದಲ್ಲಿ ನಡೆಯುವ ಕಥೆಯನ್ನು ಅಷ್ಟೇ ಸೊಗಸಾಗಿ ನಿರೂಪಿಸಿದ್ದರು ನಿರ್ದೇಶಕ ಜಯತೀರ್ಥ. ಟಿ.ಕೆ. ದಯಾನಂದ್ ಬರೆದ ಕಥೆಯು ಡಿಟೆಕ್ಟಿವ್ ದಿವಾಕರನ ಜಾಣ್ಮೆಯನ್ನು ತೋರುತ್ತಿತ್ತು. ಇದನ್ನೂ ಓದಿ: ಚೆಂಬೆಳಕಿನ ಕವಿಯನ್ನು ಸಿನಿಮಾ ರಂಗ ಅಪ್ಪಿಕೊಳ್ಳಲಿಲ್ಲ