Tag: ಬೆಳವಾಗಿ

  • 18 ತಿಂಗಳ ಬಳಿಕ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

    18 ತಿಂಗಳ ಬಳಿಕ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

    ಬೆಳಗಾವಿ: ಬರೋಬ್ಬರಿ 18 ತಿಂಗಳ ಬಳಿಕ ಇದೀಗ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊರ ರಾಜ್ಯದ ಭಕ್ತರು ಸಹ ದರ್ಶನ ಪಡೆಯಬಹುದಾಗಿದೆ.

    ಕೊರೊನಾ ಹಿನ್ನೆಲೆ ಕಳೆದ 18 ತಿಂಗಳಿಂದ ಭಕ್ತರಿಗೆ ದರ್ಶನ ಭಾಗ್ಯವೇ ಇರಲಿಲ್ಲ. ಆದರೆ ಬೆಳಗಾವಿ ಜಿಲ್ಲಾಡಳಿತ ಇಂದಿನಿಂದ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಮಾಡಿ ಕೊಟ್ಟಿದೆ. ಬೇರೆ ರಾಜ್ಯದ ಭಕ್ತರೇ ಹೆಚ್ಚು ಬರುವ ಈ ದೇವಸ್ಥಾನಕ್ಕೆ ಹಲವು ರಾಜ್ಯದ ಭಕ್ತರು ದೇವಸ್ಥಾನ ಭೇಟಿಗೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲದೆ ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಶೇ.3ರಷ್ಟು ಮಾತ್ರ ಇದ್ದು, ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಲು ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ಕೊರೊನಾದಿಂದ ಚೇತರಿಕೆ ಕಾಣುತ್ತಿರುವ ಹೊತ್ತಲ್ಲಿ ಕೊಡಗಿನಲ್ಲಿ ಇಲಿ ಜ್ವರದ ಆತಂಕ

    ದೇವಸ್ಥಾನಕ್ಕೆ ಬರುವವರು ಕೋವಿಡ್ ನಿಯಮ ಪಾಲಿಸುವುದು ಕಡ್ಡಾಯವಾಗಿದೆ. ಅಲ್ಲದೆ ಮಹಾರಾಷ್ಟ್ರದಿಂದ ಭಕ್ತರು ಹೆಚ್ಚು ಬರುವುದರಿಂದ ಗಡಿಯಲ್ಲಿರುವ ಎಲ್ಲ ಹಳ್ಳಿಯ ಜನರಿಗೆ ಕೋವಿಡ್ ಲಸಿಕೆ ಹಾಕಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಕೋವಿಡ್ ಟೆಸ್ಟ್ ಮಾಡಿಸುವ ವ್ಯವಸ್ಥೆಯನ್ನು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಬೇರೆ ರಾಜ್ಯದವರು 72 ಗಂಟೆ ಒಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಳ್ಳಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

  • ಸರ್ಕಾರ, ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್

    ಸರ್ಕಾರ, ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್

    – ಬಿತ್ತನೆ ಮಾಡಬೇಕಿದ್ದವರು ಮನೆಯಲ್ಲೇ ಲಾಕ್

    ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ.

    ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಲಾಕ್‍ಡೌನ್ ಸಡಿಲಿಕೆ ನಂತರ ಮುಂಬೈಗೆ ಕೆಲಸಕ್ಕೆ ಹೋಗಿದ್ದ ಒಂದು ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು ಗ್ರಾಮಕ್ಕೆ ಆಗಮಿಸಿದ್ದಾರೆ. ಅವರೆಲ್ಲರನ್ನು ಕ್ವಾರಂಟೈನ್ ಮಾಡಿ 14 ದಿನ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಆದರೆ ಸರ್ಕಾರದ ಆದೇಶ ಬಂತು ಅನ್ನುವ ಕಾರಣಕ್ಕೆ ಕೊರೊನಾ ರಿಪೋರ್ಟ್ ಬರುವ ಮುನ್ನವೇ ಅವರನ್ನು ರಿಲೀಸ್ ಮಾಡಲಾಗಿತ್ತು.

    ಹೀಗೆ ಮನೆಗೆ ಹೋದ ಎಲ್ಲರೂ ಗ್ರಾಮದ ಅಂಗಡಿಗಳಿಗೆ, ಮದುವೆ ಸೇರಿದಂತೆ ಶುಭಸಮಾರಂಭಗಳಲ್ಲಿ ಭಾಗಿಯಾಗಿದ್ದಾರೆ. ರಿಲೀಸ್ ಆದ ಎರಡು ದಿನಕ್ಕೆ ಮನೆಗೆ ಹೋದವರ ಪೈಕಿ 16 ಮಂದಿಗೆ ಕೊರೊನಾ ಬಂದಿತ್ತು. ಪರಿಣಾಮ ಎಲ್ಲರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಇಡೀ ಗ್ರಾಮ ಸೀಲ್‍ಡೌನ್ ಮಾಡಲಾಗಿದೆ. ಜಮೀನುಗಳಿಗೆ ಬಿತ್ತನೆ ಮಾಡಲು ಹೋಗಬೇಕಿದ್ದ ರೈತರು ಇದೀಗ ಲಾಕ್ ಆಗಿದ್ದಾರೆ. ಈ ಬಾರಿಯೂ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಕೊರೊನಾ ವರದಿ ಬರುವ ಮುನ್ನವೇ ಬಿಡುಗಡೆ ಮಾಡಿದ್ದಕ್ಕೆ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

    ದಡ್ಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹತ್ತು ಗ್ರಾಮಗಳಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, ಈ ಎಲ್ಲ ಗ್ರಾಮಗಳಿಗೆ ಜೀವನಾಡಿ ಈ ದಡ್ಡಿ ಗ್ರಾಮವಾಗಿತ್ತು. ಉಪ್ಪಿನಿಂದ ಹಿಡಿದು ಎಲ್ಲಾ ರೀತಿಯ ಸಾಮಗ್ರಿ ಕೊಳ್ಳಲು ಸುತ್ತಮುತ್ತಲ ಗ್ರಾಮಸ್ಥರು ಬರುತ್ತಿದ್ದರು. ಈ ಹತ್ತು ಗ್ರಾಮಗಳಲ್ಲಿ 92 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದಕ್ಕೆ ದಡ್ಡಿ ಗ್ರಾಮದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲಾಗಿದೆ. ತರಕಾರಿ ಮಾರುಕಟ್ಟೆ ಸೇರಿದಂತೆ ದಿನಸಿ ಮಾರ್ಕೆಟ್ ಕೂಡ ಬಂದ್ ಮಾಡಲಾಗಿದೆ.

    ಮಹಾರಾಷ್ಟ್ರಕ್ಕೆ ಈ ಗ್ರಾಮ ಹೊಂದಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಮುಖ್ಯ ರಸ್ತೆಯಲ್ಲಿ ಕಾವಲಿಗಿದ್ದಾರೆ. ಇತ್ತ ಸೀಲ್‍ಡೌನ್ ಆದ ಪ್ರದೇಶದಲ್ಲಿ ಕೂಡ ಪೊಲೀಸರು ರೌಂಡ್ಸ್ ಮಾಡುತ್ತಿದ್ದು, ಯಾರಿಗೂ ಓಡಾಡಲು ಅವಕಾಶ ನೀಡುತ್ತಿಲ್ಲ. ಮೆಡಿಕಲ್ ಶಾಪ್ ಮತ್ತು ರಸಗೊಬ್ಬರ ಅಂಗಡಿಗಳು ಮಾತ್ರ ಓಪನ್ ಇದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಮಾತ್ರ ದಿನಸಿ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

  • ಒಂದೇ ತಾಲೂಕಿಗೆ 3 ಸಚಿವರು, ಅಥಣಿಯ ಸೌಭಾಗ್ಯ: ಡಿಸಿಎಂ ಲಕ್ಷ್ಮಣ ಸವದಿ

    ಒಂದೇ ತಾಲೂಕಿಗೆ 3 ಸಚಿವರು, ಅಥಣಿಯ ಸೌಭಾಗ್ಯ: ಡಿಸಿಎಂ ಲಕ್ಷ್ಮಣ ಸವದಿ

    ಬೆಳಗಾವಿ: ಅಥಣಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ ಭಾರೀ ಅಂತರದ ಗೆಲುವು ಲಭಿಸಿದ್ದು, ಕ್ಷೇತ್ರದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಸಿಎಂ ಬಿಎಸ್‍ವೈ ನೇತೃತ್ವದ ಸರ್ಕಾರದಲ್ಲಿ ಸ್ಥಿರ ಹಾಗೂ ಅಭಿವೃದ್ಧಿ ಪರ ಆಡಳಿತವನ್ನು ನೀಡುತ್ತೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು, ಕ್ಷೇತ್ರದ ಗೆಲುವಿನ ಶ್ರೇಯಸ್ಸನ್ನು ಕ್ಷೇತ್ರದ ಕಾರ್ಯಕರ್ತರಿಗೆ, ಜನತೆಗೆ ನೀಡುತ್ತೇನೆ. ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದಿದೆ. ನಮ್ಮ ಪಕ್ಷ ಹೇಳಿರುವಂತೆ ಅಥಣಿಗೆ ಮೂರು ಸಚಿವ ಸ್ಥಾನ ಲಭಿಸಲಿದ್ದು, ಇದು ಅಥಣಿಯ ಸೌಭಾಗ್ಯ, ಇತಿಹಾಸದಲ್ಲಿ ಬರೆದಿಡುವ ದಿನ ಎಂದರು. ಅಲ್ಲದೇ ಶೀಘ್ರವೇ ಸಂಪುಟ ವಿಸ್ತರಣೆ ಆಗಲಿದ್ದು, ಮೂವರು ಸಚಿವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು.

    ಇದೇ ವೇಳೆ ಶಾಸಕ ಮಹೇಶ್ ಕುಮಟಹಳ್ಳಿ ಮಾತನಾಡಿ, ಜನರು ಆಶೀರ್ವಾದ ಮಾಡಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಲಕ್ಷ್ಮಣ ಸವದಿ ಅವರು 15 ವರ್ಷಗಳ ಕಾಲ ಅಥಣಿಯಲ್ಲಿ ಶಾಸಕರಾಗಿದ್ದರು. ನಾನು ಕೂಡಾ ಇಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ಕೊಟ್ಟರು ನಾನು ನಿಭಾಯಿಸುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಮಾಂಡ್ ನಿರ್ಧಾರ ಎಂದರು.

    ಬೆಳಗಾವಿಯಲ್ಲಿ ಮಾತನಾಡಿದ ಶಾಸಕ ಶ್ರೀಮಂತ ಪಾಟೀಲ ಅವರು, ನಾನು 15 ರಿಂದ 20 ಸಾವಿರ ಮತಗಳಿಂದ ಗೆಲ್ಲುತ್ತೆನೆ ಎಂಬ ನಿರೀಕ್ಷೆ ಇತ್ತು. ರಾಜು ಕಾಗೆ ಅವರು 20 ವರ್ಷದಿಂದ ಕ್ಷೇತ್ರದಲ್ಲಿ ಏನು ಮಾಡಲಿಲ್ಲ, ಅವರಿಂದ ಜನರು ಬೇಸರಗೊಂಡಿದ್ದರು. ಸದ್ಯ ಕಾಗವಾಡ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಬೇಕಾಗಿದೆ. ನನಗೆ ಯಾವ ಸಚಿವ ಸ್ಥಾನ ನೀಡುತ್ತಾರೆ ಗೊತ್ತಿಲ್ಲ. ನನಗೆ ಬೇಕಾದ ಸಚಿವ ಸ್ಥಾನ ಕೇಳುತ್ತೇನೆ. ನನ್ನ ಕ್ಷೇತ್ರದ ಜನರು ಕೃಷಿ ಸಚಿವ ಹಾಗೂ ನೀರಾವರಿ ಸಚಿವರಾಗಿ ಎಂದು ಹೇಳುತ್ತಿದ್ದಾರೆ. ಹೈಕಮಾಂಡ್ ಯಾವ ಸಚಿವ ಸ್ಥಾನ ನೀಡುತ್ತದೆ ಕಾದು ನೋಡುತ್ತೇನೆ ಎಂದರು.