Tag: ಬೇಡಿಕೆ

  • ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು – ದೇವರಲ್ಲಿ ಭಕ್ತನ ವಿಚಿತ್ರ ಕೋರಿಕೆ

    ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು – ದೇವರಲ್ಲಿ ಭಕ್ತನ ವಿಚಿತ್ರ ಕೋರಿಕೆ

    ಚಿಕ್ಕಮಗಳೂರು: ಸಾಮಾನ್ಯವಾಗಿ ಒಳ್ಳೆ ವಿದ್ಯೆ, ಬುದ್ಧಿ, ಆರೋಗ್ಯ ಕೊಡು ಎಂಬಿತ್ಯಾದಿ ಹಲವು ಬೇಡಿಕೆಗಳನ್ನು (Demand) ಭಕ್ತರು (Devotees) ದೇವರ ಮುಂದೆ ಇಡುತ್ತಾರೆ. ಆದರೆ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು ಎಂಬ ವಿಚಿತ್ರ ಕೋರಿಕೆಯನ್ನು ಭಕ್ತರೊಬ್ಬರು ದೇವರ ಮುಂದೆ ಇಟ್ಟಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಕಳಸ  (Kalasa) ತಾಲೂಕಿನಲ್ಲಿ ನಡೆದಿದೆ.

    ಕೇಳಲು ಆಶ್ಚರ್ಯವಾಗಿದ್ದರೂ ಇದು ನಿಜ. ಭಕ್ತರೊಬ್ಬರು ಕಳಸದ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಈ ರೀತಿಯಾಗಿ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾನೆ. ಗಿರಿಜಾದೇವಿಗೆ ಭಕ್ತರೊಬ್ಬರು ಪತ್ರ (Letter) ಬರೆದಿದ್ದು, ಭಕ್ತರ ವಿಚಿತ್ರ ಬೇಡಿಕೆಯನ್ನು ಓದಿದ ಹುಂಡಿ ಎಣಿಕೆ ಅಧಿಕಾರಿಗಳು ನಕ್ಕು ನಕ್ಕು ಸುಸ್ತಾಗಿದ್ದಾರೆ. ಇದನ್ನೂ ಓದಿ: Gruhajyothi Scheme: ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಿಎಂ

    ಪತ್ರದಲ್ಲಿ ಏನಿದೆ?
    ತಾಯಿ ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು. ನನ್ನ ಸೌಂದರ್ಯದ ಹೊಣೆ ನಿಮ್ಮ ಜವಾಬ್ದಾರಿ. ನಾನು ಜಗತ್ತಿನಲ್ಲೇ ಸುಂದರ ಎಂಬ ಖ್ಯಾತಿ ಗಳಿಸಬೇಕು. ನಾನು ಖ್ಯಾತ ನಟ, ಫ್ಯಾಷನ್ ಮಾಡೆಲ್ ಆಗಬೇಕು. ಸರ್ವ ಸುಂದರಿಯಾದ ಗಿರಿಜಾ ದೇವಿಯಿಂದ ಆಶೀರ್ವಾದ ಬಯಸುತ್ತೇನೆ. ನನ್ನ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮದು. ಈ ನಿನ್ನ ಭಕ್ತನ ಬೇಡಿಕೆ, ಪ್ರಾರ್ಥನೆಯನ್ನು ಈಡೇರಿಸು ತಾಯಿ ಎಂದು ಪತ್ರದಲ್ಲಿ ಬರೆದು ಕಾಣಿಕೆ ಹುಂಡಿಯಲ್ಲಿ ಭಕ್ತ ಹಾಕಿದ್ದಾನೆ.  ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ, ಡಿಸಿಎಂ ಬಳಿ ಹಲವು ಮನವಿ ಇಟ್ಟ ಫಿಲ್ಮ್ ಚೇಂಬರ್

    ಸಿಎಂ, ಡಿಸಿಎಂ ಬಳಿ ಹಲವು ಮನವಿ ಇಟ್ಟ ಫಿಲ್ಮ್ ಚೇಂಬರ್

    ರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ತಮ್ಮ ಅವಧಿಯಲ್ಲಿ ಚಲನಚಿತ್ರೋದ್ಯಮದ ಬೆಳವಣಿಗೆಗೆ ಬಹಳಷ್ಟು ಕೊಡುಗೆಯನ್ನು ನೀಡಿದ್ದು, ಯಾವತ್ತೂ ಚಿತ್ರೋದ್ಯಮವು ತಮ್ಮನ್ನು ಅತ್ಯಂತ ಪೂಜ್ಯ ಸ್ಥಾನದಲ್ಲಿ ಗೌರವಿಸುತ್ತಾ ಬಂದಿರುತ್ತದೆ. ತಮ್ಮ ಅಧಿಕಾರವಧಿಯಲ್ಲಿ ಚಲನಚಿತ್ರೋದ್ಯಮದ ಕೆಳಕಂಡ ಬೇಡಿಕೆಗಳನ್ನು ಈಡೇರಿಸಿಕೊಡುವ ಮೂಲಕ ಕನ್ನಡ ಚಿತ್ರರಂಗವು ಉಳಿದು, ಬೆಳೆಯಲು ಸಹಕರಿಸಬೇಕು’ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮಾ ಹರೀಶ್ (Bha.Ma. Harish) ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಇದೇ ವೇಳೆ ಮಂಡಳಿಯ ಪದಾಧಿಕಾರಿಗಳಾದ ಹೆಚ್ ಸಿ ಶ್ರೀನಿವಾಸ, ಸುಂದರ್ ರಾಜ್, ಕುಶಾಲ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ್ರು, ಕೆವಿ ಚಂದ್ರಶೇಖರ್ ಉಪಸ್ಥಿತರಿದ್ದರು.

    ನಿರ್ಮಾಪಕರು ಚಿತ್ರ ತಯಾರಿಸಿ, ಪಕ್ಕದ ರಾಜ್ಯದದಲ್ಲಿ ಪ್ರದರ್ಶನಕ್ಕೆ ಬೇಕಾಗುವಂತಹ ಡಿಜಿಟಲ್ ಡಿಸಿಪಿ ಪಡೆಯಬೇಕಾಗಿದ್ದು, ಇಂದಿಗೂ ನಿರ್ಮಾಪಕರಿಗೆ ಕಷ್ಟಕರವಾಗಿದೆ. ವರ್ಷಕ್ಕೆ ಅಂದಾಜು 350 ಕನ್ನಡ ಚಲನಚಿತ್ರಗಳು ನಿರ್ಮಾಣಗೊಂಡು ಬಿಡುಗಡೆಗೊಳ್ಳುತ್ತಿವೆ. ಆದಕಾರಣ ಸರ್ಕಾರದಿಂದ ಸ್ಥಾಪಿತವಾಗಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಈಗಾಗಲೇ ಪ್ರೊಜೆಕ್ಟರ್ ಥಿಯೇಟರ್ ಅಳವಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಡಿಯಲ್ಲಿ 20 ಕೋಟಿ ವೆಚ್ಚದಲ್ಲಿ ಡಿಜಿಟಲ್ ಯಂತ್ರೋಪಕರಣಗಳನ್ನು ಸ್ಥಾಪಿಸಲು ಆಯ ವ್ಯಯದಲ್ಲಿ ಹಣ ನಿಗದಿಪಡಿಸಿಕೊಡಬೇಕಾಗಿ ವಿನಂತಿಸುತ್ತೇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆ’ ಎಂದು ವಾಣಿಜ್ಯ ಮಂಡಳಿ ಮನವಿ ಮಾಡಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ರಾಜ್ಯದ ಚಿತ್ರಮಂದಿರಗಳಲ್ಲಿನ ಪ್ರೊಜೆಕ್ಟರ್‌ಗಳು ವಿದೇಶದಿಂದ, ಅದರಲ್ಲೂ ಒಬ್ಬರು ಇಬ್ಬರು. ಸರ್ವೀಸ್ ಪ್ರೊವೈಡರ್‌ನಿಂದ ಪಡೆಯಬೇಕಾಗಿದೆ. ಈ ಕ್ರಮದಿಂದ ಚಿತ್ರಮಂದಿರಗಳು ಇಂದಿಗೂ ಬಾಡಿಗೆ ರೂಪದಲ್ಲಿ ಪಡೆದು ಪ್ರದರ್ಶನ ನಡೆಸುತ್ತಿದ್ದು, ಸ್ವಂತ ಪ್ರೊಜೆಕ್ಟರ್ ಖರೀದಿಸಲು 40-50 ಲಕ್ಷ ರೂ. ಬಂಡವಾಳ ಹೂಡಬೇಕಾಗುತ್ತದೆ. ಈ ರೀತಿಯ ಪ್ರೋತ್ಸಾಹಕ್ಕೆ ತಲಾ ಒಂದು ಪ್ರೊಜೆಕ್ಟರ್ ಖರೀದಿಗೆ 10 ರಿಂದ 15 ಲಕ್ಷ ರೂಪಾಯಿ ಸಹಾಯಧನ ನೀಡಿದರೆ ಪ್ರದರ್ಶಕರು ಸ್ವಾವಲಂಬಿಯಾಗಿ ಉದ್ಯಮವನ್ನು ಬೆಳೆಸಲು ಸಹಾಯವಾಗುತ್ತದೆ. ಆದಕಾರಣ ಪ್ರಾರಂಭಿಕ ಹಂತದಲ್ಲಿ 20 ಕೋಟಿ ರೂಪಾಯಿ ಹಣವನ್ನು ನಿಗದಿಪಡಿಸಿ ಕೊಡಬೇಕಾಗಿ ಕೋರುತ್ತೇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆಂಬ ಅಂಶವನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ’ ಎಂದು ವಾಣಿಜ್ಯ ಮಂಡಳಿ ಅರ್ಜಿಯಲ್ಲಿ ತಿಳಿಸಿದೆ.

    ಎಲ್ಲಾ ಸಮಸ್ಯೆಗಳಿಗೂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ಸ್ಪಂದಿಸಿದ್ದಾರೆ. ಕಲಪ ಮುಗಿದ ಬಳಿಕ ವಾಣಿಜ್ಯ ಚಲನಚಿತ್ರ ಮಂಡಳಿಯಲ್ಲಿಯೇ ಕುಳಿತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

    ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

    ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

    ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

  • ಬೇಡಿಕೆ ಈಡೇರಿಸುವಂತೆ ಸಿಎಂ ಕಾಲಿಗೆ ಬಿದ್ದ ರೈತ

    ಬೇಡಿಕೆ ಈಡೇರಿಸುವಂತೆ ಸಿಎಂ ಕಾಲಿಗೆ ಬಿದ್ದ ರೈತ

    ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸುವ ಮುನ್ನ ರೈತ ಮುಖಂಡರೊಬ್ಬರು ಸಿಎಂ ಕಾಲಿಗೆ ಬಿದ್ದು, ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ ಘಟನೆ ನಡೆಯಿತು.

    ಬೆಳಗಾವಿಯ ಸುವರ್ಣಸೌಧದಲ್ಲಿ ಕೋವಿಡ್ ಹಾಗೂ ಪ್ರವಾಹ ಪೀಡಿತ ಪರಿಹಾರ ಕಾರ್ಯಗಳ ಕುರಿತು ಸಭೆ ನಡೆಸಲು ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ರೈತ ಮುಖಂಡರು ಸಿಎಂ ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಸುವರ್ಣಸೌಧಕ್ಕೆ ಕಚೇರಿಗಳ ಸ್ಥಳಾಂತರ, ಶುಗರ್ ಕಮಿಷನರ್ ಕಚೇರಿ ಸ್ಥಳಾಂತರಕ್ಕೆ ಮನವಿ ಮಾಡಿದ ರೈತರು, ಬೆಳಗಾವಿಗೆ ಸಕ್ಕರೆ ಆಯುಕ್ತರ ಕಚೇರಿ ಸ್ಥಾಪಿಸುವಂತೆ ಒತ್ತಾಯಿಸಿ ರೈತ ಮುಖಂಡ ಪ್ರಕಾಶ್ ನಾಯಕ್ ಎಂಬವರು ಸಿಎಂ ಕಾಲಿಗೆ ಬಿದ್ದು ಸಿಎಂ ಗಮನ ಸೆಳೆದರು. ಇದನ್ನೂ ಓದಿ: ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ 2,139 ಮಂದಿಗೆ ಡೆಂಗ್ಯೂ

    ಕೆಲ ನಿಮಿಷಗಳ ಕಾಲ ರೈತರ ಜೊತೆ ಮಾತುಕತೆ ನಡೆಸಿದ ಬೊಮ್ಮಾಯಿ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಇದೇ ವೇಳೆ ಸಿಎಂ ಸುವರ್ಣಸೌಧಕ್ಕೆ ಆಗಮಿಸುತ್ತಿದ್ದಂತೆ ಗೌರವ ವಂದನೆ ಸಲ್ಲಿಸಲು ಪೊಲೀಸ್ ಸಿಬ್ಬಂದಿ ಮುಂದಾಗಿದ್ದಕ್ಕೆ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ಪದೇ ಪದೇ ಗೌರವ ವಂದನೆ ಸಲ್ಲಿಸುವುದು ಬೇಡ. ದಿನಕ್ಕೆ ಒಮ್ಮೆ ಮಾತ್ರ ಸಾಕು ಎಂದು ಸಿಎಂ ಪೊಲೀಸ್ ಆಯುಕ್ತರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಿಮ್ಮ ಹೊಟ್ಟೆ ಇನ್ನೂ ಕಡಿಮೆಯಾಗಿಲ್ವಲ್ರಿ, ಈಗಲಾದರೂ ಜನ ಪರ ಕೆಲಸ ಮಾಡಿ- ಸ್ಲಂ ಬೋರ್ಡ್ ಸಿಇಒಗೆ ಸೋಮಣ್ಣ ತರಾಟೆ

  • ರಾಜ್ಯದಲ್ಲಿ ಇಂದಿನಿಂದ ಹೆಲ್ತ್ ಎಮರ್ಜೆನ್ಸಿ- ಕೋವಿಡ್ ಸೇರಿದಂತೆ ಯಾವುದೇ ಟ್ರೀಟ್‍ಮೆಂಟ್ ಕೊಡಲ್ಲ ಡಾಕ್ಟರ್ಸ್

    ರಾಜ್ಯದಲ್ಲಿ ಇಂದಿನಿಂದ ಹೆಲ್ತ್ ಎಮರ್ಜೆನ್ಸಿ- ಕೋವಿಡ್ ಸೇರಿದಂತೆ ಯಾವುದೇ ಟ್ರೀಟ್‍ಮೆಂಟ್ ಕೊಡಲ್ಲ ಡಾಕ್ಟರ್ಸ್

    ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಹೆಲ್ತ್ ಎಮೆರ್ಜೆನ್ಸಿ ಎದುರಾಗಲಿದೆ. ಕೊರೊನಾ ರಿಪೋರ್ಟ್ ಸೇರಿ ಬೇರೆ ಯಾವುದೇ ಆರೋಗ್ಯ ಸಂಬಂಧಿ ರಿಪೋರ್ಟ್ ಸಿಗಲ್ಲ. ಯಾಕಂದರೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು, ಇಂದಿನಿಂದ ಆರೋಗ್ಯ ಸೇವೆಯಲ್ಲಿ, ಕೆಲಸಗಳಲ್ಲಿ ತೊಡಗಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ.

    ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಒಂದು ವಾರದೊಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆ ಬಂದ್ ಮಾಡುತ್ತೇವೆ. ಕೇವಲ ಎಮರ್ಜೆನ್ಸಿ ಮಾತ್ರ ಓಪನ್ ಇರಲಿದೆ ಅನ್ನೋ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

    ಐಎಎಸ್ ಅಧಿಕಾರಿಗಳ ತಮ್ಮನ್ನು ಮುಕ್ತ ಮಾಡಬೇಕು. ನಂಜನಗೂಡು ಆಸ್ಪತ್ರೆ ವೈದ್ಯರ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವೇತನ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ರಾಜ್ಯ ವೈದ್ಯಕೀಯ ಸಂಘ ಸರ್ಕಾರದ ಮುಂದೆ ಇಟ್ಟಿದೆ.

    ಬೇಡಿಕೆಗಳು ಏನೇನು?
    * ಸರ್ಕಾರದಿಂದ ಡಾಕ್ಟರ್ಸ್ ಡೇ ಮಾಡುವಂತೆ ಬೇಡಿಕೆ
    * ಕೋವಿಡ್ ವೇಳೆ ಮೃತ ಪಟ್ಟ ವೈದ್ಯರಿಗೆ ಸರ್ಕಾರ ಪರಿಹಾರ ನೀಡಿಲ್ಲ, ಪರಿಹಾರ ನೀಡುವಂತೆ ಬೇಡಿಕೆ
    * ಪ್ರಮುಖವಾಗಿ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯ
    * ಬಿಬಿಎಂಪಿಗೆ ನೀಡಿರುವ 48 ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನ ವಾಪಸ್ ನೀಡುವಂತೆ ಒತ್ತಾಯ
    * ಡಿಸಿ ಮತ್ತು ಸಿಇಓಗಳ ದಬ್ಬಾಳಿಕೆಯನ್ನ ತಪ್ಪಿಸಿಬೇಕು

    ಪ್ರತಿಭಟನೆ ಯಾವ ರೀತಿ ಇರುತ್ತೆ ?
    * ಇಂದಿನಿಂದ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಆನ್‍ಲೈನ್ ಆಗಲಿ ಅಥವಾ ಆಫ್‍ಲೈನ್ ಆಗಲಿ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಕೋವಿಡ್ ರಿಪೋರ್ಟ್ ಗಳನ್ನು ಸಲ್ಲಿಸದಿರಲು ನಿರ್ಧಾರ
    * ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಮಲೇರಿಯಾ, ಜಂತುಹುಳು, ಕುಷ್ಟರೋಗ ಸೇರಿದಂತೆ ಇನ್ನಿತರ ವರದಿಗಳನ್ನ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
    * ಡಿಸಿ ಮತ್ತು ಸಿಇಓ ಮೀಟಿಂಗ್ ಗಳಲ್ಲಿ ಭಾಗವಹಿಸದಿರಲು ನಿರ್ಧಾರ

    ಸರ್ಕಾರ ವೈದ್ಯರ ಪ್ರತಿಭಟನೆಯಿಂದ ಆಗುವ ಅನಾಹುತಗಳೇನು?
    * ಕೋವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೋವಿಡ್ ಕೇಸ್ ಹೆಚ್ಚಾಗ್ತಾವೆ
    * ಜಿಲ್ಲಾ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಆಸ್ಪತ್ರೆ ಕ್ಲೋಸ್ ಮಾಡಿದ್ರೆ ಕೋವಿಡ್ ಉಲ್ಬಣಗೊಳ್ಳುತ್ತೆ
    * ರಾಜ್ಯದಲ್ಲಿ ಸಾವು ನೋವು ಹೆಚ್ಚಾಗುವ ಸಾಧ್ಯತೆ
    * ರಾಷ್ಟ್ರೀಯ ಕಾರ್ಯಕ್ರಮಗಳ ವರದಿ ನೀಡದಿದ್ದರೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮರ್ಯಾದೆ ಹೋಗುತ್ತೆ
    * ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ
    * ಡಿಸಿ ಮತ್ತು ಸಿಇಓ ಮೀಟಿಂಗ್‍ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಅಟೆಂಡ್ ಆಗದಿದ್ದರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಷ್ಟ

    ಇಂದಿನಿಂದ ಒಂದು ವಾರದ ಒಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆಗಳನ್ನು ಕ್ಲೋಸ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಇದೇ ತಿಂಗಳ 21 ರಿಂದ ಆಸ್ಪತ್ರೆ ಕ್ಲೋಸ್ ಮಾಡಲು ನಿರ್ಧಾರ ಮಾಡಲಾಗಿದ್ದು, ಎಮರ್ಜೆನ್ಸಿ ಮಾತ್ರ ಓಪನ್ ಮಾಡಲಾಗುತ್ತಿದೆ. ಅಲ್ಲದೇ ಸೆಪ್ಟೆಂಬರ್ 21 ರಿಂದ ಬೆಂಗಳೂರು ಚಲೋ ಆರಂಭ ಮಾಡಲಿದ್ದಾರೆ. ಬೆಂಗಳೂರು ಚಲೋ ಆರಂಭ ಮಾಡಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ.

  • ವಿಶೇಷ ಗೋಪಿಚಂದನ ಗಣಪನಿಗೆ ಡಿಮ್ಯಾಂಡ್ – ಪರಿಸರ ಸ್ನೇಹಿಗಳಿಂದ ಹೆಚ್ಚಿದ ಬೇಡಿಕೆ

    ವಿಶೇಷ ಗೋಪಿಚಂದನ ಗಣಪನಿಗೆ ಡಿಮ್ಯಾಂಡ್ – ಪರಿಸರ ಸ್ನೇಹಿಗಳಿಂದ ಹೆಚ್ಚಿದ ಬೇಡಿಕೆ

    – ಇದರ ವಿಶೇಷತೆ ಏನು?

    ರಾಯಚೂರು: ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬ ಬಂದಿದೆ. ಆದರೆ ಈ ಬಾರಿ ಸಾರ್ವಜನಿಕವಾಗಿ ಅದ್ಧೂರಿ ಗಣೇಶೋತ್ಸವ ಆಚರಿಸುವುದಕ್ಕೆ ಅವಕಾಶ ಇಲ್ಲ. ಕೊರೊನಾ ಮಹಾಮಾರಿ ಹಿನ್ನೆಲೆ ಬಹುತೇಕರು ಮನೆಯಲ್ಲಿ ಗಣೇಶನ ಪ್ರತಿಷ್ಠಾಪಿಸುತ್ತಾರೆ. ಹೀಗಾಗಿ ರಾಯಚೂರಿನ ಪರಿಸರ ಸ್ನೇಹಿ ಗೋಪಿಚಂದನದ ವಿಶೇಷ ಗಣೇಶ ಮೂರ್ತಿಗೆ ಈ ಬಾರಿ ಎಲ್ಲೆಡೆಯಿಂದ ಭಾರೀ ಬೇಡಿಕೆ ಬಂದಿದೆ.

    ನಗರದ ಜಯತೀರ್ಥದಾಸರ ಕುಟುಂಬ ಗೋಪಿ ಚಂದನದಿಂದ ಪರಿಸರ ಸ್ನೇಹಿ, ಸಾಂಪ್ರದಾಯಿಕ ಗಣೇಶನನ್ನ ಮಾಡಿ ಮಾರಾಟ ಮಾಡುತ್ತಿದ್ದಾರೆ. ಜಯತೀರ್ಥರ ಮಗ ರಘೋತ್ತಮದಾಸ್ ಇಂಟಿರಿಯರ್ ಡಿಸೈನ್ ಮಾಡುವ ಉದ್ಯೋಗ ಮಾಡುತ್ತಿದ್ದಾರೆ. ಆದರೆ ಗಣೇಶ ಮೂರ್ತಿ ತಯಾರಿಕೆಯಲ್ಲಿ ಆಸಕ್ತಿ ಬಂದು ಮೊದಲು ಮಣ್ಣಿನಲ್ಲಿ ಗಣೇಶ ಮೂರ್ತಿಗಳನ್ನು ತಯಾರಿಸೋಕೆ ಆರಂಭಿಸಿದರು. ಸಾಮಾನ್ಯವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನ ಎಲ್ಲರೂ ಮಾಡುತ್ತಾರೆ. ಆದರೆ ಧಾರ್ಮಿಕವಾಗಿ ಪ್ರಾಮುಖ್ಯತೆ ಹೊಂದಿರುವ ಗೋಪಿ ಚಂದನದಲ್ಲಿ ಯಾಕೆ ಗಣಪನ ತಯಾರಿಸಬಾರದು ಅಂತ ಕಳೆದ ವರ್ಷದಿಂದ ಪವಿತ್ರವಾದ ಗೋಪಿ ಚಂದನದಿಂದ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದಾರೆ.

    ಗೋಪಿ ಚಂದನವನ್ನ ಶ್ರೀಕೃಷ್ಣನಿಗೆ ಗೋಪಿಕೆಯರು ಹಚ್ಚಿದ್ದರು ಎಂಬ ಪ್ರತೀತಿ ಇದೆ. ಪುರಾಣದಲ್ಲಿ ವಿಶ್ವಂಬರವಾದ ಪರಮಾತ್ಮ ಗಣೇಶನನ್ನು ಗೋಪಿಚಂದನದಲ್ಲಿ ಮಾಡಿದ್ದ ಎಂದೂ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋಪಿ ಚಂದನದಲ್ಲಿ ಗಣೇಶನನ್ನು ಪೂಜಿಸುವುದರಿಂದ ಒಳ್ಳೆಯದಾಗುತ್ತದೆ ಎಂಬ ಭಾವನೆ ಇದೆ. ಕಳೆದ ವರ್ಷದಿಂದ ಗೋಪಿ ಚಂದನದಲ್ಲಿ ಗಣೇಶನ ತಯಾರಿಸಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗಿದೆ.

    ಈಗ ರಾಜ್ಯ ಹಾಗೂ ಹೊರರಾಜ್ಯದಲ್ಲಿ ಗೋಪಿಚಂದನ ಗಣಪನಿಗೆ ಬಹುಬೇಡಿಕೆ ಶುರುವಾಗಿದೆ. 350 ರೂ. ಹಾಗೂ 1,000 ರೂಪಾಯಿ ಬೆಲೆಯ ಎರಡು ಬಗೆಯ ಮೂರ್ತಿಗಳನ್ನ ಮಾರಾಟ ಮಾಡಲಾಗುತ್ತಿದೆ. ಈ ವರ್ಷ 300 ಗಣೇಶ ತಯಾರಿಸಿದ್ದು, ಗುಜರಾತ ಸೇರಿದಂತೆ ಹೊರರಾಜ್ಯದಿಂದ 2,000ಕ್ಕೂ ಅಧಿಕ ಮೂರ್ತಿಗಳ ಬೇಡಿಕೆ ಬಂದಿದೆಯಂತೆ. ಆದರೆ ಇಡೀ ಕುಟುಂಬ ಮೂರ್ತಿಗಳ ತಯಾರಿಕೆಗೆ ಮುಂದಾಗಿದ್ದರೂ ಬೇಡಿಕೆ ಪೂರೈಸುವುದು ಸಾಧ್ಯವಾಗಿಲ್ಲ.

    ಈ ಬಾರಿ ಪರಿಸರ ಸ್ನೇಹಿ ಗಣಪ ಪ್ರತಿಷ್ಠಾಪಿಸಲು ಹೆಚ್ಚು ಜನರು ಮುಂದಾಗಿದ್ದಾರೆ. ಅದರಲ್ಲಿ ಗೋಪಿ ಚಂದನವು ಪಕ್ಕ ಪರಿಸರ ಸ್ನೇಹಿಯಾಗಿದ್ದು, ಗಣೇಶ ಮೂರ್ತಿಯನ್ನ ಬಕೆಟ್‍ನಲ್ಲೆ ವಿಸರ್ಜನೆ ಮಾಡಿ ನಂತರ ಗೋಪಿ ಚಂದನ ಬಳಕೆ ಮಾಡಬಹುದಾಗಿದೆ.

  • ಚಪ್ಪಾಳೆ ಬೇಡ ಸೌಲಭ್ಯ ನೀಡಿ – ಮುಷ್ಕರಕ್ಕೆ ಸಿದ್ಧವಾದ ಕೊರೊನಾ ವಾರಿಯರ್ಸ್

    ಚಪ್ಪಾಳೆ ಬೇಡ ಸೌಲಭ್ಯ ನೀಡಿ – ಮುಷ್ಕರಕ್ಕೆ ಸಿದ್ಧವಾದ ಕೊರೊನಾ ವಾರಿಯರ್ಸ್

    – ಗುತ್ತಿಗೆ, ಹೊರ ಗುತ್ತಿದೆ ನೌಕರರ ಬೇಡಿಕೇನು?

    ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ.

    ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ.

    ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲವು ಬೇಡಿಕೆಗಳನ್ನು ನೀಡಿ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ವಿಚಾರವಾಗಿ ಮೇ 20ರಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು. ಈ ಬಗ್ಗೆ ಸಮಿತಿ ರಚನೆಯ ಮಾಡಿ ಬೇಡಿಕೆಗಳನ್ನು ಪರಿಶೀಲನೆಯ ಮಾಡುವ ಭರವಸೆ ನೀಡಿಲಾಗಿತ್ತು. ಆದರೆ ಈಗ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮುಷ್ಕರ ಮಾಡಲು ಸಂಘ ತೀರ್ಮಾನಿಸಿದೆ.

    ನಮ್ಮ ರಾಜ್ಯದಲ್ಲಿ 23 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಡಾಕ್ಟರ್, ಸ್ಟಾಫ್ ನರ್ಸ್, ಅಂಬುಲೆನ್ಸ್ ಚಾಲಕರು ಸೇರಿ 180 ವಿವಿಧ ಹುದ್ದೆಯಲ್ಲಿ ಈ ನೌಕರರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಒಟ್ಟು 1,500 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಕ್ವಾರಂಟೈನ್ ಸೆಂಟರ್ ಮತ್ತು ಫೀಲ್ಡ್‍ನಲ್ಲಿ ಈ ಸಿಬ್ಬಂದಿಯೇ ಪ್ರಮುಖವಾಗಿ ಕೆಲಸ ಮಾಡುತ್ತಿದ್ದಾರೆ.

    ನೌಕರರ ಬೇಡಿಕೆಯೇನು?
    1. ಕಡಿಮೆ ವೇತನ
    2. ಪರಿಷ್ಕೃತ ವೇತನ ಇಲ್ಲ
    3. ಭತ್ಯೆಗಳು ಇಲ್ಲ
    4. ವೈದ್ಯಕೀಯ ಸೌಲಭ್ಯವಿಲ್ಲ
    5. ರಜೆಗಳು ಇಲ್ಲ (ವರ್ಷಕ್ಕೆ 10 ಮಾತ್ರ)
    6. ಸೇವಾ ಭದ್ರತೆ ಇಲ್ಲ
    7. ವರ್ಗಾವಣೆ ಇಲ್ಲ (15 ವರ್ಷದಿಂದ ಒಂದೇ ಕಡೆ ಕೆಲಸ)
    8. ಬ್ಯಾಂಕಿನಲ್ಲಿ ಸಾಲ ನೀಡುವುದಿಲ್ಲ
    9. ಪದೋನ್ನತಿ ಇಲ್ಲ
    10. ಹೆಚ್‍ಆರ್ ಪಾಲಿಸಿ ಇಲ್ಲ
    11. ವಿಮೆ ಇಲ್ಲ
    12. ಡೆತ್ ಬೆನಿಫಿಟ್ ಇಲ್ಲ
    13. ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲ
    14. ಮಹಿಳಾ ಸಿಬ್ಬಂದಿಗೆ ಕುಟುಂಬ ಶಸ್ತ್ರಚಿಕಿತ್ಸೆಗೆ ರಜೆ ಇಲ್ಲ.
    15. ಕಡಿಮೆ ವೇತನವಿದ್ದರೂ ಸರ್ಕಾರಿ ಕೆಲಸ ಎಂದು ಬಿಪಿಎಲ್ ಕಾರ್ಡ್ ನೀಡುವುದಿಲ್ಲ
    16. ಹೊರಗುತ್ತಿಗೆ ಪದ್ದತಿ ಕೈಬಿಡಬೇಕು

    ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ ನಾಲ್ಕರಂದು ನೌಕರರ ಸಂಘ ಪ್ರತಿಭಟನೆ ಮಾಡಲು ತೀರ್ಮಾನಿಸಿದೆ. ಜೊತೆಗೆ ನೌಕರಿರಿಗೆ ಜೂನ್ 4ರಂದು ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ. ಕೊರೊನಾ ಹೆಚ್ಚಾಗುತ್ತಿರುವ ಸಮಯದಲ್ಲಿ ಕೊರೊನಾ ವಿರುದ್ಧ ಹೋರಾಡಬೇಕಾದ ವಾರಿಯರ್ಸ್ ಪ್ರತಿಭಟನೆ ಮಾಡುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವು ತಂದಿಟ್ಟಿದೆ.

  • ಲಾಕ್‍ಡೌನ್ ಎಫೆಕ್ಟ್, ಭಾರೀ ಬೇಡಿಕೆ – ಕೆಲ ದಿನಗಳಲ್ಲಿ ಖಾಲಿಯಾಗಲಿದೆ ಕಾಂಡೋಮ್

    ಲಾಕ್‍ಡೌನ್ ಎಫೆಕ್ಟ್, ಭಾರೀ ಬೇಡಿಕೆ – ಕೆಲ ದಿನಗಳಲ್ಲಿ ಖಾಲಿಯಾಗಲಿದೆ ಕಾಂಡೋಮ್

    ಮಲೇಷ್ಯಾ: ಕೊರೊನಾ ವೈರಸ್ ವಿಶ್ವವ್ಯಾಪಿ ಹರಡುತ್ತಿರುವ ಪರಿಣಾಮ ಹಲವು ದೇಶಗಳನ್ನು ಲಾಕ್‍ಡೌಮ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಡೋಮ್ ಪೂರೈಕೆ ಕಡಿಮೆಯಾಗಿದೆ ಎಂದು ವಿಶ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಂಡೋಮ್ ಪೂರೈಕೆ ಮಾಡುವ ಸಂಸ್ಥೆ ಕಾರೆಕ್ಸ್ ಹೇಳಿಕೆ ನೀಡಿದೆ.

    ಮಲೇಷಿಯಾದಲ್ಲಿ ಕಾಂಡೋಮ್ ತಯಾರಿಕಾ ಕಂಪನಿ ಕಾರೆಕ್ಸ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಾಕ್‍ಡೌನ್ ಹಿನ್ನೆಲೆ ಕಳೆದ 10 ದಿನಗಳಿಂದ ಕಂಪನಿಯಲ್ಲಿ ಕಾಂಡೋಮ್ ಉತ್ಪಾದನೆ ಸ್ಥಗಿತಗೊಂಡಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಕೊರೊನಾ ಎಫೆಕ್ಟ್- ಸ್ಯಾನಿಟೈಜರ್‌ಗಿಂತಲೂ ಕಾಂಡೋಮ್‍ಗಳಿಗೆ ಭಾರೀ ಬೇಡಿಕೆ

    ಬೇಡಿಕೆ ಹೆಚ್ಚುತ್ತಿರುವ ಈ ಹೊತ್ತಿನಲ್ಲಿ ಪೂರೈಕೆ ಶೇ. 50ರಷ್ಟು ಕುಸಿದಿದೆ. ನಮ್ಮ ಬಳಿ ಇರುವ ದಾಸ್ತಾನು ಎರಡು ತಿಂಗಳಲ್ಲಿ ಖಾಲಿಯಾಗಲಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮಲೇಷಿಯಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಹೀಗಾಗಿ ದೀರ್ಘಾವದಿಗೆ ಉತ್ಪಾದನೆ ನಿಲ್ಲಿಸಿದ್ದ ಕಾರೆಕ್ಸ್ ಶುಕ್ರವಾರವಷ್ಟೇ ಮತ್ತೆ ಕಾಂಡೋಮ್ ತಯಾರಿಕೆಯನ್ನು ಆರಂಭಿಸಿದೆ. ಆದರೆ ಕೊರೊನಾ ಭೀತಿ ಹಿನ್ನೆಲೆ ಅರ್ಧ ಸಿಬ್ಬಂದಿಯ ಲಭ್ಯತೆಯೊಂದಿಗೆ ಕಂಪನಿ ಕಾರ್ಯನಿರ್ವಹಿಸುತ್ತಿದೆ. ಇದನ್ನೂ ಓದಿ: ನಿಮ್ಮ ಮನೆ ಈಗ ‘ಕಾಂಡೋಮ್’ ಇದ್ದಂತೆ ‘ಎಸ್‍ಟಿಡಿ’ಯಿಂದ ರಕ್ಷಿಸಿಕೊಳ್ಳಿ – ಕಿವೀಸ್ ಕ್ರಿಕೆಟರ್

    ಮಲೇಷ್ಯಾವನ್ನು ಹೊರತುಪಡಿಸಿ ಚೀನಾ, ಭಾರತ ಮತ್ತು ಥೈಲ್ಯಾಂಡ್‍ನಂತಹ ದೇಶಗಳು ಅತಿ ಹೆಚ್ಚು ಪ್ರಮಾಣದಲ್ಲಿ ಕಾಂಡೋಮ್ ಉತ್ಪಾದನೆಯ ಕಾರ್ಖಾನೆಗಳನ್ನು ಹೊಂದಿದೆ. ಆದರೆ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಈ ದೇಶಗಳಲ್ಲಿ ಲಾಕ್‍ಡೌನ್ ಮಾಡಲಾಗಿದೆ. ಹೀಗಾಗಿ ಕಾಂಡೋಮ್ ಉತ್ಪಾದನೆ ಸ್ಥಗಿತಗೊಂಡಿದೆ ಎಂದು ಸಂಸ್ಥೆ ಹೇಳಿದೆ.

    ಸೋಂಕು ಹರಡುವುದನ್ನು ತಡೆಯಲು ಬಹುತೇಕ ರಾಷ್ಟ್ರಗಳು ಲಾಕ್‍ಡೌನ್ ಘೋಷಿಸಿ, ಜನರನ್ನು ಮನೆಗಳಲ್ಲೇ ಇರುವಂತೆ ಸೂಚಿಸಿದೆ. ಹೀಗಿರುವಾಗಲೂ ಕಾಂಡೋಮ್‍ಗೆ ಬೇಡಿಕೆ ಮಾತ್ರ ಕಡಿಮೆ ಆಗಿಲ್ಲ. ಆದರೆ ಅದರ ಉತ್ಪಾದನೆ ಮಾತ್ರ ಕುಸಿಯುತ್ತಿದೆ ಎಂದು ಕಾರೆಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಗೋಹ್ ಮೈಹ್ ಕೇತ್ ತಿಳಿಸಿದ್ದಾರೆ.

    ಕಾರೆಕ್ಸ್ ಸಂಸ್ಥೆ 10 ದಿನಗಳಲ್ಲಿ 100 ಮಿಲಿಯನ್(10 ಕೋಟಿ) ಅಷ್ಟು ಕಾಂಡೋಮ್‍ಗಳನ್ನು ಉತ್ಪಾದಿಸಬಲ್ಲದು. ಈ ಕಾಂಡೋಮ್‍ಗಳು ವಿಶ್ವಾದ್ಯಂತ ಅನೇಕ ಬ್ರ್ಯಾಂಡ್‍ಗಳ ಹೆಸರಿನಲ್ಲಿ ಮಾರಾಟವಾಗುತ್ತದೆ. ಸುಮಾರು 140 ರಾಷ್ಟ್ರಗಳಿಗೆ ಕಾಂಡೋಮ್ ಅನ್ನು ಕಾರೆಕ್ಸ್ ಕಂಪನಿ ರಫ್ತು ಮಾಡುತ್ತದೆ. ಆದರೆ ಲಾಕ್‍ಡೌನ್ ಹಿನ್ನೆಲೆ ರಫ್ತು ವ್ಯವಸ್ಥೆ ಸ್ಥಗಿತಗೊಂಡಿದ್ದು, ಬೇರೆ ರಾಷ್ಟ್ರಗಳಿಗೆ ಕಾಂಡೋಮ್‍ಗಳನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಗೋಹ್ ಮೈಹ್ ಕೇತ್ ಹೇಳಿದ್ದಾರೆ.

    ಒಂದೆಡೆ ಬೇಡಿಕೆ ಹೆಚ್ಚುತ್ತಿದೆ, ಇನ್ನೊಂದೆಡೆ ಪೂರೈಕೆ ಕಡಿಮೆಯಾಗುತ್ತಿದೆ. ಇದರಿಂದ ಕಾಂಡೋಮ್ ಬೆಲೆ ಏರಿಕೆಯಾಗುತ್ತಿದೆ. ಬೇಡಿಕೆಯನ್ನು ಪೂರೈಸಲು ನಾವು ಉತ್ಪಾದನೆ ಹೆಚ್ಚಿಸಲು ನಮ್ಮ ಸಿಬ್ಬಂದಿಗೆ ಎಲ್ಲಾ ರೀತಿಯ ಸುರಕ್ಷಿತ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಆದರೆ ಕೊರೊನಾ ಭೀತಿಯಿಂದ ಸಿಬ್ಬಂದಿ ಕೆಲಸಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಆದ್ದರಿಂದ ಅರ್ಧದಷ್ಟು ಜನ ಮಾತ್ರ ಕೆಲಸಕ್ಕೆ ಹಾಜರಾಗುತ್ತಿರುವ ಪರಿಣಾಮ ಉತ್ಪಾದನೆಯೂ ಕುಸಿಯಲಿದೆ ಎಂದು ಕಾರೆಕ್ಸ್ ಸಂಸ್ಥೆ ಮಾಹಿತಿ ನೀಡಿದೆ.

  • ಕೊರೊನಾ ಭೀತಿ – ಕರಾವಳಿಯಲ್ಲಿ ಮೀನು, ಎಳನೀರಿಗೆ ಭಾರೀ ಬೇಡಿಕೆ

    ಕೊರೊನಾ ಭೀತಿ – ಕರಾವಳಿಯಲ್ಲಿ ಮೀನು, ಎಳನೀರಿಗೆ ಭಾರೀ ಬೇಡಿಕೆ

    ಮಂಗಳೂರು: ಕೊರೊನಾ ಭೀತಿಯಿಂದ ಜಗತ್ತು ನಲುಗಿದ್ದು, ಇಡೀ ವ್ಯಾಪಾರ ವಹಿವಾಟುಗಳು ಬಿದ್ದು ಹೋಗಿದೆ. ಹೋಟೆಲ್ ಗಳಲ್ಲಿ ಜನ ತಿನ್ನೋದು ಕಡಿಮೆ ಮಾಡಿ, ಮನೆ ಊಟದ ಕಡೆ ಮುಖ ಮಾಡಿದ್ದಾರೆ.

    ತಂಪು ಪಾನೀಯಗಳ ಬೇಡಿಕೆ ಕುಸಿದು ವ್ಯಾಪಾರ ತುಂಬಾ ಡಲ್ ಆಗಿದೆ. ಆದರೆ ಕಡಲತಡಿ ಮಂಗಳೂರಿನಲ್ಲಿ ಎಳನೀರಿಗೆ ಹಾಗೂ ಮೀನು ಮಾಂಸಕ್ಕೆ ಮಾತ್ರ ಭರ್ಜರಿ ಬೇಡಿಕೆ ಇದೆ. ಕರಾವಳಿ ಈಗಾಗಲೇ ಉಷ್ಣಾಂಶ ಏರಿಕೆ ಆಗಿದ್ದು, ತಂಪು ಪಾನೀಯಗಳ ಮೊರೆ ಹೋಗುವುದು ಸಾಮಾನ್ಯ. ಆದರೆ ಕೊರೊನಾ ಯಾವಾಗ ಆತಂಕ ಸೃಷ್ಟಿ ಮಾಡಿತೋ ಅಂದಿನಿಂದ ಜನರು ದೇಹ ತಣಿಸಲು ಎಳನೀರಿನ ಮೊರೆ ಹೋಗುತ್ತಿದ್ದಾರೆ.

    ಪ್ರಸ್ತುತ ಮಂಗಳೂರಿನಲ್ಲಿ 30 ರಿಂದ 35 ರೂಪಾಯಿಗೆ ಎಳನೀರು ಲಭ್ಯವಾಗುತ್ತಿದ್ದು, ಮುಂದೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಜನ ಕೊರೊನಾದ ಹೆದರಿಕೆಯಿಂದ ಕೋಳಿ ಮಾಂಸ ತಿನ್ನುವುದು ಬಿಟ್ಟ ಮೇಲೆ ಮೀನಿನ ಮಾಂಸಕ್ಕೆ ವಿಪರೀತ ಬೇಡಿಕೆ ಹೆಚ್ಚಾಗಿದೆ. ಒಂದೆಡೆ ಮತ್ಸ್ಯ ಕ್ಷಾಮ ಮತ್ತೊಂದು ಕಡೆ ಬೇಡಿಕೆ ಹೆಚ್ಚಳ ಇವುಗಳ ಪರಿಣಾಮ ಮೀನಿನ ಬೆಲೆ ಕೂಡ ಗಮನಕ್ಕೆ ಏರಿದೆ.

  • ನಾಳೆಯಿಂದ ಮೂರು ದಿನ ಬ್ಯಾಂಕ್ ಸೇವೆ ಸ್ಥಗಿತ

    ನಾಳೆಯಿಂದ ಮೂರು ದಿನ ಬ್ಯಾಂಕ್ ಸೇವೆ ಸ್ಥಗಿತ

    ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಮುಷ್ಕರ ನಡೆಯಲಿದೆ.

    ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಈ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಶುಕ್ರವಾರ ಹಾಗೂ ಶನಿವಾರ ದೇಶ್ಯಾದ್ಯಂತ ಬ್ಯಾಂಕ್‍ಗಳು ಸಂಪೂರ್ಣ ಬಂದ್ ಆಗಲಿವೆ. ಶುಕ್ರವಾರ ಹಾಗೂ ಶನಿವಾರ ಬ್ಯಾಂಕ್ ಬಂದ್ ಇದ್ದರೆ, ಫೆಬ್ರವರಿ 2ರಂದು ಭಾನುವಾರ. ಈ ಹಿನ್ನೆಲೆ ಒಟ್ಟು ಮೂರು ದಿನಗಳ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.

    2017ಕ್ಕೆ ಹಳೆ ವೇತನ ಒಪ್ಪಂದ ಮುಗಿದಿದೆ. ನಂತರ ನಡೆದ ವೇತನ ಒಪ್ಪಂದದ ಮಾತುಕತೆ ಎರಡು ವರ್ಷಗಳ ವಿಫಲವಾಗಿದೆ. ಹೀಗಾಗಿ 15% ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬಂದ್ ನಡೆಸುತ್ತಿದ್ದಾರೆ. ಜೊತೆಗೆ ವಿವಿಧ ಬೇಡಿಕೆಗಳಿಗೂ ಆಗ್ರಹಿಸುತ್ತಿದ್ದಾರೆ.

    ಈ ಬಾರಿಯ ಪ್ರತಿಭಟನೆಗೂ ಸರ್ಕಾರ ಮಣಿಯದಿದ್ದರೇ ಮತ್ತೆ ಮಾರ್ಚ್ 11, 12 ಹಾಗೂ 13 ಒಟ್ಟು ಮೂರು ದಿನ ಮುಷ್ಕರ ನಡೆಸುವ ಎಚ್ಚರಿಕೆ ನೀಡಲಾಗಿದೆ. ಇವೆರಡೂ ಪ್ರತಿಭಟನೆಗಳಿಗೂ ಒಪ್ಪದಿದ್ದರೇ, ವೇತನ ಒಪ್ಪಂದ ಸರಿಪಡಿಸದಿದ್ದರೆ, ಏಪ್ರಿಲ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.